Breaking News

ರಾಜಕೀಯ

, ವಿಕಲಚೇತನರ, ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆ…

ಗಣಿ & ಭೂವಿಜ್ಞಾನ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ, ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆ… ಭಾ.ಜ.ಪ ಮುಖಂಡರು, ವಿಜಯಪುರ ನಗರ ಶಾಸಕರಾದ ಸನ್ಮಾನ್ಯ ಶ್ರೀ ಬಸನಗೌಡ ಪಾಟೀಲ ಯತ್ನಾಳರವರು, ಇಂದು ಮಾನ್ಯ ಗಣಿ & ಭೂವಿಜ್ಞಾನ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ, ಹಿರಿಯ ನಾಗರಿಕರ ಸಬಲೀಕರಣ ಸಚಿವರಾದ ಸನ್ಮಾನ್ಯ ಶ್ರೀ ಹಾಲಪ್ಪ ಆಚಾರ್ ರವರ ಅಧ್ಯಕ್ಷತೆಯಲ್ಲಿ ಜಿಲ್ಲಾ …

Read More »

ಪಂಚಮಸಾಲಿ ಸಮಾಜದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಬೃಹತ್ ಜಾಗೃತಾ ಸಭೆ

ಅಣ್ಣಿಗೇರಿ ತಾಲೂಕಿನ ಅಂಜುಮನ್ ಶಾದಿ ಮಹಲ್ ನಲ್ಲಿ ಪಂಚಮಸಾಲಿ ಸಮಾಜದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಬೃಹತ್ ಜಾಗೃತಾ ಸಭೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದೆ. ಪ್ರಥಮ ಜಗದ್ಗುರು ಶ್ರೀ ಬಸವಜಯ ಮೃತ್ಯುಂಜಯ ಸ್ವಾಮಿಗಳ ನೇತ್ರತ್ವದಲ್ಲಿ ನಡೆಯುತ್ತಿರುವ ಪಂಚಮಸಾಲಿ ಸಮಾಜದ 2ಎ ಮತ್ತು ಸರಕಾರದಲ್ಲಿ ಓ.ಬಿ.ಸಿ ಮೀಸಲಾತಿಯ ಹೋರಾಟಕ್ಕೆ ಜಯವಾಗಲಿ ಎನ್ನುವ ಘೋಷಣೆಯೊಂದಿಗೆ ಈ ಸಭೆಯನ್ನು ಆಯೋಜಿಸಲಾಗಿದ್ದು, ಸಮಾಜದ ಬೆಳವಣಿಗೆಯ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು ಪಂಚಮಸಾಲಿ ಸಮುದಾಯದ ಮಕ್ಕಳ ಶಿಕ್ಷಣ ಹಾಗೂ ಯುವ …

Read More »

ಎತ್ತಿನ ಕತ್ತಿನ ಭಾರಕ್ಕೆ ನೊಗವಾದ ‘ರೋಲಿಂಗ್ ಸಪೋರ್ಟ್

ಸಾಂಗ್ಲಿ: ಹಳ್ಳಿ ಕಡೆಗಳಲ್ಲಿಎತ್ತು ಯಾವಾಗಲೂ ಬಿಡುವಿಲ್ಲದ ಪ್ರಾಣಿ. ಕೃಷಿಯ ಜೊತೆಗೆ ಬಂಡಿಗಳನ್ನು ಎಳೆಯಲು ಎತ್ತನ್ನು ನಿರಂತರವಾಗಿ ಬಳಸಲಾಗುತ್ತದೆ. ಹೆಚ್ಚಿನ ಸಂದರ್ಭದಲ್ಲಿಎತ್ತಿನ ಗಾಡಿಗೆ ಅದರ ಸಾಮರ್ಥ್ಯ ಮೀರಿ ಹೊರೆ ಹಾಕಲಾಗುತ್ತದೆ. ಇದರ ನೇರ ಪರಿಣಾಮ ಎತ್ತಿನ ಕುತ್ತಿಗೆಯ ಮೇಲಾಗುತ್ತದೆ. ಇದರ ವಿರುದ್ಧ ಪ್ರಾಣಿ ಪ್ರಿಯರು ಆಗಾಗ್ಗೆ ಧ್ವನಿ ಎತ್ತಿದ್ದಾರೆ. ಆದರೆ, ಎತ್ತಿನ ಕತ್ತಿನ ಹೊರೆ ಮಾತ್ರ ಕಡಿಮೆಯಾಗಿಲ್ಲ. ಆದರೆ ಇದೀಗ ಎತ್ತಿನ ಭಾರ ಕಡಿಮೆ ಮಾಡುವ ಹೊಸ ಸಂಶೋಧನೆಯೊಂದು ಮಹಾರಾಷ್ಟ್ರದ ಸಾಂಗ್ಲಿಯಲ್ಲಿ ನಡೆದಿದೆ. …

Read More »

ಮಹಾರಾಷ್ಟ್ರದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಇಳಿಕೆ

ಮುಂಬಯಿ : ಮಹಾರಾಷ್ಟ್ರದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಅನುಕ್ರಮವಾಗಿ ಲೀಟರ್‌ಗೆ 5 ಮತ್ತು ಲೀಟರ್‌ಗೆ 3 ರೂಪಾಯಿ ಇಳಿಕೆ ಮಾಡುವುದಾಗಿ ಸಿಎಂ ಏಕನಾಥ್ ಶಿಂಧೆ ಗುರುವಾರ ಘೋಷಿಸಿದ್ದಾರೆ. ಹೊಸ ಸರ್ಕಾರದ ಎರಡನೇ ಕ್ಯಾಬಿನೆಟ್ ಸಭೆಯಲ್ಲಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದ್ದು, ನಿರ್ಧಾರದಿಂದ ರಾಜ್ಯದ ಬೊಕ್ಕಸಕ್ಕೆ 6,000 ಕೋಟಿ ರೂಪಾಯಿ ಹೊರೆ ಬೀಳಲಿದೆ ಎಂದು ಮಂತ್ರಾಲಯದಲ್ಲಿ ನಡೆದ ಸಂಪುಟ ಸಭೆಯ ನಂತರ ಶಿಂಧೆ ಸುದ್ದಿಗಾರರಿಗೆ ತಿಳಿಸಿದರು.   ಬೆಲೆ ಇಳಿಕೆಯ ನಂತರ, ಮುಂಬೈನಲ್ಲಿ …

Read More »

ಶಿಂಧೆ ಸರ್ಕಾರದಲ್ಲಿ ‘ಠಾಕ್ರೆ ಕುಟುಂಬದ’ ಕುಡಿಗೆ ಸಚಿವ ಸ್ಥಾನ..!

ಮಹಾರಾಷ್ಟ್ರದಲ್ಲಿ ಹೊಸ ಸರ್ಕಾರ ರಚನೆಯಾಗಿದೆ, ಆದರೆ ಸಚಿವ ಸಂಪುಟ ವಿಭಜನೆ ಇನ್ನೂ ಆಗಿಲ್ಲ. ಬಿಜೆಪಿ ಮತ್ತು ಶಿಂಧೆ ಬಣದ ಎಷ್ಟು ಶಾಸಕರು ಸಚಿವರಾಗುತ್ತಾರೆ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಈ ಮಧ್ಯೆ, ಮಹಾರಾಷ್ಟ್ರ ನವನಿರ್ಮಾಣ ಸೇನೆ (ಎಂಎನ್‌ಎಸ್) ಮುಖ್ಯಸ್ಥ ರಾಜ್ ಠಾಕ್ರೆ ಅವರ ಪುತ್ರ ಅಮಿತ್ ಠಾಕ್ರೆಗೆ ಶಿಂಧೆ ಸರ್ಕಾರಕ್ಕೆ ಸೇರಿಸಿಕೊಳ್ಳಬಹುದು ಎಂಬ ಮಾಹಿತಿ ಹೊರಬಿದ್ದಿದೆ.   ಎಂಎನ್‌ಎಸ್ ಯುವ ನಾಯಕಅಮಿತ್ ಠಾಕ್ರೆಕೊಂಕಣ ಪ್ರವಾಸದಲ್ಲಿದ್ದಾರೆ. ಪ್ರವಾಸಕ್ಕೂ ಮುನ್ನವೇ ಅವರ ಸಂಪುಟ ಸೇರುವ …

Read More »

ರಾಜಕೀಯ ನಾಯಕರ ತಲೆಬಿಸಿ ಮಾಡಿದ ಹೊಸ ಕೈಪಿಡಿ: ಇನ್ಮುಂದೆ ಬಾಯಿ ಬಿಡೋ ಹಾಗೇ ಇಲ್ಲ!

ನವದೆಹಲಿ: ಜುಲೈ 18 ರಂದು ಸಂಸತ್ತಿನ ಮುಂಗಾರು ಅಧಿವೇಶನ ಪ್ರಾರಂಭವಾಗಲಿದ್ದು, ಈ ನಡುವೆಯೇ ರಾಜಕೀಯ ನಾಯಕರಿಗೆ ತಲೆಬಿಸಿ ಉಂಟಾಗಿದೆ. ಇದಕ್ಕೆ ಕಾರಣ, ಸಂಸತ್ತಿನಲ್ಲಿ ಬಳಸಲೇಬಾರದಾದ ಕೆಲವು ಶಬ್ದಗಳನ್ನು ಪಟ್ಟಿ ಮಾಡಿ ಕೈಬಿಡಿ ಬಿಡುಗಡೆ ಮಾಡಲಾಗಿದೆ. ಇನ್ನುಮುಂದೆ ಈ ಶಬ್ದಗಳನ್ನು ನಾಯಕರು ಸಂಸತ್ತಿನಲ್ಲಿ ಬಳಸುವಂತಿಲ್ಲ. ಇವುಗಳನ್ನು ಅಸಂಸದೀಯ ಪದಗಳು ಎಂದು ಕರೆಯಲಾಗುತ್ತದೆ. ನೂರಕ್ಕೂ ಅಧಿಕ ಶಬ್ದಗಳನ್ನು ಪಟ್ಟಿ ಮಾಡಲಾಗಿದ್ದು, ಅವುಗಳ ಪೈಕಿ ಹಲವು ದಿನನಿತ್ಯ ಬಳಸುವ ಪದಗಳಾಗಿವೆ. ಆದ್ದರಿಂದ ರಾಜಕಾರಣಿಗಳು ಈ ಮಾತುಗಳನ್ನಾಡಿದರೆ …

Read More »

ಬಿಜೆಪಿ ಆಂತರಿಕ ಸಮೀಕ್ಷೆ ವರದಿ: ಬೆಳಗಾವಿಯ ಹಲವು ಶಾಸಕರಿಗೆ ವಿಧಾನಸಭೆ ಚುನಾವಣೆಯಿಂದ ಗೇಟ್ ಪಾಸ್

ಬೆಳಗಾವಿ: ಹದಿನೆಂಟು ವಿಧಾನಸಭೆ ಕ್ಷೇತ್ರಗಳಿರುವ ಬೆಳಗಾವಿಯಲ್ಲಿ ಬಿಜೆಪಿಯ ಶಾಸಕರು ಮತ್ತು ಪ್ರಭಾವಿ ನಾಯಕರುಗಳಿದ್ದು, ಇವರಲ್ಲಿ ಕೆಲವರಿಗೆ 2023ರ ಚುನಾವಣೆಯಲ್ಲಿ ಟಿಕೆಟ್ ನಿರಾಕರಿಸುವ ಸಾಧ್ಯತೆಗಳು ದಟ್ಟವಾಗಿವೆ. ಹಲವು ಪ್ರಭಾವಿಗಳು ಮುಂಬರುವ ಚುನಾವಣೆಯಲ್ಲಿ ಹಿನ್ನಡೆಯಾಗುವ ಸಾಧ್ಯೆತೆಯಿದೆ ಎಂದು ಆಂತರಿಕ ಸಮೀಕ್ಷೆ ವರದಿ ಮಾಡಿದೆ. ಬೆಳಗಾವಿಯ 14 ಸ್ಥಾನಗಳಲ್ಲಿ ಬಿಜೆಪಿ ತನ್ನ ಪ್ರಾಬಲ್ಯ ಉಳಿಸಿಕೊಂಡಿದೆ. ಮುಂದೆಯು ಕೂಡ ಈ ಸ್ಥಾನಗಳನ್ನು ಉಳಿಸಿಕೊಂಡು ಹೋಗಲು ಬಿಜೆಪಿ ಬಯಸಿದೆ. ಒಂದು ವೇಳೆ ನಾಯಕರಿಗೆ ಟಿಕೆಟ್ ನಿರಾಕರಿಸಿದರೇ ಪಕ್ಷದಲ್ಲಿ ಬಂಡಾಯಕ್ಕೆ …

Read More »

ಗುರುವಾರದ ರಾಶಿ ಫಲ, ಇಲ್ಲಿವೆ ನಿಮ್ಮ ಗ್ರಹಬಲ

ಮೇಷ: ಆರೋಗ್ಯ ಗಮನಿಸಿ. ನಿರೀಕ್ಷಿತ ಧನಾಗಮ. ಸಂದಭೋìಚಿತ ವಿಚಾರದಿಂದ ಸಹೋದರಾದಿ ಸುಖ. ಗೃಹ ಆಸ್ತಿ ವಿಚಾರದಲ್ಲಿ ಮುನ್ನಡೆ. ವಿದ್ಯಾರ್ಜನೆಯಲ್ಲಿ ಪ್ರಗತಿ. ಸಾಂಸಾರಿಕ ಸುಖ ಮಧ್ಯಮ. ಧಾರ್ಮಿಕ ಕಾರ್ಯಗಳಲ್ಲಿ ನೇತೃತ್ವ. ಉದ್ಯೋಗ ವ್ಯವಹಾರದ ಬಗ್ಗೆ ಪ್ರಯಾಣ .   ವೃಷಭ: ಆರೋಗ್ಯ ವೃದ್ಧಿ. ಹೆಚ್ಚಿದ ಧನಾಗಮ. ಬಂಧುಮಿತ್ರರ ಸಹಾಯ. ಆಸ್ತಿ ವಿಚಾರದಲ್ಲಿ ಮುನ್ನಡೆ. ವಿದ್ಯಾರ್ಜನೆಯಲ್ಲಿ ನಿಪುಣತೆ. ಸ್ಪರ್ಧಾತ್ಮಕ ಮನೋಭಾವ. ಸಾಂಸಾರಿಕ ಸುಖ ಮಧ್ಯಮ. ಧರ್ಮಕರ್ಮದಲ್ಲಿ ಶ್ರೇಯಸ್ಸು. ನಿರೀಕ್ಷೆಗೂ ಮೀರಿದ ಸ್ಥಾನ ಲಾಭ. …

Read More »

ಅತ್ಯಾಚಾರ ಪ್ರಕರಣ; ಆರೋಪಿಗೆ 20 ವರ್ಷ ಜೈಲು ಶಿಕ್ಷೆ ವಿಧಿಸಿದ ಉಡುಪಿ ಕೋರ್ಟ್

ಉಡುಪಿ: ಮದುವೆ ಯಾಗುವುದಾಗಿ ನಂಬಿಸಿ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದ ಆರೋಪಿಗೆ ಉಡುಪಿ ಜಿಲ್ಲಾ ಹೆಚ್ಚುವರಿ ಮತ್ತು ಸತ್ರ ನ್ಯಾಯಾಲಯದಲ್ಲಿನ ಪೋಕ್ಸೊ ತ್ವರಿತ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಶ್ರೀನಿವಾಸ ಸುವರ್ಣ ಅವರು 20 ವರ್ಷ ಕಠಿನ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ.   ಉಡುಪಿಯ ಕೊಡವೂರು ನಿವಾಸಿ ಕಿರಣ್‌ (28) ಶಿಕ್ಷೆಗೆ ಗುರಿಯಾದ ಆರೋಪಿಯಾಗಿದ್ದಾನೆ. ಸಂತ್ರಸ್ತ ಬಾಲಕಿ 16 ವರ್ಷದವಳಾಗಿದ್ದು ಪ್ರೀತಿ-ಪ್ರೇಮದ ನಾಟಕವಾಡಿ ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರವೆಸಗಿದ್ದ. …

Read More »

ಬೆಂಗಳೂರು: ಲಾಂಗ್ ಆಯ್ತೂ ಈಗ ಗನ್ ಹಿಡಿದು ಬೈಕ್ ನಲ್ಲಿ ಬಿಲ್ಡಪ್ ಕೊಡ್ತಿರೋ ಪುಂಡರು!

ಬೆಂಗಳೂರು:ನಗರದಲ್ಲಿ ಲಾಂಗ್ ಹಿಡಿದು ರಾಬರಿ ಮಾಡೊ ಪುಂಡರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗ್ತಾಲೆ ಇದೆ. ಈ‌ ಮಧ್ಯೆ ಪುಂಡರ ಗುಂಪೊಂದು ಗನ್ ಹಿಡಿದು ಬೈಕ್ ನಲ್ಲಿ ಶೋ‌ಕೊಟ್ಟಿದ್ದಾರೆ. ನಗರದಲ್ಲಿ ಗನ್ ಹಿಡಿದು ಬೈಕ್ ರೈಡಿಂಗ್ ಮಾಡಿದ ಪುಂಡರ ಫೋಟೋ ತೆಗೆದು ಬೆಂಗಳೂರು ಸಿಟಿ ಪೊಲೀಸ್ ಪೇಜ್‌ಗೆ ಪೋಸ್ಟ್ ಮಾಡಿ ದೂರು ನೀಡಿದ್ದಾರೆ.   ಬನ್ನೇರುಘಟ್ಟ ರಸ್ತೆ ಮಾರ್ಬಲ್ ರೋಡ್ ಬಳಿ ಗನ್ ಹಿಡಿದು ಬೈಕ್ ನಲ್ಲಿ ತೆರಳುತ್ತಿರುವುದಾಗಿ ವ್ಯಕ್ತಿಯೊಬ್ರು ಪೋಸ್ಟ್ …

Read More »