Breaking News

ರಾಜಕೀಯ

ರಾಜ್ಯಸಭೆ ಸಚೇತಕರಾಗಿ ಕರ್ನಾಟಕದ ಕಾಂಗ್ರೆಸ್ ಸಂಸದ ನಾಸೀರ್ ಹುಸೇನ್ ಸೈಯ್ಯದ್ ನೇಮಕ

ಕರ್ನಾಟಕ ಸಂಸದ ಮಲ್ಲಿಕಾರ್ಜುನ ಖರ್ಗೆ ರಾಜ್ಯಸಭೆಯಲ್ಲಿ ವಿರೋಧ ಪಕ್ಷದ ನಾಯಕರಾಗಿ ಆಯ್ಕೆಯಾದ ವಾರಗಳ ನಂತರ, ರಾಜ್ಯದ ಮತ್ತೊಬ್ಬ ಸಂಸದ ಡಾ. ಸೈಯದ್ ನಸೀರ್ ಹುಸೇನ್ ಅವರನ್ನು ರಾಜ್ಯಸಭೆಯಲ್ಲಿ ಕಾಂಗ್ರೆಸ್ ಪಕ್ಷದ ಸಚೇತಕರಾಗಿ ನೇಮಕ ಮಾಡಲಾಗಿದೆ. ಪಕ್ಷದ ಹಿರಿಯ ನಾಯಕ ಜೈರಾಮ್ ರಮೇಶ್ ಅವರು ಕರ್ನಾಟಕದ ಸಂಸದರಾಗಿದ್ದು, ಪಕ್ಷದ ಮುಖ್ಯ ಸಚೇತಕರಾಗಿದ್ದಾರೆ. ರಾಜ್ಯಸಭೆಯಲ್ಲಿ ಕಾಂಗ್ರೆಸ್ 38 ಸದಸ್ಯರನ್ನು ಹೊಂದಿದೆ. ಮುಖ್ಯ ಸಚೇತಕ ಮತ್ತು ಸಚೇತಕ ಈ ಇಬ್ಬರೂ ಕಾಂಗ್ರೆಸ್ ಸದಸ್ಯರು ಮತ್ತು …

Read More »

ಗಂಡನ ಬಿಟ್ಟು ಮತ್ತೊಬ್ಬನ ಜೊತೆ ಜೀವನ ರೂಪಿಸಿಕೊಳ್ಳೋ ಕನಸು ಕಂಡಿದ್ದ ಅಂಗನವಾಡಿ ಶಿಕ್ಷಕಿಯ ಪ್ರೇಮಿ ಹತ್ಯೆ; ಮಾಜಿ ಪತಿ ಸೇರಿ 3 ಅರೆಸ್ಟ್

ರಾಯಚೂರು: ಜಿಲ್ಲೆಯ ಅಂಗನವಾಡಿ ಶಿಕ್ಷಕಿಯ ಲವ್ವಿ ಡವ್ವಿ ಪ್ರಕರಣಕ್ಕೆ ಸಂಬಂಧಿಸಿ ಮೂವರನ್ನು ಬಂಧಿಸಲಾಗಿದೆ. ಗುಂಡಪ್ಪ, ಮೌನೇಶ ಮತ್ತು ಕನಕಪ್ಪರ ಸೇರಿ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಡಿವೋರ್ಸ್ ನೀಡಿದ್ದ ಪತ್ನಿಯ ಜೊತೆ ಸಂಬಂಧ ಇಟ್ಟುಕೊಂಡಿದ್ದ ಎಂಬ ಕಾರಣಕ್ಕೆ ಗುಂಡಪ್ಪ ಮೌನೇಶನಾಯಕನನ್ನು ಕೊಲೆ ಮಾಡಿದ್ದು ಸದ್ಯ ಆರೋಪಿಗಳು ಅರೆಸ್ಟ್ ಆಗಿದ್ದಾರೆ. ಘಟನೆ ಹಿನ್ನೆಲೆ 7 ವರ್ಷಗಳ ಹಿಂದೆ ಗುಂಡಪ್ಪ ವಿಜಯಲಕ್ಷ್ಮೀಯನ್ನ ಮದ್ವೆಯಾಗಿದ್ದ. ಆದ್ರೆ ಸಂಸಾರದಲ್ಲಿ ಸಾಮರಸ್ಯ ಇಲ್ಲದೆ ಗುಂಡಪ್ಪ ಪತ್ನಿಗೆ ಡಿವೋರ್ಸ್ ಕೊಟ್ಟಿದ್ದ. …

Read More »

DGIGP & CM ಆದೇಶಕ್ಕೂ ಇಲ್ಲ ಕಿಮ್ಮತ್ತು? ಪೊಲೀಸರಿಂದಲೇ ಆದೇಶ ಉಲ್ಲಂಘಿಸಿ ಬರ್ತ್​​ಡೇ

ಹಾವೇರಿ: ಒಂದೆಡೆ ಮೂರನೇ ಕೊರೊನಾ ಅಲೆಯ ಭೀತಿ ಶುರುವಾಗಿದೆ.. ಈಗಾಗಲೇ ಕೊರೊನಾದಿಂದ ಬಳಲಿ ಬೆಂಡಾಗಿರುವ ರಾಜ್ಯದಲ್ಲಿ ಮತ್ತೆ ದೊಡ್ಡಮಟ್ಟದ ಅನಾಹುತ ಸೃಷ್ಟಿಯಾಗದಿರಲೆಂದು ಮುಂಜಾಗ್ರತಾ ಕ್ರಮವಾಗಿ ಕಾರ್ಯಕ್ರಮಗಳನ್ನ ನಡೆಸದಂತೆ ಸಿಎಂ ಬಸವರಾಜ್ ಬೊಮ್ಮಾಯಿ ಹಾಗೂ ಡಿಜಿಐಜಿಪಿ ಆದೇಶ ಹೊರಡಿಸಿದ್ದರು. ದುರಂತ ಅಂದ್ರೆ ಸಿಎಂ ತವರು ಕ್ಷೇತ್ರದಲ್ಲೇ ಸಿಎಂ ಆದೇಶಕ್ಕೆ ಕ್ಯಾರೆ ಎನ್ನುತ್ತಿಲ್ಲ.. ಪೊಲೀಸ್ ಇಲಾಖೆಯೇ ಡಿಜಿಐಜಿಪಿ ಆದೇಶಕ್ಕೆ ಕಿಮ್ಮತ್ತು ನೀಡುತ್ತಿಲ್ಲ. ನಿನ್ನೆಯಷ್ಟೇ ಸಿಎಂ ಬಸವರಾಜ್ ಬೊಮ್ಮಾಯಿ ಕಾರ್ಯಕ್ರಮಗಳನ್ನು ನಡೆಸದಂತೆ ಆದೇಶ ನೀಡಿದ್ದರು.. …

Read More »

ಶೇ 100ರಷ್ಟು ಪ್ರೇಕ್ಷಕರಿಗೆ ಚಿತ್ರಮಂದಿರದಲ್ಲಿ ಅವಕಾಶ; ತಜ್ಞರ ಅಭಿಪ್ರಾಯ ಪಡೆದು ನಿರ್ಧಾರ: ಸಿಎಂ ಬೊಮ್ಮಾಯಿ

ಬೆಂಗಳೂರು: ಇಂದು ಫಿಲ್ಮ್ ಚೇಂಬರ್​ನವರು ಭೇಟಿಯಾಗಿ ಚಿತ್ರಮಂದಿರದಲ್ಲಿ ಶೇ.100ರಷ್ಟು ಪ್ರೇಕ್ಷಕರಿಗೆ ಅವಕಾಶ ನೀಡಲು ಅವಕಾಶಕ್ಕೆ ಮನವಿ ಮಾಡಿದ್ದಾರೆ. ತಜ್ಞರ ಅಭಿಪ್ರಾಯ ಪಡೆದು ನಿರ್ಧರಿಸುವುದಾಗಿ ಹೇಳಿದ್ದೇನೆ. ಶೂಟಿಂಗ್ ವೇಳೆ ಆದ ದುರ್ಘಟನೆಗಳ ಬಗ್ಗೆ ಚರ್ಚಿಸಿದ್ದೇನೆ. ಇನ್ನಷ್ಟು ಬಿಗಿ ಕ್ರಮ ತೆಗೆದುಕೊಳ್ಳುವುದಕ್ಕೆ ಚಿಂತನೆ ನಡೆಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಸಿನಿಮಾ ಥಿಯೇಟರ್​ನಲ್ಲಿ ಶೇಕಡಾ 100 ರಷ್ಟು ಪ್ರೇಕ್ಷಕರಿಗೆ ಅವಕಾಶ ನೀಡಲು ಮನವಿ ಮಾಡಿದ್ದೇವೆ. ಕೊರೊನಾದಿಂದ ಸಿನಿಮಾ ಕ್ಷೇತ್ರ ಭಾರಿ ನಷ್ಟದಲ್ಲಿದೆ. …

Read More »

ಐದು ವರ್ಷಗಳ ಪದವೀಧರರ ಮಾಹಿತಿ ಸಂಗ್ರಹಿಸಲು ಜಿಲ್ಲಾಧಿಕಾರಿ ಸೂಚನೆ

ಕಾರವಾರ: ಜಿಲ್ಲೆಯಲ್ಲಿರುವ ವಿವಿಧ ಔದ್ಯೋಗಿಕ ಅವಕಾಶಗಳು ಮತ್ತು ಅವುಗಳಿಗೆ ಅನುಗುಣವಾಗಿ ಸ್ಥಳೀಯ ಯುವಕರ ಕೌಶಲದ ಮಟ್ಟವನ್ನು ಹೆಚ್ಚಿಸಲು ಕೈಗೊಳ್ಳಬಹುದಾದ ಕ್ರಮಗಳನ್ನು ಜಾರಿ ಮಾಡಲು ಜಿಲ್ಲಾಡಳಿತ ಮಹತ್ವದ ಹೆಜ್ಜೆಯಿಟ್ಟಿದೆ. ಈ ಸಂಬಂಧ ಜಿಲ್ಲಾ ಕೌಶಲಾಭಿವೃದ್ಧಿ ಸಮಿತಿಯ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ವಿವಿಧ ಅಧಿಕಾರಿಗಳ ಜೊತೆ ಒಂದು ಸುತ್ತಿನ ಸಭೆಯನ್ನೂ ನಡೆಸಿದ್ದಾರೆ. ಜಿಲ್ಲೆಯಲ್ಲಿರುವ ಬೃಹತ್ ಯೋಜನೆಗಳಾದ ಕೈಗಾ ಅಣು ವಿದ್ಯುತ್ ಸ್ಥಾವರ, ಕೊಂಕಣ ರೈಲ್ವೆ, ಭಾರತೀಯ ನೌಕಾನೆಲೆಗಳಲ್ಲಿ ಸ್ಥಳೀಯರಿಗೆ …

Read More »

ಸಂದರ್ಶನ l ಕಿರಿಕಿರಿ ಆರೋಪ ಮುಕ್ತಿಗೆ ಹೊಸ ವ್ಯವಸ್ಥೆ -ಬಿ.ಆರ್. ರವಿಕಾಂತೇಗೌಡ

ಬೆಂಗಳೂರು: ‘ಸಂಚಾರ ಪೊಲೀಸರು ವಾಹನಗಳನ್ನು ವಿನಾಕಾರಣ ಅಡ್ಡಗಟ್ಟಿ ಸಾರ್ವಜನಿಕರಿಗೆ ಕಿರಿಕಿರಿ ಉಂಟು ಮಾಡುತ್ತಿರುವ ಆರೋಪಗಳು ಹಲವು ದಿನಗಳಿಂದಲೂ ಕೇಳಿಬರುತ್ತಿವೆ. ಇಂಥ ಆರೋಪಗಳಿಂದ ಮುಕ್ತಿ ಪಡೆಯಲು ಹೊಸ ವ್ಯವಸ್ಥೆಯನ್ನು ನಗರದಲ್ಲಿ ಜಾರಿಗೆ ತರಲು ಸಿದ್ಧತೆ ನಡೆದಿದೆ’ ಎಂದು ಸಂಚಾರ ವಿಭಾಗದ ಜಂಟಿ ಕಮಿಷನರ್ ಬಿ.ಆರ್. ರವಿಕಾಂತೇಗೌಡ ಹೇಳಿದರು. ‘ಪ್ರಜಾವಾಣಿ’ಯಲ್ಲಿ ಪ್ರಕಟಗೊಂಡ ‘ನಿತ್ಯ ಸಂಚಾರ – ಸದಾ ಕಿರಿಕಿರಿ’ ಸರಣಿ ವರದಿಗಳಿಗೆ ಪ್ರತಿಕ್ರಿಯಿಸಿರುವ ಅವರು, ವಿಶೇಷ ಸಂದರ್ಶನ ನೀಡಿದ್ದಾರೆ. ಅದರ ವಿವರ ಇಲ್ಲಿದೆ. …

Read More »

ಪದೇಪದೆ ಪೆಟ್ರೋಲ್ ಬೆಲೆ ಬಗ್ಗೆ ಪ್ರಶ್ನಿಸಬೇಡಿ ಎಂದ ಜಿಎಂ ಸಿದ್ದೇಶ್ವರ್​ಗೆ ಪ್ರತಿಭಟನೆ ಬಿಸಿ; ಉಚಿತ ಪೆಟ್ರೋಲ್ ಕೊಡಲು ಆಗ್ರಹ

ದಾವಣಗೆರೆ: ಜಿಲ್ಲೆಯ ಜನರಿಗೆ ಉಚಿತವಾಗಿ ಪೆಟ್ರೋಲ್ ಕೊಡಿ ಎಂದು ಸಂಸದ ಜಿ.ಎಂ. ಸಿದ್ದೇಶ್ವರ್‌ಗೆ ಕಾಂಗ್ರೆಸ್ ಕಾರ್ಯಕರ್ತರು ಆಗ್ರಹ ವ್ಯಕ್ತಪಡಿಸಿದ್ದಾರೆ. ಜಿ.ಎಂ. ಸಿದ್ದೇಶ್ವರ್ ಕಚೇರಿಯ ಬಳಿ ಯುವ ಕಾಂಗ್ರೆಸ್ ಪ್ರತಿಭಟನೆ ನಡೆಸಿದೆ. ದಾವಣಗೆರೆಯ ಪಿಬಿ ರಸ್ತೆ ಬಳಿ ಇರುವ ಸಿದ್ದೇಶ್ವರ್ ಕಚೇರಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪೆಟ್ರೋಲ್ ನೀಡುವಂತೆ ಆಗ್ರಹಿಸಿದ್ದಾರೆ. ಶಾಮನೂರು ಶಿವಶಂಕರಪ್ಪ ಉಚಿತವಾಗಿ ಲಸಿಕೆ ಕೊಡುತ್ತಿದ್ದಾರೆ. ಹೀಗಾಗಿ ಸಿದ್ದೇಶ್ವರ್ ಉಚಿತವಾಗಿ ಪೆಟ್ರೋಲ್ ಕೊಡಬೇಕು ಎಂದು ಹೇಳಿದ್ದಾರೆ. ಈ ಹಿಂದೆ ಪೆಟ್ರೋಲ್ ಏರಿಕೆ …

Read More »

ಸಂಸದೀಯ ಇಲಾಖೆಯ ಕಾರ್ಯದರ್ಶಿಯಾಗಿ ಜಿ. ಶ್ರೀಧರ್‌ ನೇಮಕ

ಬೆಂಗಳೂರು: ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಇಲಾಖೆಯ ಕಾರ್ಯದರ್ಶಿಯಾಗಿ ಜಿ. ಶ್ರೀಧರ್‌ ಅವರನ್ನು ನೇಮಿಸಲಾಗಿದೆ. ಕಳೆದ ಮೂರು ವರ್ಷಗಳಿಂದ ಗುತ್ತಿಗೆ ಆಧಾರದಲ್ಲಿ ಕಾರ್ಯದರ್ಶಿ ಹುದ್ದೆಯಲ್ಲಿದ್ದ ದ್ವಾರಕಾನಾಥ್ ಬಾಬು ಅವರ ಅವಧಿ ಜುಲೈ 31ರಂದು ಅಂತ್ಯವಾಗಿತ್ತು. 2018ರಿಂದ ಕಾರ್ಯದರ್ಶಿ ಹುದ್ದೆ ಖಾಲಿಯಿದ್ದು, ಈ ಹುದ್ದೆಯಿಂದ ನಿವೃತ್ತರಾಗಿದ್ದ ದ್ವಾರಕಾನಾಥ್ ಬಾಬುರನ್ನೇ ಮೊದಲಿಗೆ 2 ವರ್ಷ, ಬಳಿಕ 1 ವರ್ಷ ಅವಧಿಗೆ ಗುತ್ತಿಗೆ ಆಧಾರದ ಮೇಲೆ ಮುಂದುವರಿಸಲಾಗಿತ್ತು. ಈ ಹುದ್ದೆಗೆ ಅರ್ಹರು ಇದ್ದರೂ …

Read More »

ಎಣ್ಣೆ ಅಮಲಿನಲ್ಲಿ ಅಧಿಕಾರಿಗಳಿಗೆ ಆವಾಜ್ ಹಾಕಿದ ಯುವಕ

ಯಾದಗಿರಿ: ಎಣ್ಣೆ ಅಮಲಿನಲ್ಲಿ ಯುವಕನೋರ್ವ ಅಧಿಕಾರಿಗಳಿಗೆ ಆವಾಜ್ ಹಾಕಿದ ಘಟನೆ ಯಾದಗಿರಿಯಲ್ಲಿ ನಡೆದಿದೆ. ಯಾದಗಿರಿ ನಿವಾಸಿ ಭೀಮರಡ್ಡಿ ಕುರಕುಂದಿ ಎಂಬ ಯುವಕ ಅಧಿಕಾರಿಗಳಿಗೆ ಆವಾಜ್ ಹಾಕಿದ್ದಾನೆ. ಯಾದಗಿರಿ ಜಿಲ್ಲೆಯಾದ್ಯಂತ ನೈಟ್ ಕರ್ಫ್ಯೂ ಜಾರಿಯಾಗಿದೆ. ಆದ್ರೆ ನೈಟ್ ಕರ್ಫ್ಯೂ ಉಲ್ಲಂಘಿಸಿ ಡಾಬಾ ತೆರೆದಿದ್ದ ಹಿನ್ನೆಲೆಯಲ್ಲಿ ಅಧಿಕಾರಿಗಳು ಡಾಬಾ ಮೇಲೆ ದಾಳಿ ನಡೆಸಿದ್ದಾರೆ. ದಾಳಿ ಮಾಡಿ ದಂಡ ವಿಧಿಸಲು ಮುಂದಾದ ವೇಳೆ ಯುವಕ ಮತ್ತು ಅಧಿಕಾರಿಗಳ ಜೊತೆ ಗಲಾಟೆಯಾಗಿದೆ. ಎಸಿ ಪ್ರಶಾಂತ್, ನಗರಸಭೆ …

Read More »

ಕರ್ತವ್ಯಲೋಪ ಹಿನ್ನೆಲೆ ಐವರು ಪೊಲೀಸರನ್ನ ಅಮಾನತುಗೊಳಿಸಿದ ಎಸ್ಪಿ

ವಿಜಯಪುರ: ಕರ್ತವ್ಯಲೋಪ ಹಿನ್ನೆಲೆ ಐವರು ಪೊಲೀಸರ ಮೇಲೆ ಖಡಕ್​ ಕ್ರಮ ತೆಗೆದುಕೊಂಡಿರುವ ಎಸ್ಪಿ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದು ಜಿಲ್ಲೆಯಲ್ಲಿ ಭಾರೀ ಸಂಚಲನವನ್ನೇ ಮೂಡಿಸಿದೆ. ಜಿಲ್ಲೆಯ ಎಸ್ಪಿ ಆನಂದ್ ಕುಮಾರ್ ಕರ್ತವ್ಯ ಲೋಪ ಎಸಗಿದ ಪೊಲೀಸರ ಮೇಲೆ ಕಟ್ಟು ನಿಟ್ಟಿನ ಕ್ರಮ ಜರುಗಿಸಿದ್ದು, ಅಮಾನತು ಮಾಡಿದ್ದಾರೆ. ನಿಡಗುಂದಿ ಠಾಣೆಯ ಇಬ್ಬರು, ಬಸವನ ಬಾಗೇವಾಡಿಯ ಮೂವರು ಪೊಲೀಸ್​ ಅಧಿಕಾರಿಗಳನ್ನು ಅಮಾನತುಗೊಳಿಸಲು ಎಸ್ಪಿ ಆದೇಶ ನೀಡಿದ್ದಾರೆ. ನಿಡಗುಂದಿ ಠಾಣೆಯ ಎಸ್.ಸಿ. ರೆಡ್ಡಿ ಸಿಪಿಸಿ 496 …

Read More »