ನವದೆಹಲಿ: ತಪ್ಪು ಮಾಹಿತಿ ಪ್ರಸಾರ ಮಾಡುತ್ತಿದ್ದ ಐಟಿ ನಿಯಮಗಳನ್ನು ಉಲ್ಲಂಘನೆ ಮಾಡಿದ್ದ 8 ಯೂಟ್ಯೂಬ್ ಚಾನಲ್ ಗಳನ್ನು ಕೇಂದ್ರ ಸರ್ಕಾರ ನಿಷೇಧ ಮಾಡಿದೆ. ರಾಷ್ಟ್ರೀಯ ಭದ್ರತೆ, ವಿದೇಶಿ ಸಂಬಂಧಗಳು, ಸಾರ್ವಜನಿಕ ಸುವ್ಯಸ್ಥೆಗೆ ಸಂಬಂಧಿಸಿದ ತಪ್ಪು ಮಾಹಿತಿ ಹರಡುತ್ತಿದ್ದ ಕಾರಣಕ್ಕೆ 7 ಭಾರತೀಯ ಹಾಗೂ 1 ಪಾಕಿಸ್ತಾನ ಮೂಲದ ಯೂಟ್ಯೂಬ್ ಸುದ್ದಿ ಚಾನಲ್ ಗಳನ್ನು ನಿರ್ಬಂಧ ಮಾಡಿದೆ. ನಿರ್ಬಂಧಿಸಲಾದ ಯೂಟ್ಯೂಬ್ ಚಾನಲ್ ಗಳು 114 ಕೋಟಿಗೂ ಅಧಿಕ ವೀಕ್ಷಣೆ ಹೊಂದಿದ್ದು, 85 ಲಕ್ಷದ …
Read More »ಎಲ್ಲ ಗ್ರಾಮ ಪಂಚಾಯತಗಳು ಈ ಯೋಜನೆಯನ್ನು ಸದ್ಬಳಕೆ ಶಾಸಕ ಬಾಲಚಂದ್ರ ಜಾರಕಿಹೊಳಿ
ಗೋಕಾಕ ಮತ್ತು ಮೂಡಲಗಿ ತಾಲೂಕುಗಳ ಗ್ರಾಮ ಪಂಚಾಯತಿಗಳಲ್ಲಿ ತೋಟದ ರಸ್ತೆ ಕಾಮಗಾರಿಗಳನ್ನು ನರೇಗಾ ಯೋಜನೆಯಡಿ ಕೈಗೊಳ್ಳಲು ಅನುಮತಿ ನೀಡುವಂತೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಮುಖ್ಯಮಂತ್ರಿಗಳನ್ನು ಇತ್ತೀಚೆಗೆ ಕೋರಿದ್ದರು ಎಂಬುದು ಉಲ್ಲೇಖಾರ್ಹ. *ಎಲ್ಲ ಗ್ರಾಮ ಪಂಚಾಯತಿಗಳು ಈ ಯೋಜನೆಯನ್ನು ಸದುಪಯೋಗಪಡಿಸಿಕೊಳ್ಳಿ :* ನರೇಗಾ ಯೋಜನೆಯಡಿ ತೋಟದ ರಸ್ತೆಗಳನ್ನು ಅಭಿವೃದ್ಧಿಪಡಿಸಲು ಈಗಾಗಲೇ ಸರ್ಕಾರ ಆದೇಶಿಸಿದ್ದು, ಎಲ್ಲ ಗ್ರಾಮ ಪಂಚಾಯತಿಗಳು ಈ ಯೋಜನೆಯನ್ನು ಸದ್ಬಳಕೆ ಮಾಡಿಕೊಳ್ಳುವಂತೆ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ …
Read More »ಬಿದ್ದಿರುವ ಗುಂಡಿಗಳನ್ನು ಮುಚ್ಚಬೇಕು. ನೇತಾಡುತ್ತಿರುವ ವಿದ್ಯುತ್ ತಂತಿಗಳನ್ನು ಸರಿಪಡಿಸಬೇಕು:. ಅಭಯ್ ಪಾಟೀಲ
ಕೇಲವೇ ದಿನಗಳಲ್ಲಿ ಬೆಳಗಾವಿಯಲ್ಲಿ ಗಣೇಶೋತ್ಸವ ನಡೆಯಲಿದೆ ಈ ಹಿನ್ನೆಲೆ ಇಂದು ದಕ್ಷಿಣ ಶಾಸಕ ಅಭಯ ಪಾಟೀಲ ಅವರು ದಕ್ಷಿಣ ಕ್ಷೇತ್ರದ ಪಾರಂಪರೀಕ ಮಾರ್ಗದಲ್ಲಿ ಸಂಚರಿಸಿ, ಗಣೇಶೋತ್ಸವದ ಮೆರವಣಿಗೆಗೆ ಅವಶ್ಯಕ ಮೂಲಭೂತ ಸೌಲಭ್ಯಗಳನ್ನು ಪರಿಶೀಲಿಸಿದರು. ಇದೇ ತಿಂಗಳು 31 ರಂದು ಗಣೇಶೋತ್ಸವ ನಡೆಯಲಿದ್ದು, ಕೊರೋನಾ ನಂತರ 2 ವರ್ಷಗಳ ಬಳಿಕ ಬೆಳಗಾವಿಯಲ್ಲಿ ಅದ್ಧೂರಿಯಾಗಿ ಗಣೇಶೋತ್ಸವವನ್ನು ಆಚರಿಸುವ ನಿರ್ಧಾರ ಕೈಗೊಳ್ಳಲಾಗಿದೆ. ಈ ಹಿನ್ನೆಲೆ ಇಂದು ದಕ್ಷಿಣ ಶಾಸಕ ಅಭಯ ಪಾಟೀಲ ಅವರು ನಗರ …
Read More »ನರೇಗಾ ಯೋಜನೆಯಡಿ ರೈತರ ತೋಟದ ರಸ್ತೆಗಳ ಸುಧಾರಣೆ : ಶಾಸಕ ಬಾಲಚಂದ್ರ ಜಾರಕಿಹೊಳಿ*
ಗೋಕಾಕ : ರೈತರ ಜಮೀನುಗಳಿಗೆ ಹೋಗುವ ರಸ್ತೆಗಳನ್ನು ಅಭಿವೃದ್ಧಿಪಡಿಸಲು ನರೇಗಾ ಯೋಜನೆಯಡಿ ಕಾಮಗಾರಿಗಳನ್ನು ಕೈಗೊಳ್ಳುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ ರಾಜ್ ಇಲಾಖೆಯು ಆದೇಶ ಹೊರಡಿಸಿದೆ ಎಂದು ಅರಭಾವಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದ್ದಾರೆ. ಮಹಾತ್ಮಾ ಗಾಂಧೀಜಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಗೆ ಈ ತೋಟದ ರಸ್ತೆಗಳನ್ನು ಅಭಿವೃದ್ಧಿಪಡಿಸಲು ಸೂಚಿಸಿದ್ದು, ಒಟ್ಟು ಕಾರ್ಮಿಕ ಆಯವ್ಯಯದ ಶೇ 25 ರ ಮಿತಿಗೆ ಒಳಪಟ್ಟು ರೈತರ ಜಮೀನುಗಳಿಗೆ ಹೋಗುವ …
Read More »ಸವದತ್ತಿಯಲ್ಲಿ ಕೊಲೆ ಪ್ರಕರಣದ ಬಗ್ಗೆ ಎಸ್ಪಿ ಸಂಜೀವ್ ಪಾಟೀಲ ಹೇಳಿದ್ದೇನು?
ವಿವಾಹ ವಿಚ್ಛೇದನ ಪಡೆದು ಬೇರೆಯವರೊಂದಿಗೆ ಸಂಸಾರ ನಡೆಸಲು ಮುಂದಾಗಿದ್ದರಿಂದಲೇ ಸವದತ್ತಿಯಲ್ಲಿ ಪತ್ನಿಯನ್ನು ಪತಿಯೋರ್ವ ಕೊಲೆ ಮಾಡಿರುವ ಸತ್ಯ ಪ್ರಾಥಮೀಕ ತನಿಖೆಯಿಂದ ತಿಳಿದು ಬಂದಿದೆ ಎಂದು ಎಸ್ಪಿ ಸಂಜೀವ್ ಪಾಟೀಲ್ ಅವರು ತಿಳಿಸಿದರು. ಇಂದು ಬೆಳಿಗ್ಗೆ ಸವದತ್ತಿ ಪಟ್ಟಣ ಸಾಯಿ ನಗರದಲ್ಲಿ ಬಾಡಿಗೆ ಮನೆಯಲ್ಲಿ ವಾಸವಿರುವ ಶಬಾನಾ ಎಂಬ ಮಹಿಳೆಯ ಕೊಲೆಯನ್ನು ಮಾಡಲಾಗಿದೆ. ಪತಿಯೇ ಈ ಕೊಲೆಯನ್ನು ಮಾಡಿದ್ದು, ಈಗಾಗಲೇ ಈ ದಂಪತಿ ವಿಚ್ಛೇದನ ಕೋರಿ ಕೋರ್ಟ್ ಮೊರೆ ಹೋಗಿದೆ. 10 …
Read More »ಬಿಜೆಪಿ ಕಳಪೆ ಸರಕಾರ ಎನ್ನುವುದಕ್ಕೆ ಬೇರೆ ಪುರಾವೆ ಬೇಕೇ? ಕಾಂಗ್ರೆಸ್
ಬೆಂಗಳೂರು: ಬಿಜೆಪಿ ಸರಕಾರದ ವಿರುದ್ಧ ಕಾಂಗ್ರೆಸ್ ಟ್ವೀಟ್ ಕುಟುಕು ಮುಂದುವರಿಸಿದ್ದು, ಸಚಿವರ ಹೇಳಿಕೆ ಆಧರಿಸಿ ತಿರುಗೇಟು ನೀಡಿದೆ. ಸಚಿವರು ಕೆಲಸ ಮಾಡುತ್ತಿಲ್ಲ ಎಂದು ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಹೇಳುತ್ತಾರೆ. ನಾವು ಸರಕಾರ ನಡೆಸುತ್ತಿಲ್ಲ, ಮ್ಯಾನೇಜ್ ಮಾಡು ತ್ತಿದ್ದೇವೆ. ಸಹಕಾರ ಸಚಿವರು ಕೆಲಸ ಮಾಡುತ್ತಿಲ್ಲ ಎಂದು ಜವಾಬ್ದಾರಿಯುತ ಕಾನೂನು ಸಚಿವ ಜೆ.ಸಿ. ಮಾಧುಸ್ವಾಮಿ ಹೇಳುತ್ತಾರೆ. ಕಾನೂನು ಸಚಿವರೇ ಕೆಲಸ ಮಾಡುತ್ತಿಲ್ಲ ಎಂದು ಎಸ್.ಟಿ. ಸೋಮಶೇಖರ್ ತಿಳಿಸುತ್ತಾರೆ. ಮಾಧುಸ್ವಾಮಿ ರಾಜೀನಾಮೆ ಕೊಡಲಿ ಎಂದು …
Read More »ಬಿಜೆಪಿ ಜನೋತ್ಸವ ಮತ್ತೆ ಮುಂದೂಡಿಕೆ; ಕಾಂಗ್ರೆಸ್ ಲೇವಡಿ
ಬೆಂಗಳೂರು: ರಾಜ್ಯ ಸರ್ಕಾರದ ಸಾಧನೆಗಳನ್ನು ಬಿಂಬಿಸುವ ಜನೋತ್ಸವ ಕಾರ್ಯಕ್ರಮ ಮತ್ತೆ ಮುಂದೂಡಿಕೆಯಾಗಿದೆ. ಆ.28 ರಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ಆಚರಿಸಲು ರಾಜ್ಯ ಸರ್ಕಾರ ತೀರ್ಮಾನ ಮಾಡಿತ್ತು. ಈ ಕುರಿತಂತೆ ಪೂರ್ವ ಸಿದ್ಧತಾ ಸಭೆಗಳನ್ನೂ ನಡೆಸಲಾಗಿತ್ತು. ಆದರೆ, ಆಗಸ್ಟ್ ಕೊನೆ ವಾರದಲ್ಲಿ ಗಣೇಶ ಚತುರ್ಥಿ ಇರುವುದರಿಂದ ಆ ಸಂದರ್ಭದಲ್ಲಿ ಜನೋತ್ಸವ ಕಾರ್ಯಕ್ರಮ ಹಮ್ಮಿಕೊಂಡರೆ ಜನರನ್ನು ಸೇರಿಸುವುದು ಸಮಸ್ಯೆಯಾಗುವ ಕಾರಣಕ್ಕೆ ಜನೋತ್ಸವ ಕಾರ್ಯಕ್ರಮವನ್ನು ಮುಂದೂಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಈ ಕುರಿತು ಮಾಧ್ಯಮಗಳಿಗೆ …
Read More »ತಹಸೀಲದಾರ ಹೂಗಾರ್, ತಾಪಂ ಇಒ ಸಿದ್ನಾಳ ಮೇಲೆ ಜಾತಿನಿಂದನೆ, ರಾಷ್ಟದೋಹ ಕೇಸ್ ದಾಖಲಿಸಲು ಆಗ್ರಹ
• ಸ್ವಾತಂತ್ರ್ಯದ ಅಮೃತ ಮಹೋತ್ಸವದಲ್ಲಿ ಅಂಬೇಡ್ಕರ ಭಾವಚಿತ್ರ ಇಡದೇ ಅವಮಾನಿಸಿರುವ ಆರೋಪ ಹುಕ್ಕೇರಿ ಪಟ್ಟಣದಲ್ಲಿ ಏರ್ಪಡಿಸಿದ್ದ ೭೫ನೇ ಸ್ವಾತಂತ್ರ್ಯದ ಅಮೃತ ಮಹೋತ್ಸದವದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ ಭಾವಚಿತ್ರಕ್ಕೆ ಅವಮಾನ ಮಾಡಿರುವ ತಹಸೀಲದಾರ ಡಾ.ಡಿ.ಎಚ್.ಹೂಗಾರ್, ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಉಮೇಶ ಸಿದ್ನಾಳ ಮೇಲೆ ಜಾತಿನಿಂದನೆ ಹಾಗೂ ರಾಷ್ಟ್ರದೋಹ ಕೇಸ್ ದಾಖಲಿಸುವಂತೆ ಒತ್ತಾಯಿಸಿ ವಿವಿಧ ದಲಿತಪರ ಸಂಘಟನೆಗಳ ಮುಖಂಡರು ಮತ್ತು ಕಾರ್ಯಕರ್ತರು ಪ್ರತಿಭಟಿಸಿದರು. ಇಲ್ಲಿನ ಪೊಲೀಸ್ ಠಾಣೆಯಲ್ಲಿ ಮಂಗಳವಾರ ಜಮಾಯಿಸಿದ …
Read More »ನಾನು ಕ್ರಿಶ್ಚಿಯನ್, ರಾಷ್ಟ್ರಧ್ವಜಕ್ಕೆ ನಮಸ್ಕರಿಸುವುದಿಲ್ಲ’: ಧ್ವಜಾರೋಹಣ ಮಾಡಲು ನಿರಾಕರಿಸಿದ ಶಾಲಾ ಮುಖ್ಯಶಿಕ್ಷಕಿ
ಸ್ವಾತಂತ್ರ್ಯ ದಿನಾಚರಣೆಯಂದು ತ್ರಿವರ್ಣ ಧ್ವಜ ಹಾರಿಸಿ ಗೌರವ ವಂದನೆ ಸಲ್ಲಿಸಲು ರಾಜ್ಯ ಸರ್ಕಾರಿ ಶಾಲೆಯ ಮುಖ್ಯಶಿಕ್ಷಕಿಯೊಬ್ಬರು ನಿರಾಕರಿಸಿದ್ದಾರೆ. ʻನಾನು ಯೆಹೋವ ಕ್ರಿಶ್ಚಿಯನ್. ನನ್ನ ಧಾರ್ಮಿಕ ನಂಬಿಕೆಯು ನನಗೆ ದೇವರಿಗೆ ಮಾತ್ರ ವಂದಿಸಲು ಅವಕಾಶ ನೀಡುತ್ತದೆ’ ಎಂದು ಹೇಳಿಕೊಂಡಿದ್ದಾರೆ. ಇಲ್ಲಿನ ಧರ್ಮಪುರಿ ಜಿಲ್ಲೆಯ ಸರ್ಕಾರಿ ಶಾಲೆಯ ಮುಖ್ಯಶಿಕ್ಷಕಿ ತಮಿಳ್ ಸೆಲ್ವಿ ಅವರು ದೇಶದ 75ನೇ ಸ್ವಾತಂತ್ರ್ಯ ದಿನಾಚರಣೆಯಂದು ಧ್ವಜಾರೋಹಣ ಮಾಡಿ ಗೌರವ ಸಲ್ಲಿಸಲು ಹಿಂದೇಟು ಹಾಕಿದ್ದಾರೆ. ಈ ವಿಷಯ ಇದೀಗ …
Read More »ವಿದ್ಯಾರ್ಥಿನಿಗೆ ಜ್ಯೂಸ್ ಎಂದು ಬಿಯರ್ ಕುಡಿಸಿ ಲೈಂಗಿಕ ಶೋಷಣೆ, ಕಾಲೇಜು ಅಧ್ಯಕ್ಷನ ಕೃತ್ಯಕ್ಕೆ ಪ್ರಿನ್ಸಿಪಾಲ್ ಸಾಥ್!
ವಿದ್ಯಾಕಾಶಿ, ಸಾಹಿತಿಗಳ ತವರೂರು ಅಂತಲೇ ಖ್ಯಾತಿ ಪಡೆದಿರೋದು ಧಾರವಾಡ. ಉತ್ತರ ಕರ್ನಾಟಕದಲ್ಲಿಯೇ ಅತೀ ಹೆಚ್ಚು ಶಿಕ್ಷಣ ಸಂಸ್ಥೆ ಮತ್ತು ಕೋಚಿಂಗ್ ಕೇಂದ್ರಗಳನ್ನು ಹೊಂದಿರೋ ನಗರ ಅಂದ್ರೆ ಅದು ಧಾರವಾಡ. ಉತ್ತಮ ಶಿಕ್ಷಣ ಹಿನ್ನೆಲೆ ರಾಜ್ಯದ ಮೂಲೆಮೂಲೆಯಿಂದಲೂ ವಿದ್ಯಾರ್ಥಿಗಳು ಇಲ್ಲಿಗೆ ಬರುತ್ತಾರೆ. ಆದ್ರೆ ಈಗ ಶಿಕ್ಷಣಕ್ಕೆ ಹೆಸರುವಾಸಿಯಾಗಿರೋ ಈ ವಿದ್ಯಾನಗರಿಯ ಕಾಲೇಜೊಂದರಲ್ಲಿ ಹೇಯ ಕೃತ್ಯವೊಂದು ನಡೆದಿದೆ. ಧಾರವಾಡ ಶಿಕ್ಷಣ ಕಾಶಿ ಖ್ಯಾತಿಗೆ ಮಸಿ ಬಳಿಯೋವಂತಹ ಘಟನೆ ನಡೆದಿದೆ. ವಿದ್ಯಾರ್ಥಿನಿಗೆ ಜ್ಯೂಸ್ ಎಂದು …
Read More »
Laxmi News 24×7