Breaking News

ರಾಜಕೀಯ

ನಾರಾಯಣ ಗುರುಗಳಿಗೆ ಸಿಎಂ ಅಪಮಾನ: ಬೇಸರ ಹೊರ ಹಾಕುತ್ತಲೇ ಎಚ್ಚರಿಕೆ ಸಂದೇಶ ರವಾನಿಸಿದ ಪ್ರಣವಾನಂದ ಸ್ವಾಮೀಜಿ

ದಾವಣಗೆರೆ: ಶ್ರೀ ನಾರಾಯಣ ಗುರುಗಳ ಜಯಂತಿ ದಿನದಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನಡೆ ವಿರುದ್ಧ ಡಾ. ಪ್ರಣವಾನಂದ ಸ್ವಾಮೀಜಿ ಅಸಮಾಧಾನ ಹೊರಹಾಕಿದ್ದಾರೆ. ವಿಶ್ವಕ್ಕೆ ಸಮಾನತೆ ಸಾರಿರುವ ವಿಶ್ವಗುರು ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ದಿನದಂದು ನಾರಾಯಣ ಗುರುಗಳ ಭಾವಚಿತ್ರಕ್ಕೆ ಮುಖ್ಯಮಂತ್ರಿಗಳು ಪೂಜೆ ಸಲ್ಲಿಸಲಿಲ್ಲ. ವಿಧಾನಸಭೆಯಲ್ಲಿ ಎಲ್ಲ ಶರಣರ ಭಾವಚಿತ್ರಕ್ಕೆ ಅವರ ಜಯಂತಿ ದಿನದಂದು ಪುಷ್ಪ ನಮನ ಸಲ್ಲಿಸಿ ಪೂಜೆ ಸಲ್ಲಿಸುವ ಪದ್ಧತಿ ನಡೆದು ಬಂದಿದೆ. ಆದರೆ, ವಿಧಾನಸೌಧದ ಬ್ಯಾಂಕ್ವೆಟ್​ ಹಾಲ್​ನಲ್ಲಿ …

Read More »

ಬೆಳಗಾವಿ, ಧಾರವಾಡ ಮತ್ತು ಹಾವೇರಿಯಲ್ಲಿ ಸೆ.12ರಂದು ಜೋರು ಮಳೆ ?ಇಲ್ಲಿದೆ ಅಲರ್ಟ್ ವಿವರ..

ಬೆಂಗಳೂರು: ರಾಜ್ಯದ ಹಲವೆಡೆ ಸುರಿಯುತ್ತಿರುವ ಮಳೆ ತಗ್ಗಿದೆ. ಭಾನುವಾರ ಕೆಲವೆಡೆ ಮಾತ್ರ ಮಳೆಯಾಗಿದ್ದು, ಚಿಕ್ಕಮಗಳೂರಿನ ಕೊಟ್ಟಿಗೆಹಾರ 11, ಕೊಡಗಿನ ಭಾಗಮಂಡಲದಲ್ಲಿ 7 ಸೆಂ.ಮೀ. ಮಳೆ ಬಿದ್ದಿದೆ. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ ಮತ್ತು ಹಾವೇರಿಯಲ್ಲಿ ಸೆ.12ರಂದು ಜೋರು ಮಳೆ ಬೀಳುವ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಕೊಟ್ಟಿದೆ. ಸೆ.13ರಿಂದ ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಮಳೆ ಇಳಿಕೆಯಾಗಲಿದೆ. ಮಲೆನಾಡು ಮತ್ತು ದಕ್ಷಿಣ ಒಳನಾಡಿನಲ್ಲಿ ನಾಲ್ಕೈದು ದಿನಗಳಿಂದ …

Read More »

ಭ್ರಷ್ಟರ ಶಿಕಾರಿಗೆ ಲೋಕಾ ತಯಾರಿ: ಎಸಿಬಿ ಸಿಬ್ಬಂದಿ, ಕಡತಗಳ ಹಸ್ತಾಂತರ ಇಂದು ಪೂರ್ಣ

ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಸ್ಥಾಪನೆಯಿಂದ ಖದರ್ ಕಳೆದುಕೊಂಡು ಮಂಕಾಗಿದ್ದ ಲೋಕಾಯುಕ್ತಕ್ಕೀಗ ಹಳೇ ಖದರ್ ಮರಳಿದೆ. ಸೋಮವಾರದಿಂದ ಭ್ರಷ್ಟರ ಶಿಕಾರಿ ಮತ್ತೆ ಶುರುವಾಗಲಿದೆ. ಎಸಿಬಿಯಲ್ಲಿದ್ದ 141ಕ್ಕೂ ಹೆಚ್ಚು ಕಾನ್​ಸ್ಟೆಬಲ್ ಹಾಗೂ ಹೆಡ್ ಕಾನ್​ಸ್ಟೆಬಲ್​ಗಳು ಈಗಾಗಲೇ ಲೋಕಾಯುಕ್ತಕ್ಕೆ ವರ್ಗಾವಣೆಯಾಗಿದ್ದಾರೆ. ಸೋಮವಾರ ಸಂಜೆ ವೇಳೆಗೆ ಎಲ್ಲ ಪ್ರಕರಣಗಳ ಕಡತಗಳೂ ಲೋಕಾಯುಕ್ತ ಸುಪರ್ದಿಗೆ ಸೇರಿ ಎಸಿಬಿ ಸಂಪೂರ್ಣ ಇತಿಹಾಸ ಸೇರಲಿದೆ. ಏತನ್ಮಧ್ಯೆ ಎಸಿಬಿ ದಾಳಿಗೊಳಗಾದರೂ ನಿರಾಳರಾಗಿದ್ದ ಸರ್ಕಾರಿ ಅಧಿಕಾರಿಗಳು ಹಾಗೂ ರಾಜಕಾರಣಿಗಳಿಗೆ ಲೋಕಾಯುಕ್ತ ಭೀತಿ …

Read More »

ಇ.ಡಿ.ದಾಳಿ ಪ್ರಮಾಣ ಶೇ.27ರಷ್ಟು ಹೆಚ್ಚಳ; 2014ರಿಂದ 2022ರ ವರೆಗೆ 3,010 ದಾಳಿ

ನವದೆಹಲಿ: ದೇಶದಲ್ಲಿ ಆರ್ಥಿಕ ಅಪರಾಧಗಳ ಬಗ್ಗೆ ವಿಶೇಷವಾಗಿ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯ (ಇ.ಡಿ.) ನಡೆಸುತ್ತಿರುವ ದಾಳಿಗಳ ಪ್ರಮಾಣ ಇತ್ತೀಚಿನ ವರ್ಷಗಳಲ್ಲಿ ಹೆಚ್ಚಾಗಿದೆ. ಜತೆಗೆ ಈ ದಾಳಿಗಳ ವೇಳೆ 1 ಲಕ್ಷ ಕೋಟಿ ರೂ.ಗಳನ್ನು ವಶಕ್ಕೆ ಪಡೆದುಕೊಂಡಿದೆ. 2004ರಿಂದ 2014ರ ವರೆಗೆ ಇ.ಡಿ. ಕೇವಲ 112 ದಾಳಿಗಳನ್ನು ನಡೆಸಿದ್ದರೆ, 2014ರಿಂದ 2022ರವರೆಗೆ 3,010 ದಾಳಿಗಳನ್ನು ನಡೆಸಲಾಗಿದೆ. ಶೇಕಡಾವಾರು ಲೆಕ್ಕಾಚಾರದಲ್ಲಿ ಹೇಳುವುದಿದ್ದರೆ 27ರಷ್ಟು ಹೆಚ್ಚಾಗಿದೆ. ಕೋಲ್ಕತಾದ ಮೊಬೈಲ್‌ ಗೇಮಿಂಗ್‌ ಆಯಪ್‌ ವ್ಯಾಪಾರಿಯ ನಿವಾಸ …

Read More »

2023 ರ ವಿಧಾನಸಭೆ ಚುನಾವಣೆ ಜೆಡಿಎಸ್ ಪಾಲಿಗೆ ಕೊನೆಯ ಚುನಾವಣೆ : ನಿಖಿಲ್ ಕುಮಾರಸ್ವಾಮಿ ಅಚ್ಚರಿಯ ಹೇಳಿಕೆ

ಕುಣಿಗಲ್ : 2023 ರ ವಿಧಾನಸಭೆ ಚುನಾವಣೆ ಜೆಡಿಎಸ್ ಪಾಲಿಗೆ ಕೊನೆಯ ಚುನಾವಣೆ ಆಗಲಿದೆ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅಚ್ಚರಿಯ ಹೇಳಿಕೆ ನೀಡಿದ್ದಾರೆ.   ಕುಣಿಗಲ್ ತಾಲ್ಲೂಕಿನ ಹುತ್ರಿದುರ್ಗ ಹೋಬಳಿ ಅಂಚೆಪಾಳ್ಯ ಕ್ರಾಸ್​ನಲ್ಲಿ ಸೇರಿದ್ದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ನಿಖಿಲ್ ಕುಮಾರಸ್ವಾಮಿ, ಮುಂದಿನ ವಿಧಾನಸಭೆ ಚುನಾವಣೆಯು ಜೆಡಿಎಸ್ ಪಾಲಿಗೆ ಒಂದು ರೀತಿ ಕೊನೆ ಚುನಾವಣೆ. ಇಲ್ಲಿಂದ ಹೊಸ ಅಧ್ಯಾಯ ಆರಂಭವಾಗಬೇಕಿದೆ. ಮುಂದಿನ 25 ವರ್ಷಗಳ …

Read More »

ಹಾಸನಾಂಬೆಯ ದರ್ಶನಕ್ಕೆ ಮೂಹೂರ್ತ ಫಿಕ್ಸ್, ಅಕ್ಟೋಬರ್ 13ರಿಂದ ದೇವಾಲಯ ಓಪನ್

ಹಾಸನ, ಸೆಪ್ಟೆಂಬರ್‌, 11: ವರ್ಷಕ್ಕೊಮ್ಮೆ ದರ್ಶನ ಭಾಗ್ಯ ಕಲ್ಪಿಸುವ ಹಾಸನಾಂಬೆ ದೇವಾಲಯದ ಗರ್ಭಗುಡಿಯ ಬಾಗಿಲು ಅಕ್ಟೋಬರ್ 13ಕ್ಕೆ ತೆರೆಯಲಿದೆ. ಆದ್ದರಿಂದ ಜಿಲ್ಲಾಡಳಿತ 15 ದಿನದ ಜಾತ್ರಾ ಮಹೋತ್ಸವಕ್ಕೆ ಎಲ್ಲಾ ರೀತಿಯ ತಯಾರಿಯನ್ನು ಮಾಡಿಕೊಳ್ಳುತ್ತಿದೆ. ಮಹಾಮಾರಿ ಕೊರೊನಾ ನಂತರ ಇದೀಗ ಅದ್ಧೂರಿಯಾಗಿ ಜಾತ್ರಾ ಮಹೋತ್ಸವವನ್ನು ಆಚರಣೆ ಮಾಡುವುದಕ್ಕೆ ಜಿಲ್ಲಾಡಳಿತ ಯೋಜನೆ ರೂಪಿಸಿದೆ. ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಸೇರುವ ನಿರೀಕ್ಷೆಯಿದೆ. ಆದ್ದರಿಂದ ಈಗಾಗಲೇ ಶಾಸಕರ ನೇತೃತ್ವದಲ್ಲಿ ಸಭೆ ನಡೆದಿದ್ದು, ಸಿಎಂ ಸೇರಿದಂತೆ ರಾಜ್ಯದ …

Read More »

ಖ್ಯಾತ ನಟ, ನಿರ್ಮಾಪಕ ಕೃಷ್ಣಂ ರಾಜು ವಿಧಿವಶ

ಹೈದರಾಬಾದ್: ತೆಲುಗು ಚಿತ್ರರಂಗದ ಖ್ಯಾತ ನಟ ಮತ್ತು ನಿರ್ಮಾಪಕ ಉಪ್ಪಲಪತಿ ವೆಂಕಟ ಕೃಷ್ಣಂ ರಾಜು ಅವರು ಇಂದು ಮುಂಜಾನೆ ಹೈದರಾಬಾದ್‌ನಲ್ಲಿ ನಿಧನರಾದರು. ನಟ ಪ್ರಭಾಸ್ ಅವರ ಚಿಕ್ಕಪ್ಪ ಕೃಷ್ಣಂ ರಾಜು ಅವರಿಗೆ 82 ವರ್ಷ ವಯಸ್ಸಾಗಿತ್ತು. ಅವರು ತೆಲುಗು ಚಿತ್ರರಂಗದಲ್ಲಿ ಬಂಡಾಯದ ನಟನಾ ಶೈಲಿಗಾಗಿ “ರೆಬೆಲ್ ಸ್ಟಾರ್” ಎಂದು ಪ್ರಸಿದ್ಧರಾಗಿದ್ದರು. ಅತ್ಯುತ್ತಮ ನಟನಿಗಾಗಿರುವ ಪ್ರಥಮ ನಂದಿ ಪ್ರಶಸ್ತಿಯ ವಿಜೇತರೂ ಆಗಿದ್ದರು. ಕೃಷ್ಣಂ ರಾಜು ಅವರು ತಮ್ಮ ವೃತ್ತಿಜೀವನದಲ್ಲಿ 183 ಕ್ಕೂ ಹೆಚ್ಚು …

Read More »

ಸೈಮಾ 2022: ಕನ್ನಡದ ಅತ್ಯುತ್ತಮ ನಟ, ಚಿತ್ರ, ನಿರ್ದೇಶಕ, ನಟಿ ಪ್ರಶಸ್ತಿ ಯಾರ ಪಾಲು? ಗೆದ್ದವರ ಸಂಪೂರ್ಣ ಪಟ್ಟಿ ಇಲ್ಲಿದೆ

ನಿನ್ನೆ ( ಸೆಪ್ಟೆಂಬರ್ 10 ) ಈ ಬಾರಿಯ ಸೌತ್ ಇಂಡಿಯನ್ ಇಂಟರ್ ನ್ಯಾಷನಲ್ ಮೂವಿ ಅವಾರ್ಡ್ಸ್ ( ಸೈಮಾ ) ಮೊದಲ ದಿನದ ಕಾರ್ಯಕ್ರಮ ಜರುಗಿತು. ದಕ್ಷಿಣ ಭಾರತ ಚಿತ್ರರಂಗದ ನಾಲ್ಕೂ ಭಾಷೆಯ ಚಿತ್ರಗಳಿಗೆ ಪ್ರತ್ಯೇಕವಾಗಿ ಈ ಸೈಮಾ ಪ್ರಶಸ್ತಿಯನ್ನು ನೀಡಲಾಗುತ್ತದೆ. ಒಟ್ಟು 19 ವಿಭಾಗಗಳಲ್ಲಿ ಈ ಬಾರಿ ಕಲಾವಿದರ ನಾಮಿನೇಷನ್ ನಡೆದಿತ್ತು ಹಾಗೂ ಸೈಮಾ ವೆಬ್ ತಾಣದಲ್ಲಿ ಸಿನಿ ರಸಿಕರಿಗೆ ಬೆಸ್ಟ್ ಯಾರು ಎಂದು ವೋಟ್ ಮಾಡುವ …

Read More »

ವಿಕ್ರಮ ವಿಸಾಜಿ ಕೃತಿಗೆ ‘ಡಾ. ಗಿರಡ್ಡಿ ಪ್ರತಿಷ್ಠಾನ’ದ ಪ್ರಶಸ್ತಿ

ಧಾರವಾಡ: ಡಾ.ಗಿರಡ್ಡಿ ಗೋವಿಂದರಾಜ ಅವರ ಹೆಸರಿನಲ್ಲಿ, ನಗರದ ಗಿರಡ್ಡಿ ಗೋವಿಂದರಾಜ ಫೌಂಡೇಷನ್ ಪ್ರಸಕ್ತ ಸಾಲಿನಿಂದ ನೀಡುತ್ತಿರುವ ರಾಜ್ಯ ಮಟ್ಟದ ‘ಅತ್ಯುತ್ತಮ ವಿಮರ್ಶಾ ಕೃತಿ’ ಪ್ರಶಸ್ತಿಗೆ ಬೆಂಗ ಳೂರಿನ ಅಭಿನವ ಪ್ರಕಾಶನ ಪ್ರಕಟಿಸಿರುವ, ಕಲಬುರಗಿಯ ಡಾ.ವಿಕ್ರಮ ವಿಸಾಜಿ ಅವರ ‘ಪಠ್ಯದ ಭವಾವಳಿ’ ಕೃತಿ ಆಯ್ಕೆಯಾಗಿದೆ.   ಈ ಪ್ರಶಸ್ತಿಯು ₹25 ಸಾವಿರ ನಗದು ಹಾಗೂ ಸ್ಮರಣಿಕೆ ಒಳಗೊಂಡಿದೆ. ಇದು ಗಿರಡ್ಡಿ ಗೋವಿಂದರಾಜ ಫೌಂಡೇಷನ್ ವಿಮರ್ಶಾ ಕೃತಿಗೆ ನೀಡುತ್ತಿರುವ ಮೊದಲ ಪ್ರಶಸ್ತಿಯಾಗಿದೆ. ‘ಪ್ರಶಸ್ತಿಗಾಗಿ ರಾಜ್ಯದ …

Read More »

ಬೆಳಗಾವಿ | ಮಕ್ಕಳ ಕಳ್ಳರೆಂಬ ಸಂಶಯ: ಮೂವರು ವಶಕ್ಕೆ

ಚನ್ನಮ್ಮನ ಕಿತ್ತೂರು (ಬೆಳಗಾವಿ ಜಿಲ್ಲೆ): ತಾಲ್ಲೂಕಿನ ಮರಿಗೇರಿ- ಇಟಗಾ ಗ್ರಾಮದಲ್ಲಿ ಶನಿವಾರ ಮಕ್ಕಳ ಕಳ್ಳತನ ಮಾಡಲು ಯತ್ನಿಸಿದರು ಎಂಬ ಸಂಶಯದಿಂದ ಪೊಲೀಸರು ಮೂವರನ್ನು ವಶಕ್ಕೆ ಪಡೆದಿದ್ದಾರೆ. ಇವರೊಂದಿಗೆ ಇದ್ದ ಇನ್ನೂ ಮೂವರು ಪರಾರಿಯಾಗಿದ್ದಾರೆ.   ರಗ್ಗು, ಬೆಡ್ ಸೀಟ್, ಪ್ಲಾಸ್ಟಿಕ್ ಬುಟ್ಟಿಗಳನ್ನು ಮಾರಲು ಆರು ಜನ ವಾಹನದಲ್ಲಿ ಬಂದಿದ್ದರು. ರಸ್ತೆ ಬದಿ ಸೈಕಲ್ ಓಡಿಸುತ್ತಿದ್ದ ಬಾಲಕನನ್ನು ವಾಹನದಲ್ಲಿ ಹತ್ತಿಸಿಕೊಳ್ಳಲು ಯತ್ನಿಸಿದರು. ಇದರಿಂದ ಕಿರುಚಿದ 12 ವರ್ಷದ ಬಾಲಕ ಮನೆಗೆ ಓಡಿದ. ಇದನ್ನು …

Read More »