ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಹೊಸಟ್ಟಿ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅಥಣಿ ಶಾಸಕ ಮಹೇಶ ಕುಮಠಳ್ಳಿ ಅವರು ಬೆಳಗಾವಿಯ ಉಮೇಶ್ ಕತ್ತಿ ಮನೆಯ ಸಭೆ ಮತ್ತು ಸಿಎಮ್ ಗೆ ನಿಯೋಗ ಭೇಟಿ ವಿಚಾರ ನಡೆದಿದೆ. ಭಾರತೀಯ ಜನತಾ ಪಕ್ಷದ ವರಿಷ್ಠರು ರಾಜ್ಯ ಮತ್ತು ರಾಷ್ಟ್ರಮಟ್ಟದ ನಾಯಕರು ಎಲ್ಲವನ್ನೂ ಗಮನಿಸುತ್ತಿರುತ್ತಾರೆ. ನಾನು ಮಾಧ್ಯಮಗಳಿಗೆ ವಿನಂತಿಮಾಡುತ್ತೇನೆ. ಊಹಾಪೆÇೀಹಗಳಿಗೆ ತೆರೆ ಎಳೆಯಿರಿ. ಸಣ್ಣಪುಟ್ಟ ಭಿನ್ನಾಭಿಪ್ರಾಯ ಇದ್ದರೆ ವರಿಷ್ಠರು ಬಗೆಹರಿಸುತ್ತಾರೆ. ಪಕ್ಷ ಸಂಘಟಿಸುವ ನಿಟ್ಟಿನಲ್ಲಿ ಸಭೆ …
Read More »ಯಾವ ಪಾರ್ಟಿ ಬಳಿ ಎಷ್ಟೊಂದು ಕೋಟಿ ಆಸ್ತಿ ನೋಡಿ?
ನವದೆಹಲಿ : 2019-20ನೇ ಹಣಕಾಸು ವರ್ಷದಲ್ಲಿ ಭಾರತೀಯ ಜನತಾ ಪಾರ್ಟಿ ಬಳಿ 4,847.78 ಕೋಟಿ ರೂಪಾಯಿ ಮೌಲ್ಯದ ಆಸ್ತಿ ಹೊಂದಿರುವುದಾಗಿ ತಿಳಿದು ಬಂದಿದೆ. ಎಲ್ಲ ರಾಜಕೀಯ ಪಕ್ಷಗಳ ಪೈಕಿ ಎರಡನೇ ಸ್ಥಾನದಲ್ಲಿ ಬಿಎಸ್ಪಿ ಇದ್ದು, ಇದರ ಒಟ್ಟು ಆಸ್ತಿಯ ಮೌಲ್ಯ 698.33 ಕೋಟಿ ರೂ. ಆಗಿದೆ. ಎಲ್ಲ ರಾಷ್ಟ್ರೀಯ ಪಕ್ಷಗಳ ಪೈಕಿ ಭಾರತೀಯ ಜನತಾ ಪಾರ್ಟಿ ಬಳಿ ಅತ್ಯಧಿಕ ಆಸ್ತಿ ಇದ್ದು, ಕಾಂಗ್ರೆಸ್ 588.16 ಕೋಟಿ ರೂ. ಮೌಲ್ಯದ ಆಸ್ತಿ …
Read More »ಪಡಿತರ ಚೀಟಿ ಹೊಂದಿರುವವರಿಗೆ ಇಲ್ಲಿದೆ ಮಹತ್ವದ ಮಾಹಿತಿ
ಬೆಂಗಳೂರು : ಉದ್ಯೋಗ ಮತ್ತು ಇತರ ಜೀವನೋಪಾಯಕ್ಕಾಗಿ ಒಂದು ಸ್ಥಳದಿಂದ ಬೇರೊಂದು ಸ್ಥಳಕ್ಕೆ ವಲಸೆ ಹೋಗುವವರಿಗೆ ಆಹಾರ ಭದ್ರತೆ ನೀಡಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರೂಪಿಸಿರುವ ಒಂದು ರಾಷ್ಟ್ರ ಒಂದು ಪಡಿತರ ಚೀಟಿ ಯೋಜನೆ ಜಾರಿಗೆ ತಂದಿದೆ. ರಾಷ್ಟ್ರದ ಯಾವುದೇ ರಾಜ್ಯದಲ್ಲಿ ಅಂತ್ಯೋದಯ ಅನ್ನ ಅಥವಾ ಆದ್ಯತಾ ಪಡಿತರ ಚೀಟಿ ಹೊಂದಿರುವವರು ರಾಷ್ಟ್ರದ ಯಾವುದೇ ಭಾಗದ ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರ ಪಡೆಯಲು ಅವಕಾಶ ಕಲ್ಪಿಸಲಾಗಿದೆ. ಪಡಿತರ ಚೀಟಿದಾರರು ತಮ್ಮ …
Read More »ನೀವು ಅತಿಯಾಗಿ Dolo-650 ಮಾತ್ರೆ ತಗೊಳ್ತಾ ಇದ್ದೀರಾ.? ಎಚ್ಚರ ಅತಿಯಾದ ಸೇವನೆಯು ಮಾರಣಾಂತಿಕ.!
ನವದೆಹಲಿ: ಕೊರೋನಾ ( Coronavirus ) ನಂತ್ರ ಡೋಲೋ-650 ಮಾತ್ರೆಯ ಸೇವನೆ ಹೆಚ್ಚಳವಾಗಿದೆ. ಸಣ್ಣ-ಪುಟ್ಟ ಮೈಕೈ ನೋವಿಗೂ ಡೋಲೋ ಮಾತ್ರೆ ತೆಗೆದುಕೊಳ್ಳುವವರ ಸಂಖ್ಯೆ ಹೆಚ್ಚಿದೆ. ಆದ್ರೇ.. ಅತಿಯಾದಂತ ಡೋಲೋ ಮಾತ್ರೆ ಸೇವನೆಯೇ ಮಾರಣಾಂತಿಕವಾಗಿಬಿಡುತ್ತದೆ. ಅಲ್ಲದೇ ಅನೇಕ ಅಡ್ಡ ಪರಿಣಾಮಗಳು ಕೂಡ ಉಂಟಾಗಲಿವೆ ಎಂದು ಅನೇಕ ಸಂಶೋಧನೆ, ವಿಜ್ಞಾನಿಗಳು ತಿಳಿಸಿದ್ದಾರೆ. ಕಳೆದ 2 ವರ್ಷಗಳಲ್ಲಿ, ಕೋವಿಡ್-19 ( Covid-19 ) ನಮ್ಮ ಜಗತ್ತನ್ನು ತಲೆಕೆಳಗು ಮಾಡಿ ಲಕ್ಷಾಂತರ ಸಾವುಗಳಿಗೆ ಕಾರಣವಾಯಿತು. …
Read More »ಎಲೆಕ್ಟ್ರಿಕ್ ಎಂಜಿನ್ ರೈಲು: ಶನಿವಾರದಿಂದ ದಿನಕ್ಕೆ 10,000 ಲೀಟರ್ ಡೀಸೆಲ್ ಉಳಿತಾಯ
ಬೆಂಗಳೂರು: ನೈಋತ್ಯ ರೈಲ್ವೆ ವಲಯವು ಪ್ರಸಕ್ತ ಹಣಕಾಸು ವರ್ಷದಲ್ಲಿ ಇದುವರೆಗೆ 232 ಕಿ.ಮೀ ಮಾರ್ಗದ ವಿದ್ಯುದ್ದೀಕರಣವನ್ನು ಪೂರ್ಣಗೊಳಿಸಿದೆ ಮತ್ತು ಈ ಹಣಕಾಸು ಅವಧಿ ಮುಗಿಯುವ ಮುನ್ನ ಮತ್ತೆ 200ಕ್ಕೂ ಹೆಚ್ಚು ಕಿ. ಮೀ ವಿದ್ಯುದ್ದೀಕರಣವನ್ನು ಪೂರ್ಣಗೊಳಿಸುವ ಗುರಿ ಹೊಂದಿದೆ. ಇದು ಡೀಸೆಲ್ ಎಂಜಿನ್ಗಳನ್ನು ಪರಿಸರ ಸ್ನೇಹಿ ಎಲೆಕ್ಟ್ರಿಕ್ ಎಂಜಿನ್ಗಳಿಗೆ ಬದಲಾಯಿಸಲು ಅನುವು ಮಾಡಿಕೊಡಲಿದೆ. ಅಧಿಕೃತ ಹೇಳಿಕೆಯ ಪ್ರಕಾರ, 2016ರಲ್ಲಿ ನೈರುತ್ಯ ರೈಲ್ವೆ ವಲಯದಲ್ಲಿ ಸುಮಾರು 200 ಕಿಲೋ ಮೀಟರ್ ವಿದ್ಯುದ್ದೀಕರಣದ ಮಾರ್ಗವಿತ್ತು. …
Read More »ಹೂಕಟ್ಟಿ, ಮಾರಾಟ ಮಾಡ್ತಿದ್ದ ವ್ಯಕ್ತಿಯ ಪುತ್ರಿ ಇದೀಗ ಪಿಎಸ್ಐ!
ಕೊಪ್ಪಳ : ಕಡು ಬಡತನದಲ್ಲಿ ಅರಳಿರುವ ಪ್ರತಿಭೆ ಫರೀದಾ ಬೇಗಂ ಎಂಬುವರು ಯುಟ್ಯೂಬ್ನಲ್ಲಿ ಪಠ್ಯ ಆಲಿಸುತ್ತಾ, ಹೂಕಟ್ಟುತ್ತಾ, ಮನೆ ಕೆಲಸ ಮಾಡುತ್ತಾ, ಇತ್ತೀಚೆಗೆ ಪಿಎಸ್ಐ ಹುದ್ದೆಗೆ ನೇಮಕವಾಗಿದ್ದಾರೆ. ಹೂಕಟ್ಟಿ ಮಾರಾಟ ಮಾಡಿ ಜೀವನ ನಡೆಸುತ್ತಿದ್ದ ಈ ಕುಟುಂಬದಲ್ಲಿ ಬಡತನದ ಮಧ್ಯೆಯೂ ಛಲಬಿಡದೆ ಪಿಎಸ್ಐ ಆಗಿ ಆಯ್ಕೆಯಾಗುವ ಮೂಲಕ ಬೇಗಂ ಸ್ಫೂರ್ತಿಯ ಸೆಲೆಯಾಗಿದ್ದಾರೆ. ಕೊಪ್ಪಳ ಜಿಲ್ಲೆ ಕುಕನೂರಿನ ಬಸ್ ನಿಲ್ದಾಣ ಬಳಿ ಹೂವು ಮಾರುವ ಮೌಲಾಹುಸೇನ ಪಟೇಲ್ ಪುತ್ರಿ ಫರೀದಾ ಈ …
Read More »ವೈದ್ಯನ ಎಡವಟ್ಟು ಬಡ್ ಕುಟುಂಬ ಸಂಕಷ್ಟಕ್ಕೆ
ಬೆಂಗಳೂರು : ಜ್ವರ ಕಾಣಿಸಿಕೊಂಡು ಚಿಕಿತ್ಸೆ ಪಡೆಯಲು ಬಂದಿದ್ದ ಯುವಕನಿಗೆ ವೈದ್ಯರೊಬ್ಬರು ಇಂಜೆಕ್ಷನ್ ಮಾಡಿದ್ದರು. ಈಗ ಆ ಜಾಗದಲ್ಲಿ ದೇಹ ಕೊಳೆಯಲು ಶುರುವಾಗಿದೆ. ವೈದ್ಯರ ಪ್ರಮಾದಿಂದ ಬಡ ಕುಟುಂಬವೊಂದು ಸಂಕಷ್ಟಕ್ಕೀಡಾದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರು ದಕ್ಷಿಣ ತಾಲೂಕು ಮೈಲಸಂದ್ರ ಗ್ರಾಮದ ನಿವಾಸಿ ಮುರುಳಿ ಎಂಬ ಯುವಕ ಅನಾರೋಗ್ಯ ಪೀಡಿತನಾಗಿ ಆಸ್ಪತ್ರೆ ಸೇರಿದವರು. ಜನವರಿ 6ರಂದು ಯುವಕ ಮುರುಳಿಗೆ ಜ್ವರ ಕಾಣಿಸಿತ್ತು. ಸಮೀಪದ ಸಾನ್ಸಿಯಾ ಕ್ಲಿನಿಕ್ನಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಈ …
Read More »ನೇತಾಜಿ ಜೀವಂತ ಇದ್ದಿದ್ದರೆ ಮುಸ್ಲಿಮರ ಕುರಿತ ಮೋದಿ ವರ್ತನೆಯನ್ನು ಟೀಕಿಸುತ್ತಿದ್ದರು”: ಸುಗತ ಬೋಸ್
ಹೊಸದಿಲ್ಲಿ, ಜ. 27: ನೇತಾಜಿ ಸುಭಾಷ್ ಚಂದ್ರ ಭೋಸ್ ಅವರು ಜೀವಂತ ಇದ್ದಿದ್ದರೆ, ನರೇಂದ್ರ ಮೋದಿ ಸರಕಾರ ಮುಸ್ಲಿಮರನ್ನು ನಡೆಸಿಕೊಳ್ಳುತ್ತಿರುವ ರೀತಿಯನ್ನು ಕಟುವಾಗಿ ಟೀಕಿಸುತ್ತಿದ್ದರು ಎಂದು ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಮರಿ ಸೋದರಳಿಯ ಹಾಗೂ ಜೀವನಚರಿತ್ರೆಯ ಲೇಖಕ ಪ್ರೊ. ಸುಗತಾ ಬೋಸ್ ಹೇಳಿದ್ದಾರೆ. ‘ದಿ ವೈರ್’ನ ಸಂದರ್ಶನವೊಂದರಲ್ಲಿ ಮಾತನಾಡಿದ ಅವರು, ನೇತಾಜಿ ಅವರು ಜೀವಂತ ಇದ್ದಿದ್ದರೆ, ನರಮೇಧ ನಡೆಸುವಂತೆ ಕರೆ ನೀಡಲು ಯಾರೊಬ್ಬರಿಗೂ ಧೈರ್ಯ ಇರುತ್ತಿರಲಿಲ್ಲ ಎಂದಿದ್ದಾರೆ. …
Read More »ಅರಭಾವಿ ಕ್ಷೇತ್ರದ ರಸ್ತೆಗಳು ಹಾಗೂ ದೇವಸ್ಥಾನಗಳ ಅಭಿವೃದ್ಧಿಗೆ 52 ಕೋಟಿ ರೂ. ಅನುದಾನ ಬಿಡುಗಡೆ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ
ಗೋಕಾಕ : ಅರಭಾವಿ ಮತಕ್ಷೇತ್ರದ ರಸ್ತೆಗಳ ಅಭಿವೃದ್ಧಿಗಾಗಿ 50 ಕೋಟಿ ರೂ. ಹಾಗೂ ದೇವಸ್ಥಾನಗಳ ಜೀರ್ಣೋದ್ಧಾರಕ್ಕಾಗಿ 2 ಕೋಟಿ ರೂ.ಗಳು ಸೇರಿ ಒಟ್ಟು 52 ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದ್ದಾರೆ. ಕ್ಷೇತ್ರದಲ್ಲಿರುವ ರಸ್ತೆಗಳ ಸುಧಾರಣೆಗಾಗಿ ಲೋಕೋಪಯೋಗಿ ಇಲಾಖೆಯ ಒಟ್ಟು 34.53 ಕಿ.ಮೀ ರಸ್ತೆಗಳ ಸುಧಾರಣೆಗಾಗಿ 32 ಕೋಟಿ ರೂ. ಮತ್ತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ ರಾಜ್ ಇಲಾಖೆಯ …
Read More »ನೂತನವಾಗಿ ಆಯ್ಕೆಯಾದ ತಾಲೂಕಿನ ಪಿಎಸ್ಐ ಗಳಿಗೆ ಸನ್ಮಾನ ಶಾಸಕರಾದ ಶ್ರೀ ರಮೇಶ ಜಾರಕಿಹೊಳಿ ಅವರಿಂದ
ಗೋಕಾಕ ನಗರದ ಸಾಹುಕಾರ ಗೃಹ ಕಛೇರಿಯಲ್ಲಿ ಇಂದು 2021. 22ನೇ ಸಾಲಿನ ಪಿಎಸ್ಐ ಹುದ್ದೆಗೆ ಆಯ್ಕೆಯಾದ ಗೋಕಾಕ ತಾಲೂಕಿನ ಶಿವಾಪೂರ.ಕೊ ಗ್ರಾಮದ ಕು.ಕಿರಣ ಬಸಗೌಡ ಪಾಟೀಲಘಟಪ್ರಭಾ ಪಟ್ಟಣದ ಕು.ಚೈತ್ರಾ ಹಣಮಂತ ಗಿಡುರಮಮದಾಪೂರ ಗ್ರಾಮದ ಕು.ಕೀರ್ತಿ ನಿಂಗಪ್ಪ ಕಮತ ಇವರಿಗೆ ಶಾಸಕರಾದ ಶ್ರೀ ರಮೇಶ ಜಾರಕಿಹೊಳಿ ಅವರು ಸನ್ಮಾನಿಸಿ ಮುಂದಿನ ಉಜ್ವಲ ಭವಿಷ್ಯಕ್ಕಾಗಿ ಶುಭ ಹಾರೈಸಿದರು, ಈ ಸಂದರ್ಭದಲ್ಲಿ ಭೀಮನಗೌಡ ಪೋಲೀಸಗೌಡರ,ಟಿ.ಆರ್ ಕಾಗಲ್,ಮಡ್ಡೆಪ್ಪ ತೋಳಿನವರ,ಬಿಇಓ ಜಿ.ಬಿ ಬಳಗಾರ,ಸುರೇಶ ಸನದಿ, ಲಕ್ಷ್ಮೀಕಾಂತ ಎತ್ತಿನಮನಿ …
Read More »
Laxmi News 24×7