ಪಣಜಿ(ಗೋವಾ): ಕಲ್ಯಾಣ ಮತ್ತು ಸಾಮರಸ್ಯಕ್ಕಾಗಿ ಪ್ರಗತಿಶೀಲ ನದಿ ಪ್ರಾಧಿಕಾರ (ಪ್ರವಾಹ್) ರಚನೆಯಾದ ನಂತರ ಕಳಸಾ-ಬಂಡೂರಿ ಅಣೆಕಟ್ಟು ನಿರ್ಮಾಣ ಮಾಡಲು ಕರ್ನಾಟಕಕ್ಕೆ ಕೇಂದ್ರ ಸರ್ಕಾರ ಅನುಮತಿ ನೀಡಲು ಸಾಧ್ಯವಿಲ್ಲ ಎಂದು ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಸೋಮವಾರ ಹೇಳಿದ್ದಾರೆ. “ಮಹದಾಯಿ ವಿಷಯವಾಗಿ ಗೋವಾದ ಕಾನೂನು ತಂಡವು ದೆಹಲಿಯಲ್ಲಿದೆ. ನಾವು ನಮ್ಮ ವಾದವನ್ನು ಸಮರ್ಥವಾಗಿ ಮಂಡಿಸುತ್ತೇವೆ ಎಂಬುದು ನನಗೆ ಖಾತ್ರಿಯಿದೆ. ಸರ್ವೋಚ್ಛ ನ್ಯಾಯಾಲಯದ ಮೇಲೆ ಸಂಪೂರ್ಣ ನಂಬಿಕೆ ನನಗೆ ಇದೆ. ಕರ್ನಾಟಕ ಏನೇ …
Read More »ನಾವು ಜೈನ ಮಂದಿರಕ್ಕೆ ರಕ್ಷಣೆ ಕೊಡುತ್ತೇವೆ ಎಂದ ಗೃಹ ಸಚಿವ ಜಿ.ಪರಮೇಶ್ವರ
ಚಿಕ್ಕೋಡಿಯ ಹಿರೇಕೋಡಿಯ ನಂದಿ ಪರ್ವತ ಆಶ್ರಮದ ಆಚಾರ್ಯ ಶ್ರೀ 108 ಕಾಮಕುಮಾರ ರಾಜ ಮಹಾರಾಜರ ಬರ್ಬರ ಹತ್ಯೆ ಹಿನ್ನೆಲೆಯಲ್ಲಿ ಇಲ್ಲಿನ ವರೂರಿನ ನವಗ್ರಹ ತೀರ್ಥ ಕ್ಷೇತ್ರದ ಆಚಾರ್ಯ ಗುಣಧರನಂದಿ ಮಹಾರಾಜರು ಜೈನ್ ಮುನಿಗಳಿಗೆ, ಜೈನ್ ಬಸದಿಗಳಿಗೆ ಸರ್ಕಾರ ರಕ್ಷಣೆ ನೀಡುವಂತೆ ಆಗ್ರಹಿಸಿ ಸಲ್ಲೇಖನ ವ್ರತ ಕೈಗೊಂಡಿದ್ದರು ಈ ಹಿನ್ನೆಲೆಯಲ್ಲಿ ಇಂದು ಗೃಹ ಸಚಿವ ಜಿ.ಪರಮೇಶ್ವರ ಅವರು ನವಗ್ರಹ ಕ್ಷೇತ್ರಕ್ಕೆ ಭೇಟಿ ಕೊಟ್ಟು ಜೈನ್ ಮುನಿಗಳಿಗೆ ರಕ್ಷಣೆ ನೀಡುವ ಭರವಸೆ ನೀಡಿದರು. …
Read More »ನಮಗೆ ಭದ್ರತೆ ಒದಗಿಸುವವರೆಗೂ ನಿರಂತರವಾಗಿ ಅಮರಣಾಂತ ಉಪವಾಸ ಶತಸಿದ್ಧ ಎಂದ ಸ್ವಾಮೀಜಿ
ಹುಬ್ಬಳ್ಳಿ : ನಮ್ಮ ಭಾರತ ದೇಶದಲ್ಲಿ ಆತಂಕವಾದಿಗೆ ಯಾವ ಶಿಕ್ಷೆಯಾಗುವುದಿಲ್ಲವೋ ಅಂತಹ ಶಿಕ್ಷೆ ಜೈನ ಮುನಿಗೆ ನೀಡಲಾಗಿದೆ. ಕಾಮಕುಮಾರ ನಂದಿ ಮಹಾರಾಜ ಅವರನ್ನು ಈ ರೀತಿ ಚಿತ್ರಹಿಂಸೆ ನೀಡಿ ಕೊಲೆ ಮಾಡಿರುವುದು ನಿಜಕ್ಕೂ ನೋವಿನ ಸಂಗತಿ ಎಂದು ಹುಬ್ಬಳ್ಳಿಯ ವರೂರಿನಲ್ಲಿ ಜೈನ ಮುನಿ ಗುಣಧರನಂದಿ ಮಹಾರಾಜ್ ಸ್ವಾಮೀಜಿ ಹೇಳಿದ್ದಾರೆ. ವರೂರಿನಲ್ಲಿ ಮಾತನಾಡಿದ ಅವರು, ಇಂತಹ ಕ್ರೂರವಾದ ಘಟನೆಯಾದರೂ ಸಹ ಸಿಎಂ ಸಿದ್ದರಾಮಯ್ಯ ಅವರು ಯಾವುದೇ ಸ್ಪಂದನೆ ಮಾಡಿರಲಿಲ್ಲ. ಮಾಧ್ಯಮಗಳ ಸಹಾಯದಿಂದ ಈ …
Read More »ದಂಪತಿಯನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ:
ಬೆಳಗಾವಿ: ದಂಪತಿಯನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಹುಕ್ಕೇರಿ ತಾಲೂಕಿನ ಮಾವನೂರು ಗ್ರಾಮದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಮಾವನೂರು ಗ್ರಾಮದ ಗಜೇಂದ್ರ ಈರಪ್ಪ ಹುನ್ನೂರಿ(60) ಹಾಗೂ ದ್ರಾಕ್ಷಾಯಿಣಿ ಗಜೇಂದ್ರ ಹುನ್ನೂರಿ(45) ಕೊಲೆಯಾದವರು ಎಂದು ಗುರುತಿಸಲಾಗಿದೆ. ಈ ಕೊಲೆ ಶುಕ್ರವಾರ ನಡೆದಿದೆ ಎಂಬ ಶಂಕೆ ವ್ಯಕ್ತವಾಗಿದೆ. ದಂಪತಿಗೆ ಓರ್ವ ಮಗಳಿದ್ದು, ಬೆಂಗಳೂರಿನಲ್ಲಿ ವಾಸವಾಗಿದ್ದಾರೆ. ಅಕ್ಕಪಕ್ಕದವರು ಭಾನುವಾರ ಬೆಳಗ್ಗೆ ಶವ ಕಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿ …
Read More »ಎಂಪಿ ಎಲೆಕ್ಷನ್ವರೆಗೂ ಕಾದು ನೋಡೋಣ.. ವಿಪಕ್ಷದವರ ಟೀಕೆಗೆ ಮಹತ್ವ ಕೊಡಬೇಕಿಲ್ಲ: ಸತೀಶ್ ಜಾರಕಿಹೊಳಿ
ಬೆಳಗಾವಿ: ಈ ಬಜೆಟ್ ಪ್ರಣಾಳಿಕೆ ಬಜೆಟ್ ಎಂದು ಬಿಜೆಪಿ ನಾಯಕರ ಟೀಕೆಗೆ ತಿರುಗೇಟು ನೀಡಿರುವ ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ, ಅವರದ್ದು ಹಿಂದಿನ ಬಜೆಟ್ ಹಾಗೇ ಆಗಿದ್ದರೆ, ನಮ್ಮದು ಹಾಗೇ ಅಂದುಕೊಳ್ಳಲಿ ಎಂದಿದ್ದಾರೆ. ಬೆಳಗಾವಿಯ ಕಾಂಗ್ರೆಸ್ ಭವನದಲ್ಲಿ ಇಂದು ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಬಜೆಟ್ ಬಗ್ಗೆ ವಿಕ್ಷಪದವರಿಂದ ಟೀಕೆ ಸ್ವಾಭಾವಿಕ. ಆದರೆ, ಬಜೆಟ್ ಬಗ್ಗೆ ಜನ ಸಾಮಾನ್ಯರಿಂದ ಮೆಚ್ಚುಗೆ ವ್ಯಕ್ತವಾಗಿದೆ ಎಂದರು. ರಾಜಕೀಯ ಮಾಡುವುದಕ್ಕಾಗಿ ವಿಪಕ್ಷದವರು …
Read More »ಜುಲೈ ಅಂತ್ಯದೊಳಗೆ ಮಳೆಯಾಗುವ ಮುನ್ಸೂಚನೆ: ಕೃಷ್ಣ ಬೈರೇಗೌಡ
ಕಾರವಾರ: ರಾಜ್ಯದಲ್ಲಿ ಮುಂಗಾರು ಪ್ರವೇಶವಾಗಿದೆ. ಜುಲೈ ಅಂತ್ಯದೊಳಗೆ ಬಹುತೇಕ ಕಡೆ ಮಳೆಯಾಗುವ ಮುನ್ಸೂಚನೆ ಇರುವುದರಿಂದ ಸದ್ಯಕ್ಕೆ ಮೋಡ ಬಿತ್ತನೆ ಮಾಡುವ ಚಿಂತನೆ ಸರ್ಕಾರದ ಮುಂದೆ ಇಲ್ಲ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಉತ್ತರಕನ್ನಡದ ಕುಮಟಾದಲ್ಲಿ ನೆರೆಪೀಡಿತ ಪ್ರದೇಶಗಳ ಪರಿಶೀಲನೆ ಹಾಗೂ ಬೆಟ್ಕುಳಿ ಗ್ರಾಮದಲ್ಲಿ ನೆರೆಗೆ ಮೃತಪಟ್ಟ ಕುಟುಂಬದವರನ್ನು ಭೇಟಿ ಮಾಡಿ ಸಾಂತ್ವನ ಹೇಳಿ ಮಾತನಾಡಿದ ಅವರು, ಕಾರವಾರ, ಬೆಳಗಾವಿ ಭಾಗದಲ್ಲಿ ಮಳೆಯಾಗಿದೆ. ಆದರೆ ಕೆಲ ಜಿಲ್ಲೆಗಳಲ್ಲಿ ಇನ್ನೂ ಮಳೆಯಾಗಿಲ್ಲ. …
Read More »ಆನ್ಲೈನ್ ಬೆಟ್ಟಿಂಗ್ ಗೀಳು: ಅಣ್ಣನ ಮನೆಗೆ ಕನ್ನ ಹಾಕಿದ ತಮ್ಮನ ಬಂಧನ
ಬೆಂಗಳೂರು: ಆನ್ ಲೈನ್ ಬೆಟ್ಟಿಂಗ್ ವ್ಯಾಮೋಹಕ್ಕೆ ಬಿದ್ದು ಅಣ್ಣನ ಮನೆಯಲ್ಲಿ ಚಿನ್ನಾಭರಣ ಕಳ್ಳತನ ಮಾಡಿದ್ದ ತಮ್ಮನನ್ನ ಸಿದ್ದಾಪುರ ಪೊಲೀಸರು ಬಂಧಿಸಿದ್ದಾರೆ. ಮನೆಯಲ್ಲಿ ಚಿನ್ನಾಭರಣ ಕಳ್ಳತನವಾಗಿರುವ ಬಗ್ಗೆ ಮೀಜಾನ್ ಎಂಬುವರು ಜುಲೈ 4ರಂದು ನೀಡಿದ ದೂರು ಆಧರಿಸಿ ತನಿಖೆ ನಡೆಸಿದ ಪೊಲೀಸರಿಗೆ ತಮ್ಮನೇ ಕೃತ್ಯ ಎಸಗಿರುವುದು ಬೆಳಕಿಗೆ ಬಂದಿದ್ದು, ಈ ಸಂಬಂಧ ಮೊಹಮ್ಮದ್ ಪರ್ವೀನ್ (22) ಎಂಬುವನನ್ನ ಬಂಧಿಸಿ ಜೈಲಿಗಟ್ಟಿದ್ದಾರೆ. ಸೋಮೇಶ್ವರ ನಗರದಲ್ಲಿ ದೂರುದಾರ ಮಿಜಾನ್ ವಾಸವಾಗಿದ್ದ. ಈತನೊಂದಿಗೆ ತಾಯಿ – ತಮ್ಮ …
Read More »ಇಂದಿರಾ ಕ್ಯಾಂಟೀನ್ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಡಿ.ಕೆ.ಶಿ.
ಬೆಂಗಳೂರು : ಡಿಸಿಎಂ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವರಾದ ಡಿ.ಕೆ. ಶಿವಕುಮಾರ್ ಅವರು ಇಂದು (ಭಾನುವಾರ) ಬೆಳಗ್ಗೆ ನಗರ ಪ್ರದಕ್ಷಣೆ ಹಮ್ಮಿಕೊಂಡು ಮೊದಲಿಗೆ ಇಂದಿರಾ ಗಾಂಧಿ ಕ್ಯಾಂಟೀನ್ ಪರಿಸ್ಥಿತಿ ಪರಿಶೀಲಿಸಿದರು. ಈ ಸಂದರ್ಭದಲ್ಲಿ ಪಾಲಿಕೆಯ ಯಾವುದೇ ಅಧಿಕಾರಿಗಳು ಹಾಗು ಸಿಬ್ಬಂದಿಗೆ ಮುನ್ಸೂಚನೆ ನೀಡಿರಲಿಲ್ಲ. ಮೊದಲು ದಾಸರಹಳ್ಳಿ ವಲಯದ ವಾರ್ಡ್ ಸಂಖ್ಯೆ 39ರ ಚೊಕ್ಕಸಂದ್ರದ ಇಂದಿರಾ ಗಾಂಧಿ ಕ್ಯಾಂಟೀನ್ಗೆ ಬೆಳಗ್ಗೆ 9:10ಕ್ಕೆ ಭೇಟಿ ನೀಡಿ, ತಿಂಡಿ ಕೇಳಿದರು. ಆದರೆ ಅದಾಗಲೇ ಅಲ್ಲಿ ತಿಂಡಿ …
Read More »ಜೈನ ಸಂಪ್ರದಾಯದಂತೆ ನೆರವೇರಿದ ಕಾಮಕುಮಾರ ನಂದಿ ಮಹಾರಾಜ ಅವರ ಅಂತ್ಯಕ್ರಿಯೆ
ಚಿಕ್ಕೋಡಿ(ಬೆಳಗಾವಿ): ಕಳೆದ 15 ವರ್ಷಗಳಿಂದ ‘ಅಹಿಂಸೆ ಪರಮೋಧರ್ಮ’ ಎಂದು ಶಾಂತಿ ಮಂತ್ರ ಸಾರುತ್ತ ಧರ್ಮ ಪ್ರಚಾರ ಮಾಡಿದ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಹಿರೇಕೋಡಿ ಜೈನ ಆಶ್ರಮದ ಕಾಮಕುಮಾರ ನಂದಿ ಮಹಾರಾಜ (51) ಅವರು ಕಳೆದ ಎರೆಡು ದಿನಗಳ ಹಿಂದೆ ಭೀಕರವಾಗಿ ಹತ್ಯೆಗೀಡಾಗಿದ್ದರು. ನಂದಿ ಪರ್ವತ ಆಶ್ರಮದಲ್ಲಿ ಜೈನ ಸಂಪ್ರದಾಯದಂತೆ ಅವರ ಅಂತ್ಯಕ್ರಿಯೆಯನ್ನು ಇಂದು ಶಾಸ್ತ್ರೋಕ್ತವಾಗಿ ನೆರವೇರಿಸಲಾಯಿತು. ಜೈನ ಮಠಗಳ ಮಹಾಸ್ವಾಮಿಗಳಾದ ನಾಂದಣಿ ಮಠದ ಜಿನಸೇನ ಭಟ್ಟಾರಕ ಪಟ್ಟಾಚಾರ್ಯ ಮಹಾಸ್ವಾಮಿ ಹಾಗೂ …
Read More »ರಾಜ್ಯದ ಅಮರನಾಥ ಯಾತ್ರಿಕರು ಸುರಕ್ಷಿತವಾಗಿದ್ದಾರೆ: H.K. ಪಾಟೀಲ್
ಗದಗ: ಹವಾಮಾನ ವೈಪರೀತ್ಯ ಕಾರಣ ಅಮರನಾಥ ಯಾತ್ರೆಗೆ ತೆರಳಿದ್ದ 300 ಜನ ಕನ್ನಡಿಗರು ಸಿಲುಕಿಕೊಂಡಿದ್ದಾರೆ. ನಿನ್ನೆ ರಾತ್ರಿ ಹವಾಮಾನ ವೈಪರೀತ್ಯ ಹಾಗೂ ಅತಿಯಾದ ಚಳಿಯಿಂದಾಗಿ ಸಮಸ್ಯೆಯಾಗಿತ್ತು. ಅಮರನಾಥ ದೇವಸ್ಥಾನದ ಆಡಳಿತ ಮಂಡಳಿ, ಮಿಲಿಟರಿ ಅಧಿಕಾರಿಗಳು ಎಲ್ಲರಿಗೂ ಅಗತ್ಯ ನೆರವನ್ನು ನೀಡಿದ್ದು, ಅವರನ್ನು ನಾನು ಅಭಿನಂದಿಸುತ್ತೇನೆ ಎಂದು ಪ್ರವಾಸೋದ್ಯಮ ಸಚಿವ ಹೆಚ್ ಕೆ ಪಾಟೀಲ್ ಹೇಳಿದರು. ಈ ಬಗ್ಗೆ ನಗರದಲ್ಲಿಂದು ಮಾಧ್ಯಮಗೋಷ್ಟಿ ನಡೆಸಿ ಮಾತನಾಡಿದ ಅವರು, ಹವಾಮಾನ ವೈಪರೀತ್ಯ ಹಾಗೂ ಗುಡ್ಡ ಕುಸಿತದಿಂದಾಗಿ …
Read More »
Laxmi News 24×7