Breaking News

ರಾಜಕೀಯ

ಆಯತಪ್ಪಿ ಬಿದ್ದ ಸಿದ್ದೇಶ್ವರ ಸ್ವಾಮೀಜಿ ಕಾಲಿಗೆ ಗಾಯ: ಕನ್ಹೇರಿ ಆಸ್ಪತ್ರೆಗೆ ಅಡ್ಮಿಟ್

ಸ್ನಾನ ಗೃಹದಲ್ಲಿ ಆಯತಪ್ಪಿ ಬಿದ್ದ ಪರಿಣಾಮ ವಿಜಯಪುರದ ಜ್ಞಾನಯೋಗಾಶ್ರಮದ ಸಿದ್ದೇಶ್ವರ ಸ್ವಾಮೀಜಿ ಅವರ ಕಾಲಿಗೆ ಗಂಭೀರ ಪ್ರಮಾಣದ ಗಾಯವಾಗಿದೆ. ಹೌದು ಚಿಕ್ಕೋಡಿ ತಾಲೂಕಿನ ಕೇರೂರು ಗ್ರಾಮದಲ್ಲಿ ಇಂದಿನಿಂದ ಆಧ್ಯಾತ್ಮಿಕ ಪ್ರವಚನ ನೀಡಲು ಸಿದ್ದೇಶ್ವರ ಸ್ವಾಮೀಜಿ ವಿಜಯಪುರದಿಂದ ಆಗಮಿಸಿದ್ದರು. ಮೊದಲನೆಯ ದಿನವಾದ ಇಂದು ಹೀರೆಕೊಡಿಯ ಮಗದುಮ್ಮ ಫಾರ್ಮ್ ಹೌಸ್‍ನಲ್ಲಿ ತಂಗಿದ್ದರು. ಈ ವೇಳೆ ಸ್ನಾನದ ಗೃಹಕ್ಕೆ ಹೋಗಿರುವ ಸಂದರ್ಭದಲ್ಲಿ ಆಯತಪ್ಪಿ ಬಿದ್ದು ಗಾಯಗೊಂಡಿದ್ದಾರೆ. ಇತ್ತ ಶ್ರೀಗಳಿಗೆ ಕಾಲಿಗೆ ಗಾಯವಾದ ಹಿನ್ನೆಲೆ ಕೇರೂರ …

Read More »

ಸಾರ್ವಜನಿಕರ ಗಮನಕ್ಕೆ: ಬೆಳಗಾವಿಯ ಈ ಪ್ರದೇಶಗಳಲ್ಲಿ ನಾಳೆ ವಿದ್ಯುತ್ ಇರಲ್ಲ

ಕಣಬರ್ಗಿ ವಿದ್ಯುತ್ ಉಪಕೇಂದ್ರದಿಂದ ವಿದ್ಯುತ್ ಸರಬರಾಜು ಆಗುವ ಎಫ್4 ಪ್ರದೇಶದಲ್ಲಿ ಬರುವ ಎಲ್ಲಾ ಪ್ರದೇಶಗಳಲ್ಲಿ ನಾಳೆ ಮಂಗಳವಾರ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಕಾರ್ಯ ಮತ್ತು ಪಲನೆಯ ಕಾರ್ಯ ನಿರ್ವಾಹರ ಇಂಜಿನೀಯರ್ ತಿಳಿಸಿದ್ದಾರೆ. ಕಣಬರ್ಗಿ ವಿದ್ಯುತ್ ಉಪ ಕೇಂದ್ರದಿಂದ ವಿದ್ಯುತ್ ಸರಬರಾಜು ಆಗುವ ಎಫ್4 ರಾಮತೀರ್ಥ ನಗರ ಫೀಡರ್ ಮೇಲೆ ಬರುವ ಎಲ್ಲಾ ಪ್ರದೇಶಗಳಲ್ಲಿ ನಾಳೆ ಮಂಗಳವಾರ ದಿನಾಂಕ 11ರಂದು ಮುಂಜಾನೆ 10 ಗಂಟೆಯಿಂದ ಸಾಯಂಕಾಲ 5ಗಂಟೆಯ ವರೆಗೆ ವಿದ್ಯುತ್ ನಿಲುಗಡೆಯಾಗಲಿದೆ …

Read More »

ಬೇಟಿ ಬಚಾವೋ ಬೇಟಿ ಪಡಾವೋ

ಇಂದು ಕಣಬರ್ಗಿ ರಸ್ತೆಯಲ್ಲಿ ಅಲ್ಪಸಂಖ್ಯಾತರ ನಿಧಿಯಡಿ ಅಂದಾಜು 1 ಕೋಟಿ 50 ಲಕ್ಷ ವೆಚ್ಚದಲ್ಲಿ ನೂತನವಾಗಿ ನಿರ್ಮಿಸುತ್ತಿರುವ ಬಾಲಕಿಯರ ವಸತಿ ನಿಲಯದ ಭೂಮಿಪೂಜೆಯನ್ನು ಕಾರ್ಪೊರೇಟರ್ ಶ್ರೀಗಳ ಸಮ್ಮುಖದಲ್ಲಿ ನೆರವೇರಿಸಲಾಯಿತು. ಹಣಮಂತ ಕೊಂಗಲಿ, ಬಿಜೆಪಿ ಮಹಾನಗರ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶ್ರೀ. ಮುರಗೇಂದ್ರಗೌಡ ಪಾಟೀಲ, ಬಿಜೆಪಿ ಉತ್ತರ ಮಂಡಲ ಪ್ರಧಾನ ಕಾರ್ಯದರ್ಶಿ ಶ್ರೀ. ಈರಯ್ಯ ಖೋತ್, ಬಿಜೆಪಿ ಉತ್ತರ ಮಂಡಲ ಉಪಾಧ್ಯಕ್ಷರಾದ ಶ್ರೀ. ವಿಲಾಸ ಕೆರೂರು, ಹೆಸ್ಕಾಂ ನಿರ್ದೇಶಕರಾದ ಶ್ರೀ. ಅಣ್ಣಾಸಾಹೇಬ …

Read More »

ವಾಚಕರವಾಣಿ: ನಿವೃತ್ತಿ ವಯಸ್ಸು ಏರಿಕೆ, ಮಾರಕ ನಿರ್ಧಾರ

ನಿವೃತ್ತಿ ವಯಸ್ಸು ಹೆಚ್ಚಿಸುವುದು ಯುವಪೀಳಿಗೆಗೆ ಮಾರಕವಾಗುವ ನಿರ್ಧಾರ. ಯಾವುದೇ ರಾಜ್ಯ ತನ್ನ ನೌಕರರ ನಿವೃತ್ತಿ ವಯಸ್ಸು ನಿಗದಿ ಮಾಡುವ ಮುನ್ನ ಸಮಾಜದ ಮೇಲೆ ಅದರಿಂದಾಗುವ ದುಷ್ಪರಿಣಾಮದ ಬಗ್ಗೆ ಅವಲೋಕಿಸ ಬೇಕಿದೆ. ಸರ್ಕಾರಿ ನೌಕರರ ನಿವೃತ್ತಿ ವಯಸ್ಸು 55 ವರ್ಷ ಇದ್ದಾಗ ಸಮಾಜದಲ್ಲಿ ನಿರುದ್ಯೋಗ ಸಮಸ್ಯೆ ಇರಲಿಲ್ಲ. ಈ ಮಿತಿಯನ್ನು 58 ವರ್ಷಕ್ಕೆ ಏರಿಸಿದಾಗ ತಕ್ಕಮಟ್ಟಿಗೆ ನಿರುದ್ಯೋಗ ಸಮಸ್ಯೆ ಕಾಡಲಾರಂಭಿಸಿತು. ಅದನ್ನು 60 ವರ್ಷಕ್ಕೆ ಹೆಚ್ಚಿಸಿದಾಗ ಸಮಸ್ಯೆ ಉಲ್ಬಣಗೊಂಡಿದ್ದನ್ನು ಅಂಕಿಅಂಶಗಳೇ ದೃಢಪಡಿಸುತ್ತವೆ. …

Read More »

ಕೆಎಂಎಫ್ ವಾರ್ಷಿಕವಾಗಿ 17 ಸಾವಿರ ಕೋಟಿ ರೂ ಗಳ, ವ್ಯವಹಾರ ನಡೆಸುತ್ತಿರುವ ರಾಜ್ಯದ ನಂ1 ಸಹಕಾರಿ ಸಂಸ್ಥೆ 

  ಮೂಡಲಗಿ: ರಾಜ್ಯದ 14 ಜಿಲ್ಲಾ ಹಾಲು ಒಕ್ಕೂಟಗಳಿಂದ ಕೂಡಿರುವ ಕೆ.ಎಂ.ಎಫ್ ವಾರ್ಷಿಕವಾಗಿ ಸುಮಾರು 17 ಸಾವಿರ ಕೋಟಿ ರೂಪಾಯಿ ವ್ಯವಹಾರ ಮಾಡುತ್ತಿರುವ ರಾಜ್ಯದ ಅಗ್ರಗಣ್ಯ ಸಹಕಾರಿ ಸಂಸ್ಥೆಯಾಗಿದೆ. ಈ ಮೂಲಕ ಹೈನೋದÀ್ಯಮಕ್ಕೆ ಹೆಚ್ಚಿನ ಪ್ರೋತ್ಸಾಹ ನೀಡುವ ಮೂಲಕ ರೈತರ ಸೇವೆ ಮಾಡುವ ಅವಕಾಶ ಸಿಕ್ಕಿರುವುದು ನನ್ನ ಪುಣ್ಯ ಎಂದು ಕೆ.ಎಂ.ಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಸೋಮವಾರದಂದು ತಾಲೂಕಿನ ನಾಗನೂರು ಹಾಲು ಉತ್ಪಾದಕರ ಸಹಕಾರಿ ಸಂಘದ …

Read More »

ಸುಟ್ಟು ಭಸ್ಮವಾಯ್ತು 4 ಎಕರೆ ಕಬ್ಬು: ಸಂಕಷ್ಟದಲ್ಲಿ ಅನ್ನದಾತ

ಶಾರ್ಟ ಸಕ್ರ್ಯೂಟ್‍ನಿಂದ ಬೆಂಕಿ ತಗುಲಿ ಸುಮಾರು 4 ಎಕರೆ ಹೊಲದಲ್ಲಿ ಬೆಳೆದಿದ್ದ ಕಬ್ಬು ಸುಟ್ಟು ಕರಕಲಾಗಿರುವ ಘಟನೆ ಬೈಲಹೊಂಗಲ ತಾಲೂಕಿನ ಸಂಗೊಳ್ಳಿ ಗ್ರಾಮದಲ್ಲಿ ಸಂಭವಿಸಿದೆ. ಹೌದು ಸುಮಾರು 11 ತಿಂಗಳು ಕಷ್ಟ ಪಟ್ಟು ಬೆಳೆದಿದ್ದ ಕಬ್ಬು ಎದೆ ಎತ್ತರಕ್ಕೆ ಬಂದು ನಿಂತಿತ್ತು. ಇನ್ನೇನು ಕಬ್ಬು ಕಡಿಸಿ, ಫ್ಯಾಕ್ಟರಿಗೆ ಕಳಿಸಿದ್ರೆ ಒಳ್ಳೆಯ ಆದಾಯ ಬರುತ್ತದೆ ಎಂದು ನಿರೀಕ್ಷೆಯಲ್ಲಿದ್ದ ರೈತನಿಗೆ ಬರಸಿಡಿಲು ಬಡಿದಂತಾಗಿದೆ. ರವಿವಾರ ವಿದ್ಯುತ್ ತಂತಿ ಸ್ಪರ್ಶಿಸಿ ಸುಮಾರು 4 ಎಕರೆ …

Read More »

ಕಲಿಯುತ್ತಿರುವ ಚಾಲಕ ಅಜಾಗರೂಕತೆಯಿಂದ ಕಾರಿನ ವೆಗ ಹೆಚ್ಚಿ ಬುಲೆಟ್‍ಗೆ ಕಾರು ಡಿಕ್ಕಿ

ಕಲಿಯುತ್ತಿರುವ ಚಾಲಕ ಅಜಾಗರೂಕತೆಯಿಂದ ಕಾರಿನ ವೆಗ ಹೆಚ್ಚಿಸಿದ್ದರಿಂದ ಕಾರು ಯೂನಿಯನ್ ಜಿಮ್ಖಾನಾದ ರಕ್ಷಣಾ ಗೋಡೆಗೆ ಡಿಕ್ಕಿ ಹೊಡೆದಿದೆ. ಕಾರು ಚಾಲನೆ ಕಲಿಯುತ್ತಿದ್ದ ಚಾಲಕನ ಅಜಾಗರೂಕತೆಯಿಂದಾಗಿ ಕಾರಿನ ವೇಗ ಹೆಚ್ಚಿ ಯೂನಿಯನ್ ಜಿಮ್‍ಖಾನಾ ಕಂಪೌಂಡ್‍ಗೆ ಕಾರು ಡಿಕ್ಕಿಹೊಡೆದಿದೆ. ಮರಾಠಿ ವಿದ್ಯಾನಿಕೇತನ ಮಾರ್ಗದ ಪೆÇಲೀಸ್ ಕಾಲೋನಿ ಬಳಿ ಈ ಘಟನೆ ನಡೆದಿದೆ. ಕಂಪೌಂಡ್ ಪಕ್ಕದಲ್ಲಿ ನಿಲ್ಲಿಸಿದ್ದ ಬುಲೆಟ್ ಬೈಕ್‍ಗೆ ಡಿಕ್ಕಿ ಹೊಡೆದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಪೆÇಲೀಸ್ ಕಾಲೋನಿ ಮತ್ತು ಮರಾಠಿ …

Read More »

ಸಿನಿಮಾ ನಟಿಯ ಲಿಪ್​ ಕಿಸ್​ ಪುರಾಣ; ಸಖತ್ ಟ್ರೋಲ್​ ಆಗುತ್ತಿರುವ ಅನುಪಮಾ

ಖ್ಯಾತ ನಟಿ ಅನುಪಮಾ ಪರಮೇಶ್ವರನ್ (Anupama Parameswaran)​ ಅವರು ಇಡೀ ದಕ್ಷಿಣ ಭಾರತದಲ್ಲಿ ಫೇಮಸ್​ ಆಗಿದ್ದಾರೆ. ಮಲಯಾಳಂ ಚಿತ್ರರಂಗದವರಾದ ಅವರು ತೆಲುಗು ಮತ್ತು ತಮಿಳಿನಲ್ಲೂ ಬೇಡಿಕೆ ಸೃಷ್ಟಿಸಿಕೊಂಡಿದ್ದಾರೆ. ಪುನೀತ್​ ರಾಜ್​ಕುಮಾರ್​ (Puneeth Rajkumar) ಜೊತೆ ‘ನಟ ಸಾರ್ವಭೌಮ’ (Nata Sarvabhouma) ಚಿತ್ರದಲ್ಲಿ ಅಭಿನಯಿಸುವ ಮೂಲಕ ಕನ್ನಡದ ಸಿನಿಪ್ರಿಯರಿಗೂ ಅವರು ಪರಿಚಿತರಾದರು. ಅವರನ್ನು ಇಷ್ಟಪಡುವ ದೊಡ್ಡ ಅಭಿಮಾನಿ ಬಳಗ ಇದೆ. ಆದರೆ ಈಗ ಅವರು ಸಿಕ್ಕಾಪಟ್ಟೆ ಟ್ರೋಲ್ ಆಗುತ್ತಿದ್ದಾರೆ. ಅದಕ್ಕೆ ಕಾರಣ …

Read More »

ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆ ಹಿನ್ನಲೆ: ಸಚಿವ ಗೋವಿಂದ ಕಾರಜೋಳರಿಂದ ಮತ್ತೊಂದು ದಾಖಲೆ ಬಿಡುಗಡೆ

ಬಾಗಲಕೋಟೆ: ಮೇಕೆದಾಟು ಯೋಜನೆಯನ್ನು ಜಾರಿಗೊಳಿಸುವ ಕುರಿತು 2013 ರಿಂದ 2018 ರವರೆಗೆ ಅಂದಿನ ಸಿದ್ದರಾಮಯ್ಯನವರ ಸರಕಾರದಲ್ಲಿ ಕಾನೂನು ಮತ್ತು ಸಂಸದೀಯ ವ್ಯವಹಾರಗಳು, ಪಶುಸಂಗೋಪನಾ ಮತ್ತು ಮುಜರಾಯಿ ಸಚಿವರಾಗಿದ್ದ, ಟಿ.ಬಿ.ಜಯಚಂದ್ರ ರವರು ಮುಖ್ಯಮಂತ್ರಿಗಳಿಗೆ ಕಳುಹಿಸಿದ್ದ ಸಕರಾತ್ಮಕ ಟಿಪ್ಪಣಿ ಹಾಗೂ ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯರವರ ಅನುಮೋದನೆಯ ನಂತರವೂ ಅಂದಿನ ಜಲಸಂಪನ್ಮೂಲ ಸಚಿವ ಎಂ.ಬಿ.ಪಾಟೀಲ್ ಯಾವುದೇ ಕ್ರಮ ಕೈಗೊಳ್ಳದೇ ನಿಷ್ಕ್ರಿಯರಾಗಿದ್ದರು ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಇಂದು ಕಟುವಾಗಿ ಟೀಕಿಸಿದ್ದಾರೆ. ಬಾಗಲಕೋಟೆಯಲ್ಲಿ ಮಾಧ್ಯಮ …

Read More »

ಹುಬ್ಬಳ್ಳಿಯ ನೆಹರೂ ಮೈದಾನದಲ್ಲಿ ಹೊತ್ತಿ ಉರಿದ ಕಾರು: ವಿಡಿಯೋ

ಹುಬ್ಬಳ್ಳಿಯ ನೆಹರೂ ಮೈದಾನದಲ್ಲಿ ನಿಲ್ಲಿಸಿದ ಕಾರೊಂದು ಧಗಧಗನೆ ಹೊತ್ತಿ ಉರಿದ ಘಟನೆ ನಡೆದಿದೆ. ಶನಿವಾರ ರಾತ್ರಿ ಮೈದಾನದಲ್ಲಿ ಕಾರು ನಿಲ್ಲಿಸಲಾಗಿತ್ತು. ಇಂದು ಬೆಳಗ್ಗೆ ಬಂದು ನೋಡುವಷ್ಟರಲ್ಲಿ ಕಾರು ಬೆಂಕಿಗೆ ಆಹುತಿಯಾಗಿದೆ. ಈ‌ ಕಾರು ನಗರದ ಗಿರಣಿಚಾಳ ನಿವಾಸಿ ಶ್ರೀಕಾಂತ್ ಬಾರಕೇರ್ ಎನ್ನುವವರಿಗೆ ಸೇರಿದ್ದಾಗಿದೆ. ಬೇರೆ ಕೆಲಸ ಕಾರಣದಿಂದ ಕಾರನ್ನು ಮೈದಾನದಲ್ಲಿ ‌ನಿಲ್ಲಿಸಿ ಹೋಗಿದ್ದರು. ಆದರೆ ಇಂದು ಬೆಳಗ್ಗೆ ದಿಢೀರನೇ ಕಾರು ಹೊತ್ತಿ ಉರಿದಿದ್ದು, ಯಾರೋ ಕಿಡಿಗೇಡಿಗಳು ಕೃತ್ಯ ಎಸಗಿದ್ದಾರೆ.‌ ಕಾರಿಗೆ …

Read More »