ಅಂಗುಲ್: ಅನಾರೋಗ್ಯವೆಂದು ಆಸ್ಪತ್ರೆಗೆ ಬಂದ ರೋಗಿಗೆ ಆ ಹಾಸ್ಪಿಟಲ್ನ ಸೆಕ್ಯೂರಿಟಿ ಗಾರ್ಡ್ ಇಂಜೆಕ್ಷನ್ ಕೊಟ್ಟಿದ್ದಾರೆ. ಈ ವಿಡಿಯೋ ಇದೀಗ ಸೋಷಿಯಲ್ ಮೀಡಿಯಾಗಳಲ್ಲಿ ಸಿಕ್ಕಾಪಟೆ ವೈರಲ್ ಆಗುತ್ತಿದೆ. ಈ ಘಟನೆ ನಡೆದದ್ದು ಓಡಿಶಾದ ಅಂಗುಲ್ ಜಿಲ್ಲಾ ಪ್ರಧಾನ ಆಸ್ಪತ್ರೆಯಲ್ಲಿ. ಅಲ್ಲಿ ವೈದ್ಯರು, ಪ್ಯಾರಾಮೆಡಿಕಲ್ ಸಿಬ್ಬಂದಿ ಇದ್ದಾಗ್ಯೂ ಕೂಡ ಸೆಕ್ಯೂರಿಟಿ ಗಾರ್ಡ್ ಇಂಜೆಕ್ಷನ್ ನೀಡಿದ್ದಾರೆ. ವಿಡಿಯೋ ವೈರಲ್ ಆದ ಬೆನ್ನಲ್ಲೇ ಸ್ಥಳೀಯ ಮಾಧ್ಯಮವೊಂದು ಆಸ್ಪತ್ರೆಯ ಎಡಿಎಂಒ ಮಾನಸ್ ರಂಜನ್ ಬಿಸ್ವಾಲ್ ಅವರನ್ನು ಮಾತನಾಡಿಸಿದೆ. ಹೀಗೆ …
Read More »ನಾಳೆ 2020-21ನೇ ಸಾಲಿನ ನೀಟ್ ಪರೀಕ್ಷೆ; 16 ಲಕ್ಷಕ್ಕೂ ಹೆಚ್ಚು ಅಭ್ಯರ್ಥಿಗಳು ನೋಂದಣಿ
ಬೆಂಗಳೂರು: ದೇಶದಾದ್ಯಂತ ನಾಳೆ 2020-21ನೇ ಸಾಲಿನ ನೀಟ್ ಪರೀಕ್ಷೆ ನಡೆಯಲಿದೆ. ವೈದ್ಯಕೀಯ & ದಂತ ವೈದ್ಯಕೀಯ ಹಾಗೂ ಆಯುಷ್ ಕೋರ್ಸ್ ಗಳಿಗೆ ನಡೆಯುವ ಪರೀಕ್ಷೆ ಇದಾಗಿದ್ದು ನಾಳೆ ಮಧ್ಯಾಹ್ನ 2 ಗಂಟೆಯಿಂದ ಸಂಜೆ 5ರವರೆಗೆ ಪರೀಕ್ಷೆ ನಡೆಯಲಿದೆ. ಒಟ್ಟು 201 ಪ್ರಮುಖ ನಗರಗಳಲ್ಲಿ ನಾಳೆ ಪರೀಕ್ಷೆ ನಡೆಯಲಿದೆ. ಕರ್ನಾಟಕದಲ್ಲಿ ಒಟ್ಟು 9 ನಗರಗಳಲ್ಲಿ ನೀಟ್ ಪರೀಕ್ಷೆ ನಡೆಯಲಿದೆ. ಬೆಂಗಳೂರು, ಬೆಳಗಾಂ, ದಾವಣಗೆರೆ, ಧಾರವಾಡ, ಗುಲ್ಬರ್ಗಾ, ಹುಬ್ಬಳ್ಳಿ, ಮೈಸೂರು, ಮಂಗಳೂರು ಮತ್ತು ಉಡುಪಿ …
Read More »ಕಲಬುರಗಿ ಪಾಲಿಕೆಯಲ್ಲಿ ಕಾಂಗ್ರೆಸ್- ಜೆಡಿಎಸ್ ಮೈತ್ರಿ ಆಗೋದು ಪಕ್ಕಾ ಎಂದ ಕಾಂಗ್ರೆಸ್ ಮುಖಂಡ
ಕಲಬುರಗಿ: ಕಲಬುರಗಿಯಲ್ಲಿ ಕಾಂಗ್ರೆಸ್ ಮುಖಂಡ, ಮಾಜಿ ಸಚಿವ ಶರಣಪ್ರಕಾಶ್ ಪಾಟೀಲ್ ಹೇಳಿಕೆ ನೀಡಿ ಕಲಬುರಗಿ ಪಾಲಿಕೆಯಲ್ಲಿ ಕಾಂಗ್ರೆಸ್- ಜೆಡಿಎಸ್ ಮೈತ್ರಿ ಆಗೋದು ಪಕ್ಕಾ ಎಂದಿದ್ದಾರೆ. ಕುಮಾರಸ್ವಾಮಿ ಸರ್ಕಾರವನ್ನ ಕೆಡವಿದ್ದ, ಬಿಜೆಪಿ ಇದೀಗ ಪಾಲಿಕೆ ಮೈತ್ರಿಗಾಗಿ ಮತ್ತೆ ಜೆಡಿಎಸ್ ಮನೆ ಬಾಗಿಲಿಗೆ ಹೋಗಿದೆ. ನಾಚಿಕೆಯಾಗಬೇಕು ಇವರಿಗೆ, ಮಾನ ಮರ್ಯಾದೆ ಇದೆಯಾ ಬಿಜೆಪಿಯವರಿಗೆ ..? ಈಗಾಗಲೇ ಮಲ್ಲಿಕಾರ್ಜುನ ಖರ್ಗೆಯವರು ಜೆಡಿಎಸ್ ಜೊತೆ ಮಾತುಕತೆ ನಡೆಸಿದ್ದಾರೆ. ಜಾತ್ಯಾತೀತ ನಿಲುವಿನೊಂದಿಗೆ ಕಾಂಗ್ರೆಸ್ ಜೊತೆ ಜೆಡಿಎಸ್ ಮೈತ್ರಿ ಮಾಡಿಕೊಳ್ಳಲಿದೆ. …
Read More »ಸಂಚಾರ ನಿಯಮ ಉಲ್ಲಂಘನೆಯಲ್ಲಿ ರವಿಕಾಂತೇಗೌಡರ ಅಭಿಮಾನಿ ದಾಖಲೆ ನಿರ್ಮಾಣ
ಬೆಂಗಳೂರು: ಸ್ಕೂಟರ್ ಮೇಲೆ ರವಿಕಾಂತೇಗೌಡ ಅಭಿಮಾನಿ ಎಂದು ಬರೆಸಿಕೊಂಡು ಟ್ರಾಫಿಕ್ ನಿಯಮ ಉಲ್ಲಂಘನೆ ಪ್ರಕರಣಕ್ಕೆ ಸಂಬಂಧಿಸಿದ ಬೈಕ್ನ್ನು ಜಯನಗರ ಟ್ರಾಫಿಕ್ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸಂಚಾರಿ ವಿಭಾಗ ಜಂಟಿ ಪೊಲೀಸ್ ಆಯುಕ್ತ ಆಗಿರುವ ರವಿಕಾಂತೇಗೌಡ ಹೆಸರು ಬರೆಸಿಕೊಂಡು ನಿಯಮ ಉಲ್ಲಂಘಿಸುತ್ತಿದ್ದವರ ಸ್ಕೂಟರ್ ವಶಪಡಿಸಿಕೊಳ್ಳಲಾಗಿದೆ. ಕೆಎ 05 ಜೆಎಸ್ 2581 ನಂಬರಿನ ಸ್ಕೂಟರ್ ಸೀಜ್ ಮಾಡಲಾಗಿದೆ. ಸ್ವತಃ ರವಿಕಾಂತರೆಗೌಡರ ಆದೇಶದ ಮೇರೆಗೆ ಸ್ಕೂಟರ್ ಸೀಜ್ ಮಾಡಲಾಗಿದೆ. ಆರ್ಟಿಐ ಕಾರ್ಯಕರ್ತ ಗಿರೀಶ್ ಬಾಬು ಓಡಿಸುತ್ತಿದ್ದ …
Read More »ಕಲಬುರಗಿ: ಜೆಡಿಎಸ್ ಮನವೊಲಿಸುವ ಜವಾಬ್ದಾರಿ ಸಿಎಂ ಬೊಮ್ಮಾಯಿ ಹೆಗಲಿಗೆ; ಪಾಲಿಕೆ ಕೈ ತಪ್ಪುವ ಆತಂಕದಲ್ಲಿ ಕಾಂಗ್ರೆಸ್
ಕಲಬುರಗಿ: ಕಲಬುರಗಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಅತಂತ್ರ ಪರಿಸ್ಥಿತಿ ಉದ್ಭವವಾಗಿದ್ದು, ಹೇಗಾದರೂ ಮಾಡಿ ಅಧಿಕಾರದ ಚುಕ್ಕಾಣಿ ಹಿಡಿಯಲೇಬೇಕೆಂದು ಬಯಸಿರುವ ಬಿಜೆಪಿ ಇದೀಗ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನೇ ಅಖಾಡಕ್ಕೆ ಇಳಿಸಿದೆ. ಕಾಂಗ್ರೆಸ್ ಪಕ್ಷದ ಜತೆ ಮೈತ್ರಿಗೆ ಜೆಡಿಎಸ್ ಸಿದ್ಧವಾಗಿದೆ ಎಂಬ ಸುದ್ದಿ ಹೊರಬಿದ್ದ ಬೆನ್ನಲ್ಲೇ ಜೆಡಿಎಸ್ ಪಕ್ಷದೊಂದಿಗೆ ಮಾತುಕತೆ ನಡೆಸುವ ಜವಾಬ್ದಾರಿಯನ್ನು ರಾಜ್ಯ ಬಿಜೆಪಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಹೆಗಲಿಗೇರಿಸಿದೆ. ಕಲಬುರಗಿ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಅಧಿಕಾರ ಹಿಡಿಯುವ …
Read More »ವಿಧಾನ ಪರಿಷತ್ ಸಭಾ ನಾಯಕರಾಗಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ನಾಮ ನಿರ್ದೇಶನ
ಬೆಂಗಳೂರು: ವಿಧಾನ ಪರಿಷತ್ ಸಭಾ ನಾಯಕರಾಗಿ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಖಾತೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರನ್ನು ನಾಮ ನಿರ್ದೇಶನ ಮಾಡಲಾಗಿದೆ. ಈಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವಿಧಾನ ಪರಿಷತ್ ಸಭಾಪತಿಗೆ ಬಸವರಾಜ ಹೊರಟ್ಟಿ ಅವರಿಗೆ ಅಧಿಕೃತ ಮಾಹಿತಿ ನೀಡಿದ್ದಾರೆ. ಜಾತಿಗಣತಿ ವರದಿ ಬಿಡುಗಡೆಗೆ ಸರ್ಕಾರ ಮುಕ್ತ ಮನಸ್ಸಿನಿಂದ ಸಿದ್ಧವಿದೆ: ಸಚಿವ ಕೋಟ ಶ್ರೀನಿವಾಸ ಪೂಜಾರಿ ಜಾತಿಗಣತಿ ವರದಿಗೆ 170 ಕೋಟಿ ರೂಪಾಯಿ ಖರ್ಚಾಗಿದ್ದು, …
Read More »ಆಪರೇಷನ್ ಕಮಲ; ಎಲ್ಲೂ ಹೋಗದೆ ರೆಸಾರ್ಟ್ನಲ್ಲೇ ಉಳಿದುಕೊಂಡ ಕಲಬುರಗಿ JDS ಕಾರ್ಪೊರೇಟರ್ಗಳು
ಬೆಂಗಳೂರು: ಇತ್ತೀಚೆಗಿನ ಕಲಬುರಗಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಗೆದ್ದ ನಾಲ್ವರು ಜೆಡಿಎಸ್ ಕಾರ್ಪೊರೇಟರ್ಗಳು ಆಪರೇಷನ್ ಕಮಲದ ಭೀತಿಯಿಂದ ಬೆಂಗಳೂರಿನಲ್ಲೇ ಉಳಿದುಕೊಂಡಿದ್ದಾರೆ ಎನ್ನಲಾಗಿದೆ. ಯಾರಿಗೆ ಬೆಂಬಲ ನೀಡಬೇಕು ಎಂದು ಸೆಪ್ಟೆಂಬರ್ 7ನೇ ತಾರೀಕಿನಂದು ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಮತ್ತು ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರನ್ನು ಭೇಟಿ ಮಾಡಿ ಚರ್ಚಿಸಿದ ಪಾಲಿಕೆ ಸದದ್ಯರು ಇನ್ನೂ ನಗರದ ಈಗಲ್ ಟನ್ ರೆಸಾರ್ಟ್ನಲ್ಲೇ ಉಳಿದುಕೊಂಡಿದ್ದಾರೆ. ಕಳೆದ ನಾಲ್ಕ ದಿನಗಳಿಂದ ಈಗಲ್ ಟನ್ …
Read More »ಅಡುಗೆ ಮನೆಗೆ ಭೇಟಿ ಕೊಟ್ಟ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿದ್ದೇನು?
ಬೆಂಗಳೂರು: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ದರ ಹೆಚ್ಚಳ ಕುರಿತಂತೆ ಕೇಂದ್ರ ಸರ್ಕಾರ ವಿರುದ್ಧ ಅಭಿಯಾನವನ್ನು ಆರಂಭ ಮಾಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು, ಗ್ಯಾಸ್ ಸಿಲಿಂಡರ್ ಬೆಲೆ ಗಗನಕ್ಕೇ ಏರಿರುವ ಕುರಿತಂತೆ ಮಾತನಾಡಿ ಕಿಡಿಕಾರಿದ್ದಾರೆ. ಪ್ರಿಯ ಸ್ನೇಹಿತರೇ, ವಿಶೇಷವಾಗಿ ತಾಯಂದ್ರೇ, ಅಕ್ಕ-ತಂಗಿಯರೇ ಈ ವಾರ ಗಂಭೀರವಾದ ಪ್ರಶ್ನೆಯೊಂದನ್ನ ನಿಮ್ ಮುಂದೆ ಇಡ್ತಿದ್ದೀನಿ ಎಂದು ಆಡುಗೆ ಮನೆಯಲ್ಲಿ ಟೀ ಕುಡಿಯುತ್ತಾ ಮಾತನಾಡಿರುವ ಡಿಕೆಎಸ್, ಎಲ್ಪಿಜಿ ಗ್ಯಾಸ್ ಬೆಲೆ ಇಳಿಕೆಯಾಗಬೇಕಾ? ಬೇಡವಾ? …
Read More »ಸಾಲ ಬಾದೆ ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡ ರೈತ
ಕಲಬುರಗಿ: ಸಾಲ ಬಾದೆ ತಾಳಲಾರದೆ ರೈತನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಲಬುರಗಿಯಲ್ಲಿ ನಡೆದಿದೆ. ಮಹಾಂತಪ್ಪ ( 45 ) ಆತ್ಮಹತ್ಯೆ ಮಾಡಿಕೊಂಡ ರೈತ. ಅಫಾಜಲ್ಪುರ್ ತಾಲ್ಲೂಕಿನ ದಿಕ್ಸಂಗಾ ಗ್ರಾಮದಲ್ಲಿ ತನ್ನ ಸ್ವಂತ ಹೊಲದಲ್ಲೇ ಕ್ರಿಮಿನಾಷಕ ಔಷಧ ಸೇವಿಸಿ ರೈತ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕ್ರಿಮಿನಾಷಕ ಔಷಧ ಸೇವನೆ ಮಾಡಿದ ಕೂಡಲೇ ರೈತನನ್ನು ಖಾಸಗಿ ಆಸ್ಪತ್ರೆಯೊಂದಕ್ಕೆ ದಾಖಲು ಮಾಡಲಾಗಿದೆ. ಈಗ ಚಿಕಿತ್ಸೆ ಫಲಕಾರಿಯಾಗದೆ ರೈತ ಸಾವನ್ನಪ್ಪಿದ್ದಾರೆ. ರೈತ ಬ್ಯಾಂಕ್ ಮಾತ್ರವಲ್ಲದೇ ಲಕ್ಷಾಂತರ ರೂಪಾಯಿ ಕೈ …
Read More »ಗಣೇಶ ವಿಸರ್ಜನೆ ವೇಳೆ ಪೊಲೀಸರನ್ನೇ ತಳ್ಳಾಡಿದ ಯುವಕರು
ಹಾಸನ: ಗಣೇಶ ವಿಸರ್ಜನೆ ವೇಳೆ ಯುವಕರ ಗುಂಪೊಂದು ಪೊಲೀಸರನ್ನೇ ತಳ್ಳಾಡಿದ ಘಟನೆ ಹಾಸನದಲ್ಲಿ ನಡೆದಿದೆ. ಡಿಜೆ ಡ್ಯಾನ್ಸ್ ತಡೆಯಲು ಮುಂದಾದ ಪೊಲೀಸ್ ಅಧಿಕಾರಿಯ ಮೇಲೆ ದುಂಡಾ ವರ್ತನೆ ತೋರಿದ್ದಾರೆ. ಸಕಲೇಶಪುರ ಪಟ್ಟಣದಲ್ಲಿ ಘಟನೆ ನಡೆದಿದೆ. ಯುವಕರು ಡಿಜೆ ಸೌಂಡಿಗೆ ಡ್ಯಾನ್ಸ್ ಮಾಡುತ್ತಿದ್ದರು. ಈ ಸಂದರ್ಭದಲ್ಲಿ ಡಿಜೆ ಡ್ಯಾನ್ಸ್ ತಡೆಯಲು ಹೋದ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಬಸವರಾಜು ಚಿಂಚೋಳಿ ಮತ್ತು ಯುವಕರ ನಡುವೆ ಮಾತಿಗೆ ಮಾತು ಬೆಳೆದಿದೆ. ಇನ್ನು, ಗಲಾಟೆಗೆ ಜೋರಾಗಿಯೇ ನಡೆದಿದ್ದು …
Read More »
Laxmi News 24×7