Breaking News

ರಾಜಕೀಯ

ಶಾಸಕ ಸ್ಥಾನಕ್ಕೆ ರಾಜೀನಾಮೆ ವಿಚಾರ ಮುಂಬೈನಲ್ಲಿ ತೀರ್ಮಾನ: ರಮೇಶ್‌ ಜಾರಕಿಹೊಳಿ

ಮೈಸೂರು : ಮಾಜಿ ಸಚಿವ ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿ ಪ್ರಕರಣದ ನಂತ್ರ, ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎಂಬುದಾಗಿ ಹೇಳಲಾಗುತ್ತಿತ್ತು. ಆದ್ರೇ ಅದಕ್ಕೂ ಮುಂದುವರೆದು, ರಾಜಕೀಯ ನಿವೃತ್ತಿಯನ್ನೇ ಘೋಷಿಸುವಂತ ನಿರ್ಧಾರ ಮಾಡಿದ್ದಾರೆ ಎಂಬ ಮತ್ತಷ್ಟು ಸ್ಪೋಟಕ ಮಾಹಿತಿ ಕೂಡ ತಿಳಿದು ಬಂದಿದೆ. ಆ ಬಗ್ಗೆ ಸ್ವತಹ ರಮೇಶ್ ಜಾರಕಿಹೊಳಿ ಅವರೇ ಏನ್ ಹೇಳಿದ್ರು ಅಂತ ಮುಂದೆ ಓದಿ..   ಇಂದು ಮೈಸೂರಿನ ಸುತ್ತೂರು ಮಠಕ್ಕೆ ಮಾಜಿ ಸಚಿವ …

Read More »

ನನಗೆ ಸಿಎಂ ಸ್ಥಾನ ಸಿಕ್ಕರೆ ನಿಷ್ಠೆಯಿಂದ ಕೆಲಸ ಮಾಡತ್ತೇನೆ: ಎಸ್.ಆರ್.ಪಾಟೀಲ್

ಕೊಪ್ಪಳ: ರಾಜಕೀಯದಲ್ಲಿ ಯಾರೂ ಸನ್ಯಾಸಿಗಳಲ್ಲ. ಒಂದು ವೇಳೆ ನನಗೆ ಅವಕಾಶ ಸಿಕ್ಕರೆ ಪ್ರಾಮಾಣಿಕತೆ, ಬದ್ಧತೆ, ನಿಷ್ಠೆಯಿಂದ ಸಿಎಂ ಸ್ಥಾನವನ್ನು ಸಮರ್ಥವಾಗಿ ನಿಭಾಯಿಸುವ ಕೆಲಸ ಮಾಡಬೇಕಾಗುತ್ತದೆ ಎನ್ನುವ ಮೂಲಕ ತಾವೂ ಸಿಎಂ ಸ್ಥಾನದ ಆಕಾಂಕ್ಷಿ ಎನ್ನುವ ಮಾತನ್ನು ವಿಧಾನ ಪರಿಷತ್ ವಿಪಕ್ಷ ನಾಯಕ ಎಸ್.ಆರ್. ಪಾಟೀಲ್ ಅವರು ಪರೋಕ್ಷವಾಗಿ ನುಡಿದರು. ಕೊಪ್ಪಳದಲ್ಲಿ ಸುದ್ದಿಗಾರರ ಜೊತೆ ಮಾತನಾಡಿ, ಕಾಂಗ್ರೆಸ್‌ನಲ್ಲಿ ಎದ್ದಿರುವ ಸಿಎಂ ಸ್ಥಾನದ ಕೂಗಿನ ವಿಚಾರಕ್ಕೆ ನೀವು ಸಿಎಂ ಸ್ಥಾನದ ಆಕಾಂಕ್ಷಿಯಾಗಿದ್ದೀರಾ ಎನ್ನುವ …

Read More »

ವಿಶ್ವಕ್ಕೆ ಮಾರಕವಾಗಲಿದೆ ಡೆಲ್ಟಾ ರೂಪಾಂತರಿ ವೈರಸ್..!

ವಿಶ್ವಸಂಸ್ಥೆ,ಜೂ.24-ಅತಿ ವೇಗವಾಗಿ ಹರಡಬಲ್ಲ ಸಾಮಥ್ರ್ಯ ಹೊಂದಿರುವ ಡೆಲ್ಟಾ ರೂಪಾಂತರಿ ವೈರಸ್ ಈಗಾಗಲೇ 85 ರಾಷ್ಟ್ರಗಳಲ್ಲಿ ಕಾಣಿಸಿಕೊಂಡಿದ್ದು, ಕೆಲವೇ ದಿನಗಳಲ್ಲಿ ಮತ್ತಷ್ಟು ರಾಷ್ಟ್ರಗಳಿಗೆ ಹರಡುವ ಸಾಧ್ಯತೆ ಇದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಎಚ್ಚರಿಸಿದೆ. ಅಲ್ಫಾ ರೂಪಾಂತರಿ 170, ಬೀಟಾ 118, ಗಾಮಾ 71 ರಾಷ್ಟ್ರಗಳಲ್ಲಿ ಕಾಣಿಸಿಕೊಂಡಿದ್ದವು, ಇದೀಗ ಅತ್ಯಂತ ಮಾರಕ ವೈರಾಣು ಆಗಿರುವ ಡೆಲ್ಟಾ 85 ರಾಷ್ಟ್ರಗಳಲ್ಲಿ ತನ್ನ ಕಬಂಧ ಬಾಹು ಚಾಚಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ವರದಿಯಲ್ಲಿ …

Read More »

ಕೋವಿಡ್‌ ವಿರುದ್ದ ಹೋರಾಟದಲ್ಲಿ ಸರ್ಕಾರದ ಜತೆ ಭಾಗಿ ಎಂದ ರಿಲಯನ್ಸ್‌ ಮುಖೇಶ್‌ ಅಂಬಾನಿ

ಮುಂಬೈ: ನಮ್ಮ ವ್ಯವಹಾರದ ಕಾರ್ಯಕ್ಷಮತೆಗಿಂತ ಈ ಕಷ್ಟಕರ ಸಮಯದಲ್ಲಿ ರಿಲಯನ್ಸ್‌ನ ಮಾನವೀಯ ಪ್ರಯತ್ನಗಳು ನನಗೆ ಹೆಚ್ಚಿನ ಸಂತೋಷವನ್ನು ನೀಡಿದೆ. ಕೋವಿಡ್ -19 ಬಿಕ್ಕಟ್ಟಿನ ಉದ್ದಕ್ಕೂ, ನಮ್ಮ ರಿಲಯನ್ಸ್ ಕುಟುಂಬದ ಉದ್ದೇಶ ಮತ್ತು ರಾಷ್ಟ್ರೀಯ ಕರ್ತವ್ಯದ ಪ್ರಜ್ಞೆಯೊಂದಿಗೆ ಸಾಗಿದೆ ಎಂದು ನಿಮ್ಮೊಂದಿಗೆ ಹಂಚಿಕೊಳ್ಳಲು ನನಗೆ ಹೆಮ್ಮೆ ಮತ್ತು ವಿನಮ್ರತೆ ಇದೆ ಎಂದು ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್​ನ (ಆರ್​ಐಎಲ್​) ಅಧ್ಯಕ್ಷ ಮುಖೇಶ್ ಅಂಬಾನಿ ಹೇಳಿದರು. ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್​ನ (ಆರ್​ಐಎಲ್​) 44ನೇ ವಾರ್ಷಿಕ …

Read More »

61 ಲಕ್ಷ ರೂ. ಮೌಲ್ಯದ ಡ್ರಗ್ಸ್ ನಾಶಕ್ಕೆ ನಿರ್ಧಾರ :

ಬೆಳಗಾವಿ – ಅಂತರರಾಷ್ಟ್ರೀಯ ಮಾದಕ ದ್ರವ್ಯ ವಿರೋಧಿ ದಿನಾಚರಣೆ ಅಂಗವಾಗಿ ಪ್ರಕರಣಗಳಲ್ಲಿ ವಶಪಡಿಸಿಕೊಂಡಿದ್ದ ಅಕ್ರಮ ಗಾಂಜಾವನ್ನು ಜಿಲ್ಲಾ ಡ್ರಗ್ ಡಿಸ್ಪೋಸಲ್ ಕಮೀಟಿ ವತಿಯಿಂದ ನಾಶಗೊಳಸಲುನಿರ್ಧರಿಸಲಾಗಿದೆ. ಬೆಳಗಾವಿ ಜಿಲ್ಲಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಗಾಂಜಾವನ್ನು ಬೆಳೆಯುತ್ತಿದ್ದ/ಸಾಗಾಣಿಕೆ/ಮಾರಾಟ ಮಾಡುತ್ತಿದ್ದವರ ಮೇಲೆ ದಾಳಿ ಮಾಡಿ ಎನ್‌ಡಿಪಿಎಸ್ ಕಾಯ್ದೆಯಡಿ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಪ್ರಕರಣಗಳನ್ನು ದಾಖಲಿಸಿ 61 ಲಕ್ಷ ರೂ. ಮೌಲ್ಯದ ಡ್ರಗ್ಸ್ ವಶಪಡಿಸಿಕೊಳ್ಳಲಾಗಿತ್ತು.   ವಶಪಡಿಸಿಕೊಂಡಿದ್ದ ಗಾಂಜಾವನ್ನು ಜಿಲ್ಲಾ ಡ್ರಗ್ಸ್ ಡಿಸ್ಪೋಸಲ್ ಕಮೀಟಿಯ ಅನುಮತಿ ಪಡೆದುಕೊಂಡು …

Read More »

‘ಕ್ರಿಶ್’ ಚಿತ್ರಕ್ಕೆ 15 ವರ್ಷದ ಸಂಭ್ರಮ: ಅಭಿಮಾನಿಗಳಿಗೆ ಸರ್ಪ್ರೈಸ್ ನೀಡಿದ ಹೃತಿಕ್

ಬಾಲಿವುಡ್ ನಟ ಹೃತಿಕ್ ರೋಷನ್ ನಟನೆಯ ಕ್ರಿಶ್ ಮೊದಲ ಸರಣಿ ಬಿಡುಗಡೆಯಾಗಿ 15 ವರ್ಷಗಳು ಕಳೆದಿವೆ. ಈಗಾಗಲೇ ಕ್ರಿಶ್ 3 ಸರಣಿಗಳನ್ನು ಯಶಸ್ವಿಯಾಗಿ ಮುಗಿಸಿದೆ. ಚಿತ್ರಾಭಿಮಾನಿಗಳ ನೆಚ್ಚಿನ ಸರಣಿಗಳಲ್ಲಿ ಕ್ರಿಶ್ ಕೂಡ ಒಂದು. 15 ವರ್ಷ ತುಂಬಿದ ಸಂತಸದಲ್ಲೇ ಹೃತಿಕ್ ಅಭಿಮಾನಿಗಳಿಗೆ ಮತ್ತೊಂದು ಸರ್ಪ್ರೈಸ್ ನೀಡಿದ್ದಾರೆ. ಕ್ರಿಶ್ 4 ಸಿನಿಮಾದ ಟೀಸರ್ ಬಿಡುಗಡೆ ಮಾಡಿದ್ದಾರೆ. ವಾರ್ ಸಿನಿಮಾ ಬಳಿಕ ಹೃತಿಕ್ ಅಧಿಕೃತವಾಗಿ ಯಾವುದೇ ಅನೌನ್ಸ್ ಮಾಡಿರಲಿಲ್ಲ. ಇದೀಗ ಕ್ರಿಶ್ 4ನೇ …

Read More »

20 ವರ್ಷದ ಹಿಂದಿನ ಕೇಸ್ ಒಪನ್ ಮಾಡಿದ ಕೊಪ್ಪಳ ಪೊಲೀಸರು: ಆರೋಪಿ ಅಂದರ್

ಕೊಪ್ಪಳ: ಎರಡು ದಶಕಗಳ ಹಿಂದಿನ ಕೇಸ್ ಒಪನ್ ಮಾಡಿರುವ ಕೊಪ್ಪಳ ಪೊಲೀಸರು ಸುಮಾರು 175 ಪ್ರಕರಣಗಳಲ್ಲಿ ಬೇಕಾಗಿದ್ದ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಡಕಾಯಿತಿ, ಕಳ್ಳತನ, ಹಲ್ಲೆ, ಮತ್ತು ಕೊಲೆ ಹಾಗೂ ವಂಚನೆ ಕೇಸ್ ಗಳಲ್ಲಿ ಜಾಮೀನು ಪಡೆದು ನಾಪತ್ತೆಯಾಗಿದ್ದ ರಾಮಬಾಬು ಎಂಬ ಆರೋಪಿಯನ್ನು ಜೂನ್ 21 ರಂದು ಪೊಲೀಸರು ಬಂಧಿಸಿದ್ದಾರೆ. 2003ರಲ್ಲಿ ಕೊಪ್ಪಳದ ಬಾರ್ ಅಂಡ್ ರೆಸ್ಟೋರೆಂಟ್ ನಲ್ಲಿ ನಡೆದ ಹಲ್ಲೆ ಪ್ರಕರಣದಲ್ಲಿ ಭಾಗಿಯಾಗಿದ್ದ. ಆತನನ್ನು ಬಳ್ಳಾರಿಯ ಗಾಂಧಿನಗರದಲ್ಲಿ ಬಂಧಿಸಲಾಗಿದೆ. …

Read More »

ನಾಗರಹಾವು ಕಚ್ಚಿದ್ದರಿಂದ ಮೃತಪಟ್ಟ ಉರಗ ತಜ್ಞ

ಬಾಗಲಕೋಟೆ: ಹಾವುಗಳನ್ನ ಹಿಡಿಯುವಲ್ಲಿ ಪರಿಣಿತಿ ಪಡೆದಿದ್ದ ಬಾದಾಮಿ ತಾಲೂಕಿನ ಕಳಸಕೊಪ್ಪ ಗ್ರಾಮದ ಉರಗ ತಜ್ಞ ಸದಾಶಿವ ಕರಣಿ (30) ಅವರಿಗೆ ನಾಗರಹಾವು ಕಚ್ಚಿದ್ದರಿಂದ ಮೃತಪಟ್ಟಿದ್ದಾರೆ. ಸದಾಶಿವ ಕರಣಿ ಸ್ವಯಂ ಆಸಕ್ತಿಯಿಂದ ಹಾವು ಹಿಡಿಯುವುದನ್ನು ಅಭ್ಯಾಸ ಮಾಡಿಕೊಂಡಿದ್ದರು. ಹೀಗಾಗಿ ಬಾದಾಮಿ ಪಟ್ಟಣ ಸೇರಿದಂತೆ ಕಳಸಕೊಪ್ಪದ ಸುತ್ತಲಿನ ಹಳ್ಳಿಗಳಲ್ಲಿ ಹಾವು ಕಂಡರೆ ಹಿಡಿಯಲು ಜನರು ಸದಾಶಿವ ಅವರಿಗೆ ಕರೆ ಮಾಡುತ್ತಿದ್ದರು. ಹಿಡಿದ ಹಾವನ್ನು ನಂತರ ಸುರಕ್ಷಿತವಾಗಿ ಕಾಡಿಗೆ ಬಿಟ್ಟು ಬರುತ್ತಿದ್ದರು. ಕಳಸಕೊಪ್ಪದ ಹೊಲವೊಂದರಲ್ಲಿ …

Read More »

ಗಾಳಿಪಟದ ದಾರದಿಂದ ವ್ಯಕ್ತಿಗೆ ಗಾಯ, ನೆಲಕ್ಕೆ ಚಿಮ್ಮಿದ ನೆತ್ತರು

ಗದಗ: ಗಾಳಿಪಟದ ದಾರ ಸಿಲುಕಿ ವ್ಯಕ್ತಿಯೋರ್ವನ ಕೈ ಬೆರಳು ಹಾಗೂ ಕುತ್ತಿಗೆಗೆ ಗಾಯವಾದ ಘಟನೆ ನಗರದ ಟಾಂಗಾ ಕೂಟ ಬಳಿ ನಡೆದಿದೆ. ಕಾರಹುಣ್ಣಿಮೆ ನಿಮಿತ್ತ ಮಕ್ಕಳು, ಯುವಕರು ಗಾಳಿಪಟ ಹಾರಿಸುವುದೇ ಒಂದು ಸಂಭ್ರಮ. ಇಂದು ಸಾಕಷ್ಟು ಬ್ರಹತ್ ಗಾತ್ರದ ಬಣ್ಣ ಬಣ್ಣದ ಪಟಗಳು ಬಾನಂಗಳದಲ್ಲಿ ಹಾರಾಡುತ್ತವೆ. ಅನೇಕ ಪಟಗಳು ಹರಿದು ಎಲ್ಲಂದರಲ್ಲಿ ಬಿದ್ದು ಸಾಕಷ್ಟು ಅವಾಂತರ ಸೃಷ್ಟಿಸುತ್ತಿವೆ. ಇಂದು ಸಹ ಗಾಳಿಪಟವೊಂದು ಹರಿದು ವೇಗವಾಗಿ ಬಂದಿದೆ. ಅದನ್ನು ಗಮನಿಸದ ಬೈಕ್ …

Read More »

ಮಳೆ ಬಿಡುವು: ತಗ್ಗಿದ ಜಲಾಶಯಗಳ ಒಳಹರಿವು

ಶಿವಮೊಗ್ಗ: ಜಿಲ್ಲೆಯಲ್ಲಿ ಮೂರು ದಿನದಿಂದ ಮಳೆ ಕ್ಷೀಣಿಸಿದ್ದು, ಜಲಾಶಯಗಳ ಒಳಹರಿವು ಪ್ರಮಾಣವೂ ತಗ್ಗಿದೆ. ತುಂಗಾ ಜಲಾಶಯದ ಒಳಹರಿವು 15,414 ಕ್ಯುಸೆಕ್‍ಗೆ ಇಳಿಕೆಯಾಗಿದೆ. ಜಲಾಶಯ ಈಗಾಗಲೇ ಭರ್ತಿ ಆಗಿರುವುದರಿಂದ, ಒಳ ಹರಿವಿನ ಪ್ರಮಾಣದಷ್ಟೇ ನೀರನ್ನು ಹೊಳೆಗೆ ಬಿಡಲಾಗುತ್ತಿದೆ. ‌ಭದ್ರಾ ಜಲಾಶಯಕ್ಕೆ ಪ್ರಸ್ತುತ 9,581 ಕ್ಯುಸೆಕ್ ಒಳಹರಿವು ಇದೆ. ಹಾಗಾಗಿ, ಜಲಾಶಯದ ನೀರಿನ ಮಟ್ಟ 152.6 ಅಡಿಗೆ ಏರಿಕೆಯಾಗಿದೆ. ಲಿಂಗನಮಕ್ಕಿ ಹಿನ್ನೀರು ಭಾಗದಲ್ಲಿ ಮಳೆ ಪ್ರಮಾಣ ಸಂಪೂರ್ಣ ತಗ್ಗಿದೆ. ಜಲಾಶಯಕ್ಕೆ 10,827 ಕ್ಯುಸೆಕ್ …

Read More »