ಸವದತ್ತಿ ನಗರದ ಹೊರವಲಯದಲ್ಲಿರುವ ಜೋಗುಳಭಾವಿಯಲ್ಲಿ ನೀರುಪಾಲಾದ ವ್ಯಕ್ತಿ ಶವವಾಗಿ ಇಂದು ಪತ್ತೆಯಾಗಿದ್ದಾನೆ. ಶ್ರಾವಣ ಮಾಸದ ನಿಮಿತ್ಯವಾಗಿ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಸಂಡ ಗ್ರಾಮದ ರಜಪೂತ ಕುಟುಂಬದವರು ಯಲ್ಲಮ್ಮ ದೇವಿಯ ದೇವಸ್ಥಾನಕ್ಕೆ ಆಗಮಿಸಿದ್ದರು. ನಿನ್ನೆಯ ದಿನ ಸ್ನಾನಕ್ಕೆಂದು ಜೋಗುಳಭಾವಿಗೆ ಇಳಿದಾಗ ಮೃತ 35 ವರ್ಷದ ವಿನಾಯಕ್ ಸಿಂಗ್ ರಜಪೂತ್ ನಿಶಕ್ತಿಯಿಂದ ಈಜಲಾಗದೇ ಬಾವಿಯಲ್ಲಿ ಮುಳುಗಿ ಮತ್ತೆ ಮೇಲೆ ಬರಲಿಲ್ಲ. ಘಟನೆಯ ಮಾಹಿತಿ ಪಡೆದಂತಹ ಅಗ್ನಿಶಾಮಕ ಮತ್ತು ಪೊಲೀಸ್ ಸಿಬ್ಬಂದಿಗಳು ಸ್ಥಳಕ್ಕೆ …
Read More »ಮಹದಾಯಿ ವಿಚಾರ ಮತ್ತೆ ಗರಿಗೆದರುವ ಸಾಧ್ಯತೆ
ಮಹದಾಯಿ ವಿಚಾರ ಮತ್ತೆ ಗರಿಗೆದರುವ ಸಾಧ್ಯತೆ ಇದೆ. . ಉತ್ತರ ಕರ್ನಾಟಕದಲ್ಲಿ ಜಲ ಹೋರಾಟ ಮತ್ತೊಮ್ಮೆ ತೀವ್ರ ಸ್ವರೂಪ ಪಡೆಯಲಿದೆ. ಹೀಗಾದರೆ ಈ ಬಾರಿಯ ಹೋರಾಟ ತೀವ್ರ ಸ್ವರೂಪ ಪಡೆಯಲಿದೆ. ಯಾವುದೇ ಚುನಾವಣೆಯಲ್ಲಿ ಅಭ್ಯರ್ಥಿಗಳಿಗೆ ಮಹದಾಯಿ ಮತ್ತು ಕಳಸಾ ಭಂಡೂರಿ ಪ್ರಚಾರದ ಅಸ್ತ್ರ. ಯಾವುದೇ ಸರಕಾರ ಬಂದರೂ ಈ ಭಾಗದ ಪ್ರತಿಭಟನಾಕಾರರ ಹಾಗೂ ಜನರ ಬೇಡಿಕೆಗಳನ್ನು ಕಡೆಗಣಿಸುವ ಪ್ರಯತ್ನಗಳು ನಡೆಯುತ್ತಿದ್ದರೂ ಅದು ಕಾರ್ಯರೂಪಕ್ಕೆ ಬರುತ್ತಿಲ್ಲ. ಉತ್ತರ ಕರ್ನಾಟಕದ ಜ್ವಲಂತ ಸಮಸ್ಯೆಗಳಲ್ಲಿ …
Read More »ಬೆಳಗಾವಿ ಜಿಲ್ಲಾ ವಿಭಜನೆಯಾದರೆ ಬೈಲಹೊಂಗಲ ಜಿಲ್ಲೆಯಾಗಬೇಕು: ವಿಶ್ವನಾಥ್ ಪಾಟೀಲ್
ಬೆಳಗಾವಿ ಜಿಲ್ಲಾ ವಿಭಜನೆಯಾದರೆ ಬೈಲಹೊಂಗಲ ಜಿಲ್ಲೆಯಾಗಬೇಕು ಎಂದು ಮಾಜಿ ಶಾಸಕ ವಿಶ್ವನಾಥ್ ಪಾಟೀಲ್ ಹೇಳಿದ್ದಾರೆ ಸತೀಶ್ ಜಾರಕಿಹೊಳಿ ಜಿಲ್ಲಾ ವಿಭಜನೆ ಹೇಳಿಕೆ ನೀಡಿದ ಬಳಿಕ ಬೈಲಹೊಂಗಲಯನ್ನು ಜಿಲ್ಲೆ ಮಾಡಬೇಕೆಂದು ಬೈಲಹೊಂಗಲದಲ್ಲಿ ಚರ್ಚೆ ಮತ್ತು ಹೋರಾಟಗಳು ಹೆಚ್ಚುತ್ತಿರುವ ಹಿನ್ನೆಲೆ ನಗರದಲ್ಲಿ ಮಾತುನಾಡಿದ ಮಾಜಿ ಶಾಸಕ ವಿಶ್ವನಾಥ್ ಪಾಟೀಲ್ , ಮೊದಲನಿಂದಲೂ ಅಖಂಡ ಬೆಳೆಗಾವಿ ಗೊಸ್ಕರ ಹೋರಾಟ ಮಾಡಿಕೊಂಡು ಬಂದಿದ್ದೇನೆ , ಆದರೆ ಆಡಳಿತ ದೃಷ್ಟಿಯಿಂದ ಬೆಳಗಾವಿ ಜಿಲ್ಲಾ ವಿಭಜನೆಯಾದರೆ ಬೈಲಹೊಂಗಲ ಜೆಲ್ಲೆಯಾಗಬೇಕು …
Read More »ಆಕ್ಷೇಪಾರ್ಹ ಟ್ವೀಟ್, ಬೆದರಿಕೆ.. ನಟ ಚೇತನ್, ರಹಮತುಲ್ಲಾ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕ್ರಿಯೆಗೆ ಅನುಮತಿ
ಬೆಂಗಳೂರು: ವಿದ್ಯಾರ್ಥಿನಿಯರ ಹಿಜಾಬ್ ಧರಿಸುವ ವಿಚಾರಕ್ಕೆ ಸಂಬಂಧಿಸಿದ ಪ್ರಕರಣದ ವಿಚಾರಣೆ ನಡೆಸಿದ್ದ ಹೈಕೋರ್ಟ್ ನ್ಯಾಯಮೂರ್ತಿಗಳ ವಿರುದ್ಧ ಆಕ್ಷೇಪಾರ್ಹ ಟ್ವೀಟ್ ಮಾಡಿದ ಆರೋಪ ಸಂಬಂಧ ಕನ್ನಡ ಚಿತ್ರನಟ ಹಾಗೂ ಸಾಮಾಜಿಕ ಹೋರಾಟಗಾರ ಚೇತನ್ ಕುಮಾರ್ ಹಾಗೂ ನ್ಯಾಯಮೂರ್ತಿಗಳಿಗೆ ಕೊಲೆ ಬೆದರಿಕೆ ಹಾಕಿದ ಆರೋಪದಲ್ಲಿ ತಮಿಳುನಾಡಿನ ತೌಹೀದ್ ಜಮಾತ್ ಅಧ್ಯಕ್ಷ ಆರ್. ರಹಮತುಲ್ಲಾ ಎಂಬುವರ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕ್ರಿಯೆ ಆರಂಭಿಸಲು ರಾಜ್ಯ ಅಡ್ವೊಕೇಟ್ ಜನರಲ್ ಕೆ. ಶಶಿಕಿರಣ್ ಶೆಟ್ಟಿ ಅನುಮತಿ ನೀಡಿದ್ದಾರೆ. ನ್ಯಾಯಾಂಗ …
Read More »ಕಾಮಗಾರಿ ಬಿಲ್ ಬಿಡುಗಡೆಯಾಗದ ಹಿನ್ನೆಲೆ ಸಾಲಗಾರರಿಂದ ಮನನೊಂದು ಗುತ್ತಿಗೆದಾರ ಆತ್ಮಹತ್ಯೆಗೆ ಯತ್ನ
ಬೆಳಗಾವಿ: ಶಾಲಾ ಕಟ್ಟಡ ಕಾಮಗಾರಿ ಪೂರ್ಣಗೊಳಿಸಿದರೂ ಬಾಕಿ ಬಿಲ್ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಮನನೊಂದು ಗುತ್ತಿಗೆದಾರ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಗೋಕಾಕ ತಾಲೂಕಿನ ಬೆಣಚಿನಮರಡಿ ಗ್ರಾಮದಲ್ಲಿ ನಡೆದಿದೆ. ರಾಮಣ್ಣ ಅಡಿವೆಪ್ಪ ಸರಕಪ್ಪಗೋಳ ಶಾಲೆಯ ಕಟ್ಟಡ ಮೇಲೆ ಏರಿ ಆತ್ಮಹತ್ಯೆಗೆ ಯತ್ನಿಸಿದ ಗುತ್ತಿಗೆದಾರ. 2015- 16 ರಲ್ಲಿ ಹೈದರಾಬಾದ್ ಮೂಲದ ಕಂಪನಿಯಿಂದ ಗ್ರಾಮದ ಸರ್ಕಾರಿ ಪ್ರೌಢ ಶಾಲೆ ಕಟ್ಟಡ ಕಾಮಗಾರಿಯನ್ನು ಈ ಗುತ್ತಿಗೆದಾರ ಕೈಗೊಂಡಿದ್ದರು. ಹಣ ಬಿಡುಗಡೆ ವಿಳಂಬವಾಗಿದ್ದರಿಂದ 2022 ರಲ್ಲಿ ಕಾಮಗಾರಿ ಪೂರ್ಣಗೊಂಡಿತ್ತು. …
Read More »ತಮಿಳುನಾಡಿಗೆ ನೀರು ಬಿಡುಗಡೆ ಮಾಡಿರುವ ಕಾರಣ ಬೆಂಗಳೂರು ಮೈಸೂರು ಹೆದ್ದಾರಿ ತಡೆದು ಪ್ರತಿಭಟನೆ ನಡೆಸಲು ಮುಂದಾದ: B.J.P.
ಮಂಡ್ಯ: ತಮಿಳುನಾಡಿಗೆ ನೀರು ಬಿಡುಗಡೆ ಮಾಡಿರುವ ಹಿನ್ನೆಲೆ ರಾಜ್ಯ ಸರ್ಕಾರದ ವಿರುದ್ಧ ಬೆಂಗಳೂರು – ಮೈಸೂರು ಹೆದ್ದಾರಿ ಬಂದ್ ಮಾಡಿ ಆ. 21ರಂದು ಪ್ರತಿಭಟಿಸಲು ಬಿಜೆಪಿ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಮಂಡ್ಯದ ಬಿಜೆಪಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಐದು ಜಿಲ್ಲೆಗಳ ಬಿಜೆಪಿ ಸಂಸದರು, ಶಾಸಕರು, ವಿಧಾನ ಪರಿಷತ್ ಸದಸ್ಯರು ಮತ್ತು ಮುಖಂಡರ ಭಾಗಿಯಾಗಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಹೋರಾಟ ನಡೆಸಲು ನಿರ್ಧರಿಸಿದ್ದಾರೆ. ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ವಿಧಾನ ಪರಿಷತ್ ಮಾಜಿ ಸದಸ್ಯ …
Read More »ಕೈಕೊಟ್ಟ ಮಳೆ: ಮೂಡಲಗಿ-ಗೋಕಾಕ ತಾಲೂಕುಗಳನ್ನು ಬರಪೀಡಿತ ತಾಲೂಕುಗಳನ್ನಾಗಿ ಘೋಷಿಸಲು ಸರ್ಕಾರಕ್ಕೆ ಮನವಿ : ಶಾಸಕ ಬಾಲಚಂದ್ರ ಜಾರಕಿಹೊಳಿ
ಮೂಡಲಗಿ : ಇದೇ ಅಗಸ್ಟ ತಿಂಗಳಲ್ಲಿ ಮೂಡಲಗಿ ತಾಲೂಕಿನಲ್ಲಿ ಶೇ 43 ಮತ್ತು ಗೋಕಾಕ ತಾಲೂಕಿನಲ್ಲಿ ಶೇ 80 ರಷ್ಟು ಪ್ರಮಾಣದಲ್ಲಿ ಮಳೆಯಾಗದೇ ಇರುವದರಿಂದ ಅನೇಕ ಬೆಳೆಗಳು ಒಣಗಿ ಹೋಗುತ್ತಿವೆ. ಇದರಿಂದ ರೈತರು ಸಂಕಷ್ಟದಲ್ಲಿದ್ದು, ಇನ್ನೊಂದು ವಾರದೊಳಗೆ ಮಳೆಯಾಗದಿದ್ದರೆ ಪರಿಸ್ಥಿತಿ ಮತ್ತಷ್ಟು ಉಲ್ಬಣಗೊಳ್ಳುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಗೋಕಾಕ ಮತ್ತು ಮೂಡಲಗಿ ತಾಲೂಕುಗಳನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ಸರ್ಕಾರಕ್ಕೆ ಮನವಿ ಮಾಡಿಕೊಳ್ಳಲಾಗುವುದು ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. …
Read More »ಸಿದ್ದರಾಮಯ್ಯ & ಡಿಕೆ ಶಿವಕುಮಾರ್ ಸಮುದ್ರದ ಮೇಲೆ ಕಲ್ಲೆಸೆಯುವ ಕೆಲಸ ಮಾಡ್ತಿದಾರೆ:ಸದಾನಂದಗೌಡ
ಬೆಂಗಳೂರು : ಆಪರೇಷನ್ ಹಸ್ತ ವಿಚಾರಕ್ಕೆ ಸಂಬಂಧಪಟ್ಟಂತೆ ಕಾಂಗ್ರೆಸ್ ನಾಯಕರ ವಿರುದ್ಧ ಕಿಡಿಕಾರಿದ ಸಂಸದ ಡಿವಿ ಸದಾನಂದಗೌಡ ಅವರು, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಸಮುದ್ರದ ಮೇಲೆ ಕಲ್ಲೆಸೆಯುವ ಕೆಲಸ ಮಾಡ್ತಿದಾರೆ ಎಂದು ವಾಗ್ದಾಳಿ ನಡೆಸಿದರು. ಮಲ್ಲೇಶ್ವರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ತಮ್ಮಲ್ಲಿರುವ ಗೊಂದಲ ಮುಚ್ಚಿಕೊಳ್ಳಲು ಹಾರಿಕೆ ಸುದ್ದಿ ಹರಡ್ತಿದಾರೆ. ಮೂರೇ ತಿಂಗಳಲ್ಲಿ ಕಾಂಗ್ರೆಸ್ನವರ ಕಪಟ ನಾಟಕ ಜನರಿಗೆ ಗೊತ್ತಾಗಿದೆ. ಅವರು ಭರವಸೆ ಈಡೇರಿಸಿಲ್ಲ. ಅವರ ಶಾಸಕರನ್ನು ಸಮಾಧಾನ …
Read More »ದಸರಾ 2023: ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಅರ್ಜಿ ಸಲ್ಲಿಸುತ್ತಿರುವ ಕಲಾವಿದರು
ಮೈಸೂರು : ವಿಶ್ವ ವಿಖ್ಯಾತ ಮೈಸೂರು ದಸರಾದಲ್ಲಿ ಜರುಗುವ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಹಲವು ಕಲಾವಿದರು ಮತ್ತು ಕಲಾ ತಂಡಗಳು ಈಗಾಗಲೇ ಅರ್ಜಿ ಸಲ್ಲಿಸುತ್ತಿದ್ದಾರೆ. ದೇಶ ವಿದೇಶಗಳಿಂದ ಅನೇಕ ಕಲಾವಿದರು ಮೈಸೂರಿನ ಕಲಾಮಂದಿರದಲ್ಲಿರುವ ಕಚೇರಿಗೆ ನೇರವಾಗಿ ಮತ್ತು ಅಂಚೆಯ ಮೂಲಕ ಅರ್ಜಿ ಸಲ್ಲಿಸುತ್ತಿದ್ದಾರೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಡಾ.ಎಂ ಡಿ.ಸುದರ್ಶನ್ ತಿಳಿಸಿದ್ದಾರೆ. ದಸರಾದಲ್ಲಿ ಜರುಗುವ ಜಂಬೂಸವಾರಿ ಮೆರವಣಿಗೆಯಲ್ಲಿ ಪಾಲ್ಗೊಳ್ಳಲು ವೀರಗಾಸೆ, ಕತ್ತಿಕುಣಿತ , ಕರಡಿ ಕುಣಿತ, …
Read More »ಬಹು ನಿರೀಕ್ಷಿತ ‘ಗೃಹಲಕ್ಷ್ಮಿ’ ಯೋಜನೆಯ ಚಾಲನೆ ಕಾರ್ಯಕ್ರಮ ಇದೀಗ ಬೆಳಗಾವಿಯಿಂದ ಮೈಸೂರಿಗೆ ಶಿಫ್ಟ್
ಬೆಂಗಳೂರು: ಕರ್ನಾಟಕ ಸರ್ಕಾರದ ಬಹು ನಿರೀಕ್ಷಿತ ‘ಗೃಹಲಕ್ಷ್ಮಿ’ ಯೋಜನೆಯ ಚಾಲನೆ ಕಾರ್ಯಕ್ರಮ ಇದೀಗ ಬೆಳಗಾವಿಯಿಂದ ಮೈಸೂರಿಗೆ ಶಿಫ್ಟ್ ಆಗಿದೆ ಮತ್ತು ಯೋಜನೆ ಚಾಲನೆ ದಿನಾಂಕ ಆ.30ಕ್ಕೆ ಮುಂದೂಡಿಕೆಯಾಗಿದೆ. ಈ ಹಿಂದೆ ಮೂರು ಬಾರಿ ಚಾಲನೆಯ ದಿನಾಂಕ ಮುಂದೂಡಲಾಗಿತ್ತು. ಇದೀಗ ನಾಲ್ಕನೇ ಬಾರಿ ದಿನಾಂಕ ಮುಂದೂಡಿಕೆಯಾಗಿದೆ. ಮೊದಲು ಆಗಸ್ಟ್ ಮೊದಲ ವಾರ, ಬಳಿಕ ಆ. 17 ಅಥವಾ ಆ.18ರಂದು ಯೋಜನೆ ಚಾಲನೆಗೆ ದಿನಾಂಕ ನಿಗದಿ ಮಾಡಲಾಗಿತ್ತು. ಆದರೆ ಮತ್ತೆ ದಿನಾಂಕ ಬದಲು ಮಾಡಿ …
Read More »
Laxmi News 24×7