Breaking News

ರಾಜಕೀಯ

ಜೈಲಿನಲ್ಲಿದ್ದ ಸ್ನೇಹಿತರಿಗೆ ಮಾದಕ ವಸ್ತು ಪೂರೈಕೆ

ಬೆಂಗಳೂರು: ಜೈಲಿನಲ್ಲಿರುವ ಸ್ನೇಹಿತರಿಗೆ ಮಾದಕ ವಸ್ತು ಸರಬರಾಜು ಮಾಡಲು ಯತ್ನಿಸಿದ ಇಬ್ಬರು ಯುವತಿಯರನ್ನ ಪರಪ್ಪನ ಅಗ್ರಹಾರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಚಾಮರಾಜಪೇಟೆ ಮೂಲದ ಸಂಗೀತಾ ಅಲ್ಫೋನ್ಸ್ ಮತ್ತು ಛಾಯಾ ಎಂದು ಗುರುತಿಸಲಾಗಿದೆ. ಜೈಲಿನಲ್ಲಿರುವ ಸ್ನೇಹಿತರಾದ ಲೋಹಿತ್‍ ಹಾಗೂ ಕಾಳಪ್ಪ ಎಂಬುವವರನ್ನು ಜುಲೈ 12ರಂದು ಭೇಟಿಯಾಗಲು ಬಂದಿದ್ದರು. ಸಂಗೀತಾ ಹಾಗೂ ಛಾಯಾರನ್ನ ಭದ್ರತಾ ಸಿಬ್ಬಂದಿ ಪರಿಶೀಲಿಸಿದಾಗ ಇಬ್ಬರೂ ಸಹ ಗುಪ್ತಾಂಗದಲ್ಲಿ ಏನನ್ನೋ ಅಡಗಿಸಿಟ್ಟಿರುವುದು ಪತ್ತೆಯಾಗಿದೆ.

Read More »

ಗೋಕಾಕ ತಾಲೂಕಿನ ಭಾಗದಲ್ಲಿ ಮತ್ತೆ ಪ್ರವಾಹ ಭೀತಿ

ಜಿಲ್ಲಾದ್ಯಂತ ಧಾರಾಕಾರ ಮಳೆಯಾಗುತ್ತಿದ್ದು ಮೂಡಲಗಿ ತಾಲೂಕಿನ ನಾಲ್ಕು ಸೇತುವೆಗಳು ಜಲಾವೃತವಾಗಿದೆ. ಕೆಲ ಬೈಕ್ ಸವಾರರು ಅಪಾಯ ಲೆಕ್ಕಿಸದೇ ಜಲಾವೃತವಾದ ಸೇತುವೆ ಮೇಲೆಯೇ ಸಂಚರಿಸಿದ್ದಾರೆ. ಪ್ರಮುಖವಾಗಿ ಅವರಾದಿ – ಮಹಾಲಿಂಗಾಪುರಕ್ಕೆ ಸಂಪರ್ಕ ಕಲ್ಪಿಸುವ ಸೇತುವೆ, ಸುಣಧೋಳ -ಮೂಡಲಗಿಗೆ ಸಂಪರ್ಕ ಕಲ್ಪಿಸುವ ಸೇತುವೆ, ವಡೇರಹಟ್ಟಿ-ಉದಗಟ್ಟಿಗೆ ಸಂಪರ್ಕ ಕಲ್ಪಿಸುವ ಸೇತುವೆ ಹಾಗೂ ಮೂಡಲಗಿ-ಭೈರನಹಟ್ಟಿಗೆ ಸಂಪರ್ಕ ಕಲ್ಪಿಸುವ ಸೇತುವೆ ಜಲಾವೃತವಾಗಿವೆ. ಪರಿಣಾಮ ಈ ಗ್ರಾಮಗಳು ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಿಗೆ ಸಂಚಾರ ಸ್ಥಗಿತವಾಗಿದೆ. ಸದ್ಯ ಬಳ್ಳಾರಿ ನಾಲಾ, …

Read More »

ಖಾನಾಪುರ ತಾಲೂಕಿನಲ್ಲಿ ರಸ್ತೆ ಮೇಲೆ ಬಿದ್ದ ಮರ: ತೆರವುಗೊಳಿಸದ ಅಧಿಕಾರಿಗಳ ನಿರ್ಲಕ್ಷ

ಖಾನಾಪುರ ತಾಲೂಕಿನ ಕಡತನ ಬಾಗೇವಾಡಿಯಿಂದ ಬೇಕವಾqಗೆÀ ಹೋಗುವ ರಸ್ತೆ ಮೇಲೆ ಪಕ್ಕದ ಗಿಡ ಮರಗಳು ಬಿದ್ದು ಸಾರ್ವಜನಿಕರ ಸಂಚಾರಕ್ಕೆ ತೊಂದರೆಯಾಗುತ್ತಿದೆ. ಅರಣ್ಯ ಇಲಾಖೆಯ ಈ ನಿರ್ಲಕ್ಷ್ಯ ಧೋರಣೆ ಹಾಗೂ ಲೋಕೋಪಯೋಗಿ ಇಲಾಖೆಯ ನಿರ್ಲಕ್ಷ್ಯಕ್ಕೆ ಸಾರ್ವಜನಿಕರು ಬೇಸರ ವ್ಯಕ್ತಪಡಿಸಿದ್ದಾರೆ.ಹೌದು ಜೂನ್ ತಿಂಗಳಿನಿಂದ ಅಗಸ್ಟ್ ತಿಂಗಳವರೆಗೆ ಅತಿ ಹೆಚ್ಚು ಮಳೆಗಾಲದ ದಿನಗಳು, ಈ ದಿನಗಳಲ್ಲಿ ರಸ್ತೆ ಪಕ್ಕದಲ್ಲಿರುವ ಮರಗಳು ರಸ್ತೆಯ ಮೇಲೆ ಬಿದ್ದು ಸಾರ್ವಜನಿಕರಿಗೆ ತೊಂದರೆಗಳಾಗುವುದು ಜಾಸ್ತಿ. ಆದರೆ ಈ ರೀತಿ ಆಗಬಹುದಾದ …

Read More »

ಕುತೂಹಲ ಮೂಡಿಸಿದ ಕಿಚ್ಚ ಸುದೀಪ್-ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಭೇಟಿ

ನವದೆಹಲಿ: ಅಭಿನಯ ಚಕ್ರವರ್ತಿ, ನಟ ಕಿಚ್ಚ ಸುದೀಪ್ ದೆಹಲಿಯಲ್ಲಿ ಇಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರನ್ನು ಭೇಟಿಯಾಗಿದ್ದು, ಕುತೂಹಲಕ್ಕೆ ಕಾರಣವಾಗಿದೆ.   ವಿಕ್ರಾಂತ್ ರೋಣ ಚಿತ್ರದ ಪ್ರಚಾರದಲ್ಲಿ ಬಿಸಿಯಾಗಿರುವ ನಟ ಕಿಚ್ಚ ಸುದೀಪ್ ದೆಹಲಿಯಲ್ಲಿ ಬೀಡುಬಿಟ್ಟಿದ್ದು, ಈ ನಡುವೆ ಇಂದು ಬೆಳಿಗ್ಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ನಿವಾಸಕ್ಕೆ ತೆರಳಿ ಅವರನ್ನು ಭೇಟಿಯಾಗಿ ಕೆಲ ಕಾಲ ಸಮಾಲೋಚನೆ ನಡೆಸಿದ್ದಾರೆ.   ಈ ವೇಳೆ ಕೇಂದ್ರ ಸಚಿವರ ಜತೆ ಉಪಹಾರವನ್ನು …

Read More »

ಪ್ರವಾಹ ಆತಂಕ; ಸರ್ಕಾರ, ಸಚಿವರು, ಜಿಲ್ಲಾಡಳಿತ ಜನತೆಗೆ ಶೀಘ್ರ ಸ್ಪಂದಿಸಲಿ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್‌ ಜಾರಕಿಹೊಳಿ 

    ಬೆಳಗಾವಿ: ಕಳೆದ ಮೂರು ವರ್ಷಗಳಿಂದ ನಿರಂತರ ಪ್ರವಾಹ ಉಂಟಾಗುತ್ತಿದ್ದು, ಮತ್ತೆ ಈ ವರ್ಷವೂ ಭಾರೀ ಮಳೆ ಆಗುತ್ತಿದೆ. ಆದ್ದರಿಂದ ಪ್ರವಾಹ ಉಂಟಾಗುವ ಸಾಧ್ಯತೆಗಳಿದ್ದು, ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಅವರು ಜನರಿಗೆ ತೊಂದರೆ ಆಗದಂತೆ ಶೀಘ್ರ ಅಧಿಕಾರಿಗಳ ಸಭೆ ನಡೆಸಿ ಕ್ರಮಕೈಗೊಳ್ಳಬೇಕೆಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್‌ ಜಾರಕಿಹೊಳಿ ಅವರು ಆಗ್ರಹಿಸಿದರು.   ನಗರದ ಕಾಂಗ್ರೆಸ್‌ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸರ್ಕಾರ, ಸಚಿವರು, ಜಿಲ್ಲಾಡಳಿತ ಎಲ್ಲಾ …

Read More »

ಮುಂದಿನ ಬಿಜೆಪಿ ರಾಜ್ಯಾಧ್ಯಕ್ಷರ ಹೆಸರು ಫೈನಲ್. ಸಚಿವ ಸುನಿಲ್ ಕುಮಾರ್ ಗೆ ಒಲಿದ ಅದೃಷ್ಟ.

ಬೆಂಗಳೂರು: ಮುಂದಿನ ಬಿಜೆಪಿ ರಾಜ್ಯಾಧ್ಯಕ್ಷರ ಹೆಸರು ಫೈನಲ್ ಆಗಿದ್ದು, ಸಚಿವ ಸುನಿಲ್ ಕುಮಾರ್ ಅವರಿಗೆ ಅದೃಷ್ಟ ಒಲಿದು ಬಂದಿದೆ. ನಳಿನ್ ಕುಮಾರ್ ಕಟೀಲ್ ಅವರ ಅಧಿಕಾರಾವಧಿ ಆಗಸ್ಟ್ ತಿಂಗಳಿನಲ್ಲಿ ಅಂತ್ಯವಾಗಲಿದೆ. ಈ ಹಿನ್ನೆಲೆಯಲ್ಲಿ ಇಂದು ಖಾಸಗಿ ರೆಸಾರ್ಟ್ ನಲ್ಲಿ ನಡೆದ ಬಿಜೆಪಿ ಚಿಂತನ ಮಂಥನ ಸಭೆಯಲ್ಲಿ ಸುನಿಲ್ ಕುಮಾರ್ ರನ್ನು ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ಮಾಡಬೆಕು ಎಂದು ತೀರ್ಮಾನಿಸಲಾಗಿದೆ. ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್‌ ಸಂತೋಷ್‌, ನಳಿನ್ ಕುಮಾರ್ ಕಟೀಲ್, …

Read More »

ರಾತ್ರೋರಾತ್ರಿ ಸರ್ಕಾರ ಯು ಟರ್ನ್: ಸರ್ಕಾರಿ ಕಚೇರಿಗಳಲ್ಲಿ ಫೋಟೋ, ವಿಡಿಯೋ ನಿಷೇಧ ಆದೇಶ ವಾಪಸ್

ಬೆಂಗಳೂರು: ರಾಜ್ಯದ ಎಲ್ಲಾ ಸರ್ಕಾರಿ ಇಲಾಖೆಗಳ ಕಚೇರಿಗಳಲ್ಲಿ ಪೂರ್ವಾನುಮತಿ ಇಲ್ಲದೆ ಸಾರ್ವಜನಿಕರು ಅನಧಿಕೃತವಾಗಿ ಫೋಟೋ, ವಿಡಿಯೋ ತೆಗೆಯುವುದನ್ನು ಸರ್ಕಾರ ನಿಷೇಧಿಸಿ ಆದೇಶ ಹೊರಡಿಸಿದ್ದು, ಈ ಆದೇಶವನ್ನು ತಡರಾತ್ರಿ ವಾಪಾಸ್ ಪಡೆದುಕೊಳ್ಳಲಾಗಿದೆ.   ನೌಕರರ ಮನವಿಯ ಮೇರೆಗೆ ಸರ್ಕಾರ ಆದೇಶ ಹೊರಡಿಸಿದ್ದು, ಆದೇಶಕ್ಕೆ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಸರ್ಕಾರಿ ಇಲಾಖೆಗಳ ಕಚೇರಿ ವೇಳೆಯಲ್ಲಿ ಖಾಸಗಿ ವ್ಯಕ್ತಿಗಳು ಫೋಟೋ, ವಿಡಿಯೋ ತೆಗೆಯಬಾರದು ಎನ್ನುವ ಆದೇಶವನ್ನು ತಡರಾತ್ರಿ ವಾಪಾಸ್ ಪಡೆಯಲಾಗಿದೆ.

Read More »

ರೈತರಿಗೆ ಮೇವು ಕತ್ತರಿಸುವ ಯಂತ್ರ ಹಾಗೂ ಮ್ಯಾಟ್‍ಗಳನ್ನು ವಿತರಿಸಿದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

  ಗೋಕಾಕ: ಕೆಎಂಎಫ್‍ನಿಂದ ರೈತ ಸಮುದಾಯಕ್ಕೆ ಸಾಕಷ್ಟು ಯೋಜನೆಗಳನ್ನು ಅನುಷ್ಠಾನಗೊಳಿಸಿದ್ದು, ಅವುಗಳನ್ನು ಸದ್ಬಳಕೆ ಮಾಡಿಕೊಳ್ಳುವಂತೆ ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ರೈತ ವೃಂದಕ್ಕೆ ಕರೆ ನೀಡಿದರು. ಇಲ್ಲಿಯ ಎನ್‍ಎಸ್‍ಎಫ್ ಅತಿಥಿ ಗೃಹದಲ್ಲಿ ಜಿಲ್ಲಾ ಹಾಲು ಒಕ್ಕೂಟದಿಂದ ನಡೆದ ರಾಸು ವಿಮೆಗಳ ಚೆಕ್ ವಿತರಿಸಿ ಮಾತನಾಡಿದ ಅವರು, ರೈತರ ಆರ್ಥಿಕ ಅಭಿವೃದ್ಧಿಗಾಗಿಯೇ ಕೆಎಂಎಫ್ ಬದ್ಧವಿದ್ದು ರೈತರಿಗೆ ಬೇಕಾಗಿರುವ ಎಲ್ಲ ಸೌಲತ್ತುಗಳನ್ನು ನೀಡುತ್ತಿದೆ ಎಂದು ಹೇಳಿದರು. ರೈತರಿಗೆ …

Read More »

ಧಾರಾಕಾರ ಮಳೆ: ವಿವಿಧೆಡೆ ಸಂಚಾರ ವ್ಯತ್ಯಯ

ಖಾನಾಪುರ (ಬೆಳಗಾವಿ ಜಿಲ್ಲೆ): ತಾಲ್ಲೂಕಿನ ಭೀಮಗಡ ಅರಣ್ಯ ಪ್ರದೇಶದಲ್ಲಿ ಸುರಿದ ಮಳೆಯಿಂದಾಗಿ ಮಂತುರ್ಗಾ ಸೇತುವೆ ಮೇಲೆ ನೀರು ಹರಿದಿದೆ. ಇದರಿಂದ ಕರ್ನಾಟಕ-ಗೋವಾ ರಾಜ್ಯ ಹೆದ್ದಾರಿ ಸಂಚಾರ ಗುರುವಾರ ಸಂಜೆ 5ರವರೆಗೂ ಬಂದ್‌ ಆಗಿತ್ತು. ಅರಣ್ಯದಲ್ಲಿ ಬುಧವಾರ ರಾತ್ರಿಯಿಡೀ ಮಳೆ ಸುರಿಯಿದೆ. ಸಿಂಧನೂರು- ಹೆಮ್ಮಡಗಾ ಅಂತರರಾಜ್ಯ ಹೆದ್ದಾರಿ ಭಾಗಶಃ ಮುಳುಗಿ ಸಂಚಾರ ಬಂದ್ ಆಗಿತ್ತು. ಸಂಜೆ ವೇಳೆಗೆ ಇಳಿಮುಖವಾದ ನಂತರ ವಾಹನ ಸಂಚಾರ ಮತ್ತೆ ಆರಂಭವಾಯಿತು. ತಾಲ್ಲೂಕಿನಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದ್ದು ಮುಂಜಾಗ್ರತೆಯಾಗಿತಾಲ್ಲೂಕಿನ …

Read More »

ಶಾಲಾ ವಿದ್ಯಾರ್ಥಿಗಳಿಗೆಮೊಟ್ಟೆ ವಿತರಣೆಗೆ ಬ್ರೇಕ್!

ಬೆಂಗಳೂರು : ರಾಜ್ಯದ ಶಾಲಾ ವಿದ್ಯಾರ್ಥಿಗಳಿಗೆ ಮತ್ತೊಂದು ಶಾಕ್ ಎದುರಾಗಿದ್ದು, ಶಾಲಾ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಬಿಸಿಯೂಟಕ್ಕೆ ಮೊಟ್ಟೆ ನೀಡದಿರಲು ಎನ್ ಇಪಿ ಸಮಿತಿ ಶಿಕ್ಷಣ ಇಲಾಖೆಗೆ ಶಿಫಾರಸು ಮಾಡಿದೆ ಎನ್ನಲಾಗಿದೆ. ಶಿಕ್ಷಣ ಇಲಾಖೆಯ ಆರ್ಥಿಕ ಸಂಕಷ್ಟದಿಂದ ಶಾಲಾ ವಿದ್ಯಾರ್ಥಿಗಳಿಗೆ ಈ ಬಾರಿ ಶೂ- ಸಾಕ್ಸ್, ಬೈಸಿಕಲ್ ನೀಡಲಾಗುತ್ತಿಲ್ಲ. ಈ ನಡುವೆ ಮಧ್ಯಾಹ್ನದ ಬಿಸಿಯೂಟಕ್ಕೆ ಮಕ್ಕಳಿಗೆ ಮೊಟ್ಟೆ ನೀಡದಿರಲು ಎನ್‌ಇಪಿ ಸಮಿತಿ ಶಿಕ್ಷಣ ಇಲಾಖೆಗೆ ಶಿಫಾರಸ್ಸು ಮಾಡಿದೆ ಎನ್ನಲಾಗಿದೆ. ಮೊಟ್ಟೆ ಹಾಗೂ …

Read More »