Breaking News

ರಾಜಕೀಯ

ಆಗಸ್ಟ್ 11 ರಂದು ಅಥಣಿಗೆ ಸಿಎಂ ಸಿದ್ದರಾಮಯ್ಯ ಆಗಮನ: ಸ್ಥಳೀಯರಲ್ಲಿ ಗರಿಗೆದರಿದ ನಿರೀಕ್ಷೆಗಳು

ಚಿಕ್ಕೋಡಿ : ಆಗಸ್ಟ್ 11 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಚಿವ ಸಂಪುಟದ ಆರು ಜನ ಸಚಿವರು ಅಥಣಿ ತಾಲೂಕಿನ ಕೋಕಟನೂರ ಗ್ರಾಮಕ್ಕೆ ಆಗಮಿಸುವ ಹಿನ್ನೆಲೆ ಈ ಭಾಗದ ಜನರಲ್ಲಿ ನಿರೀಕ್ಷೆಗಳು ಗರಿಗೆದರಿವೆ. ಬಹು ದಿನಗಳ ಕೆಲ ಬೇಡಿಕೆಗಳಿಗೆ ಈಗಲಾದರೂ ಸಿಎಂ ಮನ್ನಣೆ ನೀಡಬಹುದೆಂದು ಶಿವಯೋಗಿಗಳ ನಾಡಿನ ಜನರಲ್ಲಿ ಭರವಸೆ ಮೂಡಿದೆ. ಹೌದು, ಆ.11 ರಂದು ಸಿಎಂ ಸಿದ್ದರಾಮಯ್ಯ ಹಾಗೂ ಆರು ಜನ ಸಚಿವರು ತಾಲೂಕಿನ ಕೋಕಟನೂರ ಗ್ರಾಮದಲ್ಲಿ ವಿವಿಧ ಕಾಮಗಾರಿಗಳ …

Read More »

ಆರೋಗ್ಯ ಇಲಾಖೆಯ ನಿವೃತ್ತ ಸ್ಟೋರ್‌ಕೀಪರ್‌ ಬಳಿ ₹10 ಕೋಟಿಗೂ ಹೆಚ್ಚು ಅಕ್ರಮ ಆಸ್ತಿ ಪತ್ತೆ!

ಭೋಪಾಲ್ (ಮಧ್ಯಪ್ರದೇಶ): ಅಕ್ರಮ ಆಸ್ತಿ ಗಳಿಕೆ ಆರೋಪದ ಮೇಲೆ ಮಧ್ಯಪ್ರದೇಶದ ಆರೋಗ್ಯ ಇಲಾಖೆಯ ನಿವೃತ್ತ ಸ್ಟೋರ್‌ಕೀಪರ್‌ ಮೇಲೆ ಲೋಕಾಯುಕ್ತ ಅಧಿಕಾರಿಗಳು ಮಂಗಳವಾರ ದಾಳಿ ಮಾಡಿ ದಾಖಲೆಗಳ ಪರಿಶೀಲನೆ ನಡೆಸಿದರು. ರಾಜ್‌ಗಢದ ಜಿಲ್ಲಾ ಆಸ್ಪತ್ರೆಯ ಸ್ಟೋರ್ ಕೀಪರ್ ಆಗಿ ನಿವೃತ್ತಗೊಂಡಿರುವ ಲಾಟೇರಿ ನಿವಾಸಿ ಅಶ್ಫಾಕ್ ಅಲಿ, ಅಕ್ರಮ ಆಸ್ತಿ ಗಳಿಕೆ ಆರೋಪ ಎದುರಿಸುತ್ತಿದ್ದಾರೆ. ಈ ಕುರಿತು ಭ್ರಷ್ಟಾಚಾರ ಕಾಯ್ದೆಯಡಿ ಪೊಲೀಸರು ದೂರಿಗೆ ದೂರು ಬಂದಿದ್ದು, ತನಿಖೆ ಕೈಗೊಂಡಿದ್ದಾರೆ. ಈ ವೇಳೆ, ಭಾರಿ ಪ್ರಮಾಣದ …

Read More »

ದೆಹಲಿಯಲ್ಲಿ ಅಮಿತ್ ಶಾ ಭೇಟಿಯಾದ ಬೊಮ್ಮಾಯಿ

ಬೆಂಗಳೂರು: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಇಂದು ದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾರನ್ನು ಭೇಟಿಯಾಗಿ ರಾಜ್ಯ ರಾಜಕೀಯ ವಿದ್ಯಮಾನಗಳ ಕುರಿತು ಮಾತುಕತೆ ನಡೆಸಿದ್ದಾರೆ. ಮಾತುಕತೆಯ ವೇಳೆ ಅಮಿತ್ ಶಾ, “ಆದಷ್ಟು ಬೇಗ ಪ್ರತಿಪಕ್ಷ ನಾಯಕರನ್ನು ಆಯ್ಕೆ ಮಾಡಲಾಗುವುದು. ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಬಗ್ಗೆಯೂ ನಿರ್ಧಾರ ಕೈಗೊಳ್ಳಲಾಗುವುದು. ಪಕ್ಷ ಸಂಘಟನೆ ನಿಟ್ಟಿನಲ್ಲಿ ಒಂದು ಉತ್ತಮ ತಂಡವನ್ನು ಆಯ್ಕೆ ಮಾಡಲಾಗುವುದು” ಎಂದು ಭರವಸೆ ನೀಡಿದ್ದಾರೆ ಎನ್ನಲಾಗಿದೆ. 5 ಗ್ಯಾರಂಟಿಗಳ ಮಾಹಿತಿ ಪಡೆದುಕೊಂಡ …

Read More »

ಸಿಎಂ ಸಿದ್ದರಾಮಯ್ಯ ಅವರು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಕಾಂಗ್ರೆಸ್‌ ಶಾಸಕರೊಂದಿಗೆ ಮಾತುಕತೆ

ಬೆಂಗಳೂರು: ಆರು ಜಿಲ್ಲೆಗಳ ಶಾಸಕರು ಹಾಗೂ ಉಸ್ತುವಾರಿ ಸಚಿವರ ಜೊತೆಗೆ ಸಿಎಂ ಸಿದ್ದರಾಮಯ್ಯ ಇಂದು ಸರಣಿ ಸಭೆ ನಡೆಸಿದರು. ಸಭೆಯಲ್ಲಿ ಬಹುತೇಕ ಶಾಸಕರು ಅನುದಾನ ಬಿಡುಗಡೆ ಬಗ್ಗೆ ಅಳಲು ತೋಡಿಕೊಂಡರು. ಬೆಳಗ್ಗೆ ರಾಯಚೂರು, ವಿಜಯಪುರ ಹಾಗೂ ಕೊಪ್ಪಳ ಜಿಲ್ಲೆಗಳ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಕಾಂಗ್ರೆಸ್‌ ಶಾಸಕರ ಜೊತೆ ಸಿಎಂ ಮಾತನಾಡಿದರು. ಸಂಜೆ ಬೆಳಗಾವಿ, ಹಾವೇರಿ ಮತ್ತು ಕಲಬುರಗಿ ಜಿಲ್ಲೆಗಳ ಶಾಸಕರು ಹಾಗೂ ಉಸ್ತುವಾರಿ ಸಚಿವರೊಂದಿಗೆ ಸಭೆ ನಡೆಸಿ ಅಸಮಾಧಾನಕ್ಕೆ …

Read More »

ಯುವ ರೈತ ಕೇವಲ 30 ಗುಂಟೆಯಲ್ಲಿ ಟೊಮೆಟೊ ಬೆಳೆದು ಲಕ್ಷ ಲಕ್ಷ ಸಂಪಾದಿಸಿದ್ದಾನೆ.

ದಾವಣಗೆರೆ : ಟೊಮೆಟೊಗೆ ಚಿನ್ನದ ಬೆಲೆ ಸಿಕ್ಕಿದ್ದರಿಂದ ರೈತರು ಹೆಚ್ಚಿನ ಲಾಭ ಪಡೆಯುತ್ತಿದ್ದು, ಕೆಂಪು ಸುಂದರಿ ಬೆಳೆಯಲು ಮುಂದಾಗಿದ್ದಾರೆ. ಕೆಲ ರೈತರು ಕೋಟಿಗಟ್ಟಲೇ ಲಾಭ ಪಡೆದರೆ ಇನ್ನೂ ಕೆಲವರು ಲಕ್ಷಗಟ್ಟಲೇ ಆದಾಯ ಗಳಿಸಿದ್ದಾರೆ. ಈ ಸಾಲಿನಲ್ಲಿ ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಕೊಕ್ಕನೂರು ಗ್ರಾಮದ ರೈತರೊಬ್ಬರು ಸೇರಿದ್ದಾರೆ. ಕೇವಲ ಮೂವತ್ತು ಗುಂಟೆ ಜಮೀನಿನಲ್ಲಿ 7 ಲಕ್ಷ ರೂ. ಲಾಭ ಪಡೆದಿದ್ದು, ಇನ್ನೂ ಮೂರು ಲಕ್ಷ ಲಾಭದ ನಿರೀಕ್ಷೆಯಲ್ಲಿದ್ದಾರೆ. ಹೌದು, ದಾವಣಗೆರೆ ಜಿಲ್ಲೆಯ …

Read More »

ಸ್ಪಂದನಾ ಪಾರ್ಥಿವ ಶರೀರ ಮಂಗಳವಾರ ರಾತ್ರಿ ಬೆಂಗಳೂರಿಗೆ ತಲುಪಿದ್ದು, ಅಂತಿಮ ದರ್ಶನದ ಬಳಿಕ ಇಂದು ಮಧ್ಯಾಹ್ನ ಅಂತ್ಯ ಸಂಸ್ಕಾರ ನಡೆಯಲಿದೆ.

ಬೆಂಗಳೂರು: ಬ್ಯಾಂಕಾಕ್ ಪ್ರವಾಸದ ವೇಳೆ ನಿಧನರಾದ ನಟ ವಿಜಯ ರಾಘವೇಂದ್ರ ಅವರ ಪತ್ನಿ ಸ್ಪಂದನಾ ಪಾರ್ಥಿವ ಶರೀರ ಮಂಗಳವಾರ ರಾತ್ರಿ ಬೆಂಗಳೂರಿಗೆ ತಲುಪಿದ್ದು, ಅಂತಿಮ ದರ್ಶನ ನಡೆಯುತ್ತಿದೆ. ಅಂತಿಮ ದರ್ಶನದ ಬಳಿಕ ಇಂದು ಮಧ್ಯಾಹ್ನ ಅಂತ್ಯ ಸಂಸ್ಕಾರ ನಡೆಯಲಿದೆ. ಮಂಗಳವಾರ ರಾತ್ರಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಥಾಯ್ ಏರ್ ವೇಸ್ ವಿಮಾನದಲ್ಲಿ ಕರೆತರಲಾಗಿದ್ದು, ಕಾರ್ಗೋ ಟರ್ಮಿನಲ್​ನಲ್ಲಿ ಕುಟುಂಬಸ್ಥರಿಗೆ ಪಾರ್ಥಿವ ಶರೀರ ಹಸ್ತಾಂತರ ಮಾಡಲಾಗಿದೆ. ಇದೇ ವಿಮಾನದಲ್ಲಿ ಪತಿ ವಿಜಯ ರಾಘವೇಂದ್ರ …

Read More »

ಬಾಬಾ ಸಾಹೇಬರ ಲೇಖನಿಯಿಂದ ಭಾರತ ಬದಲಾಯಿತು: ಜ್ಞಾನಪ್ರಕಾಶ ಸ್ವಾಮೀಜಿ

ಬೆಳಗಾವಿ: “ಜೀವ ಜಗತ್ತಿನಲ್ಲಿ ಮಹಿಳೆಯೇ ಶ್ರೇಷ್ಠ ಎಂದಿದ್ದರೂ ದೇಶದಲ್ಲಿ ಮಹಿಳೆಯರ ಮೇಲೆ ದೌರ್ಜನ್ಯ ನಡೆಯುತ್ತಲೇ ಇದೆ. ಶೋಷಿತ ಸಮುದಾಯಗಳೂ ಹೊರತಾಗಿಲ್ಲ. ಇದೆಲ್ಲದಕ್ಕೂ ಕಡಿವಾಣ ಹಾಕಬೇಕಿದ್ದರೆ ಶೋಷಿತ ಸಮುದಾಯಗಳು ಸುಶಿಕ್ಷಿತರಾಗಬೇಕು. ಆಗ ಮಾತ್ರ ಶಾಹುಮಹಾರಾಜರು ಮತ್ತು ಮಹಾತ್ಮಾ ಫುಲೆ ದಂಪತಿಯ ಕನಸು ನನಸಾಗಿಸಲು ಸಾಧ್ಯ” ಎಂದು ಮೈಸೂರಿನ ಉರಿಲಿಂಗಪೆದ್ದಿ ಮಠದ ಜ್ಞಾನಪ್ರಕಾಶ ಸ್ವಾಮೀಜಿ ಅಭಿಪ್ರಾಯಪಟ್ಟರು. ಬೆಳಗಾವಿಯ ಕುಮಾರ ಗಂಧರ್ವ ಕಲಾಭವನದಲ್ಲಿ ಛತ್ರಪತಿ ಶಾಹುಮಹಾರಾಜರ 144ನೇ ಜಯಂತಿ ಅಂಗವಾಗಿ ಕರ್ನಾಟಕ ದಲಿತ ಸಂಘರ್ಷ …

Read More »

DON 3: ಮುಂದಿನ ಡಾನ್​ ಶಾರುಖ್​ ಅಲ್ಲ ರಣ್​ವೀರ್

DON 3. ಬಿಟೌನ್​ಲ್ಲಿ ಡಾನ್​ ಸದ್ದಾಗುತ್ತಿದೆ. ಆಗಸ್ಟ್ 8ರಂದು ಬಾಲಿವುಡ್​ನ ಸೆನ್ಸೇಶನಲ್​ ಸುದ್ದಿ ಅಂದ್ರೆ ಅದು ‘ಡಾನ್​​ 3’. ನಟ, ನಿರ್ದೇಶಕ, ನಿರ್ಮಾಪಕ ಮತ್ತು ಬಹುಮುಖ ಪ್ರತಿಭೆ ಫರ್ಹಾನ್​ ಅಖ್ತರ್ ಇಂದು ‘ಡಾನ್​​ 3’ ಸಿನಿಮಾ ಘೋಷಣೆ ಮಾಡಿದ್ದಾರೆ. ಈ ಚಿತ್ರಕ್ಕಾಗಿ ಅಭಿಮಾನಿಗಳು ಬಹಳ ಸಮಯದಿಂದ ಕಾದು ಕುಳಿತಿದ್ದರು. ಅಂತಿಮವಾಗಿ ‘ಡಾನ್​​ 3’ ಘೋಷಣೆಯಾಗಿದ್ದು, ಇದಕ್ಕೆ ಸಂಬಂಧಿಸಿದಂತೆ ಹಲವು ವಿಚಾರಗಳೀಗ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಹೌದು, ಡಾನ್​ 3 ಸಿನಿಪ್ರಿಯರ …

Read More »

ಏಕದಿನ ಕ್ರಿಕೆಟ್‌ ವಿಶ್ವಕಪ್‌ಗೆ ಸಿದ್ಧತೆ; ಭಾರತದ ಸಂಭಾವ್ಯ ತಂಡ:

ನವದೆಹಲಿ: ಭಾರತದಲ್ಲಿ ನಡೆಯುವ ಏಕದಿನ ವಿಶ್ವಕಪ್​ಗೆ ಇನ್ನು ಎರಡು ತಿಂಗಳು ಮಾತ್ರ ಬಾಕಿ. ಅಕ್ಟೋಬರ್​ 5ರಿಂದ ಪ್ರಾರಂಭವಾಗುವ ಪಂದ್ಯಾವಳಿಗೆ ಸಪ್ಟೆಂಬರ್ 5ರೊಳಗೆ ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್‌ಗೆ (ಐಸಿಸಿ) ಎಲ್ಲ ಕ್ರಿಕೆಟ್​ ಮಂಡಳಿಗಳು ತಾತ್ಕಾಲಿಕ 15 ಆಟಗಾರರ ಪಟ್ಟಿ ಸಲ್ಲಿಸಬೇಕಿದೆ. ಸೆಪ್ಟಂಬರ್​ 27ರೊಳಗೆ ಅಂತಿಮ ತಂಡ ಪ್ರಕಟಿಸಬೇಕು. ಆಸ್ಟ್ರೇಲಿಯಾ ಈಗಾಗಲೇ 18 ಸದಸ್ಯರ ತಂಡವನ್ನು ಪ್ರಕಟಿಸಿದೆ.     ಭಾರತ ತಂಡದ ಆಯ್ಕೆಯಲ್ಲಿ ಹಲವು ಗೊಂದಲಗಳಿದ್ದು ಗಾಯದಿಂದ ಚೇತರಿಸಿಕೊಂಡು ಯಾರೆಲ್ಲಾ ಸ್ಥಾನ ಪಡೆಯುತ್ತಾರೆ, …

Read More »

ಇನ್ಮುಂದೆ ಕನ್ನಡ ಸೇರಿದಂತೆ ಈ ಪ್ರಾದೇಶಿಕ ಭಾಷೆಯಲ್ಲೂ ಪಡೆಯಬಹುದು ಫೋನ್​ ಪೇ ಪೇಮೆಂಟ್​ ನೋಟಿಫಿಕೇಶನ್​

ಬೆಂಗಳೂರು: ಡಿಜಿಟಲ್​ ಪೇಮೆಂಟ್​ ಪ್ಲಾಟ್​​ಫಾರ್ಮ್​​ನಲ್ಲಿ ಜನಸಾಮಾನ್ಯರ ಜನಪ್ರಿಯ ತಾಣವಾಗಿರುವ ಫೋನ್​ಪೇ ಇದೀಗ ಮತ್ತಷ್ಟು ವ್ಯಾಪಾರಿ ಸ್ನೇಹಿಯಾಗುವತ್ತ ಹೆಜ್ಜೆ ಇಟ್ಟಿದೆ. ಈ ಹಿಂದೆ ವ್ಯಾಪಾರಿಗಳಿಗೆ ಗ್ರಾಹಕರ ಪೇಮೆಂಟ್​ ಇತಿಹಾಸವನ್ನು ಸುಲಭವಾಗಿ ತಿಳಿಯುವ ಉದ್ದೇಶದಿಂದ ಪಾವತಿ ಕುರಿತು ಸ್ಮಾರ್ಟ್​ ಸ್ಪೀಕರ್​ ನೋಟಿಫಿಕೇಶನ್​ ಅನ್ನು ಪರಿಚಯಿಸಿತು. ಇಷ್ಟು ದಿನ ಇಂಗ್ಲಿಷ್​ನಲ್ಲಿ ಈ ನೋಟಿಫಿಕೇಶನ್​ ಧ್ವನಿ ಕೇಳಿ ಬರುತ್ತಿತ್ತು. ಆದರೆ, ಇದೀಗ ಪ್ರಾದೇಶಿಕ ಭಾಷೆಗಳಲ್ಲೂ ಪರಿಚಯಿಸಿದೆ. ಈ ಸ್ಮಾರ್ಟ್​ ಸ್ಪೀಕರ್​ ಇನ್ಮುಂದೆ ಹಣದ ವಾಹಿವಾಟಿನ ಮಾಹಿತಿಯನ್ನು ಕನ್ನಡ, …

Read More »