Breaking News

ರಾಜಕೀಯ

ವ್ಯಕ್ತಿಯ ಕತ್ತು ಸೀಳಿ ರಕ್ತ ಕುಡಿದು ಬೀಭತ್ಸ ಕೃತ್ಯ!

ಚಿಕ್ಕಬಳ್ಳಾಪುರ: ವ್ಯಕ್ತಿಯೊಬ್ಬನ ಕತ್ತು ಕೊಯ್ದು ರಕ್ತ ಕುಡಿದಿರುವ ಬೀಭತ್ಸಕಾರಿ ಘಟನೆ ನಾಲ್ಕು ದಿನಗಳ ಹಿಂದೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ವ್ಯಕ್ತಿಯೊಬ್ಬನ ಕತ್ತಿನ ರಕ್ತ ಕುಡಿಯುವುದು ವಿಡಿಯೋದಲ್ಲಿ ಸೆರೆಯಾಗಿದೆ. ಈ ವಿಡಿಯೋ ವೈರಲ್ ಆದ ಬಳಿಕ ಘಟನೆ ಬೆಳಕಿಗೆ ಬಂದಿದೆ. ಚಿಂತಾಮಣಿ ತಾಲೂಕಿನ ಬಟ್ಲಹಳ್ಳಿ ನಿವಾಸಿ ವಿಜಯ್ ಎಂಬಾತ ಚೇಳೂರು ತಾಲೂಕಿನ ಮಾಡೇಂಪಲ್ಲಿ ನಿವಾಸಿ ಮಾರೇಶ್ ಮೇಲೆ ಹಲ್ಲೆ ಮಾಡಿ, ರಕ್ತ ಕುಡಿದಿದ್ದಾನೆ. ತೀವ್ರವಾಗಿ ಗಾಯಗೊಂಡಿರುವ …

Read More »

ರಸ್ತೆ ಅಪಘಾತದಲ್ಲಿ ಕಾಲು ಕಳೆದುಕೊಂಡ ಪಾರ್ವತಮ್ಮ ರಾಜ್​​ಕುಮಾರ್ ತಮ್ಮನ ಮಗ

ಚಾಮರಾಜನಗರ: ಕನ್ನಡ ಚಿತ್ರರಂಗದ ವರನಟ, ದಿ. ಡಾ.ರಾಜ್​​ಕುಮಾರ್ ಅವರ ಪತ್ನಿ ದಿ. ಪಾರ್ವತಮ್ಮ ರಾಜ್​ಕುಮಾರ್ ಅವರ ಸಹೋದರ ಎಸ್.ಎ. ಶ್ರೀನಿವಾಸ್ ಅವರ ಪುತ್ರ ಸೂರಜ್​ ಕುಮಾರ್ (ಧೀರಜ್​​​) ಅವರು ಅಪಘಾತಕ್ಕೀಡಾಗಿ ಕಾಲು ಕಳೆದುಕೊಂಡಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ‌ ಚಿಕ್ಕಹುಂಡಿ ಗೇಟ್ ಬಳಿ ನಡೆದಿದೆ. ಇವರು ಕೆಲವು ಸಿನಿಮಾಗಳಲ್ಲಿ ಅಸಿಸ್ಟೆಂಟ್​ ಡೈರೆಕ್ಟರ್ ಆಗಿ ಕೆಲಸ ಮಾಡಿದ್ದಾರೆ. ಬೈಕ್​ಗೆ ಟಿಪ್ಪರ್ ಡಿಕ್ಕಿ, ಬಲಗಾಲು ಕಟ್​: ಊಟಿಗೆ ಸೋಲೋ‌ (ಏಕಾಂಗಿ) ಟ್ರಿಪ್ ತೆರಳಿದ್ದ ಸೂರಜ್​​ ಕುಮಾರ್ …

Read More »

ಫ್ಲೈಓವರ್ ಮೇಲೆ ಬೈಕ್​ನಲ್ಲಿ ಹೋಗುತ್ತಿದ್ದ ಅತ್ತೆಗೆ ಚಾಕು ಇರಿದು ಕೊಂದು ಪರಾರಿಯಾದ ಅಳಿಯ!

ವಿಜಯವಾಡ (ಆಂಧ್ರಪ್ರದೇಶ): ಅತ್ತೆಯನ್ನೇ ಅಳಿಯನೋರ್ವ ಬರ್ಬರವಾಗಿ ಕೊಲೆ ಮಾಡಿದ್ದಾನೆ. ಈ ಘಟನೆ ವಿಜಯವಾಡದ ಚಿಟ್ಟಿನಗರ ಸಮೀಪ ಇರುವ ಹಾಲಿನ ಕಾರ್ಖಾನೆ ಪಕ್ಕದ ಚನುಮೋಳು ವೆಂಕಟರಾವ್ ಮೇಲ್ಸೇತುವೆ ಮೇಲೆ ಶನಿವಾರ ರಾತ್ರಿ ನಡೆದಿದೆ. ರಾತ್ರಿ 9 ಗಂಟೆ ಸುಮಾರಿಗೆ ರಾಜೇಶ್ (37) ಎಂಬಾತ ನಾಗಮಣಿ (48) ಎಂಬವರನ್ನು ಹತ್ಯೆಗೈದಿದ್ದಾನೆ. ಆರೋಪಿಯ ಪತ್ನಿಯು ವಿಚ್ಛೇದನ ಕೋರಿ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಿದ್ದರಿಂದ ಕೋಪಗೊಂಡು ಕೃತ್ಯ ಎಸಗಿದ್ದಾನೆ ಎಂದು ವಿಜಯವಾಡ ಪಶ್ಚಿಮ ಎಸಿಪಿ ಹನುಮಂತ ರಾವ್ ತಿಳಿಸಿದರು. …

Read More »

ಹೈದರಾಬಾದ್ ಮೂಲದ ಯುವತಿಯ ಹತ್ಯೆ ಪ್ರಕರಣ: ಆರೋಪಿ ಪ್ರಿಯಕರನ ಪತ್ತೆಗಾಗಿ ಲುಕ್ ಔಟ್ ನೋಟಿಸ್​

ಬೆಂಗಳೂರು: ಪ್ರಿಯತಮೆಯನ್ನು ಕೊಂದು ನಾಪತ್ತೆಯಾಗಿರುವ ಆರೋಪಿಯ ಪತ್ತೆಗಾಗಿ ಬೆಂಗಳೂರು ಎಲ್‌ಓಸಿ (ಲುಕ್ ಔಟ್ ಸರ್ಕ್ಯೂಲರ್) ಹೊರಡಿಸಿದ್ದಾರೆ. ಹೈದರಾಬಾದ್ ಮೂಲದ ಆಕಾಂಕ್ಷಾ(23) ಎಂಬಾಕೆಯನ್ನ ಉಸಿರುಗಟ್ಟಿಸಿ ಕೊಂದು ಪರಾರಿಯಾಗಿರುವ ಆಕೆಯ ಪ್ರಿಯಕರ ದೆಹಲಿ‌ ಮೂಲದ ಅರ್ಪಿತ್ ಕರಿತು ಇನ್ನೂ ಸಹ ಸುಳಿವಿಲ್ಲ. ಆದ್ದರಿಂದ ತನಿಖೆಯ ಗತಿಯನ್ನ ಮತ್ತಷ್ಟು ಚುರುಕುಗೊಳಿಸಿರುವ ಜೀವನ್ ಭೀಮಾ ನಗರ ಠಾಣಾ ಪೊಲೀಸರು ಆರೋಪಿ ದೇಶ ಬಿಟ್ಟು ತೆರಳದಂತೆ ಲುಕ್ ಔಟ್ ಸರ್ಕ್ಯೂಲರ್ ಹೊರಡಿಸಿದ್ದಾರೆ ಎಂಬುದು‌ ಪೊಲೀಸ್ ಮೂಲಗಳಿಂದ ತಿಳಿದು ಬಂದಿದೆ. …

Read More »

ತುಂಗೆಯಿಂದ ಭದ್ರೆಗೆ 15 ಟಿಎಂಸಿ ನೀರು ತರುವ ಯೋಜನೆ 1 ವರ್ಷದೊಳಗೆ ಪೂರ್ಣ: ಸಚಿವ ಡಿ ಸುಧಾಕರ್

ಶಿವಮೊಗ್ಗ: ತುಂಗೆಯಿಂದ ಭದ್ರೆಗೆ 15 TMC ನೀರನ್ನು ತೆಗೆದುಕೊಂಡು ಹೋಗುವ ಯೋಜನೆ ಮುಂದಿನ ಒಂದು ವರ್ಷದೊಳಗೆ ಪೂರ್ಣವಾಗುವುದು ಎಂದು ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಡಿ ಸುಧಾಕರ್ ತಿಳಿಸಿದ್ದಾರೆ. ಶಿವಮೊಗ್ಗ ಜಿಲ್ಲೆ ಮುತ್ತಿನಕೊಪ್ಪ ಗ್ರಾಮದ ಬಳಿಯ ಕಾಮಗಾರಿ ವೀಕ್ಷಿಸಿ, ಭದ್ರಾವತಿಯ ಬಿ ಆರ್ ಪ್ರಾಜೆಕ್ಟ್ ಯ ಮುಖ್ಯ ಇಂಜಿನಿಯರ್ ಅವರ ಕಚೇರಿಯಲ್ಲಿ ಶನಿವಾರ ಮಾತನಾಡಿದ ಅವರು, ಭದ್ರಾ ಮೆಲ್ದಂಡೆ ಯೋಜನೆಯ ಭಾಗವಾಗಿ ಚಿತ್ರದುರ್ಗ, ದಾವಣಗೆರೆ ಹಾಗೂ ತುಮಕೂರು ಜಿಲ್ಲೆಗಳಿಗೆ ಕುಡಿಯುವ ನೀರು …

Read More »

ಕಾಂಗ್ರೆಸ್ ಸರ್ಕಾರದಲ್ಲಿರುವ ಅಧಿಕಾರಿಗಳೇ ದಲ್ಲಾಳಿಗಳು: ಮುನಿರತ್ನ

ಬೆಂಗಳೂರು: ”ಈ ಸರ್ಕಾರದಲ್ಲಿ ಅಧಿಕಾರಿಗಳೇ ದಲ್ಲಾಳಿಗಳು ಆಗಿದ್ದಾರೆ. ಸರ್ಕಾರ ಸೇವೆಗೆ ಬಂದವರು ದಲ್ಲಾಳಿ ಸೇವೆ ಮಾಡ್ತಿದ್ದಾರೆ” ಎಂದು ಮಾಜಿ ಸಚಿವ ಮುನಿರತ್ನ ವಾಗ್ದಾಳಿ ನಡೆಸಿದ್ದಾರೆ. ಅರಮನೆ ಮೈದಾನದಲ್ಲಿ ಬಿಜೆಪಿ ಕಾರ್ಯಕರ್ತರ ಸಮಾವೇಶ ಉದ್ದೇಶಿಸಿ ಮಾತನಾಡಿದ ಅವರು, ”ಕಾಂಗ್ರೆಸ್ ನವರಿಗೆ ತುಂಬಾ ಪ್ರೀತಿ ಇರೋದು ನನ್ನ ಮೇಲೆ ಹಾಗೂ ಅಶ್ವಥ್ ನಾರಾಯಣ್ ಮೇಲೆ. ಆದರೆ ಬಿಜೆಪಿ ಏನು‌ ನಿದ್ದೆ ಮಾಡ್ತಿಲ್ಲ. ಬಹಳ ಎಚ್ಚರಿಕೆಯಿಂದ ಕೆಲಸ ಮಾಡಬೇಕು. ನಾವು ಕೂಡ ಹೋರಾಟ ಮಾಡೋಕೆ ಸಿದ್ದರಿದ್ದೇವೆ. …

Read More »

ಅಕ್ಕಿ ಪೂರೈಕೆಗೆ ಟೆಂಡರ್ ಮಾಡಿ ಕ್ರಮ ಕೈಗೊಳ್ಳುವಂತೆ ಮೂರು ಸಂಸ್ಥೆಗಳಿಗೆ ಮನವಿ- ಸಚಿವ ಮುನಿಯಪ್ಪ

ಬೆಂಗಳೂರು: ಅಕ್ಕಿ ಪೂರೈಸಲು ಟೆಂಡರ್ ಮಾಡಿ ಕ್ರಮ ಕೈಗೊಳ್ಳುವಂತೆ ಎನ್‌ಸಿಸಿಎಫ್ ಸೇರಿದಂತೆ ಮೂರು ಸಂಸ್ಥೆಗಳಿಗೆ ಮನವಿ ಮಾಡಿದ್ದೇವೆ. ಒಂದು ವಾರದೊಳಗೆ ಗಿರಣಿಗಳ ಮಾಲೀಕರು ಮತ್ತು ವ್ಯಾಪಾರಿಗಳೊಂದಿಗೆ ಚರ್ಚಿಸಿ ಅಂತಿಮ ತೀರ್ಮಾನವಾಗಲಿದೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಹೆಚ್. ಮುನಿಯಪ್ಪ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಶನಿವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಅಕ್ಕಿ ಪೂರೈಕೆ ಕುರಿತು ಎನ್‌ಸಿಸಿಎಫ್, ನಾಫೆಡ್ ಮತ್ತು ಕೇಂದ್ರೀಯ ಭಂಡಾರ ಕೊಟ್ಟಿರುವ ದರ ಪಟ್ಟಿ ಕುರಿತು ಸಭೆ ನಡೆಯಿತು. …

Read More »

ಜಯದೇವ ಹೃದ್ರೋಗ ಸಂಸ್ಥೆಯಿಂದ 52 ಲಕ್ಷ ರೋಗಿಗಳಿಗೆ ಚಿಕಿತ್ಸೆ ನೀಡಿ ದಾಖಲೆ: ಡಾ.ಸಿ.ಎನ್.ಮಂಜುನಾಥ್‌

ಬೆಂಗಳೂರು: ಜಯದೇವ ಹೃದ್ರೋಗ ಸಂಸ್ಥೆಯಿಂದ 52 ಲಕ್ಷ ಹೃದಯ ರೋಗಿಗಳಿಗೆ ಚಿಕಿತ್ಸೆ ನೀಡಿ ದಾಖಲೆ ನಿರ್ಮಿಸಲಾಗಿದೆ ಎಂದು ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ನಿರ್ದೇಶಕ ಡಾ. ಸಿ.ಎನ್.ಮಂಜುನಾಥ್‌ ತಿಳಿಸಿದರು. ಜಯನಗರದ ಚಂದ್ರಗುಪ್ತ ಮೌರ್ಯ ಆಟದ ಮೈದಾನದಲ್ಲಿ ಶನಿವಾರ ರಕ್ಷಾ ಫೌಂಡೇಷನ್​ನಿಂದ 11ನೇ ವರ್ಷದ ಸಮಾಜ ಸೇವಾ ಕಾರ್ಯಕ್ರಮದಲ್ಲಿ 10 ಸಾವಿರ ಮಕ್ಕಳಿಗೆ 1.5 ಲಕ್ಷ ಉಚಿತ ನೋಟ್ ಪುಸ್ತಕಗಳು, ಕಲಿತಾ ಪರಿಕರಗಳ ವಿತರಣೆ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮ …

Read More »

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇಯಲ್ಲಿ ಬೈಕ್ ಡಿಕ್ಕಿ: ಸ್ಥಳದಲ್ಲೇ ಇಬ್ಬರ ಯುವಕರು ಸಾವು

ಮಂಡ್ಯ: ಅಪರಿಚಿತ ವಾಹನಕ್ಕೆ ಬೈಕ್ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಯುವಕರು ಸಾವನ್ನಪ್ಪಿರುವ ಘಟನೆ ಮದ್ದೂರು ಪಟ್ಟಣದ ಬೆಂಗಳೂರು-ಮೈಸೂರು ಹೆದ್ದಾರಿಯ ಫ್ಲೈ ಓವರ್ ಬಳಿ ಇಂದು ನಡೆದಿದೆ. ಮಣಿ (25) ಹಾಗೂ ಜನಾರ್ಧನ ಪೂಜಾರಿ (21) ಮೃತರೆಂದು ಗುರುತಿಸಲಾಗಿದೆ. ಮುಂಜಾನೆ ಬೆಂಗಳೂರಿನಿಂದ ಮೈಸೂರಿಗೆ ತೆರಳುವ ವೇಳೆ ದುರ್ಘಟನೆ ನಡೆದಿದೆ ಎಂದು ತಿಳಿದು ಬಂದಿದೆ. ಮಣಿ ಕೋಲಾರ ಜಿಲ್ಲೆಯವರಾಗಿದ್ದು, ಮತ್ತೊಬ್ಬ ಯುವಕ ಜನಾರ್ಧನ್ ಪೂಜಾರಿ ಕೊಪ್ಪಳ ಜಿಲ್ಲೆಯ ಲಿಂಗದಮಂಡಿ ಗ್ರಾಮದ ನಿವಾಸಿ. ಬೆಂಗಳೂರಿನ ಖಾಸಗಿ …

Read More »

ಅಕ್ಕಿ, ಮನೆ, ಸಿಲಿಂಡರ್ ಕೊಡಿ ಸಾಕು ಎಂದ ನಾರಿಯರು..

ಗಂಗಾವತಿ (ಕೊಪ್ಪಳ) : `ಬಸ್ಸಿನಲ್ಲಿ ಹೆಣ್ಮಕ್ಕಳು ಫ್ರಿಯಾಗಿ ಓಡಾಡಾಕ ಶುರುವಾದಾಗಿನಿಂದ ಒಂದೂ ಬಸ್ ಖಾಲಿ ಇರವಲ್ವು. ಮನಿ ಬಿಟ್ಟು ಬಂದು ಗುಡಿಗೆ ಹೋಗಣಾಂದ್ರ ಹೈರಾಣ ಆಗಿವಿ. ಈ ಫ್ರೀ ಬಸ್ ಬಿಟ್ಟು ಸರ್ಕಾರದೋರು ಜನರಿಗೆ ಬೇಕಾದ ಅಕ್ಕಿ, ಸಿಲಿಂಡರ್, ಮನೆ ಕೊಡ್ಲಿ’.. ಹೀಗೆಂದು ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಮಹಿಳೆಯರ ಉಚಿತ ಸಾರಿಗೆ ಪ್ರಯಾಣಕ್ಕೆ ಅವಕಾಶ ಇರುವ ಶಕ್ತಿ ಯೋಜನೆಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಶನಿವಾರ ಆಗಿದ್ದರಿಂದ ಗಂಗಾವತಿ ತಾಲ್ಲೂಕಿನ ಹಲವು …

Read More »