Breaking News

ರಾಜಕೀಯ

ಮನೆ ಮನೆಗೆ ಬುದ್ಧ, ಬಸವ-ಅಂಬೇಡ್ಕರ್: ಸತೀಶ್ ಜಾರಕಿಹೊಳಿಯಿಂದ ವಿನೂತನ ಕಾರ್ಯಕ್ರಮ

ಬೆಳಗಾವಿ: ಹರ್ ಘರ್ ತಿರಂಗಾ, ಮನೆಮನೆಗೂ ಕನ್ನಡ ಧ್ವಜ ಅಭಿಯಾನ ಆಯ್ತು. ಇದೀಗ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರು ಮನೆ ಮನೆಗೆ ಬುದ್ಧ ಬಸವ ಅಂಬೇಡ್ಕರ್ ಕಾರ್ಯಕ್ರಮ ಆಯೋಜಿಸಿದ್ದಾರೆ.   ಇದೇ ನ. 6ರಂದು ಬೆಳಗಾವಿ ಜಿಲ್ಲೆಯ ನಿಪ್ಪಾಣಿ ಪಟ್ಟಣದಲ್ಲಿ ಸಮಾವೇಶ ಮಾಡಿ ಮನೆ ಮನೆಗೆ ಬುದ್ಧ ಬಸವ ಅಂಬೇಡ್ಕರ್ ಕಾರ್ಯಕ್ರಮಕ್ಕೆ ಚಾಲನೆ ದೊರೆಯಲಿದೆ.   ಇನ್ನು ಈ ಬಗ್ಗೆ ಇಂದು(ನ.02) ನಿಪ್ಪಾಣಿ ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, …

Read More »

1 ಕೋಟಿ 40 ಲಕ್ಷ ರೂ. ವೆಚ್ಚದ ರಸ್ತೆ ಕಾಮಗಾರಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್‌ ಜಾರಕಿಹೊಳಿ ಚಾಲನೆ

    ಯಮಕನಮರಡಿ: ಕ್ಷೇತ್ರದಲ್ಲಿ ನಡೆಯುತ್ತಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ರಾಜಿ ಮಾಡಿಕೊಳ್ಳದೇ ಗುಣಮಟ್ಟ ಕಾಯ್ದುಕೊಳ್ಳಿ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್‌ ಜಾರಕಿಹೊಳಿ ಅವರು ಹೇಳಿದರು. ಹೆಬ್ಬಾಳ ಜಿಲ್ಲಾ ಪಂಚಾಯತ್‌ ವ್ಯಾಪ್ತಿಯ ಉಳ್ಳಾಗಡಿ ಖಾನಾಪುರದಿಂದ ರಾಷ್ಟ್ರೀಯ ಹೆದ್ದಾರಿ NH 4 ವರೆಗಿನ 1 ಲೋಕೋಪಯೋಗಿ ಇಲಾಖೆ ವತಿಯಿಂದ ಮಂಜೂರಾದ 1 ಕೋಟಿ 40 ಲಕ್ಷ ರೂ. ವೆಚ್ಚದ ರಸ್ತೆ ಕಾಮಗಾರಿಗೆ ಚಾಲನೆ ನೀಡಿ ಅವರು ಮಾತನಾಡಿದರು.   ಇದೇ …

Read More »

ನಟ ಪುನೀತ್‌ ರಾಜ್‌ಕುಮಾರ್‌ ಅವರಿಗೆ ಮರಣೋತ್ತರ ಕರ್ನಾಟಕ ರತ್ನ ಪ್ರದಾನ

ಧಾರಾಕಾರವಾಗಿ ಸುರಿಯುತ್ತಿದ್ದ ಮಳೆ ಮತ್ತು ಸಹಸ್ರಾರು ಅಭಿಮಾನಿಗಳ ಹರ್ಷೋದ್ಗಾರಗಳ ಮಧ್ಯೆಯೇ, ನಾಡಿನ ಜನರ ಮನಗೆದ್ದ ನಟ ಪುನೀತ್‌ ರಾಜ್‌ಕುಮಾರ್‌ ಅವರಿಗೆ ಮರಣೋತ್ತರವಾಗಿ ‘ಕರ್ನಾಟಕ ರತ್ನ’ ಪ್ರಶಸ್ತಿ ಪ್ರದಾನ ಮಾಡಲಾಯಿತು. ವಿಧಾನಸೌಧದ ಮೆಟ್ಟಿಲುಗಳ ಮೇಲೆ ಮಂಗಳವಾರ ಸಂಜೆ ನಡೆದ ಸಮಾರಂಭದಲ್ಲಿ, ಪುನೀತ್‌ ಅವರನ್ನು ಕಳೆದುಕೊಂಡು ಆಗಸವೇ ಅಳುತ್ತಿದೆ ಯೇನೋ ಎಂಬಂತೆ ಭೋರ್ಗರೆದು ಸುರಿಯುತ್ತಿದ್ದ ವರ್ಷಧಾರೆಯ ನಡುವೆಯೇ ಛತ್ರಿಯ ಆಸರೆಯಲ್ಲಿ ಸಮಾರಂಭ ನಡೆಯಿತು. ತಂದೆ ಡಾ. ರಾಜ್‌ಕುಮಾರ್‌ ಅವರಿಗೆ 30 ವರ್ಷಗಳ ಹಿಂದೆ …

Read More »

ಒಬಿಸಿ ಅನುದಾನಕ್ಕೆ ಬಿಜೆಪಿ ಕತ್ತರಿ: ಸಿದ್ದರಾಮಯ್ಯ

ಬೆಂಗಳೂರು: ಬಿಜೆಪಿ ಸರ್ಕಾರದ ಅವಧಿಯಲ್ಲಿ ಹಿಂದುಳಿದ ವರ್ಗಗಳಿಗೆ ಆದಷ್ಟು ಅನ್ಯಾಯ ಬೇರೆ ಯಾವುದೇ ಸರ್ಕಾರದ ಕಾಲದಲ್ಲೂ ಆಗಿಲ್ಲ. ಈ ವರ್ಗಗಳಿಗೆ ಸೇರಿದ 11ಕ್ಕೂ ಹೆಚ್ಚು ಅಭಿವೃದ್ಧಿ ನಿಗಮಗಳಿಗೆ ನೀಡುತ್ತಿದ್ದ ಅನುದಾನವನ್ನು ಕಡಿಮೆ ಮಾಡಲಾಗಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ದೂರಿದ್ದಾರೆ.   ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಾಲ್ಮೀಕಿ ಅಭಿವೃದ್ಧಿ ನಿಗಮ, ಅಂಬೇಡ್ಕರ್‌ ಅಭಿವೃದ್ಧಿ ನಿಗಮ, ಜಗಜೀವನ್‌ರಾಂ ಅಭಿವೃದ್ಧಿ ನಿಗಮಗಳಿಗೆ ಅನುದಾನ ಕಡಿಮೆ ಮಾಡಲಾಗಿದೆ. ಇದು ಹಿಂದುಳಿದವರ ಮೇಲೆ …

Read More »

ಜನಾರ್ದನ ರೆಡ್ಡಿ ಸಹಾಯಕ್ಕೆ ಹೋಗದ ಯಡಿಯೂರಪ್ಪ ವಿರುದ್ಧ ಗುಡುಗಿದ ಯತ್ನಾಳ್‌..!

ವಿಜಯಪುರ: ಮಾಜಿ ಸಚಿವ ಜನಾರ್ದನ ರೆಡ್ಡಿ ಅವರಿಗೆ ನೋವಿದೆ. ಅದನ್ನ ಪಕ್ಷದ ಹಿರಿಯರು ಸರಿಪಡಿಸುತ್ತಾರೆ. ಒಂದು ಕಾಲದಲ್ಲಿ ರೆಡ್ಡಿ ಅವರಿಂದ ಬಿಜೆಪಿಗೆ ಅನಕೂಲಮಾಡಿಕೊಂಡು ಸಿಎಂ ಆಗಿದ್ದಾರೆ. ಯಾರು ರೆಡ್ಡಿ ಅವರ ಅನಕೂಲದಿಂದ ಸಿಎಂ ಆಗಿದ್ದಾರೋ ಅವರು ಜನಾರ್ದನ ರೆಡ್ಡಿ ಸಹಾಯಕ್ಕೆ ಹೋಗಬೇಕಿದೆ ಅಂತ ಹೇಳುವ ಮೂಲಕ ಪರೋಕ್ಷವಾಗಿ ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಗುಡುಗಿದ್ದಾರೆ. ವಿಜಯಪುರ ಜಿಲ್ಲೆಗೆ ಉಸ್ತುವಾರಿ ಸಚಿವರ ನೇಮಕ ಹಾಗೂ …

Read More »

ಕಾನೂನು ನಿಯಮದಂತೆ ಟೋಲ್‌ ತೆರವು: ನಳಿನ್‌ ಕುಮಾರ್‌ ಕಟೀಲು

ಮಂಗಳೂರು: ಪ್ರಜಾಪ್ರಭುತ್ವದಲ್ಲಿ ಹೋರಾಟ ಮಾಡಲು ಎಲ್ಲರಿಗೂ ಅವಕಾಶವಿದ್ದು, ನಮ್ಮದೇನು ಅಭ್ಯಂತರವಿಲ್ಲ. ಕಾನೂನು ನಿಯಮದಡಿ ನಾವು ಟೋಲ್‌ ತೆರವು ಮಾಡುತ್ತೇವೆ ಎಂದು ಸಂಸದ ನಳಿನ್‌ ಕುಮಾರ್‌ ಕಟೀಲು ಹೇಳಿದ್ದಾರೆ. ಮಾಧ್ಯಮದವರ ಜತೆ ಮಾತನಾಡಿದ ಅವರು, ಕಾಂಗ್ರೆಸ್‌ ಸರಕಾರ ಆಡಳಿತದಲ್ಲಿದ್ದಾಗ ಟೋಲ್‌ಗೇಟ್‌ ತೆರವು ಮಾಡದವರು ಈಗ ಹೋರಾಟ ಮಾಡುತ್ತಿರುವುದು ರಾಜಕೀಯ ನಾಟಕ. ಆಸ್ಕರ್‌ ಫೆರ್ನಾಂಡಿಸ್‌ ಕೇಂದ್ರ ಸಚಿವರಾಗಿದ್ದ ವೇಳೆ ಅವರು ಏಕೆ ಮನವಿ ನೀಡಲಿಲ್ಲ ಎಂದು ಪ್ರಶ್ನಿಸಿದರು.   ತೂಗು ಸೇತುವೆಗಳ ಪರಿಶೀಲನೆ …

Read More »

ನನ್ನನ್ನು ಮುಗಿಸಲು ಮುಧೋಳ-ಬೆಂಗಳೂರಿಂದ ಗ್ಯಾಂಗ್​ ಬಂದಿತ್ತು: ಹೊಸ ಬಾಂಬ್​ ಸಿಡಿಸಿದ ಯತ್ನಾಳ್​

ವಿಜಯಪುರ: ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ದೊಡ್ಡ ಪಕ್ಷವಾಗಿ ಹೊರಹೊಮ್ಮುವ ಮೂಲಕ ರಾಜ್ಯ ರಾಜಕಾರಣಕ್ಕೆ ಸಂದೇಶ ರವಾನಿಸಿದೆ. ಆದರೆ, ಈ ಚುನಾವಣೆಯಲ್ಲಿ ನನ್ನನ್ನು ಹಣಿಯಲು ಕಳ್ಳರ ಗ್ಯಾಂಗ್ ಮನೆಯಲ್ಲಿಯೇ ಕುಳಿತು ತಂತ್ರ ಮಾಡಿದೆ. ಮಾತ್ರವಲ್ಲ, ಮುಧೋಳ ಮತ್ತು ಬೆಂಗಳೂರಿನಿಂದಲೂ ಬಂದಿದ್ದರು ಎಂದು ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್​ ಬಾಂಬ್ ಸಿಡಿಸಿದ್ದಾರೆ. ಮಂಗಳವಾರ ಸುದ್ದಿಗಾರರ ಜತೆ ಮಾತನಾಡಿದ ಯತ್ನಾಳ್​, ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಜಯ ಸಾಧಿಸಿದೆ. ಈ ಹಿಂದೆ …

Read More »

ವೇದಾವತಿ ನದಿ ಬಳಿಯೇ ಹಾಸಿಗೆ ಹಾಸಿಕೊಂಡು ಮಲಗಿದ ಸಚಿವ ಶ್ರೀರಾಮುಲು

ವೇದಾವತಿ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಎಲ್‍ಎಲ್‍ಸಿ ಕಾಲುವೆಯ ದುರಸ್ತಿ ಕಾರ್ಯ ತ್ವರಿತವಾಗಿ ನಡೆಯಬೇಕೆಂದು ನಿನ್ನೆ ರಾತ್ರಿ ಸಚಿವ ಶ್ರೀರಾಮುಲು ನದಿ ಪಕ್ಕದಲ್ಲೇ ವಾಸ್ತವ್ಯ ಹೂಡಿದರು. ಬಳ್ಳಾರಿ: ತಾಲೂಕಿನ ಬಿ ಡಿ ಹಳ್ಳಿ ಬಳಿಯ ವೇದಾವತಿ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಮೇಲು ಸೇತುವೆಯ ಎಲ್‍ಎಲ್‍ಸಿ ಕಾಲುವೆಯ ದುರಸ್ತಿ ಕೆಲಸ ನಡೆಯುತ್ತಿದೆ. ಈ ಕಾಮಗಾರಿಗೆ ವೇಗ ಸಿಗಲೆಂದು ಮಂಗಳವಾರ ರಾತ್ರಿ ನದಿ ಬಳಿಯೇ ಹಾಸಿಗೆ ಹಾಸಿಕೊಂಡು ಮಲಗುವ ಮೂಲಕ ಸಚಿವ ಶ್ರೀರಾಮುಲು ಗಮನ …

Read More »

ರಾಜ್ಯೋತ್ಸವದ ಮೆರವಣಿಗೆಯಲ್ಲಿ ಹೆಜ್ಜೆ ಹಾಕಿದ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್‌ ಜಾರಕಿಹೊಳಿ 

    ಬೆಳಗಾವಿ: ಕನ್ನಡ ರಾಜ್ಯೋತ್ಸವ ಹಿನ್ನೆಲೆಯಲ್ಲಿ ಮಂಗಳವಾರ ಕುಂದಾ ನಗರಿ ಬೆಳಗಾವಿ ಅಕ್ಷರಶಃ ಮದುವಣಗಿತ್ತಿಯಂತೆ ಕಂಗೊಳ್ಳಿಸುತ್ತಿದ್ದು, ಕನ್ನಡ ರಾಜ್ಯೋತ್ಸವದ ಮೆರವಣೆಗೆಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್‌ ಜಾರಕಿಹೊಳಿ ಅವರು ಅಪಾರ ಅಭಿಮಾನಿಗಳ ಜತೆ ಹೆಜ್ಜೆ ಹಾಕಿ ರಾಜೋತ್ಸವಕ್ಕೆ ಇನ್ನಷ್ಟು ಮೆರಗು ತಂದರು.   ನಂತರ ಚೆನ್ನಮ್ಮ ವೃತ್ತದಲ್ಲಿ ಹಾಕಲಾದ ಟೆಂಟ್‌ನಲ್ಲಿ ಕುಳಿತು ರಾಜ್ಯೋತ್ಸವದ ಅದ್ಧೂರಿ ಮೆರವಣಿಗೆಯನ್ನು ವಿಕ್ಷೀಸಿದರು. ಅಪಾರ ಸಂಖ್ಯೆಯ ಯುವಕರು, ಯುವತಿಯರು, ಕನ್ನಡಪರ ಹೋರಾಟಗಾರರು ಶಾಸಕ ಸತೀಶ್‌ …

Read More »

ಗೋಕಾಕ: ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ತಹಶೀಲ್ದಾರ ಪ್ರಕಾಶ ಹೊಳೆಪ್ಪಗೋಳ ಮಾತನಾಡುತ್ತಿರುವದು.

ಗೋಕಾಕ: ಕನ್ನಡ ಭಾಷಿಕ ಪ್ರದೇಶಗಳು ಒಂದಾಗಿ ಅಖಂಡ ಕರ್ನಾಟಕ ರಚನೆಯಾಗಬೇಕು ಎಂಬ ಕನಸು ನನಸಾಗಿ ಇಂದಿಗೆ 66 ವರ್ಷಗಳು ಪೂರ್ಣಗೊಂಡಿದ್ದು, ನಾವೆಲ್ಲರೂ 67ನೇ ರಾಜ್ಯೋತ್ಸವವನ್ನು ಸಡಗರ ಸಂಭ್ರಮದಿಂದ ಆಚರಿಸುತ್ತಿರುವದು ಕರ್ನಾಟಕದ ಇತಿಹಾಸದಲ್ಲಿ ಇದೊಂದು ಐತಿಹಾಸಿಕ ದಿನವಾಗಿದೆ ಎಂದು ತಹಶೀಲ್ದಾರ ಪ್ರಕಾಶ ಹೊಳೆಪ್ಪಗೋಳ ಹೇಳಿದರು.   ಮಂಗಳವಾರದಂದು ತಾಲೂಕಾ ಆಡಳಿತ ವತಿಯಿಂದ ನಗರದ ವಾಲ್ಮೀಕಿ ಕ್ರೀಡಾಂಗಣದಲ್ಲಿ 67ನೇ ಕರ್ನಾಟಕ ರಾಜ್ಯೋತ್ಸವ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ಅಖಂಡ ಕರ್ನಾಟಕ …

Read More »