Breaking News

ರಾಜಕೀಯ

ಪಿಎಫ್ಐ ಸಂಘಟನೆ ಬ್ಯಾನ್ ಮಾಡಿರುವ ಕೇಂದ್ರ ಸರ್ಕಾರದ ನಿರ್ಧಾರ ಸ್ವಾಗತಾರ್ಹ: ಕಟೀಲ್​

ಚಿಕ್ಕೋಡಿ(ಬೆಳಗಾವಿ): ದೇಶದಲ್ಲಿ ಪಿಎಫ್ಐ ಸಂಘಟನೆಯನ್ನು ಬ್ಯಾನ್ ಮಾಡಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ನಾನು ಸ್ವಾಗತಿಸುತ್ತೇನೆ‌. ದೇಶದಲ್ಲಿ ವಿದ್ವಂಸಕ ಕೃತ್ಯ ನಡೆಸುವ ಸಂಸ್ಥೆಗಳು, ಭಯೋತ್ಪಾದನಾ ಕೃತ್ಯಗಳಿಗೆ ಪ್ರೇರಣೆ ನೀಡುವ ಶಕ್ತಿಗಳನ್ನ ನಿಯಂತ್ರಣ ಮಾಡುವ ದೃಷ್ಟಿಯಿಂದ ಪಿಎಫ್ಐ ಮತ್ತು ಅದರ ಅಂಗ ಸಂಸ್ಥೆಗಳನ್ನು ಕೇಂದ್ರ ಸರ್ಕಾರ ನಿಷೇಧ ಮಾಡಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಹೇಳಿದ್ದಾರೆ. ಕಾಗವಾಡದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರದ ದಿಟ್ಟ ನಿರ್ಧಾರದಿಂದ ದೇಶದಲ್ಲಿ ಪಿಎಫ್ಐ ಸಂಘಟನೆ …

Read More »

ಆಲಿಯಾ ಜೊತೆ ಹಾಸಿಗೆ ಹಂಚಿಕೊಳ್ಳುವುದು ಕಷ್ಟ: ರಣಬೀರ್‌ಗೆ ಇಂದೆಥಾ ಸಂಕಷ್ಟ..?

ನಟ ರಣಬೀರ್‌ ಕಪೂರ್‌ ಹಾಗೂ ಆಲಿಯಾ ಭಟ್‌ ಬಾಲಿವುಡ್‌ನ ಕ್ಯೂಟ್‌ ಕಪಲ್‌. 2022 ಏಪ್ರಿಲ್‌ 14ರಂದು ಮದುವೆಯಾಗಿರುವ ಈ ಜೋಡಿ ಸದ್ಯ ತಂದೆ-ತಾಯಿಯಾಗುವ ಖುಷಿಯಲ್ಲಿದ್ದಾರೆ. ಜೊತೆಗೆ ರಣಬೀರ್‌ ಕಪೂರ್‌ ಹಾಗೂ ಆಲಿಯಾ ಭಟ್‌ ತೆರೆ ಮೇಲೆ ಮೊದಲ ಬಾರಿಗೆ ಜೋಡಿಯಾಗಿ ಕಾಣಿಸಿಕೊಂಡಿರುವ ‘ಬ್ರಹ್ಮಾಸ್ತ್ರ’ ಚಿತ್ರ ಕೂಡ ಬಾಕ್ಸ್‌ ಆಫೀಸ್‌ನಲ್ಲಿ ಧೂಳೆಬ್ಬಿಸಿದ್ದು, ಸದ್ಯ ಚಿತ್ರತಂಡ ಗೆಲುವಿನ ಖುಷಿಯಲ್ಲಿದೆ.   ರಣಬೀರ್‌ ಕಪೂರ್‌ ಅವರ ವಿವಾದಾತ್ಮಕ ಹೇಳಿಕೆಯೊಂದರಿಂದ ‘ಬ್ರಹ್ಮಾಸ್ತ್ರ’ ಚಿತ್ರಕ್ಕೆ ಬಾಯ್ಕಾಟ್‌ ಬಿಸಿ …

Read More »

PFI ಬ್ಯಾನ್‌ಗೆ ವಿರೋಧವಿಲ್ಲ, RSS ಮೇಲೂ ಸರ್ಕಾರ ಕ್ರಮ ಕೈಗೊಳ್ಳಿ : ಮಾಜಿ ಸಿಎಂ ಸಿದ್ದರಾಮಯ್ಯ ಆಗ್ರಹ

ಬೆಂಗಳೂರು : ದೇಶದಲ್ಲಿ ಪಿಎಫ್‌ ಐ (PFI )ಸಂಘಟನೆಯನ್ನು ಐದು ವರ್ಷ ಕೇಂದ್ರ ಸರ್ಕಾರ ಬ್ಯಾನ್‌ ಮಾಡಿದ ಬೆನ್ನಲ್ಲೇ ಹೊಸ ಬೇಡಿಕೆ ಇಡುವ ಮೂಲಕ ಕಾಂಗ್ರೆಸ್‌ಮುಂದಾಗಿದೆ. ಅದರರಲ್ಲೂಮಾಜಿ ಸಿಎಂ ಸಿದ್ದರಾಮಯ್ಯ ಮಾತನಾಡಿ, PFI ಬ್ಯಾನ್‌ಗೆ ವಿರೋಧವಿಲ್ಲ, RSS ಮೇಲೂ ಸರ್ಕಾರ ಕ್ರಮ ಕೈಗೊಳ್ಳಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.   ಕಾನೂನಿನ ವಿರುದ್ಧ ಇರುವವರ ಮೇಲೆ ಕ್ರಮ ತೆಗೆದುಕೊಂಡರೆ ನಮ್ಮ ವಿರೋಧ ಇಲ್ಲ. ಆರ್‌ಎಸ್‌ಎಸ್‌ ನಿಷೇಧಕ್ಕೂ ಸರ್ಕಾರ ಮುಂದಾಗಲಿ ಸಮಾಜದಲ್ಲಿ ಅಶಾಂತಿ …

Read More »

ಸುಕನ್ಯಾ ಸಮೃದ್ಧಿ ಯೋಜನೆಯಲ್ಲಿ ದೊಡ್ಡ ಬದಲಾವಣೆ! ಇಲ್ಲಿದೆ ಮಾಹಿತಿ

ನವದೆಹಲಿ: ನೀವು ತಂದೆಯಾಗಿದ್ದರೆ ನಿಮ್ಮ ಮಗಳ ಭವಿಷ್ಯವನ್ನು ಆರ್ಥಿಕವಾಗಿ ಸಮೃದ್ಧವಾಗಿರಿಸಬಹುದು. ಮಗಳು ಎಂದಿಗೂ ಹಣದ ಸಮಸ್ಯೆ ಎದುರಿಸಬಾರದು ಅಂತಾ ಬಯಸಿದರೆ ಸರ್ಕಾರದ ಈ ಅದ್ಭುತ ಯೋಜನೆಯಲ್ಲಿ ಹೂಡಿಕೆ ಪ್ರಾರಂಭಿಸಬಹುದು. ಈ ವಿಶೇಷ ಯೋಜನೆಯಲ್ಲಿ ಹೂಡಿಕೆ ಮಾಡುವುದರಿಂದ ನಿಮ್ಮ ಮಗಳು 21 ವರ್ಷಗಳಲ್ಲಿ ಮಿಲಿಯನೇರ್ ಆಗುತ್ತಾಳೆ. ಈ ಯೋಜನೆಯಲ್ಲಿ ನೀವು ಪ್ರತಿದಿನ 416 ರೂ. ಹೂಡಿಕೆ ಮಾಡಬೇಕು. ಈ 416 ರೂ. ಸಣ್ಣ ಮೊತ್ತದ ಹೂಡಿಕೆಯು ನಿಮ್ಮ ಮಗಳಿಗೆ 65 ಲಕ್ಷ ರೂ.ನಷ್ಟು …

Read More »

ದೇಶಾದ್ಯಂತ 5 ವರ್ಷ PFI ನಿಷೇಧ, ಕೇಂದ್ರ ಸರ್ಕಾರ ಘೋಷಣೆ

ನವದೆಹಲಿ: ಕೇಂದ್ರ ಸರ್ಕಾರ ಪಿಎಫ್‌ಐ ಸಂಘಟನೆಯನ್ನು ಬ್ಯಾನ್ ಮಾಡಿದೆ. ಕೇಂದ್ರ ಸರ್ಕಾರದ ಗೃಹ ಇಲಾಖೆ ಪಿಎಫ್‌ಐ ಸಂಘಟನೆಯನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಐದು ವರ್ಷ ಬ್ಯಾನ್ ಮಾಡಿದೆ. ಕಾನೂನು ಬಾಹಿರ ಸಂಘಟನೆ ಎಂದು PFI(ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ) ಮತ್ತು ಅದರ ಸಹವರ್ತಿಗಳು ಅಥವಾ ಅಂಗಸಂಸ್ಥೆಗಳು ಅಥವಾ ರಂಗಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಐದು ವರ್ಷಗಳ ಅವಧಿಗೆ ಬ್ಯಾನ್ ಮಾಡಲಾಗಿದೆ ಎಂದು ಸರ್ಕಾರ ಘೋಷಿಸಿದೆ.   ಇತ್ತೀಚೆಗಷ್ಟೇ ಕರ್ನಾಟಕ ಸೇರಿದಂತೆ ದೇಶಾದ್ಯಂತ …

Read More »

ಹಣದ ದಾಹಕ್ಕೆ ಮಹಿಳೆಯರ ಗರ್ಭಕೋಶ ಕತ್ತರಿಸಿದ ವೈದ್ಯ.. ಸಿಎಂ ಮನೆಗೆ ಪಾದಯಾತ್ರೆಗೆ ನಿರ್ಧರಿಸಿದ ಮಹಿಳೆಯರು

ಹಾವೇರಿ: ಸರ್ಕಾರಿ ವೈದ್ಯನ ಹಣದ ದಾಹಕ್ಕೆ ಗರ್ಭಕೋಶ ಕಳೆದುಕೊಂಡ ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕಿನ ವಿವಿಧ ಗ್ರಾಮದ ಮಹಿಳೆಯರು ಇದೀಗ ಮತ್ತೆ ಸಿಎಂ ಮನೆಗೆ ಪಾದಯಾತ್ರೆ ಕೈಗೊಳ್ಳುವ ನಿರ್ಧಾರಕ್ಕೆ ಬಂದಿದ್ದಾರೆ. ಈ ಕುರಿತಂತೆ ರಾಣೆಬೆನ್ನೂರಲ್ಲಿ ಸಭೆ ನಡೆಸಿದ ಮಹಿಳೆಯರು ಬರುವ ತಿಂಗಳು 17 ರಂದು ಸಿಎಂ ಶಿಗ್ಗಾಂವಿ ನಿವಾಸಕ್ಕೆ ಪಾದಯಾತ್ರೆ ಕೈಗೊಳ್ಳುವ ನಿರ್ಧಾರಕ್ಕೆ ಬಂದಿದ್ದಾರೆ. ರಾಣೆಬೆನ್ನೂರು ತಾಲೂಕು ಆಸ್ಪತ್ರೆಯ ವೈದ್ಯಾಧಿಕಾರಿ ಪಿ ಶಾಂತ ತಾಲೂಕಿನ ಸುಮಾರು 15 ನೂರಕ್ಕೂ ಅಧಿಕ ಮಹಿಳೆಯರ …

Read More »

ಬೆಳಗಾವಿ ಜಿಲ್ಲೆಯ ಯುವಕ. ಪ್ರಿಯತಮೆಯೊಂದಿಗೆ ಜಗಳ.. ಮನನೊಂದು ಕೆಎಸ್‌ಆರ್‌ಪಿ ಟ್ರೈನಿ ನೇಣಿಗೆ ಶರಣು

ಬೆಂಗಳೂರು: ಕೆಎಸ್‌ಆರ್‌ಪಿ 4ನೇ ಬೆಟಾಲಿಯನ್‌ನಲ್ಲಿ ತರಬೇತಿ ಪಡೆಯುತ್ತಿದ್ದ ಟ್ರೈನಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಚಿಕ್ಕಪ್ಪ ಅಣ್ಣಪ್ಪ ಅಂಬಿ ಆತ್ಮಹತ್ಯೆಗೆ ಶರಣಾಗಿರುವ ಯುವಕ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಚಿಕ್ಕಪ್ಪ, ಆರು ತಿಂಗಳಿಂದ ಮಡಿವಾಳದಲ್ಲಿರುವ ಕೆಎಸ್‌ಆರ್‌ಪಿ 4ನೇ ಬೆಟಾಲಿಯನ್‌ನಲ್ಲಿ ತರಬೇತಿ ಪಡೆಯುತ್ತಿದ್ದರು. ಸೆ.25ರಂದು ಹೊರಗಡೆ ಹೋದಾಗ ನಾಪತ್ತೆಯಾಗಿದ್ದರು. ಈ ಸಂಬಂಧ ಬೆಟಾಲಿಯನ್‌ನ ಹಿರಿಯ ಅಧಿಕಾರಿಗಳು ನಾಪತ್ತೆ ಪ್ರಕರಣ ದಾಖಲಿಸಿದ್ದರು. ಆದರೆ ಸೆ.26ರಂದು ಸಂಜೆ ಬೆಟಾಲಿಯನ್‌ನ ಬ್ಯಾರಕ್‌ಗೆ ಹೋದಾಗ ನೇಣು ಬಿಗಿದ ಸ್ಥಿತಿಯಲ್ಲಿ …

Read More »

ಹುಕ್ಕೇರಿ ಬಳಿ ಅಪರಿಚಿತ ವಾಹನ ಡಿಕ್ಕಿ: ಇಬ್ಬರು ಯುವಕರ ಸಾವು

ಬೆಳಗಾವಿ ಜಿಲ್ಲೆ): ಹುಕ್ಕೇರಿ ಸಮೀಪದ ಹೊಳೆಮ್ಮನ ಗುಡಿ ಹಳ್ಳದ ಹತ್ತಿರ ಸೋಮವಾರ ಸಂಜೆ ಅಪರಿಚಿತ ವಾಹನ ಡಿಕ್ಕಿ ಹೊಡೆದು, ಬೈಕ್‌ ಮೇಲೆ ಹೊರಟಿದ್ದ ಇಬ್ಬರು ಯುವಕರು ಮೃತಪಟ್ಟಿದ್ದಾರೆ. ಸವದತ್ತಿ ತಾಲ್ಲೂಕಿನ ಚಚಡಿ ಗ್ರಾಮದ ಮಲ್ಲನಗೌಡ ಯಲ್ಲನಗೌಡ ಪಾಟೀಲ (22) ಹಾಗೂ ಸಿದ್ಧಾರೂಢ ವೀರಭದ್ರ ಕರೋಶಿ (24) ಮೃತಪಟ್ಟವರು. ಭಾರಿ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಒಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಇನ್ನೊಬ್ಬರನ್ನು ಬೆಳಗಾವಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತೀವ್ರ ರಕ್ತಸ್ರಾವ ಆಗಿದ್ದರಿಂದ ಅವರು …

Read More »

ದಸರಾ ಕವಿಗೋಷ್ಠಿ ಆಹ್ವಾನ ಪತ್ರಿಕೆಯಲ್ಲಿ ನಿಧನರಾದವರ ಹೆಸರು, ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ

ಮೈಸೂರು: ನಾಡಹಬ್ಬ ದಸರಾದ ಪ್ರಧಾನ ಕವಿಗೋಷ್ಠಿಯ ಆಹ್ವಾನ ಪತ್ರಿಕೆಯಲ್ಲಿ ನಿಧನರಾದವರ ಹೆಸರನ್ನು ಪ್ರಕಟಿಸಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಎಡವಟ್ಟು ಮಾಡಿಕೊಂಡಿದೆ. ಪ್ರಧಾನ ಕವಿಗೋಷ್ಟಿಯಲ್ಲಿ ರಾಜಕೀಯ ಮುಖಂಡರು ಭಾಗವಹಿಸಲಿದ್ದು, ನಿಧನರಾದ ಆಕಾಶವಾಣಿ ನಿಲಯ ನಿರ್ದೇಶಕ ಜಿ.ಕೆ ರವೀಂದ್ರ ಕುಮಾರ್ ಅವರ ಹೆಸರು ಆಹ್ವಾನ ಪತ್ರಿಕೆಯಲ್ಲಿದೆ.   ಅಕ್ಟೋಬರ್ 3 ರಂದು ಮೈಸೂರು ವಿಶ್ವವಿದ್ಯಾಲಯದ ಮಾನಸ ಗಂಗೋತ್ರಿ ಸೆನೆಟ್ ಸಭಾಂಗಣದಲ್ಲಿ ಬೆಳಗ್ಗೆ 10.30ಕ್ಕೆ ಕವಿಗೋಷ್ಠಿ ನಡೆಯಲಿದೆ. ಒಟ್ಟು 37 ಮಂದಿ ಕವಿಗೋಷ್ಠಿಯಲ್ಲಿ ಭಾಗವಹಿಸಲಿದ್ದಾರೆ. …

Read More »

ಯುವ ದಸರಾ 2022: ನೋಡುಗರ ಗಮನ ಸೆಳೆದ ರಾಜ್ಯ ಮಟ್ಟದ ದೇಹದಾರ್ಢ್ಯ ಸ್ಪರ್ಧೆ

ಶಿವಮೊಗ್ಗ: ಯುವ ದಸರಾ ಹಿನ್ನೆಲೆ ನಗರದ ಕುವೆಂಪು ರಂಗಮಂದಿರದಲ್ಲಿ ರಾಜ್ಯ ಮಟ್ಟದ ದೇಹದಾರ್ಢ್ಯ ಸ್ಪರ್ಧೆ ಆಯೋಜಿಸಲಾಗಿತ್ತು. ಸ್ಪರ್ಧೆಯಲ್ಲಿ ರಾಜ್ಯದ ಬೇರೆ ಬೇರೆ ಜಿಲ್ಲೆಗಳ 134ಕ್ಕೂ ಹೆಚ್ಚು ಸ್ಪರ್ಧಿಗಳು ಭಾಗವಹಿಸಿದ್ದರು. ಸ್ಪರ್ಧೆಯನ್ನು ಐದು ವಿಭಾಗದಲ್ಲಿ ವಿಂಗಡಿಸಲಾಗಿತ್ತು. ಯುವಕರು ತಮ್ಮ ಕಟ್ಟು ಮಸ್ತಾದ ದೇಹ ಪ್ರದರ್ಶಿಸುವ ಮೂಲಕ ಎಲ್ಲರ ಗಮನ ಸೆಳೆದರು. ಸ್ಪರ್ಧೆಯ ತೀರ್ಪುಗಾರರಾಗಿ ರಾಜ್ಯ ಬಾಡಿ ಬಿಲ್ಡಿಂಗ್ ಅಸೋಸಿಯೇಷನ್ ಸದಸ್ಯರು ಭಾಗವಹಿಸಿದ್ದರು.

Read More »