Breaking News

ರಾಜಕೀಯ

ಅಪ್ಪನ ಸಮಾಧಿ ಮುಂದೆ ರಾಷ್ಟ್ರಗೀತೆ ನುಡಿಸಿ ಸ್ವಾತಂತ್ರ್ಯ ದಿನ‌ ಆಚರಿಸಿದ ಸೈನಿಕನ ಪುತ್ರಿ

ಚಾಮರಾಜನಗರ: ಯಳಂದೂರು ತಾಲೂಕಿನ‌ ಮಲಾರಪಾಳ್ಯದಲ್ಲಿ ನಿವೃತ್ತ ಸೈನಿಕ ನವೀನ್ ಅವರ ಸ್ಮಾರಕದ ಮುಂದೆ 9 ವರ್ಷದ ಪುತ್ರಿ ಹನಿ ಎಂಬಾಕೆ ಕೊಳಲಿನ ಮೂಲಕ ರಾಷ್ಟ್ರಗೀತೆ ನುಡಿಸಿ ಸ್ವಾತಂತ್ರ್ಯ ದಿನಾಚರಿಸಿದ್ದಾಳೆ.‌ ಮಗಳ‌ ಜೊತೆ ತಾಯಿ ಭವ್ಯಾ ಇದ್ದರು. ನವೀನ್ ಅವರು ಅಪಘಾತದಲ್ಲಿ ಅಸುನೀಗಿದ್ದರು. ಪ್ರತೀ ವರ್ಷ ಸ್ವಾತಂತ್ರ್ಯ ದಿನದಂದು ಈ ಕುಟುಂಬ ವಿಶೇಷ ನಮನ ಸಲ್ಲಿಸುತ್ತಿದೆ. ಇಂದಿನ ಕಾರ್ಯಕ್ರಮದಲ್ಲಿ ಗೌಡಹಳ್ಳಿ ಗ್ರಾ.ಪಂ ಸಿಬ್ಬಂದಿ, ಯುವಕರು ಭಾಗಿಯಾಗಿದ್ದರು.

Read More »

ಕಣ್ಮನ ಸೆಳೆದ ವಿದ್ಯಾರ್ಥಿಗಳು ಸೃಷ್ಟಿಸಿದ ನಕ್ಷೆ

ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಸೊರಬ ಸಮೀಪದ ಜಡೆ ಗ್ರಾಮ ಪಂಚಾಯಿತಿಯಿಂದ ಆಯೋಜಿಸಲಾಗಿದ್ದ ಹರ್ ಘರ್ ತಿರಂಗಾ ಕಾರ್ಯಕ್ರಮದಲ್ಲಿ ಪ್ರಾಥಮಿಕ, ಮಾಧ್ಯಮಿಕ ಹಾಗೂ ಪ್ರೌಢ ಶಾಲೆ ಸೇರಿ 1,200ಕ್ಕೂ ಅಧಿಕ ವಿದ್ಯಾರ್ಥಿಗಳು ಏಕಕಾಲಕ್ಕೆ ರಾಷ್ಟ್ರಗೀತೆ ಹಾಡುವ ಮೂಲಕ ಭಾರತ ಮಾತೆಗೆ ವಿಶೇಷ ಗೌರವ ಸಲ್ಲಿಸಿದರು.   ಭಾರತದ ನಕ್ಷೆ ಹೋಲುವಂತೆ 1,200 ವಿದ್ಯಾರ್ಥಿಗಳನ್ನು ನಿಲ್ಲಿಸಲಾಗಿದ್ದು, ಕೇಸರಿ, ಬಿಳಿ ಹಾಗೂ ಹಸಿರು ಟೋಪಿ ಧರಿಸಿ ರಾಷ್ಟ್ರಗೀತೆ ಹಾಡಿರುವುದನ್ನು ಡ್ರೋನ್ ಕ್ಯಾಮೆರಾದಲ್ಲಿ ಸೆರೆ …

Read More »

ಬಾಹ್ಯಾಕಾಶ ಕಿಡ್ಜ್ ಇಂಡಿಯಾ ಗ್ರಹದಿಂದ 30 ಕಿಮೀ ಎತ್ತರದಲ್ಲಿ ತಿರಂಗಾ

ನವದೆಹಲಿ: ದೇಶದಲ್ಲಿ 75 ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಗಿದೆ. ಸ್ಪೇಸ್ ಕಿಡ್ಜ್ ಇಂಡಿಯಾ ಭಾರತೀಯ ಧ್ವಜವನ್ನು ಭೂಮಿಯಿಂದ ಸುಮಾರು 30 ಕಿಲೋಮೀಟರ್ ಎತ್ತರದಲ್ಲಿ ಹಾರಿಸಿತು. ಧ್ವಜವನ್ನು ಬಲೂನ್ ಮೇಲೆ ಗ್ರಹದಿಂದ 1,06,000 ಅಡಿ ಎತ್ತರಕ್ಕೆ ಕಳುಹಿಸಲಾಯಿತು. ಈ ಕಾರ್ಯಕ್ರಮವು ಆಜಾದಿ ಕಾ ಅಮೃತ್ ಮಹೋತ್ಸವ ಘೋಷಣೆಯ ಭಾಗವಾಗಿತ್ತು. ಐತಿಹಾಸಿಕ ವಾರ್ಷಿಕೋತ್ಸವವನ್ನು ಆಚರಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಪ್ರಾರಂಭಿಸಿದ ಹರ್ ಘರ್ ತಿರಂಗಾ ಅಭಿಯಾನದ ಅಡಿಯಲ್ಲಿ ನಡೆಯಿತು. ಸ್ಪೇಸ್ …

Read More »

ಟ್ರಕ್‍ನ್ನು ಓವರ್ ಟೆಕ್ ಮಾಡಲು ಹೋಗಿ ಸ್ಕಿಡ್ ಆಗಿ ಬಿದ್ದ, ಮೆದುಳು ಒಡೆದು ಚೂರು-ಚೂರ

ಬೈಕ್ ಸ್ಕಿಡ್ ಆಗಿ ಬಿದ್ದು ಮೆದುಳು ಒಡೆದು ಯುವಕನೋರ್ವ ದಾರುಣವಾಗಿ ಸಾವನ್ನಪ್ಪಿದ ಘಟನೆ ಬೆಳಗಾವಿ ವಡಗಾಂವನ ಯಳ್ಳೂರ ರಸ್ತೆಯಲ್ಲಿ ನಡೆದಿದೆ. ಬೆಳಗಾವಿಯ ವಡಗಾಂವ-ಯಳ್ಳೂರ ರಸ್ತೆಯ ಬಳ್ಳಾರಿ ನಾಲಾ ರೈಸ್ ಮಿಲ್ ಹತ್ತಿರ ಬೈಕ್ ಸ್ಕಿಡ್ ಆದ ಪರಿಣಾಮ ಯುವಕನೋರ್ವ ಸಾವನ್ನಪ್ಪಿದ್ದಾನೆ.   ಬೈಕ್ ಮೂಲಕ ಈ ಯುವಕ ಯಳ್ಳೂರ ಕಡೆ ಹೊರಟಿದ್ದ. ಟ್ರಕ್‍ನ್ನು ಓವರ್ ಟೆಕ್ ಮಾಡಲು ಹೋಗಿ ಸ್ಕಿಡ್ ಆಗಿ ಬಿದ್ದ ಪರಿಣಾಮ ಇತನ ಮೆದುಳು ಒಡೆದು ಚೂರು-ಚೂರಾಗಿದೆ. …

Read More »

ಮಹದಾಯಿ ಯೋಜನೆ ಅನುಷ್ಠಾನಕ್ಕೆ ಕಾಲ ಸನ್ನಿಹಿತ: ಗೋವಿಂದ ಕಾರಜೋಳ

76ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ಹಾಗೂ ಸ್ವಾತಂತ್ರ್ಯದ ಅಮೃತ ಮಹೋತ್ಸವ ವರ್ಷಾಚರಣೆಯ ಈ ಶುಭ ಸಂದರ್ಭದಲ್ಲಿ ನಾಡಿನ ಸಮಸ್ತ ಜನತೆಗೆ ಹಾಗೂ ಇಲ್ಲಿ ನೆರೆದಿರುವ ಸ್ವಾತಂತ್ರ್ಯ ಹೋರಾಟಗಾರರು, ಜಿಲ್ಲೆಯ ಸಮಸ್ತ ಚುನಾಯಿತ ಜನಪ್ರತಿನಿಧಿUಳು, ಗಣ್ಯಮಾನ್ಯರು, ಎಲ್ಲಾ ಆಮಂತ್ರಿತರು, ಅಧಿಕಾರಿ ವರ್ಗದವರು, ನಾಗರಿಕ ಬಂಧುಗಳು ಮತ್ತು ಮಾಧ್ಯಮದ ಸ್ನೇಹಿತರೇ ತಮಗೆಲ್ಲರಿಗೂ ಸ್ವಾತಂತ್ರ್ಯೋತ್ಸವದ ಹಾರ್ದಿಕ ಶುಭಾಶಯಗಳು ಎಂದು ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಎಂದು ಹೇಳಿದರು.   ಜಿಲ್ಲಾ ಕ್ರೀಡಾಂಗಣದಲ್ಲಿ ಧ್ವಜಾರೋಹಣ ನೆರವೇರಿಸಿ …

Read More »

ರಾಷ್ಟ್ರಧ್ವಜ ನೀತಿ ಸಂಹಿತೆ ತಿದ್ದುಪಡಿ ಮಾಡಿ ಪಾಲಿಸ್ಟರ್ ಧ್ವಜಕ್ಕೆ ಅನುಮತಿ ನೀಡಲಾಗಿತ್ತು. ಆದರೆ ಇದನ್ನೇ ಕಾಂಗ್ರೆಸ್ ತೀವ್ರವಾಗಿ ವಿರೋಧಿಸುತ್ತಿದ್ದಾರೆ

ನಗರದ ನೆಹರು ಮೈದಾನದಲ್ಲಿ ತಾಲೂಕ ಆಡಳಿತ ದಿಂದ ೭೬ ನೇ ಸ್ವಾತಂತ್ರ್ಯಮಹೋತ್ಸವನ್ನು ಸೋಮವಾರ ಸಂಭ್ರಮ ಸಡಗರದಿಂದ ಆಚರಿಸಲಾಯಿತು. ನಗರ ತಹಶೀಲ್ದಾರ ಶಶಿಧರ ಮಾಡ್ಯಾಳ ಅವರು ಧ್ವಜಾರೋಹಣ ನೆರವೇರಿಸಿದರು. ನಂತರ ಮಾತನಾಡಿದ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಮಹಾತ್ಮಾಗಾಂಧಿ ಅವರು ಖಾದಿ ಬಗ್ಗೆ ಕನಸು ಕಂಡಿದ್ದರು. ಅದನ್ನು ನೆನಸು ಮಾಡುವ ಕೆಲಸ ನರೇಂದ್ರ ಮೋದಿ ಮಾಡುತ್ತಿದ್ದಾರೆ. ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ ಹೆಚ್ಚು ರಾಷ್ಟ್ರಧ್ವಜಗಳ ಅವಶ್ಯಕತೆ ಹಿನ್ನೆಲೆಯಲ್ಲಿ ರಾಷ್ಟ್ರಧ್ವಜ ನೀತಿ ಸಂಹಿತೆ ತಿದ್ದುಪಡಿ …

Read More »

ಆರೇಳು ತಿಂಗಳಲ್ಲಿ ಕುಮಾರಸ್ವಾಮಿಯೇ C.M.

ಬೆಂಗಳೂರು: ಇನ್ನು 6-7 ತಿಂಗಳಲ್ಲಿ ನಿಮ್ಮ ಕುಮಾರಸ್ವಾಮಿ ಮುಖ್ಯಮಂತ್ರಿ ಆಗುವುದನ್ನು ಯಾರು ತಪ್ಪಿಸಲು ಸಾಧ್ಯವಿಲ್ಲ. ಕಾಂಗ್ರೆಸ್ ಮತ್ತು ಬಿಜೆಪಿಗಿಂತ ಜೆಡಿಎಸ್ ಪಕ್ಷವು ಹೆಚ್ಚು ಕ್ಷೇತ್ರಗಳಲ್ಲಿ ಜಯಗಳಿಸಲಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ವಿಶ್ವಾಸ ವ್ಯಕ್ತಪಡಿಸಿದರು. ದಾಸರಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಇಂದು ಮತಗಟ್ಟೆ ಮಟ್ಟದ ಜೆಡಿಎಸ್ ಕಾರ್ಯಾಗಾರದಲ್ಲಿ ಸಮಾರೋಪ ಭಾಷಣ ಮಾಡಿದ ಅವರು, ರಾಷ್ಟ್ರೀಯ ಪಕ್ಷಗಳು ನಮ್ಮ ಪಕ್ಷವನ್ನು ಲಘುವಾಗಿ ಕಾಣುತ್ತಿವೆ. ನಮ್ಮ ಶಕ್ತಿ ಏನೆಂದು ವಿಧಾನಸಭೆ ಚುನಾವಣೆ ನಡೆದ …

Read More »

ನೆಹರೂ ಭಾವಚಿತ್ರ ಕೈ ಬಿಟ್ಟಿರುವುದು ಸಣ್ಣತನದ ರಾಜಕಾರಣ: ಎಚ್‌.ಡಿ.ಕೆ

ಬೆಂಗಳೂರು: ಅಮೃತ ಮಹೋತ್ಸವದ ಜಾಹೀರಾತಿನಲ್ಲಿ ನೆಹರೂ ಅವರ ಭಾವಚಿತ್ರ ಕೈಬಿಟ್ಟಿರುವುದು ಸಣ್ಣತನದ ಪರಮಾವಧಿ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಸ್ವಾತಂತ್ರ್ಯ ಹೋರಾಟದಲ್ಲಿ ನೆಹರೂ ಅವರ ಕೊಡುಗೆ ಸಾಕಷ್ಟಿದೆ. ಅವರು ಮೊದಲ ಪ್ರಧಾನಮಂತ್ರಿ. ಆದರೆ ಅವರನ್ನು ಉದ್ದೇಶಪೂರ್ವಕವಾಗಿಯೇ ಕಡೆಗಣನೆ ಮಾಡಿರುವಂತಿದೆ. ನೆಹರು ಅವರು ಯಾವುದೇ ಪಕ್ಷಕ್ಕೇ ಸೇರಿರಲಿ, ಆದರೆ, ಸ್ವಾತಂತ್ರ್ಯ ಸಂಗ್ರಾಮದಲ್ಲಿ ಅವರ ಕುಟುಂಬದ ಕೊಡುಗೆ ದೊಡ್ಡದಿದೆ. ಅಂತವರ ಭಾವಚಿತ್ರವನ್ನು ಜಾಹೀರಾತಿನಲ್ಲಿ ಕೈಬಿಟ್ಟಿರುವುದು ಸಣ್ಣತನದ ರಾಜಕಾರಣ ಎಂದು ಹೇಳಿದ್ದಾರೆ. ಸ್ವಾತಂತ್ರ್ಯ ಬಂದ …

Read More »

ಸೋಲೂರು ಗದ್ದುಗೆ ಮಠದ ಶಿವ ಮಹಾಂತೇಶ ಸ್ವಾಮೀಜಿ ಪ್ರೀತಿಸಿದ ಯುವತಿ ಜೊತೆ ಪರಾರಿ…!! ಶ್ರೀ

ರಾಮನಗರ ಜಿಲ್ಲೆ ಮಾಗಡಿ ತಾಲ್ಲೂಕು ಸೋಲೂರು ಗದ್ದುಗೆ ಮಠದ ಶಿವ ಮಹಾಂತೇಶ ಸ್ವಾಮೀಜಿ ಪ್ರೀತಿಸಿದ ಯುವತಿ ಜೊತೆ ಪರಾರಿ…!! ಶ್ರೀಗಳ ಹುಟ್ಟೂರು ವೀರಾಪುರದಲ್ಲಿ ನಾಲ್ಕು ಜನರ ಮುಂದೆ ತಲೆ ತಗ್ಗಿಸಿಕೊಂಡು ನಡೆಯುತ್ತಿರುವ ರೈತ ಕುಟುಂಬ. ಆ ಮನೆಯ ವಾರಸ್ದಾರನಾಗಿ ಬಸವರಾಜು ತಾಯಿ ಶಿವರುದ್ರಮ್ಮರಿಗೆ ಜನಿಸಿದ ಪುತ್ರ ಹರೀಶ್ (ಚನ್ನವೀರ ಶಿವಾ ಮಹಂತ ಸ್ವಾಮೀಜಿ)ಬೆಳೆಯುತ್ತಾ ಸಿದ್ಧಗಂಗಾ ಮಠದಲ್ಲಿ ವಿದ್ಯಾಭ್ಯಾಸ ಮಾಡುವಾಗ ಕಂಬಾಳು ವಾಸಿ ಕುಮಾರಯ್ಯನ ಮಗಳು ಕೋಮಲ ಜೊತೆ ಸ್ವಾಮೀಜಿಗೆ ಸ್ನೇಹವಾಗಿ …

Read More »

ಇದೊಂದು ನಕಲಿ ಕಾಂಗ್ರೆಸ್‌ ಮತ್ತು ನಕಲಿ ಗಾಂಧಿಗಳ ಪಾರ್ಟಿ ಎಂದ ಇದೊಂದು ನಕಲಿ ಕಾಂಗ್ರೆಸ್‌ ಮತ್ತು ನಕಲಿ ಗಾಂಧಿಗಳ ಪಾರ್ಟಿ ಎಂದ

ಹಾವೇರಿ: ಈಗಿರುವ ಕಾಂಗ್ರೆಸ್ಸಿನವರು ಒರಿಜಿನಲ್‌ ಕಾಂಗ್ರೆಸ್ಸಿಗರಲ್ಲ. ಈಗಿನ ಕಾಂಗ್ರೆಸ್‌ಗೂ ಮಹಾತ್ಮ ಗಾಂಧೀಜಿ ನೇತೃತ್ವದಲ್ಲಿದ್ದ ಕಾಂಗ್ರೆಸ್‌ಗೂ ಸಂಬಂಧವಿಲ್ಲ. ಈಗಿರುವುದು ಡೂಪ್ಲಿಕೇಟ್‌ ಕಾಂಗ್ರೆಸ್‌ ಮತ್ತು ಈಗಿನವರು ನಕಲಿ ಗಾಂಧಿಗಳು ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಆರೋಪಿಸಿದರು.   ಕಾಂಗ್ರೆಸ್ ಪಕ್ಷದಿಂದಲೇ ದೇಶಕ್ಕೆ ಸ್ವಾತಂತ್ರ್ಯ ಸಿಕ್ಕಿದೆ ಎಂಬ ಕಾಂಗ್ರೆಸ್‌ ಮುಖಂಡರ ಹೇಳಿಕೆಗೆ ಶಿಗ್ಗಾವಿಯಲ್ಲಿ ಪ್ರತಿಕ್ರಿಯಿಸಿದ ಅವರು, ಇದರಲ್ಲೂ ಕಾಂಗ್ರೆಸ್‌ನವರು ರಾಜಕೀಯ ಮಾಡಬಾರದಿತ್ತು. ಕಾಂಗ್ರೆಸ್‌, ಅನೇಕ ಸಂಘಟನೆಗಳು, ಕ್ರಾಂತಿಕಾರಿಗಳ ಹೋರಾಟದಿಂದ ದೇಶಕ್ಕೆ ಸ್ವಾತಂತ್ರ್ಯಸಿಕ್ಕಿದೆ. ಅಂದಿನ ಹೋರಾಟವನ್ನು …

Read More »