ಮುಂಬೈ: ಮಹಾರಾಷ್ಟ್ರದಾದ್ಯಂತ ಗಣಪನ ಹಬ್ಬವೆಂದರೆ ಅತ್ಯಂತ ವಿಶೇಷವಾಗಿಯೇ ಆಚರಿಸಲಾಗಿದೆ. ವಿವಿಧ ಸ್ಥಳಗಳಲ್ಲಿ ಸಂಘ-ಸಂಸೆœಗಳು ವಿವಿಧ ಶೈಲಿಯ ಗಣೇಶನ ವಿಗ್ರಹಗಳನ್ನು ಕೂರಿಸಲಿವೆ. ಮಹಾರಾಷ್ಟ್ರದ ಪ್ರಮುಖ ನಗರ ಪುಣೆಯ ಸ್ಥಳೀಯ ಸಮಿತಿಯೊಂದು ಕೂರಿಸಲಿರುವ ಗಣೇಶನ ವಿಗ್ರಹಕ್ಕೆ ರಾಜಕೀಯ ಟಚ್ ಸಿಗಲಿದೆ. ಈ ಬಾರಿ ಶಿವಸೇನೆಯ ಶಿಂಧೆ ಹಾಗೂ ಉದ್ಧವ್ ಠಾಕ್ರೆ ಅವರ ಬಣಗಳಿರಲಿವೆ! ಗಣೇಶ ಮಂಡಲದ ಅಲಂಕಾರಕ್ಕಾಗಿ ಶಿಂಧೆ ಬಣ ಹಾಗೂ ಉದ್ಧವ್ ಠಾಕ್ರೆ ಅವರ ಪ್ರತಿಮೆ ಸಿದ್ಧಮಾಡಿಕೊಡಲು ಪ್ರಸಿದ್ಧ ಕಲಾಕಾರ ಸತೀಶ್ ತರು …
Read More »ಹೆಬ್ಬಾಳ್ಕರ್ ವಿರುದ್ಧ ಅಧಿಕಾರ ದುರ್ಬಳಕೆ, ಕಾನೂನು, ಶಿಷ್ಟಾಚಾರ ಉಲ್ಲಂಘನೆ ಆರೋಪ: ಗ್ರಾ.ಪಂ ಸದಸ್ಯರ ಪ್ರತಿಭಟನೆ
ಬೆಳಗಾವಿ: ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅಧಿಕಾರ ದುರ್ಬಳಕೆ, ಕಾನೂನು, ಶಿಷ್ಟಾಚಾರ ಉಲ್ಲಂಘನೆ ಆರೋಪ ಕೇಳಿಬಂದಿದ್ದು, ನಗರದ ಡಿಸಿ ಕಚೇರಿಯಲ್ಲಿ ನಿಲಜಿ ಗ್ರಾಮ ಪಂಚಾಯತಿ ಅಧ್ಯಕ್ಷರು, ಸದಸ್ಯರು ಪ್ರತಿಭಟನೆ ನಡೆಸಿ ಆಕ್ರೋಶ ಹೊರಹಾಕಿದರು. ಲಕ್ಷ್ಮೀ ಹೆಬ್ಬಾಳ್ಕರ್ ಮತಕ್ಷೇತ್ರದ ವ್ಯಾಪ್ತಿಯಲ್ಲಿರುವ ನಿಲಜಿ ಗ್ರಾಮ ಪಂಚಾಯತಿ ಶಿಂಧೋಳ್ಳಿ ಗ್ರಾಮದಲ್ಲಿ ರಸ್ತೆ ಕಾಮಗಾರಿಗಳಿಗೆ ಹೆಬ್ಬಾಳ್ಕರ್ ಪುತ್ರ ಮೃಣಾಲ್ ಹೆಬ್ಬಾಳ್ಕರ್ ಆ.25ರಂದು ಚಾಲನೆ ನೀಡಿದ್ದಾರೆ. ಇದು ಕಾನೂನು ಬಾಹಿರ ಎಂದು ಪ್ರತಿಭಟನಾನಿರತರು ಆರೋಪಿಸಿದರು. …
Read More »ಚಲಿಸುತ್ತಿದ್ದಾಗಲೇ ಬಸ್ನ ವೀಲ್ ಬಾಡಿ ಸಮೇತ ಹಿಂದಿನ 2 ಚಕ್ರಗಳು ಬೇರ್ಪಟ್ಟಿವೆ.
ಚಿಕ್ಕಮಗಳೂರು: ಚಲಿಸುತ್ತಿದ್ದಾಗಲೇ ಬಸ್ನ ಎರಡೂ ಚಕ್ರಗಳೂ ಕಳಚಿ ಬಿದ್ದಿದ್ದು, ಭಾರಿ ದುರಂತ ತಪ್ಪಿರುವ ಘಟನೆ ಮಾಗಡಿ ಸಮೀಪ ನಡೆದಿದೆ. ಇತಿಹಾಸದಲ್ಲಿಯೇ ಇದೇ ಮೊದಲ ಬಾರಿಗೆ ಸರ್ಕಾರಿ ಬಸ್ನ ಹಿಂಬದಿ ಚಕ್ರಗಳು ಈ ರೀತಿ ಉರುಳಿ ಬಿದ್ದಿದ್ದು ಎಂದು ಹೇಳಲಾಗುತ್ತಿದೆ. ಚಲಿಸುತ್ತಿದ್ದಾಗಲೇ ಬಸ್ನ ವೀಲ್ ಬಾಡಿ ಸಮೇತ ಹಿಂದಿನ 2 ಚಕ್ರಗಳು ಬೇರ್ಪಟ್ಟಿವೆ. ಹಾಸನ ಡಿಪೋಗೆ ಸೇರಿದ ಬಸ್ ಇದಾಗಿದ್ದು ,ಬಸ್ ನಿಧಾನಗತಿಯಲ್ಲಿ ಸಾಗುತ್ತಿರುವುದರಿಂದ ಸಂಭವಿಸಬೇಕಾಗಿದ್ದ ಭಾರಿ ದುರಂತವೊಂದು ತಪ್ಪಿದಂತಾಗಿದೆ. ಬಸ್ನಲ್ಲಿದ್ದವರಿಗೆ ಸಣ್ಣ-ಪುಟ್ಟ …
Read More »ಸ್ನಾನ ಮಾಡಲು ಹೋದ ಯುವಕ ಕಾಲುಜಾರಿ ನೀರುಪಾಲು
ಅಥಣಿ: ತಾಲ್ಲೂಕಿನ ಹಲ್ಯಾಳ ದೂರು ಸೇತುವೆ ಬಳಿ ಕೃಷ್ಣಾ ನದಿಯಲ್ಲಿ ಶುಕ್ರವಾರ ಸ್ನಾನ ಮಾಡಲು ಹೋದ ಯುವಕ ಕಾಲುಜಾರಿ ನದಿ ನೀರಿನಲ್ಲಿ ತೇಲಿಹೋಗಿದ್ದಾರೆ. ಪಟ್ಟಣದ ಕಾಗಜಿ ಗಲ್ಲಿಯ ನಿವಾಸಿ ಸಾಗರ ರಾಜು ಹೊನಕಟ್ಟಿ (23) ನೀರುಪಾಲಾದ ಯುವಕ. ದೇವರ ಪೂಜೆಗೆ ನದಿಯಿಂದ ನೀರು ಒಯ್ಯಲು ಬಂದಿದ್ದರು. ಸ್ನಾನ ಮಾಡಿ ಹೋಗಬೇಕು ಎಂದು ನದಿಗೆ ಇಳಿದರು. ಮರಳಿ ಬಂದಿಲ್ಲ. ಅವರಿಗಾಗಿ ಹುಡುಕಾಟ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ವಿಷಯ ತಿಳಿದ ತಕ್ಷಣ ಸ್ಥಳಕ್ಕೆ …
Read More »ಉಚಿತವಾಗಿ ಶಾಲಾ ವಿದ್ಯಾರ್ಥಿಗಳಿಗೆ ಬ್ಯಾಗ್ ವಿತರಣೆಯ ಮಾಡಿದರು..
ಇಂದು ಸನ್ಮಾನ್ಯ ಕಾರ್ಯಸಾಮ್ರಾಜ್ಞಿ ಶಾಸಕಿ ಡಾ ಅಂಜಲಿತಾಯಿ ಹೇಮಂತ್ ನಿಂಬಾಳ್ಕರ್ ರವರು ಖಾನಾಪೂರ ತಾಲೂಕಿನ ವಿವಿಧ ಶಾಲೆಗಳಿಗೆ ಭೇಟಿ ನೀಡಿ ಡಾ ಅಂಜಲಿತಾಯಿ ಫೌಂಡೇಶನ್ ವತಿಯಿಂದ ಉಚಿತವಾಗಿ ಶಾಲಾ ವಿದ್ಯಾರ್ಥಿಗಳಿಗೆ ಬ್ಯಾಗ್ ವಿತರಣೆಯ ಮಾಡಿದರು.. ತಾಲೂಕಿನ _ಮುಗಳಿಹಾಳ್_ ಗ್ರಾಮದ ಪ್ರೌಢಶಾಲೆ ಹಾಗೂ ಪಿ ಯು ಕಾಲೇಜಿನ ವಿದ್ಯಾರ್ಥಿಗಳಿಗೆ ಸನ್ಮಾನ್ಯ ಶಾಸಕರು ಸ್ವತಃ ಹೋಗಿ ಭವಿಷ್ಯದ ಭಾರತದ ಬೆಳಕು ಮುದ್ದು ವಿದ್ಯಾರ್ಥಿಗಳಿಗೆ ಡಾ ಅಂಜಲಿತಾಯಿ ಫೌಂಡೇಶನ್ ವತಿಯಿಂದ ಉಚಿತವಾಗಿ ಶಾಲಾ ಬ್ಯಾಗ್ …
Read More »ಶೇ 40 ಲಂಚ… ಸಿದ್ದರಾಮಯ್ಯ ಡ್ರಾಮಾ: ಸಂಪುಟ ಸಭೆಯಲ್ಲಿ ಚರ್ಚೆ
ಬೆಂಗಳೂರು: ‘ಹಿಂದುತ್ವ, ಕೊಡಗು ಚಲೋ ವಿಚಾರದಲ್ಲಿ ಹಿನ್ನಡೆ ಆದ ಬೆನ್ನಲ್ಲೇ ಸಿದ್ದರಾಮಯ್ಯ ಅಂಡ್ ಕಂಪನಿ ಶೇ 40 ಕಮಿಷನ್ ವಿಚಾರವನ್ನು ಮುನ್ನೆಲೆಗೆ ತಂದು ಡ್ರಾಮಾ ಮಾಡ್ತಾ ಇದ್ದಾರೆ. ಇದು ಚುನಾವಣಾ ತಂತ್ರದ ಭಾಗವಾಗಿದ್ದು, ಇದಕ್ಕೆ ಪಕ್ಷ ಮತ್ತು ಸರ್ಕಾರ ತಿರುಗೇಟು ನೀಡಬೇಕು’ ಎಂದು ಸಚಿವ ಸಂಪುಟ ಸಭೆಯಲ್ಲಿ ಬಹುತೇಕ ಸಚಿವರು ಅಭಿಪ್ರಾಯ ವ್ಯಕ್ತಪಡಿಸಿದ್ದಾಗಿ ಗೊತ್ತಾಗಿದೆ. ‘ವರ್ಷದ ಹಿಂದೆಯೇ ಶೇ 40 ಕಮಿಷನ್ ವಿಷಯವನ್ನು ತೇಲಿ ಬಿಡಲಾಯಿತು. ಕೆಂಪಣ್ಣ ಅವರನ್ನು ಇದಕ್ಕೆ …
Read More »ಕೂಲಿ ಅರಸಿ ಹೊರಟಿದ್ದವರು ಅಪಘಾತದಲ್ಲಿ ಸಾವು: ತಬ್ಬಲಿಯಾದ ಬಾಲಕ
(ರಾಯಚೂರು ಜಿಲ್ಲೆ): ಕೂಲಿ ಅರಸಿ, ನೆಮ್ಮದಿಯ ಬದುಕು ಕಟ್ಟಿಕೊಳ್ಳಲು ಆ ಎರಡು ಕುಟುಂಬಗಳು ಬೆಂಗಳೂರಿಗೆ ಹೊರಟ್ಟಿದ್ದವು. ಶಿರಾ ತಾಲ್ಲೂಕಿನ ಕಳ್ಳಂಬೆಳ್ಳ ಬಳಿ ನಡೆದ ಅಪಘಾತದಲ್ಲಿ ಕುಟುಂಬದ ಕನಸು ನುಚ್ಚುನೂರಾಯಿತು ತಾಲ್ಲೂಕಿನ ಕುರುಕುಂದಾ ಗ್ರಾಮದ ಒಂದೇ ಕುಟುಂಬದ ನಾಲ್ವರು ಮತ್ತು ವಡವಟ್ಟಿ ಗ್ರಾಮದ ಒಂದೇ ಕುಟುಂಬದ ಮೂವರು ಮೃತರಲ್ಲಿ ಸೇರಿದ್ದಾರೆ. ಇಬ್ಬರು ವಾಹನ ಚಾಲಕರು ಇದ್ದಾರೆ. ಕುರುಕುಂದಾ ಗ್ರಾಮದ ಕ್ರೂಸರ್ ವಾಹನ ಚಾಲಕ ಸಿದ್ದಯ್ಯಸ್ವಾಮಿ ವಾರಕ್ಕೆರಡು ಸಲ ಕೂಲಿಕಾರರನ್ನು ಬೆಂಗಳೂರಿಗೆ ಕರೆದೊಯ್ಯುತ್ತಿದ್ದ. ಯಾದಗಿರಿ …
Read More »4,244 ಅಂಗನವಾಡಿಗಳನ್ನು ಆರಂಭಿಸಲು ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ
ಬೆಂಗಳೂರು: ರಾಜ್ಯದಲ್ಲಿ ಹೊಸದಾಗಿ 4,244 ಅಂಗನವಾಡಿಗಳನ್ನು ಆರಂಭಿಸಲು ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ತಿಳಿಸಿದರು. ಅಂಗನವಾಡಿ, ಪೋಷಣ್ ಅಭಿಯಾನ-2.0 ಅಡಿ ಮಕ್ಕಳ ಸಮಗ್ರ ಅಭಿವೃದ್ಧಿಗಾಗಿ ರಾಜ್ಯ ಸರ್ಕಾರದ ಅನುದಾನದಲ್ಲಿ ಇವುಗಳನ್ನು ತೆರೆಯಲಾಗುತ್ತಿದೆ ಎಂದು ಅವರು ಸುದ್ದಿಗೋಷ್ಠಿಯಲ್ಲಿ ವಿವರಿಸಿದರು. ಪ್ರಮುಖ ತೀರ್ಮಾನಗಳು * ಕೊಂಕಣ ರೈಲ್ವೆ ನಿಗಮದ ಅಭಿವೃದ್ಧಿ ಕಾಮಗಾರಿಗಳಿಗಾಗಿ ರಾಜ್ಯ ಸರ್ಕಾರದ ಪಾಲಿನ ಮೊತ್ತವಾದ ₹73.53 ಕೋಟಿ (ಶೇ 15) ಭರಿಸಲು …
Read More »ರಾಯಬಾಗ ತಾಲೂಕೀನ ರೈತರಿಂದ ಯಲ್ಲಪ್ಪಾರಟ್ಟಿ 110 ಸಾಮರ್ಥ್ಯ ದ ವಿದ್ಯುತ ವಿತರಣಾ ಘಟಕಕ್ಕೆ ಮುತ್ತಿಗೆ ಹಾಕೀ ಪ್ರತಿಭಟನೆ
ಕೃಷಿ ಚಟುವಟಿಕೆಗೆ ಸಮರ್ಪಕ ವಿದ್ಯುತ್ ಪೂರೈಸುವಂತೆ ರಾಯಬಾಗ ತಾಲೂಕಿನ ಯಲ್ಪಾರಟ್ಟಿ ಗ್ರಾಮದ 110 ಸಾಮರ್ಥ್ಯದ ವಿದ್ಯುತ ವಿತರಣಾ ಘಟಕದ ಆವರಣದಲ್ಲಿ ರೈತರು ಪ್ರತಿಭಟನೆ ನಡೆಸಿದರು. ನೂರುಕ್ಕೂ ಹೆಚ್ಚು ರೈತರು ವಿತರಣಾ ಘಟಕದ ಮುಂದೆ ಬೆಳ್ಳಿಗೆ ಜಮಾವಣೆ ಗೊಂಡು ಅಧಿಕಾರಿಗಳು ವಿರುದ್ಧ ಘೋಷಣೆ ಕೂಗಿದರು ಕಳೆದ ಮೂರು ದಿನಗಳಿಂದ ವಿದ್ಯುತ ಪೂರೈಕೆ ಕಡಿತಗೊಳಿಸಲಾಗಿದೆ ಇದರಿಂದ ಜಮೀನುಗಳಿಗೆ ಸರಿಯಾಗಿ ನೀರು ಹಾಯಿಸುವ ಸಾಧ್ಯವಾಗುತ್ತಿಲ್ಲ ಇದರಿಂದ ಬೆಳೆಗಳು ಒಣಗುತ್ತವೆ. ಹಾಗೂ ಮೂರು ದಿನಗಳಿಂದ ಗ್ರಾಮವು …
Read More »ಸಾವರ್ಕರ್ ಮೆರವಣಿಗೆ ಮಾಡಿದರೆ ನಾವು ಕಿತ್ತೂರು ಚೆನ್ನಮ್ಮ ಯಾತ್ರೆ ಮಾಡ್ತೇವೆ :ಎಂ.ಬಿ.ಪಾಟೀಲ
ವಿಜಯಪುರ : ಬಿಜೆಪಿ ನಾಯಕರು ವಿವಾದಿತ ಸಾವರ್ಕರ್ ಮೆರವಣಿಗೆ, ಗಣೇಶ ಉತ್ಸವದಲ್ಲಿ ಭಾವಚಿತ್ರ ವಿತರಿಸಿದರೆ, ನಾವು ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಕನ್ನಡ ನಾಡಿನ ಪ್ರಾಮಾಣಿಕ ಹೋರಾಟಗಾರರಾದ ಕಿತ್ತೂರು ಚೆನ್ನಮ್ಮ, ಸಂಗೊಳ್ಳಿ ರಾಯಣ್ಣ, ಸುರಪುರದ ವೆಂಕಟಪ್ಪ ನಾಯಕರಂತ ದೇಶಪ್ರೇಮಿ ವೀರ ಹೋರಾಟಗಾರರ ರಥಯಾತ್ರೆ ನಡೆಸುತ್ತೇವೆ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ ತಿರುಗೇಟು ನೀಡಲು ಮುಂದಾಗಿದ್ದಾರೆ. ಗುರುವಾರ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಯಡಿಯೂರಪ್ಪ ಅವರ ಅವರು ವಿವಾದಿತ ಸಾವರ್ಕರ್ ಯಾತ್ರೆಗೆ …
Read More »
Laxmi News 24×7