Breaking News

ರಾಜಕೀಯ

ದೀಪಿಕಾ ಪಡುಕೋಣೆ vs ಪಿವಿ ಸಿಂಧು : ಬ್ಯಾಡ್ಮಿಂಟನ್ ಆಡಿದ ತಾರೆಯರು

ಪಿ ವಿ ಸಿಂಧು ಎದುರು ದೀಪಿಕಾ ಪಡುಕೋಣೆ ಬ್ಯಾಡ್ಮಿಂಟನ್ ಆಡುವ ಮೂಲಕ ಗಮನ ಸೆಳೆದಿದ್ದಾರೆ. ಪಿವಿ ಸಿಂಧು ಎರಡು ಬಾರಿ ಒಲಿಂಪಿಕ್ಸ್ ನಲ್ಲಿ ಚಿನ್ನದ ಪದಕವನ್ನು ತನ್ನದಾಗಿಸಿಕೊಂಡಿರುವ ಆಟಗಾರ್ತಿ. ಇವರ ಜೊತೆ ನಟಿ ದೀಪಿಕಾ ಬ್ಯಾಡ್ಮಿಂಟನ್ ಆಡಿರುವುದು ವಿಶೇಷವಾಗಿದೆ. ಇನ್ನು ಸಿಂಧು ಜೊತೆ ಆಟವಾಡಿರುವ ಫೋಟೋಗಳನ್ನು ಸೋಷಿಯಲ್ ಮೀಡಿಯಾದಲ್ಲಿ ದೀಪಿಕಾ ಪಡುಕೋಣೆ ಶೇರ್ ಮಾಡಿಕೊಂಡಿದ್ದಾರೆ. ಇದು ನನ್ನ ನಿತ್ಯ ಜೀವನ.. ಕ್ಯಾಲೊರಿಯನ್ನು ಬರ್ನ್ ಮಾಡಲು ಸಿಂಧು ಜೊತೆ ಬ್ಯಾಡ್ಮಿಂಟನ್ ಆಟವಾಡಿದೆ …

Read More »

ಕೊಪ್ಪಳ: ದಲಿತ ಬಾಲಕ ದೇವಸ್ಥಾನ ಪ್ರವೇಶ ಮಾಡಿದ ಎಂದು ದಂಡ ಹಾಕಿದ್ದ ಐವರ ಬಂಧನ

ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಬಾಲಚಂದ್ರ ದೂರು ಆಧರಿಸಿ ಕನಕಪ್ಪ ಪೂಜಾರಿ, ಹನುಮಗೌಡ, ಗವಿ ಸಿದ್ದಪ್ಪ ಮ್ಯಾಗೇರಿ, ವಿರುಪಾಕ್ಷಗೌಡ ಮ್ಯಾಗೇರಿ, ಹಾಗೂ ಶರಣಗೌಡ ಎಂಬುವವರ ವಿರುದ್ಧ ಪ್ರಕರಣ ದಾಖಲಾಗಿದೆ. ಕೊಪ್ಪಳ: ಮಿಯಾಪೂರದಲ್ಲಿ ದಲಿತ ಬಾಲಕ ದೇವಸ್ಥಾನ ಪ್ರವೇಶಿದ್ದಕ್ಕೆ ದಂಡ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿ ಐವರನ್ನು ಕುಷ್ಟಗಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಕುಷ್ಟಗಿ ಪೊಲೀಸ್ ಠಾಣೆಯಲ್ಲಿ ಐವರ ವಿಚಾರಣೆ ನಡೆಯುತ್ತಿದೆ. ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಬಾಲಚಂದ್ರ ದೂರು …

Read More »

ಗ್ರಾಪಂ ಕಚೇರಿಯಲ್ಲಿ ಪ್ರಧಾನಿ ಮೋದಿ ಫೋಟೋ ಹಾಕಿದ್ದಕ್ಕೆ ಭುಗಿಲೆದ್ದ ವಿವಾದ: ನೊರನಕ್ಕಿ ಗ್ರಾಮದಲ್ಲಿ ಉದ್ವಿಗ್ನ

ಹಾಸನ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಭಾವಚಿತ್ರ ಅಳವಡಿಕೆಗೆ ಸಂಬಂಧಿಸಿದಂತೆ ಚನ್ನರಾಯಪಟ್ಟಣ ತಾಲೂಕು ನೊರನಕ್ಕಿ ಗ್ರಾಮ ಪಂಚಾಯಿತಿಯಲ್ಲಿ ವಿವಾದ ಏರ್ಪಟ್ಟಿದ್ದು, ದೂರು- ಪ್ರತಿ ದೂರು ದಾಖಲಾಗಿದೆ. ಗ್ರಾಮದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, ಪೊಲೀಸ್ ಭದ್ರತೆ ಏರ್ಪಡಿಸಲಾಗಿದೆ. ಗ್ರಾಪಂ ಕಚೇರಿಯಲ್ಲಿ ಸೆ.17ರಂದು ನರೇಂದ್ರ ಮೋದಿ ಅವರ ಜನ್ಮ ದಿನಾಚರಣೆ ನಿಮಿತ್ತ ಫೋಟೋ ಹಾಕಲಾಗಿದೆ. ಇದಕ್ಕೆ ಜೆಡಿಎಸ್ ಬೆಂಬಲಿತ ಸದಸ್ಯರು ಹಾಗೂ ಅಧಿಕಾರಿ ವರ್ಗ ವಿರೋಧ ವ್ಯಕ್ತಪಡಿಸಿದೆ. ಮತ್ತೊಂದು ಕಡೆ ಬಿಜೆಪಿ …

Read More »

ಅಣ್ಣನ ಸಾವಿನ ಸುದ್ದಿ ಕೇಳಿ ಇಹಲೋಕ ತ್ಯಜಿಸಿದ ತಂಗಿ

ರಾಯಚೂರು: ಅಣ್ಣನ ಮೃತಪಟ್ಟ ಸುದ್ದಿ ಕೇಳುತ್ತಿದ್ದಂತೆ ಆಘಾತಕ್ಕೀಡಾಗಿ ತಂಗಿಯೂ ಸಾವನಪ್ಪಿದ ಮನಕಲಕುವ ಘಟನೆ ತಾಲೂಕಿನ ಹುಣಸಿಹಾಳಹುಡಾದಲ್ಲಿ ಮಂಗಳವಾರ ಜರುಗಿದೆ. ಹುಣಸಿಹಾಳಹುಡಾದ ನರಸಪ್ಪ ಹೀರಾ (65) ಅನಾರೋಗ್ಯದಿಂದ ನಗರದ ನವೀನ್ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ, ಚಿಕಿತ್ಸೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ಅಣ್ಣನ ಅಗಲಿಕೆಯ ಸುದ್ದಿ ತಿಳಿಯುತ್ತಿದ್ದಂತೆ ತಂಗಿ ಸಿದ್ದಮ್ಮ (50) ರಕ್ತದೊತ್ತಡ ಕಡಿಮೆಯಾಗಿ ಕುಸಿದು ಬಿದ್ದಿದ್ದಾರೆ. ಅನಾರೋಗ್ಯದಿಂದ ಆಸ್ಪತ್ರೆ ಸೇರಿದ ಅಣ್ಣನ ಯೋಗಕ್ಷೇಮ ವಿಚಾರಿಸಲು ಸಿರವಾರದಿಂದ ಬಂದಿದ್ದರು. ಆಸ್ಪತ್ರೆಯಲ್ಲಿ ಅಣ್ಣ ಅಗಲಿದ್ದಾನೆಂಬ ಸುದ್ದಿ …

Read More »

ರಾಜ್ಯದಲ್ಲಿ 476 ಬಾರಿ ನಿಷೇಧಿತ ಸ್ಯಾಟಲೈಟ್ ಫೋನ್ ಗಳ ಬಳಕೆಯಾಗಿರುವುದು ಪತ್ತೆ

ಬೆಂಗಳೂರು: 2020ರಿಂದ ಈವರೆಗೂ ರಾಜ್ಯ ಪೊಲೀಸರು ಹಾಗೂ ಕೇಂದ್ರಿಯಾ ತನಿಖಾ ಸಂಸ್ಥೆಗಳಿಂದ ರಾಜ್ಯದಲ್ಲಿ 476 ಬಾರಿ ನಿಷೇಧಿತ ಸ್ಯಾಟಲೈಟ್ ಫೋನ್ ಗಳ ಬಳಕೆಯಾಗಿರುವುದನ್ನು ಪತ್ತೆ ಮಾಡವೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಮಂಗಳವಾರ ಹೇಳಿದ್ದಾರೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆ ಸೇರಿದಂತೆ ಕರಾವಳಿ ಭಾಗದಲ್ಲಿ `ಸ್ಯಾಟಲೈಟ್ ನ್’ ಬಳಕೆಯ ಸುದ್ದಿಗಳು ಆಗಾಗ ಮಾಧ್ಯಮಗಳಲ್ಲಿ ಬರುತ್ತಿದ್ದು ಈ ಸಂಶಯದ ಬಗ್ಗೆ ಸರಕಾರ ಕೂಡಲೇ ಸ್ಪಷ್ಟನೆ ನೀಡಬೇಕು ಎಂದು …

Read More »

ಇಂದಿನಿಂದ ನಾಲ್ಕು ದಿನ ಮುಂದುವರಿಯಲಿದೆ ಮಳೆಯ ಅಬ್ಬರ

ಕರ್ನಾಟಕದ ಹಲವು ಭಾಗಗಳಲ್ಲಿ ಮಳೆಯ ಅಬ್ಬರ ಹೆಚ್ಚಾಗಿದ್ದು, ಇಂದಿನಿಂದ ನಾಲ್ಕು ದಿನ ಮಳೆ ಮುಂದುವರಿಯಲಿದೆ. ಬೆಂಗಳೂರು, ದ.ಕ,ಉ.ಕ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ತುಮಕೂರು ಜಿಲ್ಲೆಗಳಿಗೆ ಇಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರಿನಲ್ಲಿಯೂ ಅಧಿಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ದಕ್ಷಿಣ ಭಾರತದ ರಾಜ್ಯಗಳಲ್ಲಿ ಮಳೆಯಾಗುತ್ತಿದೆ. ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಹೆಚ್ಚು ಮಳೆಯಾಗಲಿದೆ.

Read More »

ಕೃಷ್ಣಾ ನದಿ ತೀರದಲ್ಲೊಂದು ವಿಸ್ಮಯ – ರಣಭೀಕರ ಪ್ರವಾಹಕ್ಕೂ ನಲುಗದ ಶಿವಲಿಂಗ, ನಂದಿ ವಿಗ್ರಹ

ಚಿಕ್ಕೋಡಿ(ಬೆಳಗಾವಿ): ಕೃಷ್ಣಾ ನದಿ ತೀರದಲ್ಲೊಂದು ವಿಸ್ಮಯವೊಂದು ನಡೆದಿದೆ. ರಣಭೀಕರ ಪ್ರವಾಹಕ್ಕೂ ಶಿವಲಿಂಗ ಹಾಗೂ ನಂದಿ ವಿಗ್ರಹ ನಲುಗದೆ ಜನರಲ್ಲಿ ಅಚ್ಚರಿ ಮೂಡಿಸಿವೆ. ಹೌದು. ಕೃಷ್ಣಾ ನದಿ ತೀರ ಉಕ್ಕಿ ಹರಿದ ಪರಿಣಾಮ 2019 ಹಾಗೂ 2021ರಲ್ಲಿ ರಣ ಭೀಕರ ಪ್ರವಾಹ ಬಂದಿತ್ತು. ರಕ್ಕಸ ಪ್ರವಾಹಕ್ಕೆ ನದಿ ತೀರದ ಜನರ ಬದುಕು ಅಕ್ಷರಶಃ ನಲುಗಿ ಹೋಗುವುದರ ಜೊತೆಗೆ ಜನ ಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿತ್ತು. ಅಷ್ಟೇ ಅಲ್ಲದೇ ಪ್ರವಾಹಕ್ಕೆ ಸಿಲುಕಿ ಸೇತುವೆಗಳು, ಸಾವಿರಾರು …

Read More »

ಮರಾಠಿ ಪುಂಡಾಟಿಕೆಯನ್ನು ಸಮರ್ಥವಾಗಿ ಎದುರಿಸಿ ಎದುರೇಟು ಕೊಟ್ಟ ಲಕ್ಷ್ಮಿ ನಿಪ್ಪಾಣಿಕರ, ಅವರಿಗೆ ಸನ್ಮಾನ..

ಬೆಳಗಾವಿಯಲ್ಲಿ ಕಳೆದ ರವಿವಾರರಾತ್ರಿ ಮಹಾರಾಷ್ಟ್ರ ಏಕೀಕರಣಸಮಿತಿಯ ಕಾರ್ಯಕರ್ತರು ಮರಾಠಿನಾಮಫಲಕಕ್ಕೆ ಆಗ್ರಹಿಸಿ ನಡೆಸಿದಪುಂಡಾಟಿಕೆಯನ್ನು ಸಮರ್ಥವಾಗಿ ಎದುರಿಸಿ ಎದುರೇಟು ಕೊಟ್ಟ ಬೆಳಗಾವಿಮಹಾನಗರ ಪಾಲಿಕೆಯಉಪಾಯುಕ್ತರಾದ ಶ್ರೀಮತಿಲಕ್ಷ್ಮೀನಿಪ್ಪಾಣಿಕರಹಾಗೂ ಕನ್ನಡ ಬಳಕೆಯಲ್ಲಿಬದ್ಧತೆ ಪ್ರದರ್ಶಿಸಿದ ಆಯುಕ್ತರಾದಶ್ರೀ ರುದ್ರೇಶ ಘಾಳಿ ಅವರನ್ನು ಕನ್ನಡ ಪರಸಂಘಟನೆಗಳ ಮುಖಂಡರು ಮಂಗಳವಾರಮುಂಜಾನೆ ಪಾಲಿಕೆಯಲ್ಲಿ ಸನ್ಮಾನಿಸಿ ಅಭಿನಂದಿಸಿದರು.   ಬೆಳಗಾವಿ ಜಿಲ್ಲಾಕನ್ನಡ ಸಂಘಟನೆಗಳ ಕ್ರಿಯಾ ಸಮಿತಿಅಧ್ಯಕ್ಷ ಅಶೋಕ ಚಂದರಗಿ,ಕರ್ನಾಟಕರಕ್ಷಣಾ ವೇದಿಕೆಯರಾಜ್ಯ ಸಂಚಾಲಕಮಹಾದೇವ ತಳವಾರ,ಜಿಲ್ಲಾಧ್ಯಕ್ಷದೀಪಕ ಗುಡಗನಟ್ಟಿ,ಮೈನೋದ್ದೀನ್ಮಕಾನದಾರ,ಕಿರಣಮಾಳನ್ನವರ,ಸಾಗರ ಬೋರಗಲ್ಲ,ವಿರೇಂದ್ರ ಗೋಬರಿ,ವಿಶಾಲ ತಿಗಡಿ ಮುಂತಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Read More »

ರಾಜ್ಯ ಸಚಿವ ಸಂಪುಟ ಸಭೆ: ಸಾರಿಗೆ ನೌಕರರ ಮೇಲಿನ ಪ್ರಕರಣ ಹಿಂದೆಗೆ‌ತ

ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಪ್ರತಿಭಟನೆ ನಡೆಸಿದ್ದ ಸಾರಿಗೆ ನೌಕರರ ಮೇಲೆ ದಾಖಲಿಸಲಾಗಿದ್ದ ಮೊಕದ್ದಮೆಗಳನ್ನು ವಾಪಸ್‌ ಪಡೆಯಲು ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಾರಿಗೆ ಸಚಿವ ಶ್ರೀರಾಮುಲು, ನಾಲ್ಕು ಸಾರಿಗೆ ನಿಗಮಗಳ ವ್ಯವಸ್ಥಾಪಕ ನಿರ್ದೇಶಕರ ಜತೆ ಸಾಧಕ – ಬಾಧಕಗಳ ಕುರಿತು ಚರ್ಚಿಸಿದ್ದೇನೆ. ಮುಷ್ಕರ ಸಮಯದಲ್ಲಿ ಕೆಲವರು ಅಮಾನತಾಗಿದ್ದಾರೆ, ಮತ್ತೆ ಕೆಲವರು ವರ್ಗಾವಣೆಯಾಗಿ 6 ಸಾವಿರ ನೌಕರರು ತೊಂದರೆಗೆೆ ಸಿಲುಕಿದ್ದರು. 4 ಸಾವಿರ ನೌಕರರ ಮೇಲೆ ತೆಗೆದುಕೊಂಡಿದ್ದ ಕ್ರಮವನ್ನು …

Read More »

ತುಮಕೂರಿನ ಕ್ಯಾತ್ಸಂದ್ರದಲ್ಲಿ ಹೈಟೆಕ್ ವೇಶ್ಯಾವಾಟಿಕೆ ದಂಧೆ

ತುಮಕೂರು: ಲಾಡ್ಜ್ ಒಂದರ ಸುರಂಗದಲ್ಲಿ ಅಡಗಿ ಕುಳಿತು ಹೈಟೆಕ್ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಬೃಹತ್ ಜಾಲವೊಂದನ್ನು ತುಮಕೂರಿನ ಕ್ಯಾತ್ಸಂದ್ರದಲ್ಲಿ ಪೊಲೀಸರು ಬಂಧಿಸಿದ್ದಾರೆ. ಇತ್ತೀಚೆಗೆ ತುಮಕೂರು ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಿಲೋಮೀಟರ್ ಗಟ್ಟಲೆ ರಾಶಿ ರಾಶಿ ಕಾಂಡೋಮ್ ಗಳು ಬಿದ್ದಿರುವುದು ಪತ್ತೆಯಾಗಿತ್ತು. ಈ ಬಗ್ಗೆ ಮೈಸೂರಿನ ಒಡನಾಡಿ ಸಂಸ್ಥೆಯವರು ಪೊಲೀಸರಿಗೆ ದೂರು ನೀಡಿದ್ದರು. ಇದೀಗ ಖಚಿತ ಮಾಹಿತಿ ಆಧಾರದ ಮೇಲೆ ತುಮಕೂರಿನ ಕ್ಯಾತ್ಸಂದ್ರದ ಲಾಡ್ಜ್ ಒಂದರ ಮೇಲೆ ಪೊಲೀಸರೊಂದಿಗೆ ದಾಳಿ ನಡೆಸಿದ್ದು, …

Read More »