ಮೊಹಮ್ಮದ್ ಅರ್ಮಾನ್ ಮತ್ತು ಮೊಹಮ್ಮದ್ ಹುಸೇನಿ ಎಂಬ ಇಬ್ಬರು ಆರೋಪಿಗಳನ್ನು ಚೆನ್ನೈ ಪೊಲೀಸರು ಬಂಧಿಸಿದ್ದಾರೆ. ಆರ್ಯ ಹೆಸರು ಹೇಳಿಕೊಂಡು ಮಹಿಳೆಗೆ ಮೋಸ ಮಾಡಿರುವುದು ಇವರೇ ಎಂದು ಪೊಲೀಸರು ಶಂಕಿಸಿದ್ದಾರೆ. ಜರ್ಮನಿಯಲ್ಲಿ ನೆಲೆಸಿರುವ ಶ್ರೀಲಂಕಾ ಮೂಲದ ತಮಿಳು ಮಹಿಳೆಗೆ ನಟ ಆರ್ಯ ಅವರು ಮೋಸ ಮಾಡಿದ್ದಾರೆ ಎನ್ನಲಾದ ಪ್ರಕರಣಕ್ಕೆ ಈಗ ದೊಡ್ಡ ಟ್ವಿಸ್ಟ್ ಸಿಕ್ಕಿದೆ. ತಮ್ಮನ್ನು ಮದುವೆ ಆಗುವುದಾಗಿ ನಂಬಿಸಿ, ಲಕ್ಷಾಂತರ ರೂಪಾಯಿ ಹಣ ಪಡೆದು, ಬಳಿಕ ಮೋಸ ಮಾಡಿದ್ದಾರೆ ಎಂದು …
Read More »ಗುರುವಾರ (ಆಗಸ್ಟ್ 26) ಮಲೆಮಹದೇಶ್ವರ ಬೆಟ್ಟದಿಂದ ಬೃಹತ್ ಪಾದಯಾತ್ರೆ ಆರಂಭವಾಗಲಿದೆ. ಶ್ರೀಗಳ ನೇತೃತ್ವದಲ್ಲಿ ವಿಧಾನಸೌಧದ ವರೆಗೆ ಪಾದಯಾತ್ರೆ ನಡೆಯಲಿದೆ.
ಮೈಸೂರು: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡುವ ವಿಚಾರವಾಗಿ ಮತ್ತೆ ಸಮುದಾಯದ ಸ್ವಾಮೀಜಿಗಳ ಕೂಗು ಕೇಳಿಬಂದಿದೆ. ಬಸವ ಜಯಮೃತ್ಯುಂಜಯಶ್ರೀ ನೇತೃತ್ವದಲ್ಲಿ ಮತ್ತೆ ಹೋರಾಟ ನಡೆಯಲಿದೆ. ಗುರುವಾರ (ಆಗಸ್ಟ್ 26) ಮಲೆಮಹದೇಶ್ವರ ಬೆಟ್ಟದಿಂದ ಬೃಹತ್ ಪಾದಯಾತ್ರೆ ಆರಂಭವಾಗಲಿದೆ. ಶ್ರೀಗಳ ನೇತೃತ್ವದಲ್ಲಿ ವಿಧಾನಸೌಧದ ವರೆಗೆ ಪಾದಯಾತ್ರೆ ನಡೆಯಲಿದೆ. ನಾಳೆಯಿಂದ ಅಕ್ಟೋಬರ್ 1 ರವರೆಗೆ ಹೋರಾಟ ನಡೆಯಲಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ 2A ಮೀಸಲಾತಿ ಬೇಡಿಕೆ ವಿಚಾರವಾಗಿ ಮೈಸೂರಿನಲ್ಲಿ ಬಸವ …
Read More »ಸೆಪ್ಟೆಂಬರ್ನಲ್ಲಿ ದಿನವೂ 5 ಲಕ್ಷ ಜನರಿಗೆ ಲಸಿಕೆ: ಬೊಮ್ಮಾಯಿ
ಬೆಂಗಳೂರು: ರಾಜ್ಯದಲ್ಲಿ ಸೆಪ್ಟೆಂಬರ್ನಿಂದ ಪ್ರತಿ ದಿನ 5 ಲಕ್ಷ ಜನರಿಗೆ ಕೋವಿಡ್ ಲಸಿಕೆ ನೀಡಲು ಉದ್ದೇಶಿಸಲಾಗಿದೆ ಎಂದು ಮುಖ್ಯಮಂತ್ರಿ ಬವಸರಾಜ ಬೊಮ್ಮಾಯಿ ಹೇಳಿದರು. ರಾಜಭವನದಲ್ಲಿ ಯೋಜನೆ, ಕಾರ್ಯಕ್ರಮ, ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆ, ಸುಸ್ಥಿರ ಗುರಿಗಳ ಸಹಕಾರ ಹಾಗೂ ಗೀವ್ ಇಂಡಿಯಾ ಪ್ರತಿಷ್ಠಾನದ ಸಹಯೋಗದಲ್ಲಿ ಮಂಗಳವಾರ ಆಯೋಜಿಸಿದ್ದ ವ್ಯಾಕ್ಸಿನೇಟ್ ಇಂಡಿಯಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಈಗ ಪ್ರತಿ ದಿನ 3.5 ರಿಂದ 4 ಲಕ್ಷ ಜನರಿಗೆ ಲಸಿಕೆ ನೀಡಲಾಗುತ್ತಿದೆ. ಕೇಂದ್ರ …
Read More »‘ಆನಂದ’ ಇಲ್ಲದೇ ಸಿಂಗ್ ಅಧಿಕಾರ ಸ್ವೀಕಾರ!
ಬೆಂಗಳೂರು : ಪ್ರಬಲ ಖಾತೆಗಾಗಿ ಮುನಿಸಿಕೊಂಡು ಬೆಂಗಳೂರಿನತ್ತ ತಲೆ ಹಾಕದೇ ಹೊಸಪೇಟೆಯಲ್ಲೇ ಬೀಡು ಬಿಟ್ಟಿದ್ದ ಪ್ರವಾಸೋದ್ಯಮ ಸಚಿವ ಆನಂದ್ಸಿಂಗ್ ಅವರು ಮಂಗಳವಾರ ಮಧ್ಯಾಹ್ನ ‘ದಿಢೀರ್’ ಅಧಿಕಾರ ಸ್ವೀಕರಿಸಿದರು. ಅಧಿಕಾರ ಸ್ವೀಕಾರ ಕ್ರಿಯೆಯೇ ಒಂದು ರೀತಿಯಲ್ಲಿ ಪ್ರಹಸನದಂತೆ ನಡೆಯಿತು. ಬಾಯಿ ಮಾತಿನಲ್ಲಿ ತಮಗೆ ಅಸಮಾಧಾನ ಇಲ್ಲ ಎಂದು ಹೇಳುತ್ತಲೇ ಒಲ್ಲದ ಮನಸ್ಸಿನಿಂದಲೇ ಆನಂದ್ಸಿಂಗ್ ಅಧಿಕಾರ ಸ್ವೀಕರಿಸಿದರು. ಪೂರ್ವ ನಿಗದಿಯಾದ ಯಾವುದೇ ‘ಕಾರ್ಯಕ್ರಮ’ಗಳಲ್ಲಿದೇ ಏಕಾಏಕಿ ಸಚಿವಗಿರಿ ಸ್ವೀಕರಿಸಿದರು. ತಮ್ಮನ್ನು ಭೇಟಿ ಮಾಡಲು ಬಂದಿದ್ದ …
Read More »ಶಾಲಾ ಆರಂಭದಲ್ಲಿಯೇ ಉತ್ತಮ ಹಾಜರಾತಿ: ಶಿಕ್ಷಣ ಸಚಿವ ಬಿ.ಸಿ. ನಾಗೇಶ್
ಬೆಂಗಳೂರು : ಕೋವಿಡ್-೧೯ ಕಾರಣದಿಂದಾಗಿ ಒಂದು ವರ್ಷದಿಂದ ಸ್ಥಗಿತಗೊಂಡಿದ್ದ ಶಾಲೆಗಳು ಮತ್ತೆ ಪುನಾರಂಭಗೊಂಡಿದ್ದು, ಪೋಷಕರು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಬಹಳ ಆಸಕ್ತಿಯಿಂದ ಶಾಲೆಗೆ ಮರಳುತ್ತಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇ.೫೨ ರಷ್ಟು ಮಕ್ಕಳು ಹಾಜರಾಗಿದ್ದು, ಶಾಲಾ ಆರಂಭದಲ್ಲಿಯೇ ಉತ್ತಮ ಹಾಜರಾತಿ ಕಂಡು ಸಂತಸವಾಗಿದೆ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರು ತಿಳಿಸಿದರು. ಕೋವಿಡ್-೧೯ ಸೋಂಕಿನ ಇಳಿಕೆ ಹಿನ್ನೆಲೆ, ಶಾಲಾ ಕಾಲೇಜುಗಳು ಪುನರಾರಂಭವಾಗಿದ್ದರಿಂದ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ಇಂದು …
Read More »ಕೋವಿಡ್ ಇಳಿಕೆ, ಕಳ್ಳತನ ಏರಿಕೆ: ಊರಿಗೆ ಊರೇ ಕಳ್ಳರ ಸಂತೆ!
ಅಂತಾರಾಜ್ಯ ಮತ್ತು ಗಡಿಜಿಲ್ಲೆಗಳಿಂದ ಬೆಂಗಳೂರು ಮತ್ತು ಇತರ ಪ್ರದೇಶಗಳಿಗೆ ಬಂದು ಕಳ್ಳತನ, ದರೋಡೆ, ಸರಗಳವು ಮತ್ತಿತರ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿ ಸಾರ್ವಜನಿಕರು ಮತ್ತು ಪೊಲೀಸರ ನೆಮ್ಮದಿಗೆ ಭಂಗ ತಂದಿರುವ ಹತ್ತು ಹಲವು ಗ್ಯಾಂಗ್ಗಳಬಗ್ಗೆವಿಸ್ತೃತ ವರದಿ ಸರಣಿ. ಇಂತಹವರ ಬಗ್ಗೆ ಸಾರ್ವಜನಿಕರು ಎಚ್ಚೆತ್ತುಕೊಳ್ಳುವಂತೆ ಮಾಡುವುದು, ಅಪರಾಧ ನಿಯಂತ್ರಕ ಪೊಲೀಸರಿಗೆ ಸಹಾಯ ಮಾಡುವುದು ಉದಯವಾಣಿಕಾಳಜಿ ಬೆಂಗಳೂರು: ಕೊರೊನಾ ಲಾಕ್ಡೌನ್ ಸಂದರ್ಭದಲ್ಲಿ ಭೂಗತವಾಗಿದ್ದ ಅಂತಾರಾಜ್ಯ ಮತ್ತು ಗಡಿಭಾಗಗಳಕಳ್ಳರ ಗ್ಯಾಂಗ್ಗಳು ರಾಜಧಾನಿ ಮತ್ತು ಇತರೆ ನಗರಗಳಲ್ಲಿ …
Read More »‘ಸಿಎಂ ಸಚಿವಾಲಯ’ದ ಅಧಿಕಾರಿಗಳಿಗೆ ಕರ್ತವ್ಯ ಹಂಚಿಕೆ..ಯಾರಿಗೆ ಯಾವ ಜವಾಬ್ದಾರಿ.?
ಬೆಂಗಳೂರು : ಸಿಎಂ ಸಚಿವಾಲಯದ ಅಧಿಕಾರಿಗಳಿಗೆ ಕರ್ತವ್ಯ ಹಂಚಿಕೆ ಮಾಡಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆದೇಶ ಹೊರಡಿಸಿದ್ದಾರೆ. ಮಂಜುನಾಥ್ ಪ್ರಸಾದ್, ಅನಿಲ್ ಕುಮಾರ್, ರಂಗರಾಕ್, ಪೊನ್ನುರಾಜ್, ಹೆಚ್ ಎಸ್ ಸತೀಶ್ ಸೇರಿದಂತೆ ಹಲವರಿಗೆ ಕರ್ತವ್ಯಗಳನ್ನು ಹಂಚಿಕೆ ಮಾಡಲಾಗಿದೆ. ಯಾರಿಗೆ ಯಾವ ಜವಾಬ್ದಾರಿ.? 1) ಮಂಜುನಾಥ್ ಪ್ರಸಾದ್ : ಸಿಎಂ ಪ್ರಧಾನ ಕಾರ್ಯದರ್ಶಿ, ( ಸಚಿವ ಸಂಪುಟದ ಎಲ್ಲಾ ಕಡತಗಳ ನಿರ್ವಹಣೆ, ಎಲ್ಲಾ …
Read More »ದುರಹಂಕಾರದಿಂದ ಸಿಎಂ ಸ್ಥಾನ ಕಳೆದುಕೊಂಡ ಎಚ್ಡಿಕೆ: ಕೃಷಿ ಸಚಿವ ಬಿ.ಸಿ.ಪಾಟೀಲ
ಹಾವೇರಿ: ‘ಎಚ್.ಡಿ.ಕುಮಾರಸ್ವಾಮಿ ತಮ್ಮ ದುರಹಂಕಾರ ಮತ್ತು ಸ್ವೇಚ್ಛಾಚಾರದಿಂದ ಮುಖ್ಯಮಂತ್ರಿ ಸ್ಥಾನ ಕಳೆದುಕೊಂಡಿದ್ದಾರೆಯೇ ಹೊರತು ಬೇರೆ ಯಾರೂ ಕಳೆದಿಲ್ಲ. ಸಿ.ಎಂ ಸ್ಥಾನ ಕಳೆದುಕೊಂಡ ನಂತರ ನೀರಿನಿಂದ ಹೊರಬಿದ್ದ ಮೀನಿನಂತಾಗಿದ್ದಾರೆ’ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ ತಿರುಗೇಟು ನೀಡಿದರು. ರಟ್ಟೀಹಳ್ಳಿ ತಾಲ್ಲೂಕಿನ ಮದಗ ಮಾಸೂರು ಕೆರೆಗೆ ಮಂಗಳವಾರ ಬಾಗಿನ ಅರ್ಪಿಸಿದ ಸಂದರ್ಭ ಮಾಧ್ಯಮದವರೊಂದಿಗೆ ಮಾತನಾಡಿ, ಕುಮಾರಸ್ವಾಮಿ ಸ್ವಾರ್ಥ ಭಾವನೆಯಿಂದ ಎರಡು ಮೂರು ಜಿಲ್ಲೆಗಳಿಗೆ ಸೀಮಿತವಾದ ಆಡಳಿತ ನೀಡಿ, ಇಡೀ ಕರ್ನಾಟಕಕ್ಕೆ ಅನ್ಯಾಯ ಮಾಡಿದರು. …
Read More »ಲಿಂಗಾಯತ ಧರ್ಮ ಹೋರಾಟದಿಂದ ಕಾಂಗ್ರೆಸ್ ಸೋತಿಲ್ಲ: ಎಂ.ಬಿ.ಪಾಟೀಲ್
ವಿಜಯಪುರ: ಲಿಂಗಾಯತ ಪ್ರತ್ಯೇಕ ಧರ್ಮದ ಹೋರಾಟದಿಂದ ಕಾಂಗ್ರೆಸ್ ಪಕ್ಷಕ್ಕೆ ಸೋಲಾಗಿಲ್ಲ. ಈ ಹೋರಾಟವೂ ನನ್ನಿಂದ ಆರಂಭಗೊಂಡಿಲ್ಲ. ವೀರಶೈವ ಮಹಾಸಭೆ ಆರಂಭಿಸಿದ್ದ ಹೋರಾಟವನ್ನು ನಾವು ಮುಂದುವರೆಸಿದ್ದು ಎಂದು ಮಾಜಿ ಸಚಿವ, ಬಬಲೇಶ್ವರ ಕಾಂಗ್ರೆಸ್ ಶಾಸಕ ಎಂ.ಬಿ.ಪಾಟೀಲ್ ಪ್ರತಿಕ್ರಿಯಿಸಿದ್ದಾರೆ. ಮಂಗಳವಾರ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯ ನಮ್ಮದೇ ಪಕ್ಷದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ ಅವರಿಗೆ ನಾನು ಮಾಡಿದ ನೀರಾವರಿ ಯೋಜನೆ ಸಾಧನೆ ಸಹಿಸಲು ಆಗುತ್ತಿಲ್ಲ. ಹೀಗಾಗಿ ಹೊಟ್ಟೆಕಿಚ್ಚಿನಿಂದ ಅನಗತ್ಯವಾಗಿ ನನ್ನ …
Read More »ಇನ್ಮುಂದೆ ವಾಟ್ಸ್ಯಾಪ್ ಮೂಲಕವೂ ಲಸಿಕೆಯ ಸ್ಲಾಟ್ ಬುಕ್ ಮಾಡಬಹುದು : ಕೇಂದ್ರ
ನವ ದೆಹಲಿ : ದೇಶದಾದಯಂತ ನಡೆಯುತ್ತಿರುವ ಲಸಿಕಾ ಅಭಿಯಾನಕ್ಕೆ ವೇಗ ಒದಗಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ ನಿತ್ಯ ನಿರಂತರವಾಗಿ ಕಾರ್ಯ ನಿರ್ವಹಿಸುತ್ತಿದೆ. ಕೇಂದ್ರ ಆರೋಗ್ಯ ಸಚಿವಾಲಯ ಹಾಗೂ ಮೈ ಗವರ್ನಮೆಂಟ್ ನೊಂದಿಗೆ ಸಾಮಾಜಿಕ ಜಾಲತಾಣಗಳ ದೈತ್ಯ ಸಂಸ್ಥೆಗಳಲ್ಲಿ ಒಂದಾದ ವಾಟ್ಸ್ಯಾಪ್ ಲಸಿಕಾ ಅಭಿಯಾನಕ್ಕೆ ಕೈ ಜೋಡಿಸಿದೆ. ಇನ್ಮುಂದೆ ಯಾವುದೇ ವಾಟ್ಸ್ಯಾಪ್ ಬಳಕೆದಾರರು ಲಸಿಕೆ ಪಡೆಯಲು ತಮ್ಮ ಸ್ಲಾಟ್ ಗಳನ್ನು ವಾಟ್ಸ್ಯಾಪ್ ನಲ್ಲಿಯೇ ಬುಕ್ ಮಾಡಬಹುದಾಗದೆ. ಈ ಬಗ್ಗೆ ತಮ್ಮ ಅಧಿಕೃತ …
Read More »
Laxmi News 24×7