ಬೆಂಗಳೂರು:ದ್ವಿತೀಯ ಪಿಯು ಪರೀಕ್ಷೆಗಳು ಪಠ್ಯಕ್ರಮ ಇನ್ನೂ ಪೂರ್ಣಗೊಳ್ಳದ ಕಾರಣ ಮಾರ್ಚ್ನಲ್ಲಿ ನಡೆಯಲಿರುವ ಪರೀಕ್ಷೆಗಳು ಏಪ್ರಿಲ್ ಕೊನೆಯ ವಾರಕ್ಕೆ ಮುಂದೂಡುವ ಸಾಧ್ಯತೆಯಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಮಂಗಳವಾರ ತಿಳಿಸಿದರು. ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ , ಸಾಮಾನ್ಯ ಪ್ರವೇಶ ಪರೀಕ್ಷೆ ಮತ್ತು ವಿದ್ಯಾರ್ಥಿಗಳ ಇತರ ಪ್ರವೇಶ ಪರೀಕ್ಷೆಗಳ ವೇಳಾಪಟ್ಟಿಗಳ ಮೇಲೆ ಪರಿಣಾಮ ಬೀರುವುದರಿಂದ ಪರೀಕ್ಷೆಗಳನ್ನು ಏಪ್ರಿಲ್ನ ನಂತರ ವಿಳಂಬ ಮಾಡಲಾಗುವುದಿಲ್ಲ ಎಂದು ನಾಗೇಶ್ …
Read More »ಜ.11, ಸರ್ಕಾರಿ ಪಡಿತರ ವಿತರಕರ ಬೃಹತ್ ಸಮ್ಮೇಳನ
ಬೆಳಗಾವಿ ನಗರದ ಕೊಂಡುಸ್ಕರ ಭವನದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ಪಡಿತರ ವಿತರಕರ ಕ್ಷೇಮಾಭಿವೃದ್ಧಿ ಸಂಘ ಮತ್ತು ಬೆಂಗಳೂರು ನಗರ ಪಡಿತರ ವಿತರಕರ ಹಿತರಕ್ಷಣಾ ಸಂಘದ ಆಶ್ರಯದಲ್ಲಿ ರಾಜ್ಯಮಟ್ಟದ ಬೃಹತ್ ಸಮ್ಮೇಳನ ಸಮಾವೇಶ ಜ.11ರಂದು ಬೆಳಗ್ಗೆ 11ಗಂಟೆಗೆ ನಡೆಯಲಿದೆ ಎಂದು ಬೆಂಗಳೂರು ನಗರ ಸರ್ಕಾರಿ ಪಡಿತರ ವಿತರಕರ ಹಿತರಕ್ಷಣಾ ಸಂಘದ ಅಧ್ಯಕ್ಷ ಜೆ.ಬಿ. ಕುಮಾರ್ ತಿಳಿಸಿದರು. ಬೆಂಗಳೂರು ಪ್ರೆಸ್ ಕ್ಲಬ್ ಆವರಣದಲ್ಲಿ ಮಾಧ್ಯಮ ಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು ಭಾರತದ ಸಾರ್ವಜನಿಕ ವಿತರಣಾ ವ್ಯವಸ್ಥೆಯು …
Read More »ಕರ್ನಾಟಕ ಸಹಿತ ಆರು ರಾಜ್ಯಗಳಿಗೆ ಕೇಂದ್ರದಿಂದ ಹೆಚ್ಚುವರಿ ಅನುದಾನ
ಹೊಸದಿಲ್ಲಿ: ರಾಷ್ಟ್ರೀಯ ವಿಪತ್ತು ಸ್ಪಂದನಾ ನಿಧಿ (ಎನ್.ಡಿ.ಆರ್.ಎಫ್.) ಅಡಿಯಲ್ಲಿ 2021ರ ಸಾಲಿನಲ್ಲಿ ಪ್ರವಾಹ, ಭೂಕುಸಿತ ಮತ್ತು ಚಂಡಮಾರುತದಿಂದ ಬಾಧಿತವಾದ ಆರು ರಾಜ್ಯಗಳಿಗೆ ಕೇಂದ್ರ ಹೆಚ್ಚುವರಿ ನೆರವನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಅಧ್ಯಕ್ಷತೆಯಲ್ಲಿ ನಡೆದ ಉನ್ನತ ಮಟ್ಟದ ಸಭೆ (ಎಚ್.ಎಲ್.ಸಿ.) ಅನುಮೋದಿಸಿದೆ. ‘ತೌಕ್ತೆ’ ಚಂಡಮಾರುತ ಹಿನ್ನೆಲೆಯಲ್ಲಿ ಗುಜರಾತ್ಗೆ ₹ 1,133.35 ಕೋಟಿಯನ್ನು, ‘ಯಾಸ್’ ಚಂಡಮಾರುತ ಹಿನ್ನೆಲೆಯಲ್ಲಿ ಪಶ್ಚಿಮ ಬಂಗಾಳಕ್ಕೆ ₹ 586.59 ಕೋಟಿ, 2021ರ ಮುಂಗಾರು ಋತುವಿನಲ್ಲಿ ಪ್ರವಾಹ …
Read More »ಡಿಕೆಶಿಗೆ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಟಾಂಗ್ : ಭಕ್ತರು ಅಂದ್ರೆ ಬಿಜೆಪಿ, ಆರ್ಎಸ್ಎಸ್, ಡಿಕೆಶಿ ಕೂಡ ಆಗಿರಬಹುದು:
ಬೆಂಗಳೂರು: ಭಕ್ತರು ಅಂದ್ರೆ ಬಿಜೆಪಿ, ಆರ್ಎಸ್ಎಸ್ ಕಾರ್ಯಕರ್ತರು ಆಗಿರಬಹುದು, ಡಿ.ಕೆ.ಶಿವಕುಮಾರ್ ಕೂಡ ಆಗಿರಬಹುದು ಎಂದು ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಕೆಪಿಸಿಸಿ ಅಧ್ಯಕ್ಷ ಡಿಕೆಶಿಗೆ ತಿರುಗೇಟು ನೀಡಿದರು. ವಿಧಾನಸೌಧದಲ್ಲಿ ಮಾತನಾಡಿದ ಅವರು, ಬಿಜೆಪಿ, ಆರ್ಎಸ್ಎಸ್ ಕಾರ್ಯಕರ್ತರಿಗೆ ನೂರಾರು ಕೋಟಿ ಬೆಲೆ ಬಾಳುವ ದೇವಸ್ಥಾನಗಳನ್ನು ಹಸ್ತಾಂತರಿಸುವ ಅಜೆಂಡಾ ಹೊಂದಿದೆ ಎಂಬ ಡಿಕೆಶಿ ಆರೋಪಕ್ಕೆ ಪ್ರತಿಕ್ರಿಯಿಸಿ, ಭಕ್ತರು ಅಂದ್ರೆ ಎಲ್ಲರೂ ಬರುತ್ತಾರೆ. ನಾವು ಭಕ್ತರಿಗೆ ಕೊಡಬೇಕು ಅಂತ ಆಲೋಚಿಸಿದ್ದೇವೆ. ಈ ಕುರಿತಾಗಿ ಇನ್ನೂ …
Read More »ಧಾನಸೌಧದಲ್ಲಿ ಜಿಲ್ಲಾಧಿಕಾರಿಗಳ ಜೊತೆಗೆ ನಡೆಯುತ್ತಿರುವ ಸಭೆಯಲ್ಲಿ ಸಿಎಂ ಬೊಮ್ಮಾಯಿ ಜಿಲ್ಲಾಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಬೆಂಗಳೂರು: ವಿಧಾನಸೌಧದಲ್ಲಿ ಜಿಲ್ಲಾಧಿಕಾರಿಗಳ ಜೊತೆಗೆ ನಡೆಯುತ್ತಿರುವ ಸಭೆಯಲ್ಲಿ ಸಿಎಂ ಬೊಮ್ಮಾಯಿ ಜಿಲ್ಲಾಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಜಿಲ್ಲಾಧಿಕಾರಿಗಳ ಕಾರ್ಯವೈಖರಿ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಜಿಲ್ಲಾಧಿಕಾರಿಗಳ ಜೊತೆ ಕೋವಿಡ್ ಮುನ್ನೆಚ್ಚರಿಕೆ ಕ್ರಮಗಳು, ಒಮಿಕ್ರಾನ್ ತಡೆಗೆ ಪೂರ್ವಸಿದ್ಧತೆ, ರೈತ ವಿದ್ಯಾ ಸಿರಿ ಯೋಜನೆ, ವಿಶೇಷಚೇತನರ ಮಾಸಾಶನ ಯೋಜನೆ, ನೆರೆ ಪರಿಹಾರ ವಿತರಣೆ, ವಿವಿಧ ಅಭಿವೃದ್ಧಿ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸುತ್ತಿರುವ ಸಿಎಂ, ನೀವು ಜನರ ಸೇವೆ ಮಾಡುವ ಸಾರ್ವಜನಿಕ ಸೇವಾಧಿಕಾರಿಗಳು. ಬಾಸಿಸಂ (Bossism) ಬಿಟ್ಟು …
Read More »ಅರ್ಚನಾ ರೆಡ್ಡಿ ಕೊಲೆ ಹಿಂದಿದೆ ಸ್ಫೋಟಕ ಟ್ವಿಸ್ಟ್ ಸ್ಟೋರಿ… ಹೆತ್ತ ತಾಯಿಯ ಮರ್ಡರ್ಗೆ ಸ್ಕೆಚ್ ಹಾಕಿದ್ದೇ ಮಗಳು…
ಬೆಂಗಳೂರು: ಇತ್ತೀಚೆಗೆ ಹೊಸೂರು ರೋಡ್ ನ ಹೊಸ ರೋಡ್ ಜಂಕ್ಷನ್ ನಲ್ಲಿ ಅರ್ಚನಾ ರೆಡ್ಡಿ ಎಂಬ ಶ್ರೀಮಂತೆಯನ್ನು ಭೀಕರವಾಗಿ ಕೊಲೆ ಮಾಡಲಾಗಿತ್ತು. ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಸ್ಟೇಷನ್ ವ್ಯಾಪ್ತಿಯಲ್ಲಿ ನಡೆದಿದ್ದ ಈ ಮರ್ಡರ್ ಕೇಸ್ ನಲ್ಲಿ ಪೊಲೀಸರು ಒಟ್ಟು 7 ಜನರನ್ನು ಅರೆಸ್ಟ್ ಮಾಡಿದ್ದಾರೆ. ಆರೋಪಿಗಳ ವಿಚಾರಣೆ ವೇಳೆ ಹಲವು ಸ್ಫೋಟಕ ಮಾಹಿತಿಗಳು ಹೊರಬಿದ್ದಿವೆ. ಕೊಲೆಯಾದ ಅರ್ಚನಾ ರೆಡ್ಡಿಗೆ ಕೊಲೆಗೆ ಕಾರಣವಾಗಿದ್ದೇ ಆಕೆಯ ಬಳಿ ಇದ್ದ ಕೋಟ್ಯಂತರ ರೂ. ಆಸ್ತಿ. ಆಕೆ …
Read More »ಡಬಲ್ ಡೋಸ್ ವ್ಯಾಕ್ಸಿನ್ ಆಗಿಲ್ಲ ಅಂದರೆ ಮನೆಯಿಂದ ಹೊರಗೆ ಬರುವ ಹಾಗಿಲ್ಲ ,
ಬೆಂಗಳೂರು : 2022ರಲ್ಲಿ ನಿಮ್ಮ ಫ್ರಿಡಂಗೆ ಬ್ರೇಕ್ ಫಿಕ್ಸ್ ಆಗಲಿದ್ದು, ಇನ್ಮೇಲೆ ‘ಸರ್ಟಿಫೈಡ್’ ಆಗಿದ್ದರೆ ಮಾತ್ರ ನಿಮಗೆ ಲೈಫು. ಡಬಲ್ ಡೋಸ್ ಆಗಿಲ್ಲ ಅಂದರೆ ಸಾರ್ವಜನಿಕ ಸಾರಿಗೆಗೆ ಪ್ರವೇಶ ಇರೋದಿಲ್ಲ. ಈ ಬಗ್ಗೆ ಬಿಬಿಎಂಪಿ ನಿರ್ಧಾರ ಮಾಡಿದೆ. ಡಬಲ್ ಡೋಸ್ ವ್ಯಾಕ್ಸಿನ್ ಆಗಿಲ್ಲ ಅಂದರೆ ಮನೆಯಿಂದ ಹೊರಗೆ ಬರುವ ಹಾಗಿಲ್ಲ , ಬಸ್, ಆಟೋ, ಕ್ಯಾಬ್ ,ಮೆಟ್ರೋ ಹತ್ತಲೂ ಡಬಲ್ ಡೋಸ್ ಕಡ್ಡಾಯಗೊಳಿಸಲು ಬಿಬಿಎಂಪಿ ಚಿಂತನೆ ನಡೆಸುತ್ತಿದ್ದು, ಈ ಬಗ್ಗೆ ಪ್ರಸ್ತಾವನೆ …
Read More »ಜಾರಕಿಹೊಳಿ ಸಹೋದರರು ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿಯೂ ಬಿಜೆಪಿಗೆ ಶಾಕ್ ನೀಡಿದ್ದಾರೆ
ಬೆಳಗಾವಿ: ವಿಧಾನಪರಿಷತ್ ಚುನಾವಣೆಯಲ್ಲಿ ಸಹೋದರ ಲಖನ್ ಜಾರಕಿಹೊಳಿ ಅವರನ್ನು ಪಕ್ಷೇತರರಾಗಿ ಕಣಕ್ಕಿಳಿಸಿ ಗೆಲ್ಲಿಸಿಕೊಳ್ಳುವ ಮೂಲಕ ಬಿಜೆಪಿಗೆ ಠಕ್ಕರ್ ಕೊಟ್ಟಿದ್ದ ಜಾರಕಿಹೊಳಿ ಸಹೋದರರು ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿಯೂ ಬಿಜೆಪಿಗೆ ಶಾಕ್ ನೀಡಿದ್ದಾರೆ ಎನ್ನಲಾಗ್ತಿದೆ. ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಪರಾಭವಗೊಂಡಿದ್ದರು. ಈಗ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿಯೂ ಕೆಎಂಎಫ್ ಅಧ್ಯಕ್ಷ, ಬಿಜೆಪಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಬೆಂಬಲಿಗ ಪಕ್ಷೇತರ ಅಭ್ಯರ್ಥಿಗಳು ಭರ್ಜರಿ ಜಯಗಳಿಸಿದ್ದಾರೆ. ಈ ಮೂಲಕ ಬಿಜೆಪಿಗೆ ಠಕ್ಕರ್ ಕೊಟ್ಟಿದ್ದಾರೆ. ಬೆಳಗಾವಿ …
Read More »ಗುರುತು ಕೂಡ ಸಿಗದಂತೆ ಪತ್ತೆಯಾಗ್ತಿವೆ ಮೃತದೇಹಗಳು,ಜನ ರಾತ್ರಿ ವೇಳೆ ಓಡಾಡೋಕೆ ಭಯಪಡುತ್ತಿದ್ದಾರೆ.
ಹಾಸನ: ಅಲ್ಲಿನ ಜನ ರಾತ್ರಿ ವೇಳೆ ಓಡಾಡೋಕೆ ಭಯಪಡುತ್ತಿದ್ದಾರೆ. ಒಂಟಿಯಾಗಿ ಹೊರಗೆ ಕಾಲಿಡಲು ಹಿಂದೆ ಮುಂದೆ ನೋಡುತ್ತಿದ್ದಾರೆ. ಯಾವಾಗ ಏನ್ ಆಗುತ್ತೋ ಅನ್ನೋ ಆತಂಕದಲ್ಲಿದ್ದಾರೆ. ಯಾಕಂದ್ರೆ ಗುರುತೇ ಸಿಗದ ಸ್ಥಿತಿಯಲ್ಲಿ ಮೃತದೇಹ ಪತ್ತೆ ಆಗುತ್ತಿದೆ. ಅಪರಿಚಿತ ಶವ ಪತ್ತೆ.. ಜನರಿಗೆ ಆತಂಕ ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಮಾರನಹಳ್ಳಿ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಳೆದ ಮೂರು ದಿನಗಳ ಹಿಂದೆ ರಸ್ತೆ ಬದಿಯಲ್ಲಿ ಮಹಿಳೆಯೊಬ್ಬರು ಶವವಾಗಿ ಪತ್ತೆ ಆಗಿದ್ರು. ಮಹಿಳೆಯ ಬಲಗೈ …
Read More »ಮುಂಬೈ ಮೇಲೆ ಖಲಿಸ್ತಾನಿ ಉಗ್ರರ ಕೆಂಗಣ್ಣು: ವಾಣಿಜ್ಯ ನಗರಿಯಲ್ಲಿ ತೀವ್ರ ಕಟ್ಟೆಚ್ಚರ
ಮುಂಬೈ: ದೇಶದ ವಾಣಿಜ್ಯ ನಗರಿ ಮುಂಬೈ ಮೇಲೆ ಖಲಿಸ್ತಾನಿ ಉಗ್ರರು ಕೆಂಗಣ್ಣು ಬೀರಿದ್ದು, ಈ ಹಿನ್ನೆಲೆಯಲ್ಲಿ ನಗರದಾದ್ಯಂತ ಬಿಗಿ ಭದ್ರತೆಯನ್ನು ನಿಯೋಜಿಸಲಾಗಿದೆ ಎಂದು ತಿಳಿದುಬಂದಿದೆ. ಮುಂಬೈ ಮೇಲೆ ಖಲಿಸ್ತಾನಿ ಉಗ್ರರು ದಾಳಿ ಮಾಡುವ ಸಾಧ್ಯತೆಗಳಿವೆ ಎಂದು ಗುಪ್ತಚರ ಇಲಾಖೆ ಮಾಹಿತಿ ನೀಡಿರುವ ಹಿನ್ನೆಲೆಯಲ್ಲಿ ನಗರದಲ್ಲಿ ಬಿಗಿ ಭದ್ರತೆಯನ್ನು ನಿಯೋಜಿಸಲಾಗಿದೆ ಎಂದು ತಿಳಿದುಬಂದಿದೆ. ಹೊಸ ವರ್ಸದ ಸಂಭ್ರಮದಲ್ಲಿರುವ ವೇಳೆ ಖಲಿಸ್ತಾನಿ ಭಯೋತ್ಪಾದಕರು ದಾಳಿ ನಡೆಸುವ ಯೋಜನೆ ರೂಪಿಸಿದ್ದಾರೆ ಎಂದು ಸ್ವತಃ …
Read More »
Laxmi News 24×7