Breaking News

ರಾಜಕೀಯ

(ಎಂಜಿಎನ್‌ಆರ್‌ಇಜಿಎಸ್‌)ಗೆ ಹೆಚ್ಚುವರಿಯಾಗಿ 15 ಸಾವಿರ ಕೋಟಿ ರೂ. ನೀಡಲು ಕೇಂದ್ರ ಸರ್ಕಾರ ಚಿಂತನೆ

ನವದೆಹಲಿ: ಮಹಾತ್ಮಾ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆ (ಎಂಜಿಎನ್‌ಆರ್‌ಇಜಿಎಸ್‌)ಗೆ ಹೆಚ್ಚುವರಿಯಾಗಿ 15 ಸಾವಿರ ಕೋಟಿ ರೂ. ನೀಡಲು ಕೇಂದ್ರ ಸರ್ಕಾರ ಚಿಂತನೆ ನಡೆಸುತ್ತಿದೆ. ಕೇಂದ್ರ ಗ್ರಾಮೀಣಾಭಿವೃದ್ಧಿ ಖಾತೆಯಿಂದ ಹೆಚ್ಚುವರಿಯಾಗಿ ಶೇ.20 ಮೊತ್ತ ನೀಡಬೇಕು ಎಂದು ಕೋರಿಕೆ ಸಲ್ಲಿಕೆಯಾಗಿದ್ದು, ಅದಕ್ಕೆ ಸಮ್ಮತಿ ನೀಡುವ ಸಾಧ್ಯತೆಗಳು ಅಧಿಕವಾಗಿವೆ.   ಕರ್ನಾಟಕ, ಉತ್ತರ ಪ್ರದೇಶ, ಬಿಹಾರ, ಮಧ್ಯಪ್ರದೇಶ ಸೇರಿದಂತೆ ಹಲವು ಸರ್ಕಾರಗಳಿಂದಲೂ ಕೂಡ ಹೆಚ್ಚುವರಿ ಮೊತ್ತ ನೀಡುವ ಬಗ್ಗೆ ಒತ್ತಡಗಳು ಹೆಚ್ಚುತ್ತಿವೆ. ರಾಜ್ಯಗಳು 5,517.87 …

Read More »

ಮೈಸೂರು ದಸರಾಕ್ಕೆ ಮುನ್ನುಡಿ : ಸಾಂಪ್ರದಾಯಿಕ ಪೂಜೆ ಮೂಲಕ ಅರಮನೆ ಪ್ರವೇಶಿಸಿದ ಗಜಪಡೆ

ಮೈಸೂರು : ನಾಡಹಬ್ಬ ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆ ಜಂಬೂ ಸವಾರಿಯ ರೂವಾರಿಗಳಾದ ಗಜಪಡೆಗೆ ಅರಮನೆಯ ಜಯಮಾರ್ತಾಂಡ ದ್ವಾರದಲ್ಲಿ ಸಾಂಪ್ರದಾಯಿಕ ಪೂಜೆ ಸಲ್ಲಿಸುವ ಮೂಲಕ ಅರಮನೆ ಅಂಗಳಕ್ಕೆ ಸ್ವಾಗತಿಸಲಾಯಿತು. ಈ ಮೂಲಕ ಅರಮನೆ ಅಂಗಳದಲ್ಲಿ ನಾಡಹಬ್ಬದ ಸಂಭ್ರಮ ಕಳೆಗಟ್ಟಿತು.   ದಸರಾ ಮಹೋತ್ಸವದಲ್ಲಿ ಭಾಗವಹಿಸಲು ಕಾಡಿನಿಂದ ನಾಡಿಗೆ ಬಂದು ಅರಣ್ಯ ಭವನದಲ್ಲಿ ಬೀಡು ಬಿಟ್ಟಿದ್ದ ಅಭಿಮನ್ಯು ನೇತೃತ್ವದ ಗಜಪಡೆಗೆ 9.20 ರಿಂದ 10 ರೊಳಗೆ ಸಲ್ಲುವ ಕನ್ಯಾ ಲಗ್ನದಲ್ಲಿ ಅರಮನೆಯ ಜಯಮಾರ್ತಾಂಡ …

Read More »

ಬೆಳಗಾವಿ ಜಿಪಂ ಸಿಇಒ ದರ್ಶನ್ ವಿರುದ್ಧ ಸಿಎಂ ಬೊಮ್ಮಾಯಿ ಗರಂ

ಬೆಳಗಾವಿ: ಜಿಲ್ಲೆಯಲ್ಲಿ ಪ್ರವಾಹದಿಂದ ಹಾನಿಗೊಳಗಾದ ಕಾಮಗಾರಿಗಳಿಗೆ ಮಾ. 31ಕ್ಕೆ ಅನುಮೋದನೆ ಕೊಟ್ಟು ಇದುವರೆಗೆ ಒಂದೂ ಕಾಮಗಾರಿ ಆರಂಭಿಸದ ಜಿಲ್ಲಾ ಪಂಚಾಯತ್ ಸಿಇಒ ದರ್ಶನ್ ಎಚ್.ವಿ. ಅವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತರಾಟೆಗೆ ತೆಗೆದುಕೊಂಡರು.   ರಾಜ್ಯದ ಜಿಲ್ಲಾ ಪಂಚಾಯತ್ ಸಿಇಒಗಳೊಂದಿಗೆ ಮಂಗಳವಾರ ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಗತಿ ಪರಿಶೀಲನೆ ನಡೆಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬೆಳಗಾವಿ ಜಿಲ್ಲೆಯ ಮುಖ್ಯಮಂತ್ರಿಗಳ ವಿಶೇಷ ಮಂಜೂರಾತಿ ಕಾರ್ಯಕ್ರಮದಡಿ 597 ಕಾಮಗಾರಿಗಳು ಇವೆ. ಇದರಲ್ಲಿ ಕೇವಲ 215 …

Read More »

ಶಿರಡಿ ಸಾಯಿಬಾಬಾಗೆ ಭಕ್ತ 100 ಗ್ರಾಂ ತೂಕದ ಬಂಗಾರದ ಕೊಳಲು ಸಮರ್ಪಿಸಿದ್ದಾರೆ.

ಮಹಾರಾಷ್ಟ್ರ): ಮಹಾರಾಷ್ಟ್ರದ ಅಹ್ಮದ್​​ ನಗರ ಜಿಲ್ಲೆಯಲ್ಲಿರುವ ಪ್ರಸಿದ್ಧ ಶಿರಡಿ ಸಾಯಿಬಾಬಾಗೆ ದೆಹಲಿ ಮೂಲದ ಭಕ್ತರೊಬ್ಬರು ಚಿನ್ನದ ಕೊಳಲು ಅರ್ಪಿಸಿ ತಮ್ಮ ಭಕ್ತಿಯನ್ನು ಮರೆದಿದ್ದಾರೆ. ಅಂದಾಜು 100 ಗ್ರಾಂ ತೂಕದ ಈ ಬಂಗಾರದ ಕೊಳಲು 4.85 ಲಕ್ಷ ರೂ. ಬೆಲೆ ಬಾಳುತ್ತದೆ. ದೆಹಲಿಯ ರಿಷಬ್ ಲೋಹಿಯಾ ಎಂಬುವವರೇ ಶಿರಡಿ ಸಾಯಿಬಾಬಾಗೆ ಚಿನ್ನದ ಕೊಳಲು ಅರ್ಪಿಸಿರುವ ಭಕ್ತರು. ತಮ್ಮ ಕುಟುಂಬದ ಸಮೇತ ಶಿರಡಿಗೆ ಬಂದು ಇದನ್ನು ದೇವರಿಗೆ ಸಮರ್ಪಿಸಿದ್ದಾರೆ. ಸಾಯಿ ಬಾಬಾ ನಮಗೆ ಶ್ರೀಕೃಷ್ಣನ …

Read More »

ಈ 4 ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಪ್ರವೇಶ ಪಡೆಯದಂತೆ ವಿದ್ಯಾರ್ಥಿಗಳಿಗೆ VTU ಸೂಚನೆ

ರಾಜ್ಯದಲ್ಲಿ ದ್ವಿತೀಯ ಪಿಯುಸಿ ಫಲಿತಾಂಶದ ಜೊತೆಗೆ ಸಿಇಟಿ ಫಲಿತಾಂಶವೂ ಈಗಾಗಲೇ ಪ್ರಕಟಗೊಂಡಿದೆ. ಹೀಗಾಗಿ ವಿದ್ಯಾರ್ಥಿಗಳು ತಾಂತ್ರಿಕ ಶಿಕ್ಷಣ ಕೋರ್ಸ್ ಗಳಿಗೆ ಪ್ರವೇಶ ಪಡೆಯುತ್ತಿದ್ದಾರೆ. ಇದರ ಮಧ್ಯೆ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ವಿದ್ಯಾರ್ಥಿಗಳಿಗೆ ಮಹತ್ವದ ಸೂಚನೆಯೊಂದನ್ನು ನೀಡಿದೆ.   ಅಗತ್ಯ ಮೂಲ ಸೌಕರ್ಯ ಕೊರತೆ ಹಿನ್ನೆಲೆಯಲ್ಲಿ ರಾಜ್ಯದ ನಾಲ್ಕು ಇಂಜಿನಿಯರಿಂಗ್ ಕಾಲೇಜುಗಳ ಮಾನ್ಯತೆಯನ್ನು ರದ್ದುಗೊಳಿಸಲಾಗಿದ್ದು, ವಿದ್ಯಾರ್ಥಿಗಳು ಈ ಕಾಲೇಜಿನಲ್ಲಿ ಪ್ರವೇಶ ಪಡೆಯದಂತೆ ಸೂಚನೆ ನೀಡಲಾಗಿದೆ. ಅಲ್ಲದೆ ಈ ಕಾಲೇಜುಗಳಲ್ಲಿ ಸೀಟು ಹಂಚಿಕೆ …

Read More »

ಮೊಹರಂ ಹಬ್ಬದ ವೇಳೆ ಇಬ್ಬರು ಮುಸ್ಲಿಂ ಯುವಕರಿಗೆ ಚೂರಿ ಇರಿತ, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿರುವುದು ಮತ್ತೊಮ್ಮೆ ಸಾಬೀತ

ಗದಗ : ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿರುವುದು ಮತ್ತೊಮ್ಮೆ ಸಾಬೀತಾಗಿದೆ. ಸದ್ಯ ಕರಾವಳಿ ಭಾಗದಲ್ಲಿ ನಡೆಯುತ್ತಿದ್ದ ಹಿಂಸಾತ್ಮಕ ಕೃತ್ಯಗಳು ಇದೀಗ ರಾಜ್ಯದ ಬೇರೆ ಜಿಲ್ಲೆಗಳಿಗೆ ನಿಧಾನವಾಗಿ ಹಬ್ಬುತ್ತಿವೆ.   ಅಂದ ಹಾಗೇ ಗದಗ ತಾಲೂಕಿನ ಮಲ್ಲಸಮುದ್ರ ಗ್ರಾಮದಲ್ಲಿ ಇಬ್ಬರು ಯುವಕರಿಗೆ ಚೂರಿಯಿಂದ ಇರಿಯಲಾಗಿದ್ದು, ಚೂರಿ ಇರಿತಕ್ಕೊಳಗಾದವರನ್ನು ದಾದಾಪೀರ್ ಹೊಸಮನಿ(೨೩), ಮುಸ್ತಾಕ್ ಹೊಸಮನಿ(೨೪),ಎಂದು ಗುರುತಿಸಲಾಗಿದೆ. ಇನ್ನು ಇನ್ನು ಗದಗ ತಾಲೂಕಿನ ಮಲ್ಲಸಮುದ್ರ ಗ್ರಾಮದಲ್ಲಿ ಮೊಹರಂ ಮೆರವಣಿಗೆ ನಡೆಯುತ್ತಿತ್ತು.ಈ ವೇಳೆ ಕಾಲು ತುಳಿದಿದ್ದಕ್ಕೆ …

Read More »

ವಿಶ್ವರೂಪಿಣಿ ಹುಲಿಗೆಮ್ಮ ದೇವಿಯ ಅವತಾರದಲ್ಲಿ ಪ್ರಿಯಾಂಕಾ ಉಪೇಂದ್ರ

(ಕೊಪ್ಪಳ): ಜಿಲ್ಲೆಯ ಪ್ರಮುಖ ಧಾರ್ಮಿಕ ಕ್ಷೇತ್ರ ಹುಲಿಗಿಯ ಹುಲಿಗೆಮ್ಮ ದೇವಿಯ ಚರಿತ್ರೆ ಮತ್ತು ಪವಾಡ ಬಿಂಬಿಸುವ ‘ವಿಶ್ವರೂಪಿಣಿ ಹುಲಿಗೆಮ್ಮ’ ಸಿನಿಮಾ ಚಿತ್ರೀಕರಣಕ್ಕೆ ಮಂಗಳವಾರ ದೇವಸ್ಥಾನದ ಆವರಣದಲ್ಲಿ ಚಾಲನೆ ಲಭಿಸಿತು.   ಹುಲಿಗೆಮ್ಮ ದೇವಿಗೆ ವಿಶೇಷ ಪೂಜೆ ಸಲ್ಲಿಸಿದ ನಂತರ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ಘಟಕದ ಅಧ್ಯಕ್ಷೆ ಕವಿತಾ ಈಶ್ವರ್ ಸಿಂಗ್ ಶುಭಕೋರಿ ಚಿತ್ರೀಕರಣಕ್ಕೆ ಚಾಲನೆ ಕೊಟ್ಟರು. ಚಲನಚಿತ್ರದ ನಿರ್ದೇಶಕ ಓಂಸಾಯಿಪ್ರಕಾಶ್ ಮಾತನಾಡಿ ‘ಹುಲಿಗೆಮ್ಮದೇವಿಗೆ ಹೊರರಾಜ್ಯದಲ್ಲೂ ಭಕ್ತರಿದ್ದಾರೆ. ಪ್ರಿಯಾಂಕಾ ಉಪೇಂದ್ರ ಮುಖ್ಯಭೂಮಿಕೆಯಲ್ಲಿದ್ದು …

Read More »

ಅನುಕಂಪದ ಉದ್ಯೋಗ’ ಹಕ್ಕಲ್ಲ – ‘ಸುಪ್ರೀಂ ಕೋರ್ಟ್’ ಮಹತ್ವದ ಅಭಿಪ್ರಾಯ

ನವದೆಹಲಿ: ಉದ್ಯೋಗಿ ಮರಣ ಹೊಂದಿದ ನಂತ್ರ ಅವರ ಕುಟುಂಬದ ಓರ್ವ ಸದಸ್ಯನಿಗೆ ಅನುಕಂಪದ ಆಧಾರದಲ್ಲಿ ( Compassionate employment ) ನೀಡುವ ಉದ್ಯೋಗ ಸ್ಥಾಪಿತವಾದ ಹಕ್ಕಲ್ಲ. ಈ ರೀತಿಯ ಉದ್ಯೋಗ ಪಡೆದವರಿಂದ ಕರ್ತವ್ಯ ಲೋಪಗಳಾದರೇ, ಅವರಿಗೆ ನೀಡಲಾದ ಹುದ್ದೆಯ ಅರ್ಹತೆಯನ್ನು ಹೊಂದುವಲ್ಲಿ ವಿಫಲವಾದರೇ, ಅಂತಹವರನ್ನು ಕೆಲಸದಿಂದ ತೆಗೆಯ ಬಹುದು ಎಂದು ಸುಪ್ರೀಂ ಕೋರ್ಟ್ ( Supreme Court ) ಮಹತ್ವದ ಅಭಿಪ್ರಾಯ ಪಟ್ಟಿದೆ.   ಈ ಸಂಬಂಧ ಪ್ರಕರಣವೊಂದರ ವಿಚಾರಣೆ …

Read More »

ಡೆತ್​ನೋಟ್​ ಬರೆದಿಟ್ಟು ಉಪನ್ಯಾಸಕಿ ಆತ್ಮಹತ್ಯೆ: ಹುಟ್ಟು ಹಬ್ಬದ ದಿನವೇ ದುರಂತ ಅಂತ್ಯ

ಚಾಮರಾಜನಗರ: ಕಾಲೇಜು ಉಪನ್ಯಾಸಕಿಯೊಬ್ಬರು ಹಾಸ್ಟೆಲ್​ನಲ್ಲಿ ನೇಣುಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದಲ್ಲಿ ಸಂಭವಿಸಿದೆ. ಸಾವಿಗೂ ಮುನ್ನ ಬರೆದ ಡೆತ್‌ನೋಟ್ ಸಿಕ್ಕಿದೆ. ಚಂದನಾ(26) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಯಳಂದೂರು ತಾಲೂಕಿನ ಅಂಬಳೆ ಗ್ರಾಮದ ಚಂದನಾ, ಚಾಮರಾಜನಗರದ ಜೆಎಸ್‌ಎಸ್‌ ಕಾಲೇಜಿನಲ್ಲಿ ಉಪನ್ಯಾಸಕಿಯಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಇಂದು(ಆ.9) ಅವರ ಬರ್ತ್​ ಡೇ. ಈ ದಿನವೇ ಜೆಎಸ್‌ಎಸ್ ಕಾಲೇಜಿನ ಹಾಸ್ಟೆಲ್​ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಡೆತ್​ನೋಟ್​ ಪತ್ತಯಾಗಿದ್ದು, ‘ನನ್ನ ಸಾವಿಗೆ ನಾನೇ ಕಾರಣ’ ಎಂದು ಬರೆಯಲಾಗಿದೆ. ಚಾಮರಾಜನಗರ ಪಟ್ಟಣ …

Read More »

ವಿಧಾನಸಭಾ ಚುನಾವಣೆಯಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರಲಿದ್ದು, ನಾನು ಕೂಡ ಮುಖ್ಯಮಂತ್ರಿ ಸ್ಥಾನದ ಅಕಾಂಕ್ಷಿ: ಉಮೇಶ್ ಕತ್ತಿ

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರಲಿದ್ದು, ನಾನು ಕೂಡ ಮುಖ್ಯಮಂತ್ರಿ ಸ್ಥಾನದ ಅಕಾಂಕ್ಷಿ ಎಂದು ಹೇಳುವ ಮೂಲಕ ಮತ್ತೆ ಅರಣ್ಯ ಮತ್ತು ಆಹಾರ ನಾಗರಿಕ ಪೂರೈಕೆ ಸಚಿವ ಉಮೇಶ್ ಕತ್ತಿ ಸಿಎಂ ಸ್ಥಾನವನ್ನು ಜಪಿಸಿದ್ದಾರೆ. ಮಳವಳ್ಳಿ ತಾಲ್ಲೂಕಿನ ಶಿವನಸಮುದ್ರದ ಗಗನಚುಕ್ಕಿ ಜಲಪಾತ ವೀಕ್ಷಣೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಉಮೇಶ ಕತ್ತಿ ಮುಖ್ಯಮಂತ್ರಿ ಬದಲಾವಣೆ ಕೇವಲ ಊಹಾಪೋಹವಾಗಿದೆ. ನಾನು ಕೂಡ 8 ಬಾರಿ ಶಾಸಕನಾಗಿ ಆಯ್ಕೆಯಾಗಿ, ಹಲವು …

Read More »