Breaking News

ರಾಜಕೀಯ

ಹಳೆ ವಾಹನ ಮಾಲೀಕರಿಗೆ ಬಿಗ್ ಶಾಕ್, FC ಶುಲ್ಕ 16 ಪಟ್ಟು ಹೆಚ್ಚಳ

ಬೆಂಗಳೂರು: ಹಳೆ ವಾಹನ ಮಾಲೀಕರಿಗೆ ಶಾಕಿಂಗ್ ನ್ಯೂಸ್ ಇಲ್ಲಿದೆ. 15 ವರ್ಷ ಮೇಲ್ಪಟ್ಟ ಸಾರ್ವಜನಿಕ ಪ್ರಯಾಣಿಕ ವಾಹನಗಳ ಫಿಟ್ ನೆಸ್ ಸರ್ಟಿಫಿಕೆಟ್ ಪರಿಷ್ಕೃತ ಶುಲ್ಕವನ್ನು 16 ಪಟ್ಟು ಏರಿಕೆ ಮಾಡಲಾಗಿದೆ. ಖಾಸಗಿ ವಾಹನಗಳ ಆರ್.ಸಿ. ನವೀಕರಣ ಶುಲ್ಕ ಕೂಡ ಹೆಚ್ಚಳ ಮಾಡಲಾಗಿದೆ. ಟ್ರಾನ್ಸ್ಪೋರ್ಟ್ ವಾಹನಗಳಿಗೆ 8 ವರ್ಷಗಳವರೆಗೆ ಪ್ರತಿ ಎರಡು ವರ್ಷಕ್ಕೆ ಒಂದು ಸಲ ಫಿಟ್ನೆಸ್ ಸರ್ಟಿಫಿಕೇಟ್ ಮಾಡಿಸಬೇಕಿದೆ. 8 ವರ್ಷಗಳ ನಂತರ ವರ್ಷಕ್ಕೆ ಒಂದು ಸಲ ಫಿಟ್ನೆಸ್ ಸರ್ಟಿಫಿಕೇಟ್ ಕಡ್ಡಾಯವಾಗಿದೆ. …

Read More »

ತಂದೆ ವಿಚಾರ ಮಾಧ್ಯಮದವರಿಗೆ ನೀಡಿದ್ದಕ್ಕೆ ಅನುಶ್ರೀ ಬೇಸರ..!

ಬೆಂಗಳೂರು: ಸದ್ಯ ನಾನು ಅನುಶ್ರೀಯವರ ತಂದೆ ಎಂದು ಸಂಪತ್ ಎಂಬ ವ್ಯಕ್ತಿ ಹೇಳಿಕೊಂಡಿದ್ದು, ಈ ವಿಚಾರವನ್ನ ಶಿವಲಿಂಗೇಗೌಡ ಎಂಬಾತ ಅನುಶ್ರೀಯವರ ಗಮನಕ್ಕೂ ತಂದಿದ್ದಾರೆ. ಇದೇ ವಿಚಾರವಾಗಿ ಶಿವಲಿಂಗೇಗೌಡರ ವಿರುದ್ಧ ಬೇಸರ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಅನುಶ್ರೀಯವರ ತಂದೆ ಎಂದು ಹೇಳುತ್ತಿರುವ ಸಂಪತ್ ಸದ್ಯ ಪಾಶ್ವವಾಯುವಿನಿಂದ ಬಳಲುತ್ತಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೊನೆ ಬಾರಿಗೆ ಮಕ್ಕಳನ್ನು ನೋಡಬೇಕೆಂಬ ಆಸೆ ವ್ಯಕ್ತಪಡಿಸಿದ್ದಾರೆ. ಅವರಿಗೆ ಕೆಲಸ ಕೊಟ್ಟು, ಆಸ್ಪತ್ರೆ ಸೇರಿಸಿದ ಶಿವಲಿಂಗೇಗೌಡ ಅವರು ಕೇಳಿದಾಗ ಹೆಂಡತಿ, …

Read More »

ಇಂದೂ ವಾಹನ ಸವಾರರಿಗೆ ಬಿಗ್ ಶಾಕ್: ಪೆಟ್ರೋಲ್, ಡೀಸೆಲ್ 15 ದಿನದಲ್ಲಿ 9.20 ರೂ. ಹೆಚ್ಚಳ

ಪೆಟ್ರೋಲ್, ಡೀಸೆಲ್ ಬೆಲೆ ಇಂದು ಕೂಡ ಏರಿಕೆಯಾಗಿದೆ. 15 ದಿನಗಳಲ್ಲಿ 13 ನೇ ಬಾರಿ ಹೆಚ್ಚಳವಾಗಿದ್ದು, ಲೀಟರ್ ಗೆ 9.20 ರೂ.ನಷ್ಟು ಏರಿಕೆ ಕಂಡಿದೆ. ದೆಹಲಿಯಲ್ಲಿ ಮಂಗಳವಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಪ್ರತಿ ಲೀಟರ್‌ಗೆ 80 ಪೈಸೆಗಳಷ್ಟು ಏರಿಕೆಯಾಗಿದ್ದು, ಕಳೆದ ಎರಡು ವಾರಗಳಲ್ಲಿ ಲೀಟರ್‌ ಗೆ 9.20 ರೂ. ಹೆಚ್ಚಳವಾಗಿದೆ.   ದೆಹಲಿಯಲ್ಲಿ ಪೆಟ್ರೋಲ್ ದರ ಈ ಹಿಂದೆ 103.81 ರೂ.ನಿಂದ 104.61 ರೂ., ಹಾಗೂ ಡೀಸೆಲ್ ದರ.95.07 …

Read More »

60 ವರ್ಷ ಮೀರಿದ ಬಿಸಿಯೂಟ ಅಡುಗೆ ಸಿಬ್ಬಂದಿಗೆ ಬಿಗ್ ಶಾಕ್

ಬೆಂಗಳೂರು : ರಾಜ್ಯದಲ್ಲಿ ಅಕ್ಷರ ದಾಸೋಹ ಮಧ್ಯಾಹ್ನದ ಬಿಸಿಯೂಟ ಯೋಜನೆಯಡಿ ಶಾಲಾ ಅಡುಗೆ ಕೇಂದ್ರಗಳಲ್ಲಿ ಕೆಲಸ ಮಾಡುತ್ತಿರುವ 60 ವರ್ಷ ಮೇಲ್ಪಟ್ಟ ಅಡುಗೆ ಸಿಬ್ಬಂದಿಗಳಿಗೆ ರಾಜ್ಯ ಸರ್ಕಾರ ಬಿಗ್‌ ಶಾಕ್‌ ನೀಡಿದ್ದು, ಕಡ್ಡಾಯವಾಗಿ ಕರ್ತವ್ಯದಿಂದ ತೆಗೆಯುವಂತೆ ಆದೇಶ ಹೊರಡಿಸಿದೆ. ರಾಜ್ಯದಲ್ಲಿ ಅಕ್ಷರ ದಾಸೋಹ ಮಧ್ಯಾಹ್ನದ ಬಿಸಿಯೂಟ ಯೋಜನೆಯಡಿ ಕೆಲಸ ಮಾಡುತ್ತಿರುವ 60 ವರ್ಷ ಮೇಲ್ಪಟ್ಟ (2022ರ ಮಾ.31ಕ್ಕೆ 60 ವರ್ಷ ಪೂರ್ಣಗೊಳಿಸಿರುವ ಅಡುಗೆ ಸಿಬ್ಬಂದಿ) ಅಡುಗೆ ಸಿಬ್ಬಂದಿಗಳಿಗೆ ಕಡ್ಡಾಯವಾಗಿ ಕರ್ತವ್ಯದಿಂದ …

Read More »

ಸಚಿವ ಸಂಪುಟ ಸಧ್ಯದಲ್ಲೇ ಫಿಕ್ಸ್ ಚುನಾವಣೆ ಮುಂದಿಟ್ಟು ಕೊಂಡು ಮಂತ್ರಿ ಸ್ಥಾನ ಮತ್ತೆ ಮಂತ್ರಿ ಆಗ್ತಾರ ರಮೇಶ್ ಜಾರಕಿಹೊಳಿ

ಬೆಂಗಳೂರು: ಬಿಜೆಪಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿಯ ಬಳಿಕ, ಸರ್ಕಾರ ಮತ್ತು ಪಕ್ಷದ ಮಟ್ಟದಲ್ಲಿ ಬದಲಾವಣಾ ಪ್ರಕ್ರಿಕೆಯಗಳು ಚುರುಕುಗೊಂಡಿವೆ. ಜೊತೆ ಜೊತೆಗೆ ಸಿಎಂ ಬೊಮ್ಮಾಯಿ ಸಚಿವ ಸಂಪುಟ ಪುನಾರಚನೆಯೂ ಚುರುಕು ಪಡೆದಿದೆ. ಇದೇ ಕಾರಣದಿಂದಾಗಿ ಇಂದು ಅಥವಾ ನಾಳೆ ದೆಹಲಿಗೆ ವರಿಷ್ಠರನ್ನು ಭೇಟಿ ಮಾಡೋದಕ್ಕಾಗಿ ಸಿಎಂ ಬಸವರಾಜ ಬೊಮ್ಮಾಯಿ ಕೂಡ ತೆರಳಲಿದ್ದಾರೆ ಎಂದು ಹೇಳಲಾಗುತ್ತಿದೆ. ಮುಂಬರುವ ವಿಧಾನಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಸಂಪುಟಕ್ಕೆ ಸರ್ಜರಿ ಮಾಡುಉವ ಉದ್ದೇಶವನ್ನು ಸಿಎಂ …

Read More »

ಮುಸ್ಲಿಮರ ಆಜಾನ್‌ ವಿರುದ್ಧ ಮಂತ್ರ ಪಠಣೆ ಅಭಿಯಾನಕ್ಕೆ ಚಾಲನೆ

ಹಾಸನ: ಮುಸ್ಲಿಮರ ಆಜಾನ್‌ ವಿರುದ್ಧ ಮಂತ್ರ ಪಠಣೆ ಅಭಿಯಾನಕ್ಕೆ ಚಾಲನೆ ಸಿಕ್ಕಿದೆ. ಹಾಸನದ ಅರಸೀಕೆರೆ ಕಾಳಿಕಾಂಬ ದೇಗುಲದಲ್ಲಿ ಕಾಳಿ ಮಂತ್ರವನ್ನು ಕಾಳಿ ಸ್ವಾಮೀಜಿ ಪಠಿಸಿದ್ದಾರೆ. ಅಧಿಕೃತ ಮಸೀದಿಗಳಲ್ಲಿ ಮಾತ್ರ ಆಜಾನ್‌ ಕೂಗಲು ಅನುಮತಿ ಇದೆ. ಆದರೆ ಎಲ್ಲ ಮಸೀದಿಗಳಲ್ಲಿ ಆಜಾನ್‌ ಕೂಗಲಾಗುತ್ತದೆ. ಅಷ್ಟೇ ಅಲ್ಲದೇ ಆಜಾನ್‌ ಕೂಗಲು‌ ಸ್ಪಷ್ಟವಾದ ಕೋರ್ಟ್‌ ನಿಯಮವಿದೆ. ಆದರೆ ಈ ನಿಯಮವನ್ನು ಉಲ್ಲಂಘಿಸಿ ಆಜಾನ್‌ ಕೂಗಲಾಗುತ್ತದೆ.  ಈ ರೀತಿ ಆಜಾನ್‌ ಕೂಗುವುದನ್ನು ಕೂಡಲೇ ನಿಲ್ಲಿಸಬೇಕು. ಇಲ್ಲದೇ ಇದ್ದರೆ …

Read More »

ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಮಾರಾಮಾರಿ – ಮೂವರು ಆಸ್ಪತ್ರೆಗೆ ದಾಖಲು

ಚಿತ್ರದುರ್ಗ: ಫ್ಲೆಕ್ಸ್ ತೆರವು ವಿಚಾರಕ್ಕೆ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದು ಮೂವರು ಆಸ್ಪತ್ರೆಗೆ ದಾಖಲಾಗಿರೋ ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಪಟ್ಟಣದಲ್ಲಿ ಬೆಳಕಿಗೆ ಬಂದಿದೆ. ಮಂಗಳವಾರ ಹಿರಿಯೂರು ಪಟ್ಟಣದಲ್ಲಿ ನಡೆಯಲಿರುವ ರಾಜ್ಯಮಟ್ಟದ ಬಾಬುಜಗಜೀವನ್ ರಾಮ್ ಜಯಂತಿ ಹಿನ್ನೆಲೆಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆಗಮಿಸಲಿದ್ದಾರೆ. ಹೀಗಾಗಿ ಕಾಂಗ್ರೆಸ್ ಮಾಜಿ ಸಚಿವ ಡಿ.ಸುಧಾಕರ್ ಹಾಗೂ ಎಂಎಲ್‍ಸಿ ಚುನಾವಣೆಯ ಪರಾಜಿತ ಅಭ್ಯರ್ಥಿ ಸೋಮಶೇಖರ್ ನಡುವೇ ಶಕ್ತಿ ಪ್ರದರ್ಶನದ ಪೈಪೋಟಿ …

Read More »

ಅನುಮತಿ ಇಲ್ಲದೇ ಸಾರ್ವಜನಿಕರ‌ ಮೊಬೈಲ್‌ ಕಸಿದುಕೊಳ್ಳಬೇಡಿ.. ಕಮಿಷನರ್ ಪಂತ್‌​ ಟ್ವೀಟ್​

ಬೆಂಗಳೂರು : ತಪಾಸಣೆ‌ ನಡೆಸುವಾಗ ಪೊಲೀಸರು ಅನುಮತಿಯಿಲ್ಲದೇ ಸಾರ್ವಜನಿಕರ‌‌ ಮೊಬೈಲ್​​ಗಳನ್ನು ಬಲವಂತವಾಗಿ ಕಸಿದುಕೊಂಡು ಪರಿಶೀಲಿಸುವುದು ಸರಿಯಲ್ಲ ಎಂದು ನಗರ ಪೊಲೀಸ್ ಆಯುಕ್ತ ಕಮಲ್‌ ಪಂತ್ ಟ್ವೀಟ್‌ ಮಾಡಿದ್ದಾರೆ. ಇತ್ತೀಚಿನ ದಿನಗಳಲ್ಲಿ ತಪಾಸಣೆ ನಡೆಸುವಾಗ ಸುಖಾಸುಮ್ಮನೆ‌ ಸಾರ್ವಜನರಿಂದ ಪೊಲೀಸರು ಮೊಬೈಲ್ ಕಸಿದುಕೊಂಡು, ವೈಯಕ್ತಿಕ ವಿಚಾರಗಳ ಬಗ್ಗೆ ಪ್ರಶ್ನಿಸುತ್ತಿರುವ ದೂರುಗಳು ಕೇಳಿ ಬಂದಿದ್ದವು.‌ ಇದಕ್ಕೆ‌‌ ಪೂರಕ ಎಂಬಂತೆ ಬೆಂಗಳೂರಿನ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿರುವ ನಿಖಿಲ್ ಎಂಬುವರು ಘಟನೆಯೊಂದರ ಬಗ್ಗೆ ಟ್ವೀಟ್​ ಮಾಡಿದ್ದರು. ಕೆಲದಿನಗಳ ಹಿಂದೆ …

Read More »

ದೇವಸ್ಥಾನದ ಎದುರೇ ಸುಟ್ಟು ಕರಕಲಾಯ್ತು ಪೂಜೆ ಮಾಡಿಸಲು ತಂದಿದ್ದ ಹೊಸ ರಾಯಲ್‌ ಎನ್‌ ಫೀಲ್ಡ್‌ ಬೈಕ್‌

ಕಳೆದ ಕೆಲವು ದಿನಗಳಿಂದೀಚೆಗೆ ಎಲೆಕ್ಟ್ರಿಕ್‌ ಸ್ಕೂಟರ್‌ ಗಳಲ್ಲಿ ಬೆಂಕಿ ಕಾಣಿಸಿಕೊಂಡಿರೋ ಸುದ್ದಿ ಆಗಾಗ ಕೇಳಿ ಬರ್ತಾನೇ ಇತ್ತು. ಇದೀಗ ರಾಯಲ್‌ ಎನ್‌ ಫೀಲ್ಡ್‌ ಬೈಕ್‌ ಒಂದು ಸುಟ್ಟು ಕರಕಲಾಗಿರೋದನ್ನು ನೋಡಿ ಎಲ್ಲರೂ ಶಾಕ್‌ ಆಗಿದ್ದಾರೆ. ಮಾಲೀಕ ಹೊಸ ಬೈಕ್‌ ಗೆ ಪೂಜೆ ಮಾಡಿಸುವ ಸಲುವಾಗಿ ದೇವಸ್ಥಾನಕ್ಕೆ ತಂದಿದ್ದರು. ಕೆಲವೇ ಕ್ಷಣಗಳಲ್ಲಿ ಬೈಕ್‌ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಅಷ್ಟೇ ಅಲ್ಲ ಬೈಕ್‌ ಬಾಂಬ್‌ ನಂತೆ ಭಯಂಕರ ಸದ್ದಿನೊಂದಿಗೆ ಸ್ಫೋಟಗೊಂಡಿದೆ. ಈ ಘಟನೆ …

Read More »

ಕೇಂದ್ರ ಸರ್ಕಾರ ರೂ. 3,600 ಕೋಟಿಯನ್ನು ಹಣವನ್ನು ರೈತರಿಂದ ಹೆಚ್ಚುವರಿಯಾಗಿ ಸುಲಿಗೆ ಮಾಡುತ್ತಿದೆ.

ಯುಗಾದಿ ಸಿಹಿ – ಕಹಿಗಳ ಹಬ್ಬ, ಆದರೆ ಕೇಂದ್ರ ಸರ್ಕಾರ ರಸಗೊಬ್ಬರ ಬೆಲೆಯನ್ನು ಚೀಲವೊಂದಕ್ಕೆ ರೂ. 150 ಏರಿಕೆ ಮಾಡುವ ಮೂಲಕ ನಾಡಿನ ರೈತರಿಗೆ ಬರೀ ಕಹಿಯನ್ನು ನೀಡಿದೆ. ದೇಶದ ರೈತರು ವರ್ಷದಲ್ಲಿ 1 ಕೋಟಿ 20 ಲಕ್ಷ ಟನ್ ರಸಗೊಬ್ಬರ ಬಳಕೆ ಮಾಡುತ್ತಾರೆ. ಕೇಂದ್ರ ಸರ್ಕಾರ ರೂ. 3,600 ಕೋಟಿಯನ್ನು ಹಣವನ್ನು ರೈತರಿಂದ ಹೆಚ್ಚುವರಿಯಾಗಿ ಸುಲಿಗೆ ಮಾಡುತ್ತಿದೆ. ಇದನ್ನು ಹಗಲು ದರೋಡೆ ಎಂದರೆ ತಪ್ಪೇನು? ಪ್ರಧಾನಿ ನರೇಂದ್ರ ಮೋದಿ …

Read More »