Breaking News

ರಾಜಕೀಯ

ಆಲಮಟ್ಟಿ ಜಲಾಶಯದಿಂದ ಅಪಾರ ನೀರು ಬಿಡುಗಡೆ

ಮಹಾರಾಷ್ಟ್ರದ ಕೃಷ್ಣಾ ಕಣಿವೆಯಲ್ಲಿ ಸುರಿಯುತ್ತಿರುವ ಮಳೆ ಹಾಗೂ ಘಟಪ್ರಭಾದಿಂದ ಹೆಚ್ಚು ನೀರು ಹರಿದು ಬರುತ್ತಿರುವ ಕಾರಣ ವಿಜಯಪುರ ಜಿಲ್ಲೆಯ ಆಲಮಟ್ಟಿಯ ಲಾಲ್ ಬಹದ್ದೂರ್ ಶಾಸ್ತ್ರಿ ಸಾಗರಕ್ಕೆ ಅಪಾರಪ್ರಮಾಣದ ನೀರು ಹರಿದುಬರುತ್ತಿದೆ.   ಜಲಾಶಯದ 26 ಕ್ರಸ್ಟ್ ಗೇಟ್ಗಳ ಮೂಲಕ ಸೋಮವಾರ ಸಂಜೆಯಿಂದ 1,25000 ಕ್ಯುಸೆಕ್ ನೀರನ್ನು ನದಿ ತಳಪಾತ್ರಕ್ಕೆ ಹರಿಸಲಾಗುತ್ತಿದೆ. ಕಳೆದ 20 ದಿನಗಳಿಂದ ಶಾಂತವಾಗಿದ್ದ ಕೃಷ್ಣಾನದಿಯಲ್ಲಿ ಏಕಾಏಕಿ ಪ್ರವಾಹ ಉಂಟಾಗಿದ್ದು. ಇದು ತಾತ್ಕಾಲಿ ಎನ್ನಲಾಗುತ್ತಿದೆ. ನಿನ್ನೆ ಬೆಳಗ್ಗೆ 16 …

Read More »

ಸಿದ್ದಾರ್ಥ ಹೆಗ್ಡೆ ಕನಸಿನ ಕಾಫಿ ಡೇ ಸಾಲ ತಗ್ಗಿಸಿದ ಗಟ್ಟಿಗಿತ್ತಿ ಮಾಳವಿಕಾ

ಕೆಫೆ ಕಾಫಿ ಡೇ ಸಂಸ್ಥಾಪಕ, ಮಾಲೀಕ ವಿಜಿ ಸಿದ್ದಾರ್ಥ ಅಕಾಲಿಕ ಮರಣದ ಬಳಿಕ ಕಾಫಿ ಡೇ ಸಂಸ್ಥೆಯ ಮಾರುಕಟ್ಟೆ ಮೌಲ್ಯ ದಿನದಿನಕ್ಕೆ ಕುಸಿಯುತ್ತಿದೆ, ಷೇರುಪೇಟೆಯಲ್ಲಿ ಕಾಫಿ ಡೇ ಷೇರುಗಳು ನೆಲಕಚ್ಚಿವೆ ಎಂಬ ಕಹಿ ಸುದ್ದಿ ನಡುವೆ, ಸಾಲದ ಹೊರೆ ತಗ್ಗಿರುವ ಸಿಹಿ ಸುದ್ದಿ ಬಂದಿದೆ.   ವಿಜಿ ಸಿದ್ಧಾರ್ಥ ಅವರು ಸ್ಥಾಪಿಸಿದ್ಧ ಕಾಫಿ ಡೇ ಗ್ಲೋಬಲ್ ಲಿಮಿಟೆಡ್ ಮತ್ತು ಅಮಲ್ಗಮೇಟೆಡ್ ಬೀನ್ ಕಾಫಿ ಟ್ರೇಡಿಂಗ್ ಕೋ ಲಿಮಿಟೆಡ್‌ನ ನಾನ್ ಎಕ್ಸಿಕ್ಯೂಟಿವ್ …

Read More »

ಸಹ ಶಿಕ್ಷಕರ ನೇಮಕಾತಿ ಅಕ್ರಮ ಬಗೆದಷ್ಟೂ ಆಳ. ಬೇನಾಮಿಗಳಿಗೆ ಟೀಚರ್ ಭಾಗ್ಯ!

ಬೆಂಗಳೂರು :ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದ ಅವಧಿಯಲ್ಲಿ ನಡೆದಿರುವ ಶಿಕ್ಷಕರ ನೇಮಕಾತಿ ಹಗರಣದ ಸಿಐಡಿ ತನಿಖೆಯಲ್ಲಿ ಮತ್ತಷ್ಟು ರೋಚಕ ಸಂಗತಿಗಳು ಬಯಲಾಗಿವೆ. ಮುಖ್ಯ ಆಯ್ಕೆ ಪಟ್ಟಿಯಲ್ಲಿ ಸ್ಥಾನ ಪಡೆದು ಕರ್ತವ್ಯಕ್ಕೆ ಹಾಜರಾಗದ ಅಭ್ಯರ್ಥಿಗಳ ಬದಲಿಗೆ ಅದೇ ಹೆಸರಿನ, ಪರೀಕ್ಷೆಯನ್ನೇ ಬರೆಯದ, ಅರ್ಹತೆಯೂ ಇಲ್ಲದ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶ ಪ್ರತಿ ಕೊಟ್ಟಿರುವುದು ತನಿಖೆಯಲ್ಲಿ ದೃಢಪಟ್ಟಿದೆ.   2012-13 ಹಾಗೂ 2014-15ನೇ ಸಾಲಿನಲ್ಲಿ ಸರ್ಕಾರಿ ಪ್ರೌಢಶಾಲೆಗಳ ಗ್ರೇಡ್-2 ಸಹಶಿಕ್ಷಕರು ಹಾಗೂ ಗ್ರೇಡ್-1 ದೈಹಿಕ ಶಿಕ್ಷಣ …

Read More »

ಗಣೇಶ ಹುಕ್ಕೇರಿ, ಪ್ರಕಾಶ ಹುಕ್ಕೇರಿ ನೇತೃತ್ವದಲ್ಲಿ ಸರಳವಾಗಿ ಜರುಗಿದ ಗಣಹೋಮ

ಚಿಕ್ಕೋಡಿ ತಾಲೂಕಿನ ಯಕ್ಸಂಬಾ ಪಟ್ಟಣದಲ್ಲಿ ಪ್ರತಿ‌ ವರ್ಷ ಅದ್ದೂರಿಯಾಗಿ ಜರುಗುತ್ತಿದ್ದ ಗಣಹೋಮವು ಈ ವರ್ಷ ಎಂಎಲ್ಸಿ ಪ್ರಕಾಶ ಹುಕ್ಕೇರಿಯವರ ಸಹೋದರ ಕೇದಾರಿ ಹುಕ್ಕೇರಿ ನಿಧನ ಹೊಂದಿದ ಹಿನ್ನಲೆಯಲ್ಲಿ ಈ ಬಾರಿ ಸರಳವಾಗಿ ಗಣಹೋಮ ಜರುಗಿತು. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಯಕ್ಸಂಬಾ ಪಟ್ಟಣದಲ್ಲಿ ಹನುಮಾನ ಗಣೇಶ ಮಂಡಳ ವತಿಯಿಂದ ಶಾಸಕ ಗಣೇಶ ಹುಕ್ಕೇರಿ ಹಾಗೂ ಎಂಎಲ್ಸಿ ಪ್ರಕಾಶ ಹುಕ್ಕೇರಿ ನೇತೃತ್ವದಲ್ಲಿ ಪ್ರತಿವರ್ಷ ಗಣಹೋಮ ಅದ್ದೂರಿಯಾಗಿ ಜರಗುತಿತ್ತ. ಆದರೆ ಈ ಬಾರಿ …

Read More »

ಮತ್ತೆ ಮುನ್ನೆಲೆಗೆ ಬಂದ ಸಿದ್ದು ದುಬಾರಿ ವಾಚ್ ವಿವಾದ

ಬೆಂಗಳೂರು,ಸೆ.13- ಪಿಎಸ್‍ಐ ನೇಮಕಾತಿ ಅಕ್ರಮ ಹಾಗೂ 40% ಕಮೀಷನ್ ಆರೋಪ ಮಾಡುತ್ತಿರುವ ಪ್ರತಿಪಕ್ಷಗಳ ಆರೋಪಕ್ಕೆ ತಿರುಗೇಟು ನೀಡಲು ಮುಂದಾಗಿರುವ ಬಿಜೆಪಿ ಮತ್ತೆ ಹೊಬ್ಲೆಟ್ ವಾಚ್ ವಿವಾದವನ್ನು ಮುಂದಿಡಲು ತೀರ್ಮಾನಿಸಿದೆ. ಪ್ರವಾಹ ಭ್ರಷ್ಟಾಚಾರ ಇನ್ನಿತರೆ ವಿಷಗಳನ್ನು ಮುಂದಿಟ್ಟುಕೊಂಡು ಸರ್ಕಾರವನ್ನು ಹಣಿಯಲು ಯತ್ನಿಸುತ್ತಿರುವ ವಿಪಕ್ಷ ಕಾಂಗ್ರೆಸ್‍ಗೆ ಮಾಜಿ ಸಿಎಂ ಸಿದ್ದರಾಮಯ್ಯ ಅವರ ದುಬಾರಿ ಹೊಬ್ಲೊಟ್ ಪ್ರಕರಣವನ್ನು ಲೋಕಾಯುಕ್ತ ತನಿಖೆಗೆ ವಹಿಸುವಂತೆ ಪಟ್ಟುಹಿಡಿದು ಒತ್ತಾಯಿಸಲಿದೆ.   2016ರಲ್ಲಿ ಸಿದ್ದರಾಮಯ್ಯ ಸಿಎಂ ಆಗಿದ್ದ ಸಂದರ್ಭದಲ್ಲಿ ರಾಜಕೀಯ …

Read More »

ಗೋವಾ ಮದ್ಯ ಅಕ್ರಮ ಸಾಗಾಟ: ಕಾರು ಬಿಟ್ಟು ಪರಾರಿಯಾದ ಚಾಲಕ

ಕಾರವಾರ (ಉತ್ತರಕನ್ನಡ): ಅಕ್ರಮವಾಗಿ ಕಾರಿನಲ್ಲಿ ಗೋವಾ ಮದ್ಯ ಸಾಗಾಟ ಮಾಡುತ್ತಿದ್ದ ಆರೋಪಿಯೊಬ್ಬ, ಪೊಲೀಸರು ತಪಾಸಣೆ ಮಾಡುತ್ತಿರುವುದನ್ನು ಕಂಡು ಕಾರನ್ನು ಹೆದ್ದಾರಿಯಲ್ಲಿಯೇ ಬಿಟ್ಟು ಪರಾರಿಯಾಗಿದ್ದಾನೆ. ಈ ಘಟನೆ ತಾಲೂಕಿನ ಸದಾಶಿವಗಡದ ಬಳಿ ಸೋಮವಾರ ತಡರಾತ್ರಿ ನಡೆದಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಸುಮನ್​ ಪೆನ್ನೇಕರ್ ಅವರಿಗೆ ಬಂದ ಮಾಹಿತಿಯಂತೆ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎಸ್. ಬದರಿನಾಥ ಅವರ ಮಾರ್ಗದರ್ಶನದಲ್ಲಿ ಜಿಲ್ಲಾ ಪೊಲೀಸ್ ವಿಶೇಷ ವಿಭಾಗದ ಪಿಎಸ್ಐ ಪ್ರೇಮನಗೌಡ ಪಾಟೀಲ್, ಹೆಡ್ ಕಾನ್ಸ್​​ಟೇಬಲ್​ ರಾಘವೇಂದ್ರ …

Read More »

ವಿಜಯಪುರ ನಗರದಲ್ಲಿ ಮಳೆಯಿಂದ ಆವಾಂತರ: ಹಾನಿಗೀಡಾದ ಪ್ರದೇಶಕ್ಕೆ ಶಾಸಕ ಚವ್ಹಾಣ ಭೇಟಿ

ಕಳೆದ ಎರಡು ದಿನಗಳಿಂದ ವಿಜಯಪುರ ನಗರದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆ ಹಲವು ಆವಾಂತರವನ್ನೇ ಸೃಷ್ಟಿ ಮಾಡಿದೆ, ಹಲವು ಮನೆಗಳಿಗೆ ನೀರು ನುಗ್ಗಿ ರಾತ್ರೀ ಇಡೀ ಜಾಗರಣೆ ಮಾಡುವಂತಹ ಪರಿಸ್ಥಿತಿ ಕೂಡ ಕೆಲವೆಡೆ ನಿರ್ಮಾಣವಾದರೆ ಹಲವು ಮನೆಗಳು ನೆಲಕ್ಕುರುಳಿವೆ. ಹೌದು ಕಳೆದ‌ಎರಡು ದಿನಗಳಿಂದ ಸುರಿಯುತ್ತಿರುವ ಮಳೆಯ ಪರಿಣಾಮ ವಿಜಯಪುರ ನಗರದಲ್ಲಿ ಹಲವು ಆವಾಂತರಕ್ಕೆ ಕಾರಣಾವಾಗಿದೆ. ನಿನ್ಮೆ ಅಂಜೆ ಸುರಿದ ಮಳೆಯಿಂದಾಗಿ ನಗರದ ಕೆ ಸಿ ಮಾರುಕಟ್ಟೆಯಲ್ಲಿ ತಳ್ಳು ಗಾಡಿ ವ್ಯಾಪಾರಸ್ಥರು ಹಾಗೂ …

Read More »

ಅಭಿವೃದ್ಧಿ ಕಾಮಗಾರಿಗಳನ್ನು ವೀಕ್ಷಣೆ ಮಾಡಲು ಸಂಸದೆ ಮಂಗಳಾ ಅಂಗಡಿ ರವರು ಬೆಳಗಾವಿಯ ರೈಲು ನಿಲ್ದಾಣಕ್ಕೆ ಭೇಟಿ

ಬೆಳಗಾವಿ ನಗರದ ರೈಲು ನಿಲ್ದಾಣದಲ್ಲಿ ಆಗುತ್ತಿರುವ ವಿವಿಧ ಹಂತಗಳ ಅಭಿವೃದ್ಧಿ ಕಾಮಗಾರಿಗಳನ್ನು ವೀಕ್ಷಣೆ ಮಾಡಲು ಸಂಸದೆ ಮಂಗಳಾ ಅಂಗಡಿ ರವರು ಬೆಳಗಾವಿಯ ರೈಲು ನಿಲ್ದಾಣಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಹೌದು ಬೆಳಗಾವಿಯ ರೈಲು ನಿಲ್ದಾಣ ಕಾಮಗಾರಿಯು ನಡೆದಿರುವ ಸ್ಥಳಕ್ಕೆ ಇಂದು ಮಂಗಳವಾರ ಭೇಟಿ ನೀಡಿದ ಸಂಸದೆ ಮಂಗಳಾ ಅಂಗಡಿರವರು ಇಂದು ಮಂಗಳವಾರ ರೈಲು ನಿಲ್ದಾಣದಲ್ಲಿ ಮಾಡಲಾಗುತ್ತಿರುವ ವಿವಿಧ ಕಾಮಗಾರಿಗಳನ್ನು ಕುರಿತಂತೆ ಪರಿಶೀಲನೆ ನಡೆಸಿದರು. ಮುಖ್ಯ ಪ್ರವೇಶ ದ್ವಾರದ ಮೂಲಕ …

Read More »

ರಾಜ ಕಾಲುವೆ ಒತ್ತುವರಿ ತೆರವಿನಲ್ಲಿ ಯಾವುದೇ ತಾರತಮ್ಯವಿಲ್ಲ; ಸಚಿವ ಆರ್. ಅಶೋಕ್ ಖಡಕ್ ನುಡಿ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ರಾಜ ಕಾಲುವೆ ಒತ್ತುವರಿ ಮಾಡಿಕೊಂಡು ಕಟ್ಟಿಕೊಂಡಿರುವ ಕಟ್ಟಡಗಳನ್ನು ತೆರವುಗೊಳಿಸಲಾಗುತ್ತಿದೆ. ಸೋಮವಾರದಿಂದಲೇ ಬುಲ್ಡೋಜರ್, ಜೆಸಿಬಿ ಅಬ್ಬರಿಸುತ್ತಿದ್ದು ಇಂದೂ ಕೂಡ ಕಾರ್ಯಾಚರಣೆ ಮುಂದುವರೆದಿದೆ. ನೂರಾರು ಕಟ್ಟಡಗಳು ರಾಜಕಾಲುವೆ ಒತ್ತುವರಿ ಮಾಡಿಕೊಂಡು ನಿರ್ಮಾಣವಾಗಿವೆ ಎನ್ನಲಾಗಿದ್ದು, ಇವುಗಳಲ್ಲಿ ಬಹಳಷ್ಟು ಕಟ್ಟಡಗಳು ಪ್ರಭಾವಿ ವ್ಯಕ್ತಿಗಳಿಗೆ ಸೇರಿವೆ ಎನ್ನಲಾಗಿದೆ. ಹೀಗಾಗಿ ಜನಸಾಮಾನ್ಯರಿಗೆ ಮಾತ್ರ ಈ ತೆರವು ಕಾರ್ಯಾಚರಣೆ ಅನ್ವಯ ಎಂಬ ಆರೋಪ ಕೇಳಿ ಬರುತ್ತಿದ್ದರ ಮಧ್ಯೆ ಸಚಿವ ಅಶೋಕ್ ಮಹತ್ವದ ಹೇಳಿಕೆ ನೀಡಿದ್ದಾರೆ. ಬೆಂಗಳೂರಿನಲ್ಲಿ …

Read More »

ನಟ ರಮೇಶ್ ಅರವಿಂದ್ ಗೆ ಗೌರವ ಡಾಕ್ಟರೇಟ್ ಗೆ ಆಯ್ಕೆ

ರಮೇಶ್ ಅರವಿಂದ್ ಅಲ್ಲದೇ ಸಮಾಜ ಸೇವೆಯಲ್ಲಿ ಗುರುತಿಸಿಕೊಂಡಿರುವ ವಿ.ರವಿಚಂದರ್, ಧಾರ್ಮಿಕ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಅಕ್ಕ ಅನ್ನಪೂರ್ಣ ತಾಯಿಗೆ ಗೌರವ ಡಾಕ್ಟರೇಟ್ ಪ್ರಶಸ್ತಿ ಘೋಷಿಸಲಾಗಿದ್ದು, ಸೆಪ್ಟೆಂಬರ್ 14ರಂದು ಬೆಂಗಳೂರಿನ ಸುವರ್ಣ ಸೌಧದಲ್ಲಿ ನಡೆಯಲಿರುವ ಘಟಿಕೋತ್ಸವದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯ ತಿಳಿಸಿದೆ. ಕನ್ನಡ ಚಿತ್ರರಂಗಕ್ಕೆ ಸಲ್ಲಿಸಿದ ಸೇವೆಯನ್ನು ಗುರುತಿಸಿ ಗೌರವ ಡಾಕ್ಟರೇಟ್ ಗೆ ಆಯ್ಕೆ ಮಾಡಲಾಗಿದೆ ಎಂದು ವಿವಿ ತಿಳಿಸಿದೆ. ವಿಶೇಷ ಅಂದರೆ ಮೊನ್ನೆಯಷ್ಟೇ ರಮೇಶ್ …

Read More »