ನವದೆಹಲಿ: ಎಲೆಕ್ಟ್ರಿಕ್ ವಾಹನಗಳಿಗೆ ಉತ್ತೇಜನ ನೀಡಲು ಸರ್ಕಾರ ಮತ್ತೊಂದು ಕ್ರಮಕೈಗೊಂಡಿದ್ದು, ಯಾರು ಬೇಕಾದರೂ ಎಲೆಕ್ಟ್ರಿಕ್ ವಾಹನ ಚಾರ್ಜಿಂಗ್ ಕೇಂದ್ರಗಳನ್ನು ತೆರೆಯಬಹುದು. ಇದಕ್ಕೆ ಲೈಸೆನ್ಸ್ ಅಗತ್ಯವಿಲ್ಲ. ಖಾಸಗಿ ಸಂಸ್ಥೆ, ವ್ಯಕ್ತಿಗಳು ಸಾರ್ವಜನಿಕ ಎಲೆಕ್ಟ್ರಿಕ್ ವಾಹನ ಚಾರ್ಜಿಂಗ್ ಕೇಂದ್ರ ತೆರೆಯಲು ಯಾವುದೇ ಲೈಸೆನ್ಸ್ ಪಡೆಯಬೇಕಿಲ್ಲ ಎಂದು ಕೇಂದ್ರ ಸರ್ಕಾರ ಘೋಷಣೆ ಮಾಡಿದೆ. ಗೃಹಬಳಕೆಯ ವಿದ್ಯುತ್ ದರದಲ್ಲಿಯೇ ಹಾಲಿ ಇರುವ ಸಂಪರ್ಕ ಬಳಸಿಕೊಂಡು ಕಚೇರಿ ಅಥವಾ ಮನೆಗಳಲ್ಲಿ ತಮ್ಮ ವಾಹನ ಚಾರ್ಜ್ ಮಾಡಿಕೊಳ್ಳಲು ವಾಹನ …
Read More »ಬಿಜೆಪಿ ಶಾಸಕ ಅನಿಲ್ ಬೆನಕೆ ಮತ್ತೆ ಕೋವಿಡ್ ರೂಲ್ಸ್ ಬ್ರೇಕ್
ಬೆಳಗಾವಿ: ಇಲ್ಲಿನ ಉತ್ತರ ವಿಧಾನಸಭೆ ಕ್ಷೇತ್ರದ ಬಿಜೆಪಿ ಶಾಸಕ ಅನಿಲ್ ಬೆನಕೆ ಮತ್ತೆ ಕೋವಿಡ್ ರೂಲ್ಸ್ ಬ್ರೇಕ್ ಮಾಡಿದ್ದಾರೆ. ವೀಕೆಂಡ್ ಕರ್ಫ್ಯೂ ದಿನವೇ ಧರ್ಮವೀರ ಸಂಭಾಜಿ ಪಾಟೀಲ್ ಪ್ರತಿಮೆಗೆ ಅಭಿಷೇಕ ಮಾಡಿದ್ದಾರೆ. ಧರ್ಮವೀರ ಸಂಭಾಜಿ ವೃತ್ತದಲ್ಲಿರುವ ಸಂಭಾಜಿ ಪ್ರತಿಮೆಗೆ ಪೂಜೆ ಸಲ್ಲಿಸಿ ಮಾಲಾರ್ಪಣೆ ಮಾಡಲಾಯಿತು. ಮಾಸ್ಕ್ ಹಾಕದೆ ಒಂದೇ ಕಡೆ 20ಕ್ಕೂ ಹೆಚ್ಚು ಜನರು ಜಮಾವಣೆಗೊಂಡಿದ್ದರು. ರಾಜ್ಯಾದ್ಯಂತ ವೀಕೆಂಡ್ ಕರ್ಫ್ಯೂ ಜಾರಿಯಲ್ಲಿದ್ದು, ಹೀಗಿದ್ದರೂ ಆಡಳಿತ ಪಕ್ಷದ ಶಾಸಕನೇ ಕೋವಿಡ್ ನಿಯಮ ಉಲ್ಲಂಘಿಸಿರುವುದಕ್ಕೆ …
Read More »ಪ್ರಿಯಕರನ ಜೊತೆ ಸೇರಿ ಗಂಡನ ಹತ್ಯೆಗೆ ಪತ್ನಿ ಸ್ಕೆಚ್ .
ಬೆಳಗಾವಿ: ಜ.13ರಂದು ರಮೇಶ್ ಮಾದಿಗರ ಶವ ಪತ್ತೆ ಪ್ರಕರಣಕ್ಕೆ ಸಂಬಂಧಿಸಿ ರಮೇಶ್ ಹತ್ಯೆಗೈದಿದ್ದ ಪತ್ನಿ ಶ್ರೀದೇವಿ ಮಾದಿಗರ(30) ಮತ್ತು ಪ್ರಿಯಕರ ಬಸವರಾಜ ಹರಿಜನ(20)ನನ್ನು ಬೆಳಗಾವಿ ಜಿಲ್ಲೆ ಕಿತ್ತೂರು ಠಾಣೆ ಪೊಲೀಸರು ಬಂಧಿಸಿದ್ದಾರೆ. ಜನವರಿ 13ರಂದು ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಬಚ್ಚನಕೇರಿ ಕ್ರಾಸ್ ಬಳಿ ರಮೇಶ್ ಮಾದಿಗರ ಶವ ಪತ್ತೆಯಾಗಿತ್ತು. ಈ ಹಿನ್ನೆಲೆ ಕೊಲೆಯ ಆರೋಪಿಗಳಿಗಾಗಿ ಬಲೆ ಬೀಸಿದ್ದ ಪೊಲೀಸರಿಗೆ ಬೆಚ್ಚಿಬೀಳಿಸುವ ಸಂಗತಿ ಬಯಲಾಗಿದೆ. ಪ್ರಿಯಕರನ ಜೊತೆ ಸೇರಿ ಗಂಡನ …
Read More »ಸತತ ಠೇವಣಿ ಕಳೆದುಕೊಂಡರೆ ಸ್ಪರ್ಧೆಗೆ ಅನರ್ಹ?
ಬೆಂಗಳೂರು: ನೂತನ ಕಾರ್ಯಕಾರಿ ಸಮಿತಿಯು ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಹಲವು ಕ್ರಾಂತಿಕಾರಕ ಬದಲಾವಣೆ ತರಲು ಮುಂದಾಗಿದ್ದು, ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿ ಸಿದ ಸ್ಪರ್ಧಾಳು ಸತತವಾಗಿ ಠೇವಣಿ ಕಳೆದು ಕೊಂಡರೆ ಮುಂದೆ ಸ್ಪರ್ಧೆಗೆ ಅರ್ಹತೆ ಕಳೆದುಕೊಳ್ಳುವಂತೆ ಬೈಲಾಕ್ಕೆ ತಿದ್ದುಪಡಿ ತರಲೂ ಚಿಂತಿಸಲಾಗಿದೆ. ಈ ಸಂಬಂಧ ಪರಿಷತ್ತಿನ ಹಾಲಿ ಕಾರ್ಯಕಾರಿ ಸಮಿತಿ ಈಗಾಗಲೇ ನುರಿತ ಕಾನೂನು ತಜ್ಞರೊಂದಿಗೆ ಸಮಾಲೋಚನೆ ನಿರತವಾಗಿದೆ. ಶೀಘ್ರದಲ್ಲೇ ಈ ಬಗ್ಗೆ ತೀರ್ಮಾನ ತೆಗೆದುಕೊಳ್ಳುವ ಸಾಧ್ಯತೆ ಇದೆ. ಕನ್ನಡ ಸಾಹಿತ್ಯ ಪರಿಷತ್ತಿನ …
Read More »ಕರ್ಫ್ಯೂ ನಡುವೆಯೂ ಜಗಳೂರು ಶಾಸಕನ ಜನ್ಮದಿನಾಚರಣೆ, ಕೊರೊನಾ ಮಾರ್ಗಸೂಚಿ ನಿಯಮಗಳು ಉಲ್ಲಂಘನೆ
ದಾವಣಗೆರೆ: ಕೊರೊನಾ, ಒಮಿಕ್ರಾನ್ ನಿಯಂತ್ರಣಕ್ಕಾಗಿ ರಾಜ್ಯ ಸರ್ಕಾರ ಜಾರಿಗೊಳಿಸಿರುವ ವೀಕೆಂಡ್ ಕರ್ಫ್ಯೂ ನಿಯಮ, ಮಾರ್ಗಸೂಚಿ ಉಲ್ಲಂಘಿಸಿ ಜಗಳೂರು ಶಾಸಕ ಎಸ್.ವಿ. ರಾಮಚಂದ್ರಪ್ಪ ಭಾನುವಾರ ನೂರಾರು ಜನರ ನಡುವೆ ಅದ್ದೂರಿಯಾಗಿ ಜನ್ಮ ದಿನ ಆಚರಿಸಿಕೊಂಡಿದ್ದಾರೆ. ಕೆ.ಬಿ. ಬಡಾವಣೆಯ ಗುಳ್ಳಮ್ಮನ ದೇವಸ್ಥಾನದ ಪಕ್ಕದಲ್ಲೇ ಬೃಹತ್ ಶಾಮಿಯಾನ, ವೇದಿಕೆಯಲ್ಲಿ ಜನ್ಮದಿನ ಆಚರಿಸಿಕೊಂಡರು. ಶಿಸ್ತಿನ ಪಕ್ಷ ಎಂದೇ ಹೇಳಿಕೊಳ್ಳುವ ಆಡಳಿತಾರೂಢ ಪಕ್ಷದ ಕೆಲ ಮುಖಂಡರು, ಜನಪ್ರತಿನಿಧಿಗಳು, ಜಿಲ್ಲಾ, ತಾಲೂಕು ಪಂಚಾಯತ್ ಮಾಜಿ ಸದಸ್ಯರು ಸರತಿ ಸಾಲಲ್ಲಿ …
Read More »ಸೂರು ಕಳೆದುಕೊಂಡ ವೃದ್ಧೆಗೆ ನಾಲ್ಕೇ ತಿಂಗಳಲ್ಲಿ ಮನೆ : ಮಾತು ಉಳಿಸಿಕೊಂಡC.M.
ಬೆಂಗಳೂರು: ಭಾರಿ ಮಳೆಗೆ ಸೂರು ಕಳೆದುಕೊಂಡ ಕಮಲವ್ವನಿಗೆ ಗಣೇಶ ಹಬ್ಬವನ್ನೂ ಸಂಭ್ರಮಿಸಲಾಗದ ಸಂಕಟ. ಅಂದು ಖಾಸಗಿ ವಾಹಿನಿ ಯ ಸಂದರ್ಶನ ಕಾರ್ಯಕ್ರಮದಲ್ಲಿ ಜನರ ಸಂಕಷ್ಟ ಆಲಿಸಿ ಸ್ಥಳದಲ್ಲೇ ಪರಿಹಾರ ಸೂಚಿಸುತ್ತಿದ್ದ ಮುಖ್ಯಮಂತ್ರಿಗಳನ್ನು ಕಂಡು ಕಮಲವ್ವನೂ ತನ್ನ ಸಂಕಷ್ಟ ತೋಡಿಕೊಂಡಳು. “ಇಬ್ಬರೂ ಗಂಡುಮಕ್ಕಳು ಸತ್ತ ಹೋಗ್ಯಾರ, ಮನಿ ಕಟ್ಟಸಿಕೊಡ್ರಿ ಸಾಹೇಬ್ರ” ಎಂದು ಗದ್ಗದಿತಳಾಗಿ ನುಡಿದ ಕಮಲವ್ವನಿಗೆ ಸಾಂತ್ವನ ಹೇಳಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕಮಲವ್ವ ಸ್ವಂತ ಸೂರಿನಡಿ ಸಂಕ್ರಾಂತಿ …
Read More »11ನೇ ವಯಸ್ಸಿಗೆ 50ಕೆ.ಜಿ ಭಾರ ಎತ್ತಿದ ಅವಳಿ ಸಹೋದರರು : ಇಬ್ಬರ ಸಾಹಸಕ್ಕೆ ಭಾರಿ ಮೆಚ್ಚುಗೆ
ಕುಷ್ಟಗಿ: ಕುಷ್ಟಗಿಯ ಹನ್ನೊಂದು ವರ್ಷದ ಅವಳಿ ಸಹೋದರರು ಭಾರ ಎತ್ತುವ ಸಾಹಸ ಪ್ರದರ್ಶನದಲ್ಲಿ 50 ಕೆ.ಜಿ. ಚೀಲ ಎತ್ತುವ ಮೂಲಕ ಭವಿಷ್ಯದ ಭರವಸೆ ಮೂಡಿಸಿದ್ದಾರೆ. ಕುಷ್ಟಗಿ ಪಟ್ಟಣದ ಅನ್ನದಾನೇಶ್ವರ ನಗರದ ನಿವಾಸಿ ಮರಸಣ್ಣಭೀ. ತಾಳದ ಅವರ ಅವಳಿ ಮಕ್ಕಳಾದ ಅಜಯ್- ವಿಜಯ್ ಇಲ್ಲಿನ ಅಜಯ್ ಅಕ್ಷರ್ ಶಾಲೆಯಲ್ಲಿ 6ನೇ ತರಗತಿ ಓದುತ್ತಿದ್ದಾರೆ. ಭಾನುವಾರ ನಡೆದ ರಾಯಚೂರ ಜಿಲ್ಲೆ ದೇವದುರ್ಗ ತಾಲೂಕಿನ ಮಸರಕಲ್ ಗ್ರಾಮದ ಮರಸಲಿಂಗೇಶ್ವರ ಜಾತ್ರಾ ಮಹೋತ್ಸವದಲ್ಲಿ 50 ಕೆ.ಜಿ. …
Read More »ರೈತರ ಸಾಲ ವಿತರಣೆಗೆ ಒಮಿಕ್ರಾನ್ ನೆಪ ಬೇಡ: ಎಸ್.ಟಿ.ಸೋಮಶೇಖರ್
ಬೆಂಗಳೂರು: ರಾಜ್ಯದಲ್ಲಿ ಒಮಿಕ್ರಾನ್ ಹಾವಳಿಯು ರೈತರ ಸಾಲ ವಿತರಣೆಗೆ ಅಡ್ಡಿಯಾಗದಂತೆ ನೋಡಿಕೊಳ್ಳಲು 30 ಲಕ್ಷ ರೈತರಿಗೆ ಸಾಲ ವಿತರಣೆಗಾಗಿ ಡಿಸಿಸಿ ಬ್ಯಾಂಕ್ಗಳಿಗೆ ಗುರಿ ನೀಡಲಾಗಿದೆ. ಜತೆಗೆ, ರೈತರು ಸಾಲಕ್ಕಾಗಿ ಹೆಸರು ನೋಂದಣಿ ಮಾಡಿ ಕೊಳ್ಳಲು ಹೊಸ ಸಾಫ್ಟ್ವೇರ್ನಲ್ಲಿ ತೊಂದರೆಯಾಗುತ್ತಿದ್ದ ಕಾರಣ ಮಾರ್ಚ್ 31ರ ವರೆಗೆ ಹಳೆ ಪದ್ಧತಿ ಯಲ್ಲೇ ಅವಕಾಶ ಕಲ್ಪಿಸಲಾಗಿದೆ. ಪ್ರಸ್ತುತ 19.04 ಲಕ್ಷ ರೈತರಿಗೆ 13,347 ಸಾವಿರ ಕೋ. ರೂ. ಸಾಲ ವಿತರಣೆಯಾಗಿದ್ದು, ಜನವರಿ ಅಂತ್ಯಕ್ಕೆ 20 …
Read More »ಮಕ್ಕಳ ಬಗ್ಗೆ ಯಾರೇ ನಿರ್ಲಕ್ಷ ವಹಿಸಿದ್ದರು ಅವರ್ ವಿರುದ್ಧ ಕ್ರಮ ಅಂತಾರೆ D.H.O. ಆದ್ರೆ ಹೋದ ಮಕ್ಕಳ ಪ್ರಾಣ ಯಾರ ಕೊಡ್ತಾರೆ ಸರ್….
ರಾಮದುರ್ಗ ತಾಲೂಕಿನ ಬೋಚಬಾಳ ಗ್ರಾಮದಲ್ಲಿ 21 ಮಕ್ಕಳಿಗೆ ರೂಬೆಲ್ಲಾ ಲಸಿಕೆ ನೀಡಿದ್ದಾರೆ. ಈ ವೇಳೆ ಪ್ರತ್ಯೇಕ ಲಸಿಕಾ ಕೇಂದ್ರ ಮಾಡಲಾಗಿತ್ತು. ಇದಕ್ಕೂ ಮತ್ತು ಕೋವಿಡ್ಗೂ ಯಾವುದೇ ರೀತಿ ಸಂಬಂಧ ಇಲ್ಲ. ಲಸಿಕೆ ವಿತರಣೆಯಲ್ಲಿ ಯಾರೇ ನಿರ್ಲಕ್ಷ್ಯ ವಹಿಸಿದ್ದರೂ ಖಂಡಿತವಾಗಲೂ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಡಿಎಚ್ಓ ಡಾ.ಶಶಿಧರ ಮುನ್ಯಾಳ ಎಚ್ಚರಿಸಿದ್ದಾರೆ. ರಾಮದುರ್ಗ ತಾಲೂಕಿನ ಮೂವರು ಮಕ್ಕಳು ಜಿಲ್ಲಾಸ್ಪತ್ರೆಯಲ್ಲಿ ನಿಗೂಢವಾಗಿ ಸಾವನ್ನಪ್ಪಿರುವ ಕುರಿತು ಬೆಳಗಾವಿಯಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಡಿಎಚ್ಓ ಡಾ.ಶಶಿಧರ ಮುನ್ಯಾಳ …
Read More »ಉಸಿರುಗಟ್ಟಿ ಸಾವಿಗೀಡಾದರು ಏಳು ವರ್ಷದ ಮಗಳು ಮತ್ತು ತಾಯಿ
ಬೆಂಗಳೂರು: ಸ್ನಾನಕ್ಕೆಂದು ಹೋಗಿದ್ದ ತಾಯಿ-ಮಗಳು ಉಸಿರುಗಟ್ಟಿ ಸಾವಿಗೀಡಾದ ಪ್ರಕರಣವೊಂದು ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ. ನಗರದ ಸೋಲದೇವನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ದುರಂತ ಸಂಭವಿಸಿದೆ. ತಾಯಿ ಮಂಗಳ (35), ಪುತ್ರಿ ಗೌತಮಿ (07) ಸಾವಿಗೀಡಾದವರು. ಬೆಂಗಳೂರು ಉತ್ತರ ತಾಲೂಕಿನ ಚಿಕ್ಕಬಾಣಾವರದಲ್ಲಿ ಈ ದುರಂತ ನಡೆದುಹೋಗಿದೆ. ರಾಮನಗರ ಮೂಲದ ಈ ಕುಟುಂಬ 15 ವರ್ಷಗಳ ಹಿಂದೆ ಬೆಂಗಳೂರಿಗೆ ಬಂದು ನೆಲೆಸಿತ್ತು. ಇಂದು ಬೆಳಗ್ಗೆ ಪತಿ ನರಸಿಂಹಮೂರ್ತಿ ಕೆಲಸಕ್ಕೆಂದು ಹೊರಗೆ ಹೋಗಿದ್ದಾಗ ಮಗುವನ್ನು …
Read More »
Laxmi News 24×7