Breaking News

ರಾಜಕೀಯ

ಪಿಡಿಒನನ್ನು ಹೊರದಬ್ಬಿ ಪಂಚಾಯಿತಿ ಕಚೇರಿಗೆ ಬೀಗ ಜಡಿದ ಗ್ರಾಪಂ ಸದಸ್ಯರು!

ಚಿಕ್ಕಬಳ್ಳಾಪುರ: ಪಿಡಿಒ ಅವರನ್ನು ಹೊರಗೆ ಹಾಕಿ ಗ್ರಾಮ ಪಂಚಾಯಿತಿ ಕಚೇರಿಗೆ ಸದಸ್ಯರು ಬೀಗ ಜಡಿದ ಘಟನೆ ಗುಡಿಬಂಡೆ ತಾಲೂಕು ವರ್ಲಕೊಂಡ ಗ್ರಾಮದಲ್ಲಿ ಸಂಭವಿಸಿದೆ. ಪಂಚಾಯಿತಿ ಕಾರ್ಯಾಲಯಕ್ಕೆ ಪಿಡಿಒ ಶ್ರೀನಿವಾಸ್​ ಸರಿಯಾಗಿ‌ ಬರುತ್ತಿಲ್ಲ, ಅಭಿವೃದ್ಧಿಗೆ ಸರಿಯಾಗಿ ಸ್ಪಂದಿಸುತ್ತಿಲ್ಲ. ಅಕ್ರಮ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಗ್ರಾಪಂ ಸದಸ್ಯರು ಅಧ್ಯಕ್ಷೆ ಆನಂದಮ್ಮ ನಾರಾಯಣಸ್ವಾಮಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು. ಪಿಡಿಒ ಶ್ರೀನಿವಾಸ್ ಅವರನ್ನ ವರ್ಗಾವಣೆ ಮಾಡುವಂತೆ ಜಿಪಂ ಸಿಇಒ ಸೇರಿದಂತೆ ಮೇಲಧಿಕಾರಿಗಳಿಗೆ ಜನಪತ್ರಿನಿಧಿಗಳು ದೂರು‌ ನೀಡಿದ್ದರು. ಆದರೂ …

Read More »

ಮಹಾನ್ ನಾಯಕರ ಪುತ್ಥಳಿಗಳನ್ನು ತೆರವು ಮಾಡಲು BBMPಯಿಂದ ತಯಾರಿ

ಬೆಂಗಳೂರು :ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಬಿಬಿಎಂಪಿಯಿಂದ ಅನುಮತಿ ಪಡೆಯದೇ ಅಭಿಮಾನಿಗಳು ನಿರ್ಮಿಸಿದ ರಾಜ್ ಕುಮಾರ್, ಶಂಕರ್ ನಾಗ್, ವಿಷ್ಣುವರ್ಧನ್, ಬಸವಣ್ಣ ಸೇರಿದಂತೆ ಮಹಾನ್ ನಾಯಕರ ಪುತ್ಥಳಿಗಳನ್ನು ಶೀಘ್ರದಲ್ಲೇ ತೆರವು ಮಾಡಲು ಬಿಬಿಎಂಪಿ ನಿರ್ಧರಿಸಿದೆ. ಸಿನಿ ಪ್ರೇಮಿಗಳು ತಮಗೆ ಇಷ್ಟವಾದ ನೆಚ್ಚಿನ ನಟರ ಸಂಘಗಳನ್ನು, ಬಳಗಗಳನ್ನು ಮಾಡಿಕೊಂಡು ಏರಿಯಾದಲ್ಲಿ ಪುತ್ಥಳಿಗಳನ್ನು ನಿರ್ಮಿಸಿರುತ್ತಾರೆ. ಅಂತವರ ಕನಸಿನ ಪುತ್ಥಳಿಯ ತೆರವು ಕಾರ್ಯಾಚರಣೆಗೆ ಬಿಬಿಎಂಪಿ ಮುಂದಾಗಿದೆ. ಅಭಿಮಾನಿಗಳು ಅನಧಿಕೃತವಾಗಿ ನಗರದಲ್ಲಿ ಪುತ್ಥಳಿ ಸ್ಥಾಪನೆ ಮಾಡಿದ್ದಾರೆ. ಅವರು ಬಿಬಿಎಂಪಿಯಿಂದ …

Read More »

ನ.1ರಿಂದ ಆಡಳಿತ ಸುಧಾರಣೆ ಜಾರಿ: ಬಸವರಾಜ ಬೊಮ್ಮಾಯಿ

ಬೆಂಗಳೂರು: ಟಿ.ಎಂ. ವಿಜಯ ಭಾಸ್ಕರ್‌ ನೇತೃತ್ವದ ಆಡಳಿತ ಸುಧಾರಣಾ ಆಯೋಗದ ಮೊದಲ ವರದಿಯಲ್ಲಿನ ಶಿಫಾರಸುಗಳನ್ನು ನವೆಂಬರ್‌ 1ರಿಂದ ಅನುಷ್ಠಾನಕ್ಕೆ ತರಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಆಡಳಿತ ಸುಧಾರಣಾ ಆಯೋಗದ ಶಿಫಾರಸುಗಳ ಅನುಷ್ಠಾನಕ್ಕಾಗಿ ಸಲಹಾ ಸಮಿತಿ ರಚಿಸಲಾಗುವುದು. ಸಮಿತಿಯ ಸಲಹೆಗಳ ಆಧಾರದಲ್ಲಿ ನ.1ರಿಂದಲೇ ಅನುಷ್ಠಾನಕ್ಕೆ ಚಾಲನೆ ನೀಡಲಾಗುವುದು’ ಎಂದರು. ವಿವಿಧ ಇಲಾಖೆಗಳಿಗೆ ಸಂಬಂಧಿಸಿದಂತೆ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳ …

Read More »

ವ್ಯಾಕ್ಸಿನ್ ಪಡೆಯದಿದ್ದರೆ ರೇಷನ್ ಕೊಡಲ್ಲ ಅನ್ನೋದು ತಪ್ಪು : ಸಿಎಂ ಬಸವರಾಜ ಬೊಮ್ಮಾಯಿ

ಹಾವೇರಿ : ರಾಜ್ಯದಲ್ಲಿ ಕೊರೊನಾ ಲಸಿಕೆ ಪಡೆಯದವರಿಗೆ ರೇಷನ್ ಕೊಡಲ್ಲ ಎಂಬುದರ ಕುರಿತಂತೆ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದು, ವ್ಯಾಕ್ಸಿನ್ ಪಡೆಯದಿದ್ದರೆ ರೇಷನ್ ಕೊಡಲ್ಲ ಅನ್ನೋದು ತಪ್ಪು ಎಂದು ಹೇಳಿದ್ದಾರೆ. ಹಾವೇರಿ ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ಬಾಡ ಗ್ರಾಮದಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ, ಕೊರೊನಾ ಲಸಿಕೆ ಪಡೆಯದಿದ್ದರೆ ರೇಷನ್ ಕೊಡಲ್ಲ ಅನ್ನೋದು ತಪ್ಪು, ಜನರ ಮನವೊಲಿಸಿ ಕೋವಿಡ್ ವ್ಯಾಕ್ಸಿನ್ ಹಾಕಿಸಬೇಕು ಎಂದು ಹೇಳಿದ್ದಾರೆ. ಇನ್ನು ಚಾಮರಾಜನಗರ ಜಿಲ್ಲೆಯಲ್ಲಿ ಕೊರೊನಾ …

Read More »

ಕ್ರೀಡಾಪಟುಗಳಿಗೆ ಗುಡ್ ನ್ಯೂಸ್ : ಕರ್ನಾಟಕ ಪೊಲೀಸ್ ಕಾನ್ಸ್ ಟೇಬಲ್-ಸಬ್ ಇನ್ಸ್ ಪೆಕ್ಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು : ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು ಕ್ರೀಡಾಪಟುಗಳಿಗೆ ಸಿಹಿಸುದ್ದಿ ನೀಡಿದ್ದು, ಕರ್ನಾಟಕ ರಾಜ್ಯ ಪೊಲೀಸ್ ಕಾನ್ ಸ್ಟೆಬಲ್ ಮತ್ತು ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಪೋಸ್ಟ್ ಗಳಿಗೆ (ಸಿವಿಲ್) (ಪುರುಷರು ಮತ್ತು ಮಹಿಳೆಯರು) ಇನ್-ಸರ್ವೀಸ್ ಮತ್ತು ಕಲ್ಯಾಣ ಕರ್ನಾಟಕ (ಸ್ಥಳೀಯ) ಇನ್-ಸರ್ವೀಸ್ ಪೋಸ್ಟ್ ಗಳು ಸೇರಿದಂತೆ ನೇಮಕಾತಿಗಾಗಿ ಪ್ರತಿಭಾನ್ವಿತ ಕ್ರೀಡಾಪಟುಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.   ಒಟ್ಟು 100 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ನಮೂನೆಗಳು ಕರ್ನಾಟಕ ರಾಜ್ಯ ಪೊಲೀಸ್ …

Read More »

ಸರ್ಕಾರಿ ಕಚೇರಿಗಳ ನೌಕರರಿಗೆ ಸಾರ್ವತ್ರಿಕ ರಜೆಯನ್ನು ಮತ್ತು ಖಾಸಗಿ ಹಾಗೂ ಇತರ ನೌಕರರಿಗೆ ವೇತನ ಸಹಿತ ರಜೆ

ಧಾರವಾಡ: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಸಾರ್ವತ್ರಿಕ ಚುನಾವಣೆಯು ಸೆಪ್ಟೆಂಬರ್ 3 ರಂದು ನಡೆಯಲಿದೆ. ಅಂದು ಬೆಳಿಗ್ಗೆ 7 ಗಂಟೆಯಿಂದ ಸಾಯಂಕಾಲ 6 ಗಂಟೆವರೆಗೆ ಮತದಾನ ನಡೆಯಲಿದೆ.   ಮತದಾನ ದಿನದಂದು ಮಹಾನಗರ ಪಾಲಿಕೆಯ ವ್ಯಾಪ್ತಿಯ ಸರ್ಕಾರಿ ಕಚೇರಿಗಳ ನೌಕರರಿಗೆ ಸಾರ್ವತ್ರಿಕ ರಜೆಯನ್ನು ಮತ್ತು ಖಾಸಗಿ ಹಾಗೂ ಇತರ ನೌಕರರಿಗೆ ವೇತನ ಸಹಿತ ರಜೆ ಮಂಜೂರು ಮಾಡಿ, ರಾಜ್ಯ ಚುನಾವಣಾ ಆಯೋಗವು ಅಧಿಸೂಚನೆ ಹೊರಡಿಸಿದ್ದು, ಮಹಾನಗರ ವ್ಯಾಪ್ತಿಯ ಎಲ್ಲ ಸರ್ಕಾರಿ, ಅರೆ …

Read More »

ಪದಾಧಿಕಾರಿಗಳ ಸಭೆಯಲ್ಲಿ ಡಿಕೆ ಶಿವಕುಮಾರ್ ಗರಂ

ಬೆಂಗಳೂರು (ಸೆ.01): ರಾಜ್ಯ ಕಾಂಗ್ರೆಸ್‌ಗೆ ಪ್ರತ್ಯೇಕ ಸಂವಿಧಾನ ರಚಿಸಲು ಮುಂದಾಗಿದ್ದು, ಇದರ ಹೊಣೆಯನ್ನು ಹಿರಿಯ ಮುಖಂಡ ವಿ.ಎಸ್‌. ಉಗ್ರಪ್ಪ ಅವರಿಗೆ ನೀಡಲಾಗಿದೆ. ಅದು ಸಿದ್ಧವಾದ ನಂತರ ಕಾಂಗ್ರೆಸ್‌ ಕಾರ್ಯಕರ್ತರು ಅದರಂತೆ ನಡೆದುಕೊಳ್ಳಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ಮಂಗಳವಾರ ರೇಸ್‌ಕೋರ್ಸ್‌ ರಸ್ತೆಯಲ್ಲಿರುವ ಕಾಂಗ್ರೆಸ್‌ ಭವನದಲ್ಲಿ ಆಯೋಜಿಸಲಾಗಿದ್ದ ಎನ್‌ಎಸ್‌ಯುಐ ರಾಜ್ಯಾಧ್ಯಕ್ಷ ಕೀರ್ತಿ ಗಣೇಶ್‌ ಅವರ ಪದಗ್ರಹಣ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.   ರಾಜ್ಯ ಕಾಂಗ್ರೆಸ್‌ ಸಂವಿಧಾನ ಯಾವ ರೀತಿ ಇರಬೇಕೆಂದು …

Read More »

ಮುಂದಿನ ಚುನಾವಣೆಯಲ್ಲಿ ಮದ್ದೂರು ಕ್ಷೇತ್ರದಿಂದ ಅಭಿಷೇಕ್‌ ಅವರನ್ನು ಕಣಕ್ಕಿಸಲು ಸುಮಲತಾ ಪ್ಲ್ಯಾನ್‌

ಮಂಡ್ಯ: ಚುನಾವಣೆಯಲ್ಲಿ ಕೊಟ್ಟ ಮಾತನ್ನು ಸಂಸದೆ ಸುಮಲತಾ ಅಂಬರೀಶ್‌ ಉಳಿಸಿಕೊಂಡಿದ್ದು, ಮಂಡ್ಯ ಜಿಲ್ಲೆಯ ಹನಕೆರೆ ಗ್ರಾಮದಲ್ಲಿ ಸ್ವಂತ ಮನೆ ನಿರ್ಮಾಣಕ್ಕೆ ಮುಂದಾಗಿದ್ದಾರೆ. ಲೋಕಸಭಾ ಚುನಾವಣೆ ಗೆದ್ದ ವೇಳೆ ಸುಮಲತಾ ಅವರು ಮಂಡ್ಯ ಜಿಲ್ಲೆಯಲ್ಲಿಯೇ ಮನೆ ನಿರ್ಮಾಣ ಮಾಡಿ, ಇಲ್ಲೇ ಇರುತ್ತೇನೆ ಎಂದು ಹೇಳಿದ್ದರು. ಅದರಂತೆ ಇದೀಗ ಇಲ್ಲಿಯೇ ಮನೆ ನಿರ್ಮಾಣ ಶುರು ಮಾಡಿದ್ದಾರೆ.   ಮಂಡ್ಯ-ಮದ್ದೂರು ನಡುವಿನ ಹನಕೆರೆ ಗ್ರಾಮದಲ್ಲಿ ಸುಮಲತಾ ಸ್ವಂತ ಮನೆ ನಿರ್ಮಿಸಲಿದ್ದು, ತಮ್ಮ ತನ್ನ ಆಪ್ತ …

Read More »

ಸಿಎಂ ಬೊಮ್ಮಾಯಿ ಬಿಜೆಪಿ ಪಂಜರದಲ್ಲಿದ್ದಾರಾ?: ಕಟೀಲ್‌ ಹೇಳಿದ್ದಿಷ್ಟು

ಬೆಂಗಳೂರು(ಸೆ.01): ಬಜೆಟ್‌ನಲ್ಲಿ ಘೋಷಣೆ ಮಾಡಿದ ಕಾರ್ಯಕ್ರಮಗಳು ಕಾಲಮಿತಿಯಲ್ಲಿ ಅನುಷ್ಠಾನವಾಗದೆ ವಿಳಂಬವಾಗುತ್ತಿರುವುದಕ್ಕೆ ಸಿಡಿಮಿಡಿಗೊಂಡ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಧಿಕಾರಿಗಳನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ. ವಿಕಾಸಸೌಧದಲ್ಲಿ ಮಂಗಳವಾರ ನಡೆದ ಕೆಡಿಪಿ ಸಭೆಯಲ್ಲಿ ಅಭಿವೃದ್ಧಿ ಕಾರ್ಯಗಳ ಅನುಷ್ಠಾನದಲ್ಲಿ ಅಧಿಕಾರಿಗಳು ಸರಿಯಾಗಿ ತೊಡಗಿಸಿಕೊಳ್ಳದಿರುವುದಕ್ಕೆ ಗರಂ ಆದರು. ಜನರ ಕಲ್ಯಾಣಕ್ಕಾಗಿ ಬಜೆಟ್‌ನಲ್ಲಿ ಕಾರ್ಯಕ್ರಮಗಳನ್ನು ಘೋಷಣೆ ಮಾಡುತ್ತೇವೆ. ಅವುಗಳನ್ನು ಸರಿಯಾಗಿ ಅನುಷ್ಠಾನಗೊಳಿಸಬೇಕು. ಇಲ್ಲದಿದ್ದರೆ ಅಧಿಕಾರಿಗಳನ್ನು ಹೊಣೆ ಮಾಡಿ ಶಿಸ್ತು ಕ್ರಮ ಜರುಗಿಸಬೇಕಾಗುತ್ತದೆ. ಅಭಿವೃದ್ಧಿ ವಿಚಾರದಲ್ಲಿ ಸಾಕಷ್ಟು ದೂರುಗಳು …

Read More »

ತಮಿಳುನಾಡಿಗೆ ಕಾವೇರಿ ನೀರು ಬಿಡಲು ಸೂಚನೆ

ನವದೆಹಲಿ (ಸೆ.01): ಬಹುನಿರೀಕ್ಷಿತ ಕರ್ನಾಟಕದ ಮೇಕೆದಾಟು ಯೋಜನೆಗೆ ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರ ಸಭೆಯಲ್ಲಿ ತೀವ್ರ ವಿರೋಧ ವ್ಯಕ್ತವಾಗಿದೆ. ಈ ಯೋಜನೆಗೆ ತಮಿಳುನಾಡು, ಕೇರಳ ಸೇರಿ ಎಲ್ಲಾ ರಾಜ್ಯಗಳು ಆಕ್ಷೇಪ ವ್ಯಕ್ತಪಡಿಸಿದ್ದು, ಮುಂದಿನ ಸಭೆಯಲ್ಲಿ ಈ ವಿಷಯ ಚರ್ಚೆಗೆ ಬರುವ ಸಾಧ್ಯತೆ ಇದೆ. ಹಾಗೆಯೇ ತಮಿಳುನಾಡು ಕೈಗೊಂಡಿರುವ ಗುಂಡಾರ್‌ ನದಿ ನೀರು ಜೋಡಣೆಗೆ ಕರ್ನಾಟಕ ತೀವ್ರ ಆಕ್ಷೇಪ ವ್ಯಕ್ತಪಡಿಸಿತು. ಇನ್ನು ಇದೇ ವೇಳೆ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಪ್ರಾಧಿಕಾರದ ಅಧ್ಯಕ್ಷ …

Read More »