Breaking News

ರಾಜಕೀಯ

ಮದುವೆಯಾದ ಕಾಮಿಡಿ ಕಿಲಾಡಿಗಳು ಖ್ಯಾತಿಯ ನಟ ಸಂಜು ಬಸಯ್ಯ

ಬೆಂಗಳೂರು: ಜೀ ಕನ್ನಡ ವಾಹಿನಿಯ ‘ಕಾಮಿಡಿ ಕಿಲಾಡಿಗಳು’ ಖ್ಯಾತಿಯ ನಟ ಸಂಜು ಬಸಯ್ಯ ಅವರು ಪಲ್ಲವಿ ಬಳ್ಳಾರಿ ಎನ್ನುವರನ್ನು ವಿವಾಹವಾಗಿದ್ದಾರೆ. ಈ ಕುರಿತು ಇತ್ತೀಚೆಗೆ ಅವರು ತಮ್ಮ ಇನ್‌ಸ್ಟಾಗ್ರಾಂ (sanjubasayyafficial ) ಖಾತೆಯಲ್ಲಿ ಬರೆದುಕೊಂಡಿದ್ದಾರೆ. ರಿಜಿಸ್ಟರ್ ಮ್ಯಾರೇಜ್ ಆಗಿರುವುದಾಗಿ ಸಂಜು ಬಸಯ್ಯ ತಿಳಿಸಿದ್ದಾರೆ. ಪಲ್ಲವಿ ಅವರು ಕೆಲ ಯುಟ್ಯೂಬ್ ವಿಡಿಯೊಗಳಲ್ಲಿ ಕಾಣಿಸಿಕೊಂಡಿದ್ದಾರೆ. ‘ಇಲ್ಲಿಯವರೆಗಿನ ನನ್ನ ಹಾಗೂ ಪಲ್ಲವಿ ಬಳ್ಳಾರಿಯವರ ನಡುವಿನ ಸಂಬಂಧಗಳ ಊಹಾಪೋಹಗಳಿಗೆ ನಾವು ತೆರೆ ಎಳೆದಿದ್ದೇವೆ. ಮೊದಲಿಗೆ ನಮ್ಮಿಬ್ಬರ ಪರಿಚಯವಾಗಿತ್ತು,ಆ …

Read More »

ಶಕ್ತಿ ಯೋಜನೆ’ಯ `ಲೋಗೋ’ ಬಿಡುಗಡೆ ಮಾಡಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ ಅವಕಾಶ ನೀಡುವ `ಶಕ್ತಿ ಯೋಜನೆ’ಗೆ ಸಿಎಂ ಸಿದ್ದರಾಮಯ್ಯ ಅವರು ವಿಧಾನಸೌಧದಲ್ಲಿ ಅಧಿಕೃತವಾಗಿ ಚಾಲನೆ ನೀಡಿದ್ದಾರೆ. ಇಂದು ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಮಹಿಳೆಯರ ಉಚಿತ ಬಸ್ ಸೇವೆಗೆ ಅವಕಾಶ ನೀಡುವ ಶಕ್ತಿ ಯೋಜನೆಗೆ ಚಾಲನೆ ನೀಡಿದ್ದು, ಇಂದು ಮಧ್ಯಾಹ್ನ 1 ಗಂಟೆಯಿಂದ ರಾಜ್ಯಾದ್ಯಂತ ಮಹಿಳೆಯರು ಉಚಿತವಾಗಿ ಬಸ್ ಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದಾಗಿದೆ.   ಶಕ್ತಿ ಯೋಜನೆ ಉದ್ಘಾಟನಾ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ, …

Read More »

ಎಣ್ಣೆ ಪ್ರಿಯರಿಗೆ ಸರ್ಕಾರದ ಶಾಕ್​… ಶೇ. 20ರಷ್ಟು ಮದ್ಯದ ಬೆಲೆ ದಿಢೀರ್​ ಏರಿಕೆ

ಬೆಂಗಳೂರು: ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರ ಉಚಿತ ಐದು ಗ್ಯಾರಂಟಿ ಯೋಜನೆಗಳನ್ನು ನೀಡುತ್ತಿರುವುದು ಒಂದೆಡೆ ಜನರಿಗೆ ಸಂತಸ ತಂದಿದೆ. ಆದರೆ, ಇನ್ನೊಂದೆಡೆ ಉಚಿತ ನೆಪದಲ್ಲಿ ವಿದ್ಯುತ್ ಬೆಲೆ ಏರಿಕೆಯಾಗಿದೆ. ಜೊತೆಗೆ ಮದ್ಯ ಪ್ರಿಯರಿಗೂ ಶಾಕ್ ನೀಡಲಾಗಿದೆ. ಆದಾಯ ಸಂಗ್ರಹಿಸಲು ಸರ್ಕಾರ ಶೇ. 20 ರಷ್ಟು ಮದ್ಯದ ಬೆಲೆ ಏರಿಕೆ ಮಾಡಿದೆ. ನಿನ್ನೆಯಿಂದಲೇ ಬಿಯರ್ ಬೆಲೆ ಹೆಚ್ಚಳವಾಗಿದೆ. ಕಾಂಗ್ರೆಸ್ ಐದು ಗ್ಯಾರಂಟಿ ಯೋಜನೆಗಳನ್ನು ಒಂದೊಂದೆ ಜಾರಿಗೊಳಿಸುತ್ತಿದೆ. ನಾಳೆ ಮಹಿಳೆಯರಿಗೆ ಉಚಿತ ಬಸ್ …

Read More »

ಉತ್ತರ ಕರ್ನಾಟಕ ಭಾಗದಲ್ಲಿ ಪ್ರವಾಸೋದ್ಯಮಕ್ಕೆ ವಿಶೇಷ ಒತ್ತು ನೀಡಲಾಗುವುದು : H.K.ಪಾಟೀಲ್

ಹುಬ್ಬಳ್ಳಿ : ಉತ್ತರ ಕರ್ನಾಟಕ ಭಾಗದಲ್ಲಿ ಪ್ರವಾಸೋದ್ಯಮದ ಬೆಳವಣಿಗೆಗೆ ವಿಶೇಷ ಒತ್ತು ನೀಡಲಾಗುವುದು ಎಂದು ಪ್ರವಾಸೋದ್ಯಮ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್‌.ಕೆ. ಪಾಟೀಲ ಹೇಳಿದ್ದಾರೆ. ನಗರದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪ್ರವಾಸೋದ್ಯಮ ಇಲಾಖೆ ಪ್ರಮುಖ ಇಲಾಖೆಗಳಲ್ಲಿ ಒಂದು. ಅದರಲ್ಲೂ ಉತ್ತರ ಕರ್ನಾಟಕಕ್ಕೆ ವಿಶೇಷ ಒತ್ತು ನೀಡುವ ಅಗತ್ಯ ಇದೆ. ಈ ಭಾಗದಲ್ಲಿರುವ ಪ್ರಸಿದ್ಧ ಪ್ರವಾಸಿ ತಾಣಗಳ ಬೆಳವಣಿಗೆಗೆ ನಿರೀಕ್ಷೆ ಮಟ್ಟದಲ್ಲಿ ಆದ್ಯತೆ ಸಿಕ್ಕಿಲ್ಲ. ಅದಕ್ಕೆ ಹಲವು ಕಾರಣಗಳಿವೆ. …

Read More »

ಹಾವೇರಿ ಗೋಲಿಬಾರ್​ಗೆ 16 ವರ್ಷ.

ಹಾವೇರಿ: ಇಂದಿಗೆ ಹಾವೇರಿಯಲ್ಲಿ ಗೋಲಿಬಾರ್ ನಡೆದು 16 ವರ್ಷ ಕಳೆದಿವೆ. ಈ ಹಿನ್ನೆಲೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಆಶ್ರಯದಲ್ಲಿ ನಗರದಲ್ಲಿ ನಡೆದ ರೈತ ಹುತಾತ್ಮ ದಿನಾಚರಣೆಯಲ್ಲಿ ರೈತರು ಭಾಗವಹಿಸುವ ಮೂಲಕ ಬಸ್ ನಿಲ್ದಾಣದ ಬಳಿ ಇರುವ ಹುತಾತ್ಮ ರೈತ ಸ್ಮಾರಕಕ್ಕೆ ನಮನ ಸಲ್ಲಿಸಿದರು. ಈ ವೇಳೆ ವಿವಿಧ ರೈತ ಮುಖಂಡರು ಸ್ಮಾರಕಕ್ಕೆ ಮಾಲಾರ್ಪಣೆ ಮಾಡಿ ಗೌರವಾರ್ಪಣೆ ಸಲ್ಲಿಸಿದರು. 10 ಜೂನ್ 2008 ರ ಗೋಲಿಬಾರ್‌ನಲ್ಲಿ ಹುತಾತ್ಮರಾಗಿದ್ದ …

Read More »

ಕುಡಿದು ಶಾಲೆಗೆ ಬಂದ ಸರ್ಕಾರಿ ಶಿಕ್ಷಕ

ಬೆಳಗಾವಿ : ಕುಡಿದ ಅಮಲಿನಲ್ಲಿ ಶಿಕ್ಷಕನೊಬ್ಬ ಶಾಲೆಯಲ್ಲಿಯೇ ನಿದ್ದೆಗೆ ಜಾರಿ ಕರ್ತವ್ಯಲೋಪ ಎಸಗಿರುವ ಘಟನೆ ಬೆಳಗಾವಿ ಜಿಲ್ಲೆಯ ಸರ್ಕಾರಿ ಶಾಲೆಯೊಂದರಲ್ಲಿ ನಡೆದಿದೆ. ಕನ್ನಡ ಶಿಕ್ಷಕ ರವಿ ಪಾಟೀಲ ಕುಡಿದು ಶಾಲೆಗೆ ಬಂದು ಕರ್ತವ್ಯ ಲೋಪ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ. ನಗರದ ಮಹಾದ್ವಾರ ರಸ್ತೆಯಲ್ಲಿರುವ ಸರ್ಕಾರಿ ಮರಾಠಿ ಮಾಧ್ಯಮ ಪ್ರಾಥಮಿಕ ಶಾಲೆಯ ಕನ್ನಡ ಶಿಕ್ಷಕ ರವಿ ಪಾಟೀಲ ಇಂದು ಮದ್ಯ ಸೇವಿಸಿ ಶಾಲೆಗೆ ಬಂದು ಇಲ್ಲೇ ಮಲಗಿದ್ದಾರೆ ವಿದ್ಯಾರ್ಥಿಗಳು ಹಾಗೂ ಪೋಷಕರು ಆರೋಪಿಸಿದ್ದಾರೆ. …

Read More »

ಉಚಿತ ಬಸ್ ಪ್ರಯಾಣದ ಶಕ್ತಿ ಯೋಜನೆಗೆ ಇಂದು ಚಾಲನೆ

ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಬಹುನಿರೀಕ್ಷಿತ ಐದು ಗ್ಯಾರಂಟಿಗಳಲ್ಲೊಂದಾದ ಉಚಿತ ಬಸ್ ಪ್ರಯಾಣದ ಶಕ್ತಿ ಯೋಜನೆಗೆ ಇಂದು ಚಾಲನೆ ಸಿಗಲಿದೆ.‌ ವಿಧಾನಸೌಧದ ಮುಂಭಾಗ ಭಾನುವಾರ ಬೆಳಗ್ಗೆ 12 ಗಂಟೆಗೆ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅದ್ಧೂರಿಯಾಗಿ ಚಾಲನೆ ನೀಡಲಿದ್ದಾರೆ. ಕಾಂಗ್ರೆಸ್ ಸರ್ಕಾರದ ಬಹು ನಿರೀಕ್ಷಿತ ಶಕ್ತಿ ಯೋಜನೆಗೆ ಭಾನುವಾರ (ಜೂ. 11) ಚಾಲನೆ ಸಿಗಲಿದೆ. ಐದು ಗ್ಯಾರಂಟಿಗಳ ಪೈಕಿ ಮೊದಲನೆಯದಾಗಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಕಲ್ಪಿಸುವ ಶಕ್ತಿ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ …

Read More »

ಬೆಳಗಾವಿಯಲ್ಲಿ ನೀರಿಗಾಗಿ‌ ಹಾಹಾಕಾರ: ಟ್ಯಾಂಕರ್ ಮೊರೆ ಹೋದ ಕುಂದಾನಗರಿಯ ಜನ..

ಬೆಳಗಾವಿ: ಮುಂಗಾರು ಮಳೆ ಕೈಕೊಟ್ಟ ಹಿನ್ನೆಲೆಯಲ್ಲಿ ಜೀವ ಜಲಕ್ಕಾಗಿ ಕುಂದಾನಗರಿ ಜನ ಪರದಾಡುತ್ತಿದ್ದು, ನೀರಿಗಾಗಿ ಟ್ಯಾಂಕರ್​ಗಳ ಮೊರೆ ಹೋಗುತ್ತಿರುವುದು ಸಾಮಾನ್ಯವಾಗಿದೆ. ಇದೇ ಸ್ಥಿತಿ ಮುಂದುವರಿದರೆ ಮತ್ತಷ್ಟು ನೀರಿನ‌ ಸಮಸ್ಯೆ ಉದ್ಭವಿಸುವ ಸಾಧ್ಯತೆಯಿದೆ. ಇಷ್ಟೊತ್ತಿಗಾಗಲೇ ಮಳೆಗಾಲ ಆರಂಭವಾಗಿ ಜನರ ಮೊಗದಲ್ಲಿ ಮಂದಹಾಸ ಮೂಡಬೇಕಿತ್ತು. ಆದರೆ ಜೂನ್ 10 ದಾಟಿದ್ರೂ ಇನ್ನು ಮಳೆಯ ಸುಳಿವೇ ಸಿಗುತ್ತಿಲ್ಲ. ಇದರಿಂದ ಬೆಳಗಾವಿಯಲ್ಲಿ ನೀರಿಗಾಗಿ ಹಾಹಾಕಾರ ಶುರುವಾಗಿದೆ. ನಗರದ ಬಹುತೇಕ ಪ್ರದೇಶಗಳಲ್ಲಿ ಎಂಟು ದಿನ ದಿನಗಳಿಗೊಮ್ಮೆ ನೀರು ಸರಬರಾಜು …

Read More »

13ನೇ ಫೋನ್‌ ಇನ್‌ ಕಾರ್ಯಕ್ರಮ: ಜನರ ಸಮಸ್ಯೆ ಆಲಿಸಿದ ಬೆಳಗಾವಿ ಡಿಸಿ, ಎಸ್​​ಪಿ

ಬೆಳಗಾವಿ: ಜಿಲ್ಲೆಯ ಜನರ ಸಮಸ್ಯೆಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ಪೊಲೀಸ್​ ವರಿಷ್ಠಾಧಿಕಾರಿ ಸಂಜೀವ ಪಾಟೀಲ್ ನೇತೃತ್ವದಲ್ಲಿ 2022ರ ನವೆಂಬರ್‌ನಿಂದ ಈವರೆಗೆ 12 ಬಾರಿ ಫೋನ್‌ ಇನ್‌ ಕಾರ್ಯಕ್ರಮ ನಡೆದಿದ್ದು, ಇಂದು 13ನೇ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ನಿತೇಶ ಪಾಟೀಲ, ಡಿಸಿಪಿ ಶೇಖರ್ ಎಚ್.ಟಿ. ಕೂಡ ಭಾಗವಹಿಸಿದ್ದರು. ಜಿಲ್ಲೆಯ ವಿವಿಧೆಡೆಯಿಂದ 62 ಜನರು ಕರೆ ಮಾಡಿ, ತಮ್ಮ ಸಮಸ್ಯೆ ಹೇಳಿಕೊಂಡರು. ಕೆಲ ಜನರಿಗೆ ಸ್ಥಳದಲ್ಲೇ ಪರಿಹಾರವನ್ನು ಕೂಡ ಅಧಿಕಾರಿಗಳು ಸೂಚಿಸಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ‌ ಕಚೇರಿಯಲ್ಲಿ …

Read More »

ಲೋಕಸಭೆ ಚುನಾವಣೆಯವರೆಗೆ ಮಾತ್ರ ಕಾಂಗ್ರೆಸ್ ಗ್ಯಾರಂಟಿ, ಆಮೇಲೆ ಕೈ ಕೊಡ್ತಾರೆ : ರಮೇಶ್ ಜಾರಕಿಹೊಳಿ

ಚಿಕ್ಕೋಡಿ (ಬೆಳಗಾವಿ): ಅಥಣಿ ಶಾಸಕ ಲಕ್ಷ್ಮಣ್ ಸವದಿ ಅಭಿವೃದ್ಧಿಗೋಸ್ಕರ ಕಾಂಗ್ರೆಸ್ ಪಕ್ಷ ಸೇರಿದ್ದು, ಕ್ಷೇತ್ರದ ಅಭಿವೃದ್ಧಿ ಮಾಡಲಿ. ನಾವು ಅವರಿಗೆ ಸಹಕಾರ ಕೊಡುತ್ತೇವೆ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹೇಳಿದರು. ಅಥಣಿ ಪಟ್ಟಣದಲ್ಲಿ ಬಿಜೆಪಿ ಅಭ್ಯರ್ಥಿ ಮಹೇಶ ಕುಮಠಳ್ಳಿ ಸೋಲಿನ ಬಗ್ಗೆ ಕಾರ್ಯಕರ್ತರೊಂದಿಗೆ ಪರಾಮರ್ಶೆಯ ಸಭೆ ನಡೆಸಿದ ಬಳಿಕ ಮಾಧ್ಯಮಗಳೊಂದಿಗೆ ಅವರು ಮಾತನಾಡಿದರು. ಅಥಣಿ ಕಾಗವಾಡ ವಿಧಾನಸಭೆ ಸೋಲು ಜನರ ಕೊಟ್ಟ ತೀರ್ಪನ್ನು ನಾವು ಸ್ವಾಗತ ಮಾಡುತ್ತೇವೆ. ಬರುವ …

Read More »