Breaking News

ರಾಜಕೀಯ

ಕೆಆರ್ ಎಸ್ ಡ್ಯಾಮ್ ವಿಚಾರ: ಸುಮಲತಾ ಪರವಾಗಿ ಬ್ಯಾಟ್ ಬೀಸಿದ ಸಿದ್ದರಾಮಯ್ಯ

ಹುಬ್ಬಳ್ಳಿ: ಕೆಆರ್ ಎಸ್ ಡ್ಯಾಮ್ ಬಿರುಕು ಬಿಟ್ಟಿದೆ ಎಂದು ಸಂಸದೆ ಸುಮಲತಾ ಆರೋಪ ಮಾಡಿದ್ದಾರೆ. ಅವರು ಆರೋಪ ಮಾಡಿದ ನಂತರ ಸರ್ಕಾರವಾಗಲಿ, ಗಣಿ ಇಲಾಖೆಯಾದರು ಸ್ಥಳಕ್ಕೆ ಹೋಗಿ ಪರಿಶೀಲನೆ ನಡೆಸಬೇಕಾಗಿತ್ತು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು. ಸುಮಲತಾ ಅವರು ತಮ್ಮ ಪುತ್ರನನ್ನು ಸೋಲಿಸಿದ್ದಕ್ಕೆ ಕುಮಾರಸ್ವಾಮಿಯವರು ಆರೋಪಕ್ಕೆ ಮುಂದಾಗಿರಬಹುದು. ಕೆಆರ್ ಎಸ್ ಸುತ್ತಮುತ್ತಲಿನ 20 ಕಿಲೋ ಮೀಟರ್ ಸುತ್ತಮುತ್ತ ಅಕ್ರಮ ಗಣಿಗಾರಿಕೆ ನಡೆಯುತ್ತಿದೆ. ಅಲ್ಲಿ ಜೆಡಿಎಸ್ ನಾಯಕರ ಗಣಿ ಕಂಪನಿಗಳು …

Read More »

ಎಸ್‌ಎಸ್ ಎಲ್ ಸಿ ಪರೀಕ್ಷೆ ನಡೆಸಲು ಸಮ್ಮತಿಸಿದ ಹೈಕೋರ್ಟ್

ಬೆಂಗಳೂರು: ಪ್ರಸಕ್ತ ಶೈಕ್ಷಣಿಕ ವರ್ಷದ ಎಸ್.ಎಸ್.ಎಲ್.ಸಿ ಪರೀಕ್ಷೆ ನಡೆಸಲು ಹೈಕೋರ್ಟ್ ಸಮ್ಮತಿಸಿದೆ. ಕೋವಿಡ್ ಹಿನ್ನೆಲೆಯಲ್ಲಿ ದ್ವೀತಿಯ ಪಿಯು ಪರೀಕ್ಷೆ ರದ್ದುಪಡಿಸಿರುವಂತೆ ಹತ್ತನೇ ತರಗತಿ ಪರೀಕ್ಷೆಗಳನ್ನೂ ಸಹ ರದ್ದುಪಡಿಸಬೇಕೆಂದು ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಮಕ್ಕಳ ಶೈಕ್ಷಣಿಕ ಭವಿಷ್ಯದ ಹಿತದೃಷ್ಟಿಯಿಂದ ಪರೀಕ್ಷೆ ನಡೆಸುವುದು ಒಳ್ಳೆಯದು ಎಂದು ಅಭಿಪ್ರಾಯಪಟ್ಟಿರುವ ಹೈಕೋರ್ಟ್, ಕೋವಿಡ್ ಸುರಕ್ಷಿತ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಪರೀಕ್ಷೆ ನಡೆಸುವಂತೆ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ ನೀಡಿದೆ.   ಈ ಬಾರಿ ಎಸ್‌ಎಸ್‌ಎಲ್ …

Read More »

ಮಾಟ-ಮಂತ್ರ ಎಂದು ಜನರಿಗೆ ಮೋಸ ಮಾಡುತ್ತಿದ್ದ ಡೋಂಗಿ ಬಾಬಾನಿಗೆ ಸ್ಥಳೀಯರಿಂದ ಹಿಗ್ಗಾಮುಗ್ಗಾ ಥಳಿತ

ಗದಗ: ಕಷ್ಟಪಟ್ಟು ಮೈ ಬಗ್ಗಿಸಿ ದುಡಿಯದೇ ಆರಾಮಾಗಿ ಹಣ ಮಾಡಲು ಮುಂದಾಗಿದ್ದ, ಜನರನ್ನು ನಂಬಿಸಿ ಹಣ ಮಾಡುತ್ತಿದ್ದ ಡೋಂಗಿ ಬಾಬಾನಿಗೆ ಸ್ಥಳೀಯರು ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಗದಗ ನಗರದ ಗಂಗಿಮಡಿ ಆಶ್ರಯ ಕಾಲೋನಿಯಲ್ಲಿ ಡೋಂಗಿ ಬಾಬಾ ಅಲಿಯಾಸ್ ಆಸೀಫ್ ಜಾಗಿರದಾರ್ ಎಂಬುವ ವ್ಯಕ್ತಿ ಜನರನ್ನು ನಂಬಿಸಿ ಮೋಸ ಮಾಡುತ್ತಿದ್ದ. ಸದ್ಯ ಈತನ ಕೃತ್ಯ ಬಯಲಾಗಿದ್ದು ಸ್ಥಳೀಯರು ಡೋಂಗಿ ಬಾಬಾನಿಗೆ ತಕ್ಕ ಪಾಠ ಕಲಿಸಿದ್ದಾರೆ. ಮೂಲತಃ ವಿಜಯಪುರ ಜಿಲ್ಲೆಯವನಾಗಿದ್ದ ಡೋಂಗಿ ಬಾಬಾ ಅನೇಕ …

Read More »

ಹಾಳಾದ ರಸ್ತೆ, ಸೇತುವೆ ದುರಸ್ತಿಪಡಿಸಿ: ಅಧಿಕಾರಿಗಳಿಗೆ ಸಚಿವ ಸೂಚನೆ

ಬೀದರ್: ಜಿಲ್ಲೆಯಲ್ಲಿ ಕೆಲವು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಕೆಲವೆಡೆ ರಸ್ತೆ ಹಾಗೂ ಸೇತುವೆಗಳು ಹಾಳಾಗಿವೆ. ತಕ್ಷಣ ದುರಸ್ತಿ ಗೊಳಿಸಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವಾಣ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಕೆಲವು ಕಡೆಗಳಲ್ಲಿ ರಸ್ತೆ ಮೇಲೆ ಮಳೆ ನೀರು ನಿಂತು ರಸ್ತೆಯೇ ಕಾಣದಂತಹ ಸ್ಥಿತಿಯಿದೆ. ರಸ್ತೆಗಳ ಮೇಲೆ ನೀರು ನಿಲ್ಲದಂತೆ ನೋಡಿಕೊಳ್ಳಬೇಕು. ರಸ್ತೆಗಳಲ್ಲಿ ಉರುಳಿ ಬಿದ್ದ ಮರಗಳನ್ನು ತೆರವುಗೊಳಿಸಿ, ಸಂಚಾರಕ್ಕೆ ಅನುಕೂಲ ಮಾಡಿಕೊಡಬೇಕು. ಅಲ್ಲಲ್ಲಿ …

Read More »

ಹುಬ್ಬಳ್ಳಿ: ನೆಲೆ ನಿಂತರೂ ಅಲೆಮಾರಿಗಳಿಗಿಲ್ಲ ಸೌಲಭ್ಯ

ಕಲಬುರ್ಗಿ: ಡಾಂಬರ್‌ ಕಾಣದ, ತಗ್ಗು ಗುಂಡಿಗಳಿಂದ ಕೂಡಿದ ದೂಳುಮಯ ರಸ್ತೆ, ಮಳೆ ಬಂದರೆ ಸೋರುವ ಜೋಪಡಿಗಳು, ಚರಂಡಿ ಇಲ್ಲದೆ ಎಲ್ಲೆಂದರಲ್ಲಿ ನಿಂತಿರುವ ತ್ಯಾಜ್ಯ ನೀರು… ನಗರ ಹೊರವಲಯದ ಶಹಾಬಾದ್ ರಸ್ತೆಯಲ್ಲಿನ ಅಲೆಮಾರಿ ಬುಡ್ಗ ಜಂಗಮ ಕಾಲೊನಿಯ ದುಸ್ಥಿತಿ ಇದು. ರಾಜ್ಯದ ವಿವಿಧ ಭಾಗಗಳಿಂದ ಬಂದು ಕಳೆದ 8 ವರ್ಷಗಳಿಂದ ಇಲ್ಲಿಯೇ ನೆಲೆ ಕಂಡುಕೊಂಡಿರುವ ಬುಡ್ಗ ಜಂಗಮ ಸಮುದಾಯದ 200ಕ್ಕೂ ಹೆಚ್ಚು ಕುಟುಂಬಗಳು ಮೂಲಸೌಲಭ್ಯದಿಂದ ವಂಚಿತವಾಗಿವೆ. ಯಾದಗಿರಿ ಜಿಲ್ಲೆ ಯರಗೋಳ ಗ್ರಾಮದ …

Read More »

ಮುಳ್ಳೂರು ಘಾಟ್‌ ಮಾರ್ಗದಲ್ಲೆ ಪ್ರಯಾಣ: ಆತಂಕ

ರಾಮದುರ್ಗ (ಬೆಳಗಾವಿ ಜಿಲ್ಲೆ): ಕೆಎಸ್‌ಆರ್‌ಟಿಸಿ ಬಸ್‌ಗಳು ಸೇರಿದಂತೆ ವಾಹನಗಳು ಅಪಾಯಕಾರಿಯಾದ ರಸ್ತೆಯಲ್ಲೇ ಸಂಚರಿಸುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ‘ಮೃತ್ಯುಕೂಪ’ ಎಂದೇ ಅಪಖ್ಯಾತಿ ಹೊಂದಿದ್ದ ಇಲ್ಲಿನ ಮುಳ್ಳೂರು ಘಾಟ್‌ನಲ್ಲಿ ವಾಹನಗಳಲ್ಲಿ ಹೋಗುವವರು ಕೈಯಲ್ಲಿ ಜೀವ ಹಿಡಿದುಕೊಂಡೆ ಪ್ರಯಾಣಿಸಬೇಕಿತ್ತು. ತಾಲ್ಲೂಕಿನಲ್ಲಿ ಅತಿ ಹೆಚ್ಚು ಅಪಘಾತಗಳಾಗಿ ಸಾವು-ನೋವು ಸಂಭವಿಸಿರುವ ಘಾಟ್ ಸುಧಾರಣೆಗೆ ಸಾಕಷ್ಟು ಹೋರಾಟಗಳು ನಡೆದಿದ್ದವು. ಹೊಸ ಮಾರ್ಗ ನಿರ್ಮಿಸುವಂತೆ ಬೇಡಿಕೆ ಇತ್ತು. ಹಿಂದಿನ ಶಾಸಕ ಅಶೋಕ ಪಟ್ಟಣ ಅವರ ಪ್ರಯತ್ನದಿಂದ ರಾಜ್ಯ ಸರ್ಕಾರದಿಂದ ವಿಶೇಷ …

Read More »

3300 ಕ್ಕೂ ಹೆಚ್ಚು ಬ್ಯಾಂಕ್ ಹುದ್ದೆಗಳ ನೇಮಕಾತಿ, ಕನ್ನಡದಲ್ಲಿ ನಡೆಯಲ್ಲ ಎಕ್ಸಾಮ್

ಬೆಂಗಳೂರು: ಪ್ರಾದೇಶಿಕ ಗ್ರಾಮೀಣ ಬ್ಯಾಂಕುಗಳ ಹುದ್ದೆಗಳ ನೇಮಕಾತಿಗೆ ಕನ್ನಡದಲ್ಲಿ ಪರೀಕ್ಷೆ ನಡೆವುದಾಗಿ ಹೇಳಲಾಗಿತ್ತು. ಬ್ಯಾಂಕ್ ಸಿಬ್ಬಂದಿ ನೇಮಕಾತಿ ಸಂಸ್ಥೆ -ಐಬಿಪಿಎಸ್ ಈ ಬಗ್ಗೆ ಭರವಸೆ ನೀಡಿತ್ತಾದರೂ, 11 ರಾಷ್ಟ್ರೀಕೃತ ಬ್ಯಾಂಕುಗಳ ಕ್ಲರ್ಕ್ ಹುದ್ದೆಗಳ ನೇಮಕಾತಿಗೆ ಇಂಗ್ಲಿಷ್ ಮತ್ತು ಹಿಂದಿಯಲ್ಲಿ ಮಾತ್ರ ಪರೀಕ್ಷೆ ನಡೆಸಲಾಗುವುದು ಎಂದು ಹೇಳಲಾಗಿದೆ. ಕೆನರಾ ಬ್ಯಾಂಕ್ 682 ಹುದ್ದೆಗಳು, ಬ್ಯಾಂಕ್ ಆಫ್ ಇಂಡಿಯಾ 209 ಹುದ್ದೆಗಳು ಸೇರಿದಂತೆ 3300 ಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿ ಪ್ರಕ್ರಿಯೆ ನಡೆಯಲಿದ್ದು, …

Read More »

ಅಸಂಘಟಿತ ವಲಯದ ಕಾರ್ಮಿಕರು 2000 ರೂ. ಪ್ಯಾಕೇಜ್ ಪಡೆಯಲು ಇಲ್ಲಿದೆ ಮಾಹಿತಿ

ಕೊರೊನಾ ಎರಡನೇ ಅಲೆ ನಿಯಂತ್ರಣಕ್ಕಾಗಿ ರಾಜ್ಯ ಸರ್ಕಾರ 50 ದಿನಗಳಿಗೂ ಅಧಿಕ ಕಾಲ ಲಾಕ್ ಡೌನ್ ಘೋಷಿಸಿದ್ದ ಕಾರಣ ಆರ್ಥಿಕ ಚಟುವಟಿಕೆಗಳು ಸಂಪೂರ್ಣವಾಗಿ ಬಂದ್ ಆಗಿದ್ದವು. ಇದರಿಂದಾಗಿ ಬಡ ಮತ್ತು ಮಧ್ಯಮ ವರ್ಗದ ಜನತೆ ಹೈರಾಣಾಗಿ ಹೋಗಿದ್ದರು. ಅದರಲ್ಲೂ ಅಸಂಘಟಿತ ವಲಯದ ಕಾರ್ಮಿಕರು ಕೆಲಸವಿಲ್ಲದೆ ಒಂದೊತ್ತಿನ ಊಟಕ್ಕೂ ಪರದಾಡುವಂತಾಗಿತ್ತು. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಇವರುಗಳ ನೆರವಿಗಾಗಿ ಎರಡು ಸಾವಿರ ರೂ. ಗಳ ಒಂದು ಬಾರಿಯ ನೆರವಿನ ವಿಶೇಷ ಪ್ಯಾಕೇಜ್ …

Read More »

ಈ ಊರಲ್ಲಿ ಮನೆಗೊಂದು ಕುದುರೆ: ಔಷಧಕ್ಕೂ, ಶಾಲೆಗೆ ಶಿಕ್ಷಕರು ಬರೋಕೂ, ಹೆಣ ಸಾಗಿಸೋಕೂ ಇಲ್ಲಿ ಕುದುರೆಗಳೇ ವಾಹನ !

ಹತ್ತಿರದ ಹಳ್ಳಿಗಳಿಗೆ ಅಥವಾ ಬೇರ್ಯಾವುದೇ ಕೆಲಸಕ್ಕೆ ಮತ್ತೊಂದೆಡೆ ಪ್ರಯಾಣಿಸಬೇಕು ಎಂದರೆ ಕುದುರೆಯ ಮೇಲೆ ಏರಿಯೇ ಹೋಗಬೇಕಾದ ಅನಿವಾರ್ಯತೆ ಈ ಜನರದ್ದು. ಇವರು ವಾಸಿಸುವ ಸ್ಥಳಗಳಿಗೆ ತೆರಳಲು ರಸ್ತೆಯಾಗಲಿ, ವಾಹನ ಬರುವ ಸೌಕರ್ಯವಾಗಲಿ ಇಲ್ಲ, ಹಾಗಾಗಿ ಕುದುರೆಗಳೇ ಇಲ್ಲಿ ವಾಹನಗಳು. ತಾವು ಬೆಳೆದ ಬೆಳೆಗಳನ್ನು ಮಾರಲು ಅಥವಾ ಅಗತ್ಯ ವಸ್ತುಗಳನ್ನು ಖರೀದಿಸಲು ಪ್ರತಿದಿನ ಈ ಆದಿವಾಸಿಗಳು ಕನಿಷ್ಟ 12ರಿಂದ 25 ಕಿಲೋಮೀಟರ್ ಪ್ರಯಾಣಿಸಬೇಕಾಗುತ್ತದೆ. ಕುದುರೆಗಳ ಮೇಲೆ ಇಲ್ಲಿನ ಜನ ಸಂಪೂರ್ಣವಾಗಿ ಅವಲಂಬಿತರಾಗಿದ್ದಾರೆ. …

Read More »

.ಯುವಕರ ಗುಂಪು ಧಾಬಾ ಮಾಲೀಕನ ಮೇಲೆ ಹಲ್ಲೆ ಧಾಬಾ ಮಾಲೀಕನ ಮರ್ಡರ್…

ಬೆಳಗಾವಿ-ಹಣದ ವ್ಯೆವಹಾರಕ್ಕೆ ಸಮಂಧಿಸಿದಂತೆ ಇಬ್ಬರ ನಡುವೆ ನಡೆದ ಜಗಳ ಬಿಡಿಸಲು ಹೋದ ದಾಭಾ ಮಾಲೀಕನ ಮೇಲೆ ಹಲ್ಲೆ ನಡೆದಿದ್ದು ಆಸ್ಪತ್ರೆಗೆ ಸಾಗಿಸುವ‌ ದಾರಿ ಮಧ್ಯ ಧಾಬಾ ಮಾಲೀಕ ಸಾವನ್ನೊಪ್ಪಿದ ಘಟನೆ ಕಿತ್ತೂರು ತಾಲ್ಲೂಕಿನ ಎಂ.ಕೆ ಹುಬ್ಬಳ್ಳಿ ಗ್ರಾಮದಲ್ಲಿ ನಡೆದಿದೆ. ಎಂ ಕೆ ಹುಬ್ಬಳ್ಳಿ ಗ್ರಾಮದ ಪಂಚವಟಿ ಧಾಭಾ ಮಾಲೀಕ,ಪ್ರಕಾಶ ನಾಗನೂರು(38) ಮೃತಪಟ್ಟಿದ್ದು ನಿನ್ನೆ ಸಂಜೆ ನಡೆದ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿದೆ. 1500 ರೂ ಹಣದ ವ್ಯೆವಹಾರಕ್ಕೆ ಸಮಂಧಿಸಿದಂತೆ,ಯುವಕರ ಗುಂಪೊಂದು ಹಣ …

Read More »