ಬೆಳಗಾವಿ: ನಗರದ 45ನೇ ವಾರ್ಡ್ ನ ಹಿಂಡಾಲ್ಕೊ ದಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಾಜಶ್ರೀ ನಾಯ್ಕ್ ಪರ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಇಂದು ಮತಯಾಚನೆ ಮಾಡಿದರು. ಈ ಸಂದರ್ಭದಲ್ಲಿ ಸಾರ್ವಜನಿಕರನ್ನುದ್ದೇಶಿಸಿ ಮಾತನಾಡಿದ ಅವರು, ನಾನು ಉಸ್ತುವಾರಿ ಸಚಿವ ಹಾಗೂ ಫೀರೋಜ್ ಸೇಠ್ ಶಾಸಕರಾಗಿದ್ದ ಸಂದರ್ಭದಲ್ಲಿ ಸಮೀಪದ ಬಸವನಕೊಳ್ಳ ಅರಣ್ಯಭೂಮಿಯಲ್ಲಿ ನೀರಿನ ಶುದ್ಧೀಕರಣ ಘಟಕ ನಿರ್ಮಿಸುವ ಮೂಲಕ 45ನೇ ವಾರ್ಡ್ ಸೇರಿ ಸುತ್ತಮುತ್ತಲಿನ ಪ್ರದೇಶಗಳಿಗೆ ಕುಡಿಯುವ …
Read More »ಮೈಸೂರು ಅತ್ಯಾಚಾರ ಪ್ರಕರಣದ ತನಿಖಾ ವಿಧಾನಕ್ಕೆ ಆಕ್ಷೇಪ
ಮೈಸೂರು: ಪ್ರಕರಣವನ್ನು ಪೊಲೀಸರು ನಿರ್ವಹಿಸಿದ ರೀತಿಗೆ ಆಕ್ಷೇಪ ವ್ಯಕ್ತವಾಗಿದೆ. ದೆಹಲಿ ಪ್ರಕರಣದಷ್ಟು ಗಂಭೀರವಾಗಿ ನಿರ್ವಹಿಸಿಲ್ಲ ಎಂಬ ಅಸಮಾಧಾನ ಕೇಳಿಬಂದಿದೆ. ‘ತನಿಖೆ ಪೂರ್ಣಗೊಳ್ಳುವ ಮುನ್ನವೇ ಆರೋಪಿಗಳ ಭಾವಚಿತ್ರ, ಮತ್ತು ಹೆಸರುಗಳು ಬಹಿರಂಗಗೊಂಡಿರುವುದು ವರ್ಮಾ ಆಯೋಗದ ವರದಿಗೆ ವಿರುದ್ಧ’ ಎಂದು ವಕೀಲರಾದ ಮಂಜುಳಾ ಮಾನಸ ಆಕ್ಷೇಪಿಸಿದ್ದಾರೆ. ಬೆಂಗಳೂರಿನ ವಕೀಲ ಕೆ.ವಿ.ಧನಂಜಯ್ ಅವರೂ ಟ್ವಿಟರ್ನಲ್ಲಿ ಆಕ್ಷೇಪಿಸಿದ್ದಾರೆ. ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ಸೂದ್ ಅವರು ಸುದ್ದಿಗೋಷ್ಠಿಯಲ್ಲಿ ಆರೋಪಿಗಳ ಹೆಸರು, ಚಿತ್ರ ಬಹಿರಂಗಪಡಿಸಲು ನಿರಾಕರಿಸಿದ್ದರು. ಸಂತ್ರಸ್ತೆಯ …
Read More »ಡಿಕೆಶಿಗೆ ಇನ್ನೂ ತಂಡ ಕಟ್ಟಿಕೊಳ್ಳೋಕೆ ಆಗ್ತಿಲ್ಲ : ಸಿ.ಟಿ.ರವಿ
ಕಲಬುರಗಿ : ರಾಜ್ಯದ ಕಾಂಗ್ರೆಸ್ ಅಧ್ಯಕ್ಷರಿಗೆ ಇನ್ನೂ ಕೂಡ ತಂಡ ಕಟ್ಟಿಕೊಳ್ಳೋಕೆ ಆಗ್ತಿಲ್ಲ, ಪಕ್ಷದ ತಂಡವನ್ನೇ ಕಟ್ಟಿಕೊಳ್ಳೊಕ್ಕೆ ಆಗದಿರೋರು ಅಧಿಕಾರಕ್ಕೆ ಬರಲು ಹಗಲುಗನಸು ಕಾಣುವ ನೈತಿಕತೆ ಎಲ್ಲಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಪ್ರಶ್ನಿಸಿದ್ದಾರೆ. ಕಲಬುರಗಿಯಲ್ಲಿ ಸುದ್ದಿಗಾರರೊಂದಿಗೆ ಮಾನತಾಡಿದ ಅವರು, ಮೂರು ಮಹಾನಗರಪಾಲಿಕೆಗಳಲ್ಲಿ ಭಾರತೀಯ ಜನತಾ ಪಕ್ಷ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಇದೇ ವೇಳೆ ಸಿದ್ದರಾಮಯ್ಯ ಪ್ರಕೃತಿ ಚಿಕಿತ್ಸೆ ಬಗ್ಗೆ ಪ್ರತಿಕ್ರಿಯೆ ನೀಡಿ, ಸಿದ್ದರಾಮಯ್ಯ …
Read More »ಕಲ್ಯಾಣ ಕರ್ನಾಟಕ ಹೆಸರು ಬದಲಾಯಿಸಿದಷ್ಟೇ ಬಿಜೆಪಿ ಸಾಧನೆ: ಕುಮಾರಸ್ವಾಮಿ
ಕಲಬುರಗಿ, ;ಕಲ್ಯಾಣ ಕರ್ನಾಟಕ ಎಂದು ಹೆಸರು ಬದಲಾಯಿಸಿದಷ್ಟೇ ಬಿಜೆಪಿ ಸಾಧನೆಯಾಗಿದೆ ಹೊರತು ಹಿಂದುಳಿದ ಈ ಪ್ರದೇಶದ ಅಭಿವೃದ್ಧಿಗೆ ಯಾವುದೇ ರೀತಿಯ ಪ್ರಾಮಾಣಿಕ ಪ್ರಯತ್ನ ಮಾಡಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಟೀಕಿಸಿದರು. ಇಂದಿಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಜೆ ಡಿ ಎಸ್ ನಿಂದ 42 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಕಾಂಗ್ರೆಸ್ ಮತ್ತು ಬಿಜೆಪಿಯಿಂದ ಬಲಿಷ್ಟ ಅಭ್ಯರ್ಥಿಗಳು ಕಣದಲ್ಲಿ ಇದ್ದಾರೆ. ಪಾಲಿಕೆ ಚುನಾವಣೆಯ ಮೂಲಕ ಜೆ ಡಿ ಎಸ್ …
Read More »ಜೆಡಿಎಸ್ ಜೊತೆ ಬಿಜೆಪಿ ಹೊಂದಾಣಿಕೆಯಿಲ್ಲ: ಅರುಣ್ ಸಿಂಗ್
ಮೈಸೂರು: ಜೆಡಿಎಸ್ ಜೊತೆ ಬಿಜೆಪಿ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ. ಅಧಿಕೃತವಾಗಿ, ಅನಧಿಕೃತವಾಗಿ ಯಾವುದೇ ಪಕ್ಷದೊಂದಿಗೆ ಬಿಜೆಪಿ ಹೊಂದಾಣಿಕೆ ಇಲ್ಲ. ಜೆಡಿಎಸ್ ಈಸ್ ಸಿಂಕಿಂಗ್, ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಹೇಳಿದರು. ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ಪಷ್ಟ ಬಹುಮತದೊಂದಿಗೆ ಅಧಿಕಾರ ಹಿಡಿಯುವುದು ನಮ್ಮ ಸಂಕಲ್ಪ. ಜೆಡಿಎಸ್, ಕಾಂಗ್ರೆಸ್ ಎರಡೂ ಸರ್ಕಾರಗಳನ್ನು ಜನ ನೋಡಿದ್ದಾರೆ. ನಾವು ಯಾರೊಂದಿಗೂ ಮೈತ್ರಿ ಮಾಡಿಕೊಳ್ಳುವುದಿಲ್ಲ. ನಮ್ಮದು ವಿಶ್ವದ ಅತಿ …
Read More »ಮಳೆಯಿಂದ ಹಾನಿ: ಉತ್ತರ ಕನ್ನಡದಲ್ಲಿ ಸರ್ವಋತು ರಸ್ತೆ ನಿರ್ಮಾಣ
ಕಾರವಾರ, ಆಗಸ್ಟ್ 30: “ಈ ವರ್ಷದ ಅತಿವೃಷ್ಟಿಯಿಂದ ಹಾನಿಗೊಳಗಾದ ಪ್ರದೇಶಗಳಲ್ಲಿ ಸರ್ವಋತು ರಸ್ತೆಗಳ ಪುನರ್ನಿರ್ಮಾಣಕ್ಕೆ ಮತ್ತು ಇತರ ಕಾಮಗಾರಿಗಳಿಗೆ ಹೆಚ್ಚಿನ ಅನುದಾನಕ್ಕಾಗಿ ಒದಗಿಸುವ ನಿಟ್ಟಿನಲ್ಲಿ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳುವುದಾಗಿ,” ಲೋಕೋಪಯೋಗಿ ಸಚಿವ ಸಿ.ಸಿ. ಪಾಟೀಲ್ ಹೇಳಿದರು. ಇಂದು (ಸೋಮವಾರ) ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ್ರೊಂದಿಗೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಕಳಚೆ ಗ್ರಾಮಕ್ಕೆ ಭೇಟಿ ನೀಡಿದ ಸಚಿವ ಸಿ.ಸಿ. ಪಾಟೀಲ್, …
Read More »ಇಬ್ಬರು ವಿದ್ಯಾರ್ಥಿನಿಯರು ಸೇರಿ ಮೂವರು ಡಿಬಾರ್
ಕಲಬುರಗಿ, ; ಗುಲಬರ್ಗಾ ವಿಶ್ವವಿದ್ಯಾಲಯವು ಜರುಗಿಸುತ್ತಿರುವ ಸ್ನಾತಕ ಪದವಿ ಕೋರ್ಸಿನ ಒಂದು ಮತ್ತು ಮೂರನೇ ಸೆಮೆಸ್ಟರ್ನ ಮುಂದೂಡಲಾದ ಪರೀಕ್ಷೆಗಳು ಪ್ರಾರಂಭಗೊಂಡಿದ್ದು, ಈ ಪ್ರಯುಕ್ತ ಕುಲಪತಿಗಳು ಪದವಿ ಪರೀಕ್ಷೆಗಳ ಪರಿವೀಕ್ಷಣೆಗಾಗಿ ವಿವಿಧ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡುತ್ತಿದ್ದಾರೆ. ಸರಕಾರಿ ಪ್ರಥಮ ದರ್ಜೆ ಕಾಲೇಜು, ಮಹಾಗಾಂವ ಕ್ರಾಸ್ ಹಾಗೂ ಸರಕಾರಿ ಪ್ರಥಮ ದರ್ಜೆ ಕಾಲೇಜು, ಕಮಲಾಪೂರನ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿದ ಕುಲಪತಿಗಳು ಪರೀಕ್ಷೆಯಲ್ಲಿ ನಕಲು ಮಾಡುತ್ತಿದ್ದ ಒಬ್ಬೊಬ್ಬ ವಿದ್ಯಾರ್ಥಿನಿಯರನ್ನು ಪರೀಕ್ಷೆಯಿಂದ ಡಿಬಾರ್ …
Read More »ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ಸ್ವಸಹಾಯ ಗುಂಪುಗಳಿಗೆ 600 ಕೋಟಿ ರೂ. ಸಮುದಾಯ ನಿಧಿ
ಮಂಗಳೂರು: ಗ್ರಾಮೀಣ ಮಹಿಳೆಯರು ಆರ್ಥಿಕ ಸ್ವಾವಲಂಭಿಗಳಾಗಲು ಹಾಗೂ ಉದ್ಯಮಶೀಲರಾಗಲು ಸರಕಾರ ಎನ್.ಆರ್.ಎಲ್.ಎಂ ಯೋಜನೆ ಮೂಲಕ ರಾಜ್ಯದ ಎಲ್ಲ ಮಹಿಳಾ ಸ್ವಸಹಾಯ ಗುಂಪುಗಳಿಗೆ 600 ಕೋಟಿ ರೂ.ಗಳಿಗೂ ಹೆಚ್ಚಿನ ಸಮುದಾಯ ಬಂಡವಾಳ ನಿಧಿ ನೀಡಲಾಗಿದೆ ಎಂದು ಕೌಶಲ್ಯಾಭಿವೃದ್ಧಿ, ಜೀವನೋಪಾಯ ಖಾತೆ ಸಚಿವರಾದ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರು ಹೇಳಿದರು. ದಕ್ಷಿಣ ಕನ್ನಡ ಜಿಲ್ಲೆಯ ಕುರ್ನಾಡು ಗ್ರಾಮ ಪಂಚಾಯತಿಯ ಮುಡಿಪು ಗ್ರಾಮದಲ್ಲಿ ಬಂಜರು ಬಿದ್ದಿದ್ದ ಭೂಮಿಯನ್ನು ಸಾಗುವಳಿ ಮಾಡಿ ಭತ್ತ ಬೆಳೆಯುತ್ತಿರುವ ಸ್ವಸಹಾಯ ಗುಂಪುಗಳ ಮಹಿಳೆಯರ …
Read More »ಅಂಗಡಿಯವನಿಗೆ ಹಣ ಕೊಡುವ ಬದಲು ತಮ್ಮ ಮಕ್ಕಳ ಮೇಲೆ ರೇಪ್ ಮಾಡಲು ಬಿಟ್ಟ ತಾಯಂದಿರು!
ಚೆನ್ನೈ : ವೈರಲ್ ವಿಡಿಯೋದಲ್ಲಿ ಕ್ರೂರಿ ತಾಯಿ ತನ್ನ ಮಗುವನ್ನು ಅಮಾನುಷವಾಗಿ ಹಿಂಸಿಸಿ, ಕೊನೆಗೆ ಅರೆಸ್ಟ್ ಆದ ಪ್ರಕರಣ ಕಣ್ಣ ಮುಂದೆ ಇರುವಾಗಲೇ ಮತ್ತೊಂದು ಅಘಾತಕಾರಿ ಪ್ರಕರಣ ಚೆನ್ನೈನಲ್ಲಿ ದಾಖಲಾಗಿದೆ. ಅಂಗಡಿಯಲ್ಲಿ ಖರೀದಿಸಿದ ವಸ್ತುಗಳಿಗೆ ಹಣ ನೀಡುವ ಬದಲು ತಮ್ಮ ಅಪ್ರಾಪ್ತ ಹೆಣ್ಣು ಮಕ್ಕಳ ಮೇಲೆ ಅತ್ಯಾಚಾರ ಮಾಡಲು ಅಂಗಡಿ ಮಾಲೀಕನಿಗೆ ತಾಯಂದಿರೇ ಅನುಮತಿ ನೀಡಿರುವ ಅತಿದಾರುಣ ಘಟನೆ ಬೆಳಕಿಗೆ ಬಂದಿದೆ. ಅಕ್ಕ-ತಂಗಿಯರಿಬ್ಬರು ಅಂಗಡಿ ಮಾಲೀಕನಿಗೆ ಹಣ ಕೊಡುವ ಬದಲು …
Read More »ಸುಪ್ರೀಂಕೋರ್ಟ್ನ 9 ನ್ಯಾಯಮೂರ್ತಿಗಳಿಗೆ ಪ್ರತಿಜ್ಞಾವಿಧಿ ಬೋಧನೆ
ನವದೆಹಲಿ: ಸುಪ್ರೀಂಕೋರ್ಟ್ಗೆ ನೇಮಕಗೊಂಡಿರುವ ಕರ್ನಾಟಕದ ಬಿ.ವಿ.ನಾಗರತ್ನ ಸೇರಿದಂತೆ 9 ನೂತನ ನ್ಯಾಯಮೂರ್ತಿಗಳಿಗೆ ಮುಖ್ಯನ್ಯಾಯಮೂರ್ತಿ ಎನ್.ವಿ.ರಮಣ ಅವರು ಮಂಗಳವಾರ ಪ್ರತಿಜ್ಞಾವಿಧಿ ಬೋಧಿಸಿದರು. ಇದರೊಂದಿಗೆ ಸುಪ್ರೀಂಕೋರ್ಟ್ನ ನ್ಯಾಯಮೂರ್ತಿಗಳ ಒಟ್ಟು ಸಂಖ್ಯೆ 33ಕ್ಕೆ ಏರಿದಂತಾಗಿದೆ. ಸುಪ್ರೀಂಕೋರ್ಟ್ನ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ 9 ನ್ಯಾಯಮೂರ್ತಿಗಳು ಏಕಕಾಲಕ್ಕೆ ಪ್ರತಿಜ್ಞಾವಿಧಿ ಸ್ವೀಕರಿಸಿದ್ದಾರೆ. ನ್ಯಾಯಮೂರ್ತಿಗಳಾದ ಅಭಯ್ ಶ್ರೀನಿವಾಸ ಓಕಾ, ವಿಕ್ರಮ್ ನಾಥ್, ಜಿತೇಂದ್ರಕುಮಾರ್ ಮಾಹೇಶ್ವರಿ, ಹಿಮಾ ಕೊಹ್ಲಿ, ಬಿ.ವಿ.ನಾಗರತ್ನ, ಸಿ.ಟಿ.ರವಿಕುಮಾರ್, ಎಂ.ಎಮ.ಸುಂದ್ರೇಶ್, ಬೇಲಾ ಎಂ.ತ್ರಿವೇದಿ ಹಾಗೂ ಪಿ.ಎಸ್.ನರಸಿಂಹ ಅವರು …
Read More »
Laxmi News 24×7