Breaking News

ರಾಜಕೀಯ

ಬೆಂಗಳೂರಿನ ಉದ್ಯಮಿಗೆ ಹನಿಟ್ರ್ಯಾಪ್​: ಸ್ಯಾಂಡಲ್​ವುಡ್​ನ ಯುವ ನಟ ಬಂಧನ

ಬೆಂಗಳೂರು: ಹನಿಟ್ರ್ಯಾಪ್​ ಕೇಸ್​ನಲ್ಲಿ ಸ್ಯಾಂಡಲ್​ವುಡ್​ ನಟರೊಬ್ಬರನ್ನು ಹಲಸೂರು ಗೇಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ನಟ ಯುವರಾಜ್ ಬಂಧಿತ. ‘ಮಿಸ್ಟರ್ ಭೀಮರಾವ್’ ಸಿನಿಮಾ ನಾಯಕ ಯುವರಾಜ್​, ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಮೂಲದ ಉದ್ಯಮಿಯೊಬ್ಬರಿಗೆ ಇಬ್ಬರು ಯುವತಿಯರ ಹೆಸರಲ್ಲಿ ಚಾಟ್​ ಮಾಡಿ ಹಣಕ್ಕಾಗಿ ಬೇಡಿಕೆ ಇಟ್ಟು ಬೆದರಿಸಿದ್ದ ಆರೋಪ ಕೇಳಿಬಂದಿದೆ. ಉದ್ಯಮಿ ಕೊಟ್ಟ ದೂರಿನ ಮೇರೆಗೆ ನಟನನ್ನು ಬಂಧಿಸಲಾಗಿದೆ. ಉದ್ಯಮಿಯೊಬ್ಬರಿಗೆ ಇತ್ತೀಚೆಗೆ ಇಬ್ಬರು ಯುವತಿಯರು ಪರಿಚಯ ಆಗಿದ್ದರು. ಅವರ ಹೆಸರನ್ನು ಬಳಸಿಕೊಂಡು ಉದ್ಯಮಿಗೆ ಯುವರಾಜ್​ …

Read More »

ಕಾಂಗ್ರೆಸ್ ನಾಯಕರ ರಾತ್ರಿ ಬದುಕಿನ ರಂಗ್-ಬಿರಂಗಿ ಬಗ್ಗೆ ದಂತಕತೆಗಳು ಮಾತ್ರವಲ್ಲ, ಗುಪ್ತ ಸಿಡಿಗಳೂ ಇವೆ!

ಬೆಂಗಳೂರು: ‘ಬಿಜೆಪಿ ನೇತೃತ್ವದ ಸರ್ಕಾರದಲ್ಲಿ ಉದ್ಯೋಗ ಪಡೆಯಬೇಕು ಎಂದರೆ ಯುವತಿಯರು ಮಂಚ ಹತ್ತಬೇಕಾಗಿದೆ’ ಎಂದಿದ್ದ ಕೆಪಿಸಿಸಿ ವಕ್ತಾರ ಪ್ರಿಯಾಂಕ್ ಖರ್ಗೆ ವಿರುದ್ಧ ರಾಜ್ಯ ಕಾಂಗ್ರೆಸ್ ಕಿಡಿಕಾರಿದೆ. ಕಾಂಗ್ರೆಸ್ ಮಹಿಳಾ ವಿರೋಧಿ ಎಂದೂ ದೂರಿದೆ.   ಈ ಕುರಿತು ಟ್ವೀಟ್ ಮಾಡಿರುವ ಬಿಜೆಪಿ, ಕಾಂಗ್ರೆಸ್ ನಾಯಕರ ರಾತ್ರಿ ಬದುಕಿನ ರಂಗ್-ಬಿರಂಗಿ ಬಗ್ಗೆ ಸಾಕಷ್ಟು ದಂತಕತೆಗಳು ಮಾತ್ರವಲ್ಲ, ಗುಪ್ತಸಿಡಿಗಳೂ ಇವೆ. ಜೂನಿಯರ್ ಖರ್ಗೆ ಅವರೇ, ಸಭ್ಯಸ್ಥರ ಮುಖವಾಡ ಹಾಕಿ ಸಮಾಜದ ಕಣ್ಣಿಗೆ ಗಣ್ಯರೆಂದು ಬಿಂಬಿಸಿಕೊಂಡ …

Read More »

ರಾಜ್ಯದ 6 ಪೊಲೀಸರಿಗೆ ಕೇಂದ್ರ ಗೃಹ ಸಚಿವರ ಪದಕ

ನವದೆಹಲಿ; ಅತ್ಯುತ್ತಮ ತನಿಖೆ ನಡೆಸಿದ ರಾಜ್ಯದ 6 ಪೊಲೀಸ್ ಅಧಿಕಾರಿಗಳು ಸೇರಿದಂತೆ ದೇಶದ 151 ಪೊಲೀಸ್ ಅಧಿಕಾರಿಗಳಿಗೆ ಕೇಂದ್ರ ಗೃಹ ಸಚಿವರ ಪ್ರಶಸ್ತಿ ಲಭ್ಯವಾಗಿದೆ. ಅಪರಾಧ ಪ್ರಕರಣಗಳ ಅತ್ಯುತ್ತಮ ತನಿಖೆಗಾಗಿ ರಾಜ್ಯದ ಹೆಚ್ಚುವರಿ ಪೊಲೀಸ್ ಮುಖ್ಯಾಧಿಕಾರಿ ಲಕ್ಷ್ಮಿ ಗಣೇಶ್ ಕೆ, ಡಿವೈಎಸ್ ಪಿಗಳಾದ ವೆಂಕಟಪ್ಪ ನಾಯಕ, ಮೈಸೂರು ರಾಜೇಂದ್ರ ಗೌತಮ್, ಶಂಕರ್ ಕಾಳಪ್ಪ ಮಾರಿಹಾಳ್, ಶಂಕರಗೌಡ ವೀರಣ್ಣಗೌಡ ಪಾಟೀಲ್, ಸರ್ಕಲ್ ಇನ್ಸ್ ಪೆಕ್ಟರ್ ಗುರುಬಸವರಾಜ್, ಹೆಚ್. ಹಿರೇಗೌಡರ್ ಅವರುಗಳಿಗೆ ಕೇಂದ್ರ ಗೃಹ …

Read More »

ಬಳ್ಳಾರಿಯಲ್ಲಿ ವ್ಯಕ್ತಿ ಮೇಲೆ ಹಲ್ಲೆ, ಪಿಎಸ್ ಐ ಅಮಾನತು, ಇಲಾಖಾ ತನಿಖೆಗೆ ಆದೇಶ

ಹುಬ್ಬಳ್ಳಿ: ವ್ಯಕ್ತಿಯೊಬ್ಬರ ಮೇಲೆ ಸಾರ್ವಜನಿಕವಾಗಿ ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಳ್ಳಾರಿ ಜಿಲ್ಲೆ ಕುರುಗೋಡು ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ ಪೆಕ್ಟರ್ ನನ್ನು ಸೇವೆಯಿಂದ ಅಮಾನತು ಮಾಡಲಾಗಿದೆ. ಪೊಲೀಸ್ ಅಧಿಕಾರಿ ಮಣಿಕಂಠ ವ್ಯಕ್ತಿಯೊಬ್ಬರನ್ನು ಥಳಿಸುವ ವಿಡಿಯೋ ವೈರಲ್ ಆಗಿತ್ತು. ಇದರಿಂದಾಗಿ ಹಿರಿಯ ಅಧಿಕಾರಿಗಳು ಆತನನ್ನು ಅಮಾನತು ಮಾಡಿದ್ದಾರೆ.ಯಾವುದೇ ಕಾರಣವಿಲ್ಲದೆ ಗಂಗಾಧರ ಎಂಬ ವ್ಯಕ್ತಿಯ ಮೇಲೆ ಪೊಲೀಸ್ ಅಧಿಕಾರಿಗಳು ಹಲ್ಲೆ ನಡೆಸಿದ ನಂತರ ಅಲ್ಲಿನ ನಿವಾಸಿಗಳು ಅಧಿಕಾರಿಯ ವಿರುದ್ಧ ದೂರು ದಾಖಲಿಸಿದ್ದಾರೆ. ಪಿಎಸ್ …

Read More »

ಮಂಗಳೂರು; ಇಂಜಿನಿಯರಿಂಗ್ ವಿದ್ಯಾರ್ಥಿ ಬಲಿಪಡೆದ ಹೆದ್ದಾರಿಯ ಗುಂಡಿ

ಮಂಗಳೂರು, ಆಗಸ್ಟ್ 12: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಗುಂಡಿಗೆ ಇಂಜಿನಿಯರ್ ವಿದ್ಯಾರ್ಥಿ ಬಲಿಯಾದ ಘಟನೆ ನಗರದ ನಂತೂರು ಬಳಿಯ ಬಿಕರ್ಣಕಟ್ಟೆಯಲ್ಲಿ ನಡೆದಿದೆ. ಹೆದ್ದಾರಿ ಪ್ರಾಧಿಕಾರದ ವಿರುದ್ಧ ವಿದ್ಯಾರ್ಥಿಯ ಸ್ನೇಹಿತ ಏಕಾಂಗಿ ಪ್ರತಿಭಟನೆ ನಡೆಸಿದ್ದಾರೆ. ಜೊತೆಗೆ ಸಾಮಾಜಿಕ ಜಾಲಾತಾಣದಲ್ಲೂ ಆಕ್ರೋಶ ವ್ಯಕ್ತವಾಗುತ್ತಿದೆ. ರಸ್ತೆಯಲ್ಲಿರುವ ಗುಂಡಿಯಿಂದ ತನ್ನ ದ್ವಿಚಕ್ರ ವಾಹನವನ್ನು ತಪ್ಪಿಸಲು ಹೋಗಿ ರಸ್ತೆಯ ರಿಫ್ಲೆಕ್ಟರ್ ಡಿವೈಡರ್‌ಗೆ ಡಿಕ್ಕಿ ಹೊಡೆದ ಪರಿಣಾಮ ತಲೆಗೆ ಗಂಭೀರ ಸ್ವರೂಪದ ಪೆಟ್ಟಾಗಿ ಆತೀಷ್ (20) ಎಂಬ ಯುವಕ …

Read More »

ಜಿಪಂ, ತಾಪಂ, ಬಿಬಿಎಂಪಿ ಚುನಾವಣೆ ನಿರೀಕ್ಷೆಯಲ್ಲಿದ್ದವರಿಗೆ ಸಿಹಿ ಸುದ್ದಿ

ಬೆಂಗಳೂರು: ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಮತ್ತು ಬಿಬಿಎಂಪಿ ಚುನಾವಣೆ ನಿರೀಕ್ಷೆಯಲ್ಲಿದ್ದವರಿಗೆ ಮುಖ್ಯ ಮಾಹಿತಿ ಇಲ್ಲಿದೆ. ಸ್ಥಳೀಯ ಸಂಸ್ಥೆಗಳ ಮೀಸಲು ವರದಿಗೆ ಸಂಪುಟ ಸಭೆ ಅಸ್ತು ಎಂದಿದೆ. ನ್ಯಾ. ಭಕ್ತವತ್ಸಲ ಸಮಿತಿ ವರದಿಗೆ ಸರ್ಕಾರ ಒಪ್ಪಿಗೆ ನೀಡಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆಯಲ್ಲಿ ನ್ಯಾ. ಭಕ್ತವತ್ಸಲ ಸಮಿತಿಯ ಶಿಫಾರಸಿಗೆ ಒಪ್ಪಿಗೆ ನೀಡಿ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದ್ದು, ಸ್ಥಳೀಯ ಸಂಸ್ಥೆಗಳ ಚುನಾವಣೆಯ ಹಾದಿ ಸುಗಮವಾಗಿದೆ. ಜಿಲ್ಲಾ ಪಂಚಾಯಿತಿ, ತಾಲೂಕು …

Read More »

ಸಾಲ ವಸೂಲಿ ಏಜೆಂಟರು ಸಾಲ ಪಡೆದವರಿಗೆ ಬೆದರಿಕೆ ಹಾಕುವಂತೆ ಇಲ್ಲ: ಆರ್‌ಬಿಐ ತಾಕೀತು

ಮುಂಬೈ: ಸಾಲ ವಸೂಲಿ ಏಜೆಂಟರು ಸಾಲ ಪಡೆದವರಿಗೆ ಬೆದರಿಕೆ ಹಾಕುವಂತೆ ಇಲ್ಲ ಎಂದು ಭಾರತೀಯ ರಿಸರ್ವ್‌ ಬ್ಯಾಂಕ್‌ (ಆರ್‌ಬಿಐ) ಶುಕ್ರವಾರ ತಾಕೀತು ಮಾಡಿದೆ. ಅಲ್ಲದೆ, ವಸೂಲಿ ಏಜೆಂಟರು ಸಾಲಗಾರರಿಗೆ ಬೆಳಿಗ್ಗೆ 8 ಗಂಟೆಯ ಮೊದಲು ಹಾಗೂ ಸಂಜೆ 7 ಗಂಟೆಯ ನಂತರ ಕರೆ ಮಾಡುವಂತಿಲ್ಲ ಎಂದು ಕೂಡ ಹೇಳಿದೆ.   ಬ್ಯಾಂಕ್‌, ಬ್ಯಾಂಕೇತರ ಹಣಕಾಸು ಸಂಸ್ಥೆಗಳು (ಎನ್‌ಬಿಎಫ್‌ಸಿ) ಮತ್ತು ಆಸ್ತಿ ಪುನರ್‌ರಚನಾ ಕಂಪನಿಗಳಿಗೆ (ಎಆರ್‌ಸಿ) ಈ ಹೆಚ್ಚುವರಿ ಸೂಚನೆಗಳು ಅನ್ವಯವಾಗುತ್ತವೆ. …

Read More »

ಕುರಿ, ಕೋಳಿ ಸಾಕಾಣಿಕೆ ಘಟಕ ಸ್ಥಾಪನೆಗೆ ಅರ್ಜಿ ಅಹ್ವಾನ

ಬೆಂಗಳೂರು, ಆಗಸ್ಟ್ 12: ‘ರಾಷ್ಟ್ರೀಯ ಜಾನುವಾರು ಮಿಷನ್’ ಯೋಜನೆಯಡಿ ಸಹಾಯಧನ ಸಹಿತ ಕುರಿ ಮತ್ತು ಕೋಳಿ ಸಾಕಾಣಿಕೆ ಘಟಕ ಸ್ಥಾಪಿಸುವವರಿಂದ ಕೇಂದ್ರ ಸರ್ಕಾರ ಅರ್ಜಿ ಅಹ್ವಾನಿಸಿದೆ. ಆಸಕ್ತರು ಅರ್ಜಿ ಸಲ್ಲಿಸಲು ಅಗತ್ಯವಾಗಿ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.   ಕೇಂದ್ರ ಸರ್ಕಾರ ‘ರಾಷ್ಟ್ರೀಯ ಜಾನುವಾರು ಮಿಷನ್’ ಯೋಜನೆಯಡಿ ಉದ್ಯಮಶೀಲತೆಯ ಅಭಿವೃದ್ಧಿಗಾಗಿ 2021-22ರ ಸಾಲಿಗೆ ಯೋಜನೆಯ ಮಾರ್ಗಸೂಚಿ ಅಡಿಯಲ್ಲಿ ಪಶುಪಾಲನಾ ಹಾಗೂ ಪಶುವೈದ್ಯಕೀಯ ಸೇವಾ ಇಲಾಖೆ ಬೆಂಗಳೂರು ವತಿಯಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು, …

Read More »

ಪ್ರಭಾವಿ ಭ್ರಷ್ಟರಿಗೆ ಲೋಕಾ ನಡುಕ ಶುರು; ಭ್ರಷ್ಟಾಚಾರ ಆರೋಪದಲ್ಲಿ ಕೇಸ್​ ದಾಖಲಿಸಲು ಸ್ವತಂತ್ರ

ಬೆಂಗಳೂರು : ಹೈಕೋರ್ಟ್​ ಆದೇಶದ ಅನ್ವಯ ಲೋಕಾಯುಕ್ತ ಬಲಪಡಿಸುವ ಪ್ರಕ್ರಿಯೆಯನ್ನು ರಾಜ್ಯ ಸರ್ಕಾರ ಆರಂಭಿಸಿದೆ. ನಿರೀೆಯಂತೆ ಲೋಕಾಯುಕ್ತ ಬಲಗೊಂಡರೆ ಪ್ರಭಾವಿ ಭ್ರಷ್ಟ ರಾಜಕಾರಣಿಗಳು ಹಾಗೂ ಅಧಿಕಾರಿಗಳಿಗೆ ಸಂಕಷ್ಟ ಕಟ್ಟಿಟ್ಟ ಬುತ್ತಿ. ಎಸಿಬಿಯಲ್ಲಿ ದಾಖಲಾಗಿರುವ 1803 ಪ್ರಕರಣಗಳೂ ಲೋಕಾಯುಕ್ತ ವ್ಯಾಪ್ತಿಗೆ ವರ್ಗಾವಣೆಯಾಗುವ ಹಿನ್ನೆಲೆಯಲ್ಲಿ ಎಸಿಬಿ ದಾಳಿಗಷ್ಟೇ ಸೀಮಿತವಾಗಿ ನಿರಾಳರಾಗಿದ್ದ ಆರೋಪಿಗಳಿಗೂ ಈಗ ಕಾನೂನಿನ ಬಿಸಿ ತಟ್ಟಲಿದೆ.   ಲೋಕಾಯುಕ್ತ ಪೊಲೀಸ್​ ವಿಭಾಗದಲ್ಲಿ ಅಂದಾಜು 350 ಪ್ರಕರಣಗಳು ತನಿಖಾ ಹಂತದಲ್ಲಿವೆ. ಈ ಪ್ರಕರಣಗಳನ್ನು ಇತ್ಯರ್ಥಪಡಿಸಿದರೆ …

Read More »

ರಜೆಯ ಮೇಲೆ ಊರಿಗೆ ಬಂದಿದ್ದ ಯೋಧನನ್ನು ಬಾಮೈದನೇ ಹತ್ಯೆ ಮಾಡಿದ

ಬಾಗಲಕೋಟೆ: ರಜೆಯ ಮೇಲೆ ಊರಿಗೆ ಬಂದಿದ್ದ ಯೋಧನನ್ನು ಬಾಮೈದನೇ ಹತ್ಯೆ ಮಾಡಿರುವ ಘೋರ ಘಟನೆ ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ನೀರಲಕೇರಿ ಗ್ರಾಮದಲ್ಲಿ ನಡೆದಿದೆ. 25 ವರ್ಷದ ಕರಿಸಿದ್ದಪ್ಪ ಕಳಸದ ಮೃತ ದುರ್ದೈವಿ. ಸಿದ್ದನಗೌಡ ದೂಳಪ್ಪ ಹತ್ಯೆಗೈದ ಆರೋಪಿ. ಊಟದ ವಿಚಾರವಾಗಿ ಯೋಧ ಹಾಗೂ ಆತನ ಪತ್ನಿ ವಿದ್ಯಾ ನಡುವೆ ಗಲಾಟೆ ನಡೆದಿದೆ. ಇದರಿಂದ ಬೇಸರಗೊಂಡ ವಿದ್ಯಾ ತನ್ನ ಸಹೋದರ ಸಿದ್ದನಗೌಡನಿಗೆ ಕರೆ ಮಾಡಿ ಹೇಳಿದ್ದಾಳೆ. ಕ್ಷುಲ್ಲಕ ಕಾರಣಕ್ಕೆ ಆರಂಭವಾದ ಗಂಡ-ಹೆಂಡತಿ …

Read More »