ಮೈಸೂರು: ಕೆಲವು ದಿನಗಳಿಂದ ಸತತವಾಗಿ ಸುರಿದ ಮಳೆಯಿಂದಾಗಿ ವಿಶ್ವವಿಖ್ಯಾತ ಮೈಸೂರಿನ ಅಂಬಾವಿಲಾಸ ಅರಮನೆ ಮೇಲ್ಛಾವಣಿ ಸೋರುತ್ತಿದ್ದು, ಗೋಡೆಗಳು ತೇವಗೊಂಡಿವೆ. ರಾಜವಂಶಸ್ಥರು ವಾಸಿಸುತ್ತಿರುವ ಅರಮನೆಯ ಭಾಗದ ಮೇಲ್ಛಾವಣಿ ಯಿಂದ ನೀರು ಹೆಚ್ಚಿನ ಪ್ರಮಾಣದಲ್ಲಿ ಸೋರುತ್ತಿದ್ದು, ಛಾವಣಿಯ ಪ್ಲಾಸ್ಟರಿಂಗ್ ಉದುರಿ ಬಿದ್ದಿದೆ. ಆಗ ಯಾರೂ ಇಲ್ಲದಿದ್ದ ಕಾರಣ ಅಪಾಯ ಸಂಭವಿಸಿಲ್ಲ. ನೆಲಕ್ಕೆ ಹಾಸಲಾಗಿರುವ ಟೈಲ್ಸ್ಗಳೂ ಕಿತ್ತು ಬಂದಿವೆ ಎಂದು ರಾಜವಂಶಸ್ಥೆ ಪ್ರಮೋದಾ ದೇವಿ ಹೇಳಿದ್ದಾರೆ. ಅರಮನೆಯ ಕೆಲವು ಭಾಗಗಳು ಈ ಹಿಂದೆಯೇ ದುರಸ್ತಿಯಾಗಿವೆ. …
Read More »ದೇವರಿಗೇ ಧನಸಹಾಯ ಮಾಡಿದ ಅಜ್ಜಿ; ಆಂಜನೇಯನ ಮುಖವಾಡಕ್ಕಾಗಿ ಭಿಕ್ಷೆ ಬೇಡಿ ಹಣ ಕೊಟ್ಟರು..
ಚಿಕ್ಕಮಗಳೂರು: ಕೆಲವು ತಿಂಗಳ ಹಿಂದೆ ಉಡುಪಿ ಜಿಲ್ಲೆಯಲ್ಲಿ ವೃದ್ಧೆಯೊಬ್ಬರು ಭಿಕ್ಷೆ ಬೇಡಿ ಉಳಿಸಿದ್ದ ಒಂದು ಲಕ್ಷ ರೂಪಾಯಿಯನ್ನು ದೇವಸ್ಥಾನದ ಅನ್ನದಾನಕ್ಕಾಗಿ ಕೊಟ್ಟು ರಾಜ್ಯದ ಗಮನ ಸೆಳೆದಿದ್ದರು ಅದೇ ರೀತಿ ಮತ್ತೊಬ್ಬ ವೃದ್ಧೆ ದೇವರಿಗೇ ಧನಸಹಾಯ ಮಾಡಿದ್ದಾರೆ. ಅಂದರೆ ಆಂಜನೇಯ ಸ್ವಾಮಿಯ ಬೆಳ್ಳಿ ಮುಖವಾಡಕ್ಕಾಗಿ ಭಿಕ್ಷೆ ಬೇಡಿ ಹಣ ಸಂಗ್ರಹಿಸಿ ಕೊಟ್ಟಿದ್ದಾರೆ. ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಕೋಟೆ ಪಾತಾಳ ಆಂಜನೇಯ ದೇವಸ್ಥಾನಕ್ಕೆ ಈ ಅಜ್ಜಿ ಹಣ ನೀಡಿದ್ದಾರೆ. ಕೆಂಪಜ್ಜಿ ಎಂಬ …
Read More »ಇಂದಿನಿಂದಲೇ ಮಳೆಹಾನಿ ಸಂತ್ರಸ್ಥರ ಖಾತೆಗೆ RTGS ಮೂಲಕ ಪರಿಹಾರ ಜಮಾ: ಜಿಲ್ಲಾಧಿಕಾರಿ ಆದೇಶ
ಧಾರವಾಡ: ಕಳೆದ ಜುಲೈ, ಆಗಸ್ಟ್, ಸೆಪ್ಟೆಂಬರ್ ಹಾಗೂ ಅಕ್ಟೋಬರ್ ತಿಂಗಳುಗಳಲ್ಲಿ ಮಳೆಯಿಂದಾಗಿ ಹಾನಿಗೊಳಗಾದ ಮನೆಗಳಿಗೆ ಹಾಗೂ ನವೆಂಬರ್ ತಿಂಗಳಲ್ಲಿ ಅಕಾಲಿಕ ಮಳೆಯಿಂದ ಮನೆ ಹಾನಿಯಾಗಿರುವ ಫಲಾನುಭವಿಗಳಿಗೆ ತಕ್ಷಣಕ್ಕೆ ಪರಿಹಾರ ವಿತರಿಸಲು ಜಿಲ್ಲಾಡಳಿತಕ್ಕೆ ಮುಖ್ಯಮಂತ್ರಿಗಳು 14 ಕೋಟಿ, 74 ಲಕ್ಷ ರೂ.ಗಳನ್ನು ಮಂಜೂರು ಮಾಡಿದ್ದಾರೆ. ನ.24 ರಿಂದ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಪರಿಹಾರ ಮೊತ್ತ ಜಮೆ ಮಾಡಲು ಕ್ರಮವಹಿಸಬೇಕೆಂದು ಎಲ್ಲ ತಹಶಿಲ್ದಾರರಿಗೆ ಜಿಲ್ಲಾಧಿಕಾರಿ ನಿತೇಶ ಪಾಟೀಲ ಆದೇಶಿಸಿದ್ದಾರೆ. ಅವರು ನಿನ್ನೆ ಸಂಜೆ …
Read More »ಲಕ್ಷ್ಮಿ ಹೆಬ್ಬಾಳಕರ ಹೆಸರು ಹೇಳುತ್ತಿದ್ದಂತೆಯೇ ‘ಥೂ… ಥೂ…’ ಎಂದು ಉಗಿದ ಎಂದು ಪ್ರತಿಕ್ರಿಯಿಸಿದರು.ರಮೇಶ!
ಬೆಳಗಾವಿ: ಗೋಕಾಕದ ಬಿಜೆಪಿ ಶಾಸಕ ರಮೇಶ ಜಾರಕಿಹೊಳಿ ಅವರು, ಕಾಂಗ್ರೆಸ್ ಶಾಸಕಿ ಲಕ್ಷ್ಮಿ ಹೆಬ್ಬಾಳಕರ ಹೆಸರೇಳುತ್ತಿದ್ದಂತೆಯೇ ‘ಥೂ… ಥೂ…’ ಎಂದು ಪ್ರತಿಕ್ರಿಯಿಸಿದರು. ಬಿಜೆಪಿ ಅಭ್ಯರ್ಥಿ ಮಹಾಂತೇಶ ಕವಟಗಿಮಠ ನಾಮಪತ್ರ ಸಲ್ಲಿಕೆಗೆ ಬಂದಿದ್ದ ವೇಳೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ‘ಈ ಚುನಾವಣೆ ರಮೇಶ್ ಜಾರಕಿಹೊಳಿ ವರ್ಸಸ್ ಲಕ್ಷ್ಮಿ ಹೆಬ್ಬಾಳ್ಕರ್ ನಡುವಿನ ಹಣಾಹಣಿಯಾ?’ಎನ್ನುವ ಪ್ರಶ್ನೆಗೆ ಸಿಡಿಮಿಡಿಯಾಗಿ ‘ಥೂ ಥೂ’ ಎಂದು ಹೇಳಿ ಹೊರಟರು. ಇದಕ್ಕೂ ಮುನ್ನ, ‘ಈ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ …
Read More »ಈರುಳ್ಳಿ ಬೆಲೆ 100 ರೂ. ತಲುಪುವ ಸಾಧ್ಯತೆ
ದಾವಣಗೆರೆ : ಒಂದೆಡೆ ಮುಂಗಾರು ಹಂಗಾಮಿನ ಬೆಳೆ ಕಟಾವು ಮುಗಿದಿದೆ. ಇನ್ನೊಂದೆಡೆ ಹಿಂಗಾರು ಹಂಗಾಮಿನಲ್ಲಿ ಬಿತ್ತಿದ ಈರುಳ್ಳಿ ಅತಿಯಾದ ಮಳೆಯಿಂದ ಕೊಳೆಯುತ್ತಿದೆ. ಇಲಾಖೆ ಮಾಹಿತಿಯಂತೆ ರಾಜ್ಯದಲ್ಲಿ ಅಕಾಲಿಕ ಮಳೆಯಿಂದಾಗಿ 34,000 ಹೆಕ್ಟೇರ್ ಈರುಳ್ಳಿ ಬೆಳೆ ಹಾನಿಗೀಡಾಗಿದೆ. ಹೀಗಾಗಿ, ಬೆಳೆಗಾರರು ತೀವ್ರ ನಷ್ಟ ಅನುಭವಿಸುವ ಜತೆಗೆ ಈರುಳ್ಳಿ ಬೆಲೆ ಗಗನಕ್ಕೇರಲಿದ್ದು, ರೈತ-ಗ್ರಾಹಕ ಇಬ್ಬರ ಕಣ್ಣುಗಳಲ್ಲಿ ನೀರು ತರಿಸಲಿದೆ. ದಾವಣಗೆರೆ, ಹುಬ್ಬಳ್ಳಿ, ಬೆಳಗಾವಿ ಸೇರಿ ರಾಜ್ಯದ ಪ್ರಮುಖ ಈರುಳ್ಳಿ ಮಾರುಕಟ್ಟೆಗಳಲ್ಲಿ ಅವಕ ಕುಸಿದಿದೆ. ರಾಜ್ಯದ …
Read More »ನಾಮಪತ್ರ ವಾಪಸ್ ತೆಗೆದುಕೊಳ್ಳುವುದಿಲ್ಲ. ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಸುತ್ತಮುತ್ತ ಇರುವವರು ಊಹಾಪೋಹಗಳನ್ನು ಹಬ್ಬಿಸುತ್ತಿರುತ್ತಾರೆ’
ಬೆಳಗಾವಿ: ‘ನಾಮಪತ್ರ ವಾಪಸ್ ತೆಗೆದುಕೊಳ್ಳುವುದಿಲ್ಲ. ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಸುತ್ತಮುತ್ತ ಇರುವವರು ಊಹಾಪೋಹಗಳನ್ನು ಹಬ್ಬಿಸುತ್ತಿರುತ್ತಾರೆ’ ಎಂದು ವಿಧಾನಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಗೋಕಾಕದ ಉದ್ಯಮಿ ಲಖನ್ ಜಾರಕಿಹೊಳಿ ಪ್ರತಿಕ್ರಿಯಿಸಿದರು. ಇಲ್ಲಿ ನಾಮಪತ್ರ ಸಲ್ಲಿಕೆ ನಂತರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಬಿಜೆಪಿ ಟಿಕೆಟ್ ವಿಚಾರದಲ್ಲಿ ಸಹೋದರರು ಅವರವರ ಅನಿಸಿಕೆ ಹೇಳಿದ್ದಾರೆ. ನಮ್ಮ ಬೆಂಬಲಿಗರು-ಕಾರ್ಯಕರ್ತರು ಹೇಳಿದ್ದಕ್ಕೆ ಸ್ಪರ್ಧಿಸಿದ್ದೇನೆ’ ಎಂದು ತಿಳಿಸಿದರು. ‘ಪ್ರತಿಸ್ಪರ್ಧಿ ಯಾರೂ ಇಲ್ಲ. ಆ ಬಗ್ಗೆ ವಿಚಾರ ಮಾಡುವುದಿಲ್ಲ. …
Read More »ಮೇಲ್ಮನೆ ಸ್ಪರ್ಧಿ ಕೆಜಿಎಫ್ ಬಾಬುಗೆ ಇಬ್ಬರು ಪತ್ನಿ, 3 ಕ್ರಿಮಿನಲ್ ಕೇಸ್: 2000 ಕೋಟಿ ರೂ. ಆಸ್ತಿ!
ಡಿಸೆಂಬರ್ 10ರಂದು ನಡೆಯಲಿರುವ ವಿಧಾನಪರಿಷತ್ ಚುನಾವಣೆಗೆ ಕಾಂಗ್ರೆಸ್ ನಿಂದ ಸ್ಪರ್ಧಿಸಿರುವ ಕೆಜಿಎಫ್ ಬಾಬು ಚುನಾವಣಾ ಆಯೋಗಕ್ಕೆ ನೀಡಿದ ಆದಾಯ ತೆರಿಗೆ ವಿವರದಲ್ಲಿ ತಮಗೆ ಇಬ್ಬರು ಪತ್ನಿಯರು ಇದ್ದು, 3 ಕ್ರಿಮಿನಲ್ ಕೇಸ್ ಗಳು ಇವೆ. ರಾಜ್ಯ ಚುನಾವಣಾ ಆಯೋಗಕ್ಕೆ ಮಂಗಳವಾರ ನೀಡಿದ ವರದಿಯಲ್ಲಿ ತಮ್ಮ ಒಟ್ಟು ಆಸ್ತಿ 2 ಸಾವಿರ ಕೋಟಿ ರೂ. ಎಂದು ಘೋಷಿಸಿಕೊಂಡಿದ್ದಾರೆ. ಇಬ್ಬರು ಪತ್ನಿಯರು ಹಾಗೂ ಒಬ್ಬ ಪುತ್ರಿ ಹಾಗೂ ನಾಲ್ವರು ಪುತ್ರರು ಸೇರಿ 5 …
Read More »ಬೆಂಗಳೂರು, ನವೆಂಬರ್ 24: ರಾಜ್ಯಾದ್ಯಂತ ಕಳೆದ ಒಂದೆರಡು ದಿನಗಳಿಂದ ಮಳೆಯ ಪ್ರಮಾಣ ತಗ್ಗಿದೆ. ನವೆಂಬರ್ 28ರವರೆಗೂ ಕೆಲವೆಡೆ ಸಾಧಾರಣ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿಯಲ್ಲಿ ಮಳೆಯಾಗಲಿದೆ.
ಬೆಂಗಳೂರು, ನವೆಂಬರ್ 24: ರಾಜ್ಯಾದ್ಯಂತ ಕಳೆದ ಒಂದೆರಡು ದಿನಗಳಿಂದ ಮಳೆಯ ಪ್ರಮಾಣ ತಗ್ಗಿದೆ. ನವೆಂಬರ್ 28ರವರೆಗೂ ಕೆಲವೆಡೆ ಸಾಧಾರಣ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿಯಲ್ಲಿ ಮಳೆಯಾಗಲಿದೆ.
Read More »ರೈತ ಕಾಯ್ದೆ ರದ್ದು: ರಾಜಕೀಯ ಲೆಕ್ಕಾಚಾರ
ಸುಧಾರಣೆಗಳು ಮತ್ತು ನಮ್ಮ ದೇಶದ ವ್ಯವಸ್ಥೆಯ ನಡುವೆ ಒಂದು ರೀತಿಯ ಎಣ್ಣೆ ಸೀಗೆಕಾಯಿ ನಡುವಿನ ಸಂಬಂಧ ಇದ್ದ ಹಾಗೆ. ಪ್ರಧಾನಿ ನರೇಂದ್ರ ಮೋದಿಯವರು ಶುಕ್ರವಾರ (ನ.19) ಘೋಷಣೆ ಮಾಡಿದಂತೆ 32 ರೈತ ಒಕ್ಕೂಟಗಳು ಮತ್ತು ಕಾಂಗ್ರೆಸ್ ನೇತೃತ್ವದ ವಿಪಕ್ಷಗಳು ಬಣ್ಣಿಸುತ್ತಿದ್ದ “ರೈತ ವಿರೋಧಿ’ಯಾಗಿದ್ದ ಕಾಯ್ದೆಗಳನ್ನು ರದ್ದುಗೊಳಿಸಿದ್ದನ್ನು ಸ್ವಾಗತಿಸಿದ್ದಾರೆ. ಎಂಬಲ್ಲಿಗೆ ಕೃಷಿಯನ್ನೇ ನಂಬಿ ಕೊಂಡು ಬದುಕು ಸಾಗಿಸುತ್ತಿರುವ ದೇಶದ ಅಷ್ಟೂ ಮಂದಿ ರೈತರು ಯಾವತ್ತೂ ಸಂಕಷ್ಟಕ್ಕೇ ಮುಖ ಮಾಡಿಯೇ ಇರಬೇಕು ಎನ್ನುವುದು …
Read More »ಇನ್ಸ್ಟಾಗ್ರಾಂ ರೀಲ್ಸ್ ಚಟಕ್ಕೆ ಬಿದ್ದು ಪ್ರಾಣವನ್ನೇ ಕಳೆದುಕೊಂಡ ಯುವಕ..! ಸ್ನೇಹಿತನ ಮೊಬೈಲ್ನಲ್ಲಿ ರೆಕಾರ್ಡ್ ಆಯ್ತು ಭಯಾನಕ ದೃಶ್ಯ
ಸೋಶಿಯಲ್ ಮೀಡಿಯಾದಲ್ಲಿ ವಿಡಿಯೋಗಳನ್ನು ಹರಿಬಿಡುವ ಹುಚ್ಚು ಹೊಂದಿದ್ದ ಯುವಕ ಇದಕ್ಕಾಗಿ ಜೀವವನ್ನೇ ತೆತ್ತ ದಾರುಣ ಘಟನೆಯು ಮಧ್ಯ ಪ್ರದೇಶ ಹೋಶಂಗಾಬಾದ್ನಲ್ಲಿ ನಡೆದಿದೆ.ಸಂಜು ಚೌರಿ ಎಂಬಾತ ತನ್ನ ಗೆಳೆಯನ ಜೊತೆಯಲ್ಲಿ ವಿಡಿಯೋ ರೆಕಾರ್ಡ್ ಮಾಡಲೆಂದು ರೈಲ್ವೆ ಹಳಿ ಬಳಿ ತೆರಳಿದ್ದ. ರೈಲ್ವೆ ಬರುತ್ತಿದ್ದ ವೇಳೆ ತಾನು ನಡೆದುಕೊಂಡು ಬರುತ್ತಿರುವ ಹಾಗೆ ವಿಡಿಯೋ ಚಿತ್ರೀಕರಿಸಿ ಅದನ್ನು ಸೋಶಿಯಲ್ ಮೀಡಿಯಾದಲ್ಲಿ ಹರಿಬಿಡುವುದು ಆತನ ಉದ್ದೇಶವಾಗಿತ್ತು. ಆದರೆ ವಿಧಿಯ ಆಟ ಬೇರೆಯದ್ದೇ ಇತ್ತು. ರೈಲು ಹಳಿಯ …
Read More »
Laxmi News 24×7