Breaking News

ರಾಜಕೀಯ

ಚಳಿಗಾಲದ ಅಧಿವೇಶನ ಬೆಳಗಾವಿಯಲ್ಲಿ ನಡೆಯುತ್ತದೆ: ಹೊರಟ್ಟಿ

ಧಾರವಾಡ: ಚಳಿಗಾಲದ ಅಧಿವೇಶನ ಬೆಳಗಾವಿದಲ್ಲಿ ನಡೆಯುತ್ತದೆ ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದಿನ ಸಿಎಂ ಇದ್ದಾಗಲೂ ನಾನು ಬೆಳಗಾವಿ ಅಧಿವೇಶನದ ಬಗ್ಗೆ ಪತ್ರ ಬರೆದಿದ್ದೆ, ತೀರ್ಮಾನ ಮಾಡುವಂತೆ ಒತ್ತಾಯ ಮಾಡಿದ್ದೆ. ಆದರೆ ಒಟ್ಟು 900 ಅಧಿಕಾರಿಗಳು, ಶಾಸಕರು ಸೇರಿ ಬಹಳ ಜನ ಆಗುತ್ತಾರೆ. ಈಗ ಮಳೆಗಾಲ ಇದೆ, ಕೋವಿಡ್ ಕೂಡ ಇದೆ ಎಂದು ಅಧಿವೇಶನವನ್ನು ಬೆಂಗಳೂರಿನಲ್ಲೇ ನಡೆಸಿದರು ಎಂದರು .ಈ …

Read More »

ಇಲಾಖೆಯಲ್ಲಿ ಅನಗತ್ಯ ಖರ್ಚಿಗೆ ಕಡಿವಾಣ ಹಾಕುವುದು ನಮ್ಮ ಗುರಿ: ಸಚಿವ ಕೋಟ ಶ್ರೀನಿವಾಸ್ ಪೂಜಾರಿ

ಬೆಂಗಳೂರು :ರಾಜ್ಯದ ವಿವಿಧ ಇಲಾಖೆಯಲ್ಲಿನ ಅನಗತ್ಯ ಖರ್ಚುಗಳಿಗೆ ಕಡಿವಾಣ ಹಾಕುವುದೇ ನಮ್ಮ ಮೊದಲ ಗುರಿ ಎಂದು ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಹೇಳಿದ್ದಾರೆ. ಮಲ್ಲೇಶ್ವರಂನ ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಅಧ್ಯಕ್ಷರ ಸೂಚನೆಯಂತೆ ಪಕ್ಷದ ಕಚೇರಿಗೆ ಬಂದಿದ್ದೇವೆ, ಅಹವಾಲುಗಳನ್ನು ಸ್ವೀಕಾರ ಮಾಡಿದ್ದೇವೆ ಅಲ್ಲದೆ ಪ್ರತೀ ದಿನ ಕಾರ್ಯಾಲಯಕ್ಕೆ ಬಂದು ಅಹವಾಲು ಸ್ವೀಕಾರಕ್ಕೆ ಸೂಚನೆಯನ್ನೂ ನೀಡಿದ್ದೇವೆ ಎಂದರು. ಸಮಾಜ ಕಲ್ಯಾಣ ಇಲಾಖೆಯಲ್ಲಿ 1.20 ಕೋಟಿ ಕುಟುಂಬ ಇದೆ. ಅವರಿಗೆ …

Read More »

ಕೋವಿಡ್ : ಮನೆಮನೆಗೆ ತೆರಳಿ ಲಸಿಕೆ ನೀಡಿಯೆಂದು ಆದೇಶಿಸಲು ಸಾಧ್ಯವಿಲ್ಲ : ಸುಪ್ರೀಂ ಅಭಿಪ್ರಾಯ

ನವ ದೆಹಲಿ : ದೇಶದಲ್ಲಿನ ಕೋವಿಡ್ 19 ಪರಿಸ‍್ಥಿತಿಯನ್ನು ಅವಲೋಕಿಸಿದರೇ, ಈಗಿರುವ ಲಸಿಕೆ ನೀತಿಯನ್ನು ರದ್ದುಗೊಳಿಸುವಂತೆ ನಿರ್ದೇಶನ ನೀಡಲು ಆಗುವುದಿಲ್ಲ, ಮಾತ್ರವಲ್ಲದೇ, ಪ್ರಸ್ತು ಸ್ಥಿತಿಯಲ್ಲಿ ಮನೆ ಮನೆಗೆ ಹೋಗಿ ಲಸಿಕೆಯನ್ನು ನೀಡಿ ಎಂದು ಆದೇಶಿಸಲು ಸಾಧ್ಯವಿಲ್ಲವೆಂದು ಇಂದು(ಸಪ್ಟೆಂಬರ್ 8) ಸುಪ್ರೀಂ ಕೋರ್ಟ್ ಅಭಿಪ್ರಾಯ ಪಟ್ಟಿದೆ. ಯುವ ವಕೀಲರ ಸಂಘವೊಂದು ಅಂಗವಿಕಲರು, ಗಂಭೀರ ಕಾಯಿಲೆಗಳಿಂದ ಬಳಲುತ್ತಿರುವ ದುರ್ಬಲ ವರ್ಗದವರಿಗೆ ಹಾಗೂ ಕೋವಿನ್‌ ಪೋರ್ಟಲ್‌ ನಲ್ಲಿ ಹೆಸರು ನೋಂದಾಯಿಸಕೊಳ್ಳಲಾಗದೇ, ಲಸಿಕೆ ಸಿಗದೇ ಸಮಸ್ಯೆ …

Read More »

ಡ್ರಗ್ಸ್​ ‘ಸುಳಿ’ಯಲ್ಲಿ ರಾಣಾ ದಗ್ಗುಬಾಟಿ.. ED ಮುಂದೆ ಹಾಜರ

ಬಾಹುಬಲಿ ನಟಿ, ಟಾಲಿವುಡ್​ ಸ್ಟಾರ್​ ರಾಣಾ ದಗ್ಗುಬಾಟಿ ಇಂದು ಜಾರಿ ನಿರ್ದೇಶನಾಲಯ (ಇ.ಡಿ) ಎದುರು ಹಾಜರಾಗಿದ್ದಾರೆ. 2017ರ ಡ್ರಗ್ಸ್​ ಪ್ರಕರಣದ ಸಂಬಂಧ ರಾಣಾ ವಿಚಾರಣೆಗೆ ಎದುರಾಗಿದ್ದು, ಹೈದರಾಬಾದ್​​ನ ಇ.ಡಿ ಕಚೇರಿಗೆ ಇಂದು ಬೆಳಗ್ಗೆ ಆಗಮಿಸಿದರು. ಇ.ಡಿ ಅಧಿಕಾರಿಗಳು ಟಾಲಿವುಡ್​​ನ ಹಲವು ನಟ ನಟಿಯರಿಗೆ ಪ್ರಕರಣದ ಸಂಬಂಧ ನೋಟಿಸ್ ಜಾರಿ ಮಾಡಿ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದ್ದರು. ವರದಿಗಳ ಅನ್ವಯ 2017ರಲ್ಲಿ ಎಸ್​​​ಐಟಿ ವಿಚಾರಣೆ ನಡೆಸಿದ ಸಂದರ್ಭದಲ್ಲಿ ರಾಣಾ ವಿಚಾರಣೆಗೆ ಹಾಜರಾಗಿರಲಿಲ್ಲ. …

Read More »

ಅನುಶ್ರೀ ಜೊತೆ ಮಾದಕ ವಸ್ತು ಸೇವಿಸಿ ಡ್ರಿಂಕ್ಸ್ ಪಾರ್ಟಿ ಮಾಡಿರ್ತೇನೆ’ -ಚಾರ್ಜ್​ಶೀಟ್​ನಲ್ಲಿ ಕಿಶೋರ್​ ಶೆಟ್ಟಿ ಹೇಳಿಕೆ ಉಲ್ಲೇಖ

ಬೆಂಗಳೂರು: ಆಯಂಕರ್ ಅನುಶ್ರೀ ವಿರುದ್ಧದ ಡ್ರಗ್​​ ಕೇಸ್​​ಗೆ ಸಂಬಂಧಿಸಿದಂತೆ ತನಿಖೆ ನಡೆಸಿರುವ ಸಿಸಿಬಿ ಅಧಿಕಾರಿಗಳು ತಯಾರಿ ಮಾಡಿರುವ ಚಾರ್ಜ್​ಶೀಟ್​ ಲಭ್ಯವಾಗಿದೆ. ಈ ಪ್ರಕರಣದಲ್ಲಿ ಅನುಶ್ರೀ ಆರೋಪಿ‌ ಅಲ್ಲ. ಮಂಗಳೂರು ಡ್ರಗ್​​ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಕಿಶೋರ್ ಕೊಟ್ಟ ಹೇಳಿಕೆಯಲ್ಲಿ ಅನುಶ್ರೀ ಹೆಸರು ಬಂದಿದೆ. ಅನುಶ್ರೀ ಜೊತೆ ಸೇರಿ ಡ್ರಗ್ ಸೇವನೆ ಮಾಡಿರೋದಾಗಿ ಕಿಶೋರ್​ ಶೆಟ್ಟಿ ಹೇಳಿದ್ದಾನೆ. ಆತನ ಹೇಳಿಕೆಯನ್ನ ತನಿಖಾಧಿಕಾರಿಗಳು ಉಲ್ಲೇಖಿಸಿದ್ದಾರೆ.     ಚಾರ್ಜ್​ಶೀಟ್​ನಲ್ಲಿ ಏನಿದೆ..? ನಾನು ಸುಮಾರು …

Read More »

ರೈತರ ವಿರುದ್ಧ ‘ತಲೆ ಉರುಳಿಸುವ’ ಹೇಳಿಕೆ: ಐಎಎಸ್ ಅಧಿಕಾರಿ ವಿರುದ್ಧ ರೈತರ ಆಕ್ರೋಶ

ಕರ್ನಾಲ್ (ಹರಿಯಾಣ) (ಪಿಟಿಐ): ರೈತರ ವಿರುದ್ಧ ‘ತಲೆ ಉರುಳಿಸುವ’ ಹೇಳಿಕೆ ನೀಡಿದ್ದ ಐಎಎಸ್ ಅಧಿಕಾರಿ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಒತ್ತಾಯಿಸಿ ಸಂಯುಕ್ತ ಕಿಸಾನ್ ಮೋರ್ಚಾದ (ಎಸ್‌ಕೆಎಂ) ನೇತೃತ್ವದಲ್ಲಿ ಮಂಗಳವಾರ ಇಲ್ಲಿ ಬೃಹತ್ ಪ್ರತಿಭಟನೆ ನಡೆಯಿತು. ತಮ್ಮ ಬೇಡಿಕೆಗಳನ್ನು ಈಡೇರಿಸದಿದ್ದರೆ ಜಿಲ್ಲಾಡಳಿತ ಕಚೇರಿಯನ್ನು ವಶಕ್ಕೆ ತೆಗೆದುಕೊಳ್ಳುವುದಾಗಿ ರೈತರು ಎಚ್ಚರಿಸಿ ದರು. ಜಿಲ್ಲಾಧಿಕಾರಿ ಕಚೇರಿವರೆಗೆ ಮೆರವಣಿಗೆ ನಡೆಸುತ್ತಿದ್ದ ರೈತರನ್ನು ಚದುರಿಸಲು ಪೊಲೀಸರು ಜಲಫಿರಂಗಿ ಪ್ರಯೋಗಿಸಿದರು. ಇದಕ್ಕೂ ಮುನ್ನ ರೈತ ಸಂಘಟನೆ ಗಳು ಮಹಾಪಂಚಾಯಿತಿ …

Read More »

ದೇಗುಲ ಆಸ್ತಿಗೆ ದೇವರೇ ಮಾಲೀಕ, ಅರ್ಚಕನಲ್ಲ: ದೇವಾಲಯ ಭೂಮಿಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಮಹತ್ವದ ತೀರ್ಪು

ನವದೆಹಲಿ: ದೇವಾಲಯಗಳಿಗೆ ಮೀಸಲಾದ ಆಸ್ತಿಯ ಒಡೆತನ ವಿಚಾರಕ್ಕೆ ಸಂಬಂಧಿಸಿದಂತೆ ಸರ್ವೋಚ್ಚ ನ್ಯಾಯಾಲಯ ಮಹತ್ವದ ತೀರ್ಪು ನೀಡಿದ್ದು, ದೇವಾಲಯದ ಭೂಮಿಗೆ ದೇವರೇ ಮಾಲೀಕ ಎಂದು ತಿಳಿಸಿದೆ. ಯಾವುದೇ ದೇವಾಲಯಗಳ ಆಸ್ತಿಗೆ ಅರ್ಚಕರು ಒಡೆಯರಲ್ಲ, ದೇವರೇ ನಿಜವಾದ ಮಾಲೀಕ ಎಂದು ಸುಪ್ರೀಂಕೋರ್ಟ್ ತಿಳಿಸಿದೆ. ದೇವಾಲಯಗಳಿಗೆ ಮೀಸಲಾದ ಭೂದಾಖಲೆಗಳಲ್ಲಿ ಅರ್ಚಕರ ಹೆಸರನ್ನು ಸೇರ್ಪಡೆ ಮಾಡಬೇಕೆಂಬುದರ ಕುರಿತಾಗಿ ಉಂಟಾದ ಗೊಂದಲದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ದ್ವಿಸದಸ್ಯ ಪೀಠ, ದೇಗುಲದ ಭೂಮಿಗೆ ದೇವರೇ ಮಾಲೀಕರಾಗಿದ್ದು, ತಾತ್ಕಾಲಿಕವಾಗಿ …

Read More »

1.06 ಬಿಲಿಯನ್‌ ಡಾಲರ್‌ ಕೊಟ್ಟರೆ ಕೇಸು ವಾಪಸ್‌: ಕೈರ್ನ್ ಎನರ್ಜಿ

ನವದೆಹಲಿ:ಭಾರತ ಸರ್ಕಾರ ಶೀಘ್ರವೇ 1.06 ಬಿಲಿಯನ್‌ ಡಾಲರ್‌ ಮೊತ್ತವನ್ನು ಪಾವತಿಸುವ ವಿಶ್ವಾಸವಿದೆ. ಈ ಮೊತ್ತ ಪಾವತಿ ಮಾಡಿದರೆ, ವಿದೇಶಗಳಲ್ಲಿರುವ ಕೇಂದ್ರದ ಆಸ್ತಿ ವಶಪಡಿಸಿಕೊಳ್ಳುವುದನ್ನು ಕೈ ಬಿಡುವುದಾಗಿ ಕೈರ್ನ್ ಎನರ್ಜಿ ಮಂಗಳವಾರ ಹೇಳಿದೆ. ಭಾರತದ 1.06 ಶತ ಕೋಟಿ ಡಾಲರ್‌ ಮರು ಪಾವತಿ ಆಫ‌ರ್‌ ಅನ್ನು ನಾವು ಸ್ವೀಕರಿಸಿದ್ದು, ತೆರಿಗೆ ವಿವಾದ ಶೀಘ್ರವೇ ಇತ್ಯರ್ಥಗೊಳ್ಳಲಿದೆ ಎಂದು ಕೈರ್ನ್ ಎನರ್ಜಿ ಸಿಇಒ ಸಿಮೊನ್‌ ಥಾಮ್ಸನ್‌ ಹೇಳಿದ್ದಾರೆ. ಕೇಂದ್ರ ಸರ್ಕಾರದ ಜತೆಗೆ ದೀರ್ಘ‌ ಕಾಲದಿಂದ ಇರುವ ವಿವಾದ …

Read More »

ದೇಶದಲ್ಲಿ ಕೋವಿಡ್ ದಿಂದಾಗಿ ಕಡಿಮೆಯಾಗಿದ್ದ ವಾಹನ ಮಾರಾಟ ಪ್ರಮಾಣ ಇದೀಗ ಮತ್ತೆ ಏರಿಕೆ

ನವದೆಹಲಿ: ದೇಶದಲ್ಲಿ ಕೋವಿಡ್ ದಿಂದಾಗಿ ಕಡಿಮೆಯಾಗಿದ್ದ ವಾಹನ ಮಾರಾಟ ಪ್ರಮಾಣ ಇದೀಗ ಮತ್ತೆ ಏರಿಕೆಯಾಗಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷದ ಆಗಸ್ಟ್‌ನಲ್ಲಿ ಪ್ರಯಾಣಿಕ ವಾಹನಗಳ ಮಾರಾಟ ಶೇ.39 ಏರಿಕೆಯಾಗಿದೆ ಎಂದು ಆಟೋಮೊಬೈಲ್‌ ವಿತರಕ ಸಂಘಗಳ ಒಕ್ಕೂಟ (ಎಫ್‌ಎಡಿಎ) ತಿಳಿಸಿದೆ. ಕಳೆದ ವರ್ಷ ಆಗಸ್ಟ್‌ನಲ್ಲಿ 1,82,651 ವಾಹನ ಮಾರಾಟ ವಾಗಿತ್ತು, ಈ ವರ್ಷ ಆಗಸ್ಟ್‌ಗೆ ಅದು 2,53,363ಕ್ಕೆ ಏರಿಕೆಯಾಗಿದೆ. ಕಳೆದ ಆಗಸ್ಟ್‌ ಗೆ 9,15,126 ಬೈಕುಗಳು ಮಾರಾಟವಾಗಿದ್ದು, ಈ ವರ್ಷ 9,76,051ಕ್ಕೆ ಏರಿದೆ. ವಾಣಿಜ್ಯ …

Read More »

ದ.ಕ.ಜಿಲ್ಲೆಯ ಪ್ರಮುಖ ದೇವಸ್ಥಾನಗಳ ನಿರ್ಬಂಧ ಸಡಿಲಿಕೆ ..!

ಮಂಗಳೂರು: ಕೋವಿಡ್ ಸೋಂಕು ನಿಯಂತ್ರಣದ ಹಿನ್ನಲೆಯಲ್ಲಿ ದ.ಕ.ಜಿಲ್ಲೆಯ ಪ್ರಮುಖ ದೇವಸ್ಥಾನಗಳಿಗೆ ಸಂಬಂಧಿಸಿದಂತೆ ಈ ಹಿಂದೆ ವಿಧಿಸಲಾಗಿದ್ದ ಕೆಲವು ನಿರ್ಬಂಧ, ಮಾರ್ಗಸೂಚಿಗಳನ್ನು ಹಿಂಪಡೆದು ದ.ಕ.ಜಿಲ್ಲಾಧಿಕಾರಿ ಆದೇಶ ನೀಡಿದ್ದಾರೆ. ಶ್ರೀಕ್ಷೇತ್ರ ಧರ್ಮಸ್ಥಳ ಮತ್ತು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಗಳು ಸೇರಿದಂತೆ ಪ್ರಮುಖ ದೇವಸ್ಥಾನಗಳು ವಾರಾಂತ್ಯಗಳನ್ನು ಹೊರತುಪಡಿಸಿ ಭಕ್ತಾದಿಗಳಿಗೆ ಬೆಳಗ್ಗೆ 7 ರಿಂದ ಸಂಜೆ 7 ರವರೆಗೆ ಮಾತ್ರ ತೆರೆದಿರುತ್ತದೆ. ಈ ಸಂದರ್ಭ ಭಕ್ತಾದಿಗಳು ಕಡ್ಡಾಯವಾಗಿ ಸಾಮಾಜಿಕ ಅಂತರ, ಅಗತ್ಯ ಕೋವಿಡ್ ನಿಯಂತ್ರಣ ಮುಂಜಾಗ್ರತಾ …

Read More »