Breaking News

ರಾಜಕೀಯ

ಯುವತಿಯ ಸಂಕಲ್ಪಕ್ಕೆ ಸಂದ ಜಯ: ಗ್ರಾಮಕ್ಕೆ ರಸ್ತೆಯೂ ಆಯ್ತು, ಬಸ್ಸೂ ಬಂತು​.. ಮದ್ವೆಯೊಂದೇ ಬಾಕಿ..!

ದಾವಣಗೆರೆ: ಗ್ರಾಮದಲ್ಲಿ ರಸ್ತೆ ಆಗೋವರೆಗೂ ಮದುವೆಯಾಗಲ್ಲ ಎಂದು ಯುವತಿಯೊಬ್ಬಳು ಮಾಡಿದ ಸಂಕಲ್ಪಕ್ಕೆ ಫಲ ಸಿಕ್ಕಿದ್ದು ಗ್ರಾಮಕ್ಕೆ ರಸ್ತೆಯ ಜೊತೆ ಬಸ್​ ಕೂಡ ಆಗಮಿಸಿದ್ದು ಯವತಿ ಮಾಡಿದ ಸಂಕಲ್ಪದಿಂದ ಗ್ರಾಮದ ಬಹುದಿನಗಳ ಆಸೆ ಈಡೇರಿದಂತಾಗಿದೆ. ಹೌದು ಜಿಲ್ಲೆಯ ಹೆಚ್​.ರಾಂಪುರದ ಯುವತಿಯೊಬ್ಬಳು ತನ್ನ ಗ್ರಾಮಕ್ಕೆ ರಸ್ತೆಯಾಗಬೇಕು ಅಲ್ಲಿಯವರೆಗೆ ತಾನು ಮದುವೆಯಾಗಲ್ಲ ಎಂದು ವಿಭಿನ್ನವಾಗಿ ತನ್ನ ಆಕ್ರೋಶ ಹೊರಹಾಕಿದ್ದಳು. ಈ ಕುರಿತು ನ್ಯೂಸ್​ಫಸ್ಟ್​ ಸೆಪ್ಟೆಂಬರ್​ 14 ರಂದು ವಿಸ್ತೃತ ವರದಿ ಬಿತ್ತರಿಸಿತ್ತು.   ವರದಿಯಿಂದ ಎಚ್ಚೆತ್ತುಕೊಂಡ …

Read More »

ನಾಡಹಬ್ಬ ದಸರಾ ಉದ್ಘಾಟನೆಗೆ ಇಬ್ಬರ ಹೆಸರು ಶಿಫಾರಸು

ಮೈಸೂರು: ವಿಶ್ವ ವಿಖ್ಯಾತ ಮೈಸೂರು ದಸರಾಗೆ ದಿನಗಣನೆ ಆರಂಭವಾಗಿದ್ದು ದಸರಾ ಉದ್ಘಾಟಕರ ಆಯ್ಕೆಗೆ ಮೈಸೂರಿನ ಇಬ್ಬರ ಹೆಸರನ್ನು ಶಿಫಾರಸು ಮಾಡಲಾಗಿದೆ. ರಾಷ್ಟ್ರಕವಿ ಕುವೆಂಪು ಅವರ ಅಳಿಯ ಹಾಗೂ ಶಿವಮೊಗ್ಗ ಕುವೆಂಪು ವಿವಿ ವಿಶ್ರಾಂತ ಕುಲಪತಿಯಾದ ಪ್ರೊ.ಕೆ.ಚಿದಾನಂದ‌ಗೌಡ ಮತ್ತು ಸುಧರ್ಮ ಸಂಸ್ಕೃತ ಪತ್ರಿಕೆ ಸಂಪಾದಕಿ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಜಯಲಕ್ಷ್ಮಿ ಹೆಸರನ್ನ ಶಿಫಾರಸು ಮಾಡಲಾಗಿದೆ. ಮೈಸೂರಿನ ಸಂಘ ಸಂಸ್ಥೆಗಳು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್‌ಗೆ ಶಿಫಾರಸು ಮಾಡಿವೆ. ಈ ಕುರಿತು ಸಚಿವ ಎಸ್.ಟಿ.ಸೋಮಶೇಖರ್ …

Read More »

‘ನಮ್ಮನೆ ಯುವರಾಣಿ’ ಅಂಕಿತಾಗೆ ಹೊಗಳಿಕೆಯೋ ಹೊಗಳಿಕೆ

ಎಸ್​.ಪಿ. ಬಾಲಸುಬ್ರಹ್ಮಣ್ಯಂ​ ಅವರು ಜಡ್ಜ್​​ ಆಗಿ ನಡೆಸಿಕೊಡುತ್ತಿದ್ದ ‘ಎದೆ ತುಂಬಿ ಹಾಡುವೆನು’ ಕಾರ್ಯಕ್ರಮ ಸಾಕಷ್ಟು ಜನಪ್ರಿಯತೆ ಪಡೆದುಕೊಂಡಿತ್ತು. ಸಾಕಷ್ಟು ಟ್ಯಾಲೆಂಟ್​ಗಳಿಗೆ ಇದು ವೇದಿಕೆ ಆಗಿತ್ತು. ‘ನಮ್ಮನೆ ಯುವರಾಣಿ’ ಧಾರಾವಾಹಿ ಮೂಲಕ ಹೆಚ್ಚು ಮನೆ ಮಾತಾದವರು ಅಂಕಿತಾ. ಮೀರಾ ಪಾತ್ರದಲ್ಲಿ ನಟಿಸುವ ಮೂಲಕ ಹೆಚ್ಚು ಜನಪ್ರಿಯತೆ ಗಳಿಸಿಕೊಂಡರು. ಈಗ ಅವರನ್ನು ಅಭಿಮಾನಿಗಳು ಬಾಯ್ತುಂಬ ಹೊಗಳುತ್ತಿದ್ದಾರೆ. ಹಾಗಂತ ಇದು ನಟನೆ ವಿಚಾರಕ್ಕಲ್ಲ. ಹಾಗಾದರೆ ಮತ್ತಿನ್ನೇನು? ಆ ಪ್ರಶ್ನೆಗೆ ಇಲ್ಲಿದೆ ಉತ್ತರ. ಎಸ್​.ಪಿ. ಬಾಲಸುಬ್ರಹ್ಮಣ್ಯಂ​ …

Read More »

ದಲಿತ ಸಮುದಾಯದ ಮಗು ದೇವಸ್ಥಾನ ಪ್ರವೇಶಿಸಿದ್ದಕ್ಕೆ ದಂಡ ಕೇಸ್; ಐವರನ್ನ ಬಂಧಿಸಿದ ಪೊಲೀಸ್

ಕೊಪ್ಪಳ: ಮಕ್ಕಳು ದೇವರ ಸಮಾನ ಅಂತಾರೆ. ಆದ್ರೆ, ಇಲ್ಲೊಂದು ದಲಿತ ಸಮುದಾಯದ ಮಗು ತನ್ನ ಹುಟ್ಟು ಹಬ್ಬದ ಸಂತಸದಲ್ಲಿ ಗ್ರಾಮದ ದೇವಸ್ಥಾನ ಪ್ರವೇಶ ಮಾಡಿದ್ದಕ್ಕೆ ಬಾಲಕನಿಗೆ ದಂಡವಿಧಿಸಿ ಅಮಾನವೀಯವಾಗಿ ನಡೆದಿಕೊಂಡಿದ್ದಾರೆ. ಗ್ರಾಮಸ್ಥರ ವಿರುದ್ಧ ಜಿಲ್ಲಾಡಳಿತ ಕಠಿಣ ಕ್ರಮಕೈಗೊಂಡಿದೆ. ಗ್ರಾಮದಲ್ಲಿ ಡಿಸಿ, ಎಸ್​ಪಿ, ಎಸಿ ಸಭೆ ನಡೆಸಿದ್ದು, ಅಸ್ಪೃಶ್ಯತೆ ಆಚರಿಸಿದ ಗ್ರಾಮಸ್ಥರ ವಿರುದ್ಧ ಪ್ರಕರಣ ದಾಖಲಿಸಿ ಐದು ಜನರು ಬಂಧಿಸಿದ್ದಾರೆ.   ಸೆಪ್ಟೆಂಬರ್ 4 ರಂದು ಚಂದ್ರಶೇಖರ ಚೆನ್ನದಾಸರ ಅವರ ಪುತ್ರ …

Read More »

ದೇವರ ಮೂರ್ತಿ ಮೇಲೆ ಚಪ್ಪಲಿ ಧರಿಸಿ ಕಾಲಿಟ್ಟಿದ್ದ ಯುವಕನಿಗೆ ಥಳಿತ!

ತುಮಕೂರು: ದೇವರ ಮೂರ್ತಿ ಮೇಲೆ ಚಪ್ಪಲಿ ಧರಿಸಿ ಕಾಲಿಟ್ಟಿದ್ದ ಆರೋಪದಡಿ ಯುವಕನನ್ನು ಹಿಡಿದು ಗ್ರಾಮಸ್ಥರು ಥಳಿಸಿದ ಘಟನೆ ಜಿಲ್ಲೆಯ ಮಧುಗಿರಿ ತಾಲ್ಲೂಕಿನ ಸಿದ್ದಾಪುರ ಗ್ರಾಮದಲ್ಲಿ ನಡೆದಿದೆ. ಶ್ರೀಸ್ವಾಮಿ ಕೋಟೆ ಕಲ್ಲಪ್ಪನ ಮೂರ್ತಿ ಮೇಲೆ ಚಪ್ಪಲಿ ಧರಿಸಿ ಯುವಕ ಕಾಲಿಟ್ಟಿದ್ದ ವಿಡಿಯೊ ಸೋಷಿಯಲ್‍ ಮೀಡಿಯಾದಲ್ಲಿ ವೈರಲ್‍ ಆಗಿತ್ತು. ಯುವಕನ ವರ್ತನೆಗೆ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದರು. ಅಲ್ಲದೇ, ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಯುವಕನ ವಿರುದ್ಧ ಮಧುಗಿರಿ ಠಾಣೆಗೆ ಗ್ರಾಮಸ್ಥರು ದೂರು ಸಲ್ಲಿಸಿದ್ದರು. …

Read More »

ಮಗುವನ್ನ ಶಾಲೆಗೆ ಸೇರಿಸಲು ಬಂದ ಮಹಿಳೆಯಿಂದ ಮಸಾಜ್ ಮಾಡಿಸಿಕೊಂಡ ಹೆಡ್ ಮಾಸ್ಟರ್

ಬೆಂಗಳೂರು: ನಗರದ ಕೋದಂಡರಾಮಪುರ ಪ್ರೌಢಶಾಲೆಯಲ್ಲಿ ಮುಖ್ಯೋಪಾಧ್ಯಾಯ ಲೋಕೇಶಪ್ಪ ಎಂಬಾತ ಮಗುವಿನ ದಾಖಲಾತಿಗೆಂದು ಬಂದ ಮಹಿಳೆಯಿಂದ ಮಸಾಜ್ ಮಾಡಿಸಿಕೊಂಡ ಘಟನೆ ನಡೆದಿದೆ. ಸದ್ಯ ಲೋಕೇಶಪ್ಪನನ್ನ ಸೇವೆಯಿಂದ ಅಮಾನತು ಮಾಡಲಾಗಿದೆ. ಕೋದಂಡರಾಮಪುರ ಪ್ರೌಢಶಾಲೆಗೆ ತಮ್ಮ ಮಗುವನ್ನ ದಾಖಲು ಮಾಡಲೆಂದು ಮಹಿಳೆಯೋರ್ವರು ಶಾಲೆಗೆ ಬಂದರೆ ಆ ಮಹಿಳೆಯಿಂದಲೇ ಹೆಡ್ ಮಾಸ್ಟರ್ ಲೋಕೇಶಪ್ಪ ಮಸಾಜ್ ಮಾಡಿಸಿಕೊಂಡಿದ್ದಾನೆ. ಈ ಸಂಬಂಧ ಸಿಸಿಟಿವಿ ದೃಶ್ಯಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಈ ವಿಚಾರವಾಗಿ ಪ್ರಶ್ನಿಸಿದಾಗ ತಾನು ಮಸಾಜ್ ಮಾಡಿಸಿಕೊಂಡಿದ್ದಾಗಿ …

Read More »

ಹೈ-ಎಂಡ್ ಬೈಕ್ ಯಾಕೆ? ನಮಗೆ ಈ ಹೋರಿನೇ ಸಾಕು..!

ಬಾಗಲಕೋಟೆ: ಹದಿನೆಂಟು ತಿಂಗಳ ಕಿಲಾರಿ ಹೋರಿಯೊಂದು ದಾಖಲೆಯ ಮೊತ್ತಕ್ಕೆ ಮಾರಾಟವಾಗುವ ಮೂಲಕ ಅಚ್ಚರಿ ಹುಟ್ಟಿಸಿದೆ. ಜಿಲ್ಲೆಯ ರಬಕವಿಬನಹಟ್ಟಿ ತಾಲ್ಲೂಕಿನ ತೇರದಾಳ ಪಟ್ಟಣದ ನಾಲ್ಕನೇ ಕಿನಾಲ್ ತೋಟದ ವಸತಿ ಪ್ರದೇಶದ ಭೀಮಪ್ಪ ಬರಡಗಿ ಎಂಬುವರ ಹೋರಿ ಬರೋಬ್ಬರಿ 3 ಲಕ್ಷ 25 ಸಾವಿರ ರೂಪಾಯಿಗಳಿಗೆ ಮಾರಾಟವಾಗಿದೆ. ಅಶೋಕ‌ ಕುರಿ ಎಂಬುವರು 3 ಲಕ್ಷ 25 ಸಾವಿರಕ್ಕೆ ಖರೀದಿ ಮಾಡಿದ್ದಾರೆ. ಜಾನುವಾರು ಪ್ರದರ್ಶನದಲ್ಲಿ ಭಾಗಿಯಾಗಿ ಗಮನ ಸೆಳೆದಿದ್ದ ಹೋರಿ ನೋಡೋದಕ್ಕೆ ಬಾರಿ ಮೈಮಾಟ …

Read More »

ವಿಧಾನಸಭೆ: ಕೇಂದ್ರ ಸಚಿವರನ್ನು ಕರೆದು ಯಾಕೆ ಅಪಮಾನ ಮಾಡ್ತೀರಿ?

 ಇದು ಬಿಜೆಪಿ ಸದಸ್ಯ ಬಸನಗೌಡ ಪಾಟೀಲ ಯತ್ನಾಳ್‌ ಅವರು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್‌.ಈಶ್ವರಪ್ಪ ಅವರಿಗೆ ಕೊಟ್ಟ ಟಾಂಗ್‌. ಪ್ರಶ್ನೋತ್ತರ ವೇಳೆಯಲ್ಲಿ ಬೇಲೂರು ಶಾಸಕ ಕೆ.ಎಸ್‌.ಲಿಂಗೇಶ್‌ ಅವರು ಮುಖ್ಯಮಂತ್ರಿಗಳ ಅಮೃತ ಗ್ರಾಮಪಂಚಾಯಿತಿ ಯೋಜನೆಯನ್ನು ಪ್ರಸ್ತಾಪಿಸಿ ಗ್ರಾಮ ಪಂಚಾಯಿತಿಯೊಂದಕ್ಕೆ 25 ಲಕ್ಷ ರೂ. ಕೊಡುವುದಾಗಿ ಹೇಳಲಾಗಿದೆ. ಆದರೆ, ಹಣ ಬಿಡುಗಡೆಯಲ್ಲಿ ಸಮಸ್ಯೆಯಾಗುತ್ತಿದೆ ಎಂದು ಗಮನಸೆಳೆದರು. ಜೆಡಿಎಸ್‌ ಸದಸ್ಯ ಬಂಡೆಪ್ಪ ಕಾಶೆಂಪೂರ ಈ ಪ್ರಶ್ನೆಗೆ ಪೂರಕವಾಗಿ ಮಾತಾಡಿದರು. ಆಗ ಸಚಿವ ಈಶ್ವರಪ್ಪ ಉತ್ತರಿಸಿ, ಗ್ರಾಪಂಗಳಿಗೆ …

Read More »

ಪತ್ನಿಯ ಮೊಬೈಲ್ ನೋಡಿದ ರಿಯಲ್​ ಎಸ್ಟೇಟ್​ ಉದ್ಯಮಿ: ಮುಂದೆ ನಡೆದಿದ್ದು ಘನ ಘೋರ ಘಟನೆ

ಬೆಂಗಳೂರು: ಅನ್ನಪೂರ್ಣೇಶ್ವರಿನಗರದಲ್ಲಿ ಪತ್ನಿಯ ಶೀಲ ಶಂಕಿಸಿದ ಪತಿ ಚೂರಿಯಿಂದ ಕತ್ತಿಗೆ ಇರಿದು ಹತ್ಯೆ ಮಾಡಿದ್ದಾನೆ. ಅನ್ನಪೂರ್ಣೇಶ್ವರಿನಗರದ ನಿವಾಸಿ ರೂಪಾ (34) ಕೊಲೆಯಾದವರು. ರಿಯಲ್ ಎಸ್ಟೇಟ್ ಉದ್ಯಮಿ ಕಾಂತರಾಜ್ (39) ಆರೋಪಿ. ಕಾಂತರಾಜ್-ರೂಪಾ ದಂಪತಿಗೆ ಒಬ್ಬ ಮಗನಿದ್ದಾನೆ. ಪ್ರತಿನಿತ್ಯ ಪತ್ನಿಯ ಶೀಲ ಶಂಕಿಸಿ ಪತಿ ಜಗಳ ಮಾಡುತ್ತಿದ್ದ. ಈ ವಿಚಾರವಾಗಿ ದಂಪತಿ ನಡುವೆ ಆಗಾಗ ಮನಸ್ತಾಪ ಉಂಟಾಗುತ್ತಿತ್ತು. ಬುಧವಾರ ಸಂಜೆ 4.30ರಲ್ಲಿ ಕಾಂತರಾಜ್ ಪತ್ನಿಯ ಮೊಬೈಲ್ ಪರಿಶೀಲಿಸಿದಾಗ ಆಕೆ ಬೇರೆ ವ್ಯಕ್ತಿಯೊಂದಿಗೆ …

Read More »

ಕ್ಯಾಬ್ ಡ್ರೈವರ್ ನಿಂದ ಅತ್ಯಾಚಾರ ಆರೋಪಿಸಿದ ಯುವತಿ

ಯುವತಿಯೇ ಬಂದು ದೂರು ನೀಡಿದ್ದು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಚ್.ಎಸ್.ಆರ್ ಲೇಔಟ್ ನಿಂದ ಮುರುಗೇಶ್ ಪಾಳ್ಯಗೆ ಕ್ಯಾಬ್ ಬುಕ್ ಮಾಡಿದ್ದಳು. ಪಾನಮತ್ತರಾಳಾಗಿದ್ದ ಯುವತಿ ಕ್ಯಾಬಿನಿಂದ ಇಳಿಯುವ ಸ್ಥಿತಿಯಲ್ಲಿ ಇರಲಿಲ್ಲ. ಈ ಸಮಯದಲ್ಲಿ ರೇಪ್ ಎಸಗಿದ್ದಾನೆ ಎಂಬ ಮಾಹಿತಿ ಸಿಕ್ಕಿದೆ. ಯುವತಿ ದೌರ್ಜನ್ಯವನ್ನು ವಿರೋಧಿಸಿದ್ದಾಳೆ ಅತ್ಯಾಚಾರ ಪ್ರಯತ್ನ ವೇಳೆ ಕೂಗಾಡಿ ಜಟಾ ಪಟಿ ಮಾಡಿದ ಯುವತಿ ಎಸ್ಕೇಪ್ ಅಗೋಕೆ ಟ್ರೈ ಮಾಡಿ ಆರೋಪಿಯ ಮೊಬೈಲ್ ಕಿತ್ತುಕೊಂಡಿದ್ದಾಳೆ. ಖುದ್ದು ಜೀವನ್ ಭೀಮಾ ನಗರ …

Read More »