Breaking News

ರಾಜಕೀಯ

ಪ್ರತಿ ತಿಂಗಳು ಕಂದಾಯ ಪ್ರಗತಿ ಪರಿಶೀಲನೆ, ಜನಪರ ಯೋಜನೆಗಳಿಗೆ ಆದ್ಯತೆ: ಸಚಿವ ಕೃಷ್ಣ ಭೈರೇಗೌಡ

ಬೆಳಗಾವಿ: ಸರಕಾರದ ಆಡಳಿತ ವ್ಯವಸ್ಥೆಯಲ್ಲಿ ಸಕಾರಾತ್ಮಕ ಬದಲಾವಣೆ ತರುವುದರ ಜತೆಗೆ ಉತ್ತಮ ಆಡಳಿತ ನೀಡುವುದಕ್ಕೆ ನಮ್ಮ ಆದ್ಯತೆ. ಈ ನಿಟ್ಟಿನಲ್ಲಿ ಅಧಿಕಾರಿಗಳು ದಕ್ಷತೆ ಹಾಗೂ ಚುರುಕಾಗಿ ಕೆಲಸ ಮಾಡಬೇಕು ಎಂದು ಕಂದಾಯ ಇಲಾಖೆ ಸಚಿವ ಕೃಷ್ಣ ಭೈರೇಗೌಡ ಸೂಚನೆ ನೀಡಿದರು. ಸುವರ್ಣ ವಿಧಾನಸೌಧದಲ್ಲಿ ಇಂದು ನಡೆದ ಬೆಳಗಾವಿ ವಿಭಾಗದ ವ್ಯಾಪ್ತಿಯ ಜಿಲ್ಲಾಧಿಕಾರಿಗಳು ಹಾಗೂ ಇತರೆ ಇಲಾಖೆಯ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸರಕಾರದ ಕಾರ್ಯಕ್ರಮಗಳ ಅನುಷ್ಠಾನದಲ್ಲಿ ಕಂದಾಯ ಇಲಾಖೆಯ …

Read More »

ಚಲಿಸುತ್ತಿದ್ದ ಬಸ್​ನಲ್ಲಿ ಕಾಣಿಸಿಕೊಂಡ ಬೆಂಕಿ.. 25 ಜನ ಸಜೀವ ದಹನ

ಮಹಾರಾಷ್ಟ್ರ: ಬುಲ್ಧಾನದಲ್ಲಿ ಪ್ರಯಾಣಿಕರ ಬಸ್‌ನ ಭೀಕರ ಅಪಘಾತ (Horrible Road Accident) ಸಂಭವಿಸಿದೆ. ಅಪಘಾತದಲ್ಲಿ 25 ಪ್ರಯಾಣಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬಸ್ಸಿನಲ್ಲಿ ಒಟ್ಟು 33 ಮಂದಿ ಪ್ರಯಾಣಿಕರಿದ್ದರು. ಈ ಪೈಕಿ ಎಂಟು ಪ್ರಯಾಣಿಕರು ಸುರಕ್ಷಿತವಾಗಿ ಹೊರಬಂದಿದ್ದಾರೆ. ಬುಲ್ಧಾನ ಜಿಲ್ಲೆಯ ಸಿಂಧಖೇದರಾಜ ಬಳಿಯ ಪಿಂಪಲಖುಟಾ ಗ್ರಾಮದ ಬಳಿ ಸಮೃದ್ಧಿ ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದೆ. ಈ ಪ್ರಯಾಣಿಕರ ಬಸ್ ನಾಗ್ಪುರದಿಂದ ಪುಣೆಗೆ ಹೋಗುತ್ತಿತ್ತು. ಶನಿವಾರ ನಸುಕಿನ ಜಾವ 2 ಗಂಟೆಗೆ ಈ ಭೀಕರ …

Read More »

ಅಸಭ್ಯವಾಗಿ ವರ್ತಿಸಿದ ಮೂವರು ಮಂಗಳಮುಖಿಯರನ್ನು ವೈಯಾಲಿಕಾವಲ್ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು : ರಾಜಧಾನಿಯಲ್ಲಿ ಮಂಗಳಮುಖಿಯರ ಆಟಾಟೋಪ ಹೆಚ್ಚಾಗುತ್ತಿದೆ. ಕನಸಿನ ಮ‌ನೆ ಕಟ್ಟಿ ಗೃಹ ಪ್ರವೇಶ ಮಾಡುವಾಗಲೇ ಪ್ರವೇಶಿಸಿದ್ದ ಮೂವರು ಮಂಗಳಮುಖಿಯರು ಹೆಚ್ಚು ಹಣ ನೀಡುವಂತೆ‌ ಪೀಡಿಸಿ ಅಸಭ್ಯವಾಗಿ ವರ್ತಿಸಿರುವ ಪ್ರಕರಣ ಸಂಬಂಧ ಮೂವರನ್ನು ವೈಯಾಲಿಕಾವಲ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕನಸಿನ ಮ‌ನೆ ಕಟ್ಟಿ ಗೃಹ ಪ್ರವೇಶ ಮಾಡುವಾಗಲೇ ಪ್ರವೇಶಿಸಿದ್ದ ಮೂವರು ಮಂಗಳಮುಖಿಯರು ಹೆಚ್ಚು ಹಣ ನೀಡುವಂತೆ‌ ಪೀಡಿಸಿ ಅಸಭ್ಯವಾಗಿ ವರ್ತಿಸಿರುವ ಪ್ರಕರಣ ಸಂಬಂಧ ಮೂವರನ್ನು ವೈಯಾಲಿಕಾವಲ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕೃತಿಕಾ, …

Read More »

ಚುನಾವಣೆಯ ಫಲಿತಾಂಶ ಬಂದು 47 ದಿನಗಳಾದರೂ ವಿರೋಧ‌ ಪಕ್ಷದ ನಾಯಕ ನೇಮಕ ಮಾಡಲು ಬಿಜೆಪಿಯವರಿಗೆ ಆಗಿಲ್ಲ: ಕೃಷ್ಣ ಭೈರೇಗೌಡ

ಬೆಳಗಾವಿ: ವಿಧಾನಸಭೆ ಚುನಾವಣೆಯ ಫಲಿತಾಂಶ ಬಂದು 47 ದಿನಗಳಾದರೂ ವಿರೋಧ‌ ಪಕ್ಷದ ನಾಯಕನನ್ನು ನೇಮಕ ಮಾಡಲು ಬಿಜೆಪಿಯವರಿಗೆ ಆಗಿಲ್ಲ ಎಂದರೆ, ಇದಕ್ಕಿಂತ ರಾಜಕೀಯ ನಾಯಕತ್ವದ ವೈಫಲ್ಯ ಇನ್ಯಾವುದಾದರೂ ಕರ್ನಾಟಕದಲ್ಲಿ ಇದೆಯೇ? ಎಂದು ಕಂದಾಯ ಇಲಾಖೆ ಸಚಿವ ಕೃಷ್ಣ ಭೈರೇಗೌಡ ಟೀಕಿಸಿದರು. ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಇಂದು ಕಂದಾಯ ಇಲಾಖೆ ಸಭೆ ನಡೆಸಿದ ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಬಿಜೆಪಿ ನಾಯಕರು ಬೀದಿಗಿಳಿದು, ಒಬ್ಬರಿಗೊಬ್ಬರು ಕೆಸರೆರಚಾಟ ಮಾಡಿಕೊಳ್ಳುತ್ತಿದ್ದಾರೆ. ಅವರು ಆಡುತ್ತಿರುವ ಮಾತುಗಳನ್ನು …

Read More »

SSLC ಪೂರಕ ಪರೀಕ್ಷಾ ಫಲಿತಾಂಶ ಪ್ರಕಟ: ಬಾಲಕಿಯರದ್ದೇ ಮೇಲುಗೈ

ಬೆಂಗಳೂರು : ಜೂನ್ ತಿಂಗಳಿನಲ್ಲಿ ನಡೆದಿದ್ದ ಎಸ್‌ಎಸ್‌ಎಲ್​ಸಿ ಪೂರಕ ಪರೀಕ್ಷೆಯ ಫಲಿತಾಂಶವನ್ನು ಇಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಿಸಿದ್ದು, ಬಾಲಕಿಯರು ಮೇಲುಗೈ ಸಾಧಿಸಿದ್ದಾರೆ. ಇಲಾಖೆಯ ಅಧಿಕೃತ ವೆಬ್​ಸೈಟ್ ಮೂಲಕ ತಾತ್ಕಾಲಿಕ ಅಂಕಪಟ್ಟಿ ಮುದ್ರಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. 1,11,781 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. 46,270 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಶೇ. 41.39ರಷ್ಟು ಫಲಿತಾಂಶ ಬಂದಿದೆ. ಮಂಡಳಿಯ ಅಧಿಕೃತ ವೆಬ್​ಸೈಟ್​ನಲ್ಲಿ ಫಲಿತಾಂಶ ವೀಕ್ಷಿಸಬಹುದು. ಎಸ್‌ಎಂಎಸ್ ಮೂಲಕವೂ ವಿದ್ಯಾರ್ಥಿಗಳಿಗೆ ಫಲಿತಾಂಶ ಕಳುಹಿಸಿಕೊಡಲಾಗುತ್ತದೆ …

Read More »

ಕರ್ನಾಟಕದ ನೀರಾವರಿ ಯೋಜನೆಗಳಿಗೆ ತ್ವರಿತ ಮಂಜೂರಾತಿ ನೀಡಲು ಕೇಂದ್ರಕ್ಕೆ ಮನವಿ: ಡಿಸಿಎಂ ಡಿಕೆಶಿ

ನವದೆಹಲಿ/ಬೆಂಗಳೂರು: ಕರ್ನಾಟಕದ ನೀರಾವರಿ ಯೋಜನೆಗಳಿಗೆ ತ್ವರಿತ ಮಂಜೂರಾತಿಗಳನ್ನು ನೀಡುವಂತೆ ಕೇಂದ್ರ ಸಚಿವರಲ್ಲಿ ಮನವಿ ಮಾಡಲಾಗಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕೇಂದ್ರ ಸಚಿವರ ಭೇಟಿ ಬಳಿಕ ದೆಹಲಿಯಲ್ಲಿ ಸುದ್ದಿಗೋಷ್ಟಿ ಉದ್ದೇಶಿಸಿ ಮಾತನಾಡಿದ ಅವರು, ದಕ್ಷಿಣ ಪೆನ್ನಾರ್ ಜಲಾನಯನ ನೀರು ಶುದ್ಧೀಕರಣ ಯೋಜನೆ ಮತ್ತು ಕರ್ನಾಟಕದ ವಿರುದ್ಧ ತಮಿಳುನಾಡು ರಾಜ್ಯ ಎತ್ತಿರುವ ಜಲ ವಿವಾದಕ್ಕೆ ಸಂಬಂಧಿಸಿದ ಮಹತ್ವದ ವಿಷಯವನ್ನು ಪ್ರಸ್ತಾಪಿಸಲಾಗಿದೆ ಎಂದರು. ತಮಿಳುನಾಡು ಮಾಡಿರುವ ಆರೋಪಗಳ ಬಗ್ಗೆ ಚರ್ಚಿಸಿ ನ್ಯಾಯಾಧಿಕರಣ …

Read More »

ಹೊಸಪೇಟೆ ಸಮೀಪ ಭೀಕರ ರಸ್ತೆ ಅಪಘಾತ: 7 ಜನ ಸ್ಥಳದಲ್ಲೇ ಸಾವು

ವಿಜಯನಗರ: ಎರಡು ಆಟೋ ಮತ್ತು ಲಾರಿ ನಡುವೆ ಅಪಘಾತ ಸಂಭವಿಸಿ ಏಳು ಜನರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹೊಸಪೇಟೆ ತಾಲೂಕಿನ ವಡ್ಡರಹಳ್ಳಿ ರೈಲ್ವೆ ಬ್ರಿಡ್ಜ್ ಬಳಿ ಇಂದು ನಡೆದಿದೆ. ಮೃತರಲ್ಲಿ ಖಾಸಿಂ, ಯಾಸ್ಮಿನ್, ಉಮೇಶ್, ಜಹೀರಾ, ಮತ್ತು ಶ್ಯಾಮ, ಸೇರಿದಂತೆ ಒಟ್ಟು ಐವರ ಹೆಸರು ಗುರುತಿಸಲಾಗಿದ್ದು, ಇನ್ನಿಬ್ಬರ ಹೆಸರು ಪತ್ತೆಯಾಗಿಲ್ಲ. ವಿಷಯ ತಿಳಿಯುತ್ತಿದ್ದಂತೆ ಹೊಸಪೇಟೆ ಗ್ರಾಮೀಣ ಠಾಣೆ ಪೊಲೀಸರು ಸೇರಿದಂತೆ ಸ್ಥಳೀಯರು ಕಂದಕದಲ್ಲಿ ಬಿದ್ದ ಎರಡು ಆಟೋಗಳನ್ನು ಮೇಲೆತ್ತಿ ಗಾಯಾಳುಗಳನ್ನು ಹೊಸಪೇಟೆ …

Read More »

ಬೆಂಗಳೂರು- ಮೈಸೂರು ಹೆದ್ದಾರಿ ಪರಿಶೀಲಿಸಿದ ಎಡಿಜಿಪಿ ಅಲೋಕ್ ಕುಮಾರ್

ಮಂಡ್ಯ: ಬೆಂಗಳೂರು- ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತಗಳನ್ನು ನಿಯಂತ್ರಿಸಲು ಕೈಗೊಂಡಿರುವ ಕ್ರಮಗಳ ಕುರಿತು ಮಂಡ್ಯ ಜಿಲ್ಲೆಯಲ್ಲಿ ಶುಕ್ರವಾರ ಎಡಿಜಿಪಿ ಅಲೋಕ್‌ ಕುಮಾರ್‌ ಪರಿಶೀಲನೆ ನಡೆಸಿದರು. ದಶಪಥ ರಸ್ತೆಯಲ್ಲಿ ಇತ್ತೀಚಿನ ದಿನಗಳಲ್ಲಿ ಅಪಘಾತ ಪ್ರಕರಣಗಳು ಹೆಚ್ಚಾಗಿವೆ. ಕಳೆದ ವಾರ ರಾಮನಗರ ವ್ಯಾಪ್ತಿಯಲ್ಲಿ ಅಲೋಕ್ ಕುಮಾರ್ ಪರಿಶೀಲನೆ ನಡೆಸಿದ್ದರು. ಇದೀಗ ಮಂಡ್ಯ ಜಿಲ್ಲೆ ಮದ್ದೂರು ತಾಲ್ಲೂಕಿನ ಗಡಿಭಾಗ ನಿಡಘಟ್ಟದಿಂದ ಮೈಸೂರು ಗಡಿಯವರೆಗೆ ಪರಿಶೀಲನೆ ನಡೆಸಿದ್ದಾರೆ. ಮಂಡ್ಯ ಎಸ್ಪಿ ಎನ್.ಯತೀಶ್ ಜೊತೆಗಿದ್ದರು. ಹೆದ್ದಾರಿಯಲ್ಲಿ ಕಂಡುಬರುತ್ತಿರುವ ಸಮಸ್ಯೆಗಳು …

Read More »

ರಾಜ್ಯ ಸರ್ಕಾರ ಹಿಂದೂ ವಿರೋಧಿ ನಡೆ ಕೈಬಿಡದಿದ್ದರೆ ಉಪವಾಸ ಸತ್ಯಾಗ್ರಹ: ಸ್ವಾಮೀಜಿಗಳ ಧರ್ಮಸಭೆಯಲ್ಲಿ ನಿರ್ಧಾರ

ಮಂಗಳೂರು: ರಾಜ್ಯ ಸರ್ಕಾರ ಹಿಂದೂ ವಿರೋಧಿ ನಡೆ ಕೈಬಿಡದಿದ್ದರೆ ಸಂತರಿಂದ ಉಪವಾಸ ಸತ್ಯಾಗ್ರಹ ಕೈಗೊಳ್ಳಲು ಮಂಗಳೂರಿನಲ್ಲಿ ನಡೆದ ಸ್ವಾಮೀಜಿಗಳ ಧರ್ಮಸಭೆಯಲ್ಲಿ ‌ನಿರ್ಧರಿಸಲಾಗಿದೆ. ಬಾಳಂಭಟ್ ಸಭಾಂಗಣದಲ್ಲಿ ನಡೆದ ಧರ್ಮಸಭೆಯಲ್ಲಿ ಕರಾವಳಿಯ ಸಂತ ಸಮೂಹದಿಂದ ಈ ಬಗ್ಗೆ ನಿರ್ಣಯ ಅಂಗೀಕರಿಸಲಾಗಿದೆ. ಗೋಹತ್ಯೆ ನಿಷೇಧ ಕಾಯ್ದೆ ಹಾಗೂ ಮತಾಂತರ ಕಾಯ್ದೆ ವಾಪಸ್​ ನಿರ್ಧಾರ ಕೈಬಿಡುವಂತೆ ಸ್ವಾಮೀಜಿಗಳು ಆಗ್ರಹಿಸಿದ್ದಾರೆ. ಗುರುಪುರ ವಜ್ರದೇಹಿ ಮಠದ ರಾಜಶೇಖರಾನಂದ ಸ್ವಾಮೀಜಿ, ಒಡಿಯೂರು ಮಠದ ಗುರುದೇವಾನಂದ ಸ್ವಾಮೀಜಿ, ಮಾಣಿಲ ಮಠದ ಮೋಹನದಾಸ ಸ್ವಾಮೀಜಿ, …

Read More »

ಅಲ್ಪಸಂಖ್ಯಾತರಿಗೆ ರೂಪಿಸಿದ್ದ ಕಾರ್ಯಕ್ರಮಗಳು ಪುನರಾರಂಭ: ಸಿಎಂ ಸಿದ್ದರಾಮಯ್ಯ ಭರವಸೆ

ಬೆಂಗಳೂರು: ಈ ಹಿಂದೆ ನಮ್ಮ ಸರ್ಕಾರದ ಅವಧಿಯಲ್ಲಿ ಅಲ್ಪಸಂಖ್ಯಾತರಿಗೆ ರೂಪಿಸಿದ್ದ ಕಾರ್ಯಕ್ರಮಗಳನ್ನು ಪುನರಾರಂಭ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು. ಇಂದು ಕರ್ನಾಟಕ ರಾಜ್ಯದ ಅಲ್ಪಸಂಖ್ಯಾತರ ಮುಸ್ಲಿಂ ಚಿಂತಕರ ಚಾವಡಿಯ ಕೇಂದ್ರ ಮಂಡಳಿಯ ನಿಯೋಗದ ಭೇಟಿ ವೇಳೆ ಮಾತನಾಡಿದ ಅವರು, ಸರ್ಕಾರ ಘೋಷಿಸಿದ್ದಂತೆ ಐದು ಗ್ಯಾರಂಟಿಗಳನ್ನು ಈಗಲೇ ಅನುಷ್ಠಾನಕ್ಕೆ ತರುತ್ತಿದ್ದು, ಮುಂದಿನ ವರ್ಷದಿಂದ ಅಲ್ಪಸಂಖ್ಯಾತರಿಗೆ ಹೆಚ್ಚಿನ ಅನುದಾನ ನಿಗದಿಪಡಿಸಲಾಗುವುದು ಎಂದು ಸಿಎಂ ತಿಳಿಸಿದರು. ಚಾವಡಿಯು ಒಂದು ದಶಕದಿಂದ ಕರ್ನಾಟಕದ ಜನಪರ …

Read More »