ರಾಜ್ಯದಲ್ಲಿ ಈಗಾಗಲೇ ಮುಂಗಾರು ಹಂಗಾಮು ಪ್ರಾರಂಭವಾಗಿದ್ದು, ಬಿತ್ತನೆ ಮಾಡುವ ಈ ಸಂದರ್ಭದಲ್ಲಿ ರೈತರಿಗೆ ರಾಸಾಯನಿಕ ಗೊಬ್ಬರ ಹಾಗೂ ಬಿತ್ತನೆ ಬೀಜಗಳ ಕೊರತೆಯಾಗುತ್ತಿದ್ದು ಸರಕಾರ ಈ ಕುರಿತಂತೆ ಯಾವುದೇ ಕ್ರಮ ಕೈಗೊಳ್ಳುತ್ತಿ ಎಂದು ಆಕ್ರೋಶಗೊಂಡ ನೇಗಿಲಯೋಗಿ ರೈತ ಸಂಘಟನೆಯ ಕಾರ್ಯಕರ್ತರು ಬೆಳಗಾವಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.ರಾಜ್ಯದಲ್ಲಿ ಈಗಾಗಲೇ ಮುಂಗಾರು ಹಂಗಾಮು ಪ್ರಾರಂಭವಾಗಿದೆ ರಾಜ್ಯಾದ್ಯಂತ ರೈತರು ಬಿತ್ತನೆ ಕಾರ್ಯವನ್ನು ಪ್ರಾರಂಭಿಸಿದ್ದಾರೆ. ಆದರೆ ಇಲ್ಲಿಯವರೆಗೂ ರೈತರಿಗೆ ಬಿತ್ತನೆ ಮಾಡಲು ಸಮರ್ಪಕ ಬೀಜ ಹಾಗೂ ಗೊಬ್ಬರಗಳನ್ನು …
Read More »ಪಂಚಾಯಿತಿ ಮುಂದೆ ಬುಟ್ಟಿ ಮತ್ತು ಪಿಕಾಸಿ ಹಿಡಿದುಕೊಂಡು ಪಂಚಾಯ್ತಿ ಎದುರುಗಡೆ ಧರಣಿ ಮಾಡಿದ ನರೇಗಾ ಕೂಲಿ ಕಾರ್ಮಿಕರು
ಹುಕ್ಕೇರಿ ತಾಲೂಕಿನ ದಡ್ಡಿ ಗ್ರಾಮ ಪಂಚಾಯತಿ ಕಛೇರಿಗೆ ನರೇಗಾ ಕೂಲಿ ಕಾರ್ಮಿಕರಿಂದ ಗ್ರಾಮ ಪಂಚಾಯಿತಿ ಮುಂದೆ ಬುಟ್ಟಿ ಮತ್ತು ಪಿಕಾಸಿ ಹಿಡಿದುಕೊಂಡು ಪಂಚಾಯ್ತಿ ಎದುರುಗಡೆ ಧರಣಿ ಮಾಡಿದರು. ಕಳೆದ 2ವರ್ಷಗಳ ಹಿಂದೆ ನರೇಗಾ ಯೋಜನೆಯಡಿಯಲ್ಲಿ ಕೆಲಸ ಮಾಡಿರುವ ಕೂಲಿ ಕಾರ್ಮಿಕ ರಾದ ನಿಲ್ಲುವ ಬಾಳಪ್ಪ ಪಾಟೀಲ ಇವರಿಗೆ ಇನ್ನೂವರೆಗೆ ಸಂಬಳ ಬಂದಿಲ್ಲ ಇದನ್ನು ಹಲವು ಬಾರಿ ಗ್ರಾಮ ಪಂಚಾಯಿತಿ ಅಧಿಕಾರಿ ಹಾಗೂ ಕಂಪ್ಯೂಟರ್ ಆಪರೇಟರ್ ಸಂತೋಷ್ ಅವರಿಗೆ ಕಳೆದ 2 …
Read More »ಗರ್ಭಗೀತೆ: ತಾಯಿಯ ಗರ್ಭದಲ್ಲಿರುವಾಗಲೇ ಮಗುವನ್ನು ಮಾನಸಿಕ ಹಾಗೂ ದೈಹಿಕವಾಗಿ ಸದೃಢಗೊಳಿಸುವುದು ಹೇಗೆ?
Garbhageete: ತಮಗೆ ಹುಟ್ಟುವ ಮಗುವು ಕೇವಲ ದೈಹಿಕವಾಗಿ ಮಾತ್ರವಲ್ಲದೆ ಮಾನಸಿಕವಾಗಿಯೂ ಸದೃಢವಾಗಿರಬೇಕು, ಆರೋಗ್ಯವಾಗಿರಬೇಕು ಎಂಬುದು ಎಲ್ಲಾ ಪೋಷಕರ ಆಸೆ.ತಮಗೆ ಹುಟ್ಟುವ ಮಗುವು ಕೇವಲ ದೈಹಿಕವಾಗಿ ಮಾತ್ರವಲ್ಲದೆ ಮಾನಸಿಕವಾಗಿಯೂ ಸದೃಢವಾಗಿರಬೇಕು, ಆರೋಗ್ಯವಾಗಿರಬೇಕು ಎಂಬುದು ಎಲ್ಲಾ ಪೋಷಕರ ಆಸೆ. ಹಾಗೆಯೇ ಗರ್ಭಧಾರಣೆಗೂ ಮುನ್ನ ಹಾಗೂ ಗರ್ಭಧರಿಸುವ ಸಮಯದಲ್ಲಿ ದಂಪತಿಯ ಮಾನಸಿಕ ಸ್ಥಿತಿಯೂ ಮುಖ್ಯ ಪಾತ್ರವನ್ನು ವಹಿಸುತ್ತದೆ. ತಾಯಿ ದೈಹಿಕ ಹಾಗೂ ಮಾನಸಿಕವಾಗಿ ಎಷ್ಟು ಆರೋಗ್ಯವಾಗಿರುತ್ತಾಳೋ ಮಗುವು ಅಷ್ಟೇ ಆರೋಗ್ಯದಿಂದ ಬೆಳೆಯುತ್ತದೆ. ಗರ್ಭಧಾರಣೆ ಸಂದರ್ಭದಲ್ಲಿ …
Read More »ಸಲ್ಮಾನ್ ಖಾನ್ಗೆ ಕೊಲೆ ಬೆದರಿಕೆ ಪ್ರಕರಣ; ಗ್ಯಾಂಗ್ಸ್ಟರ್ ಲಾರೆನ್ಸ್ ಬಿಷ್ಣೋಯ್ ವಿಚಾರಣೆ
ಇತ್ತೀಚೆಗೆ ಕೊಲೆಯಾದ ಸಿಧು ಮೂಸೆವಾಲಾ ಪ್ರಕರಣಕ್ಕೂ ಲಾರೆನ್ಸ್ಗೂ ನಂಟಿದೆ ಎನ್ನಲಾಗುತ್ತಿದೆ. ಹೀಗಿರುವಾಗಲೇ ‘ಮೂಸೆವಾಲಾ ರೀತಿ ನಿಮ್ಮನ್ನು ಹತ್ಯೆ ಮಾಡುತ್ತೇವೆ’ ಎನ್ನುವ ಬೆದರಿಕೆ ಸಲ್ಲುಗೆ ಬಂದಿದೆ. ಈ ಕಾರಣಕ್ಕೆ ಲಾರೆನ್ಸ್ನನ್ನು ವಿಚಾರಣೆ ಮಾಡಲಾಗುತ್ತಿದೆ. ನಟ ಸಲ್ಮಾನ್ ಖಾನ್ (Salman Khan) ಹಾಗೂ ಅವರ ತಂದೆ ಸಲೀಮ್ ಖಾನ್ಗೆ (Salim Khan) ಕೊಲೆ ಬೆದರಿಕೆ ಬಂದಿದೆ. ಈ ವಿಚಾರ ಸಾಕಷ್ಟು ಚರ್ಚೆ ಆಗುತ್ತಿದೆ. ಈ ಬೆದರಿಕೆ ಬೆನ್ನಲ್ಲೇ ಸಲ್ಮಾನ್ ಖಾನ್ ಅವರ ಭದ್ರತೆಯನ್ನು ಹೆಚ್ಚಿಸಲಾಗಿದೆ. ಈ ಮಧ್ಯೆ, ಈ …
Read More »ಚುನಾವಣಾ ನೀತಿ ಸಂಹಿತೆ ಸಡಿಲಗೊಂಡ ಬಳಿಕ ಜೂನ್ ಮೂರನೇ ವಾರದಲ್ಲಿ ಬಿಜೆಪಿಯ ಬಹು ನಿರೀಕ್ಷಿತ ಸಂಪುಟ ಪುನಾರಚನೆ ನಡೆಯಲಿದೆ?
ಬೆಂಗಳೂರು: ಚುನಾವಣಾ ನೀತಿ ಸಂಹಿತೆ ಸಡಿಲಗೊಂಡ ಬಳಿಕ ಜೂನ್ ಮೂರನೇ ವಾರದಲ್ಲಿ ಬಿಜೆಪಿಯ ಬಹು ನಿರೀಕ್ಷಿತ ಸಂಪುಟ ಪುನಾರಚನೆ ನಡೆಯಲಿದೆ ಎಂದು ಮೂಲಗಳಿಂದ ತಿಳಿದುಬಂದಿದೆ. ಸಚಿವ ಸ್ಥಾನಕ್ಕೆ ಸಾಕಷ್ಟು ಆಕಾಂಕ್ಷಿಗಳಿದ್ದರೂ, ಜಾತಿ ಹಾಗೂ ಪ್ರಾದೇಶಿಕತೆಗೆ ಹೆಚ್ಚಿದೆ ಆದ್ಯತೆ ನೀಡಿ ಸಮಸ್ಯೆಗಳ ಪರಿಹರಿಸಲು ಪಕ್ಷವು ನಿರ್ಧರಿಸಿದೆ. ಇದರಂತೆ ಈ ಬಾರಿಯ ಸಚಿವ ಸಂಪುಟಕ್ಕೆ ಹೊಸ ಮುಖಗಳಿಗೆ ಅವಕಾಶಗಳು ಸಿಗಲಿದೆ ಎಂದು ಮೂಲಗಳು ತಿಳಿಸಿವೆ. ಪಕ್ಷದ ಪ್ರಧಾನ ಕಾರ್ಯದರ್ಶಿ ರವಿಕುಮಾರ್ ಮಾತನಾಡಿ, ಎಲ್ಲಾ …
Read More »ಅಭಿಮಾನಿಗಳಿಂದ ಇದೇಕೆ ಅತಿರೇಕ? ಅಪ್ಪು ಪುತ್ಥಳಿ ಅನಾವರಣದಂದು ಕುರ್ಚಿಗಳು ಪೀಸ್ ಪೀಸ್!
ವಿಜಯನಗರ: ಹಲವಾರು ರೀತಿಯ ಸಮಾಜಸೇವೆ ಮಾಡಿ ಜನರ ಪಾಲಿಗೆ ದೇವರು ಎನಿಸಿಕೊಂಡಿರುವ ನಟ ಪುನೀತ್ ರಾಜ್ಕುಮಾರ್ ಅವರ ಅಭಿಮಾನಿಗಳು ಕೋಟ್ಯಂತರ ಮಂದಿ. ಇದೇ ಕಾರಣಕ್ಕೆ ತಮ್ಮ ಪ್ರೀತಿಯ ಅಪ್ಪು ಸದಾ ತಮ್ಮ ಕಣ್ಮುಂದೆ ಇರಬೇಕು ಎಂದು ಬಯಸಿರುವ ಹೊಸಪೇಟೆಯ ಅಭಿಮಾನಿಗಳು ಪುನೀತ್ ಅವರ ಏಳೂವರೆ ಅಡಿ ಎತ್ತರದ ಪುತ್ಥಳಿಯನ್ನು ಭಾನುವಾರ (ಜೂನ್ 5) ಅನಾವರಣಗೊಳಿಸಿದ್ದಾರೆ. ಪುನೀತ್ ವೃತ್ತದಲ್ಲಿ ಸಚಿವ ಆನಂದ ಸಿಂಗ್ ಹಾಗೂ ಅವರ ಮಗ ಸಿದ್ದಾರ್ಥ್ ಸಿಂಗ್ ಸಹಕಾರದೊಂದಿಗೆ …
Read More »ಕೋವಿಡ್ -19 ಆರ್ಭಟ : ಲಾಕ್ಡೌನ್ ಜಾರಿ ಸಾಧ್ಯತೆ
ಕೋವಿಡ್ ನಾಲ್ಕನೇ ಅಲೆಯ ಆತಂಕ ಎದುರಾಗಿದೆ. ಕಳೆದ 24 ಗಂಟೆಗಳಲ್ಲಿ ಮಹಾರಾಷ್ಟ್ರದಾದ್ಯಂತ ( Maharashtra ) ಅತಿ ಹೆಚ್ಚು 889 ಮಂದಿ ಕೋವಿಡ್ ಸೋಂಕಿಗೆ (Covid-19 cases ) ತುತ್ತಾಗಿದ್ದಾರೆ ಎಂದು ಬೃಹನ್ ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ (ಬಿಎಂಸಿ) ತಿಳಿಸಿದೆ. ದಿನೇ ದಿನೇ ಕೋವಿಡ್ ಸೋಂಕಿತ ಪ್ರಕರಣಗಳ ಸಂಖ್ಯೆ ಏರಿಕೆ ಆಗುತ್ತಿದ್ದು, ಲಾಕ್ಡೌನ್ ಜಾರಿ ಮಾಡುವ ಸಾಧ್ಯತೆಯಿದೆ. ನವಿ ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ 104 ಹೊಸ ಪ್ರಕರಣಗಳನ್ನು ವರದಿ ಮಾಡಿದೆ ಮತ್ತು ಥಾಣೆ ಮತ್ತು ಪುಣೆ ನಗರಗಳು …
Read More »ಪಿಎಸ್ಐ ನೇಮಕಾತಿ ಪ್ರಕರಣದಲ್ಲಿ ಭಾರೀ ಸದ್ದು ಮಾಡಿದ್ದ ಆರೋಪಿ ದರ್ಶನ್ ಗೌಡನನ್ನು ಸಿಐಡಿ ಬಂಧಿಸಿದೆ.
ಬೆಂಗಳೂರು: ಪಿಎಸ್ಐ ನೇಮಕಾತಿ ಪ್ರಕರಣದಲ್ಲಿ ಭಾರೀ ಸದ್ದು ಮಾಡಿದ್ದ ಆರೋಪಿ ದರ್ಶನ್ ಗೌಡನನ್ನು ಸಿಐಡಿ ಬಂಧಿಸಿದೆ. ಪಿಎಸ್ಐ ನೇಮಕಾತಿ ಪ್ರಕರಣದ ವಿಚಾರಣೆ ವೇಳೆ ಸಚಿವ ಅಶ್ವಥ್ ನಾರಾಯಣ್ ಹಾಗೂ ಅವರ ಸಹೋದರ ಸತೀಶ್ ಹೆಸರು ಹೇಳಿದ್ದ ದರ್ಶನ್ಗೌಡನನ್ನು ನಿನ್ನೆ ವಶಕ್ಕೆ ಪಡೆದಿದ್ದ ಸಿಐಡಿ ಪೊಲೀಸರು ಇಂದು ಬಂಧಿಸಿರುವುದಾಗಿ ಅಧಿಕೃತವಾಗಿ ತಿಳಿಸಿದ್ದಾರೆ. ಜೊತೆಗೆ ಕೋರಮಂಗಲದಲ್ಲಿ ನೆಲಮಂಗಲ ಕಾನ್ಸ್ಸ್ಟೇಬಲ್ ಮೋಹನ್ ಕುಮಾರ್ ಹಾಗೂ ರಾಮಮೂರ್ತಿನಗರ ಪೊಲೀಸರು ಹರೀಶ್ನನ್ನು ಬಂಧಿಸಿದ್ದಾರೆ. ಪ್ರತ್ಯೇಕವಾಗಿ ಮೂರು ಕೇಸ್ ದಾಖಲಿಸಿ …
Read More »ಸಿಎಂ ಇಬ್ರಾಹಿಂಗೆ ಮಾನ ಮರ್ಯಾದೆ ಇಲ್ಲ: ಸಿದ್ದರಾಮಯ್ಯ
ಮೈಸೂರು: ಸಿಎಂ ಇಬ್ರಾಹಿಂಗೆ ಮಾನ ಮರ್ಯಾದೆ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಿಡಿಕಾರಿದ್ದಾರೆ. ರಾಜ್ಯಸಭೆ ಚುನಾವಣೆಯಲ್ಲಿ ಬಿಎಸ್ವೈ ಸಿದ್ದು ಒಳ ಒಪ್ಪಂದ ಮಾಡಿಕೊಂಡಿದ್ದಾರೆ ಎಂದು ಸಿಎಂ ಇಬ್ರಾಹಿಂ ಆರೋಪಿಸಿದ್ದರು. ಈ ವಿಚಾರವಾಗಿ ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿದ್ದರಾಮಯ್ಯ ಅವರು, ಸಿಎಂ ಇಬ್ರಾಹಿಂಗೆ ಮಾನ ಮರ್ಯಾದೆ ಇಲ್ಲ. ಅವನು ಜೆಡಿಎಸ್ನಲ್ಲಿ ಕ್ಯಾಪ್ಟೀವ್ ಪ್ರೆಸಿಡೆಂಟ್ ಇದ್ದಂತೆ. ಕುಳಿತುಕೋ ಎಂದರೆ ಕುಳಿತುಕೊಳ್ಳಬೇಕು. ನಿಂತುಕೋ ಅಂದರೆ ನಿಂತುಕೊಳ್ಳಬೇಕು. ಎಂಎಲ್ಸಿ ಮಾಡುತ್ತೇವೆ ಅಂತ ಹೇಳಿ ಕರೆದುಕೊಂಡು …
Read More »ಮುಂದಿನ ಚುನಾವಣೆಯಲ್ಲಿ ಮಲ್ಲಿಕಾರ್ಜುನ ಖರ್ಗೆಗೆ ನಾಯಕತ್ವ ಕೊಟ್ಟರೆ ಕಾಂಗ್ರೆಸ್ ಜತೆಗೆ ಕೈ ಜೋಡಿಸುವ ಬಗ್ಗೆ ಯೋಚಿಸಲಾಗುವುದು:H.D.K.
ಬೆಳಗಾವಿ: ಮುಂದಿನ ಚುನಾವಣೆಯಲ್ಲಿ ಮಲ್ಲಿಕಾರ್ಜುನ ಖರ್ಗೆಗೆ ನಾಯಕತ್ವ ಕೊಟ್ಟರೆ ಕಾಂಗ್ರೆಸ್ ಜತೆಗೆ ಕೈ ಜೋಡಿಸುವ ಬಗ್ಗೆ ಯೋಚಿಸಲಾಗುವುದು ಎಂದು ಎಚ್. ಡಿ. ಕುಮಾರಸ್ವಾಮಿ ಹೇಳಿದರು. ಸುದ್ದಿಗಾರರ ಜತೆ ಮಾತನಾಡಿದ ಅವರು, ಖರ್ಗೆ ಹಿರಿಯ ನಾಯಕರು. ಆ ಪಕ್ಷಕ್ಕೆ ನಿಷ್ಠೆ ಯಿಂದ ಕೆಲಸ ಮಾಡಿದ್ದಾರೆ. ಹಲವು ಬಾರಿ ಅವರಿಗೆ ಅನ್ಯಾಯ ಆಗಿದ್ದರೂ ನಿಷ್ಠೆಯಿಂದ ನಡೆದುಕೊಂಡಿದ್ದಾರೆ ಎಂದರು. ಪ್ರವಾಹದಲ್ಲಿ ಮನೆ ಬಿದ್ದವರಿಗೆ ಇನ್ನೂ ಮನೆ ನಿರ್ಮಿಸಿ ಕೊಟ್ಟಿಲ್ಲ. ಕೊಡಗು, ಚಿಕ್ಕಮಗಳೂರಿನಲ್ಲಿ ಮನೆ ಕಟ್ಟಲಿಲ್ಲ. ಪ್ರಚಾರ …
Read More »
Laxmi News 24×7