Breaking News

ರಾಜಕೀಯ

ಕೃಷಿ ಕಾಯ್ದೆ ವಿರೋಧಿಸಿ ಇಂದು ಭಾರತ್ ಬಂದ್; ಆ ಮೂರು ಕೃಷಿ ಕಾಯ್ದೆಗಳು ಯಾವುದು..?

ಬೆಂಗಳೂರು: ಭಾರತ​ ಬಂದ್​ಗೆ ಮತ್ತೆ ಕರೆ ನೀಡಲಾಗಿದೆ. ಕೇಂದ್ರದ ಮೂರು ಕೃಷಿ ಕಾಯ್ದೆ, ಖಾಸಗೀಕರಣ ಹಾಗೂ ಬೆಲೆ ಏರಿಕೆ ವಿರೋಧಿಸಿ ವಿವಿಧ ರೈತ ಸಂಘಟನೆಗಳು ಇಂದು ಬೀದಿಗೆ ಇಳಿಯುತ್ತಿದ್ದಾರೆ. ಇದಕ್ಕಾಗಿ ಪೂರ್ವ ಸಿದ್ಧತೆ ಮಾಡ್ಕೊಂಡಿರೋ ರೈತರು, ದೇಶಾದ್ಯಂತ ಜಾಥಾ ನಡೆಸುತ್ತಿದ್ದಾರೆ. ಈ ಬಾರಿಯೂ ಪ್ರತಿಭಟನೆ, ಜಾಥಾ ಮೂಲಕವೇ ಕೇಂದ್ರ, ರಾಜ್ಯದ ವಿರುದ್ಧ ಅಸ್ತ್ರ ಪ್ರಯೋಗಿಸುತ್ತಿದ್ದಾರೆ. ಸುಮಾರು ಒಂದೂವರೆ ವರ್ಷಗಳಿಂದ ಜನರ ಜೀವದ ಜೊತೆ ಜೀವನದ ಮೇಲೆ ಪರಿಣಾಮ ಬೀರಿರೋ ಕೊರೊನಾ …

Read More »

ಭಾರತ್ ಬಂದ್’ ಮೊದಲೇ ಕೇಂದ್ರ ಸರ್ಕಾರಕ್ಕೆ ರೈತರು ನೀಡಿದ ಎಚ್ಚರಿಕೆ!?

ನವದೆಹಲಿ, ಸಪ್ಟೆಂಬರ್ 27: ವಿವಾದಿತ ಕೃಷಿ ಕಾಯ್ದೆಗಳ ವಿರುದ್ಧ ರೈತರು ಪ್ರತಿಭಟನೆ ನಡೆಸಲು ಆರಂಭಿಸಿ 10 ತಿಂಗಳೇ ಕಳೆದು ಹೋಗಿವೆ. ಮುಂದಿನ 10 ವರ್ಷಗಳವರೆಗೂ ರೈತರು ತಮ್ಮ ಹೋರಾಟ ಮುಂದುವರಿಸುವುದಕ್ಕೆ ಸಿದ್ಧರಿದ್ದೇವೆಯೇ ಹೊರತೂ ಕೇಂದ್ರ ಸರ್ಕಾರದ ಕಪ್ಪು ಕಾಯ್ದೆಗಳ ಅನುಷ್ಠಾನಕ್ಕೆ ಅವಕಾಶ ನೀಡುವುದಿಲ್ಲ ಎಂದು ಭಾರತೀಯ ಕಿಸಾನ್ ಯೂನಿಯನ್ ಮುಖ್ಯಸ್ಥ ರಾಕೇಶ್ ಟಿಕಾಯತ್ ಎಚ್ಚರಿಕೆ ನೀಡಿದ್ದಾರೆ. ಕಳೆದ ವರ್ಷ ಸೆಪ್ಟೆಂಬರ್ ತಿಂಗಳಿನಿಂದಲೂ ರಾಷ್ಟ್ರ ರಾಜಧಾನಿಯ ಗಡಿಗಳಲ್ಲಿ ಪಂಜಾಬ್, ಹರಿಯಾಣ ಮತ್ತು …

Read More »

ರಾಜ್ಯದ ರೈತರ ಮಕ್ಕಳಿಗೆ ಮಹತ್ವದ ಮಾಹಿತಿ : `ಮುಖ್ಯಮಂತ್ರಿ ರೈತ ವಿದ್ಯಾನಿಧಿ’ ಶಿಷ್ಯವೇತನಕ್ಕಾಗಿ ಅರ್ಜಿ ಸಲ್ಲಿಸುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ರಾಜ್ಯದ ರೈತರಿಗೆ ಸಿಹಿ ಸುದ್ದಿಯೊಂದನ್ನು ನೀಡಿದ್ದಾರೆ. ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಯೋಜನೆಗಳನ್ನು ರೈತರ ಮನೆ ಬಾಗಿಲಿಗೆ ತಲುಪಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ. ಬೆಳಗಾವಿಯಲ್ಲಿ ಭಾನುವಾರದಂದು ರೈತರೊಂದಿಗೆ ನಡೆದ ಸಭೆಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಗ್ರಾಮೀಣಾಭಿವೃದ್ಧಿ ಮತ್ತು ಕೃಷಿ ಸಂಬಂಧಿ ಯೋಜನೆಗಳನ್ನು ರೈತರ ಮನೆ ಬಾಗಿಲಿಗೆ ತಲುಪಿಸಲು ಚಿಂತನೆ ನಡೆಸಲಾಗಿದ್ದು, ಮುಂದಿನ ದಿನಗಳಲ್ಲಿ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ. …

Read More »

ಭಾರತ್ ಬಂದ್: ಏನಿರುತ್ತೆ.? ಏನಿರಲ್ಲ.? ಇಲ್ಲಿದೆ ಮಾಹಿತಿ

ಬೆಂಗಳೂರು: ರೈತ ವಿರೋಧಿ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಭಾರತೀಯ ಕಿಸಾನ್ ಯೂನಿಯನ್ ಕರೆ ನೀಡಿರುವ ಭಾರತ ಬಂದ್ ಅಂಗವಾಗಿ ರಾಜ್ಯದ ವಿವಿಧೆಡೆ ಬೆಳ್ಳಂಬೆಳಗ್ಗೆ ರೈತರು ಪ್ರತಿಭಟನೆ ನಡೆಸಿದ್ದಾರೆ. ಭಾರತ ಬಂದ್ ಗೆ ನೈತಿಕ ಬೆಂಬಲ ವ್ಯಕ್ತವಾಗಿದೆ. ಹೀಗಾಗಿ ಬಸ್, ಟ್ಯಾಕ್ಸಿ, ಆಟೋ ಸೇವೆಗಳು ಮುಂದುವರೆಯಲಿವೆ. ಅದೇ ರೀತಿ ಮೆಟ್ರೋ, ರೈಲು ಸಂಚಾರ ಇರುತ್ತದೆ. ಶಾಲಾ-ಕಾಲೇಜುಗಳು ಇರಲಿವೆ. ಬಂದ್, ಪ್ರತಿಭಟನೆ ಬಿಸಿ ತಟ್ಟುತ್ತಿದ್ದಂತೆಯೇ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡುವ ಸಾಧ್ಯತೆ ಇದೆ. …

Read More »

ಬಂದ್ ಠುಸ್ ಪಟಾಕಿ – ಬೆಂಗಳೂರಿನಲ್ಲಿ ಎಂದಿನಂತೆ ಸಾಗುತ್ತಿದೆ ಜನ ಜೀವನ

ಬೆಂಗಳೂರು: ಕೇಂದ್ರ ಸರ್ಕಾರದ ಕೃಷಿ ಕಾನೂನುಗಳನ್ನು ವಿರೋಧಿಸಿ ರೈತ ಸಂಘಟನೆಗಳು ನೀಡಿದ ಬಂದ್ ಬೆಂಗಳೂರಿನಲ್ಲಿ ಠುಸ್ ಪಟಾಕಿಯಾಗಿದೆ. ನಗರದ ಜನ ಜೀವನ ಎಂದಿನಂತೆ ಸಾಗುತ್ತಿದೆ. ಬಿಎಂಟಿಸಿ, ಕೆಎಸ್ಆರ್‌ಟಿಸಿ ಬಸ್ಸುಗಳಲ್ಲಿ ಜನ ಪ್ರತಿದಿನದಂತೆ ಸಂಚರಿಸುತ್ತಿದ್ದಾರೆ. ಪ್ರತಿಭಟನೆಯಿಂದ ಬಸ್ ತಡೆಯಬಾರದು ಎಂಬ ಕಾರಣಕ್ಕೆ ಬಸ್ ನಿಲ್ದಾಣಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. ರೈಲ್ವೇಗೂ ಬಂದ್ ಬಿಸಿ ತಟ್ಟಿಲ್ಲ. ಪ್ರಯಾಣಿಕರ ಸೇವೆಯಲ್ಲಿ ಯಾವುದೇ ಸಮಸ್ಯೆಯಾಗಿಲ್ಲ. ಹೂವು, ಹಣ್ಣಿನ ಮಾರುಕಟ್ಟೆಗಳಿಗೆ ಜನ ಬರುತ್ತಿದ್ದು ಎಂದಿನಂತೆ …

Read More »

ಬೆಳಗಾವಿ ಮಾದರಿ ಯಶಸ್ವಿಯಾದರೆ ಪ್ರತಿ ಪಾಲಿಕೆಯಲ್ಲೂ ಇ-ಗ್ರಂಥಾಲಯ ನಿರ್ಮಾಣ: ಸಿಎಂ

ಬೆಳಗಾವಿ: ಇಡೀ ಭಾರತವೇ ಬೆಳಗಾವಿಯಲ್ಲಿದೆ. ಇಲ್ಲಿಯ ಜನತೆ ಕನ್ನಡನಾಡಿನ ಬಗ್ಗೆ ಅಪಾರ ಅಭಿಮಾನ ಹೊಂದಿದವರು. ದೇಶಾಭಿಮಾನಿಗಳು. ಯಾವುದೇ ರೀತಿಯ ಸಂಕುಚಿತ ಭಾವನೆ ಹಾಗೂ ವಿಚಾರಗಳಿಗೆ ಇಲ್ಲಿ ಜಾಗವಿಲ್ಲ ಎಂಬುದನ್ನು ಮಹಾನಗರ ಪಾಲಿಕೆ ಚುನಾವಣೆಯಲ್ಲಿ ತೋರಿಸಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮೆಚ್ಚುಗೆ ವ್ಯಕ್ತಪಡಿಸಿದರು. ನಗರದ ಶಹಾಪುರದ ಶಿವಾಜಿ ಉದ್ಯಾನದ ಬಳಿಯ ರವೀಂದ್ರ ಕೌಶಿಕ್ ಇ-ಗ್ರಂಥಾಲಯವನ್ನು ರವಿವಾರ ಉದ್ಘಾಟಿಸಿ ಅವರು ಮಾತನಾಡಿದರು. ಬೆಳಗಾವಿ ಜಿಲ್ಲೆ ಕರ್ನಾಟಕ ರಾಜ್ಯದ ಕಿರೀಟ ಪ್ರಾಯವಾಗಿದೆ. ಆದ್ದರಿಂದ …

Read More »

ಮೀನು ಹಿಡಿಯಲು ಹೋಗಿ ಕಡಲ ಪಾಲದ ನೌಕಾನೆಲೆ ಉದ್ಯೋಗಿ

ಅಂಕೋಲಾ:ಮೀನುಗಾರಿಕೆ ನಡೆಸುತ್ತಿದ್ದ ವೇಳೆ ಸಮುದ್ರದಲ್ಲಿ ಮುಳುಗಿ ನೌಕಾನೆಲೆ ಉದ್ಯೋಗಿಯೋರ್ವ ಮೃತ ಪಟ್ಟ ಘಟನೆ ಭಾನುವಾರ ಬೆಲೇಕೆರಿಯಲ್ಲಿ ನಡೆದಿದೆ. ನೌಕಾನೆಲೆ ಉದ್ಯೋಗಿಯಾಗಿರುವ ತಾಲೂಕಿನ ಬಾವಿಕೇರಿ ಗ್ರಾಮದ ನಿವಾಸಿ ಪುರಂದರ ಶಿವಾನಂದ ನಾಯ್ಕ ಎಂಬಾತನೇ ಮೃತಪಟ್ಟ ವ್ಯಕ್ತಿ. ಈತನು ಭಾನುವಾರ ರಜೆ ಇದ್ದ ಕಾರಣ ತನ್ನ ಸ್ನೇಹಿತರೊಂದಿಗೆ ಬೆಲೇಕೆರಿ ತೀರದಲ್ಲಿ ಮೀನುಗಾರಿಕೆ ನಡೆಸಲು ಹೋಗಿದ್ದನು. ಸಮುದ್ರದಲ್ಲಿ ಆಕಸ್ಮಿಕವಾಗಿ ಬಿದ್ದು ಕೆಲ ಕಾಲ ಕಣ್ಮರೆಯಾದ ಇತನನ್ನು ಅಂಕೋಲಾ ಪೊಲೀಸರು ಮತ್ತು ಕರಾವಳಿ ಕಾವಲು ಪಡೆ …

Read More »

ಗೋವಾದಲ್ಲಿ ಕನ್ನಡ ಭವನ ನಿರ್ಮಾಣದ ಜೊತೆ ಪದವಿ ಶಿಕ್ಷಣದವರೆಗೆ ಕನ್ನಡ ವಿಸ್ತರಣೆ : ಮಹೇಶ್ ಜೋಶಿ

ಪಣಜಿ: ಗೋವಾದಲ್ಲಿ ಕನ್ನಡ ಭವನ ನಿರ್ಮಾಣ ಕನ್ನಡಿಗರ ಹಲವು ವರ್ಷಗಳ ಕನಸಾಗಿದೆ. ನಾನು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷನಾಗಿ ಆಯ್ಕೆಯಾದರೆ ಗೋವಾದಲ್ಲಿ ಕನ್ನಡ ಭವನ ನಿರ್ಮಾಣ ಮಾಡುವುದು ಮಾತ್ರವಲ್ಲದೆಯೇ ಗೋವಾದಲ್ಲಿ ಕನ್ನಡಶಾಲೆಗಳನ್ನು ಕಾಲೇಜು ಶಿಕ್ಷಣದ ವರೆಗೂ ವಿಸ್ತರಣೆ ಮಾಡುತ್ತೇನೆ ಎಂದು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಸ್ಥಾನದ ಅಭ್ಯರ್ಥಿಗಳಾಗಿರುವ ಮಹೇಶ್ ಜೋಶಿ ಭರವಸೆ ನೀಡಿದರು. ಕನ್ನಡ ಸಾಹಿತ್ಯ ಪರಿಷತ್ ಚುನಾವಣೆಯ ಹಿನ್ನೆಲೆಯಲ್ಲಿ ಗೋವಾದ ಮಡಗಾಂವನಲ್ಲಿ ಆಯೋಜಿಸಿದ್ದ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು-ಕಳೆದ …

Read More »

ಡಿಜಿಟಲ್ ಓದುಗರಿಗೆ ಭಾರಿ ಭರವಸೆ ಕೊಟ್ಟ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ!

ಬೆಂಗಳೂರು, ಸೆ. 26: ಬೆಳಗಾವಿಯ ಇ-ಗ್ರಂಥಾಲಯ ಕಾರ್ಯವೈಖರಿಯನ್ನು ಗಮನಿಸುತ್ತೇವೆ. ಅದು ಯಶಸ್ವಿಯಾದಲ್ಲಿ, ಇದೇ ಮಾದರಿಯಲ್ಲಿ ಪ್ರತಿಯೊಂದು ಮಹಾನಗರ ಪಾಲಿಕೆಯಲ್ಲಿ ಇ ಲೈಬ್ರರಿ ತೆರೆಯಲು ಸರ್ಕಾರ ಮುಂದಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಬೆಳಗಾವಿಯಲ್ಲಿ ರವೀಂದ್ರ ಕೌಶಿಕ್ ಹೆಸರಿನಲ್ಲಿ ಇ-ಗ್ರಂಥಾಲಯವನ್ನು ಉದ್ಘಾಟಿಸಿ ಮುಖ್ಯಮಂತ್ರಿ ಬೊಮ್ಮಾಯಿ ಮಾತನಾಡಿದ್ದಾರೆ. ಡಿಜಿಟಲ್ ಗ್ರಂಥಾಲಯ ಓದುಗರಿಗೆ, ಬರಹಗಾರರಿಗೆ, ಜ್ಞಾನಪಡೆಯಲು ಬಯಸುವವರಿಗೆ ಜ್ಞಾನದ ರಹದಾರಿಯನ್ನು ತೆರೆದಿದೆ. ಇದರಿಂದ ಡಿಜಿಟಲ್ ಶಕ್ತಿಯನ್ನು ಮನೆ ಮನೆಗೆ ತಲುಪಿಸುವ ಕೆಲಸವಾಗುತ್ತದೆ. ಜ್ಞಾನ …

Read More »

ಉಗ್ರರ ವಿರುದ್ಧ ಹೋರಾಡಲು ಮಂಗಳೂರು ಪೊಲೀಸರಿಗೆ ‘ರಾಣಿ’ ಬಲ!

ಮಂಗಳೂರು, ಸೆಪ್ಟೆಂಬರ್ 26; ದಕ್ಷಿಣ ಕನ್ನಡ ಜಿಲ್ಲೆಗೆ ಉಗ್ರರ ಭೀತಿ ಇರೋದನ್ನು ಕೇಂದ್ರ ಗುಪ್ತಚರ ಇಲಾಖೆ ಸ್ಪಷ್ಟಪಡಿಸಿದೆ. ಹೀಗಾಗಿ ಪೊಲೀಸ್ ಇಲಾಖೆ ಹೈ ಅಲರ್ಟ್ ಆಗಿರಬೇಕೆಂದು ಇಲಾಖೆ ಸೂಚಿಸಿದೆ. ಹಬ್ಬದ ಸಂದರ್ಭದಲ್ಲಿ ಉಗ್ರರು ಕರಾವಳಿ ಭಾಗಗಳಲ್ಲಿ ವಿಧ್ವಂಸಕ ಕೃತ್ಯ ಎಸಗಬಹುದೆಂಬ ಎಚ್ಚರಿಕೆಯನ್ನು ಗುಪ್ತಚರ ಇಲಾಖೆ ನೀಡಿದೆ. ಮುನ್ನೆಚ್ಚೆರಿಕಾ ಕ್ರಮವಾಗಿ ಜನಸಂದಣಿ ಇರುವ ಪ್ರದೇಶಗಳಲ್ಲಿ ಹೆಚ್ಚಿನ ಪೊಲೀಸ್ ಭದ್ರತೆ ನಿಯೋಜನೆ ಮಾಡಲು ಪೊಲೀಸ್ ಇಲಾಖೆ ಮುಂದಾಗಿದೆ. ಆದರೆ ಈ ಭೀತಿಯಿಂದ ಮಂಗಳೂರನ್ನು …

Read More »