ಉತ್ತರ ಪ್ರದೇಶದ ಇಟಾವಾ ಲಯನ್ ಸಫಾರಿ ಪಾರ್ಕ್ನಲ್ಲಿ ಸಿಂಹಿಣಿಯೊಂದು ಐದು ಮರಿಗಳು ಜನ್ಮ ನೀಡಿದೆ. ಈ ಪೈಕಿ ನಾಲ್ಕು ಮರಿಗಳು ಮೃತಪಟ್ಟಿವೆ. ಆದರೆ, ಇದೇ ಮೊದಲ ಬಾರಿ ಈ ಸಿಂಹಿಣಿ ಸುಮಾರು ಗಂಟೆಗಳ ಅಂತರದಲ್ಲಿ ಐದು ಮರಿಗಳಿಗೆ ಜನ್ಮ ನೀಡಿರುವುದು ವನ್ಯಜೀವಿ ಮತ್ತು ಅರಣ್ಯ ಅಧಿಕಾರಿಗಳ ಅಚ್ಚರಿಗೆ ಕಾರಣವಾಗಿದೆ. ಆದ್ದರಿಂದ ಈ ಸಿಂಹಿಣಿ ಬಗ್ಗೆ ಅಧ್ಯಯನ ಮಾಡಲು ಉತ್ತರ ಪ್ರದೇಶದ ಅರಣ್ಯ ಇಲಾಖೆ ಸಮಿತಿಯನ್ನು ರಚಿಸಿದೆ. ಇಟಾವಾ ಲಯನ್ ಸಫಾರಿ …
Read More »ಹಂಪಿಯಲ್ಲಿ ಶೆರ್ಪಾಗಳಿಂದ ಯೋಗಾಭ್ಯಾಸ,
ವಿಜಯನಗರ: ಜಿ20 ಸಭೆಗೆ ಆಗಮಿಸಿರುವ ಶೆರ್ಪಾಗಳಿಗೆ ವಿಶ್ವವಿಖ್ಯಾತ ಹಂಪಿಯ ಪುರಂದರದಾಸರ ಮಂಟಪದಲ್ಲಿ ಇಂದು ಬೆಳಗ್ಗೆ ಯೋಗಾಭ್ಯಾಸ ಮಾಡಿಸಲಾಯಿತು. ಜಿ20 ಸಭೆಯಲ್ಲಿ ಭಾಗಿಯಾದ ಶೆರ್ಪಾಗಳು ಇಂದು ಬೆಳಗ್ಗೆ ವಿಶ್ವಪಾರಂಪರಿಕ ತಾಣ ಹಂಪಿಗೆ ಭೇಟಿ ನೀಡಿದ್ದರು. ಸೂರ್ಯೋದಯಕ್ಕೂ ಮುನ್ನ ತುಂಗಭದ್ರಾ ನದಿ ದಡದಲ್ಲಿರುವ ಪುರಂದರ ಮಂಟಪದಲ್ಲಿ ಯೋಗಾಭ್ಯಾಸ ಮಾಡಿದರು. ವಿಶ್ವ ಪಾರಂಪರಿಕ ತಾಣ ಹಂಪಿಯಲ್ಲಿ ಜಿ-20 ಸಾಂಸ್ಕೃತಿಕ ಕಾರ್ಯಕಾರಿ ಗುಂಪಿನ ಸಭೆಗೆ ಆಗಮಿಸಿದ ಸದಸ್ಯ ಹಾಗೂ ಅತಿಥಿ ರಾಷ್ಟ್ರಗಳ ಅತ್ಯುನ್ನತ ಪ್ರತಿನಿಧಿಗಳು ಯೋಗಾಭ್ಯಾಸ …
Read More »ಸಂತೋಷ್ ಆತ್ಮಹತ್ಯೆ ಪ್ರಕರಣ: ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಕ್ಲೀನ್ ಚಿಟ್
ಶಿವಮೊಗ್ಗ: ಗುತ್ತಿಗೆದಾರ ಸಂತೋಷ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ನ್ಯಾಯಾಲಯ ಮಾಜಿ ಸಚಿವ ಕೆಎಸ್ ಈಶ್ವರಪ್ಪರಿಗೆ ಕ್ಲೀನ್ ಚಿಟ್ ನೀಡಿದೆ. ಮುಂದಿನ ದಿನಗಳಲ್ಲಿ ರಾಜ್ಯ ಮತ್ತು ದೇಶದ ಕೆಲಸ ಮಾಡಲು ಇಂದಿನ ನ್ಯಾಯಾಲಯದ ತೀರ್ಪು ಪ್ರೇರಣೆ ಕೊಟ್ಟಿದೆ ಎಂದು ಕೆಎಸ್ ಈಶ್ವರಪ್ಪ ಹೇಳಿದ್ದಾರೆ. ಚೌಡೇಶ್ವರಿ ನನ್ನನ್ನು ಇವತ್ತು ನಿರ್ದೋಷಿ ಅಂತ ಹೇಳಿ ನ್ಯಾಯ ಕೊಟ್ಟಿದ್ದಾಳೆ. ನನ್ನಲ್ಲಿ ಮತ್ತಷ್ಟು ಆ ದೈವ ಭಕ್ತಿ ನನಗೆ ಹೆಚ್ಚಿಗೆ ಆಗಲು ಅವಕಾಶ ಆಯಿತು. ಆ ತಾಯಿಯ …
Read More »ಜು.18 ರಂದು ತಾಜ್ ವೆಸ್ಟೆಂಡ್ನಲ್ಲಿ ವಿಪಕ್ಷಗಳ ಸಭೆ
ಬೆಂಗಳೂರು: ಕೇಂದ್ರ ಸರ್ಕಾರದ ವಿರುದ್ಧ ತೊಡೆತಟ್ಟಿರುವ ವಿಪಕ್ಷಗಳು ಪಾಟ್ನಾ ಬಳಿಕ ತಮ್ಮ ಎರಡನೇ ಸಭೆಯನ್ನು ಇಲ್ಲಿ ಜುಲೈ 18 ರಂದು ನಡೆಸಲಿದ್ದು, ಅದರ ಸಿದ್ಧತೆ ಪರಿಶೀಲನೆಗೆ ದೆಹಲಿ ನಾಯಕರು ರಾಜ್ಯಕ್ಕೆ ಆಗಮಿಸಿದ್ದಾರೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್, ರಾಜ್ಯ ಉಸ್ತುವಾರಿ ಸುರ್ಜೇವಾಲಾ ಅವರು ಬೆಂಗಳೂರಿನಲ್ಲಿ ನಡೆಯಲಿರುವ ಸಭೆಯ ಸಿದ್ಧತೆಗಳ ವೀಕ್ಷಣೆ ಮಾಡಿದರು. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಬೆಂಗಳೂರಿನ ತಾಜ್ ವೆಸ್ಟೆಂಡ್ನಲ್ಲಿ ಸಭೆ ನಡೆಯಲಿದ್ದು, ಒಟ್ಟು 24 ಪಕ್ಷಗಳ ಪ್ರಮುಖ …
Read More »ಭೀಕರ ಪ್ರವಾಹ.. ಉತ್ತರ ಭಾರತಕ್ಕೆ ಬೈಕ್ ರೈಡ್ ಹೋಗಿದ್ದ ಕಾರವಾರದ ಯುವಕರು ಬದುಕಿ ಬಂದದ್ದೇ ಪವಾಡ!
ಕಾರವಾರ(ಉತ್ತರ ಕನ್ನಡ): ಬೈಕ್ ಏರಿ ಉತ್ತರಭಾರತ ಸುತ್ತುವ ಕನಸಿನೊಂದಿಗೆ ಕಾರವಾರದಿಂದ ತೆರಳಿದ್ದ ಸಾಹಸಿ ಯುವಕರ ತಂಡವೊಂದು ಹಿಮಾಚಲ ಪ್ರದೇಶದ ಬಳಿ ಸಂಭವಿಸಿದ ಪ್ರವಾಹದಿಂದ ಕೂದಲೆಳೆ ಅಂತರದಿಂದ ಪಾರಾಗಿದೆ. ಪ್ರಯಾಣದುದ್ದಕ್ಕೂ ಹಲವು ಅಡೆತಡೆಗಳನ್ನು ಎದುರಿಸಿ ಇದೀಗ ಸುರಕ್ಷಿತವಾಗಿ ಮರಳಿರುವ ಯುವಕರ ತಂಡ ತಮಗಾದ ಭಯಾನಕ ಅನುಭವ ಬಿಚ್ಚಿಟ್ಟಿದ್ದಾರೆ. ಈ ಕುರಿತು ಒಂದು ಸ್ಪೆಷಲ್ ರಿಪೋರ್ಟ್ ಇಲ್ಲಿದೆ ನೋಡಿ. ಬೈಕ್ ಕ್ರೇಜ್ ಇರುವ ಬಹುತೇಕರಿಗೆ ದೂರದ ಊರುಗಳಿಗೆ ಪ್ರವಾಸ ಕೈಗೊಳ್ಳುವ ಹಂಬಲ ಕೂಡ ಇರುತ್ತದೆ. …
Read More »ಚಂದ್ರಯಾನ 3 ತಂಡದಲ್ಲಿದ್ದ ಚಿಕ್ಕಮಗಳೂರಿನ ಡಾ.ನಂದಿನಿ
ಚಿಕ್ಕಮಗಳೂರು: ಇಡೀ ಪ್ರಪಂಚವೇ ಕಾತರದಿಂದ ಕಾಯುತ್ತಿದ್ದ, ಭಾರತದ ಕನಸಿನ ಯೋಜನೆ ಚಂದ್ರಯಾನ 3 ನಿನ್ನೆಯಷ್ಟೆ ಇಸ್ರೋ ಕೇಂದ್ರದಿಂದ ಯಶಸ್ವಿಯಾಗಿ ಬಾಹ್ಯಾಕಾಶ ಕಕ್ಷೆಗೆ ಉಡಾವಣೆಗೊಂಡಿದೆ. ಚಂದ್ರಯಾನ 3 ಯೋಜನೆ ಹಾಗೂ ಇದರ ಯಶಸ್ವಿ ಉಡಾವಣೆಯ ಹಿಂದೆ ಹಲವಾರು ವಿಜ್ಞಾನಿಗಳ ಪರಿಶ್ರಮವಿದೆ. ದೇಶದ ಬೇರೆ ಬೇರೆ ಜಿಲ್ಲೆಗಳ ವಿಜ್ಞಾನಿಗಳು ಈ ಯೋಜನೆಗಾಗಿ ಹಗಲು ಇರುಳು ಕೆಲಸ ಮಾಡಿದ್ದಾರೆ. ಇದೀಗ ಆಂಧ್ರಪ್ರದೇಶದ ಶ್ರೀ ಹರಿಕೋಟಾ ಸತೀಶ್ ಧವನ್ ಉಪಗ್ರಹ ಉಡಾವಣಾ ಕೇಂದ್ರದಲ್ಲಿ ಭಾರತೀಯ ಬಾಹ್ಯಾಕಾಶ ಸಂಸ್ಥೆ …
Read More »”ಜನರು ಲೋಕಸಭಾ ಚುನಾವಣೆಯಲ್ಲಿಯೂ ಬಿಜೆಪಿಗೆ ತಕ್ಕ ಪಾಠ ಕಲಿಸಬೇಕು” : ಎಸ್.ಆರ್. ಹೀರೇಮಠ
ಮೈಸೂರು: ”ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಪಾಠ ಕಲಿಸಿದಂತೆ, ಮುಂದಿನ ಲೋಕಸಭಾ ಚುನಾವಣೆಯಲ್ಲಿಯೂ ಕೂಡಾ ಬಿಜೆಪಿಗೆ ತಕ್ಕ ಪಾಠ ಕಲಿಸಬೇಕು” ಎಂದು ಜನಾಂದೋಲನ ಮಹಾಮೈತ್ರಿ ಅಧ್ಯಕ್ಷ ಎಸ್. ಆರ್. ಹಿರೇಮಠ ಕೇಂದ್ರ ಸರ್ಕಾರದ ವಿರುದ್ಧ ಗರಂ ಆದರು. ಜಿಲ್ಲಾ ಪತ್ರಕರ್ತರ ಭವನದಲ್ಲಿ ಶುಕ್ರವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ”ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ ಜನತೆ ಬಿಜೆಪಿ ಹಾಗೂ ಸಂಘ ಪರಿವಾರದ ಶಕ್ತಿಗಳ ಡಬಲ್ ಎಂಜಿನ್ ಸರಕಾರವನ್ನು ಸೋಲಿಸುವ ಮೂಲಕ ಐತಿಹಾಸಿಕ ನಿರ್ಣಯ …
Read More »ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಪಕ್ಷ ಈಗಿನಿಂದಲೇ ಸಿದ್ಧತೆ ಆರಂಭ
ಬೆಂಗಳೂರು: ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಪಕ್ಷ ಈಗಿನಿಂದಲೇ ಸಿದ್ಧತೆ ಆರಂಭಿಸಿದೆ. ರಾಜ್ಯದಲ್ಲಿ ಈ ಬಾರಿ ಸುಮಾರು 20 ಲೋಕಸಭಾ ಕ್ಷೇತ್ರಗಳನ್ನು ಗೆಲ್ಲುವ ಗುರಿಯನ್ನು ಕಾಂಗ್ರೆಸ್ ಪಕ್ಷ ಹೊಂದಿದೆ. ಹೆಚ್ಚಿನ ಕ್ಷೇತ್ರ ಗೆಲ್ಲುವ ಉದ್ದೇಶದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರದ ಸಚಿವರ ಮೇಲೆ ಹೆಚ್ಚಿನ ಒತ್ತಡ ಹಾಕಲು ಹೈಕಮಾಂಡ್ ಮುಂದಾಗಿದೆ. ಮುಖ್ಯಮಮತ್ರಿ ಸಿದ್ದರಾಮಯ್ಯ ಸರ್ಕಾರದ ಸಚಿವರಿಗೆ ಹಾಗೂ ಜಿಲ್ಲಾ ಉಸ್ತುವಾರಿ ಮಂತ್ರಿಗಳಿಗೆ ಲೋಕಸಭೆ ಚುನಾವಣೆಯಲ್ಲಿ ತಮ್ಮ ಜಿಲ್ಲೆಯ ವ್ಯಾಪ್ತಿಯಲ್ಲಿನ ಲೋಕಸಭೆ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು …
Read More »ಸರ್ಕಾರಿ ವ್ಯಾಜ್ಯಗಳ ನಿರ್ವಹಣೆಗೆ ನೂತನ ಕಾನೂನು ತರುತ್ತೇವೆ: ಸಚಿವ ಹೆಚ್ ಕೆ ಪಾಟೀಲ್
ದಾವಣಗೆರೆ: ಸರ್ಕಾರಿ ವ್ಯಾಜ್ಯಗಳ ನಿರ್ವಹಣೆಗೆ ನೂತನ ಕಾನೂನು ತರುತ್ತೇವೆ ಎಂದು ಕಾನೂನು ಮತ್ತು ಸಂಸದೀಯ ಸಚಿವ ಹೆಚ್ ಕೆ ಪಾಟೀಲ್ ತಿಳಿಸಿದರು. ಹರಿಹರ ತಾಲೂಕಿನ ರಾಜನಹಳ್ಳಿ ವಾಲ್ಮೀಕಿ ಪೀಠಕ್ಕೆ ಭೇಟಿ ನೀಡಿ ಪ್ರಸನ್ನಾನಂದ ಪುರಿ ಶ್ರೀಯವರನ್ನು ಭೇಟಿಯಾದ ಬಳಿಕ ಮಾಧ್ಯಮದವರಿಗೆ ಪ್ರತಿಕ್ರಿಯಿಸಿದ ಸಚಿವರು, ಸರ್ಕಾರಿ ವ್ಯಾಜ್ಯಗಳ ನಿರ್ವಹಣೆಗೆ ಕಾನೂನು ತರುತ್ತಿದ್ದೇವೆ. ಬಡವರ ಪ್ರಕರಣಗಳು ಕೋರ್ಟ್ನಲ್ಲಿ ವಿಳಂಭವಾಗುತ್ತಿವೆ. ಈ ಕೇಸ್ಗಳು ಅದಷ್ಟು ಬೇಗ ಇತ್ಯರ್ಥವಾಗಬೇಕು. ಹೀಗಾಗಿ ಅದರ ಬಗ್ಗೆ ಕಾನೂನು ತರಲು ಮುಂದಾಗಿದ್ದೇವೆ …
Read More »ಜು. 19 ರಿಂದ ‘ಗೃಹಲಕ್ಷ್ಮಿ’ ಯೋಜನೆಗೆ ಅರ್ಜಿ ಸಲ್ಲಿಕೆ ಆರಂಭ
ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವದ ಐದು ಗ್ಯಾರಂಟಿಗಳಲ್ಲಿ ಒಂದಾದ ‘ಗೃಹಲಕ್ಷ್ಮಿ’ ಯೋಜನೆಯಡಿ ಫಲಾನುಭವಿಗಳ ನೋಂದಣಿಗೆ ಕಾರ್ಯ ಜು.19ರಿಂದ ಆರಂಭವಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದರು. ವಿಧಾನಸೌಧದಲ್ಲಿ ಇಂದು ಮಾಧ್ಯಮಗೋಷ್ಟಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು, ರಾಜ್ಯ ಸರ್ಕಾರ ಘೋಷಿಸಿರುವ ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯಡಿ ಮನೆ ಯಜಮಾನಿಗೆ ಮಾಸಿಕ 2 …
Read More »
Laxmi News 24×7