Breaking News

ರಾಜಕೀಯ

ಕೇಂದ್ರ ಸಂಪುಟ: 33 ಸಚಿವರ ವಿರುದ್ಧ ಕ್ರಿಮಿನಲ್ ಕೇಸ್, 70 ಸಚಿವರು ಕೋಟ್ಯಧೀಶ್ವರರು!

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಕೇಂದ್ರ ಸಚಿವ ಸಂಪುಟವನ್ನು ವಿಸ್ತರಿಸಿ 36 ಹೊಸ ಮುಖಗಳಿಗೆ ಅವಕಾಶ ನೀಡುವ ಮೂಲಕ ಒಟ್ಟು ಕೇಂದ್ರ ಸಂಪುಟದ ಸಚಿವರ ಸಂಖ್ಯೆ 78ಕ್ಕೆ ಏರಿಕೆಯಾಗಿತ್ತು. ಇದರಲ್ಲಿ 33 ಸಚಿವರ ವಿರುದ್ಧ (ಶೇ.42) ಕ್ರಿಮಿನಲ್ ಪ್ರಕರಣಗಳು ದಾಖಲಾಗಿರುವುದಾಗಿ ಎಡಿಆರ್ ತಿಳಿಸಿದೆ.   24 ಸಚಿವರು ಕ್ರಿಮಿನಲ್ ಪ್ರಕರಣಗಳಲ್ಲಿ ಕೊಲೆ, ಕೊಲೆ ಯತ್ನ ಮತ್ತು ದರೋಡೆಯಂತಹ ಗಂಭೀರ ಆರೋಪಗಳನ್ನು ಎದುರಿಸುತ್ತಿದ್ದಾರೆ ಎಂದು ವಿವರಿಸಿದೆ. ಸಚಿವರು ಚುನಾವಣಾ ಆಯೋಗಕ್ಕೆ …

Read More »

ಮೂರನೇ ಅಲೆಯಲ್ಲಿ ಮಕ್ಕಳಿಗೆ ಯಾವುದೇ ಅಪಾಯವಿಲ್ಲ: ಡಾ.ಕೆ ಸುಧಾಕರ್

ದಾವಣಗೆರೆ: ಕೊರೊನಾ ಮೂರನೇ ಅಲೆಯಲ್ಲಿ ಮಕ್ಕಳಿಗೆ ಯಾವುದೇ ಅಪಾಯವಿಲ್ಲ ಎಂದು ತಜ್ಞರ ವರದಿಗಳಿವೆ ಎಂದು ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆಯ ಸಚಿವ ಡಾ.ಕೆ ಸುಧಾಕರ್ ಹೇಳಿದ್ದಾರೆ. ದಾವಣಗೆರೆಯಲ್ಲಿ ಜಿಲ್ಲಾಸ್ಪತ್ರೆಯ ಭೇಟಿಗಿಂತ ಮೊದಲು ಜಿಎಂಐಟಿಯಲ್ಲಿ ಮಾತನಾಡಿದ ಅವರು, ಮಕ್ಕಳಿಗೆ ಯಾವುದೇ ಅಪಾಯವಿಲ್ಲ ಎಂದು ತಜ್ಞರ ವರದಿ ಹೇಳುತ್ತಿದ್ದು, ಹಾಗಂತ ಯಾವ ಪೋಷಕರು ಮೈಮರೆಯುವಂತಿಲ್ಲ. ಲಾಕ್‍ಡೌನ್ ಸಡಿಲಿಕೆ ಆಗಿದೆ ಎಂದು ಜನರು ಕೂಡ ಮೈಮೆರಯುವಂತಿಲ್ಲ. ಪ್ರತಿಯೊಬ್ಬರು ಎರಡನೇ ಡೋಸ್ ಪಡೆಯುವವರೆಗೂ ಎಲ್ಲರೂ …

Read More »

ಕೇಂದ್ರ ಸಚಿವೆ ಕರಂದ್ಲಾಜೆಯನ್ನು ಹಾಡಿ ಹೊಗಳಿದ ಬಿಎಸ್‍ವೈ

ಕಲಬುರಗಿ: ಬಿಜೆಪಿ ಸರ್ಕಾರ ಬಂದು ಎರಡು ವರ್ಷವಾದರೂ ಉಡುಪಿ ಸಂಸದೆ ಶೋಭಾ ಕರಂದ್ಲಾಜೆ ಬಗ್ಗೆ ತುಟಿ ಬಿಚ್ಚದ ಸಿಎಂ ಬಿ.ಎಸ್ ಯಡಿಯೂರಪ್ಪ ಕಲಬುರಗಿಯಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದಲ್ಲಿ ಇದೇ ಮೊದಲ ಬಾರಿಗೆ ಕರಂದ್ಲಾಜೆ ಅವರನ್ನು ಹಾಡಿ ಹೊಗಳಿದ್ದಾರೆ. ಕಲಬುರಗಿ ನಗರದಲ್ಲಿ ನೂತನ ಮಾದರಿಯ ತರಕಾರಿ ಮಾರುಕಟ್ಟೆ ಕಟ್ಟಡಕ್ಕೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಬಿಎಸ್‍ವೈ, ರೈತರ ಬಗ್ಗೆ ಸದಾ ಕಾಳಜಿ ವಹಿಸುವ ಶೋಭಾ ಕರಂದ್ಲಾಜೆ ಅವರನ್ನು ಪ್ರಧಾನಿ ಮೋದಿ ಕೃಷಿ ಸಚಿವರನ್ನಾಗಿ …

Read More »

ಜನರನ್ನು ಮಕ್ಕಳ ರೀತಿಯಲ್ಲಿ ನೋಡಬೇಕು’; ಆಲೋಚನೆಗಳನ್ನು ಹಂಚಿಕೊಂಡ ಉಪೇಂದ್ರ

ನಟ ಉಪೇಂದ್ರ ಪ್ರಜಾಕೀಯ ಪಕ್ಷ ಸ್ಥಾಪಿಸಿ ಅದರ ಕೆಲಸದಲ್ಲಿ ತೊಡಗಿಕೊಂಡಿದ್ದಾರೆ. ರಾಜಕೀಯದಲ್ಲಿ ಹೊಸ ಬದಲಾವಣೆ ತರಬೇಕು ಎನ್ನುವ ಕನಸನ್ನು ಅವರು ಕಂಡಿದ್ದಾರೆ. ಈಗ ಜನರೊಂದಿಗೆ ಪ್ರಜಾಕೀಯದ ಬಗ್ಗೆ ಮಾತನಾಡಲು ಉಪೇಂದ್ರ ಫೇಸ್​ಬುಕ್​ ಲೈವ್​ ಬಂದಿದ್ದರು. ಈ ವೇಳೆ ಅವರು ಒಂದಷ್ಟು ವಿಚಾರಗಳನ್ನು ಹಂಚಿಕೊಂಡಿದ್ದಾರೆ. ‘ಯಾವ ಪಕ್ಷ ಬರುತ್ತದೆ, ಯಾರು ನಾಯಕ, ಯಾವ ಜಾತಿ ಎಂಬಿತ್ಯಾದಿ ನೋಡಿಕೊಂಡು ನಾವು ಮತ ಹಾಕುತ್ತಿದ್ದೇವೆ. ಆ ರೀತಿ ಆಗಬಾರದು. ಅದು ಸಂಪೂರ್ಣವಾಗಿ ಅಳಿಸಿ ಹೋಗಬೇಕು. …

Read More »

ಕೆಆರ್​​ಎಸ್​ ವಾರ್​ ಕುರಿತಂತೆ ಮಹತ್ವದ ಹೇಳಿಕೆ ನೀಡಿದ ಗೃಹ ಸಚಿವ ಬಸವರಾಜ್​ ಬೊಮ್ಮಾಯಿ

ರಾಜ್ಯದಲ್ಲಿ ಕನ್ನಂಬಾಡಿ ಕಾಳಗ ದಿನಕ್ಕೊಂದು ಆಯಾಮವನ್ನ ಪಡೆಯುತ್ತಿದೆ. ಡ್ಯಾಂ ಸುರಕ್ಷತೆ ವಿಚಾರವಾಗಿ ಶುರುವಾದ ವಿವಾದ ಇದೀಗ ವೈಯಕ್ತಿಕ ಹೇಳಿಕೆ ನೀಡುವವರೆಗೂ ಬಂದು ನಿಂತಿದೆ. ಇಂದು ಬೆಂಗಳೂರಿನಲ್ಲಿ ಕೆಆರ್​ಎಸ್​ ಡ್ಯಾಂ ವಿಚಾರವಾಗಿ ಸಂಸದೆ ಸುಮಲತಾ ಹಾಗೂ ಹೆಚ್​ಡಿಕೆ ನಡುವಿನ ಸಂಘರ್ಷದ ವಿಚಾರವಾಗಿ ಮಾತನಾಡಿದ ಗೃಹ ಸಚಿವ ಬೊಮ್ಮಾಯಿ ನಮ್ಮ ಡ್ಯಾಂ ಸುರಕ್ಷಿತವಾಗಿದೆಯಾ ಅನ್ನೋದಷ್ಟೇ ಮುಖ್ಯ ಎಂದು ಹೇಳಿದ್ರು. ಸಂಸದೆ ಸುಮಲತಾ ಅಂಬರೀಶ್​ ಹಾಗೂ ಮಾಜಿ ಸಿಎಂ ಹೆಚ್​.ಡಿ. ಕುಮಾರಸ್ವಾಮಿ ನಡುವೆ ನಡೆಯುತ್ತಿರುವ …

Read More »

ದೇವರ ದರ್ಶನ ಮುಗಿಸಿ ವಾಪಾಸ್ ಆಗುತ್ತಿದ್ದ ಟಾಟಾ ಏಸ್ ಲಾರಿಗೆ ಡಿಕ್ಕಿ : ಸ್ಥಳದಲ್ಲೇ ಇಬ್ಬರ ಸಾವು, ಹಲವರು ಗಂಭೀರ

ಹಾಸನ : ಆದಿಚುಂಚನಗಿರಿಗೆ ತೆರಳಿ, ದೇವರ ದರ್ಶನ ಮುಗಿಸಿಕೊಂಡು ವಾಪಾಸ್ ಆಗುತ್ತಿದ್ದಂತ ಸಂದರ್ಭದಲ್ಲಿ, ಬೆಳ್ಳೂರು ಕ್ರಾಸ್ ಬಳಿ ಟಾಟಾ ಏಸ್ ಲಾರಿ ನಡುವೆ ಡಿಕ್ಕಿಯಾಗಿ, ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಲ್ಲದೇ ಚಾಲಕ ಸೇರಿದಂತೆ ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ.   ಮಂಡ್ಯದ ಕೆ ಆರ್ ಪೇಟೆ ತಾಲೂಕಿನ ಅಗ್ರಹಾರ ಬಾಚನಹಳ್ಳಿಯ ಜಯರಾಮೇಗೌಡ ಮತ್ತು ಅವರ ಕುಟುಂಬಸ್ಥರು ಆದಿಚುಂಚನಗಿರಿಗೆ ದೇವರ ದರ್ಶನಕ್ಕೆ ತೆರಳಿದ್ದರು. ದೇವರ ದರ್ಶನ ಮುಗಿಸಿಕೊಂಡು ವಾಪಾಸ್ ಆಗುತ್ತಿದ್ದಂತ ಸಂದರ್ಭದಲ್ಲಿ ಟಾಟಾ …

Read More »

ಪದೇ ಪದೇ ಯಡಿಯೂರಪ್ಪ ಮತ್ತು ವಿಜಯೇಂದ್ರ ಅವರ ಭ್ರಷ್ಟಾಚಾರದ ಬಗ್ಗೆ ಮಾತನಾಡುವ ಯತ್ನಾಳ್, ಈಗ ಅಮಿತ್ ಶಾ ಎದುರು ದಾಖಲೆಗಳನ್ನು ಇಟ್ಟು ದೂರು ನೀಡಲಿದ್ದಾರೆ ?

ನವ ದೆಹಲಿ (ಜುಲೈ. 10): ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಬೆಂಗಳೂರಿಗೆ ಆಗಮಿಸಿ ಪಕ್ಷದ ಎಲ್ಲಾ ಆಂತರಿಕ ಸಮಸ್ಯೆಗಳನ್ನು ಬಗೆಹರಿಸಿ ಹಿಂತಿರುಗಿದ ನಂತರವೂ,  ರಾಜ್ಯದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ನಾಯಕತ್ವವನ್ನು ಬದಲಿಸಬೇಕು ಎಂದು ಪ್ರಯತ್ನಿಸುತ್ತಿರುವ ರಾಜ್ಯ ಬಿಜೆಪಿಯ ಒಂದು ಬಣದ ಗುಂಪಿನ ಪ್ರಯತ್ನ ಇನ್ನೂ ನಿಂತಿಲ್ಲ.  ಮೊದಲಿಗೆ ಭಾರೀ ಸದ್ದಿನೊಂದಿಗೆ ನಡೆಯುತ್ತಿದ್ದ ಕಸರತ್ತು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ರಾಜ್ಯಕ್ಕೆ ಬಂದು ಹೋದ ಮೇಲೆ ಸದ್ದಿಲ್ಲದೆ …

Read More »

ಡಿಕೆಶಿಯವರೇ, ನೀವು ರಾಜಕಾರಣಿಯೋ- ರೌಡಿಯೋ : ಬಿಜೆಪಿ ಕಿಡಿ

ಬೆಂಗಳೂರು (ಜುಲೈ 10); ರಾಜ್ಯ ಪ್ರಾದೇಶಿಕ ಕಾಂಗ್ರೆಸ್​ ಅಧ್ಯಕ್ಷ ಡಿ.ಕೆ. ಶಿವಕುಮಾರ್​ ಇತ್ತೀಚೆಗೆ ಸಾರ್ವಜನಿಕವಾಗಿ ಕಾಂಗ್ರೆಸ್​ ಕಾರ್ಯಕರ್ತನ ಕಪಾಳಕ್ಕೆ ಬಾರಿಸುವ ಮೂಲಕ ಸುದ್ದಿಯಾಗಿದ್ದರು. ಡಿ.ಕೆ. ಶಿವಕುಮಾರ್​ ಕಾರ್ಯಕರ್ತನ ಕಪಾಳಕ್ಕೆ ಬಾರಿಸುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿತ್ತು. ಅಲ್ಲದೆ, ಈ ವಿಡಿಯೋವನ್ನು ರಾಷ್ಟ್ರೀಯ ಮಾಧ್ಯಮಗಳೂ ಪ್ರಸಾರ ಮಾಡುವ ಮೂಲಕ ಕೆಪಿಸಿಸಿ ಅಧ್ಯಕ್ಷರ ವರ್ತನೆಯನ್ನು ಕಟುವಾಗಿ ವಿಮರ್ಶೆ ಮಾಡಿತ್ತು. ಕರ್ನಾಟಕ ಬಿಜೆಪಿ ಘಟಕ ಸಹ ಡಿಕೆ ಶಿವಕುಮಾರ್ ಅವರ ಈ …

Read More »

ಶಿಕ್ಷಣ ಹಕ್ಕು ಕಾಯ್ದೆಯಡಿ ಮೊದಲ ಸುತ್ತಿನಲ್ಲಿ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಇಲ್ಲಿದೆ ಮಹತ್ವದ ಮಾಹಿತಿ

ಕಳೆದ ವರ್ಷದ ಆರಂಭದಲ್ಲಿ ದೇಶದಲ್ಲಿ ಕಾಣಿಸಿಕೊಂಡ ಕೊರೊನಾ ಮಹಾಮಾರಿ ಶೈಕ್ಷಣಿಕ ವ್ಯವಸ್ಥೆಯನ್ನೇ ಅಲ್ಲೋಲ ಕಲ್ಲೋಲ ಮಾಡಿದೆ. ವಿದ್ಯಾರ್ಥಿಗಳಿಗೆ ಆನ್ ಲೈನ್ ಮೂಲಕ ಶಿಕ್ಷಣ ನೀಡಲಾಗುತ್ತಿದ್ದು, ಇದರ ಮಧ್ಯೆಯೂ ಈ ಹಿಂದಿನಂತೆ ಪ್ರವೇಶ ಪ್ರಕ್ರಿಯೆಗಳನ್ನು ನಡೆಸಲಾಗುತ್ತಿದೆ. ಶಿಕ್ಷಣ ಹಕ್ಕು ಕಾಯ್ದೆ ಅಡಿ ಈಗಾಗಲೇ ವಿದ್ಯಾರ್ಥಿಗಳ ಆಯ್ಕೆ ಪ್ರಕ್ರಿಯೆ ನಡೆದಿದ್ದು, ಮೊದಲ ಸುತ್ತಿನ ಲಾಟರಿ ಪ್ರಕ್ರಿಯೆಯಲ್ಲಿ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ಈ ವಿದ್ಯಾರ್ಥಿಗಳ ಶಾಲಾ ದಾಖಲಾತಿ ಅವಧಿಯನ್ನು ಜುಲೈ 16ರ …

Read More »

ಬೆಳಗಾವಿ: “ಶಾಸಕ‌ ಸ್ಥಾನಕ್ಕೆ ರಾಜೀನಾಮೆ ನೀಡುವ‌ ವಿಚಾರ ಮುಗಿದು ಹೋದ ಅಧ್ಯಾಯ‌” ಎಂದು ಮಾಜಿ ಸಚಿವ ರಮೇಶ ಜಾರಕಿಹೊಳಿ ಹೇಳಿದರು.

ಬೆಳಗಾವಿ: “ಶಾಸಕ‌ ಸ್ಥಾನಕ್ಕೆ ರಾಜೀನಾಮೆ ನೀಡುವ‌ ವಿಚಾರ ಮುಗಿದು ಹೋದ ಅಧ್ಯಾಯ‌” ಎಂದು ಮಾಜಿ ಸಚಿವ ರಮೇಶ ಜಾರಕಿಹೊಳಿ ಹೇಳಿದರು. ಗೋಕಾಕ ತಾಲೂಕಿನ ಅಂಕಲಗಿ ಗ್ರಾಮದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ನಾನು‌ ಈ ಹಿಂದೆ ಶಾಸಕ ಸ್ಥಾನಕ್ಕೆ ರಾಜೀನಾಮೆ ವಿಚಾರ ಮಾಡಿದ್ದು ನಿಜ. ಆದರೆ ನನ್ನ ಹಿತೈಷಿಗಳು, ಸ್ವಾಮೀಜಿಗಳು ರಾಜೀನಾಮೆ ನೀಡದಂತೆ ಸಲಹೆ ನೀಡಿದ ಹಿನ್ನೆಲೆ ರಾಜೀನಾಮೆ ವಿಚಾರ ಕೈಬಿಟ್ಟಿದ್ದೇನೆ” ಎಂದರು. ಬಾಲಚಂದ್ರ ಜಾರಕಿಹೊಳಿ, ರಮೇಶ ಜಾರಕಿಹೊಳಿ ಜಂಟಿ ಸುದ್ದಿಗೋಷ್ಠಿ …

Read More »