Breaking News

ರಾಜಕೀಯ

ನಾಯಿಗೆ ಊಟ ತಡವಾಗಿ ಹಾಕಿದ್ದಕ್ಕೆ 21 ವರ್ಷದ ಯುವಕನನ್ನು ಬೆಲ್ಟ್‌ನಿಂದ ಹೊಡೆದು ಕೊಂದ

 ಕ್ಷುಲಕ ಕಾರಣಕ್ಕೆ ಯುವಕನೋರ್ವ ಜೊತೆಯಲ್ಲಿದ್ದ ಸಹೋದರ ಸಂಬಂಧಿ ಯುವಕನನ್ನು ಭೀಕರವಾಗಿ ಹಿಂಸಿಸಿ ಕೊಲೆಗೈದ ಘಟನೆ ಪಾಲಕ್ಕಾಡ್‌ನ ಮನ್ನೆಂಗೋಡ್‌ ನಲ್ಲಿ ನಡೆದಿರುವುದು ಬೆಳಕಿಗೆ ಬಂದಿದೆ. ಹರ್ಷದ್‌ (27) ಸಾವಿಗೀಡಾದ ಯುವಕ. ಹಕೀಂ (27) ಕೃತ್ಯವೆಸಗಿದ ಆರೋಪಿ. ಘಟನೆ ಹಿನ್ನೆಲೆ: ಹರ್ಷದ್ ಹಾಗೂ ಹಕೀಂ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಇಬ್ಬರು ಖಾಸಗಿ ಮೊಬೈಲ್‌ ಟೆಲಿಕಾಂ ಕಂಪೆನಿಯಲ್ಲಿ ಕೆಲಸ ಮಾಡುತ್ತಿದ್ದರು. ಹಕೀಂ ಹರ್ಷದ್‌ ರನ್ನು ಯಾವಾಗಲೂ ಸೇವಕನಂತೆ ನೋಡಿಕೊಳ್ಳುತ್ತಿದ್ದ. ಸಂಬಂಧಿಯಾದ ಕಾರಣ ಹರ್ಷದ್‌ ಸುಮ್ಮನಿದ್ದು ಮಾತು …

Read More »

ಸಿಎಂ ಬೊಮ್ಮಾಯಿ ಜನರ ಸಮಾಧಿಯ ಮೇಲೆ ರಾಜಕಾರಣ ಮಾಡುತ್ತಿದ್ದಾರೆಂದ ಚೂನಪ್ಪ ಪೂಜಾರಿ

ಕಬ್ಬು ಬೆಳೆಗಾರರಿಗೆ ಸಿಹಿ ಸುದ್ಧಿ ಕೊಡದ ಸಿಎಂ ಬೊಮ್ಮಾಯಿ ಜನಸಂಕಲ್ಪ ಯಾತ್ರೆಯಲ್ಲ, ಜನರ ಸಮಾಧಿಯ ಮೇಲೆ ರಾಜಕಾರಣ ಮಾಡುತ್ತಿದ್ದಾರೆಂದು ರೈತ ಮುಖಂಡ ಚೂನಪ್ಪ ಪೂಜಾರಿ ವಾಗ್ದಾಳಿ ನಡೆಸಿದರು. ಬೆಳಗಾವಿಯಲ್ಲಿ ಕರೆಯಲಾಗಿದ್ದು ಮಾಧ್ಯಮಗೋಷ್ಟಿಯನ್ನು ಉದ್ಧೇಶಿಸಿ ಅವರು ಮಾತನಾಡಿದರು. ರಾಜ್ಯದ ಮುಖ್ಯಮಂತ್ರಿ ಕಬ್ಬಿನ ಬೆಲೆ ನಿಗದಿ ಮಾಡಿಲ್ಲ ಸಿಹಿ ಸುದ್ದಿ ಕೊಡ್ತೇವಿ ಅಂತಾ ಹೇಳಿದ್ರು. ಶುಗರ್ ಲಾಭಿಗೆ ಮಣಿದಿದ್ದಾರೆ ೮ ವರ್ಷದಿಂದ ೨೫೦೦ ತೆಗೆದುಕೊಳ್ಳುತ್ತಿದ್ದೇವೆ. ಎಲ್ಲ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿದ್ದಾರೆ. …

Read More »

ರಮೇಶ ಜಾರಕಿಹೋಳಿ ಜೆಡಿಎಸ್‌ಗೆ ಬಂದ್ರೇ ಸ್ವಾಗತ

ಮಾಜಿ ಸಚಿವ ರಮೇಶ ಜಾರಕಿಹೋಳಿ ಅವರು ಜೆಡಿಎಸ್‌ಗೆ ಬಂದ್ರೇ ನಾವು ಅವರನ್ನು ಸ್ವಾಗತಿಸುತ್ತೇವೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ ಹೇಳಿದರು. ಇಂದು ಭಾನುವಾರ ಬೆಳಗಾವಿಯ ಪ್ರವಾಸಿ ಮಂದಿರದಲ್ಲಿ ಕರೆಯಲಾಗಿದ್ದ ಮಾಧ್ಯಮಗೋಷ್ಟಿಯನ್ನು ಉದ್ಧೇಶಿಸಿ ಅವರು ಮಾತನಾಡಿದರು. ಜೆಡಿಎಸ್ ಪಕ್ಷ ಜನರಿಗಾಗಿ ಇರುವ ಪಕ್ಷ. ನಮ್ಮ ಪಕ್ಷದ ತತ್ವ ಸಿದ್ಧಾಂತಗಳನ್ನು ಒಪ್ಪಿ ರಮೇಶ ಜಾರಕಿಹೊಳಿ ಅಥವಾ ಯಾರು ಬರುತ್ತಾರೆಯೋ ಅಂಥವರಿಗೆ ಜಿಲ್ಲಾ ಮಟ್ಟದಲ್ಲಿನ ನಾಯಕರೊಂದಿಗೆ ರ‍್ಚೆ ಮಾಡಿ ತರ‍್ಮಾನ ಮಾಡಲಾಗುವುದು ಎಂದರು. …

Read More »

ಈ ರಾಜ್ಯದಲ್ಲಿ ಮತ್ತೆ ಕುಮಾರಸ್ವಾಮಿ ಮುಖ್ಯಮಂತ್ರಿ ಆಗ್ತಾರೆ.,ಮಕ್ಕಳನ್ನು ಹುಟ್ಟಿಸುವ ಶಕ್ತಿಬಿಜೆಪಿಯವರಿಗೆ ಯಿಲ್ಲ; ಸಿಎಂ ಇಬ್ರಾಹಿಂ

ಬಿಜೆಪಿಯವರಿಗೆ ಮಾತನಾಡುವ ಶಕ್ತಿಯಿದೆ ಆದರೇ ಮಕ್ಕಳನ್ನು ಹುಟ್ಟಿಸುವ ಶಕ್ತಿಯಿಲ್ಲ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಕಟುವಾಗಿ ಬಿಜೆಪಿ ವಿರುದ್ಧ ವಾಗ್ಧಾಳಿ ನಡೆಸಿದರು. ಅವರು ಇಂದು ಬೆಳಗಾವಿಯಲ್ಲಿ ಕರೆಯಲಾಗಿದ್ದ ಮಾಧ್ಯಮಗೋಷ್ಟಿಯನ್ನು ಉದ್ಧೇಶಿಸಿ ಮಾತನಾಡಿದರು. ಇಂದು ನಾಳೆ ಬೆಳಗಾವಿ ಜಿಲ್ಲೆಯಲ್ಲಿ ಪಕ್ಷ ಸಂಘಟನೆ ಮಾಡ್ತಿವಿ, ಜೆಡಿಎಸ ಪಕ್ಷ ರಾಷ್ಟ್ರೀಯ ಪಕ್ಷವಲ್ಲ. ನಾನು ಕರೆದುಕೊಂಡು ಬಂದ ಜನರಿಗೆ ಭಾಷಣ ಮಾಡಲ್ಲ. ಬಂದ ಜನರಿಗೆ ಭಾಷಣ ಮಾಡುವ ಉದ್ದೇಶ ಹೊಂದಿದ್ದೇವೆ. ೨೦೨೩ರಲ್ಲಿ ಕುಮಾರಸ್ವಾಮಿ ಅವರೇ …

Read More »

ಮನುಷ್ಯನ ಏಳ್ಗೆಗೆ ಧರ್ಮ ಅವಶ್ಯ: ಶ್ರೀಶೈಲ ಶ್ರೀ

ಅಥಣಿ: ಧರ್ಮ ರಕ್ಷಣೆ ಮಾಡುವವರನ್ನು ಧರ್ಮ ರಕ್ಷಿಸುತ್ತದೆ. ಧರ್ಮದೊಂದಿಗೆ ಎಲ್ಲರೂ ಕೈ ಜೋಡಿಸುವಂತೆ ಶ್ರೀಶೈಲ ಪೀಠದ ಜಗದ್ಗುರು ಡಾ| ಚನ್ನಸಿದ್ದರಾಮ ಪಂಡಿತಾರಾಧ್ಯ ಶಿವಾಚಾರ್ಯ ಭಗವತ್ಪಾದರು ಕರೆ ನೀಡಿದರು. ಶ್ರೀಗಳು ಶ್ರೀಶೈಲವರೆಗಿನ ಜನಜಾಗೃತಿ ಪಾದಯಾತ್ರೆ ಮಾರ್ಗ ಮಧ್ಯೆ ಸತ್ತಿ ಗ್ರಾಮದಲ್ಲಿ ಜರುಗಿದ ಧರ್ಮಸಭೆಯ ಸಾನ್ನಿಧ್ಯವಹಿಸಿ ಮಾತನಾಡಿ, ಮನುಷ್ಯನ ಏಳ್ಗೆಗೆ ಧರ್ಮವು ಅತ್ಯವಶ್ಯವಾಗಿದೆ.   ಇತ್ತೀಚಿಗೆ ರಸಾಯನಿಕ ಗೊಬ್ಬರ ಅತಿಯಾಗಿ ಬಳಕೆಯಾಗುತ್ತಿದ್ದು, ಫಲವತ್ತಾದ ಭೂಮಿ ತನ್ನ ಅಸ್ತಿತ್ವವನ್ನು ಕಳೆದುಕೊಳ್ಳುತ್ತಿದೆ. ಕೃಷಿಕರು ಸಾವಯವ ಕೃಷಿ ಮಾಡುವ …

Read More »

ಸವದತ್ತಿ ಯಲ್ಲಮ್ಮ ದೇವಸ್ಥಾನ:100ಕ್ಕೂ ಅಧಿಕ ಅನಧಿಕೃತ ಅಂಗಡಿ ತೆರವು

ಸವದತ್ತಿ : ತಾಲೂಕಿನ ಯಲ್ಲಮ್ಮ ದೇವಸ್ಥಾನದ ಆವರಣದಲ್ಲಿರುವ 100 ಮೀ ಸುತ್ತಲಿನ ಅನಧಿಕೃತ ಬೀದಿ ಬದಿಯ ಸುಮಾರು ನೂರಕ್ಕೂ ಅಧಿಕ ಅಂಗಡಿಗಳ ತೆರವು ಕಾರ್ಯಾಚರಣೆ ನಡೆದಿದೆ. ತೆರವು ಕಾರ್ಯಾಚರಣೆಯಿಂದ ವ್ಯಾಪಾರಿಗಳು ಮುಂದುವರೆಸದಂತೆ ಬುಧವಾರ ಅಧಿಕಾರಿಗಳಿಗೆ ಸಾಕಷ್ಟು ಮನವಿ ಮಾಡಿ ಪ್ರಯೋಜನವಾಗದಿದ್ದಾಗ ಕೆಲ ಮುಖಂಡರುಗಳ ಮೊರೆ ಹೋದರೂ ಫಲಕಾರಿಯಾಗಲಿಲ್ಲ. ಗುರುವಾರ ಮುಂಜಾನೆಯಿಂದಲೇ ಕಾರ್ಯಚರಣೆ ಮುಂದುವರೆಸಲೆತ್ನಿಸಿದರು. ಅಧಿಕಾರಿಗಳ ಜೊತೆ ವ್ಯಾಪಾಸ್ಥರು ಕೆಲ ಸುತ್ತಿನ ಮಾತುಕತೆ ನಡೆದರೂ ಪ್ರಯೋಜನವಾಗಲಿಲ್ಲ. ಕಾರ್ಯಾಚರಣೆ ನಿಲ್ಲಿಸಲು ವ್ಯಾಪಾರಿಗಳು ಎಲ್ಲಿಲ್ಲದ ಪ್ರಯತ್ನದೊಂದಿಗೆ …

Read More »

ಗಡಿ ಜನರಿಗಾಗಿ ಜೈ ಜೋಡಿಸಿ ನಡೆಯೋಣ: ಸಮನ್ವಯ ಸಭೆ ಫಲಪ್ರದ

ಬೆಳಗಾವಿ: ಕರ್ನಾಟಕ- ಮಹಾರಾಷ್ಟ್ರ ಗಡಿಗಳಲ್ಲಿ ಸುಧಾರಣಾ ಕ್ರಮಗಳ ಕುರಿತು ಸುದೀರ್ಘ ಚರ್ಚೆ ನಡೆಸಲಾಗಿದ್ದು, ಇವುಗಳ ಅನುಷ್ಠಾನಕ್ಕೆ ಎರಡೂ ರಾಜ್ಯ ಸರ್ಕಾರಗಳಿಗೆ ರಾಜಭವನದ ಮೂಲಕ ಸೂಚನೆ ನೀಡಲು ತೀರ್ಮಾನಿಸಲಾಗಿದೆ ಎಂದು ಉನ್ನತ ಮೂಲಗಳು ಖಚಿತಪಡಿಸಿವೆ.   ಕರ್ನಾಟಕ ರಾಜ್ಯಪಾಲ ಥಾವರಚಂದ್‌ ಗೆಹಲೋತ್‌ ಹಾಗೂ ಮಹಾರಾಷ್ಟ್ರ ರಾಜ್ಯಪಾಲ ಭಗತ್‌ಸಿಂಗ್‌ ಕೋಶಿಯಾರಿ ಅವರ ನೇತೃತ್ವದಲ್ಲಿ ಕೊಲ್ಹಾಪುರದಲ್ಲಿ ಎರಡೂ ರಾಜ್ಯಗಳ ಅಧಿಕಾರಿಗಳ ಸಮನ್ವಯ ಸಭೆಯಲ್ಲಿ ಹಲವು ಸಂಗತಿಗಳ ವಿನಿಮಯ ನಡೆಯಿತು. ಗಡಿ ಜನರ ಜೀವನ ಸುಧಾರಣೆ ಹಾಗೂ …

Read More »

ಸರ್ಕಾರಿ ನೌಕರರಿಗೆ ಸಮಾನ ವೇತನ ನೀಡಿ

ಬೆಳಗಾವಿ: ಸರ್ಕಾರಿ ನೌಕರರಿಗೆ ಸಮಾನ ವೇತನ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರಾಜ್ಯ ರಸ್ತೆ ಸಾರಿಗೆ ನೌಕರರ ಕೂಟದ ಪದಾಧಿಕಾರಿಗಳು ನಗರದಲ್ಲಿ ಶನಿವಾರ ಪ್ರತಿಭಟನೆ ನಡೆಸಿದರು. ಇಲ್ಲಿನ ಕೇಂದ್ರೀಯ ಬಸ್‌ ನಿಲ್ದಾಣದಿಂದ ಜಿಲ್ಲಾಧಿಕಾರಿ ಕಚೇರಿಯ ವರೆಗೆ ಸೈಕಲ್‌ ರ್‍ಯಾಲಿ ನಡೆಸಿದ ಸಾರಿಗೆ ನೌಕರರು, ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಹೆಚ್ಚುವರಿ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.   ಕೂಟದ ಅಧ್ಯಕ್ಷ ಆರ್‌. …

Read More »

ಖಾನಾಪುರದ ‘ತಂದೂರಿ ಭಟ್ಟಿ’ ಸ್ವಿಟ್ಜರ್‌ಲೆಂಡ್‌ಗೆ

ಖಾನಾಪುರ: ತಂದೂರಿ ರೋಟಿ, ತಂದೂರಿ ನಾನ್, ತಂದೂರಿ ಕಬಾಬ್, ತಂದೂರಿ ಚಿಕನ್, ತಂದೂರಿ ಪಿಜ್ಜಾ, ತಂದೂರಿ ಚಹಾ… ಹೋಟೆಲ್ ಹಾಗೂ ಧಾಬಾಗಳಲ್ಲಿ ಸಿಗುವ ಈ ಖಾದ್ಯಗಳ ಹೆಸರು ಕೇಳಿದಾಗ ಬಾಯಲ್ಲಿ ನೀರೂರುವುದು ಸಹಜ. ಇವುಗಳ ತಯಾರಿಕೆಗೆ ಅಗತ್ಯವಿರುವ ಭಟ್ಟಿಗಳನ್ನು ತಯಾರಿಸುವಲ್ಲಿ ಖಾನಾಪುರದ ಕುಂಬಾರರು ಖ್ಯಾತಿ ಗಳಿಸಿದ್ದಾರೆ.   ಮಾರುಕಟ್ಟೆಯ ಬೇಡಿಕೆಯಂತೆ ಇಲ್ಲಿನ ಕುಂಬಾರರು ತಯಾರಿಸಿದ ತಂದೂರಿ ಭಟ್ಟಿಗಳು, ಕರ್ನಾಟಕ ಮಾತ್ರವಲ್ಲದೆ, ನೆರೆಯ ಮಹಾರಾಷ್ಟ್ರ, ಗೋವಾ, ಆಂಧ್ರಪ್ರದೇಶ, ಕೇರಳ ರಾಜ್ಯಗಳಿಗೂ ಮಾರಾಟವಾಗುತ್ತಿವೆ. …

Read More »

ಹುಣಶಿಕಟ್ಟಿ-ಉಳವಿ ಪಾದಯಾತ್ರೆಗೆ ಚಾಲನೆ

ಬೆಳಗಾವಿ: ಜಿಲ್ಲೆಯ ಹುಣಶಿಕಟ್ಟಿಯಿಂದ ಯಳವಿವರೆಗೆ ಕೈಗೊಂಡ ಪಾದಯಾತ್ರೆಗೆ ಗ್ರಾಮದಲ್ಲಿ ಶುಕ್ರವಾರ ಚಾಲನೆ ನೀಡಲಾಯಿತು. ಗ್ರಾಮದ ಕಲ್ಮೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಗ್ರಾಮಸ್ಥರು ಹಾಗೂ ಭಜನಾ ಮಂಡಳಿಯವರು ಪಾದಯಾತ್ರೆಗೆ ಮುಂದಾದರು.   ಮುಖಂಡರಾದ ಬಸವರಾಜ ಹೊಳಿ, ಕಲ್ಮೇಶ ಮರಡಿ, ಗಂಗಪ್ಪ ನಾಡಗೌಡ್ರ, ಮಹಾಂತೇಶ ಉಪ್ಪಿನ, ವಿರೂಪಾಕ್ಷಿ ಹಿರೇಮಠ, ಉಮೇಶ ಹೊಸಮನಿ, ಬಸವರಾಜ ತುರುಮರಿ, ಸಂಗಯ್ಯ ಹಿರೇಮಠ, ಉಮೇಶ ಹೊಸಮನಿ, ಅಶೋಕ ಯರಗೊಪ್ಪ, ಕಲ್ಮೇಶ ತುರಮರಿ, ಕಲ್ಲಯ್ಯ ಪತ್ರಿ, ಬಸವಂತಪ್ಪ ಹುಬ್ಬಳ್ಳಿ ನೇತೃತ್ವ …

Read More »