Breaking News

ರಾಜಕೀಯ

ಲಿಂಗಾಯತ ಎರಡೂ ಒಂದೇ, ಗೊಂದಲ ನಿವಾರಣೆಗೆ ಸೆ.19ಕ್ಕೆ ಏಕತಾ ಸಮಾವೇಶ: ದಿಂಗಾಲೇಶ್ವರ ಶ್ರೀ

ಹುಬ್ಬಳ್ಳಿ: ವೀರಶೈವ ಲಿಂಗಾಯತ ಎರಡೂ ಒಂದೇ‌ ಆಗಿದ್ದು, ಸಮಾಜದಲ್ಲಿ ಉಂಟಾಗಿರುವ ಗೊಂದಲ ನಿವಾರಿಸಲು ವೀರಶೈವ ಲಿಂಗಾಯತ ಏಕತಾ ಸಮಾವೇಶವನ್ನು ಸೆಪ್ಟೆಂಬರ್​ 19ರಂದು ಇಲ್ಲಿನ ನೆಹರು ಮೈದಾನದಲ್ಲಿ ಆಯೋಜಿಸಲಾಗಿದೆ ಎಂದು ಶಿರಹಟ್ಟಿ ಫಕೀರೇಶ್ವರ ಮಠದ ದಿಂಗಾಲೇಶ್ವರ ಸ್ವಾಮೀಜಿ ಹೇಳಿದರು. ನಗರದಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸರ್ಕಾರ ಜನಗಣತಿ ನಿರ್ಣಯ ಮಾಡಿದೆ. ಹಿಂದೆ ಜನಗಣತಿ ಆದಾಗ ಸಮಾಜದ ವಿರೋಧ ವ್ಯಕ್ತವಾದ ಕಾರಣ ಮತ್ತೊಂದು ಜನಗಣತಿಗೆ ಸಿದ್ಧತೆ ನಡೆದಿದೆ. ಕಾರಣ ಶುಕ್ರವಾರ ನಾವು ನೂರಾರು …

Read More »

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..

  ಸವದತ್ತಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಸವದತ್ತಿ ತಾಲ್ಲೂಕಿನ ಬಡ್ಲಿ ಗ್ರಾಮದ ಶ್ರೀ ಕಲಮೇಶ್ವರ ಶ್ವರ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಮಾರ್ಗದರ್ಶಕರಾದ ರಾದ ಸಂತೋಷ …

Read More »

ಘಟಪ್ರಭಾ ನದಿಯ ಪ್ರವಾಹದಿಂದ ರೈತರು ಬೆಳೆದ ಕೋಟ್ಯಂತರ ರೂಪಾಯಿ ಮೌಲ್ಯದ ಬೆಳೆಗಳು ನೀರು ಪಾಲ

ಮೂಡಲಗಿ: ಘಟಪ್ರಭಾ ನದಿಯ ಪ್ರವಾಹದಿಂದ ರೈತರು ಬೆಳೆದ ಕೋಟ್ಯಂತರ ರೂಪಾಯಿ ಮೌಲ್ಯದ ಬೆಳೆಗಳು ನೀರು ಪಾಲಾಗಿದ್ದು, ವಿದ್ಯುತ್ ಪರಿಕರಗಳು, ರಸ್ತೆಗಳು ಹಾಳಾಗಿದ್ದು ರೈತರು ಆರ್ಥಿಕ ಸಂಕಷ್ಟಕ್ಕೆ ಸಿಲುಕುವಂತಾಗಿದೆ. ಕಷ್ಟಪಟ್ಟು ಬೆಳೆದ ಬೆಳೆ ಕೈಗೆ ಬರುವ ಮುಂಚೆ ಹಾನಿಯಾಗಿದೆ. ರಾಜ್ಯ ಸರ್ಕಾರ ಈ ಕೂಡಲೇ ಎಸ್.ಡಿ.ಆರ್.ಎಫ್ ನಿದಿಯ ಜೊತೆಗೆ ಹೆಚ್ಚಿನ ಅನುದಾನ ಬಿಡುಗಡೆ ಮಾಡಿ ಸಂತ್ರಸ್ತರ ರೈತರ ನೆರವಿಗೆ ಧಾವಿಸಬೇಕು ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಆಗ್ರಹಿಸಿದರು. ಶುಕ್ರವಾರ ಸೆ-05 …

Read More »

ಆತ್ಮೀಯ ಸ್ನೇಹಿತರೇಇಂದು ಮತ್ತು ನಾಳೆ ಸಂಜೆ, ಗಣೇಶ ಹಬ್ಬವನ್ನು ನೋಡಲು ಜನರ ದಟ್ಟಣೆ ಹೆಚ್ಚಾಗಿರುವುದರಿಂದ, ಜನರು ಇರುವವರೆಗೂ ಆಹಾರ ಮತ್ತು ಪಾನೀಯ ಅಂಗಡಿಗಳು ತೆರೆದಿರಬಹುದು.

ಆತ್ಮೀಯ ಸ್ನೇಹಿತರೇಇಂದು ಮತ್ತು ನಾಳೆ ಸಂಜೆ, ಗಣೇಶ ಹಬ್ಬವನ್ನು ನೋಡಲು ಜನರ ದಟ್ಟಣೆ ಹೆಚ್ಚಾಗಿರುವುದರಿಂದ, ಜನರು ಇರುವವರೆಗೂ ಆಹಾರ ಮತ್ತು ಪಾನೀಯ ಅಂಗಡಿಗಳು ತೆರೆದಿರಬಹುದು. ಪೊಲೀಸರು ತಡರಾತ್ರಿ ಈ ಅಂಗಡಿಗಳನ್ನು ಮುಚ್ಚುವುದಿಲ್ಲ ಈ ಮಾಹಿತಿಯನ್ನು ದಯವಿಟ್ಟು ಸಾರ್ವಜನಿಕರಿಗೆ ತಿಳಿಸಬಹುದು. ಬೆಳಗಾವಿ ಪೊಲೀಸ್ ಆಯುಕ್ತರು ಧನ್ಯವಾದಗಳು

Read More »

ಚಿಕ್ಕೋಡಿಯಲ್ಲಿ ಅರ್ಥಪೂರ್ಣವಾಗಿ ಜರುಗಿದ ಜಿಲ್ಲಾ ‌ಮಟ್ಟದ ಶಿಕ್ಷಕರ ದಿನಾಚರಣೆ

ಚಿಕ್ಕೋಡಿಯಲ್ಲಿ ಅರ್ಥಪೂರ್ಣವಾಗಿ ಜರುಗಿದ ಜಿಲ್ಲಾ ‌ಮಟ್ಟದ ಶಿಕ್ಷಕರ ದಿನಾಚರಣೆ ಚಿಕ್ಕೋಡಿ-“ಗ್ರಾಮೀಣ ಪ್ರದೇಶದಲ್ಲಿಯ ಮಕ್ಕಳಿಗೆ ಉತ್ತಮ ಶಿಕ್ಷಣ ದೊರೆಯಬೇಕೆಂಬ ಉದ್ದೇಶದಿಂದ ತಾಲ್ಲೂಕಿನ ವಾಳಕಿ, ಖಡಕಲಾಟ, ಜನವಾಡ, ಹಿರೇಕೋಡಿ ಹಾಗೂ ಕಮತೇನಹಟ್ಟಿಯ ಪ್ರಾಥಮಿಕ ಶಾಲೆಗಳನ್ನು ಉನ್ನತೀಕರಿಸಲಾಗಿದ್ದು, ಪ್ರತಿ ಶಾಲೆಯಲ್ಲಿ 2 ಕೊಠಡಿ ನಿರ್ಮಾಣಕ್ಕೆ ತಲಾ 25 ಲಕ್ಷ ಅನುದಾನ ಮಂಜೂರಾಗಿದೆ” ಎಂದು ಕರ್ನಾಟಕ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಪ್ರಕಾಶ ಹುಕ್ಕೇರಿ ಹೇಳಿದರು. ಪಟ್ಟಣದ ಪರಟಿ ನಾಗಲಿಂಗೇಶ್ವರ ಕಲ್ಯಾಣ ಮಂಟಪದಲ್ಲಿ ಜಿಲ್ಲಾಡಳಿತ ಹಾಗೂ …

Read More »

ಶಿಕ್ಷಕರ ವೃತ್ತಿ, ಕೇವಲ ಉದ್ಯೋಗವಲ್ಲ; ಅದು ಪವಿತ್ರ ಧರ್ಮ

ಶಿಕ್ಷಕರ ವೃತ್ತಿ, ಕೇವಲ ಉದ್ಯೋಗವಲ್ಲ; ಅದು ಪವಿತ್ರ ಧರ್ಮ, ಸಮಾಜದ ಭವಿಷ್ಯ ಕಟ್ಟುವ ಮಹಾಯಜ್ಞ. ಒಬ್ಬ ವೈದ್ಯನು ರೋಗಿಯನ್ನು ಚಿಕಿತ್ಸೆ ಕೊಡುತ್ತಾನೆ, ವಕೀಲನು ನ್ಯಾಯ ಕೊಡಿಸುತ್ತಾನೆ, ಆದರೆ ಒಬ್ಬ ಶಿಕ್ಷಕನು ಒಳ್ಳೆಯ ವೈದ್ಯ, ಒಳ್ಳೆಯ ವಕೀಲ, ಒಳ್ಳೆಯ ನಾಯಕ, ಒಳ್ಳೆಯ ನಾಗರಿಕನನ್ನು ತಯಾರು ಮಾಡುತ್ತಾನೆ. ಶಿಕ್ಷಕರು ಜ್ಞಾನವನ್ನಷ್ಟೇ ಅಲ್ಲ, ಮೌಲ್ಯಗಳು, ಶಿಸ್ತು, ಮಾನವೀಯತೆ, ಹಾಗೂ ಜೀವನದ ನೈಜ ಅರ್ಥವನ್ನು ಬೋಧಿಸುತ್ತಾರೆ ಎಂದು ಯಡೂರಿನ ಶ್ರೀ ಸಿದ್ದಲಿಂಗಶಿವಾಚಾರ್ಯ ವೇದಗಮ ಸಂಸ್ಕೃತಿ ಶಾಲೆಯ …

Read More »

ಬೆಳಗಾವಿಯ ರಾಜಾ…ಚವ್ಹಾಟಗಲ್ಲಿಯ ಗಣೇಶನ ದರ್ಶನ ಪಡೆದ ಹೆಸ್ಕಾಂ ಅಧಿಕಾರಿಗಳು

ಬೆಳಗಾವಿಯ ರಾಜಾ…ಚವ್ಹಾಟಗಲ್ಲಿಯ ಗಣೇಶನ ದರ್ಶನ ಪಡೆದ ಹೆಸ್ಕಾಂ ಅಧಿಕಾರಿಗಳು ಬೆಳಗಾವಿಯ ರಾಜಾ…ಚವ್ಹಾಟಗಲ್ಲಿಯ ಗಣೇಶ ದರ್ಶನ ಪಡೆದ ಹೆಸ್ಕಾಂ ಅಧಿಕಾರಿಗಳು ಗಣೇಶೋತ್ಸವ ಯಶಸ್ವಿಗೆ ಸಹಕಾರ ಮಂಡಳಿದ ವತಿಯಿಂದ ಅಧಿಕಾರಿಗಳ ಸನ್ಮಾನ ಹೆಸ್ಕಾಂ ಅಧಿಕಾರಿಗಳು ಇಂದು ಬೆಳಗಾವಿಯ ರಾಜಾ ಚವ್ಹಾಟ ಗಲ್ಲಿಯ ಶ್ರೀ ಗಣೇಶನ ದರ್ಶನ ಪಡೆದುಕೊಂಡರು. ಬೆಳಗಾವಿಯ ರಾಜಾ ಚವ್ಹಾಟಗಲ್ಲಿ ಗಣಪತಿಯ ದರ್ಶನವನ್ನು ಇಂದು ಹೆಸ್ಕಾಂ ಎಇಇ ಅಶ್ವೀನ್ ಶಿಂಧೆ, ಮನೋಹರ್ ಸುತಾರ್ ಮತ್ತು ಭಜಂತ್ರಿ ಅವರು ಭೇಟಿ ನೀಡಿ ಗಣೇಶನ …

Read More »

ಬೆಳಗಾವಿ ಉಪನ್ಯಾಸಕಿ ಜ್ಯೋತಿಗೆ ಒಲಿದು ಬಂದ ರಾಜ್ಯಮಟ್ಟದ ಅತ್ಯುತ್ತಮ ಉಪನ್ಯಾಸಕಿ ಪ್ರಶಸ್ತಿ 

ಬೆಳಗಾವಿ: ಬೆಳಗಾವಿಯ ಶಹಾಪುರದ ಚಿಂತಾಮಣರಾವ್ ಪದವಿಪೂರ್ವ ಸರ್ಕಾರಿ ಕಾಲೇಜಿನ ಕನ್ನಡ ಉಪನ್ಯಾಸಕಿ ಜ್ಯೋತಿ ಸಿ.ಎಂ. ಅವರಿಗೆ ಇಂದು ಸಿಎಂ ಸಿದ್ದರಾಮಯ್ಯ ಅವರು ರಾಜ್ಯ ಸರ್ಕಾರದ ಉತ್ತಮ ಉಪನ್ಯಾಸಕಿ ಪ್ರಶಸ್ತಿ ಪ್ರದಾನ ಮಾಡಿದರು. ಶಾಲಾ ಶಿಕ್ಷಣ ಮತ್ತು ಸಾಕ್ಷಾರತಾ ಇಲಾಖೆ ಹಾಗೂ ಉನ್ನತ ಶಿಕ್ಷಣ ಇಲಾಖೆ ವತಿಯಿಂದ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್​ನಲ್ಲಿ ಶುಕ್ರವಾರ ಆಯೋಜಿಸಿದ್ದ ಭಾರತ ರತ್ನ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮದಿನಾಚರಣೆ ನಿಮಿತ್ತ ರಾಜ್ಯಮಟ್ಟದ ಶಿಕ್ಷಕರ ದಿನಾಚರಣೆ ಸಮಾರಂಭದಲ್ಲಿ ಮುಖ್ಯಮಂತ್ರಿಗಳು …

Read More »

ಇವಿಎಂ ಬಗ್ಗೆ ನಿಮಗೆ ಸಂಶಯ ಇದ್ದಲ್ಲಿ ಅಸೆಂಬ್ಲಿ ವಿಸರ್ಜಿಸಿ ಚುನಾವಣೆ ಎದುರಿಸಿ: ಮಾಜಿ ಸಚಿವ ಎಸ್. ಸುರೇಶ್

ಬೆಂಗಳೂರು: 2023 ಮೇ ತಿಂಗಳಿನಲ್ಲಿ ಇವಿಎಂ ಮೂಲಕ ಚುನಾಯಿತವಾದ ಕಾಂಗ್ರೆಸ್​​ನ ಈ ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದಿದೆ. ಇವಿಎಂ ಬಗ್ಗೆ ನಿಮಗೆ ಸಂಶಯ ಇದ್ದಲ್ಲಿ ನೀವು ಅಸೆಂಬ್ಲಿ ವಿಸರ್ಜಿಸಿ ಚುನಾವಣೆಗೆ ಹೋಗಬೇಕು ಎಂದು ಮಾಜಿ ಸಚಿವ ಹಾಗೂ ಶಾಸಕ ಎಸ್. ಸುರೇಶ್ ಕುಮಾರ್ ಅವರು ಸವಾಲು ಹಾಕಿದ್ದಾರೆ. ಬಿಜೆಪಿ ರಾಜ್ಯ ಕಾರ್ಯಾಲಯದಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾವು ಗೆದ್ದಾಗಲೆಲ್ಲ ಚೆನ್ನಾಗಿದೆ. ಗೆಲ್ಲದೇ ಇದ್ದಾಗ ಇವಿಎಂ ಎಂಬ ಧೋರಣೆಯು ಅತ್ಯಂತ ಹಳೆಯ …

Read More »

ನಾಳೆ ಹಿಂದೂ ಮಹಾ ಮಂಡಳ ಗಣಪತಿ ಮೆರವಣಿಗೆ: ಶಿವಮೊಗ್ಗ ನಗರ ಕೇಸರಿಮಯ

ಶಿವಮೊಗ್ಗ : ರಾಜ್ಯದಲ್ಲಿಯೇ ಹೆಸರುವಾಸಿಯಾಗಿರುವ ಶಿವಮೊಗ್ಗದ ಹಿಂದೂ ಮಹಾಮಂಡಲದ ಗಣಪತಿಯ ರಾಜಬೀದಿ ಉತ್ಸವ ನಾಳೆ ನಡೆಯಲಿದೆ. ಗಣೇಶ ಚತುರ್ಥಿ ನಂತರ 11 ದಿನಕ್ಕೆ ಬರುವ ಅನಂತ ಚತುರ್ಥಿಯಂದು ಗಣೇಶನ ರಾಜಬೀದಿ ಉತ್ಸವ ನಡೆಯುವುದು ವಾಡಿಕೆ. ಇದರಿಂದಾಗಿ ನಾಳೆಯ ರಾಜಬೀದಿ ಉತ್ಸವಕ್ಕೆ ಹಿಂದೂ ಕೇಸರಿ ಅಲಂಕಾರ ಸಮಿತಿಯವರು ಶಿವಮೊಗ್ಗ ನಗರವನ್ನು ಸಂಪೂರ್ಣ ಕೇಸರಿಮಯ ಮಾಡಿದ್ದಾರೆ. ಇದಕ್ಕೆ ಪೊಲೀಸ್ ಇಲಾಖೆಯು 1 ಸಾವಿರ ಸಿಬ್ಬಂದಿಯನ್ನ ನಿಯೋಜಿಸಿದೆ. ಸಮುದ್ರ ಮಂಥನದ ಅಲಂಕಾರ : ಹಿಂದೂ ಕೇಸರಿ ಅಲಂಕಾರ …

Read More »