ಬಳ್ಳಾರಿ: ಹುಟ್ಟಿದ ಮಗು ಹೆಣ್ಣು ಎಂಬ ಕಾರಣಕ್ಕೆ ನವಜಾತ ಶಿಶುವನ್ನು ದೇವಸ್ಥಾನದ ಬಳಿ ಬಿಟ್ಟು ಹೋಗಿರುವ ಘಟನೆ ಜಿಲ್ಲೆಯ ಸಿರಗುಪ್ಪ ತಾಲೂಕಿನ ಬಂಡ್ರಾಳು ಗ್ರಾಮದಲ್ಲಿ ನಡೆದಿದೆ. ಬಂಡ್ರಾಳು ಗ್ರಾಮದ ಆಂಜನೇಯ ಸ್ವಾಮಿ ದೇವಸ್ಥಾನದ ಹಿಂಭಾಗದಲ್ಲಿ ಶಿಶುವನ್ನು ಬಿಟ್ಟು ಹೋಗಿದ್ದಾರೆ. ನವಜಾತ ಶಿಶು ಹೆಣ್ಣು ಮಗು ಆದ ಕಾರಣ ದೇವಸ್ಥಾನದ ಬಳಿ ಬಿಟ್ಟು ಹೋಗಿದ್ದಾರೆ ಎಂದು ಹೇಳಲಾಗುತ್ತಿದೆ. ಸ್ಥಳೀಯರು ದೇವಸ್ಥಾನಕ್ಕೆ ಹೋದಾಗ ಈ ಘಟನೆ ಬೆಳಕಿಗೆ ಬಂದಿದ್ದು, ವಿಷಯ ತಿಳಿದು ಸ್ಥಳಕ್ಕೆ …
Read More »ಈ ಸರ್ಕಾರಿ ಶಾಲೆಗೆ ಮಕ್ಕಳನ್ನು ಸೇರಿಸಿದ್ರೆ ಅವರ ಹೆಸರಲ್ಲಿ FD ಇಡ್ತಾರೆ ಟೀಚರ್, ಮಕ್ಕಳಿಗಾಗಿ ವಿಶೇಷ ಆಫರ್ !
ಕೊಪ್ಪಳ:ಈಗ ಸರಕಾರಿ ಶಾಲೆಗಳೆಂದರೆ ಮೂಗು ಮುರಿಯುವವರೆ ಹೆಚ್ಚು, ಸರಕಾರಿ ಶಾಲೆಗಳಿಗೆ ಮಕ್ಕಳನ್ನು ದಾಖಲಿಸುವುದಕ್ಕಿಂತ ಖಾಸಗಿ ಶಾಲೆಯತ್ತ ಪಾಲಕರು ಮುಖ ಮಾಡಿದ್ದಾರೆ, ಈ ಮಧ್ಯೆ ಸರಕಾರಿ ಶಾಲೆಗಳಿಗೆ ಮಕ್ಕಳನ್ನು ಆಕರ್ಷಿಸುವ ಉದ್ದೇಶದಿಂದ ಇಲ್ಲೊಬ್ಬ ಶಿಕ್ಷಕರು ವಿಭಿನ್ನ ಪ್ರಯತ್ನ ಮಾಡಿದ್ದಾರೆ, ಈ ಶಾಲೆಗೆ ಸೇರುವ ಮಕ್ಕಳು 18 ವಯಸ್ಸಾದ ನಂತರ ಮುಂದಿನ ಶಿಕ್ಷಣಕ್ಕೆ ಒಂದಿಷ್ಟು ಸಹಕಾರವಾಗಲಿದೆ, ಈ ಶಿಕ್ಷಕನ ಸಾಧನೆಗೆ ಗ್ರಾಮಸ್ಥರು ಕೊಂಡಾಡುತ್ತಿದ್ದಾರೆ. ಕೊಪ್ಪಳ ತಾಲೂಕಿನ ಹಿರೇಸಿಂದೋಗಿಯಲ್ಲಿರುವ ರೋಟರಿನಗರದ ಸರಕಾರಿ ಕಿರಿಯ ಪ್ರಾಥಮಿಕ …
Read More »ಡೇಟಿಂಗ್ ಅಪ್ ಮೂಲಕ ಕೋಟ್ಯಧಿಪತಿಯಾಗುವ ಕನಸು ಕಂಡಿದ್ದಳು ಆಕೆ. ಆದರೆ ಮುಂದೆ ಆದದ್ದೇ ಬೇರೆ
ನ್ಯೂಸ್ ಡೆಸ್ಕ್ : ಪ್ರೀತಿ ವ್ಯಕ್ತಿಯನ್ನು ಕುರುಡನನ್ನಾಗಿ ಮಾಡುತ್ತದೆ ಎಂದು ಹೇಳಲಾಗುತ್ತದೆ. ಬ್ರಿಟನ್ ನಲ್ಲಿ ಮಹಿಳೆಯೊಬ್ಬಳು ಇಂತಹುದೇ ಪರಿಸ್ಥಿತಿಯನ್ನು ಎದುರಿಸಿದ್ದಾರೆ. ಡೇಟಿಂಗ್ ಅಪ್ ಮೂಲಕ ಪರಿಚಯವಾದ ವ್ಯಕ್ತಿಯ ಮೋಸದ ಪ್ರೀತಿಗೆ ಬಲಿಯಾಗುವ ಮೂಲಕ ಲಕ್ಷಾಂತರ ಹಣ ಕಳೆದುಕೊಂಡಿದ್ದಾಳೆ. ಮಹಿಳೆ ವ್ಯಕ್ತಿಯನ್ನು ಮುಖತಃ ಭೇಟಿಯಾಗದೆ ತನ್ನ ಜೀವಿತಾವಧಿಯ ಗಳಿಕೆಯನ್ನು ಆ ವ್ಯಕ್ತಿಗೆ ಹಸ್ತಾಂತರಿಸಿದಳು. ಅದಾದ ಬಳಿಕ ಮತ್ತೆ ಆ ವ್ಯಕ್ತಿ ಆಕೆಯನ್ನು ಭೇಟಿಯಾಗಲು ಬರಲಿಲ್ಲ ಅಥವಾ ಮಾತನಾಡಲಿಲ್ಲ. ಡೈಲಿ ಮೇಲ್ ವರದಿಯ …
Read More »ಪ್ರೀತಿಸಿ ಮದ್ವೆಯಾದ ಕೆಲವೇ ದಿನಗಳಲ್ಲಿ ಮಹಿಳೆ ಎಸ್ಕೇಪ್: ಆಕೆಯ ಆಧಾರ್ ಕಾರ್ಡ್ ನೋಡಿ ಕುಸಿದುಬಿದ್ದ ಪತಿ!
ಚಿತ್ತೂರು: ಪ್ರೀತಿ ಹೆಸರಲ್ಲಿ ಮದುವೆ ಆಗುವುದಾಗಿ ನಂಬಿಸಿ ವಂಚನೆ ಮಾಡುವ ಅನೇಕ ಪ್ರಕರಣಗಳು ಆಗಾಗ ವರದಿಯಾಗುತ್ತಲೇ ಇವೆ. ಯಾರದ್ದೇ ಸ್ನೇಹ ಮಾಡುವ ಮುನ್ನ ಅವರ ಪೂರ್ವಾಪರ ತಿಳಿದುಕೊಳ್ಳಬೇಕೆಂಬ ಸಲಹೆಗಳ ಹೊರತಾಗಿಯೂ ವಂಚನೆ ಪ್ರಕರಣಗಳು ವರದಿಯಾಗುತ್ತಿರುವುದು ಆತಂಕಕಾರಿ ಸಂಗತಿಯೇ. ಇದೀಗ ಮತ್ತೊಂದು ವಂಚನೆ ಪ್ರಕರಣ ಆಂಧ್ರ ಪ್ರದೇಶದ ಚಿತ್ತೂರು ಜಿಲ್ಲೆಯಲ್ಲಿ ಬೆಳಕಿಗೆ ಬಂದಿದ. ಅನಾಥ ಯುವಕರನ್ನು ಗುರಿಯಾಗಿರಿಸಿ ಅವರನ್ನು ಪ್ರೀತಿಯ ಬಲೆಯಲ್ಲಿ ಕೆಡವಿ ಮದುವೆ ಎಂಬ ಹೆಸರಿನಲ್ಲಿ ಹಣ ಪೀಕಿ ವಂಚಿಸುತ್ತಿದ್ದ …
Read More »ರಾಜ್ಯದ ಪ್ರಮುಖ ಜಿಲ್ಲೆಗಳಲ್ಲಿ ಸಿಕ್ಕಾಪಟ್ಟೆ ಮಳೆ; ಎಲ್ಲೆಲ್ಲಿ ಏನೆಲ್ಲಾ ಆಯ್ತು..?
ಬೆಂಗಳೂರು: ರಾಜ್ಯಾದ್ಯಂತ ವರುಣನ ಆಭರ್ಟ ಜೋರಾಗಿದ್ದು, ಈ ಮಳೆ ಕೆಲವು ಭಾಗಗಳ ಜನರಿಗೆ ಹರ್ಷ ಮೂಡಿಸಿದರೆ, ಹಲವೆಡೆ ಅವಾಂತರ ಸೃಷ್ಟಿಸಿ ಜನರ ಶಾಪಕ್ಕೆ ಗುರಿಯಾಗ್ತಿದೆ. ಕೊಡಗಿನಲ್ಲಿ ಮುಂದುವರಿದ ಮಳೆ ಇನ್ನು ಕೊಡಗು ಜಿಲ್ಲೆಯಲ್ಲೂ ಕೂಡ ವರಣನ ಅಬ್ಬರ ಮುಂದುರೆದಿದ್ದು, ಇಂದೂ ಕೂಡ ಜಿಲ್ಲೆಯಾದ್ಯಂತ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ರಾತ್ರಿಯಿಂದ ಬಿಡುವು ನೀಡಿದ್ದ ಮಳೆ ಮುಂಜಾನೆ ಯಾಗುತ್ತಿದ್ದಂತೆ ಮತ್ತೆ ಆರ್ಭಟ ಮುಂದುವರಿದಿದೆ. ಕಾವೇರಿ ನದಿ ನೀರಿನ ಮಟ್ಟದಲ್ಲಿ …
Read More »ಗುತ್ತಿಗೆದಾರನಿಂದ ಲಂಚ ಪಡೆಯುತ್ತಿದ್ದ ವೇಳೆ ಎಸಿಬಿ ಬಲೆಗೆ ಬಿದ್ದ ಗದಗ ನಗರಸಭೆ ಎಇಇ
ಗದಗ: ಗುತ್ತಿಗೆದಾರರೊಬ್ಬರಿಂದ ಲಂಚ ಪಡೆಯುತ್ತಿದ್ದ ಗದಗ -ಬೆಟಗೇರಿ ನಗರಸಭೆ ಸಹಾಯಕ ಕಾರ್ಯಪಾಲಕ ಅಭಿಯಂತರ ವರ್ಧಮಾನ ಎಸ್. ಹುದ್ದಾರ ಬುಧವಾರ ಎಸಿಬಿ ಬಲೆಗೆ ಬಿದ್ದಿದ್ದಾರೆ. ನಗರಸಭೆಯ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ವರ್ಧಮಾನ ಎಸ್. ಹುದ್ದಾರ ಅವರು ಸಿಕ್ಕಿಬಿದ್ದಿದ್ದಾರೆ. ಘನತ್ಯಾಜ್ಯ ವಿಲೇವಾರಿಗೆ ಗುತ್ತಿಗೆ ಪಡೆದಿದ್ದ ಗುತ್ತಿಗೆದಾರನಿಗೆ ಅನುದಾನ ಬಿಡುಗಡೆ ಮಾಡಲು 25 ಸಾವಿರ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ಬಗ್ಗೆ ಗುತ್ತಿಗೆದಾರ ಅಬ್ದುಲ್ ಸಲಾಂ ಮನಿಯಾರ್ ಎಂಬುವವರು ಎಸಿಬಿ ಅಧಿಕಾರಿಳಿಗೆ ದೂರು …
Read More »ಸಹಕಾರದಲ್ಲಿ ಕುಟುಂಬ ರಾಜಕೀಯಕ್ಕೆ ಬ್ರೇಕ್
ಸಹಕಾರ ಪದವೇ ಒಂದು ಆಕರ್ಷಣೆ. ಸಹಕಾರ ಸಂಘಗಳ ಕಲ್ಪನೆಯೇ ರೋಮಾಂಚನಗೊಳಿಸುವ ವಿಚಾರವಾಗಿದೆ. ಈ ಕಲ್ಪನೆ ರೂಪಗೊಂಡಿದ್ದು ಮೊದಲಿಗೆ ಇಂಗ್ಲೆಂಡಿನಲ್ಲಿ. ವಿಶ್ವದಲ್ಲಿ ಸಹಕಾರ ಕ್ಷೇತ್ರದ ಮೂಲವೇ ಇಂಗ್ಲೆಂಡ್ ದೇಶವಾಗಿದೆ. ಭಾರತದಲ್ಲಿ ಮೊಟ್ಟ ಮೊದಲಿಗೆ ಶಿದ್ದನಗೌಡ ಸಣ್ಣ ರಾಮನಗೌಡ ಪಾಟೀಲರ ನೇತೃತ್ವದಲ್ಲಿ ಕರ್ನಾಟಕದ ಗದಗ ತಾಲ್ಲೂಕಿನ ಕಣಗಿಹಾಳದಲ್ಲಿ 1905ರಲ್ಲಿ ಪ್ರಥಮ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಜನ್ಮ ತಾಳಿತು. ಏಷ್ಯಾ ಖಂಡದ ಪ್ರಥಮ ಸಹಕಾರ ಸಂಘವೆನಿಸಿದ ಈ ಸಂಘದ ಅಧ್ಯಕ್ಷರಾದ ಶಿದ್ದನಗೌಡ …
Read More »ವಿಜಯಪುರ ಹೆಸ್ಕಾಂ ಎಇಇ ಸಿದ್ದರಾಮ ಬಿರಾದಾರ ಮನೆ ಮೇಲೆ ಎಸಿಬಿ ದಾಳಿ; ದಾಖಲೆ ಪರಿಶೀಲನೆ
ವಿಜಯಪುರ: ಜಿಲ್ಲೆಯಲ್ಲಿ ಗುರುವಾರ ಬೆಳ್ಳಂಬೆಳಿಗ್ಗೆ ಎಸಿಬಿ ಅಧಿಕಾರಿಗಳು ನಗರದಲ್ಲಿರುವ ಕೆಪಿಟಿಸಿಎಲ್ ಎಇಇ ಮನೆ ಮೇಲೆ ದಾಳಿ ನಡೆಸಿದ್ದಾರೆ. ಸಿದ್ದರಾಮ ಮಲ್ಲಿಕಾರ್ಜುನ ಬಿರಾದಾರ ಎಂಬ ಕೆಪಿಟಿಸಿಎಲ್ ಕಚೇರಿಯ ಎಇಇ ಮನೆ ಮೇಲೆ ದಾಳಿ ನಡೆಸಿದ್ದಾರೆ. ವಿಜಯಪುರ ನಗರದ ಸುಕೂನ್ ಲೇಔಟ್ ನಲ್ಲಿರುವ ಕೆಪಿಟಿಸಿಎಲ್ ಎಇಇ ಸಿದ್ದರಾಮ ಬಿರಾದಾರಗೆ ಸೇರಿದ ನಗರದ ಸುಕೂನ್ ಕಾಲೋನಿಯಲ್ಲಿರುವ ನಿವಾಸ, ಬಿ.ಕೆ.ಲೋಣಿ ಗ್ರಾಮದ ಮನೆ, ತೋಟದ ಮನೆ ಮಾತ್ರವಲ್ಲದೇ ಸಿದ್ದರಾಮ ಅಳಿಯ ಅರ್ಜುನ ಬಿರಾದಾರ್ ಮನೆ ಮೇಲೂ …
Read More »ದರ್ಶನ್ ವಿರುದ್ಧ ದೊಡ್ಡ ಬಾಂಬ್ ಸಿಡಿಸಿದ ಇಂದ್ರಜಿತ್ ಲಂಕೇಶ್
ದರ್ಶನ್ ಹಾಗೂ ಅವರ ಗೆಳೆಯರು ಕೆಲವು ದಿನಗಳ ಹಿಂದೆ ಮೈಸೂರಿನ ಸಂದೇಶ್ ಪ್ರಿನ್ಸ್ ಹೋಟೆಲ್ನಲ್ಲಿ ದಲಿತ ಯುವಕನಿಗೆ ಹೊಡೆದಿದ್ದಾರೆ. ಅವನಿಗೆ ಗಂಭೀರ ಗಾಯಗಳಾಗಿವೆ ಎಂದು ನಿರ್ದೇಶಕ ಇಂದ್ರಜಿತ್ ಲಂಕೇಶ್ ಆರೋಪ ಮಾಡಿದ್ದಾರೆ. ಇಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರ ನಿವಾಸಕ್ಕೆ ಭೇಟಿ ನೀಡಿದ್ದ ಇಂದ್ರಜಿತ್ ಲಂಕೇಶ್, ಮಾಧ್ಯಮಗಳೊಟ್ಟಿಗೆ ಮಾತನಾಡಿ, ”ದರ್ಶನ್ ಹಾಗೂ ಗೆಳೆಯರು ದಲಿತ ಯುವಕನ ಮೇಲೆ ಹಲ್ಲೆ ಮಾಡಿರುವ ಪ್ರಕರಣದ ಕೆಲವು ಸಾಕ್ಷ್ಯಗಳನ್ನು ಗೃಹ ಸಚಿವರಿಗೆ ನೀಡಿದ್ದೇನೆ. …
Read More »ಪುಡ್ಕಿಟ್ ವಿತರಣೆಯಲ್ಲಿ ನೂಕಾಟ ಉಂಟಾಗಿ ಗಲಾಟೆ ಆರಂಭ
ಚಿಕ್ಕಬಳ್ಳಾಪುರ: ಫುಡ್ಕಿಟ್ ವಿತರಣೆ ಸಂದರ್ಭದಲ್ಲಿ ಜನ ಕಿತ್ತಾಟ ನಡೆಸಿ ಕಿಟ್ಗಳನ್ನು ಹೊತ್ತೊಯ್ದ ಘಟನೆ ಜಿಲ್ಲೆಯ ಬಾಗೇಪಲ್ಲಿಯಲ್ಲಿ ನಡೆದಿದೆ. ಬಾಗೇಪಲ್ಲಿ ಶಾಸಕ ಸುಬ್ಬಾರೆಡ್ಡಿ ಇಂದು ಪಟ್ಟಣದ ಶಾದಿ ಮಹಲ್ನಲ್ಲಿ ಪುಡ್ಕಿಟ್ ವಿತರಣೆ ಕಾರ್ಯಕ್ರಮ ಆಯೋಜಿಸಿದ್ದರು. ಫುಡ್ ಕಿಟ್ ವಿತರಣಾ ಕಾರ್ಯಕ್ರಮಕ್ಕೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆಗಮಿಸಿದ್ದರು. ಸಾಂಕೇತಿಕವಾಗಿ ಪುಡ್ಕಿಟ್ಗೆ ಚಾಲನೆ ನೀಡಿ ನಾಯಕರು ತೆರಳಿದ ಬಳಿಕ ಶಾಸಕರು ಪುಡ್ಕಿಟ್ ವಿತರಿಸಲು ಆರಂಭಿಸಿದ್ದಾರೆ. ಈ …
Read More »
Laxmi News 24×7