ಸೂರತ್ (ಗುಜರಾತ್): ಗುಜರಾತ್ ರಾಜ್ಯದ ಸೂರತ್ನಲ್ಲಿ ಉದ್ಯಮಿಯೊಬ್ಬರು ತಮ್ಮ ನಿವಾಸದಲ್ಲಿ ಅಪರೂಪದ ಮತ್ತು ಕೋಟ್ಯಾಂತರ ರೂಪಾಯಿ ಬೆಲೆ ಬಾಳುವ ಗಣಪನ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡಿದ್ದಾರೆ. ಕನುಭಾಯಿ ರಾಮ್ಜಿಭಾಯಿ ಅಸೋದರಿಯಾ ಎಂಬುವವರು ಬರೋಬ್ಬರಿ 600 ಕೋಟಿ ರೂಪಾಯಿ ಬೆಲೆ ಬಾಳುವ ವಜ್ರದ ಗಣಪನನ್ನು ಕೂರಿಸಿದ್ದಾರೆ. ವಜ್ರದ ವ್ಯಾಪಾರಿಯಾಗಿರುವ ಇವರು 15 ವರ್ಷಗಳ ಹಿಂದೆ ವ್ಯಾಪಾರಕ್ಕಾಗಿ ಬೆಲ್ಜಿಯಂಗೆ ಹೋಗಿದ್ದರು. ಅಲ್ಲಿಂದ ಕಚ್ಚಾ ವಜ್ರಗಳನ್ನು ತಂದಿದ್ದರು. ಈ ವೇಳೆ ಅನುಭಾಯಿ ಅವರ ತಂದೆಗೆ ಮನೆಗೆ ತಂದಿರವ …
Read More »ಉಪನೋಂದಣೆ ಕಚೇರಿಗಳ ಕೆಲಸದ ಅವಧಿ ವಿಸ್ತರಣೆ: ಬೆಳಿಗ್ಗೆ 8ರಿಂದ ರಾತ್ರಿ 8ರವರೆಗೆ ಸೇವೆ ಲಭ್ಯ
ಬೆಂಗಳೂರು: ಸಾರ್ವಜನಿಕ ಹಿತದೃಷ್ಟಿಯಿಂದ ರಾಜ್ಯದ ಎಲ್ಲಾ ಉಪನೋಂದಣಿ ಕಚೇರಿಗಳ ಕೆಲಸದ ಅವಧಿಯನ್ನು ಬೆಳಿಗ್ಗೆ 8 ಗಂಟೆಯಿಂದ ರಾತ್ರಿ 8 ಗಂಟೆವರೆಗೆ ವಿಸ್ತರಿಸಲಾಗಿದೆ. ಸೆ.23 ರಿಂದ 30ರವರೆಗೆ ಈ ಆದೇಶ ಜಾರಿಗೆಯಲ್ಲಿರಲಿದ್ದು, ಒಂದು ವಾರ ಸಾರ್ವಜನಿಕರು 12 ಗಂಟೆಗಳ ಕಾಲ ಸೇವೆ ಪಡೆಯಬಹುದಾಗಿದೆ. ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಕೇಂದ್ರ ಮೌಲ್ಯ ಮಾಪನ ಸಮಿತಿಯ (Valuation Committee) 2023-24ನೇ ಸಾಲಿನಲ್ಲಿ ಸ್ಥಿರಾಸ್ತಿಗಳ ಮಾರುಕಟ್ಟೆ ಮೌಲ್ಯ ಮಾರ್ಗಸೂಚಿ ದರಗಳನ್ನು ಪರಿಷ್ಕರಣೆ ಮಾಡಲಾಗುತ್ತಿದೆ. ಮುಂದಿನ ದಿನಗಳಲ್ಲಿ …
Read More »ಪತ್ನಿ ಜೊತೆ ಸಂಬಂಧ ಶಂಕೆ: ವ್ಯಕ್ತಿಯ ಕತ್ತರಿಸಿದ ತಲೆ ಹಿಡಿದು ಪತ್ನಿಯ ತವರು ಮನೆಗೆ ಬಂದ ಪತಿ!
ಚೆನ್ನೈ(ತಮಿಳುನಾಡು): ಪತಿಯೊಬ್ಬತನ್ನ ಪತ್ನಿಯೊಂದಿಗೆ ಅಕ್ರಮ ಸಂಬಂಧ ಹೊಂದಿರುವ ಅನುಮಾನದ ಮೇರೆಗೆ ವ್ಯಕ್ತಿಯೋರ್ವನ ಶಿರಚ್ಛೇದ ಮಾಡಿರುವ ಆಘಾತಕಾರಿ ಘಟನೆ ಗುರುವಾರ ಸಂಜೆ ತಮಿಳುನಾಡಿನ ತೆಂಕಶಿ ಜಿಲ್ಲೆಯಲ್ಲಿ ನಡೆದಿದೆ. ಶಿರಚ್ಛೇದ ಮಾಡಿದ್ದಲ್ಲದೇ ಕತ್ತರಿಸಿದ ತಲೆಯನ್ನು ಟುಟಿಕೋರಿನ್ ಜಿಲ್ಲೆಯಲ್ಲಿರುವ ಪತ್ನಿಯ ತವರು ಮನೆ ಮುಂದೆ ಇಟ್ಟಿದ್ದ. ಕೃತ್ಯ ಎಸಗಿದ ಎಸ್.ವೇಲುಸಾಮಿಯನ್ನು ಪೊಲೀಸರು ಬಂಧಿಸಿದ್ದಾರೆ. ಮೃತ ವ್ಯಕ್ತಿಯನ್ನು ಮುರುಗನ್ ಎಂದು ಗುರುತಿಸಲಾಗಿದೆ. ಘಟನೆ ಹಿನ್ನೆಲೆ: ಆಲಂಕುಳಂ ಸಮೀಪದ ರೆಡಿಯಾರಪಟ್ಟಿ ಗಿಮ್ಕುಳಂ ಗ್ರಾಮಕ್ಕೆ ಸೇರಿದ ಆರೋಪಿ ವೇಲುಸಾಮಿಯು ತೂತುಕುಡಿ ಜಿಲ್ಲೆಯ …
Read More »ಕಾವೇರಿ ವಿವಾದದ ಬಗ್ಗೆ ಅಮಿತ್ ಶಾ ಜೊತೆ ಚರ್ಚಿಸಿರುವೆ,
ದೇವನಹಳ್ಳಿ(ಬೆಂ.ಗ್ರಾಮಂತರ): “ನಾನು ಕೂಡ ಮಂಡ್ಯಗೆ ಹೋಗುತ್ತಿದ್ದೇನೆ. ರೈತರ ಹೋರಾಟಕ್ಕೆ ಬಿಜೆಪಿ ಮತ್ತು ಜೆಡಿಎಸ್ ಬೆಂಬಲ ಕೊಟ್ಟಿದೆ. ಈಗ ನಾನು ರೈತರ ಹೋರಾಟಕ್ಕೆ ಸಾಂಕೇತಿಕವಾಗಿ ಬೆಂಬಲ ಸೂಚಿಸಲು ಹೊರಟಿದ್ದೇನೆ ಎಂದು ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ಖಂಡಿಸಿಮಂಡ್ಯ ಬಂದ್ ವಿಚಾರಕ್ಕೆ ಮಾಜಿ ಮುಖ್ಯಮಂತ್ರಿ ಹೆಚ್ಡಿ ಕುಮಾರಸ್ವಾಮಿ ಅವರು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರತಿಕ್ರಿಯಿಸಿದ್ದಾರೆ. ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್ಡಿಎ) ಜೊತೆ ಜನತಾ ದಳ (ಜಾತ್ಯತೀತ) ಮೈತ್ರಿ ಮಾಡಿಕೊಂಡ ಬಳಿಕ …
Read More »ಕಾವೇರಿ ಬಿಕ್ಕಟ್ಟು: ರಾಜ್ಯ ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪ್ರತಿಭಟನೆ.
ಬೆಂಗಳೂರು: ಕಾವೇರಿ ನೀರಿನ ವಿಚಾರವೂ ಸೇರಿ ವಿವಿಧ ರಂಗಗಳಲ್ಲಿ ರಾಜ್ಯ ಸರ್ಕಾರದ ವೈಫಲ್ಯವನ್ನು ಖಂಡಿಸಿ ಬಿಜೆಪಿ ವತಿಯಿಂದ ಇಂದು ಬೆಂಗಳೂರಿನ ಮೈಸೂರು ಬ್ಯಾಂಕ್ ವೃತ್ತದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗುತ್ತಿದೆ. ಮಾಜಿ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ, ಯಡಿಯೂರಪ್ಪ, ಡಿ.ವಿ.ಸದಾನಂದ ಗೌಡ, ಸಂಸದ ಪಿ.ಸಿ.ಮೋಹನ್, ಮಾಜಿ ಸಚಿವರಾದ ಡಾ.ಸಿ.ಎನ್.ಅಶ್ವತ್ಥನಾರಾಯಣ, ಗೋವಿಂದ ಕಾರಜೋಳ, ಕೆ.ಗೋಪಾಲಯ್ಯ, ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ, ಮಾಜಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, ಮಾಜಿ ವಿಧಾನ ಪರಿಷತ್ ಸದಸ್ಯ ಅಶ್ವಥ್ ನಾರಾಯಣ, …
Read More »ಬಿಜೆಪಿ-ಜೆಡಿಎಸ್ ಮೈತ್ರಿಯಿಂದ ಕಾಂಗ್ರೆಸ್ಗೆ ಯಾವುದೇ ತೊಂದರೆ ಇಲ್ಲ: ಸಚಿವ ಪರಮೇಶ್ವರ್
ಬೆಂಗಳೂರು: ಬಿಜೆಪಿ ಜೊತೆಗಿನ ಜೆಡಿಎಸ್ ಮೈತ್ರಿಯಿಂದ ಕಾಂಗ್ರೆಸ್ಗೆ ಯಾವುದೇ ರೀತಿಯ ತೊಂದರೆ ಆಗುವುದಿಲ್ಲ. ನಾವು ಈ ಬಾರಿ ಲೋಕಸಭೆ ಚುನಾವಣೆಯಲ್ಲಿ 20ಕ್ಕಿಂತ ಹೆಚ್ಚು ಸ್ಥಾನ ಗೆಲ್ಲುವ ವಿಶ್ವಾಸ ಇದೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ತಿಳಿಸಿದರು. ವಿಧಾನಸೌಧದಲ್ಲಿ ಮಾತನಾಡಿದ ಅವರು, ವಿಧಾನಸಭೆ ಚುನಾವಣೆಯಲ್ಲಿ ನಾವು ಕಾಂಗ್ರೆಸ್ ಶೇ.45ರಷ್ಟು ಮತ ಪ್ರಮಾಣ ಗಳಿಸಿದ್ದೆವು. ಅದನ್ನು ಲೋಕಸಭೆ ಚುನಾವಣೆಯಲ್ಲೂ ಉಳಿಸುವ ಸಾಧ್ಯತೆ ಇದೆ. ಅದರಿಂದ ನಮಗೇನು ತೊಂದರೆ ಆಗಲ್ಲ. ಅವರು ಮೈತ್ರಿ ಮಾಡಿಕೊಳ್ಳಲಿ. …
Read More »ಉತ್ತರಕನ್ನಡ ಜಿಲ್ಲೆಯ 34 ಜನರಲ್ಲಿ ಇಲಿಜ್ವರ ಪತ್ತೆ
ಕಾರವಾರ: ಉತ್ತರಕನ್ನಡ ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ಜೊತೆಗೆ ಇಲಿ ಜ್ವರವೂ ಜನರಲ್ಲಿ ತೀವ್ರಗತಿಯಲ್ಲಿ ಹರಡುತ್ತಿದೆ. ಕೆಲವೇ ದಿನಗಳಲ್ಲಿ ಸುಮಾರು 34 ಜನರಲ್ಲಿ ಕಾಣಿಸಿಕೊಂಡಿರುವ ಇಲಿ ಜ್ವರ ಜಿಲ್ಲೆಯಲ್ಲಿ ಆತಂಕ ಸೃಷ್ಟಿಸಿದೆ. ಇಲಿ ಜ್ವರದ ಬಗ್ಗೆ ಸಕಾಲದಲ್ಲಿ ಆರೋಗ್ಯ ಇಲಾಖೆ ಜಾಗೃತಿ ಮೂಡಿಸದೆ ಇದ್ದಿದ್ದರಿಂದ ಪ್ರಕರಣಗಳ ಸಂಖ್ಯೆಯಲ್ಲಿ ಹೆಚ್ಚಾಗಿದೆ ಎಂದು ಜನರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಈ ಕುರಿತು ಒಂದು ವರದಿ ಇಲ್ಲಿದೆ. ಉತ್ತರಕನ್ನಡ ಜಿಲ್ಲಾದ್ಯಂತ ಕಳೆದ ಎರಡು ತಿಂಗಳಿನಿಂದ ಜ್ವರದ ಪ್ರಕರಣಗಳು …
Read More »ಜಾಮೀನಿನ ಮೇಲೆ ಹೊರಬಂದು ಮತ್ತೆ ಡ್ರಗ್ಸ್ ಮಾರಾಟ: ಮಂಗಳೂರಲ್ಲಿ ಇಬ್ಬರು ಅರೆಸ್ಟ್
ಮಂಗಳೂರು: ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡಿ ಬಂಧಿತನಾಗಿದ್ದ ಆರೋಪಿ ನ್ಯಾಯಾಲಯದಿಂದ ಜಾಮೀನು ಪಡೆದ 15 ದಿನದಲ್ಲಿ ಮತ್ತೆ ಎಂಡಿಎಂಎ ಮಾರಾಟ ಮಾಡಿ, ಮಂಗಳೂರಿನ ಸಿಸಿಬಿ ಪೊಲೀಸರಿಂದ ಬಂಧಿತನಾಗಿದ್ದಾನೆ. ಉಪ್ಪಿನಂಗಡಿಯ ಅಬ್ದುಲ್ ಅಜೀಜ್ ಯಾನೆ ಅಜೀಜ್ ಎಂಬಾತನ ವಿರುದ್ಧ ಈ ಹಿಂದೆ ಉಪ್ಪಿನಂಗಡಿ, ವಿಟ್ಲ ಹಾಗೂ ಉರ್ವಾ ಪೊಲೀಸ್ ಠಾಣೆಯಲ್ಲಿ ಮಾದಕ ವಸ್ತು ಮಾರಾಟಕ್ಕೆ ಸಂಬಂಧಿಸಿದ ಮೂರು ಪ್ರಕರಣ ದಾಖಲಾಗಿತ್ತು. ಇತ್ತೀಚೆಗೆ ಸುಮಾರು 15 ದಿನಗಳ ಹಿಂದೆ ನ್ಯಾಯಾಲಯದಿಂದ ಜಾಮೀನು …
Read More »ಮಹಿಳಾ ಮೀಸಲಾತಿ.. ದಿಕ್ಕು ತಪ್ಪಿಸುವ ತಂತ್ರ ಅನುಸರಿಸಿದ ಸರ್ಕಾರ: ರಾಹುಲ್ ಗಾಂಧಿ
ನವದೆಹಲಿ: ಮಹಿಳಾ ಮೀಸಲಾತಿ ಮಸೂದೆಯನ್ನು ತಕ್ಷಣವೇ ಜಾರಿಗೆ ತರಬೇಕು ಎಂದು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಬಲವಾಗಿ ಪ್ರತಿಪಾದಿಸಿದರು. ಜನಗಣತಿ ಮತ್ತು ಸೀಮಾರೇಖೆಯ ಷರತ್ತುಗಳನ್ನು ಸೇರಿಸುವುದನ್ನು ಟೀಕಿಸಿದರು. ಈ ಷರತ್ತುಗಳು ಮಸೂದೆಯ ಅನುಷ್ಠಾನವನ್ನು ಅನಗತ್ಯವಾಗಿ ವಿಳಂಬಗೊಳಿಸುತ್ತವೆ ಎಂದು ಕಿಡಿಕಾರಿದರು. ಶುಕ್ರವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ”ಸರ್ಕಾರ ಜಾತಿವಾರು ಜನಗಣತಿ ನಡೆಸಬೇಕು. ಹಿಂದಿನ ಯುಪಿಎ ಸರ್ಕಾರದ ಅವಧಿಯಲ್ಲಿ ನಡೆದ ಜಾತಿ ಗಣತಿ ಮಾಹಿತಿ ಬಿಡುಗಡೆ ಮಾಡಬೇಕು” ಎಂದು ಒತ್ತಾಯಿಸಿದರು. ”ಮಹಿಳೆಯರಿಗೆ ಇಂದೇ …
Read More »ಪ್ರಮೋದ್ ಮುತಾಲಿಕ್ ವಿರುದ್ಧ ದೂರು ನೀಡಿದ ಮುಸ್ಲಿಂ ಮುಖಂಡರು
ಹುಬ್ಬಳ್ಳಿ: ಅನ್ಯ ಧರ್ಮಗಳ ಭಾವನೆಗಳಿಗೆ ಧಕ್ಕೆ ಉಂಟಾಗುವಂತೆ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದಾರೆಂಬ ಆರೋಪದ ಮೇಲೆ ಶ್ರೀರಾಮಸೇನೆ ಸಂಘಟನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಹಾಗೂ ಅವರ ಕಾರ್ಯಕರ್ತರನ್ನು ಗಡಿಪಾರು ಮಾಡಬೇಕು ಎಂದು ಆಗ್ರಹಿಸಿ ಮುಸ್ಲಿಂ ನಾಯಕರು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಇಂದು ಹುಬ್ಬಳ್ಳಿ- ಧಾರವಾಡ ಪೊಲೀಸ್ ಕಮಿಷನರ್ ರೇಣುಕಾ ಸುಕುಮಾರ್ ಅವರಿಗೆ ದೂರು ನೀಡಿದರು. ಹುಬ್ಬಳ್ಳಿ ರಾಣಿ ಚೆನ್ನಮ್ಮ ಈದ್ಗಾ ಮೈದಾನದ ಗಣೇಶ ವಿಸರ್ಜನೆ ಕಾರ್ಯಕ್ರಮಕ್ಕೆ ಗುರುವಾರ ಭೇಟಿ ನೀಡಿದ್ದ ಪ್ರಮೋದ್ ಮುತಾಲಿಕ್, …
Read More »
Laxmi News 24×7