Breaking News

ರಾಜಕೀಯ

ಡಿ.ಕೆ ಶಿವಕುಮಾರ್ ಪರ ಮಾಜಿ ಸಿಎಂ ಕುಮಾರಸ್ವಾಮಿ ಬ್ಯಾಟಿಂಗ್

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಪರ ಮಾಜಿ ಸಿಎಂ ಕುಮಾರಸ್ವಾಮಿ ಬ್ಯಾಟಿಂಗ್ ಮಾಡಿದ್ದಾರೆ. ಈ ಮೂಲಕ ಡಿ.ಕೆ. ಶಿವಕುಮಾರ್ ವಿರುದ್ಧ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸುತ್ತಿದ್ದ ಕುಮಾರಸ್ವಾಮಿ ದಿಢೀರ್ ಸಾಫ್ಟ್ ಆಗಿದ್ದಾರೆ ಎನ್ನಲಾಗಿದೆ. ಉಗ್ರಪ್ಪ, ಸಲೀಂ ಪಿಸುಮಾತು ವಿಡಿಯೋ ಪ್ರಸಾರವಾಗುತ್ತಿದ್ದಂತೆ ಡಿಕೆಎಸ್​ ಪರ ಸಾಫ್ಟ್ ಆಗಿರುವ ಕುಮಾರಸ್ವಾಮಿ ಇದೇ ವೇಳೆ ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ‘ಪಾಪ ಡಿ.ಕೆ ಶಿವಕುಮಾರ್ ಪಕ್ಷ ಕಟ್ಟುತ್ತಿದ್ದಾರೆ’.. ‘ಸಿದ್ದರಾಮಯ್ಯ ಪಟಾಲಂ ಡಿಕೆ …

Read More »

ಡಿ.ಕೆ ಶಿವಕುಮಾರ್ ಕಲೆಕ್ಷನ್ ಗಿರಾಕಿ ಎಂಬ ಸಂಭಾಷಣೆ ಕಾಂಗ್ರೆಸ್ ಪಕ್ಷಕ್ಕೆ ಭಾರೀ ಡ್ಯಾಮೇಜ್

ಬೆಂಗಳೂರು: ಕೆಪಿಸಿಸಿ ಮಾಧ್ಯಮ ಸಂಯೋಜಕ ಸಲೀಂ ಮತ್ತು ಮಾಜಿ ಸಂಸದ ವಿ.ಎಸ್ ಉಗ್ರಪ್ಪ ನಡುವಿನ ಡಿ.ಕೆ ಶಿವಕುಮಾರ್ ಬಗೆಗಿನ ಸಂಭಾಷಣೆ ಕೋಲಾಹಲವನ್ನೇ ಎಬ್ಬಿಸಿದೆ. ಈಗ ಡಿ.ಕೆ ಶಿವಕುಮಾರ್ ಕಲೆಕ್ಷನ್ ಗಿರಾಕಿ ಎಂಬ ಸಂಭಾಷಣೆ ಕಾಂಗ್ರೆಸ್ ಪಕ್ಷಕ್ಕೆ ಭಾರೀ ಡ್ಯಾಮೇಜ್ ಮಾಡಿದ್ದಾರೆ. ಸದ್ಯ ಈ ಡ್ಯಾಮೇಜ್ ಕಂಟ್ರೋಲ್​ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹರಸಾಹಸ ಮಾಡುತ್ತಿದ್ದಾರೆ ಎನ್ನಲಾಗಿದೆ. ಮುಂದೆ ಸಾಲು ಸಾಲು ಚುನಾವಣೆಗಳು ಎದುರಾಗಲಿವೆ. ಇದೇ ಹೊತ್ತಲ್ಲೇ ಕೆಪಿಸಿಸಿ ಸಾರಥಿ ಬಗ್ಗೆಯೇ …

Read More »

ಹುಬ್ಬಳ್ಳಿ: ಭೂಸ್ವಾಧೀನ ಕೈಬಿಡಲು ತೀರ್ಮಾನ

ಹುಬ್ಬಳ್ಳಿ: ನಿವೇಶನಕ್ಕಾಗಿ ಧಾರವಾಡ ಸಮೀಪದ ಸತ್ತೂರಿನಲ್ಲಿ 227 ಎಕರೆ ಜಾಗ ಭೂಸ್ವಾಧೀನ ಮಾಡಿಕೊಳ್ಳುವ ಯೋಜನೆಗೆ ರೈತರು ಪ್ರಬಲ ವಿರೋಧ ವ್ಯಕ್ತಪಡಿಸಿದ್ದರಿಂದ ಹುಬ್ಬಳ್ಳಿ-ಧಾರವಾಡ ಪ್ರಾಧಿಕಾರ ಈ ಯೋಜನೆ ಕೈಬಿಟ್ಟಿದೆ. ಪ್ರಾಧಿಕಾರದ ಕಚೇರಿಯಲ್ಲಿ ಶುಕ್ರವಾರ ನಡೆದ ಮಾಸಿಕ ಸಭೆಯಲ್ಲಿ ಸರ್ವಸಮ್ಮತದಿಂದ ಈ ತೀರ್ಮಾನಕ್ಕೆ ಬರಲಾಯಿತು. ಸತ್ತೂರಿನಲ್ಲಿ ಭೂಮಿ ವಶಪಡಿಸಿಕೊಳ್ಳಲು ಹುಡಾ 2016ರಿಂದಲೇ ರೈತರ ಜೊತೆ ನಿರಂತರ ಮಾತುಕತೆಯಲ್ಲಿ ತೊಡಗಿತ್ತು. ಇದಕ್ಕೆ ರೈತರು ವಿರೋಧ ವ್ಯಕ್ತಪಡಿಸುತ್ತ ಬಂದಿದ್ದರು. ಈ ವಿಷಯವನ್ನು ಸರ್ಕಾರದ ಗಮನಕ್ಕೆ ತಂದಾಗ …

Read More »

ಐಪಿಎಲ್ 2021: ಕೋಲ್ಕತ್ತಾ- ಚೆನ್ನೈ ನಡುವೆ ಫೈನಲ್ ಫೈಟ್

ದುಬೈ: ಶುಕ್ರವಾರ ಕೊಲ್ಕತ್ತಾ ಹಾಗೂ ಚೆನ್ನೈ ನಡುವೆ ಐಪಿಎಲ್ 14ನೇ ಆವೃತ್ತಿಯ ಫೈನಲ್ ಕಾದಾಟ ನಡೆಯಲಿದೆ. ಇಯಾನ್ ಮಾರ್ಗನ್ ನಾಯಕತ್ವದ ಕೋಲ್ಕತ್ತಾ ನೈಟ್ ರೈಡರ್ಸ್ ಮೂರನೇ ಬಾರಿ ಮತ್ತು ಮಹೇಂದ್ರ ಸಿಂಗ್ ಧೋನಿ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ ಶುಕ್ರವಾರ ನಾಲ್ಕನೇ ಬಾರಿ ಪ್ರಶಸ್ತಿ ಗೆಲ್ಲುವ ಉದ್ದೇಶದಿಂದ ಫೈನಲ್ ನಲ್ಲಿ ಸೆಣಸಾಡಲಿದೆ. ಇದು ಚೆನ್ನೈಯ 9 ನೇ ಫೈನಲ್ ಆಗಿದ್ದು, ಕೋಲ್ಕತಾ ತಂಡವು ಮೂರನೇ ಬಾರಿಗೆ ಫೈನಲ್ ಆಡಲಿದೆ. ಎರಡೂ …

Read More »

ನಾರಾಯಣಗುರುಗಳ ಹೋರಾಟದಿಂದ ಸಮಾಜ ತಲೆ ಎತ್ತಿದೆ

ಧಾರವಾಡ: ‘ಬ್ರಹ್ಮಶ್ರೀ ನಾರಾಯಣಗುರುಗಳು ಅಂದು ದೇವಾಲಯ ಪ್ರವೇಶಕ್ಕಾಗಿ ಹೋರಾಟ ಮಾಡದಿದ್ದರೆ ಇಂದು ಈಡಿಗ ಸಮುದಾಯದ ಜನರು ಇಸ್ಲಾಂ, ಇಲ್ಲವೇ ಕ್ರೈಸ್ತ ಧರ್ಮಕ್ಕೆ ಮತಾಂತರಗೊಳ್ಳಬೇಕಾಗಿತ್ತು’ ಎಂದು ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಅಭಿಪ್ರಾಯಪಟ್ಟರು. ಇಲ್ಲಿನ ಸತ್ತೂರಿನಲ್ಲಿ ಕರ್ನಾಟಕ ಪ್ರದೇಶ ಆರ್ಯ ಈಡಿಗ ಸಂಘ ಹಾಗೂ ಧಾರವಾಡ ಜಿಲ್ಲಾ ಆರ್ಯ ಈಡಿಗ ಸಂಘದ ವತಿಯಿಂದ ಶನಿವಾರ ಆಯೋಜಿಸಿದ್ದ ಈಡಿಗ ಭವನ ಉದ್ಘಾಟನೆ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ‘ಅಂದು ಸಾಮಾಜಿಕ ಹೋರಾಟ ಮಾಡಿದ್ದರ …

Read More »

ಸ್ಟಾರ್​ಗಳ ಮಕ್ಕಳು ಮಾತ್ರ ಡ್ರಗ್ಸ್​ ಸೇವಿಸುವವರಲ್ಲ.. ನಶೆವ್ಯೂಹಕ್ಕೆ ಸಿಲುಕಿದ್ದಾರೆ ಲಕ್ಷಾಂತರ ಮಕ್ಕಳು

ಇಂದಿನ ಮಕ್ಕಳೇ ನಾಳಿನ ಪ್ರಜೆಗಳು.. ಈ ಮಾತನ್ನ ಇತ್ತೀಚಿನ ಪೀಳಿಗೆಯ ಮಕ್ಕಳಿಗೆ ಒತ್ತಿ ಹೇಳುವ ಅನಿವಾರ್ಯತೆ ಸೃಷ್ಟಿಯಾಗಿದೆ. ಯಾಕೆ ಗೊತ್ತಾ ? ಹದಿಹರೆಯದ ವಯಸ್ಸಿನಲ್ಲಿ, ಮುಂದಿನ ಜವಾಬ್ದಾರಿಗಳನ್ನು ಮರೆತು, ನಶೆಯ ಜೀವನಕ್ಕೆ ಮಾರು ಹೋಗ್ತಾ ಇದ್ದಾರೆ ಯುವ ಚೇತನಗಳು. ಕಳೆದ ದಶಕವನ್ನು ಹೋಲಿಸಿ, ಮಾದಕ ಲೋಕದ ಜಾಲಕ್ಕೆ ಸಿಲುಕಿರುವ ಮಕ್ಕಳ ಬಗೆಗಿನ ಈ ಸಮೀಕ್ಷೆ ನೋಡಿದರೆ, ದೇಶದ ಮುಂದಿನ ಭವಿಷ್ಯದ ಬಗ್ಗೆ ಭಯ ಹುಟ್ಟುತ್ತದೆ. ಆ ಸರ್ವೆ ಕುರಿತ ರಿಪೋರ್ಟ್​ …

Read More »

ಅತಿಥಿ ಉಪನ್ಯಾಸಕರಿಗೆ ಸೇವಾಭದ್ರತೆ ನೀಡಿ

ಬೆಳಗಾವಿ: ಅತಿಥಿ ಉಪನ್ಯಾಸಕರ ಸೇವಾಭದ್ರತೆಗೆ ಸಂಬಂಧಿಸಿದಂತೆ ಮಾನವೀಯತೆಯಆಧಾರದ ಮೇಲೆ ತ್ವರಿತವಾಗಿ ಸೂಕ್ತ ತೀರ್ಮಾನತೆಗೆದುಕೊಳ್ಳುವ ಮೂಲಕ ಅವರ ಕುಟುಂಬದ ಹಿತಕಾಯಬೇಕು ಎಂದು ಆಗ್ರಹಿಸಿ ರಾಜ್ಯ ಸರಕಾರಿ ಪದವಿ ಪೂರ್ವ ಕಾಲೇಜುಗಳ ಅತಿಥಿ ಉಪನ್ಯಾಸಕ ರಹಿತ ರಕ್ಷಣಾ ಸಮಿತಿ ಜಿಲ್ಲಾ ಘಟಕದ ಸದಸ್ಯರು ಉನ್ನತ ಶಿಕ್ಷಣ ಸಚಿವ ಡಾ| ಅಶ್ವತ್ಥನಾರಾಯಣ ಅವರಿಗೆ ಮನವಿ ಸಲ್ಲಿಸಿದರು. ಬೆಳಗಾವಿಯಲ್ಲಿ ಸಚಿವರಿಗೆ ಮನವಿ ಸಲ್ಲಿಸಿದ ಸದಸ್ಯರು, 2021-22ನೇ ಶೈಕ್ಷಣಿಕ ಸಾಲಿಗೆ ಹಾಲಿಕರ್ತವ್ಯನಿರ್ವಹಿಸುತ್ತಿರುವಅತಿಥಿಉಪನ್ಯಾಸಕರನ್ನುಸೇವೆಯಲ್ಲಿ ಮುಂದುವರೆಸಬೇಕು. ಮಾಸಿಕಸಂಚಿತ ಗೌರವಧನ ನಿಗದಿಪಡಿಸಬೇಕು …

Read More »

‘ಆರೋಗ್ಯ ಇಲಾಖೆ ಅನಾರೋಗ್ಯ ಪೀಡಿತವಾಗಿ ಹಾಸಿಗೆ ಹಿಡಿದಿದೆ’ ದಿನೇಶ್​ ಗುಂಡೂರಾವ್​ ಆಕ್ರೋಶ

ಬೆಂಗಳೂರು: ಆರೋಗ್ಯ ಸಿಬ್ಬಂದಿಯ ವೇದನೆ ಕೇಳದೆ ರಾಜ್ಯದ ಆರೋಗ್ಯ ಇಲಾಖೆ ಅನಾರೋಗ್ಯ ಪೀಡಿತವಾಗಿ ಹಾಸಿಗೆ ಹಿಡಿದಿದೆ ಎಂದು ಮಾಜಿ ಕೆಪಿಸಿಸಿ ಅಧ್ಯಕ್ಷ ದಿನೇಶ್​ ಗುಂಡೂರಾವ್​ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆರೋಗ್ಯ ಇಲಾಖೆಯ ಸಿಬ್ಬಂದಿ ವೇತನ ಸಮಸ್ಯೆ ಕುರಿತಂತೆ ಟ್ವೀಟ್​ ಮಾಡಿ ಅಸಮಾಧಾನ ವ್ಯಕ್ತಪಡಿಸಿದ ಅವರು ‘ಇಲಾಖೆಯ ಸಿಬ್ಬಂದಿಗೆ ಕಳೆದ 3 ತಿಂಗಳಿನಿಂದ ವೇತನ ಬಿಡುಗಡೆಯಾಗಿಲ್ಲ. ಆರೋಗ್ಯ ಸಿಬ್ಬಂದಿ ಕೊರೋನಾ ಫ್ರಂಟ್‌ಲೈನ್ ವರ್ಕರ್‌ಗಳಾಗಿ ಕಾರ್ಯನಿರ್ವಹಿಸಿದ್ದಾರೆ.ಆದರೂ ಕೊರೊನಾ ಭತ್ಯೆ ಸಿಕ್ಕಿಲ್ಲ. ತಮ್ಮ ಇಲಾಖೆಯ ಸಿಬ್ಬಂದಿಗಳ …

Read More »

ತೈವಾನ್‍ನಲ್ಲಿ ಬೆಂಕಿ ಅವಗಡ, 14 ಮಂದಿ ಸಾವು..!

ಥೈಪೆ, ಅ.14- ತೈವಾನ್‍ನ ದಕ್ಷಿಣ ವಲಯದಲ್ಲಿ ನಡೆದಿರುವ ಬೆಂಕಿ ಅವಗಡದಿಂದ ಸುಮಾರು 14 ಮಂದಿ ಮೃತಪಟ್ಟು, 51ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ವರದಿಯಾಗಿದೆ. ಇಂದು ಮುಂಜಾನೆ 3 ಗಂಟೆ ಸುಮಾರಿನಲ್ಲಿ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಅಗ್ನಿಶಾಮಕ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯ ಆರಂಭಿಸಿದ್ದಾರೆ. ಆದರೆ ತಳಮಹಡಿಯಿಂದ ಆರಂಭವಾದ ಬೆಂಕಿ ಇಡೀ ಕಟ್ಟಡವನ್ನು ಆಕ್ರಮಿಸಿದೆ. ದುರ್ಘಟನೆಯಲ್ಲಿ 14 ಮಂದಿ ಮೃತಪಟ್ಟಿದ್ದಾರೆ. ಕೆಲವರು ಸ್ಥಳದಲ್ಲೇ ಸಜೀವ ದಹನವಾದರೆ ಇನ್ನೂ ಕೆಲವರು …

Read More »

ಕೆಲವು ಗಣಿಗಳನ್ನು ಮುಚ್ಚುವುದು, ಮುಂಗಾರು ಮಳೆಯಿಂದಾಗಿ ಪ್ರವಾಹವು ಕಲ್ಲಿದ್ದಲು ಬಿಕ್ಕಟ್ಟಿಗೆ ಕಾರಣವಾಯಿತು: ಪ್ರಲ್ಹಾದ್ ಜೋಶಿ

(ಜಾರ್ಖಂಡ್): ಕಲ್ಲಿದ್ದಲು ಸಚಿವ ಪ್ರಲ್ಹಾದ್ ಜೋಶಿ ಗುರುವಾರ ಕೆಲವು ಗಣಿಗಳನ್ನು ಮುಚ್ಚಲಾಗಿದೆ ಮತ್ತು ಮುಂಗಾರು ಮಳೆಯಿಂದಾಗಿ ಇತರ ಕೆಲವು ಪ್ರವಾಹಗಳು ಬಿಕ್ಕಟ್ಟಿಗೆ ಕಾರಣವಾದವು ಆದರೆ ಪರಿಸ್ಥಿತಿ ಸುಧಾರಿಸುತ್ತಿರುವುದರಿಂದ ಭಯಪಡುವ ಅಗತ್ಯವಿಲ್ಲ. ಜಾರ್ಖಂಡ್‌ನ ಚತ್ರ ಜಿಲ್ಲೆಯ ಪಿಪರ್‌ವಾರ್‌ನಲ್ಲಿರುವ ಸೆಂಟ್ರಲ್ ಕೋಲ್‌ಫೀಲ್ಡ್ಸ್ ಲಿಮಿಟೆಡ್‌ನ (ಸಿಸಿಎಲ್) ಅಶೋಕ ಗಣಿಗೆ ಭೇಟಿ ನೀಡಿದ ಜೋಶಿ, ದೇಶದ ವಿದ್ಯುತ್ ಸ್ಥಾವರಗಳು ಅಗತ್ಯ ಪ್ರಮಾಣದ ಕಲ್ಲಿದ್ದಲನ್ನು ಪಡೆಯುವುದನ್ನು ಮುಂದುವರಿಸುತ್ತವೆ ಎಂದು ಹೇಳಿದರು.”ನಾವು ಈಗ ಸುಧಾರಣೆಯನ್ನು ನೋಡುತ್ತಿದ್ದೇವೆ” ಎಂದು ಅವರು …

Read More »