Breaking News

ರಾಜಕೀಯ

ಅತ್ಯಾಚಾರಿಗಳಿಗೆ ಕಠಿಣ ಶಿಕ್ಷೆ; ಕಾನೂನು ತಿದ್ದುಪಡಿಗೆ ಕೇಂದ್ರಕ್ಕೆ ಪ್ರಸ್ತಾವನೆ:ಮಾಧುಸ್ವಾಮಿ

ವಿಧಾನ ಪರಿಷತ್‌: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಷರಿಯತ್‌ ಕಾನೂನಿನಡಿ ಕ್ರಮ ತೆಗೆದುಕೊಳ್ಳಲು ಸಾಧ್ಯವಿಲ್ಲ. ಹೀಗಾಗಿ ಅತ್ಯಾಚಾರಿಗಳಿಗೆ ಕಠಿಣ ಶಿಕ್ಷೆ ನೀಡುವ ಸಂಬಂಧ ಕಾನೂನು ತಿದ್ದುಪಡಿಗೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಿದ್ದೇವೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ ಹೇಳಿದರು. ನಿಯಮ 68ರ ಅಡಿಯಲ್ಲಿ ಸಾರ್ವಜನಿಕ ಮಹತ್ವದ ವಿಷಯದ (ಮೈಸೂರಿನಲ್ಲಿ ನಡೆದ ಅತ್ಯಾಚಾರ ಪ್ರಕರಣ ಹಾಗೂ ಮಕ್ಕಳು, ಮಹಿಳೆಯರ ಮೇಲೆ ನಡೆಯುತ್ತಿರುವ ಅತ್ಯಾಚಾರ ಪ್ರಕರಣಗಳು) ಮೇಲೆ ನಡೆದ ಸುದೀರ್ಘ‌ ಚರ್ಚೆ ನಂತರ …

Read More »

ಮೊದಲ ಅಧಿವೇಶನ ಪರೀಕ್ಷೆ ಗೆದ್ದ ಮುಖ್ಯಮಂತ್ರಿ ಬೊಮ್ಮಾಯಿ

ಬೆಂಗಳೂರು: ಅನಿರೀಕ್ಷಿತ ವಾಗಿ ದೊರೆತ ನಾಯಕತ್ವವನ್ನು ಸಮರ್ಥವಾಗಿ ನಿಭಾಯಿಸಿ, ಹತ್ತು ದಿನಗಳ ಮೊದಲ ಅಧಿವೇಶನವನ್ನು ಸದ್ದುಗದ್ದಲವಿಲ್ಲದೆ ನಡೆಸುವಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಯಶಸ್ವಿಯಾಗಿದ್ದಾರೆ. ಬೊಮ್ಮಾಯಿ ತಮ್ಮ ಸರಳ ನಡೆ ಹಾಗೂ ಚುರುಕಿನ ಆಡಳಿತದಿಂದ ಜನರ ವಿಶ್ವಾಸ ಗಳಿಸುತ್ತಿದ್ದು, ಅಧಿವೇಶನ ದಲ್ಲೂ ವಿಪಕ್ಷಗಳನ್ನು ಯಶಸ್ವಿಯಾಗಿ ಎದುರಿಸಿ, ನಾಯಕತ್ವದ ಬಗ್ಗೆ ಬಿಜೆಪಿ ನಾಯಕರಿಗಿದ್ದ ಆತಂಕವನ್ನು ದೂರ ಮಾಡುವ ಪ್ರಯತ್ನ ಮಾಡಿದ್ದಾರೆ. ದಾಖಲೆಗಳ ಮೂಲಕವೇ ಉತ್ತರ: ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಬೆಲೆ ಏರಿಕೆ ವಿಚಾರದಲ್ಲಿ ರಾಜ್ಯ ಹಾಗೂ …

Read More »

ಕ್ಷುಲ್ಲಕ ಕಾರಣಕ್ಕೆ ಕೊಲೆ

ಕಲಬುರಗಿ: ಕಲಬುರಗಿ ನಗರದ ಅಕ್ಕಮಹಾದೇವಿ ಕಾಲೋನಿಯ ಹೈಕೋರ್ಟ್ ಮುಂಭಾಗದಲ್ಲಿ ಗುರುವಾರ ತಡರಾತ್ರಿ ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿ ಓರ್ವನ ಭೀಕರವಾಗಿ ಕೊಲೆ ಮಾಡಿರುವ ಘಟನೆ ನಡೆದಿದೆ. 35 ವರ್ಷದ ಗುರುರಾಜ್ ಕುಲಕರ್ಣಿ ಕೊಲೆಯಾದವರು. ಪವನ್ ಜಹಾಗೀರದಾರ್ ಕೊಲೆ ಮಾಡಿದ ಆರೋಪಿ. ಎರಡು ದಿನಗಳ ಹಿಂದೆ ಕೂಡ ಇದೇ ಕಾರಣಕ್ಕೆ ಮತ್ತೆ ಇಬ್ಬರ ಮಧ್ಯೆ ಜಗಳವಾಗಿದೆ. ಈ ವಿಚಾರವಾಗಿ ಸಂಧಾನ ಮಾಡಿಕೊಳ್ಳೋಣ ಬಾ ಎಂದು ಪವನ್ ಹಾಗೂ ಆತನ ಗೆಳೆಯರು ಗುರುರಾಜ ಅವರನ್ನು …

Read More »

ಬೀದಿ ನಾಯಿ ವಿಚಾರಕ್ಕೆ ಶುರುವಾದ ಜಗಳ ಯುವಕನ ಕೊಲೆಯಲ್ಲಿ ಅಂತ್ಯ

ಕಲಬುರಗಿ: ಹಳೆ ವೈಷಮ್ಯ, ಪ್ರೀತಿ, ಆಸ್ತಿ ಸೇರಿದಂತೆ ನಾನಾ ಕಾರಣಗಳಿಗಾಗಿ ಕೊಲೆ ಪ್ರಕರಣಗಳು ನಡೆಯೋದು ಸದ್ಯ ಸಾಮಾನ್ಯ ಸಂಗತಿಯಾಗಿದೆ. ಆದರೆ ಇಂದು ಕಲಬುರಗಿಯಲ್ಲಿ ಬೀದಿ ನಾಯಿ ಕುರಿತಂತೆ ಶುರುವಾದ ಜಗಳದ ಯುವಕನೋರ್ವನ ಬರ್ಬರ ಕೊಲೆಯಲ್ಲಿ ಅಂತ್ಯವಾಗಿದೆ. ಗುರುರಾಜ್ ಕುಲ್ಕರ್ಣಿ (35) ಕೊಲೆಯಾದ ವ್ಯಕ್ತಿ. ಕಲಬುರಗಿ ನಗರದ ಹೈಕೋರ್ಟ್ ಮುಂಭಾಗದ ಅಕ್ಕಮಹಾದೇವಿ ಕಾಲೋನಿ ನಿವಾಸಿಯಾಗಿರುವ ಗುರುರಾಜ್​ ಕುಲ್ಕರ್ಣಿ, ತಾನಾಯಿತು ತನ್ನ ಕೆಲಸದ ಜೊತೆ ಜೊತೆಗೆ ಸಮಾಜ ಸೇವೆ ಮಾಡುತ್ತಿದ್ದರು. ಗುರುರಾಜ್ ಕುಲ್ಕರ್ಣಿ …

Read More »

ಅಸ್ಪೃಶ್ಯತೆ ನಿವಾರಣೆಗೆ ಪಣತೊಟ್ಟ ಕೊಪ್ಪಳ ಪೊಲೀಸರು; ಹಳ್ಳಿ ಹಳ್ಳಿಗೂ ತೆರಳಿ ಜನರಿಂದ ಪ್ರತಿಜ್ಞೆ

ಕೊಪ್ಪಳ: ದೇಶಕ್ಕೆ ಸ್ವಾತಂತ್ರ್ಯ ಬಂದು ಇಷ್ಟು ವರ್ಷ ಕಳೆದರೂ ಇನ್ನೂ ಅಸ್ಪೃಶ್ಯತೆ ಜೀವಂತವಾಗಿ ಉಸಿರಾಡುತ್ತಿದೆ. ಇದಕ್ಕೆ ಉದಾಹರಣೆಯೇ ಇತ್ತೀಚೆಗೆ ಹುಟ್ಟುಹಬ್ಬದ ಸಂಭ್ರಮದಲ್ಲಿ ದೇವರ ದರ್ಶನಕ್ಕಾಗಿ ಹನುಮಂತ ದೇವರ ದೇವಸ್ಥಾನಕ್ಕೆ ಪ್ರವೇಶ ಮಾಡಿದ ದಲಿತ ಬಾಲಕನಿಗೆ ದಂಡ ವಿಧಿಸಿದ್ದಾರೆ. ಹೀಗಿರುವಾಗಲೇ ಅಸ್ಪೃಶ್ಯತೆ ನಿವಾರಣೆಗಾಗಿ ಕೊಪ್ಪಳ ಪೊಲೀಸರು ಪಣತೊಟ್ಟಿದ್ದಾರೆ. ಹೌದು, ಇನ್ನೂ ಕೊಪ್ಪಳದಲ್ಲಿ ಜೀವಂತವಾಗಿರುವ ಅಸ್ಪೃಶ್ಯತೆ ನಿವಾರಣೆಗೆ ಪೊಲೀಸರು ಮುಂದಾಗಿದ್ದಾರೆ. ಹೀಗಾಗಿಯೇ ಜಿಲ್ಲೆಯ ಹಳ್ಳಿ ಹಳ್ಳಿಗೂ ತೆರಳಿ ಅಸ್ಪೃಶ್ಯತೆ ನಿವಾರಣೆಗೆ ಪ್ರತಿಜ್ಞೆ ಮಾಡಿಸುತ್ತಿದ್ದಾರೆ. …

Read More »

ಮದ್ಯ ಪ್ರಿಯರಿಗೆ ಗುಡ್​​ನ್ಯೂಸ್​​​; ಅ.3ರಿಂದ ಪಬ್, ಕ್ಲಬ್ ಆರಂಭ

ಬೆಂಗಳೂರು: ಮಾರಕ ಕೊರೋನಾದಿಂದ ಹೇರಲಾಗಿದ್ದ ಲಾಕ್ಡೌನ್​​​ ಸಡಿಲಗೊಳಿಸಿ ಸಿಎಂ ಬಸವರಾಜ್​​ ಬೊಮ್ಮಾಯಿ ಆದೇಶ ಹೊರಡಿಸಿದ್ದಾರೆ. ಈಗ ಮದ್ಯ ಪ್ರಿಯರಿಗೆ ಗುಡ್​​ನ್ಯೂಸ್​​ ನೀಡಿರುವ ಸಿಎಂ ಬಸವರಾಜ್​​ ಬೊಮ್ಮಾಯಿ ಅಕ್ಟೋಬರ್​​​ 3ನೇ ತಾರೀಕಿನಿಂದಲೇ ಕ್ಲಬ್​​​, ಪಬ್​​​​​ ತೆರೆಯಲು ಅನುಮತಿ ನೀಡಿರುವುದಾಗಿ ತಿಳಿಸಿದ್ದಾರೆ. ಈ ಸಂಬಂಧ ಸುದ್ದಿಗಾರರೊಂದಿಗೆ ಮಾತಾಡಿದ ಬಸವರಾಜ್​​ ಬೊಮ್ಮಾಯಿ, ರಾಜ್ಯದಲ್ಲಿ ಸರಾಸರಿ 0.66 ಕೋವಿಡ್ ಪ್ರಮಾಣ ಇದೆ. ಸದ್ಯ ಕೊರೊನಾ ಸೋಂಕಿನ ಪ್ರಮಾಣ ಕಡಿಮೆಯಾಗಿದೆ. ಆದ್ದರಿಂದ ಪಾಸಿಟಿವಿ ರೇಟ್​​ ಶೇ.1 ಕ್ಕಿಂತ …

Read More »

ರೋಹಿಣಿ ಕೋರ್ಟ್ ಆವರಣದಲ್ಲಿ ಎದುರಾಳಿ ಗ್ಯಾಂಗ್‌ನಿಂದ 2 ಗ್ಯಾಂಗ್‌ಸ್ಟರ್ ಗೋಗಿ ಗುಂಡಿನ ದಾಳಿ

ಹೊಸದಿಲ್ಲಿ: ದೆಹಲಿಯ ರೋಹಿಣಿ ನ್ಯಾಯಾಲಯದ ಆವರಣದಲ್ಲಿ ಶುಕ್ರವಾರ ದುಷ್ಕರ್ಮಿಗಳಿಂದ ಗುಂಡು ಹಾರಿಸಿದ ಗ್ಯಾಂಗ್‌ಸ್ಟರ್ ಜಿತೇಂದರ್ ಮನ್ ‘ಗೋಗಿ’ ಮೃತಪಟ್ಟಿದ್ದಾರೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.”ದರೋಡೆಕೋರ ಜಿತೇಂದರ್ ಮನ್ ‘ಗೋಗಿ’ ಅವರನ್ನು ಪೊಲೀಸರು ವಿಚಾರಣೆಗೆ ದೆಹಲಿಯ ರೋಹಿಣಿ ನ್ಯಾಯಾಲಯಕ್ಕೆ ಕರೆತಂದಾಗ ಅವರ ಮೇಲೆ ಗುಂಡು ಹಾರಿಸಿದರು. ಪ್ರತೀಕಾರವಾಗಿ ಮೂವರು ದಾಳಿಕೋರರು ಹತರಾದರು” ಎಂದು ಡಿಸಿಪಿ ರೋಹಿಣಿ ಹೇಳಿದರು. ನ್ಯಾಯಾಲಯದ ಆವರಣದಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಮೂವರು ಗಾಯಗೊಂಡಿದ್ದಾರೆ.ನ್ಯಾಯಾಲಯದ ಆವರಣದಲ್ಲಿ ಭದ್ರತಾ ಲೋಪವನ್ನು …

Read More »

ಅಪ್ರಾಪ್ತ ಬಾಲಕಿ ಮೇಲೆ 8 ತಿಂಗಳಿಂದ ಕಾಮುಕರು ಅಟ್ಟಹಾಸ 26 ಜರನ್ನು ಬಂಧಿಸಲಾಗಿದೆ. ಬಂಧಿತರಲ್ಲಿ ಇಬ್ಬರು ಅಪ್ರಾಪ್ತರು

ಮುಂಬೈ: ಅಪ್ರಾಪ್ತ ಬಾಲಕಿ ಮೇಲೆ 8 ತಿಂಗಳಿಂದ ಕಾಮುಕರು ಅಟ್ಟಹಾಸ ಮೆರೆದು ನೀಚ ಕೃತ್ಯವೆಸಗಿರುವ ಘಟನೆ ಮಹಾರಾಷ್ಟ್ರದ ಥಾಣೆಯಲ್ಲಿ ಬೆಳಕಿಗೆ ಬಂದಿದೆ. 8 ತಿಂಗಳಿಂದ 15 ವರ್ಷದ ಬಾಲಕಿ ಮೇಲೆ 33 ಜನರಿಂದ ಅತ್ಯಾಚಾರ ನಡೆಸಲಾಗಿದೆ ಎನ್ನಲಾಗಿದ್ದು, ಬಾಲಕಿ ಕೊಟ್ಟಿರುವ ದೂರಿನ ಆಧಾರದ ಮೇಲೆ 26 ಜರನ್ನು ಬಂಧಿಸಲಾಗಿದೆ. ಬಂಧಿತರಲ್ಲಿ ಇಬ್ಬರು ಅಪ್ರಾಪ್ತರು ಎಂದು ತಿಳಿದುಬಂದಿದೆ. ಬಾಲಕಿ, ಕಿರಾತಕರಿಗೆ ಸಾಮಾಜಿಕ ಜಾಲತಾಣಗಳಲ್ಲಿ ಪರಿಚಯವಾಗಿದ್ದು, ಪರಿಚಯ ಸ್ನೇಹವಾಗಿ ಸಲುಗೆಯಿಂದ ಜಾಲತಾಣಗಳಲ್ಲಿ ಖಾಸಗಿ …

Read More »

‘ತಾತನಾದೆ ಎಂದು ಹೇಳಲು ಅತೀವ ಸಂತಸವಾಗ್ತಿದೆ’ -ಹೆಚ್​​ಡಿಕೆ ಹರ್ಷ

ಬೆಂಗಳೂರು: ಮಾಜಿ ಸಿಎಂ ಹೆಚ್​ಡಿ ಕುಮಾರ ಸ್ವಾಮಿ ಅವರ ಕುಟುಂಬಕ್ಕೆ ಹೊಸ ಸದಸ್ಯನ ಆಗಮನವಾಗಿದ್ದು, ನಿಖಿಲ್​ ಕುಮಾರಸ್ವಾಮಿ ಅವರ ಪತ್ನಿ ರೇವತಿ ಅವರು ಇಂದು ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಈ ಕುರಿತು ತಮ್ಮ ಸಂತಸವನ್ನು ಅಭಿಮಾನಿಗಳೊಂದಿಗೆ ಹಂಚಿಕೊಂಡಿರುವ ಕುಮಾರಸ್ವಾಮಿ ಅವರು, ತಾತನಾದೆ ಎಂದು ಹೇಳಲು ಅತೀವ ಸಂತಸವಾಗುತ್ತಿದೆ ಎಂದು ಹರ್ಷ ವ್ಯಕ್ತಪಡಿಸಿದ್ದಾರೆ. ಈ ಕುರಿತು ಟ್ವೀಟ್​ ಮಾಡಿರುವ ಹೆಚ್​​ಡಿಕೆ, ನನ್ನ ಜೀವನದಲ್ಲಿ ಇನ್ನೊಂದು ಶುಭ ಘಳಿಗೆ ಬಂದಿದೆ. ನಮ್ಮ …

Read More »

ಚೆನ್ನಾಗಿ ಮುತ್ತು ಕೊಡುವ ಪುರುಷರು ನನಗಿಷ್ಟ: ಮಲೈಕಾ ಅರೋರ

ನಟಿ ಮಲೈಕಾ ಅರೋರ ಸಿನಿಮಾಗಳಿಗಿಂತಲೂ ವೈಯಕ್ತಿಕ ಜೀವನದಿಂದ, ತಮ್ಮ ಗ್ಲಾಮರಸ್ ಮೈಮಾಟದಿಂದ ಸುದ್ದಿಯಾದವರು. ಸಲ್ಮಾನ್ ಖಾನ್ ಸಹೋದರ ಅರ್ಬಾಜ್ ಖಾನ್‌ ಜೊತೆಗೆ ವಿವಾಹವಾಗಿದ್ದ ಮಲೈಕಾ ಅರೋರಾಗೆ ಒಬ್ಬ 9 ವರ್ಷದ ಮಗನಿದ್ದಾನೆ. ಆದರೆ 2016ರಲ್ಲಿ ಅರ್ಬಾಜ್ ಖಾನ್ ಹಾಗೂ ಮಲೈಕಾ ಅರೋರ ದೂರಾಗಿದ್ದು ವಿಚ್ಛೇಧನ ಪಡೆದಿದ್ದಾರೆ. ವಿಚ್ಛೇಧನದ ಬಳಿಕ ಮಲೈಕಾ ಅರೋರ ಯುವ ನಟ ಅರ್ಜುನ್ ಜೊತೆಗೆ ಲಿವ್‌ ಇನ್ ರಿಲೇಷನ್‌ಶಿಪ್‌ನಲ್ಲಿದ್ದಾರೆ. ಮಲೈಕಾ ಅರೋರಾಗೆ ಈಗ 47 ವರ್ಷ ವಯಸ್ಸಾದರೆ ಅರ್ಜುನ್ …

Read More »