ಕನ್ನಡದಲ್ಲಿ ಹಿಟ್ ಚಿತ್ರಗಳನ್ನು ನಿರ್ಮಿಸುತ್ತಾ ಬಂದಿರುವ ಹೊಂಬಾಳೆ ಫಿಲ್ಮ್ಸ್ ಇಂದು ಹೊಸ ಚಿತ್ರವನ್ನ ಘೋಷಿಸುವುದಾಗಿ ತಿಳಿಸಿತ್ತು, ಅದರಂತೆ ಚಿತ್ರದ ಹೆಸರು ಹಾಗೂ ತಂಡವನ್ನು ಘೋಷಿಸಿದ್ದು, ಅಭಿಮಾನಿಗಳಿಗೆ ಭರ್ಜರಿ ಸುದ್ದಿ ನೀಡಿದೆ. ತನ್ನ ಹನ್ನೊಂದನೇ ಚಿತ್ರದ ಮೊದಲ ಪೋಸ್ಟರ್ಅನ್ನು ಬಿಡುಗಡೆಗೊಳಿಸಿರುವ ಹೊಂಬಾಳೆಯ ನೂತನ ಚಿತ್ರಕ್ಕೆ ನಾಯಕನಾಗಿ ರಿಷಬ್ ಶೆಟ್ಟಿ ಕಾಣಿಸಿಕೊಳ್ಳುತ್ತಿದ್ದಾರೆ. ನಿರ್ದೇಶನದ ಜವಾಬ್ದಾರಿಯನ್ನೂ ರಿಷಬ್ ಶೆಟ್ಟಿ ಹೊತ್ತಿದ್ದು, ಚಿತ್ರಕ್ಕೆ ‘ಕಾಂತಾರ’ ಎಂದು ನಾಮಕರಣ ಮಾಡಲಾಗಿದೆ. ಪ್ರಸ್ತುತ ಹೊಂಬಾಳೆ ಫಿಲ್ಮ್ಸ್ ಸಂಸ್ಥೆಯ ಅಡಿಯಲ್ಲಿ …
Read More »ಬೆಳಗಾವಿ ಸೇರಿ ರಾಜ್ಯದ 6 ಜಿಲ್ಲೆಗಳಲ್ಲಿ ಇಂದು ರಾತ್ರಿಯಿಂದಲೇ ಕೊರೋನಾ ಕರ್ಫ್ಯೂ ಜಾರಿ
ಬೆಂಗಳೂರು – ರಾಜ್ಯದ 6 ಜಿಲ್ಲೆಗಳಲ್ಲಿ ಇಂದು ರಾತ್ರಿಯಿಂದಲೇ ಕೊರೋನಾ ಕರ್ಫ್ಯೂ ಜಾರಿಯಾಗಲಿದ್ದು, ಸೋಮವಾರ ಬೆಳಗ್ಗೆ 5 ಗಂಟೆಯವರೆಗೂ ಕರ್ಫ್ಯೂ ಇರಲಿದೆ. ಮಹಾರಾಷ್ಟ್ರ ಮತ್ತು ಕೇರಳ ಗಡಿ ಜಿಲ್ಲೆಗಳಲ್ಲಿ ವೀಕ್ ಎಂಡ್ ಕರ್ಫ್ಯೂ ಜಾರಿಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ತಜ್ಞರ ಸಭೆಯ ಬಳಿಕ ಅವರು ಈ ಮಾಹಿತಿ ನೀಡಿದ್ದಾರೆ. ರಾಜ್ಯಾದ್ಯಂತ ಇಂದಿನಿಂದಲೇ ನೈಟ್ ಕರ್ಫ್ಯೂ ಜಾರಿಯಾಗಲಿದೆ. ರಾತ್ರಿ 9 ಗಂಟೆಯಿಂದ ಬೆಳಗ್ಗೆ 5 ಗಂಟೆಯವರೆಗೆ ನೈಟ್ ಕರ್ಫ್ಯೂ …
Read More »ನಾನು ರಾಜಕೀಯ ಸೇರುವುದು ಸತ್ಯಕ್ಕೆ ದೂರವಾದ ಸಂಗತಿ: ರವಿ ಡಿ. ಚನ್ನಣ್ಣವರ್
ನವದೆಹಲಿ: ಬಿಜೆಪಿ ಸೇರುತ್ತಾರೆ ಎಂಬ ಸುದ್ದಿಗೆ ಐಪಿಎಸ್ ಅಧಿಕಾರಿ ರವಿ ಡಿ. ಚನ್ನಣ್ಣವರ್ ಸ್ಪಷ್ಟನೆ ಕೊಟ್ಟಿದ್ದಾರೆ. ನಾನು ಭರವಸೆ ಎಂಬ ಪುಸ್ತಕವನ್ನು ಬರೆಯುತ್ತಿದ್ದು, ಇದರ ಪ್ರಯುಕ್ತ ಇತ್ತೀಚೆಗೆ ನನ್ನ ಇತ್ತೀಚಿನ ರಜೆ ದಿನಗಳಲ್ಲಿ ನನ್ನ ಹಳೆಯ ಸ್ನೇಹಿತರ ಮನೆಗಳನ್ನು ದೇವಸ್ಥಾನಗಳನ್ನು, ಶ್ರೀ ಮಠಗಳನ್ನು ಭೇಟಿಯಾಗಿ ಮಾಹಿತಿ ಕಲೆಹಾಕುತ್ತಿದ್ದೇನೆ. ಆ ಸಂದರ್ಭದ ವಿವಿಧ ಫೋಟೋಗಳನ್ನು ಉಪಯೋಗಿಸಿಕೊಂಡು ಕೆಲವು ಮಾಧ್ಯಮಗಳು ವಿಶೇಷವಾದ ಅರ್ಥವನ್ನು ಕಲ್ಪಸಿ ಬಿತ್ತರಿಸುತ್ತಿವೆ. ಈ ವಿಚಾರ ನನ್ನ ಗಮನಕ್ಕೆ ಬಂದಿದೆ. …
Read More »ರಾಜೀವ್ ಗಾಂಧಿ ಖೇಲ್ ರತ್ನ ಅಲ್ಲ ಇನ್ನು ಮುಂದೆ ‘ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ’ ಪ್ರಶಸ್ತಿ
ನವದೆಹಲಿ: ದೇಶದಲ್ಲಿ ಕ್ರೀಡಾ ಪಟುಗಳಿಗೆ ನೀಡುವ ಅತ್ಯುನ್ನತ ಪುರಸ್ಕಾರ ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿಯ ಹೆಸರು ಬದಲಾವಣೆಯಾಗಿದೆ. ಇನ್ನು ಮುಂದೆ ‘ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ’ ಪ್ರಶಸ್ತಿಯೆಂದು ಮರುನಾಮಕರಣ ಮಾಡಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಟ್ವಿಟ್ಟರ್ ಮೂಲಕ ತಿಳಿಸಿದ್ದಾರೆ. ದೇಶದಾದ್ಯಂತ ಹಲವು ಜನ ನನಗೆ ಇನ್ನು ಮುಂದೆ ಖೇಲ್ ರತ್ನ ಪ್ರಶಸ್ತಿಯನ್ನು ಮೇಜರ್ ಧ್ಯಾನ್ ಚಂದ್ ಅವರ ಹೆಸರಿನಲ್ಲಿ ನೀಡಿ ಎಂದು ಮನವಿ ಸಲ್ಲಿಸಿದ್ದರು. ಅವರ …
Read More »ವೈನ್ಶಾಪ್ ಮುಚ್ಚಿಸಿ – ಜನಜಾಗೃತಿ ವೇದಿಕೆ ಆಗ್ರಹ
ಬೆಳ್ತಂಗಡಿ : ಬೆಳ್ತಂಗಡಿ ತಾಲೂಕಿನ, ಕಣಿಯೂರು ಗ್ರಾಮದ, ಪದ್ಮುಂಜ ವೃತ್ತದ ಬಳಿ ಕೊಲ್ಲಾಜೆ ಕಾಂಪ್ಲೆಕ್ಸ್ನಲ್ಲಿ ತೆರೆಯಲಾದ ವೈನ್ಶಾಪ್/ಬಾರ್ಎಂಡ್ ರೆಸ್ಟೋರೆಂಟ್ನ್ನು ಕೂಡಲೇ ಮುಚ್ಚಿಸುವಂತೆ ಜನಜಾಗೃತಿ ವೇದಿಕೆಯು ತಹಶೀಲ್ದಾರ ಮಹೇಜ್ಜೆ. ರವರಿಗೆ ಮನವಿ ಮಾಡಿದೆ. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿಯೋಜನೆಯ ಮೂಲಕ ಜನಜಾಗೃತಿ ವೇದಿಕೆಯ ಪ್ರಾಯೋಜಕತ್ವದಲ್ಲಿ ಸಾವಿರಾರು ಮದ್ಯವರ್ಜನ ಶಿಬಿರಗಳನ್ನು ಬೆಳ್ತಂಗಡಿ ತಾಲೂಕಿನಲ್ಲಿಯೇ ನಡೆಸುತ್ತಿದ್ದು, ಇದರಲ್ಲಿ ಪಾನಮುಕ್ತರಾದವರು ಮರು ವ್ಯಸನಕ್ಕೆ ಬಲಿ ಬೀಳಲು ವೈನ್ಶಾಪ್ ಕಾರಣವಾಗುತ್ತದೆ. ಹಳ್ಳಿಯ ಅಭಿವೃದ್ಧಿಯ ದೃಷ್ಟಿಯಿಂದ ಮಹಿಳೆಯರು ಮತ್ತು …
Read More »2ನೇ ಅಲೆಯ ಇಳಿಕೆಯ ನಂತ್ರ, ಕೊರೋನಾ 3ನೇ ಅಲೆಯ ಆರಂಭದ ಮುನ್ಸೂಚನೆ ಮತ್ತೆ ಲಾಕ್ ಡೌನ್ ಫಿಕ್ಸ್?
ಬೆಂಗಳೂರು : ರಾಜ್ಯದಲ್ಲಿ ಕೊರೋನಾ 2ನೇ ಅಲೆಯ ಇಳಿಕೆಯ ನಂತ್ರ, ಈಗ ಕೊರೋನಾ 3ನೇ ಅಲೆಯ ಆರಂಭದ ಮುನ್ಸೂಚನೆ ದೊರೆತಿದೆ. ಇದೇ ಕಾರಣದಿಂದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಮಹತ್ವದ ರಾಜ್ಯ ತಾಂತ್ರಿಕ ಸಲಹಾ ಸಮಿತಿಯ ಸಭೆ ಕೂಡ ನಡೆಯುತ್ತಿದೆ. ಈ ಸಭೆಯಲ್ಲಿ ಕೊರೋನಾ ಪಾಸಿಟಿವಿಟಿ ದರ ಹೆಚ್ಚಿರುವಂತ ಜಿಲ್ಲೆಗಳಲ್ಲಿ ಕಠಿಣ ರೂಲ್ಸ್ ಜಾರಿಗೆ ಸೂಚಿಸಿದೆ. ಹೀಗಾಗಿ ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ( Karnataka Lockdown ) ಫಿಕ್ಸ್ …
Read More »ತಪ್ಪಿದ ಸಚಿವ ಸ್ಥಾನ; ಶಾಸಕಿ ಪೂರ್ಣಿಮಾ ಅಭಿಮಾನಿಗಳಿಂದ ಪಾದಯಾತ್ರೆ
ಚಿತ್ರದುರ್ಗ: ಸಚಿವ ಸ್ಥಾನ ಕೈತಪ್ಪಿದ ಹಿನ್ನೆಲೆಯಲ್ಲಿ ಹಿರಿಯೂರು ಕ್ಷೇತ್ರದ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಅಭಿಮಾನಿಗಳು ಅಸಮಾಧಾನಗೊಂಡಿದ್ದು ಪಾದಯಾತ್ರೆ ನಡೆಸಿ ಅಸಾಮಾಧನ ಹೊರ ಹಾಕಿದ್ದಾರೆ. ಶಾಸಕಿಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿದ ಅಭಿಮಾನಿಗಳು, ಧರ್ಮಪುರದಿಂದ-ಹಿರಿಯೂರು ನಗರಕ್ಕೆ ಪಾದಯಾತ್ರೆ ನಡೆಸುವ ಮೂಲಕ ಪ್ರತಿಭಟನೆ ನಡೆಸಿದ್ದು, ಸಾಮಾಜಿಕ ನ್ಯಾಯ, ಮಹಿಳಾ ಕೋಟಾದಡಿ ಮಂತ್ರಿಗಿರಿ ನೀಡುವಂತೆ ಆಗ್ರಹ ಪಡಿಸಿದ ಅಭಿಮಾನಿಗಳು, ಮಂತ್ರಿ ಸ್ಥಾನ ನೀಡುವುದಾಗಿ ಆಸೆ ತೋರಿಸಿ ಬೊಮ್ಮಾಯಿ ಸರ್ಕಾರ ಮೋಸ ಮಾಡಿದೆ ಎಂದು …
Read More »ಅತೃಪ್ತರು ಭಿನ್ನಮತ ಶುರು ಮಾಜಿ ಸಚಿವ ರಮೇಶ ಜಾರಕಿಹೊಳಿ ಅವರ ಬೆಂಗಳೂರಿನ ನಿವಾಸದಲ್ಲಿ ರಾತ್ರಿ ಸಭೆ
ಬೆಂಗಳೂರು– ರಾಜ್ಯದ ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರಕಾರದಲ್ಲಿ ಸಚಿವಸ್ಥಾನ ಸಿಗದ ಹಿನ್ನೆಲೆಯಲ್ಲಿ ಅತೃಪ್ತರು ಭಿನ್ನಮತ ಶುರು ಮಾಡಿದ್ದು, ಇಂದು ರಾತ್ರಿ ಸಭೆ ಸೇರಲು ನಿರ್ಧರಿಸಿದ್ದಾರೆ. ಮಾಜಿ ಸಚಿವ ರಮೇಶ ಜಾರಕಿಹೊಳಿ ಅವರ ಬೆಂಗಳೂರಿನ ನಿವಾಸದಲ್ಲಿ ರಾತ್ರಿ ಸಭೆ ನಡೆಯಲಿದೆ ಎಂದು ಗೊತ್ತಾಗಿದೆ. ರಮೇಶ ಜಾರಕಿಹೊಳಿ ನೇತೃತ್ವದಲ್ಲಿ 17 ಶಾಸಕರು ಕಾಂಗ್ರೆಸ್ – ಜೆಡಿಎಸ್ ತೊರೆದು ಬಿಜೆಪಿಗೆ ಬಂದು ಬಿಜೆಪಿ ಸರಕಾರ ರಚನೆಗೆ ಕಾರಣರಾಗಿದ್ದರು. ಇವರಲ್ಲಿ ಕೆಲವರಿಗೆ ಹಿಂದಿನ ಯಡಿಯೂರಪ್ಪ …
Read More »ಮುಖ್ಯಮಂತ್ರಿ ಪ್ರಮೋದ್ ಸಾವಂತ್ ರಾಜೀನಾಮೆಗೆ ರೆವಲ್ಯೂಶನ್ ಗೋವನ್ಸ್ ಒತ್ತಾಯ..!
ಪಣಜಿ : ಮಹಿಳೆಯ ಮೇಲೆ ನಡೆದಿರುವ ಲೈಂಗಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬೇಜವಾಬ್ದಾರಿಯುತ ಹೇಳಿಕೆ ನೀಡಿರುವ ಮುಖ್ಯಮಂತ್ರಿ ಪ್ರಮೋದ ಸಾವಂತ್ ರವರು ಕೂಡಲೆ ರಾಜೀನಾಮೆ ನೀಡಬೇಕು ಎಂದು ರೆವಲ್ಯೂಶನ್ ಗೋವನ್ಸ್ ಒತ್ತಾಯಿಸಿದೆ. ಪಕ್ಷದ ಕಾರ್ಯಾಲಯದಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ರೆವಲ್ಯೂಶನ್ ಗೋವನ್ಸ್ ನ ಸುನಯನಾ ಗಾವಡೆ, ಗೋವಾಕ್ಕೆ ಶಾಂತಿಪ್ರಿಯ ಎಂಬ ಗುರುತು ಬದಲಾಗುತ್ತಿದೆ. ಇದಕ್ಕೆ ಜನಪ್ರತಿನಿಧಿಗಳೇ ಕಾರಣ. ಗೋವಾ ರಾಜ್ಯವು ಯಾವಾಗ ಸುರಕ್ಷಿತವಾಗಲಿದೆ..? ರಾತ್ರಿಯ ಸಂದರ್ಭದಲ್ಲಿ ಹೆಣ್ಣುಮಕ್ಕಳು ಮನೆಯಿಂದ ಹೊರ …
Read More »ಪ್ರಬಲ ಖಾತೆ ಮೇಲೆ ಹಿರಿಯರ ಕಣ್ಣು
ಬೆಂಗಳೂರು: ಸಚಿವ ಸಂಪುಟ ರಚನೆಯಾಗುತ್ತಿದ್ದಂತೆ ಪ್ರಮುಖ ಖಾತೆಗಳ ಮೇಲೆ ಹಿರಿಯ ಸಚಿವರ ಕಣ್ಣು ಬಿದ್ದಿದೆ. ಪ್ರಭಾವಿ ಖಾತೆಗಳಿಗಾಗಿ ಸಿಎಂ ಬಳಿ ಬೇಡಿಕೆ ಇರಿಸಿದ್ದು, ಬಹುತೇಕ ಶುಕ್ರವಾರ ಸಚಿವರಿಗೆ ಖಾತೆಗಳ ಹಂಚಿಕೆಯಾಗುವ ಸಾಧ್ಯತೆ ಇದೆ. ಗೃಹ, ಇಂಧನ, ಕಂದಾಯ, ಆರ್ಡಿಪಿಆರ್, ಬೃಹತ್ ಕೈಗಾರಿಕೆ, ಬೆಂಗ ಳೂರು ನಗರಾಭಿವೃದ್ಧಿ, ಜಲ ಸಂಪನ್ಮೂಲ ಖಾತೆಗಳ ಮೇಲೆ ಹಿರಿಯ ಸಚಿವರು ನಿರೀಕ್ಷೆ ಇರಿಸಿ ದ್ದಾರೆ. ಬಿಎಸ್ವೈ ಸರಕಾರದಲ್ಲಿ ಸಚಿವರಾಗಿದ್ದವರಿಗೆ ಅದೇ ಖಾತೆ ಗಳನ್ನು ನೀಡುವಂತೆ ಪಕ್ಷದ ವರಿಷ್ಠರು ಸಲಹೆ …
Read More »
Laxmi News 24×7