ನೆಲಮಂಗಲ: ಬೈಕ್ ಮತ್ತು ಕ್ಯಾಂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವನ್ನಪ್ಪಿರುವ ಘಟನೆ ನೆಲಮಂಗಲದಲ್ಲಿ ನಡೆದಿದೆ. ನೆಲಮಂಗಲದ ರಾಷ್ಟ್ರೀಯ ಹೆದ್ದಾರಿ 48ರ ಹನುಮಂತಪುರ ಗೇಟ್ ಬಳಿ ಅಪಘಾತ ನಡೆದಿದೆ. ಬೈಕ್ನಲ್ಲಿದ್ದ ಫಾರೆಸ್ಟ್ ಗಾರ್ಡ್ ಕೆಂಪರಾಜು, ಸೆಂಟ್ರಿಂಗ್ ಕೆಲಸ ಮಾಡುವ ಮತ್ತೊಬ್ಬ ವ್ಯಕ್ತಿ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ನೆಲಮಂಗಲ ಸಂಚಾರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಎಸ್ಪಿ ಭೇಟಿ: ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಕೆ.ಬಾಬಾ …
Read More »ವಿಶ್ವಪ್ರಸಿದ್ಧ ಮೈಸೂರು ದಸರಾ ಉದ್ಘಾಟನೆಯಲ್ಲಿ ಬಾನು ಮುಷ್ತಾಕ್ ಅವರಿಂದ ಶೋಭೆಯ ಸಂದೇಶ
ವಿಶ್ವಪ್ರಸಿದ್ಧ ಮೈಸೂರು ದಸರಾ ಉದ್ಘಾಟನೆಯಲ್ಲಿ ಬಾನು ಮುಷ್ತಾಕ್ ಅವರಿಂದ ಶೋಭೆಯ ಸಂದೇಶ ಮೈಸೂರು: ಕನ್ನಡಕ್ಕೆ ಮೊದಲ ಬೂಕರ್ ಪ್ರಶಸ್ತಿಯ ಗೌರವ ತಂದುಕೊಟ್ಟ ಹೆಮ್ಮೆಯ ಕನ್ನಡತಿ ಶ್ರೀಮತಿ ಬಾನು ಮುಷ್ತಾಕ್ ಅವರು ಈ ಬಾರಿಯ ವಿಶ್ವಪ್ರಸಿದ್ಧ ಮೈಸೂರು ದಸರಾ ಮಹೋತ್ಸವದ ಉದ್ಘಾಟನೆ ಮಾಡುತ್ತಿರುವುದು ಅತ್ಯಂತ ಸ್ವಾಗತಾರ್ಹವಾದ ಸಂಗತಿ. ಅಂತರಾಷ್ಟ್ರೀಯ ಮಟ್ಟದಲ್ಲಿ ಕನ್ನಡದ ಕೀರ್ತಿಪತಾಕೆಯನ್ನು ಎತ್ತಿಹಿಡಿದ ಬಾನು ಮುಷ್ತಾಕ್ ಅವರಿಂದ ದಸರಾ ಉದ್ಘಾಟನೆ ಮಾಡಿಸುವ ಸರ್ಕಾರದ ನಿರ್ಧಾರವನ್ನು ನಾವು ಹೃತ್ಪೂರ್ವಕವಾಗಿ ಅಭಿನಂದಿಸುತ್ತೇವೆ. ನಾಡಿನ …
Read More »ದೇಶ ಕಾಯುವ ಯೋಧ, ನಾಡಿಗೆ ಅನ್ನ ನೀಡುವ ರೈತ ಇವರುಗಳು ಸಮಾಜದ ಎರಡು ಕಣ್ಣುಗಳಿದ್ದಂತೆ ಸೈನಿಕರ ಮತ್ತು ರೈತರ ಬೆನ್ನಿಗೆ ನಿಲ್ಲುವುದು ನಮ್ಮೆಲ್ಲರ ಕರ್ತವ್ಯ.
ಮೂಡಲಗಿ: ದೇಶ ಕಾಯುವ ಯೋಧ, ನಾಡಿಗೆ ಅನ್ನ ನೀಡುವ ರೈತ ಇವರುಗಳು ಸಮಾಜದ ಎರಡು ಕಣ್ಣುಗಳಿದ್ದಂತೆ ಸೈನಿಕರ ಮತ್ತು ರೈತರ ಬೆನ್ನಿಗೆ ನಿಲ್ಲುವುದು ನಮ್ಮೆಲ್ಲರ ಕರ್ತವ್ಯ. ಆ ನಿಟ್ಟಿನಲ್ಲಿ ಗೋಕಾಕ ಮತ್ತು ಸುತ್ತಮುತ್ತಲಿನ ತಾಲೂಕುಗಳಲ್ಲಿ ವಾಸವಾಗಿರುವ ಸೈನಿಕರ ಅನುಕೂಲಕ್ಕಾಗಿ ಸುಸಜ್ಜಿತವಾದ ಆರ್ಮಿ ಕ್ಯಾಂಟಿನ್ ಪ್ರಾರಂಭಿಸಲು ದೇಶದ ಕೇಂದ್ರ ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರಿಗೆ ಮನವಿ ಮಾಡಿಕೊಳ್ಳಲಾಗಿತ್ತು. ಇದಕ್ಕೆ ಸ್ಪಂಧಿಸಿದ ಸಚಿವರು ಗೋಕಾಕ ನಗರದಲ್ಲಿ ಆರ್ಮಿ ಕ್ಯಾಂಟಿನ್ ಸ್ಥಾಪನೆಗೆ ಅನುಮೋಧನೆ …
Read More »ಯಾದಗಿರಿ ಜಿಲ್ಲೆಯ ಶಹಾಪುರ ಪಟ್ಟಣದಲ್ಲಿ ಇಂದು ಆಯೋಜಿಸಿದ್ದ ಶೋಷಿತ ವರ್ಗಗಳ ‘ಐಕ್ಯತಾ ಸಮಾವೇಶ’
ಯಾದಗಿರಿ ಜಿಲ್ಲೆಯ ಶಹಾಪುರ ಪಟ್ಟಣದಲ್ಲಿ ಇಂದು ಆಯೋಜಿಸಿದ್ದ ಶೋಷಿತ ವರ್ಗಗಳ ‘ಐಕ್ಯತಾ ಸಮಾವೇಶ’ ಬಹಿರಂಗ ಸಭೆಯಲ್ಲಿ ಪಾಲ್ಗೊಂಡು, ಮಾತನಾಡಿದೆ. ಸಾಮಾಜಿಕ ಸಮಾನತೆ, ಸಹಬಾಳ್ವೆ ಮತ್ತು ಐಕ್ಯತೆಯ ಸಂದೇಶವನ್ನು ಸಾರುವ ಉದ್ದೇಶದಿಂದ ಆಯೋಜಿಸಿದ್ದ ಈ ಸಭೆಯಲ್ಲಿ ಮೈಸೂರಿನ ಉರಿಲಿಂಗಿ ಪೆದ್ದಿ ಮಠದ ಶ್ರೀ ಜ್ಞಾನ ಪ್ರಕಾಶ ಸ್ವಾಮೀಜಿ, ಧರ್ಮಗುರುಗಳು ಹಾಗೂ ಕರ್ನಾಟಕ ರಾಜ್ಯ ವಕ್ಸ್ ಮಂಡಳಿ ಅಧ್ಯಕ್ಷರು ಹಫೀಜ್ ಸೈಯದ್ ಮೊಹಮ್ಮದ್ ಅಲಿ ಅಲ್ ಹುಸೇನಿ ಸಜ್ಜಾದ ನಶೀನ್, ಶ್ರೀ ಹಜರತ್ …
Read More »ಮೂಡಲಗಿ ತಾಲೂಕಿನ ಹೊನಕುಪ್ಪಿ ಗ್ರಾಮದಲ್ಲಿ ಇಂದು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಟ್ರಸ್ಟ್ ಸಮಿತಿಯ ವತಿಯಿಂದ ಪ್ರತಿಷ್ಠಾಪಿಸಲಾದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರ ಮೂರ್ತಿಯ ಉದ್ಘಾಟನೆ
ಮೂಡಲಗಿ ತಾಲೂಕಿನ ಹೊನಕುಪ್ಪಿ ಗ್ರಾಮದಲ್ಲಿ ಇಂದು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಟ್ರಸ್ಟ್ ಸಮಿತಿಯ ವತಿಯಿಂದ ಪ್ರತಿಷ್ಠಾಪಿಸಲಾದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರ ಮೂರ್ತಿಯ ಉದ್ಘಾಟನೆಯನ್ನು ನೆರವೇರಿಸಲಾಯಿತು. ಈ ಸಂದರ್ಭದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರ ಸಾಹಸಮಯ ಜೀವನ ಮತ್ತು ತ್ಯಾಗವನ್ನು ಸ್ಮರಿಸಿ, ಹೊನಕುಪ್ಪಿ ಹಾಗೂ ಸಿದ್ದಾಮರಹಳ್ಳಿ ಗ್ರಾಮದ ಸಮಸ್ತ ನಾಗರಿಕರ ಧನಸಹಾಯದಿಂದ ಈ ಮೂರ್ತಿ ಪ್ರತಿಷ್ಠಾಪನೆಗೊಂಡಿರುವುದಕ್ಕೆ ಅಭಿನಂದನೆ ಸಲ್ಲಿಸಲಾಯಿತು. ಕಾರ್ಯಕ್ರಮದ ದಿವ್ಯ ಸಾನ್ನಿಧ್ಯವನ್ನು, ಪರಮ ಪೂಜ್ಯ ಶ್ರೀ ಬಿಳಿಯಾನಸಿದ್ದ ಸ್ವಾಮೀಜಿ …
Read More »ಖೈದಿ ಮೇಲೆ ಮಾರಣಾಂತಿಕವಾಗಿ ಹಲ್ಲೆ
ಬೆಂಗಳೂರು, ಆಗಸ್ಟ್ 24: ಬೆಂಗಳೂರಿನ ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿರುವ (Bengaluru Central Jail) ಭರತ್ ಮತ್ತು ಈತನ ಗ್ಯಾಂಗ್ ಖೈದಿ ಅನಿಲ್ ಕುಮಾರ್ ಎಂಬುವರ ಮೇಲೆ ಮಾರಣಾಂತಿಕವಾಗಿ ಹಲ್ಲೆ ಮಾಡಿದೆ. ಆಗಸ್ಟ್ 2ರ ಮಧ್ಯಾಹ್ನ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಖೈದಿ ಅನಿಲ್ ಕುಮಾರ್ ಪ್ರಕರಣವೊಂದರ ವಿಚಾರಣೆಗೆ ವಿಡಿಯೋ ಕಾನ್ಫರೆನ್ಸ್ ಕೊಠಡಿಗೆ ತೆರಳುತ್ತಿದ್ದರು. ಈ ವೇಳೆ ಭರತ್ ಮತ್ತು ಈತನ ಗ್ಯಾಂಗ್ ಕ್ವಾರಂಟೈನ್ ಜೈಲಿನ ಬ್ಯಾರಕ್-2ರ ಹಿಂಭಾಗದ ಕೊಠಡಿ 6ರಲ್ಲಿ …
Read More »ಒಂದೇ ಒಂದು ಮೊಬೈಲ್ ಕದ್ದ ಕಳ್ಳನಿಗೆ 7 ವರ್ಷ ಜೈಲು ಶಿಕ್ಷೆ ವಿಧಿಸಿ ತುಮಕೂರು ಜಿಲ್ಲಾ ಸತ್ರ ಪ್ರಧಾನ ನ್ಯಾಯಾಲಯ ತೀರ್ಪು ನೀಡಿದೆ. ಪ್ರದೀಪ್ ಜೈಲು ಶಿಕ್ಷೆಗೆ ಗುರಿಯಾದ ಅಪರಾಧಿ.
ತುಮಕೂರು: ಒಂದೇ ಒಂದು ಮೊಬೈಲ್ ಕದ್ದ ಕಳ್ಳನಿಗೆ 7 ವರ್ಷ ಜೈಲು ಶಿಕ್ಷೆ ವಿಧಿಸಿ ತುಮಕೂರು ಜಿಲ್ಲಾ ಸತ್ರ ಪ್ರಧಾನ ನ್ಯಾಯಾಲಯ ತೀರ್ಪು ನೀಡಿದೆ. ಪ್ರದೀಪ್ ಜೈಲು ಶಿಕ್ಷೆಗೆ ಗುರಿಯಾದ ಅಪರಾಧಿ. ಅಮಿತ್ ಹಾಗೂ ದಿಲೀಪ್ ಚೌಧರಿ ಎಂಬ ಇಬ್ಬರು ಯುವಕರಿಗೆ ಡ್ರ್ಯಾಗರ್ ತೋರಿಸಿ ಬೆದರಿಸಿ ಪ್ರದೀಪ್ ಮೊಬೈಲ್ ಕಸಿದುಕೊಂಡು ಪರಾರಿಯಾಗಿದ್ದನು. 2020ರಲ್ಲಿ ನಾಮದ ಚಿಲುಮೆ ಬಳಿ ಘಟನೆ ನಡೆದಿತ್ತು. ಈ ಸಂಬಂಧ ಕ್ಯಾತ್ಸಂದ್ರ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸಿದ್ದರು. …
Read More »ಕಾಂಗ್ರೆಸ್ ಶಾಸಕ ವಿರೇಂದ್ರ ಪಪ್ಪಿ ಇರಲಿ, ಯಾರೇ ಇರಲಿ ತಪ್ಪು ಮಾಡಿದವರಿಗೆ ಶಿಕ್ಷೆ ಆಗೇ ಆಗುತ್ತೆ
ರಾಯಚೂರು: ಕಾಂಗ್ರೆಸ್ ಶಾಸಕ ವಿರೇಂದ್ರ ಪಪ್ಪಿ ಇರಲಿ, ಯಾರೇ ಇರಲಿ ತಪ್ಪು ಮಾಡಿದವರಿಗೆ ಶಿಕ್ಷೆ ಆಗೇ ಆಗುತ್ತೆ ಎಂದು ಸಣ್ಣ ನೀರಾವರಿ ಖಾತೆ ಸಚಿವ ಎನ್. ಎಸ್. ಬೋಸರಾಜು ಹೇಳಿದರು. ನಗರದಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ ಬಳಿಕ ಭಾನುವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಚಿತ್ರದುರ್ಗ ಕಾಂಗ್ರೆಸ್ ಶಾಸಕ ಕೆ. ಸಿ. ವಿರೇಂದ್ರ ಪಪ್ಪಿ ಮನೆ ಮೇಲೆ ಇಡಿ ದಾಳಿ ಹಾಗೂ ಬಂಧನ ವಿಚಾರ ಕುರಿತಂತೆ ಪ್ರತಿಕ್ರಿಯಿಸಿದರು. ನ್ಯಾಯಯುತವಾಗಿ ಏನು ನಡೆಯಬೇಕೋ ಅದು ನಡೆಯುತ್ತೆ. …
Read More »ಸುರೇಶ ಯಾದವ ಪೌoಡೇಶನ್ ಹಾಗೂ KLE ಬ್ಲಡ್ ಬ್ಯಾಂಕ್ ಮತ್ತು ರೋಹನ್ ಸ್ಪೆಷಲಿಟಿ ಕ್ಲಿನಿಕ್ ಇವರ ಸಂಯುಕ್ತ ಆಶ್ರಯ ದಲ್ಲಿ ಸುರೇಶ ಯಾದವ ಅವರ 25 ನೇ ಮದುವೆಯ ವಾರ್ಷಿಕೋತ್ಸವದ ನಿಮಿತ್ಯ ರಾಮತೀರ್ಥ ನಗರದ ಸಭಾಭವನದಲ್ಲಿ ರಕ್ತದಾನ
ಸುರೇಶ ಯಾದವ ಪೌoಡೇಶನ್ ಹಾಗೂ KLE ಬ್ಲಡ್ ಬ್ಯಾಂಕ್ ಮತ್ತು ರೋಹನ್ ಸ್ಪೆಷಲಿಟಿ ಕ್ಲಿನಿಕ್ ಇವರ ಸಂಯುಕ್ತ ಆಶ್ರಯ ದಲ್ಲಿ ಸುರೇಶ ಯಾದವ ಅವರ 25 ನೇ ಮದುವೆಯ ವಾರ್ಷಿಕೋತ್ಸವದ ನಿಮಿತ್ಯ ರಾಮತೀರ್ಥ ನಗರದ ಸಭಾಭವನದಲ್ಲಿ ರಕ್ತದಾನ ಮತ್ತು ಅರೋಗ್ಯ ಶಿಬಿರದ ದಿವ್ಯ ಸಾನಿದ್ಯ ವನ್ನುವಹಿಸಿ ಉದ್ಘಾಟನೆ ನೆರೆವೇರಿಸಿ ಮಾತನಾಡಿದ ನಾಗನೂರಿನ ಶ್ರೀ ಮ ನಿ ಪ್ರ ಡಾ: ಅಲ್ಲಮಪ್ರಭು ಮಹಾಸ್ವಾಮಿಗಳು ರಕ್ತದಾನವು ಜೀವಗಳನ್ನು ಉಳಿಸುವುದಲ್ಲದೆ, ದಾನಿಗಳ ಅರೋಗ್ಯಕ್ಕೂ ಪ್ರಯೋಜನಕಾರಿ, …
Read More »ನೂರಾರು ಕಾಯಕ ಪಂಗಡಗಳ ಒಕ್ಕೂಟದಿಂದ ಶ್ರಾವಣ ಮಾಸದ ಪಾದಯಾತ್ರೆ ಹಾಗೂ ಪ್ರವಚನ
ನೂರಾರು ಕಾಯಕ ಪಂಗಡಗಳ ಒಕ್ಕೂಟದಿಂದ ಶ್ರಾವಣ ಮಾಸದ ಪಾದಯಾತ್ರೆ ಹಾಗೂ ಪ್ರವಚನ ಶ್ರಾವಣ ಮಾಸದ ಪವಿತ್ರ ಸಂದರ್ಭದಲ್ಲಿ, ಅಖಿಲ ಲಿಂಗಾಯತ ನೂರು ಕಾಯಕ ಪಂಗಡಗಳ ಒಕ್ಕೂಟವು (ರಿ) ಬೆಳಗಾವಿಯಲ್ಲಿ ಶ್ರದ್ಧಾ ಭಕ್ತಿಯಿಂದ ಪಾದಯಾತ್ರೆ ಮತ್ತು ಧಾರ್ಮಿಕ ಪ್ರವಚನ ಕಾರ್ಯಕ್ರಮವನ್ನು ಆಯೋಜಿಸಿತ್ತು. ಈ ಪಾದಯಾತ್ರೆಯು ‘ನೂರು ಕಾಯಕ ಪಂಗಡದ ಮನೆಗಳಿಗೆ ಪೂಜ್ಯರ ನಡೆ’ ಎಂಬ ವಿಶೇಷ ಧ್ಯೇಯವಾಕ್ಯದೊಂದಿಗೆ ನಡೆಯಿತು. ಈ ಕಾರ್ಯಕ್ರಮದಲ್ಲಿ ವಿವಿಧ ಮಠಾಧೀಶರು ಭಾಗವಹಿಸಿ ಭಕ್ತರನ್ನು ಆಶೀರ್ವದಿಸಿದರು. ಶ್ರೀ ಜಗದ್ಗುರು …
Read More »
Laxmi News 24×7