Breaking News

ರಾಜಕೀಯ

ಸಿದ್ದು ಲೆಕ್ಕ: ಪಂಚ ಗ್ಯಾರಂಟಿ ಯೋಜನೆ ವ್ಯಾಪ್ತಿಗೆ ಬರುವ ಇಲಾಖೆಗಳಿಗೆ ಅನುದಾನ ಹೆಚ್ಚಿಸಲಾಗಿದ್ದು, ಇತರ ಕೆಲ ಇಲಾಖೆಗಳಿಗೆ ಅನುದಾನ ಕಡಿತ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು 3,27,747 ಕೋಟಿ ರೂ.‌ಗಾತ್ರದ ಪೂರ್ಣ ಪ್ರಮಾಣದ ಬಜೆಟ್ ಮಂಡನೆ ಮಾಡಿದ್ದಾರೆ.‌ ಗ್ಯಾರಂಟಿಗಳಿಗೆ ಹಣ ಹೊಂದಿಸುವ ಗ್ಯಾರಂಟಿ ಬಜೆಟ್ ಇದಾಗಿದೆ. ಸಿಎಂ ಸಿದ್ದರಾಮಯ್ಯ ಪಂಚ ಗ್ಯಾರಂಟಿಗಳ ವ್ಯಾಪ್ತಿಗೆ ಬರುವ ಇಲಾಖೆಗಳಿಗೆ ಹೆಚ್ಚು ಅನುದಾನ ನೀಡಿದ್ದು, ಇನ್ನು ಕೆಲ ಇಲಾಖೆಗಳಿಗೆ ಅನುದಾನ ಕಡಿತ ಮಾಡಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರು ಶುಕ್ರವಾರ ತಮ್ಮ 14ನೇ ಬಜೆಟ್ ಮಂಡನೆ ಮಾಡಿದ್ದಾರೆ. ಗ್ಯಾರಂಟಿ ಸವಾಲಿನೊಂದಿಗೆ ಆದಾಯ ಕೊರತೆಯ ಬಜೆಟ್ ಮಂಡಿಸಿದ್ದಾರೆ.‌ ಪಂಚ …

Read More »

ಇದ್ದಕ್ಕಿದ್ದಂತೆ ಬಸದಿಯಿಂದ ಜೈನ ಮುನಿ‌ಯೊಬ್ಬರು ರಾತ್ರೋರಾತ್ರಿ ನಾಪತ್ತೆ

ಗಡಿ ಜಿಲ್ಲೆಯ ಜೈನ ಮುನಿ‌ಯೊಬ್ಬರು ರಾತ್ರೋರಾತ್ರಿ ನಾಪತ್ತೆಯಾಗಿದ್ದಾರೆ. ಇದ್ದಕ್ಕಿದ್ದಂತೆ ಬಸದಿಯಿಂದ ಆಚಾರ್ಯ ಶ್ರೀ 108 ಕಾಮಕುಮಾರ ನಂದಿ ಮಹಾರಾಜರು ಕಾಣೆ ಆಗಿರೋದು ಭಕ್ತರಲ್ಲಿ ಆತಂಕ ಸೃಷ್ಟಿಸಿದೆ. ಮಹಾರಾಜರನ್ನ ಹುಡುಕಿಕೊಡುವಂತೆ ಭಕ್ತರು ಈಗ ಬೆಳಗಾವಿ ಜಿಲ್ಲಾ ಪೊಲೀಸರ ಮೊರೆ ಹೋಗಿದ್ದಾರೆ.15 ವರ್ಷದಿಂದ ಬಸದಿಯಲ್ಲಿದ್ದ ಸಂತನ ಮಿಸ್ಸಿಂಗ್ ಕೇಸ್ ಬೆಳಗಾವಿ ಜಿಲ್ಲೆ ಜನರನ್ನ ಬೆಚ್ಚಿಬೀಳಿಸಿದೆ.   .ಹದಿಹರೆಯದ ಯುವಕ, ಯುವತಿಯರು ಮಿಸ್ಸಿಂಗ್ ಕೇಸ್ ಇತ್ತಿಚೆಗೆ ಸಾಮಾನ್ಯವಾಗಿದೆ. ಆದರೆ ಈಗ ಇಡೀ ಸಮಾಜವೇ ಆತಂಕ …

Read More »

ಸರ್ಕಾರದ ವಿರುದ್ಧ ಮಳೆ ನಡುವೆಯೇ ರಾಜ್ಯ ಕಾಂಗ್ರೆಸ್ ನಾಯಕರು ಪ್ರತಿಭಟನೆ

ಬೆಂಗಳೂರು: ಎಐಸಿಸಿ ವರಿಷ್ಠ ರಾಹುಲ್ ಗಾಂಧಿ ಅವರ ಸಂಸತ್ ಸದಸ್ಯತ್ವ ರದ್ದುಗೊಳಿಸಿರುವ ಹಿಂದಿನ ಬಿಜೆಪಿ ಪಿತೂರಿ ಖಂಡಿಸಿ ರಾಜ್ಯ ಕಾಂಗ್ರೆಸ್ ನಾಯಕರು ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಶುಕ್ರವಾರ ಪ್ರತಿಭಟನೆ ನಡೆಸಿದರು.   ಕಾಂಗ್ರೆಸ್ ಪಕ್ಷದ ಸಚಿವರು, ಶಾಸಕರು, ಮುಖಂಡರು ಗಾಂಧಿ ಪ್ರತಿಮೆ ಮುಂಭಾಗ ಜಮಾವಣೆಗೊಂಡು ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಸಹ ಭಾಗಿಯಾಗಿದ್ದರು. ಸಚಿವ ಪ್ರಿಯಾಂಕಾ ಖರ್ಗೆ, ದಿನೇಶ್ ಗುಂಡೂರಾವ್, …

Read More »

ಪಿಂಚಣಿ ಉಪದಾನ ಪತ್ರಕ್ಕೆ 20 ಲಕ್ಷ ಲಂಚ ಕೇಳಿದ ಶಾಲಾ ಸಂಚಾಲಕಿ ಲೋಕಾಯುಕ್ತ ಬಲೆಗೆ

ಮಂಗಳೂರು: ವಯೋ ನಿವೃತ್ತಿ ಹೊಂದಲಿರುವ ಮುಖ್ಯ ಶಿಕ್ಷಕಿಗೆ ನಿವೃತ್ತಿ ಪಿಂಚಣಿ ಉಪದಾನ ಪತ್ರಗಳಿಗೆ ಸಹಿ ಹಾಕಲು 20 ಲಕ್ಷ ರೂಪಾಯಿ ಲಂಚದ ಬೇಡಿಕೆ ಇಟ್ಟಿದ್ದ ಅನುದಾನಿತ ಶಾಲೆಯ ಸಂಚಾಲಕಿ ಐದು ಲಕ್ಷ ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ.   ಮಂಗಳೂರು ತಾಲೂಕಿನ ಬಜ್ಪೆ ಸುಂಕದಕಟ್ಟೆಯಲ್ಲಿರುವ ಶ್ರೀ ನಿರಂಜನ ಸ್ವಾಮಿ ಶಿಕ್ಷಣ ಪ್ರತಿಷ್ಠಾನಕ್ಕೆ ಸೇರಿದ ಶ್ರೀ ನಿರಂಜನ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶೋಭಾರಾಣಿ ಎಂಬುವರು ಶಿಕ್ಷಕಿ …

Read More »

ಮಾಜಿ ಸಿಎಂ ಉದ್ಧವ್​ ಠಾಕ್ರೆ ಬಣದ ಶಿವಸೇನೆಗೆ ಮತ್ತೊಂದು ಆಘಾತ

ಮುಂಬೈ: ಮಾಜಿ ಸಿಎಂ ಉದ್ಧವ್​ ಠಾಕ್ರೆ ಬಣದ ಶಿವಸೇನೆಗೆ ಮತ್ತೊಂದು ಆಘಾತ ಉಂಟಾಗಿದೆ. ಉದ್ಧವ್​ ಆಪ್ತ ಬಣದಲ್ಲಿದ್ದ ವಿಧಾನಪರಿಷತ್​ ಉಪಸಭಾಪತಿ, ಎಂಎಲ್​ಸಿ ನೀಲಂ ಗೊರ್ಹೆ ಅವರು ಸಿಎಂ ಏಕನಾಥ್​ ಶಿಂಧೆ ಅವರ ಬಣಕ್ಕೆ ಜಿಗಿಯಲಿದ್ದಾರೆ ಎಂದು ಹೇಳಲಾಗಿದೆ. ಕಳೆದ ತಿಂಗಳಷ್ಟೇ ಶಾಸಕಿ ಮನೀಶಾ ಕಾಯಂದೆ ಅವರು ಬಣ ತೊರೆದ ಬಳಿಕ ಇದು ಮತ್ತೊಬ್ಬ ನಾಯಕಿಯ ನಿರ್ಗಮನವಾಗುತ್ತಿರುವುದು ಠಾಕ್ರೆ ಬಣಕ್ಕೆ ತೀವ್ರ ಹಿನ್ನಡೆ ಉಂಟು ಮಾಡಿದೆ. ಶಿವಸೇನೆಯ ಸಿಎಂ ಏಕನಾಥ್​ ಶಿಂಧೆ ನೇತೃತ್ವದಲ್ಲಿ …

Read More »

ರಾಜ್ಯದ ಸಮಗ್ರ ಅಭಿವೃದ್ಧಿ ಕಲ್ಪನೆ ಇಲ್ಲದೇ, ತೆರಿಗೆ ಹೊರೆ ಇರುವ ಬಜೆಟ್:B.S.Y.

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿರುವ ಪ್ರಸ್ತುತ ಸಾಲಿನ ಬಜೆಟ್, ರಾಜ್ಯದ ಸಮಗ್ರ ಅಭಿವೃದ್ಧಿ ಕಲ್ಪನೆ ಇಲ್ಲದೇ, ತೆರಿಗೆ ಹೊರೆ ಇರುವ ಬಜೆಟ್ ಆಗಿದೆ. 85000 ಕೋಟಿ ಸಾಲ ಮಾಡುತ್ತೇನೆ ಎಂದು ಹೇಳಿದ್ದು, ಈ ಸಾಲದ ಹೊರೆ ರಾಜ್ಯದ ಜನತೆಯ ಮೇಲೆ ಬೀಳುತ್ತದೆ ಎಂದು ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಟೀಕಿಸಿದ್ದಾರೆ.     ಬಜೆಟ್ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ ಅವರು, ಬಜೆಟ್ ಮಂಡಿಸಿದ ಮುಖ್ಯಮಂತ್ರಿಗಳು ತಮ್ಮ ಮೂರು …

Read More »

ರಾಜ್ಯದ ಬಜೆಟ್ ಬಿಯರ್ ದರ ಹೆಚ್ಚಳ, ಮದ್ಯವೂ ದುಬಾರಿ

ಬೆಂಗಳೂರು, ಜುಲೈ 7: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 14ನೇ ಬಾರಿ ರಾಜ್ಯದ ಬಜೆಟ್ ಮಂಡಿಸುತ್ತಿದ್ದಾರೆ. 2023-2024ರಲ್ಲಿ 3,24,478 ಕೋಟಿ ರೂಪಾಯಿ ಗಾತ್ರದ ಬಜೆಟ್ ಮಾಡಿದ್ದಾರೆ. ಗ್ಯಾರಂಟಿ ಯೋಜನೆಗಳಿಗೆ ಬೇಕಾದ ಸಂಪನ್ಮೂಲವನ್ನು ಕ್ರೂಢೀಕರಿಸಲು ಅಬಕಾರಿ ಸುಂಕವನ್ನು ಶೇಕಡಾ 20ರಷ್ಟು ಹೆಚ್ಚಿಸಿದ್ದು, ಮದ್ಯಪ್ರಿಯರಿಗೆ ಶಾಕ್ ಕೊಟ್ಟಿದ್ದಾರೆ.   ಭಾರತೀಯ ನಿರ್ಮಿತ ವಿದೇಶಿ ಮದ್ಯದ (ಐಎಂಎಫ್‌ಎಲ್) ಮೇಲಿನ ಹೆಚ್ಚುವರಿ ಅಬಕಾರಿ ಸುಂಕವನ್ನು (ಎಇಡಿ) ಶೇ 20 ರಷ್ಟು ಹೆಚ್ಚಿಸಲಾಗಿದೆ. ಬಿಯರ್‌ಗೆ, ಅಬಕಾರಿ ಸುಂಕವನ್ನು ಶೇಕಡಾ …

Read More »

ಗೃಹ ಲಕ್ಷ್ಮಿ ಯೋಜನೆ :ಮೂರು ದಿನಗಳಲ್ಲಿ ಮಾಧ್ಯಮಗೊಷ್ಠಿ ನಡೆಸಿ ಮಾಹಿತಿ ಕೊಡುತ್ತೇನೆ ಹೆಬ್ಬಾಳ್ಕರ್

ಬೆಂಗಳೂರು: ಗೃಹ ಲಕ್ಷ್ಮಿ ಯೋಜನೆ ಬಹಳ ಮುಂದೆ ಬಂದಿದೆ. ಮೂರು ದಿನಗಳಲ್ಲಿ ಮಾಧ್ಯಮಗೊಷ್ಠಿ ನಡೆಸಿ ಮಾಹಿತಿ ಕೊಡುತ್ತೇನೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ಗೃಹ ಲಕ್ಷ್ಮಿ ಯೋಜನೆಗೆ ಪಡಿತರ ಕಾರ್ಡ್ ಕಡ್ಡಾಯ. ಯೋಜನೆಗೆ ಅರ್ಜಿ ಹಾಕಿದ ಬಳಿಕ ಸ್ವೀಕೃತಿ ಆದಾಗ ವಾಯ್ಸ್ ಮೆಸೇಜ್ ಬರುತ್ತದೆ. ಪ್ರತಿ ತಿಂಗಳು ಹಣ ಜಮೆ ಆದಾಗಲಾ ಮೆಸೇಜ್ ಬರುತ್ತದೆ ಎಂದರು. ಉಡುಪಿ ಜಿಲ್ಲೆಯಲ್ಲಿ ಮಳೆಯಿಂದಾದ ಹಾನಿ ವಿಚಾರವಾಗಿ ಪ್ರತಿಕ್ರಿಯಿಸಿ, ಉಡುಪಿ …

Read More »

ಬಾಲಕಿಯರ ವಾಶ್ ರೂಂನಲ್ಲಿ ಸಿಸಿಟಿವಿ ಕ್ಯಾಮರಾ ಅಳವಡಿಸಲಾಗಿದೆ ಎಂದು ಕೆಲವು ಪೋಷಕರು ಗಂಭೀರ ಆರೋಪ ಮಾಡಿದ್ದು, ಶಾಲೆಯ ಪ್ರಾಂಶುಪಾಲರ ಮೇಲೆ ಹಲ್ಲೆ

ಮಹಾರಾಷ್ಟ್ರ: ಪುಣೆ ಜಿಲ್ಲೆಯ ಖಾಸಗಿ ಶಾಲೆಯೊಂದರ ಬಾಲಕಿಯರ ವಾಶ್ ರೂಂನಲ್ಲಿ ಸಿಸಿಟಿವಿ ಕ್ಯಾಮರಾ ಅಳವಡಿಸಲಾಗಿದೆ ಎಂದು ಕೆಲವು ಪೋಷಕರು ಗಂಭೀರ ಆರೋಪ ಮಾಡಿದ್ದು, ಶಾಲೆಯ ಪ್ರಾಂಶುಪಾಲರ ಮೇಲೆ ಹಲ್ಲೆ ನಡೆಸಿದ್ದಾರೆ. ಮಂಗಳವಾರ ಮಧ್ಯಾಹ್ನ ನಡೆದ ಈ ಘಟನೆಯ ವಿಡಿಯೋ ಗುರುವಾರ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ವಿಡಿಯೋದಲ್ಲಿ ತಲೇಗಾಂವ್ ದಭಾಡೆ ಪ್ರದೇಶದ ಶಾಲಾ ಆವರಣದಲ್ಲಿ ಬಲಪಂಥೀಯ ಗುಂಪೊಂದು ಪ್ರಾಂಶುಪಾಲರನ್ನು ಹಿಂಬಾಲಿಸುತ್ತಿರುವ ದೃಶ್ಯವಿದೆ. ಘಟನೆ ಕುರಿತು ಶಿಕ್ಷಣ ಇಲಾಖೆ ತನಿಖೆ ನಡೆಸುತ್ತಿದೆ. …

Read More »

ಗುಂಡು ಹಾರಿಸಿಕೊಂಡು ಡಿಐಜಿ ವಿಜಯಕುಮಾರ್ ಆತ್ಮಹತ್ಯೆ

ಕೊಯಮತ್ತೂರು : ಕೊಯಮತ್ತೂರು ಕಾರ್ಗೋ ವಿಭಾಗದ ಡಿಐಜಿಯಾಗಿ ಕಾರ್ಯನಿರ್ವಹಿಸುತ್ತಿದ್ದ ವಿಜಯಕುಮಾರ್ (45) ಅವರು ಬಂಟ ರಸ್ತೆಯ ಪಾಂಥಯ ಸಲೈನಲ್ಲಿರುವ ತಮ್ಮ ಕ್ಯಾಂಪ್ ಕಚೇರಿಯಲ್ಲಿ ಶುಕ್ರವಾರ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. 2009ರ ಐಪಿಎಸ್ ಬ್ಯಾಚ್‌ನವರಾಗಿದ್ದ ಇವರು, 2022 ಜನವರಿ 6ರಂದು ಚೆನ್ನೈನ ಅಣ್ಣಾನಗರ ಡೆಪ್ಯುಟಿ ಕಮಿಷನರ್‌ನಿಂದ ಕೊಯಮತ್ತೂರು ಡಿಐಜಿಯಾಗಿ ಬಡ್ತಿ ಪಡೆದಿದ್ದರು. ಕಾಂಚೀಪುರಂ, ಕಡಲೂರು, ನಾಗಪಟ್ಟಿಣಂ ಮತ್ತು ತಿರುವರೂರ್​ನಲ್ಲಿ ಡಿಎಸ್​ಪಿಯಾಗಿ ಕೆಲಸ ಮಾಡಿದ್ದಾರೆ. ನಿನ್ನೆ ರಾತ್ರಿ ಜಿಲ್ಲಾಧಿಕಾರಿ ಸಂದೀಶ್ ಅವರ ಮಗುವಿನ …

Read More »