ದಾವಣಗೆರೆ: ಜಮೀನು ವಿವಾದಕ್ಕೆ ಎರಡು ಗ್ರಾಮಗಳ ನಡುವೆ ಮಾರಾಮಾರಿ ಸಂಭವಿಸಿದೆ. ದೊಣ್ಣೆ, ಕುಡುಗೋಲುಗಳಿಂದ ಪರಸ್ಪರ ಹಲ್ಲೆ ಮಾಡಿಕೊಂಡು ಬಡಿದಾಡಿಕೊಂಡಿದ್ದಾರೆ. ನ್ಯಾಮತಿ ತಾಲ್ಲೂಕಿನ ಕಂಚಿಕೊಪ್ಪ, ಹಾಗೂ ಹೊನ್ನಾಳಿಯ ತುಗ್ಗಲಹಳ್ಳಿ ಗ್ರಾಮಸ್ಥರ ನಡುವೆ ಮಾರಾಮಾರಿ ನಡೆದಿದೆ. ಕಂಚಿಕೊಪ್ಪ ಗ್ರಾಮದ 30 ದಲಿತ ಕುಟುಂಬಗಳು ತುಗ್ಗಲಹಳ್ಳಿ ಗ್ರಾಮದ ಬಳಿ ಇರುವ ಸರ್ವೇ ನಂಬರ್ 29- 30 ರಲ್ಲಿ 40 ಎಕರೆ ಜಮೀನನಲ್ಲಿ ಉಳುಮೆ ಮಾಡುತ್ತಿದ್ದರು. ಇದು ತುಗ್ಗಲಹಳ್ಳಿ ಗ್ರಾಮದ ಗೋಮಾಳ ಜಾಗ ಅಂತ ಬೆಳೆ ನಾಶ …
Read More »ಶಾಲಾ ಮಕ್ಕಳಿಗೆ ಮತ್ತೊಂದು ಗುಡ್ ನ್ಯೂಸ್: ಬಿಸಿಯೂಟಕ್ಕೆ ಪೌಷ್ಠಿಕಾಂಶವಿರುವ ಸಾರವರ್ಧಿತ ಅಕ್ಕಿ
ರಾಜ್ಯಾದ್ಯಂತ 1 ರಿಂದ 10 ನೇ ತರಗತಿ ಆರಂಭವಾಗಿದ್ದು, ಶಾಲಾ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ ಯೋಜನೆ ಕೂಡ ಆರಂಭಿಸಲಾಗಿದೆ. ಮಕ್ಕಳಿಗೆ ಅಗತ್ಯವಾದ ಪೌಷ್ಠಿಕ ಅಂಶ ಒಳಗೊಂಡ ಸಾರವರ್ಧಿತ ಅಕ್ಕಿಯನ್ನು ಸಾಮಾನ್ಯ ಅಕ್ಕಿಯೊಂದಿಗೆ ಮಿಶ್ರಣ ಮಾಡಿ ಬಿಸಿಯೂಟದಲ್ಲಿ ನೀಡಲಾಗುತ್ತದೆ. ರಾಜ್ಯಾದ್ಯಂತ ಶಾಲಾ ಮಕ್ಕಳಿಗೆ ಬಿಸಿಯೂಟ ನೀಡುತ್ತಿದ್ದು, ಇದರಲ್ಲಿ ಸಾರವರ್ಧಿತ ಅಕ್ಕಿ ಬಳಕೆ ಮಾಡಲಾಗುವುದು. ಒಂದರಿಂದ ಎಂಟನೇ ತರಗತಿ ಮಕ್ಕಳ ಬಿಸಿಯೂಟಕ್ಕೆ ಕೇಂದ್ರ ಸರ್ಕಾರ ಅಕ್ಕಿ ನೀಡುತ್ತಿದ್ದು, ಪ್ರತಿ ಕ್ವಿಂಟಲ್ ಗೆ 10 ಕೆಜಿಯಂತೆ …
Read More »ಶುಭ ಸುದ್ದಿ: ಪಿಯು ಕಾಲೇಜ್ ಗಳಲ್ಲಿ 3552 ಅತಿಥಿ ಉಪನ್ಯಾಸಕರ ನೇಮಕಾತಿಗೆ ಅನುಮೋದನೆ
ಬೆಂಗಳೂರು: ರಾಜ್ಯದ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಈ ಶೈಕ್ಷಣಿಕ ಸಾಲಿನಲ್ಲಿ 3552 ಅತಿಥಿ ಉಪನ್ಯಾಸಕರ ನೇಮಕಾತಿ ಮಾಡಿಕೊಳ್ಳಲು ರಾಜ್ಯ ಸರ್ಕಾರ ಅನುಮತಿ ನೀಡಿದೆ. 2020 -21 ನೇ ಸಾಲಿನಲ್ಲಿ ಸರ್ಕಾರಿ ಪದವಿಪೂರ್ವ ಕಾಲೇಜುಗಳಲ್ಲಿ ನಾನಾ ಕಾರಣಗಳಿಂದ ಖಾಲಿಯಾದ 2832 ಉಪನ್ಯಾಸಕರಿಗೆ 1835 ಅತಿಥಿ ಉಪನ್ಯಾಸಕರನ್ನು 9 ಸಾವಿರ ರೂಪಾಯಿ ಗೌರವಧನದ ಆಧಾರದಲ್ಲಿ ಫೆಬ್ರವರಿಯಿಂದ ನೇಮಕ ಮಾಡಿಕೊಳ್ಳಲಾಗಿತ್ತು. ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಬಹುತೇಕ ಎಲ್ಲ ಮಕ್ಕಳು ಉತ್ತೀರ್ಣರಾಗಿ ಪಿಯು ಕಾಲೇಜ್ ಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ …
Read More »ರಾಜಕೀಯ ಒತ್ತಡ; ಅಧಿಕಾರ ವಹಿಸಿಕೊಳ್ಳದ ಮಹಿಳಾ ಪೊಲೀಸ್ ವರಿಷ್ಠಾಧಿಕಾರಿ; ರಾಜ್ಯಪಾಲರ ಅಂಗಳ ತಲುಪಿದ ಮಂಡ್ಯ SP ನೇಮಕ ವಿವಾದ
ಮಂಡ್ಯ: ಮಂಡ್ಯ ಮಹಿಳಾ ಪೊಲೀಸ್ ವರಿಷ್ಠಾಧಿಕಾರಿ ನೇಮಕಾತಿ ವಿವಾದ ಒಂದು ವಾರ ಕಳೆದರೂ ಇನ್ನೂ ಬಗೆದಿಲ್ಲ. ರಾಜಕೀಯ ಒತ್ತಡಕ್ಕೆ ಮಣಿದು ನೂತನ ಎಸ್ ಪಿ ಅಧಿಕಾರ ವಹಿಸಿಕೊಳ್ಳದಂತೆ ಪೊಲೀಸ್ ಇಲಾಖೆ ಡಿಪಿಎಆರ್ ಅಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ಇದೀಗ ನೇಮಕಾತಿ ವಿವಾದ ರಾಜ್ಯಪಾಲರ ಅಂಗಳ ತಲುಪಿದೆ. ಮಂಡ್ಯ ಜಿಲ್ಲೆ ಎಸ್ ಪಿ ಯಾಗಿ ಅಕ್ಟೋಬರ್ 20ರಂದು ಸುಮನ್ ಡಿ ಪನ್ನೇಕರ್ ಅವರನ್ನು ನೇಮಕ ಮಾಡಲಾಗಿತ್ತು. ನಿರ್ಗಮಿತ ಎಸ್ ಪಿ ಡಾ.ಅಶ್ವಿನಿ ಎ ಎಸ್ ಪಿಗೆ …
Read More »ಡಿ.ಕೆ.ಶಿವಕುಮಾರ್ ಆಪ್ತನ ಮನೆ ಮೇಲೆ ಐಟಿ ದಿಢೀರ್ ದಾಳಿ
ಧಾರವಾಡ: ನಗರದ ಖ್ಯಾತ ಉದ್ಯಮಿ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆಪ್ತರಾಗಿರುವ ಯು. ಬಿ. ಶೆಟ್ಟಿ ಮನೆ ಮೇಲೆ ಆದಾಯ ತೆರಿಗೆ (ಐಟಿ) ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದಾರೆ. ಧಾರವಾಡದ ದಾಸನಕೊಪ್ಪದ ಮನೆ ಮೇಲೆ ಗೋವಾದಿಂದ ಬಂದ 5 ಜನರ ಐಟಿ ತಂಡ ದಾಳಿ ನಡೆಸಿ ತಪಾಸಣೆಯಲ್ಲಿ ತೊಡಗಿದ್ದಾರೆ. ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬೈಂದೂರ ತಾಲೂಕಿನ ಉಪ್ಪುಂದ ಮೂಲದ ಯು. ಬಿ. ಶೆಟ್ಟಿ ಕ್ಲಾಸ್ ಒನ್ ಕಾಂಟ್ರ್ಯಾಕ್ಟರ್ …
Read More »ತೀವ್ರ ಕಾಲು ನೋವಿನಿಂದ ಬಳಲುತ್ತಿದ್ದ ಹೊನ್ನಾಳಿ ಬಿಜೆಪಿ ಶಾಸಕ ಎಂ.ಪಿ ರೇಣುಕಾಚಾರ್ಯ ಅವರು ಚಿಕಿತ್ಸೆಗಾಗಿ ಮುಂಬೈ ಆಸ್ಪತ್ರೆಗೆ
ತೀವ್ರ ಕಾಲು ನೋವಿನಿಂದ ಬಳಲುತ್ತಿದ್ದ ಹೊನ್ನಾಳಿ ಬಿಜೆಪಿ ಶಾಸಕ ಎಂ.ಪಿ ರೇಣುಕಾಚಾರ್ಯ ಅವರು ಚಿಕಿತ್ಸೆಗಾಗಿ ಮುಂಬೈ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿ ಖುದ್ದು ರೇಣುಕಾಚಾರ್ಯ ಅವರೇ ಸ್ಪಷ್ಟಪಡಿಸಿದ್ದಾರೆ. ಆತ್ಮೀಯ ಬಂಧುಗಳೇ, ಕಳೆದ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಸಂಭವಿಸಿದ್ದ ಅಪಘಾತದಿಂದಾಗಿ ಕಳೆದ ಕೆಲ ತಿಂಗಳಿಂದ ಕಾಲು ನೋವು ಕಾಣಿಸಿಕೊಂಡಿದೆ. ಹೀಗಾಗಿ ವೈದ್ಯರ ಸಲಹೆ ಮೇರೆಗೆ ಮುಂಬೈ ಆಸ್ಪತೆಯಲ್ಲಿ ಆಪರೇಷನ್ಗೆ ಒಳಗಾಗಿದ್ದೇನೆ ಎಂದು ಬರೆದುಕೊಂಡಿದ್ದಾರೆ. ಆತ್ಮೀಯ ಬಂಧುಗಳೇ… ಕಳೆದ ವಿಧಾನ ಸಭಾ …
Read More »ಸಂಕಷ್ಟದಲ್ಲಿ ಕನ್ನಡ ಪುಸ್ತಕೋದ್ಯಮ; ಕೋವಿಡ್ದಿಂದಾಗಿ ಬಿದ್ದಿದೆ ಪೆಟ್ಟು
ಕನ್ನಡದ ಶ್ರೀಮಂತಿಕೆ ಇರುವುದೇ ಸಾಹಿತ್ಯದಲ್ಲಿ…. ಸಾಹಿತ್ಯವೆಂದರೆ ಪುಸ್ತಕ… ಆದರೆ, ಕನ್ನಡವನ್ನು ಪೋಷಿಸಿ, ಬೆಳೆಸುವ ಪುಸ್ತಕೋದ್ಯಮಕ್ಕೆ ಕಳೆದ ಎರಡು ವರ್ಷಗಳಲ್ಲಿ ಕೋವಿಡ್ ನೀಡಿದ ಪೆಟ್ಟು ಮಾತ್ರ ಸಹಿಸಲು ಸಾಧ್ಯವೇ ಇಲ್ಲದಂಥದ್ದು! ಕೋವಿಡ್ ಮತ್ತು ಲಾಕ್ಡೌನ್ ಕಾಲದಲ್ಲಿ ಸಾಹಿತ್ಯ ಬರೆಯುವವವರಿಗೆ ಯಾವುದೇ ರೀತಿಯಲ್ಲೂ ಕೊರತೆಯಾಗಲಿಲ್ಲ. ಆದರೆ, ಬರೆದ ಮೇಲೆ ಪುಸ್ತಕ ರೂಪದಲ್ಲಿ ಪ್ರಿಂಟ್ ಮಾಡಿ ಮಾರಾಟ ಮಾಡುವ ಪ್ರಕ್ರಿಯೆಗೆ ಮಾತ್ರ ದೊಡ್ಡ ಪೆಟ್ಟು ಬಿದ್ದಿರುವುದು ಸತ್ಯ. ಕೋವಿಡ್ ಎರಡು ಬಾರಿಯ ಲಾಕ್ಡೌನ್ ಹಾಗೂ …
Read More »ರಾಜ್ಯೋತ್ಸವ ಪ್ರಶಸ್ತಿಗೆ ಲಾಬಿ ಒಂದೇ ಸಂಸ್ಥೆ ಪರ ಸಾವಿರ ಶಿಫಾರಸು!
ಬೆಂಗಳೂರು: ಈ ಬಾರಿಯ ರಾಜ್ಯೋತ್ಸವ ಪ್ರಶಸ್ತಿಯನ್ನು ಅರ್ಹರಿಗೆ ನೀಡುವ ಸಲುವಾಗಿ ರಾಜ್ಯ ಸರಕಾರ ಜನರಿಂದಲೇ ಶಿಫಾರಸು ಆಹ್ವಾನಿಸಿತ್ತು. ಆದರೆ ಒಂದೇ ಸಂಸ್ಥೆಯ ಪರವಾಗಿ 1 ಸಾವಿರಕ್ಕೂ ಹೆಚ್ಚು ಶಿಫಾರಸುಗಳು ಬಂದಿದ್ದು, ಸರಕಾರವೇ ಬೆಚ್ಚಿ ಬೀಳುವಂತೆ ಮಾಡಿದೆ. ಕೆಲವು ವ್ಯಕ್ತಿಗಳ ಪರವೂ ಭರಪೂರ ಶಿಫಾರಸುಗಳು ಬಂದಿವೆ. “ಇಂಥವರಿಗೆ’ ಪ್ರಶಸ್ತಿ ಕೊಡಿ ಎಂದು ದಾಖಲೆಗಳ ಸಮೇತ 200 – 300 ಶಿಫಾರಸುಗಳು ಸೇವಾ ಸಿಂಧು ಮೂಲಕ ಸಲ್ಲಿಕೆಯಾಗಿವೆ ಎಂಬ ಮಾಹಿತಿ ಲಭ್ಯವಾಗಿವೆ. ಈ ಬಾರಿ …
Read More »ಭಗವಂತ ಖೂಬಾ ಹೇಳಿಕೆಗೆ ದಿನೇಶ್ ಗುಂಡೂರಾವ್ ಆಕ್ರೋಶ
ಬೆಂಗಳೂರು: ಬೆಲೆ ಏರಿಕೆ ಎಲ್ಲಿದೆ ಎಂದಿರುವ ಸಚಿವ ಭಗವಂತ ಖೂಬಾ ಯಾವ ಗ್ರಹದಲ್ಲಿದ್ದಾರೆ. ಜನ ಬೆಲೆ ಏರಿಕೆಯ ವಿರುದ್ಧ ಬೀದಿಗಿಳಿದಿರುವುದು ಕಣ್ಣಿಗೆ ಕಾಣುತ್ತಿಲ್ಲವೇ ಎಂದು ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಪ್ರಶ್ನಿಸಿದ್ದಾರೆ. ಬೆಲೆ ಏರಿಕೆಯ ವಿರುದ್ಧ ಜನ ಅಸಹನೆ ಆಕ್ರೋಶದ ರೂಪ ಪಡೆಯುತ್ತಿದೆ. ಇಷ್ಟಾದರೂ ಅದ್ಯಾವ ಭಂಡತನದಿಂದ ಬೆಲೆ ಏರಿಕೆ ಆಗಿಲ್ಲ ಎಂದು ಹೇಳುತ್ತೀರಿ ಎಂದಿದ್ದಾರೆ. 80 ರೂ. ಇದ್ದ ಅಡುಗೆ ಎಣ್ಣೆ 180 ರೂ. ಆಗಿದೆ. 75 ರೂ. …
Read More »‘ಕಂಬಳಿಯಾದ್ರೂ ಹಾಕ್ತೀನಿ, ಟೋಪಿಯಾದ್ರೂ ಹಾಕ್ತೀನಿ..ಇವನ್ಯಾರು ಕೇಳೋಕೆ? – ಸಿ.ಟಿ ರವಿ ವಿರುದ್ಧ ಸಿದ್ದು ಗರಂ
ವಿಜಯಪುರ: ಕಂಬಳಿಯಾದ್ರೂ ಹಾಕ್ತೀನಿ, ಟೋಪಿಯಾದ್ರೂ ಹಾಕ್ತೀನಿ.. ಇವನ್ಯಾರು ಕೇಳೋಕೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರು ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಸಿ.ಟಿ ರವಿ ವಿರುದ್ಧ ಕಿಡಿಕಾರಿದ್ದಾರೆ. ಸಿಂದಗಿ ಉಪ ಚುನಾವಣೆ ಪ್ರಚಾರಕ್ಕೆ ತೆರಳುವ ಮುನ್ನ ಮಾಧ್ಯಮಗಳೊಂದಿಗೆ ಮಾತನಾಡಿದ ಸಿದ್ದರಾಮಯ್ಯ ಅವರು, ಕಂಬಳಿ ಹಾಕಿದವರೆಲ್ಲಾ ಕುರುಬ ಸಮಾಜದಲ್ಲಿ ಹುಟ್ಟಿದವರಲ್ಲ ಎಂದಾದರೆ ಟೋಪಿ ಹಾಕಿದವರೆಲ್ಲ ಯಾರು..? ಎಂಬ ಸಿ.ಟಿ ರವಿ ಅವರ ಟ್ವೀಟ್ಗೆ ತಿರುಗೇಟು ನೀಡಿದ ಅವರು, ನಾನು ಕಂಬಳಿನೂ ಹಾಕುತ್ತೇನೆ ಹಾಕುತ್ತೇನೆ, …
Read More »
Laxmi News 24×7