Breaking News

ರಾಜಕೀಯ

ಎಸ್.ಟಿ ಮೀಸಲಾತಿಗೆ ಆಗ್ರಹಿಸಿ ಕುರುಬ ಸಮುದಾಯದವರ ಪ್ರತಿಭಟನೆ

ಬೆಂಗಳೂರು: ‘ಎಸ್.ಟಿ ಮೀಸಲಾತಿ ನೀಡಬೇಕು’ ಎಂದು ಆಗ್ರಹಿಸಿ ಕುರುಬ ಸಮುದಾಯದವರು ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ಆರಂಭಿಸಿದ್ದಾರೆ. ಸೋಮವಾರ ಬೆಳಿಗ್ಗೆ ಉದ್ಯಾನಕ್ಕೆ ಆಗಮಿಸಿರುವ ಸಮುದಾಯದ ಜನ, ‘ಎಸ್.ಟಿ ಮೀಸಲಾತಿ ಬೇಕು’ ಎಂದು ಘೋಷಣೆ ಕೂಗುತ್ತಿದ್ದಾರೆ. ಕುರುಬ ಸಮುದಾಯದ ವಿವಿಧ ಸಂಘಟನೆಗಳ ಸಹಯೋಗದಲ್ಲಿ ಹಾಲುಮತ ಮಹಾಸಭಾ ವತಿಯಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ‘ಕುರುಬ ಸಮುದಾಯಕ್ಕೆ ಎಸ್.ಟಿ ಮೀಸಲಾತಿ ನೀಡುವ ಸಂಬಂಧ ರಾಜ್ಯ ಬುಡಕಟ್ಟು ಸಂಶೋಧನಾ ಕೇಂದ್ರವು ಅಧ್ಯಯನ ನಡೆಸಿ ವರದಿ ಸಿದ್ಧಪಡಿಸಿದೆ. ಈ ವರದಿಯನ್ನು …

Read More »

ಮೀಸಲಾತಿ ಪರ ಹೇಳಿಕೆ ನೀಡುವಾಗ ಎಚ್ಚರದಿಂದ ಇರಿ: ಕಾಂಗ್ರೆಸ್ ವರಿಷ್ಠರ ಸೂಚನೆ

ನವದೆಹಲಿ: ‘ಪಂಚಮಸಾಲಿ ಲಿಂಗಾಯತರು, ಒಕ್ಕಲಿಗರು, ಕುರುಬರು ಹೀಗೆ ವಿವಿಧ ಸಮುದಾಯದವರ ಮೀಸಲಾತಿ ಬೇಡಿಕೆಗೆ ಸಂಬಂಧಿಸಿದಂತೆ ಹೇಳಿಕೆ ನೀಡುವಾಗ ತುಂಬಾ ಎಚ್ಚರಿಕೆಯಿಂದ ಇರಬೇಕು’ ಎಂದು ಕಾಂಗ್ರೆಸ್‌ ವರಿಷ್ಠರು ಕರ್ನಾಟಕದ ನಾಯಕರಿಗೆ ಸೂಚನೆ ನೀಡಿದ್ದಾರೆ.   ಭ್ರಷ್ಟಾಚಾರ, ಶೇ 40 ಕಮಿಷನ್ ಆರೋಪ, ನೇಮಕಾತಿ ಹಗರಣ, ಪ್ರವಾಹ ಪರಿಸ್ಥಿತಿ ನಿರ್ವಹಣೆಯಲ್ಲಿನ ವೈಫಲ್ಯ, ದುರಾಡಳಿತ ಸೇರಿದಂತೆ ವಿವಿಧ ವಿಚಾರಗಳನ್ನು ಮುಂದಿಟ್ಟು ಕೊಂಡು ರಾಜ್ಯ ನಾಯಕರು ಆಡಳಿತಾರೂಢ ಬಿಜೆಪಿ ಮೇಲೆ ವಾಗ್ದಾಳಿ ನಡೆಸುತ್ತಿದ್ದು, ಇದನ್ನು ಮುಂದುವರಿಸುವಂತೆ …

Read More »

ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟಕ್ಕೆ ಶಾರೀಕ್ ಕಾರಣ ಎಂದ ಪೊಲೀಸರು

ಮಂಗಳೂರು: ನಗರದ ಗರೋಡಿಯಲ್ಲಿ ರಿಕ್ಷಾದಲ್ಲಿ ಕುಕ್ಕರ್ ಬಾಂಬ್ ಸಾಗಿಸುತ್ತಿದ್ದಾಗ ನಡೆದ ಸ್ಪೋಟದಲ್ಲಿ ಗಾಯಗೊಂಡು ನಗರದ ಫಾದರ್ ಮಲ್ಲರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ವ್ಯಕ್ತಿ ಶಾರೀಕ್ ಎಂಬುದನ್ನು ಆತನ ಕುಟುಂಬದವರು ಖಚಿತ ಪಡಿಸಿದ್ದಾರೆ ಎಂದು ಹೇಳಿ ಅಲೋಕ್ ಕುಮಾರ್ ಸುದ್ದಿಗೋಷ್ಠಿಯಲ್ಲಿ ಸೋಮವಾರ ತಿಳಿಸಿದರು.   ನಗರದಲ್ಲಿ ಬಾಂಬ್ ಸ್ಪೋಟ ನಡೆಸುವ ಉದ್ದೇಶದಿಂದ ಕುಕ್ಕರ್ ಬಾಂಬ್ ಸಾಗಿಸಿದ್ದ. ಮೈಸೂರಿನಲ್ಲಿ ಬಾಂಬ್ ತಯಾರಿಸಿ ತಂದಿದ್ದ. ನ.10ರಂದು ಮಂಗಳೂರಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮೈಸೂರಿಗೆ …

Read More »

ಕಾಮಿಡಿ ನಟಿ ನಯನಾ ವಿರುದ್ಧ ನಿಂದನೆ ಆರೋಪ, ಕೇಸ್‌ ದಾಖಲು

ಕಾಮಿಡಿ ನಟಿ ನಯನಾ ವಿರುದ್ಧ ಕೇಸ್ ದಾಖಲಾಗಿದೆ. ಜೀವ ಬೆದರಿಕೆ ಮತ್ತು ನಿಂದನೆ ಆರೋಪದಲ್ಲಿ ಕೇಸ್ ದಾಖಲಾಗಿದೆ. ಹಣದ ಹಂಚಿಕೆ ವಿಚಾರಕ್ಕೆ ನಯನಾ ಅವರು ಮತ್ತೊಬ್ಬ ಕಾಮಿಡಿ ನಟ ಸೋಮಶೇಖರ್‌ಗೆ ಬೆದರಿಕೆ ಹಾಕಿದ್ದಾರೆ (Crime news) ಎಂದು ಆರೋಪಿಸಲಾಗಿದೆ. ಸೋಮಶೇಖರ್ ರಿಂದ ದೂರು ದಾಖಲಾಗಿದೆ. ಕಾಮಿಡಿ ಕಿಲಾಡಿ ಗ್ಯಾಂಗ್ಸ್ ನಲ್ಲಿ ಸೋಮಶೇಖರ್ ತಂಡ ಭಾಗವಹಿಸಿತ್ತು. ಖಾಸಗಿ ಚಾನಲ್ ನಲ್ಲಿ ಕಾರ್ಯಕ್ರಮ ಪ್ರಸಾರವಾಗಿತ್ತು. ಕಾರ್ಯಕ್ರಮದಲ್ಲಿ ಬಹುಮಾನದ ಹಣವಾಗಿ 3 ಲಕ್ಷ ಹಣ …

Read More »

ಗಂಗಾವತಿ ಕ್ಷೇತ್ರಕ್ಕೆ ಕಾಂಗ್ರೆಸ್‌ ಅಭ್ಯರ್ಥಿ ಘೋಷಿಸಿಯೇ ಬಿಟ್ಟ ಸಿದ್ದರಾಮಯ್ಯ

ಗಂಗಾವತಿ :ಮುಂದಿನ 2023 ರ ವಿಧಾನಸಭೆಯ ಗಂಗಾವತಿ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿಯಾದ ಮಾಜಿ ಸಚಿವ ಇಕ್ಬಾಲ್ ಅನ್ಸಾರಿಯನ್ನು ಗೆಲ್ಲಿಸುವ ಮೂಲಕ ನನಗೆ ಬಲ ನೀಡಿ ಎಂದು ವಿಪಕ್ಷ ನಾಯಕ, ಮಾಜಿ ಸಿಎಂ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ. . ಅವರು ಭಾನುವಾರ ವಳಬಳ್ಳಾರಿಯಲ್ಲಿ ಕಾಂಗ್ರೆಸ್‌ ಕಾರ್ತಕರ್ತ ಅರಸಿನಕೇರಿ ಹನುಮಂತಪ್ಪ ನಿವಾಸದ ಮದುವೆ ಸಮಾರಂಭದಲ್ಲಿ ಪಾಲ್ಗೊಂಡು ನೆರೆದ ಜನರಿಗೆ ಮನವಿ ಮಾಡಿದರು. ಬಿಜೆಪಿಯವರ ಭ್ರಷ್ಟಾಚಾರಕ್ಕೆ ರಾಜ್ಯದ ಜನರು ರೋಸಿ ಹೋಗಿದ್ದು ಜೆಡಿಎಸ್- ಬಿಜೆಪಿಗೆ …

Read More »

ಶಾಸಕರಿಗೇ ಹೊಡೆದು ಬಟ್ಟೆ ಹರಿದು ಹಾಕಿದ ಜನರು

ಚಿಕ್ಕಮಗಳೂರು: ಕಾಡಾನೆ ದಾಳಿಗೆ ಮಹಿಳೆಯೊಬ್ಬರು ಸಾವಿಗೀಡಾದ ಪ್ರಕರಣ ವಿಕೋಪಕ್ಕೆ ತೆರಳಿದ್ದು ಉದ್ರಿಕ್ತ ಜನರು ಶಾಸಕರಿಗೇ ಹೊಡೆದು ಅಂಗಿ ಹರಿದು ಹಾಕಿದ ಪ್ರಸಂಗ ನಡೆದಿದೆ. ಮಾತ್ರವಲ್ಲ, ಶಾಸಕರು ಕತ್ತಲಲ್ಲಿ ಹರಿದ ಬಟ್ಟೆಯಲ್ಲೇ ತಮ್ಮ ಪರಿಸ್ಥಿತಿ ವಿವರಿಸಿದ್ದಾರೆ.   ಕಾಡಾನೆಯಿಂದ ಮಹಿಳೆ ಸಾವಿಗೀಡಾದ ಪ್ರದೇಶಕ್ಕೆ ತೆರಳಿದ್ದ ಮೂಡಿಗೆರೆ ಶಾಸಕ ಎಂ.ಪಿ.ಕುಮಾರಸ್ವಾಮಿ ಮೇಲೆ ಗುಂಪೊಂದು ದಾಳಿ ನಡೆಸಿದ್ದು, ಅವರ ಬಟ್ಟೆಯನ್ನೂ ಹರಿದು ಹಾಕಿದೆ. ಅಲ್ಲಿಂದ ಕೊನೆಗೂ ಅವರನ್ನು ಹರಸಾಹಸಪಟ್ಟು ಪೊಲೀಸರು ರಕ್ಷಿಸಿ ಕರೆದೊಯ್ದಿದ್ದಾರೆ. ನಡೆದ ಘಟನೆ …

Read More »

ಓದಿನ ಒತ್ತಡ ತಾಳಲಾಗದೆ ನೇಣು ಹಾಕಿಕೊಂಡ ವಿದ್ಯಾರ್ಥಿ

ಮುದ್ದೇಬಿಹಾಳ: ವಿದ್ಯಾರ್ಥಿಗಳೂ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಪ್ರಕರಣಗಳು ಇತ್ತೀಚೆಗೆ ಹೆಚ್ಚಾಗಿದ್ದು, ಇಂದು ಇನ್ನೊಬ್ಬ ವಿದ್ಯಾರ್ಥಿ ಪ್ರಾಣ ಕಳೆದುಕೊಂಡಿದ್ದಾನೆ. ವಿಜಯನಗರ ಜಿಲ್ಲೆಯಲ್ಲಿ ಇಂಥದ್ದೊಂದು ಪ್ರಕರಣ ನಡೆದಿದೆ. ವಿಜಯಪುರ ಮೂಲದ ನಾಗರಬೆಟ್ಟದ ಖಾಸಗಿ ವಸತಿ ಕಾಲೇಜಿನ ವಿದ್ಯಾರ್ಥಿ ಅಜಯಕುಮಾರ್ ವಿರುಪಾಕ್ಷಿ ನುಚ್ಚಿ (18) ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ವಿದ್ಯಾರ್ಥಿ. ಈತ ನಾಗರಬೆಟ್ಟದ ಎಕ್ಸಪರ್ಟ್ ಪಿಯು ಸೈನ್ಸ್ ಕಾಲೇಜಿನಲ್ಲಿ ಪ್ರಥಮ ವರ್ಷದ ಪಿಯುಸಿ ವ್ಯಾಸಂಗ ಮಾಡುತ್ತಿದ್ದ. ನೇಣು ಬಿಗಿದ ಸ್ಥಿತಿಯಲ್ಲಿ ಕಾಲೇಜಲ್ಲೇ ಈತನ ಶವ ಪತ್ತೆಯಾಗಿದೆ. …

Read More »

ಸಿದ್ದು ಕ್ಷೇತ್ರ ನಿರ್ಧಾರ ಇಂದು?; ಕಾಂಗ್ರೆಸ್ ಟಿಕೆಟ್​ಗೆ ಅರ್ಜಿ ಸಲ್ಲಿಸಲು ಕೊನೇ ದಿನ

ಬೆಂಗಳೂರು: ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಮುಂದಿನ ಚುನಾವಣೆಯಲ್ಲಿ ಯಾವ ಕ್ಷೇತ್ರದಿಂದ ಕಣಕ್ಕಿಳಿಯುತ್ತಾರೆಂಬ ಕುತೂಹಲಕ್ಕೆ ಸೋಮವಾರ ತೆರೆಬೀಳುವ ಸಾಧ್ಯತೆ ಇದೆ. ಮುಂಬರುವ ವಿಧಾನಭಾ ಚುನಾವಣೆಗೆ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ಆಸಕ್ತರಾದವರು ಕೆಪಿಸಿಸಿಗೆ ನಿಗದಿತ ಶುಲ್ಕ ಕಟ್ಟಿ ಅರ್ಜಿ ಸಲ್ಲಿಸಬೇಕೆಂಬ ನಿಯಮ ಜಾರಿಗೆ ತರಲಾಗಿದೆ. ಆ ಪ್ರಕಾರ 1,200 ಮಂದಿ ಅರ್ಜಿ ಪಡೆದುಕೊಂಡಿದ್ದು, 1,030 ಮಂದಿ ಭರ್ತಿ ಮಾಡಿದ ಅರ್ಜಿಯನ್ನು ಕೆಪಿಸಿಸಿಗೆ ಸಲ್ಲಿಸಿದ್ದಾರೆ. ಭರ್ತಿ ಮಾಡಿದ ಅರ್ಜಿ ಸಲ್ಲಿಸಲು ಸೋಮವಾರ ಕಡೆಯ ದಿನ. ಈವರೆಗೆ …

Read More »

ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸರಣಿ ಅಪಘಾತ

ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದ ಭೀಕರ ಸರಣಿ ಅಪಘಾತದಲ್ಲಿ 30 ಮಂದಿ ಗಂಭೀರವಾಗಿ ಗಾಯಗೊಂಡಿದ್ದು, 48 ವಾಹನಗಳು ಜಖಂಗೊಂಡಿದೆ. ಭಾನುವಾರ ರಾತ್ರಿ ಈ ಘಟನೆ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಪುಣೆ ಸಮೀಪ ಇರುವ ನವಲೆ ಬ್ರಿಡ್ಜ್​ನಲ್ಲಿ ನಡೆದಿದೆ. ಪುಣೆಯ ಅಗ್ನಿ ಶಾಮಕ ಮತ್ತು ಪುಣೆ ಮೆಟ್ರೋಪಾಲಿಟನ್ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ರಕ್ಷಣಾ ತಂಡ ಕೂಡಲೇ ಘಟನಾ ಸ್ಥಳಕ್ಕೆ ಧಾವಿಸಿ, ರಕ್ಷಣಾ ಕಾರ್ಯ ನಡೆಸಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗಿದೆ. …

Read More »

ರಾಜಕೀಯದಲ್ಲಿ ದಲಿತರಿಗೆ ಉನ್ನತ ಸ್ಥಾನ ಕೊಡೋದು ಬಿಜೆಪಿ ಮಾತ್ರ: ಜೆ.ಪಿ.ನಡ್ಡಾ

ಬಳ್ಳಾರಿ: ರಾಜಕೀಯದಲ್ಲಿ ದಲಿತರಿಗೆ ಉನ್ನತ ಸ್ಥಾನ ಕೊಡೋದು ಬಿಜೆಪಿ ಮಾತ್ರ, ಬೇರೆ ಯಾರಿಗೂ ಇದು ಸಾಧ್ಯವಿಲ್ಲ ಎಂದು ಬಿಜೆಪಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಹೇಳಿದರು. ಬಳ್ಳಾರಿಯಲ್ಲಿ ಆಯೋಜಿಸಿದ್ದ ಎಸ್​ಟಿ ಮೋರ್ಚಾ ಸಮಾವೇಶ ಉದ್ಘಾಟಿಸಿ ಮಾತನಾಡಿದ ನಡ್ಡಾ, ಬಿಜೆಪಿ ದಲಿತ ಮಹಿಳೆಯೊಬ್ಬರನ್ನು ರಾಷ್ಟಪತಿ ಮಾಡಿದೆ. ಈ ಬಗ್ಗೆ ಯಾವ ಪಕ್ಷವೂ ಚಿಂತನೆ ಮಾಡಿರಲಿಲ್ಲ. ಕಾಂಗ್ರೆಸ್​ಗೆ ದಲಿತರು ಯಾಕೆ ನೆನಪಾಗಲಿಲ್ಲ? ಯಾಕೆ ಉನ್ನತ ಸ್ಥಾನ ನೀಡಲಿಲ್ಲ? ದಲಿತರ ಪರ ಮೊದಲು ಯಡಿಯೂರಪ್ಪ ಕೆಲಸ …

Read More »