Breaking News

ರಾಜಕೀಯ

ಭದ್ರಾ ಮೇಲ್ದಂಡೆಗೆ ರಾಷ್ಟ್ರೀಯ ಮಾನ್ಯತೆ: ಬೊಮ್ಮಾಯಿ

ಚಿತ್ರದುರ್ಗ): ಭದ್ರಾ ಮೇಲ್ದಂಡೆ ಯೋಜನೆಗೆ ರಾಷ್ಟ್ರೀಯ ಮಾನ್ಯತೆ ನೀಡಲು ಕೇಂದ್ರ ಸರ್ಕಾರ ಬುಧವಾರ ಅನುಮೋದನೆ ನೀಡಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಇಲ್ಲಿನ ತರಳಬಾಳು ಮಠದ ಆವರಣದಲ್ಲಿ ನಡೆಯುತ್ತಿರುವ ತರಳಬಾಳು ಹುಣ್ಣಿಮೆಯ ಅಂತಿಮ ದಿನದಂದು ನಡೆದ ಡಾ.ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಅವರ ಸದ್ಧರ್ಮ ಸಿಂಹಾಸನಾರೋಹಣ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.   ‘ಕೇಂದ್ರ ಸರ್ಕಾರದ ಜಲಶಕ್ತಿ ಮಂತ್ರಾಲಯದ ಉನ್ನತ ಸಮಿತಿ ಭದ್ರಾ ಮೇಲ್ದಂಡೆಗೆ ಸಮ್ಮತಿ ನೀಡಿದೆ. ಇದು ರಾಜ್ಯದ ಮೊದಲ …

Read More »

ವಿಧಾನಪರಿಷತ್‌ ಕಲಾಪ: ಈಶ್ವರಪ್ಪ ರಾಜೀನಾಮೆಗೆ ಆಗ್ರಹಿಸಿ ಧರಣಿ

ಬೆಂಗಳೂರು: ವಿಧಾನಪರಿಷತ್‌ ಕಲಾಪದಲ್ಲಿ ಸಚಿವ ಕೆ.ಎಸ್‌.ಈಶ್ವರಪ್ಪ ಅವರ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್‌ ಸದಸ್ಯರು ಸಭಾಪತಿ ಪೀಠದ ಮುಂದೆ ಧರಣಿ ನಡೆಸಿದರು. ‘ಕೆಂಪುಕೋಟೆಯಲ್ಲಿ ಕೇಸರಿ ಧ್ವಜ ಹಾರಿಸುತ್ತೇವೆ’ ಎಂಬುದಾಗಿ ಈಶ್ವರಪ್ಪ ನೀಡಿದ ಹೇಳಿಕೆ ವಿರುದ್ಧವಾಗಿ ಕಾಂಗ್ರೆಸ್‌ ಸದಸ್ಯರು ಪ್ರತಿಭಟನೆ ನಡೆಸಿದರು.

Read More »

ಕಾಂಗ್ರೆಸ್‍ಗೆ ರಾಜೀನಾಮೆ ನೀಡಿದ ಜಯರಾಜ್ ಸಿಂಗ್ ಪರ್ಮಾರ್

ಗಾಂಧೀನಗರ: ಗುಜರಾತ್ ಕಾಂಗ್ರೆಸ್ ಮಾಜಿ ಮುಖ್ಯ ವಕ್ತಾರ ಜಯರಾಜ್ ಸಿಂಗ್ ಪರ್ಮಾರ್ ಅವರು ಪಕ್ಷಕ್ಕೆ ರಾಜೀನಾಮೆ ನೀಡಿರುವುದಾಗಿ ಘೋಷಿಸಿದ್ದಾರೆ. ಈ ಕುರಿತಂತೆ ಫೇಸ್‍ಬುಕ್‍ನಲ್ಲಿ ಪರ್ಮಾರ್ ಅವರು ಕಾಂಗ್ರೆಸ್‍ನ ಹಿರಿಯ ನಾಯಕರ ನಿರ್ಲಕ್ಷಕ್ಕೆ ಬೇಸತ್ತಿದ್ದು, ಪಕ್ಷದಲ್ಲಿ ಕೆಲವರಿಗೆ ಮಾತ್ರ ಜವಾಬ್ದಾರಿಗಳನ್ನು ನೀಡಲಾಗುತ್ತಿದೆ ಎಂದು ಆರೋಪಿಸಿ ರಾಜೀನಾಮೆ ನೀಡಿರುವುದಾಗಿ ತಿಳಿಸಿದ್ದಾರೆ. ಮೂರು ವರ್ಷಗಳಿಂದಲೂ ಪಕ್ಷದಲ್ಲಿದ್ದರೂ ಯಾವುದೇ ಸ್ಥಾನವನ್ನು ನೀಡಲಾಗಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಜಯರಾಜ್ ಸಿಂಗ್ ಪರ್ಮಾರ್ ಅವರು ಮುಂದಿನ ದಿನಗಳಲ್ಲಿ ಬಿಜೆಪಿ ಪಕ್ಷವನ್ನು …

Read More »

ಅಲ್ಲಾಹು ಅಕ್ಬರ್ ಘೋಷಣೆ ಕೂಗಿದ ಆರು ಯುವಕರು,ಬೆಳಗಾವಿಯಲ್ಲಿ ಹಿಜಬ್ ಹೈಡ್ರಾಮಾ

ಬೆಳಗಾವಿ: ನಗರದ ವಿಜಯ್ ಇನ್ಸ್ಟಿಟ್ಯೂಟ್ ಆಫ್ ಪ್ಯಾರಾ ಮೆಡಿಕಲ್ ಕಾಲೇಜಿನಲ್ಲಿ ಹಿಜಬ್‍ಗೆ ಅವಕಾಶ ನೀಡುವಂತೆ ವಿದ್ಯಾರ್ಥಿನಿಯರು ಪಟ್ಟುಹಿಡಿದು ಪ್ರತಿಭಟನೆಗೆ ಮುಂದಾದಾಗ ಅಲ್ಲಾಹು ಅಕ್ಬರ್ ಅಂತಾ ಘೋಷಣೆ ಕೂಗಿದ ಆರು ಯುವಕರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಬೆಳಗಾವಿಯ ಸದಾಶಿವ ನಗರದ ವಿಜಯ್ ಇನ್ಸ್ಟಿಟ್ಯೂಟ್ ಆಫ್ ಪ್ಯಾರಾ ಮೆಡಿಕಲ್ ಕಾಲೇಜಿನಲ್ಲಿ 250ಕ್ಕೂ ಹೆಚ್ಚು ವಿದ್ಯಾರ್ಥಿಗಳು ಕಾಲೇಜಿನಲ್ಲಿದ್ದು ಆ ಪೈಕಿ 50ರಷ್ಟು ವಿದ್ಯಾರ್ಥಿನಿಯರು ಮುಸ್ಲಿಂ ಸಮಾಜದವರಿದ್ದಾರೆ. ಅದರಲ್ಲಿ ಇಂದು 20ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ತರಗತಿಯಲ್ಲಿ ಹಿಜಬ್‍ಗೆ …

Read More »

ಕಾಡಿನಿಂದ ನಾಡಿಗೆ ಬಂದ ಚಿರತೆ ಮರಿ

ಥಾಣೆ( ಮಹಾರಾಷ್ಟ್ರ): ಕಾಡಿನಿಂದ ನಾಡಿಗೆ ಬಂದ ಚಿರತೆ ಮರಿಯೊಂದು ನೀರು ಕುಡಿಯಲು ಹೋಗಿ ಪ್ಲಾಸ್ಟಿಕ್​ ನೀರಿನ ಕೊಡದಲ್ಲಿ ತೆಲೆ ಸಿಕ್ಕಿಸಿಕೊಂಡು ಪರದಾಡಿದ ಘಟನೆ ಬದ್ಲಾಪುರ – ಕರ್ಜಾತ್ ರಸ್ತೆಯ ಗೋರೆಗಾಂವ್ ಅರಣ್ಯ ಪ್ರದೇಶದಲ್ಲಿ ನಡೆದಿದೆ. ಚಿರತೆ ಮರಿ ಹೀಗೆ ತಲೆಯನ್ನು ಸಿಕ್ಕಿಸಿಕೊಂಡು ಒದ್ದಾಡುವ ಪರಿಯನ್ನ ನೋಡಿದ ಗ್ರಾಮಸ್ಥರು, ಅರಣ್ಯ ಇಲಾಖೆಯ ಸಿಬ್ಬಂದಿಗಳಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಸ್ಥಳಕ್ಕೆ ಬಂದ ಅಧಿಕಾರಿಗಳು ಚಿರತೆಯನ್ನ ಹಿಡಿದು ಪ್ಲಾಸ್ಟಿಕ್​ ಕೊಡವನ್ನು ಕತ್ತರಿಸಿ ತೆಗೆದಿದ್ದಾರೆ. ನಂತರ ಚಿರತೆ …

Read More »

ದೇಗುಲಗಳಲ್ಲಿ ಜಾಗಟೆ, ಗಂಟೆ ಶಬ್ದ ಮಾಲಿನ್ಯವೆಂದು ನೀಡಿದ್ದ ನೋಟಿಸ್ ವಾಪಸ್

ಬೆಂಗಳೂರು: ದೇವಾಲಯಗಳಲ್ಲಿ ಜಾಗಟೆ, ಗಂಟೆಯಿಂದ ಶಬ್ದ ಮಾಲಿನ್ಯವಾಗುತ್ತದೆ ಎಂದು ನೀಡಲಾಗಿದ್ದ ನೋಟಿಸ್ ವಾಪಸ್ ಪಡೆಯಲಾಗಿದೆ. ಗೃಹಸಚಿವ ಆರಗ ಜ್ಞಾನೇಂದ್ರ ಅವರು ವಿಧಾವರುನಸಭೆಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ದೇವಾಲಯಗಳಲ್ಲಿ ಜಾಗಟೆ, ಗಂಟೆ ಬಳಕೆಯಿಂದ ಶಬ್ದ ಮಾಲಿನ್ಯ ಉಂಟಾಗುತ್ತದೆ ಎನ್ನುವ ಕಾರಣಕ್ಕೆ ನೀಡಿದ್ದ ಸುತ್ತೋಲೆಯನ್ನು ಧಾರ್ಮಿಕ ದತ್ತಿ ಇಲಾಖೆ ಪಡೆದುಕೊಂಡಿದೆ ಎಂದು ಅವರು ಹೇಳಿದ್ದಾರೆ.   ಶೂನ್ಯ ವೇಳೆಯಲ್ಲಿ ಬಿಜೆಪಿಯ ಸಿ.ಟಿ. ರವಿ ಮತ್ತು ರವಿಸುಬ್ರಹ್ಮಣ್ಯ ಅವರು ಈ ಬಗ್ಗೆ ಪ್ರಸ್ತಾಪಿಸಿದ್ದು, ಉತ್ತರ …

Read More »

ಲಘು ವಾಹನಗಳ ಸಂಚಾರಕ್ಕೆ ಪೀಣ್ಯ ಫ್ಲೈ ಓವರ್ ಮುಕ್ತ

ನಗರದ ವಾಹನ ಸವಾರರಿಗೆ ಸಿಹಿಸುದ್ದಿ. ಸುಮಾರು 56 ದಿನಗಳ ಬಳಿಕ ಡಾ. ಶಿವಕುಮಾರ ಸ್ವಾಮೀಜಿ ಮೇಲ್ಸೇತುವೆ ಲಘು ವಾಹನಗಳ ಸಂಚಾರಕ್ಕೆ ಬುಧವಾರ ಮುಕ್ತವಾಗಿದೆ. ಶಿವಕುಮಾರ ಸ್ವಾಮೀಜಿ ಮೇಲ್ಸೇತುವೆ ಲಘು ವಾಹನಗಳ ಸಂಚಾರಕ್ಕೆ ಬುಧವಾರ ಮುಕ್ತವಾಗಿದೆ. ಪೀಣ್ಯ ಎಲಿವೇಡೆಡ್ ಮೇಲ್ಸೆತುವೆಯ 102 ಮತ್ತು 103ನೇ ಕಂಬಗಳ ನಡುವೆ ತಾಂತ್ರಿಕ ದೋಷವಿದೆ ಎಂದು ಡಿಸೆಂಬರ್ 26ರಂದು ಫ್ಲೈ ಓವರ್ ಎರಡೂ ಕಡೆ ವಾಹನ ಸಂಚಾರ ಬಂದ್ ಮಾಡಲಾಗಿತ್ತು. ಎನ್‌ಎಚ್‌ಎಐ ದುರಸ್ತಿ ಕಾಮಗಾರಿ ಪೂರ್ಣಗೊಳಿಸಿದೆ. …

Read More »

ಪ್ರಾಣಿ, ಪಕ್ಷಿ ಪ್ರಿಯ ದರ್ಶನ್‌ಗೆ ಸಿಕ್ಕಿತು ವಿಶೇಷ ಬರ್ತ್‌ ಡೇ ಗಿಫ್ಟ್‌!

ಮೈಸೂರು: ಪ್ರಾಣಿ, ಪಕ್ಷಿಗಳು ಎಂದರೆ ದರ್ಶನ್‌ಗೆ ಎಲ್ಲಿಲ್ಲದ ಪ್ರೀತಿ. ಆ ಪ್ರೀತಿಗೆ ಗೌರವ ಸೂಚಿಸುವ ಸಲುವಾಗಿ ಕರ್ನಾಟಕ ಮೃಗಾಲಯ ಪ್ರಾಧಿಕಾರವು ದರ್ಶನ್‌ ಅವರನ್ನು ಅಧಿಕೃತ ರಾಯಭಾರಿಯನ್ನಾಗಿ ನೇಮಕ ಮಾಡಿಕೊಂಡಿದೆ. ಚಾಲೆಂಜಿಂಗ್‌ ಸ್ಟಾರ್‌ ದರ್ಶನ್ ಅವರ ಹುಟ್ಟುಹಬ್ಬದ ಅಂಗವಾಗಿ ಕರ್ನಾಟಕ ಮೃಗಾಲಯ ಪ್ರಾಧಿಕಾರದ ಅಧ್ಯಕ್ಷರಾದ ಎಲ್‌.ಆರ್‌. ಮಹದೇವಸ್ವಾಮಿ ಅವರು ಭೇಟಿ ಮಾಡಿ ಈ ವಿಚಾರ ತಿಳಿಸಿದ್ದಾರೆ. ಹುಟ್ಟುಹಬ್ಬಕ್ಕೆ ಮೃಗಾಲಯ ಪ್ರಾಧಿಕಾರದ ವತಿಯಿಂದ ಶುಭಾಶಯ ಕೋರುವುದರ ಜೊತೆಗೆ ದರ್ಶನ್‌ ಅವರಿಗೆ ಒಳ್ಳೆಯ ಗೌರವ ಒದಗಿಸಲಾಗಿದೆ …

Read More »

ಉದ್ಯೋಗಾಕಾಂಕ್ಷಿಗಳಿಗೆ ಸಿಹಿಸುದ್ದಿ : ಶೀಘ್ರವೇ ಗ್ರಾಮ ಲೆಕ್ಕಿಗ ಹುದ್ದೆಗಳ ಭರ್ತಿ

ಬೆಂಗಳೂರು : ಉದ್ಯೋಗಾಕಾಂಕ್ಷಿಗಳಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಗ್ರಾಮ ಲೆಕ್ಕಿಗ ಹುದ್ದೆಗಳ ಭರ್ತಿಗೆ 14 ಜಿಲ್ಲೆಗಳಿಗೆ ಅನುಮತಿ ನೀಡಿದ್ದು, ಶೇ. 30 ಕ್ಕಿಂತ ಹೆಚ್ಚಿನ ಹುದ್ದೆ ಖಾಲಿ ಇದ್ದ ಜಿಲ್ಲೆಗಳಲ್ಲಿ ನೇರ ನೇಮಕಾತಿ ಪ್ರಾರಂಭಿಸಲು ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದ್ದಾರೆ. ಕಂದಾಯ ಇಲಾಖೆ ಖಾಲಿ ಹುದ್ದೆಗಳ ಕುರಿತು ಬಿಜೆಪಿ ಸದಸ್ಯ ಎಸ್.ವಿ.ಸುಂಕನೂರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವ ಆರ್.ಅಶೋಕ್, ಕಂದಾಯ ಇಲಾಖೆಯಲ್ಲಿ ಮಂಜೂರಾದ …

Read More »

BJP&RSS ಈ ದೇಶದ ಸಂವಿಧಾನವನ್ನಾಗಲಿ, ರಾಷ್ಟ್ರಧ್ವಜವನ್ನಾಗಲಿ ಎಂದೂ ಒಪ್ಪಿಕೊಂಡಿಲ್ಲ: ಸಿದ್ದರಾಮಯ್ಯ

ಬೆಂಗಳೂರು: ಇಂದು ವಿಧಾನ ಸಭಾ ಕಲಾಪದಲ್ಲಿ ಕಾಂಗ್ರೆಸ್, ಬಿಜೆಪಿ ಮಧ್ಯೆ ಬಿಗ್ ಪೈಟ್ ನಡೆದಿದೆ. ಸಚಿವ ಈಶ್ವರಪ್ಪ ನಿವಾಸಕ್ಕೆ ಯೂತ್ ಕಾಂಗ್ರೆಸ್ ಮುತ್ತಿಗೆ ಹಾಕಿದ್ದು, ಸರ್ಕಾರಿ ನಿವಾಸದೆದುರು ನಲಪಾಡ್ ನೇತೃತ್ವದಲ್ಲಿ ಪ್ರತಿಭಟನೆ ಮಾಡಿದ್ದಾರೆ. ಈ ಬೆನ್ನಲ್ಲೇ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಟ್ವೀಟ್ ಮಾಡಿ ಆಕ್ರೋಶ ಹೊರಹಾಕಿದ್ದಾರೆ. ಬಿಜೆಪಿ ಮತ್ತು ಆರ್‌ಎಸ್‌ಎಸ್‌ ಈ ದೇಶದ ಸಂವಿಧಾನವನ್ನಾಗಲಿ, ರಾಷ್ಟ್ರಧ್ವಜವನ್ನಾಗಲಿ ಹೃತ್ಪೂರ್ವಕವಾಗಿ ಎಂದೂ ಒಪ್ಪಿಕೊಂಡಿಲ್ಲ. ದೇವರು, ಧರ್ಮ, ದೇಶಪ್ರೇಮ, ರಾಷ್ಟಧ್ವಜ, ರಾಷ್ಟ್ರಗೀತೆ ಎಲ್ಲವೂ ಬೆಜೆಪಿ ರಾಜಕೀಯದ …

Read More »