Breaking News

ರಾಜಕೀಯ

ಅಂದು ಚಿನ್ನ, ಮುದ್ದು ಎಂದಿದ್ದ ಗಂಡ ನಿನ್ನೆ ಕೊಲ್ಲೋಕೆ ಹೋದ

ಆನೇಕಲ್, ಸೆಪ್ಟೆಂಬರ್​ 26: ಅಂದು ನೀನೇ ನನ್ನ ಚಿನ್ನ, ಮುದ್ದು ಎಂದಿದ್ದ ಗಂಡ ಮಂಜ (husband) ಇದೀಗ ಉಲ್ಟಾ ಹೊಡೆದಿದ್ದಾನೆ. ನಿನ್ನ ಕತೆ ಮುಗಿಸುತ್ತೇನೆ ಅಂತ ಸಂತು ಮನೆಗೆ ಎಂಟ್ರಿ ಕೊಟ್ಟಿದ್ದ ಮಂಜ, ಪತ್ನಿ ಲೀಲಾ ಮತ್ತು ಆಕೆಯ ಪ್ರಿಯಕರ ಸಂತು ಕಣ್ಣಿಗೆ ಕಾರದ ಪುಡಿ ಹಾಕಿ ಡೆಡ್ಲಿ ಅಟ್ಯಾಕ್ (Deadly Attack) ಮಾಡಿದ್ದಾನೆ. ಮಂಜನಿಂದ ಹಲ್ಲೆಗೊಳಾದ ಸಂತುಗೆ ಗಂಭೀರ ಗಾಯವಾಗಿದ್ದು, ಆಸ್ಪತ್ರೆ ಸೇರಿದ್ದಾರೆ. ಅತ್ತ ಲೀಲಾ ಜಸ್ಟ್ ಮಿಸ್​​ ಆಗಿದ್ದಾರೆ. ಸಂತು-ಲೀಲಾ ಮೇಲೆ ಡವ್ ಮಂಜ …

Read More »

ನಮ್ಮ ಕ್ಲಿನಿಕ್​ನಲ್ಲಿ ಇಲಿ, ಹೆಗ್ಗಣಗಳಿಗೂ ಸಿಗುತ್ತೆ ಔಷಧ! ಅರ್ದ ಮೂಟೆ ಐವಿ ಫ್ಲೂಯಿಡ್ ಖಾಲಿ ಮಾಡಿದ ಹೆಗ್ಗಣಗಳು

ಬೆಂಗಳೂರು, ಸೆಪ್ಟೆಂಬರ್ 26: ಬೆಂಗಳೂರಿನಲ್ಲಿ (Bengaluru) ನಮ್ಮ ಕ್ಲಿನಿಕ್​ಗಳಲ್ಲಿ (Namma Clinic) ಸಮಸ್ಯೆಗಳ ಆಗರವೇ ಇದೆ ಬಗ್ಗೆ ಆರೋಪಗಳು ಕೇಳಿಬರುತ್ತಿದ್ದಂತೆಈ ವೇಳೆ ಹಲವು ಕಡೆಗಳಲ್ಲಿ ನಮ್ಮ ಕ್ಲಿನಿಕ್​​ಗಳಲ್ಲಿ ಔಷಧಗಳ ಕೊರತೆ, ಸಿಬ್ಬಂದಿಗೆ ವೇತನ ಪಾವತಿ ಆಗದೇ ಇರುವುದು ಸೇರಿ ನಾನಾ ಸಮಸ್ಯೆಗಳು ಗಮನಕ್ಕೆ ಬಂದಿವೆ. ಮತ್ತಿಕೆರೆ ನಮ್ಮ ಕ್ಲಿನಿಕ್​ನಲ್ಲಿ ಇಲಿ ಹಾಗೂ ಹೆಗ್ಗಣಗಳ ಹಾವಳಿ ಕಂಡು ಬಂದಿದ್ದು ಅವ್ಯವಸ್ಥೆಗಳ ಆಗಾರವಾಗಿತ್ತು. ಅರ್ಧ ಮೂಟೆಯಷ್ಟು ಐವಿ ಫ್ಲೂಯಿಡ್, ಆರ್​​​​ಎಲ್​​ಗಳನ್ನು ಇಲಿಗಳು ಹಾಳು ಮಾಡಿರುವುದು ಕಂಡುಬಂದಿದೆ. ಗಾಂಧಿನಗರ ಕ್ಷೇತ್ರದ ಓಕಳಿಪುರಂನಲ್ಲಿ …

Read More »

ಉತ್ತರ ಕರ್ನಾಟಕದ ಕಾಮಧೇನು, ಕಲ್ಪವೃಕ್ಷವಾಗಿರುವ ಕೆಎಂಸಿಆರ್‌ಐ ಬೆಳೆದು ಬಂದ ಬಗೆ ಹೇಗಿದೆ? ಇದರ ಹೆಸರಿನ ಹಿಂದಿದೆ ಐಕ್ಯತೆಯ ಮಂತ್ರ

ಹುಬ್ಬಳ್ಳಿ: ಇಲ್ಲಿನ ಕರ್ನಾಟಕ ವೈದ್ಯಕೀಯ ಕಾಲೇಜು ಹಾಗೂ ಸಂಶೋಧನಾ ಸಂಸ್ಥೆ (ಕೆಎಂಸಿ-ಆರ್​ಐ) ಉತ್ತರ ಕರ್ನಾಟಕ ಭಾಗದ ಬಡವರ ‘ಸಂಜೀವಿನಿ’ ಎಂದೇ ಖ್ಯಾತಿ ಪಡೆದಿದೆ. ಈ ಭಾಗದ 8-10 ಜಿಲ್ಲೆಗಳ ಬಡ ರೋಗಿಗಳ ಪಾಲಿಗೆ ವರದಾನವಾಗಿರುವ ಸಂಸ್ಥೆ ಬೆಳೆದು ಬಂದ ಬಗೆ ರೋಚಕ. ಹಂತಹಂತವಾಗಿ ಬೆಳೆದು ಹೆಸರು ಬದಲಿಸಿಕೊಳ್ಳುವುದರ ಜೊತೆಗೆ ಮಹತ್ತರ ಮೈಲುಗಲ್ಲು ಸ್ಥಾಪಿಸಿದೆ. 1957ರ ಸೆ.6ರಂದು ವೈದ್ಯಕೀಯ ಮಹಾವಿದ್ಯಾಲಯವಾಗಿ ಅಸ್ತಿತ್ವಕ್ಕೆ ಬಂದ ಕರ್ನಾಟಕ ವೈದ್ಯಕೀಯ ಮಹಾವಿದ್ಯಾಲಯ (ಕೆಎಂಸಿ), 1960–70ರ ವೇಳೆಗೆ ದೇಶದಲ್ಲೇ …

Read More »

ತುಮಕೂರು ಜಿಲ್ಲೆಯ ವಿವಿಧ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳ ಬಗ್ಗೆ ಚರ್ಚಿಸಲಾಯಿತು.;V. SOMANNA

ನವದೆಹಲಿಯಲ್ಲಿಂದು ಮಾನ್ಯ ಕೇಂದ್ರ ಸಾರಿಗೆ ಮತ್ತು ರಾಷ್ಟ್ರೀಯ ಹೆದ್ದಾರಿ ಸಚಿವರಾದ ಶ್ರೀ ನಿತಿನ್ ಗಡ್ಕರಿ ಅವರನ್ನು ಭೇಟಿಯಾಗಿ, ತುಮಕೂರು ಜಿಲ್ಲೆಯ ವಿವಿಧ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳ ಬಗ್ಗೆ ಚರ್ಚಿಸಲಾಯಿತು. ಈ ವೇಳೆ, ಸ್ಮಾರ್ಟ್ ಸಿಟಿ ತುಮಕೂರು ನಗರದ ಬೈಪಾಸ್ ನಿರ್ಮಾಣ ಹಂತ 02ರ ಮಲ್ಲಸಂದ್ರ (NH-73) ಯಿಂದ ವಸಂತನರಸಾಪುರ (NH-48) ದವರೆಗೆ ರಾಷ್ಟ್ರೀಯ ಹೆದ್ದಾರಿಯ ಕಾಮಗಾರಿಯ ಕಾರ್ಯಸಾಧ್ಯತೆಯನ್ನು (Alignment) ಮರುಪರಿಶೀಲಿಸಲು ಅಥವಾ ತಾಂತ್ರಿಕ ತಜ್ಞರ ತಂಡವನ್ನು ನಿಯೋಜಿಸಲು ಸಂಬಂಧಪಟ್ಟವರಿಗೆ ನಿರ್ದೇಶಿಸಲು …

Read More »

ಹುಕ್ಕೇರಿಯಲ್ಲಿ ಅಭಿವೃದ್ಧಿಯ ಹಬ್ಬ – 25 ಕೋಟಿ ರೂ. ಅನುದಾನ ಬಿಡುಗಡೆ

ಹುಕ್ಕೇರಿಯಲ್ಲಿ ಅಭಿವೃದ್ಧಿಯ ಹಬ್ಬ – 25 ಕೋಟಿ ರೂ. ಅನುದಾನ ಬಿಡುಗಡೆ ಹುಕ್ಕೇರಿ ತಾಲೂಕಿನಲ್ಲಿ ಅಂದಾಜು ರೂ. 25 ಕೋಟಿ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಮಂಜೂರಾದ ಅನುದಾನದ ಆದೇಶ ಪತ್ರಗಳನ್ನು ಇಂದು ಹುಕ್ಕೇರಿ ನಗರದ ಪ್ರವಾಸಿ ಮಂದಿರದಲ್ಲಿ ವಿವಿಧ ಸಮುದಾಯಗಳ ಮುಖಂಡರಿಗೆ ವಿತರಿಸಲಾಯಿತು. ಸಾರಾಪೂರ ಗ್ರಾಮದ ಶಾಂತಿನಾಥ ದಿಗಂಬರ್ ಜೈನ ಮಂದಿರಕ್ಕೆ ಸಮುದಾಯ ಭವನ ನಿರ್ಮಾಣಕ್ಕಾಗಿ ರೂ. 50 ಲಕ್ಷ, ಬೆಲ್ಲದ ಬಾಗೇವಾಡಿಯ ಆದಿನಾಥ ಭಸ್ತಿ ದೇವಾಲಯ ಸಮಿತಿಗೆ ರೂ. …

Read More »

ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್

ಬೆಂಗಳೂರು: ರಾಜ್ಯದಲ್ಲಿ ಪ್ರಾರಂಭವಾಗಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಗ್ರೀನ್ ಸಿಗ್ನಲ್ ನೀಡಿರುವ ಹೈಕೋರ್ಟ್, ಎಲ್ಲ ದತ್ತಾಂಶವನ್ನು ಸೋರಿಕೆಯಾಗದಂತೆ ಸಂರಕ್ಷಣೆ ಮಾಡಬೇಕು ಎಂಬುದಾಗಿ ಷರತ್ತು ವಿಧಿಸಿದೆ. ರಾಜ್ಯಲ್ಲಿ ನಾಗರಿಕರು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗಾಗಿ ಆಗಸ್ಟ್‌ 13ರಂದು ಸರ್ಕಾರ ಹೊರಡಿಸಿರುವ ಆದೇಶ ಪ್ರಶ್ನಿಸಿ ರಾಜ್ಯ ಒಕ್ಕಲಿಗರ ಸಂಘ, ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ, ಮಾಜಿ ಶಾಸಕರೂ ಆದ ಹಿರಿಯ ವಕೀಲ ಕೆ ಎನ್‌ ಸುಬ್ಬಾರೆಡ್ಡಿ ಮತ್ತಿತರರು ಸಲ್ಲಿಸಿರುವ ಪ್ರತ್ಯೇಕ ಸಾರ್ವಜನಿಕ ಹಿತಾಸಕ್ತಿ …

Read More »

ವಿಶೇಷಚೇತನರ ಕೋಟಾದಡಿ ನಕಲಿ ಪ್ರಮಾಣಪತ್ರ ಸೃಷ್ಟಿಸಿ ವಂಚನೆ: ಇಬ್ಬರು ಸರ್ಕಾರಿ ವೈದ್ಯರು, ಶಿಕ್ಷಕ ಸೇರಿ ಐವರು ಸೆರೆ

ಬೆಂಗಳೂರು: ವಿಶೇಷಚೇತನರ ಕೋಟಾದಡಿ ನಕಲಿ ಪ್ರಮಾಣಪತ್ರಗಳನ್ನು ಸೃಷ್ಟಿಸಿ, ವೈದ್ಯಕೀಯ ವಿದ್ಯಾರ್ಥಿಗಳಿಂದ ಲಕ್ಷಾಂತರ ರೂಪಾಯಿ ಹಣ ಪಡೆದು ವಂಚಿಸುತ್ತಿದ್ದ ಇಬ್ಬರು ಸರ್ಕಾರಿ ವೈದ್ಯರು ಸೇರಿ ಐವರನ್ನು ಮಲ್ಲೇಶ್ವರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ) ಮುಖ್ಯ ಆಡಳಿತಾಧಿಕಾರಿ ಇಸ್ಲಾವುದ್ದೀನ್‌ ಗದ್ಯಾಳ್‌ ಅವರು ನೀಡಿದ ದೂರು ಆಧರಿಸಿ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು, ಆರೋಪಿಗಳಾದ ಶಿಕ್ಷಕ ಭರಮಪ್ಪ, ವಿಜಯನಗರದ ಹೊಸಪೇಟೆಯ ಸರ್ಕಾರಿ ಆಸ್ಪತ್ರೆ ಆಡಳಿತ ವೈದ್ಯಾಧಿಕಾರಿ ಡಾ.ಹರಿಪ್ರಸಾದ್, ಮಕ್ಕಳ ತಜ್ಞ ಡಾ.ಶ್ರೀನಿವಾಸ್, ಕೊಪ್ಪಳದ …

Read More »

ಚಿನ್ನಯ್ಯ ಹಿಂದಿದ್ದ ಟೀಂನ ಮತ್ತೊಂದು ಕಳ್ಳಾಟ ಬಯಲು

ನವದೆಹಲಿ/ಮಂಗಳೂರು, ಸೆಪ್ಟೆಂಬರ್​ 25: ಧರ್ಮಸ್ಥಳ ತಲೆಬುರುಡೆ ಕೇಸ್​ಗೆ ಮತ್ತೊಂದು ಹೊಸ ಟ್ವಿಸ್ಟ್​ ಸಿಕ್ಕಿದೆ. 1995ರಿಂದ 2004ರ ವರೆಗಿನ ಪ್ರಕರಣಗಳ ತನಿಖೆಗೆ ಕೋರಿ ಸುಪ್ರೀಂ ಕೋರ್ಟ್​ಗೆ ಸಲ್ಲಿಸಿದ್ದ PIL, 2025 ಮೇ5 ರಂದು ವಜಾಗೊಂಡಿರುವ ವಿಷಯವನ್ನೇ ಮರೆಮಾಚಿ ಚಿನ್ನಯ್ಯ ಹಿಂದಿದ್ದ ಟೀಂ ಸರ್ಕಾರಕ್ಕೆ ತನಿಖೆ ಬಗ್ಗೆ ಮನವಿ ಮಾಡಿತ್ತು ಎಂಬುದು ಈಗ ಬಹಿರಂಗಗೊಂಡಿದೆ. ತನಿಖೆಗೆ ಕೋರಿ ಸಲ್ಲಿಸಿದ್ದ PIL ವಜಾಗೊಳಿಸಿದ್ದ ಕೋರ್ಟ್​, ಇಂತಹ ಪಿಐಎಲ್ ದಾಖಲಿಸಿರುವುದೇ ನಿಷ್ಫಲವೆಂದು ಅಭಿಪ್ರಾಯಪಟ್ಟಿತ್ತು. ಇದು ಪಬ್ಲಿಕ್ ಇಂಟರೆಸ್ಟ್ …

Read More »

ಓದುವ ವಯಸ್ಸಲ್ಲಿ ಪ್ರೀತಿ-ಪ್ರೇಮ: ಹೆದರಿ ದುರಂತ ಅಂತ್ಯ

ಕೋಲಾರ, (ಸೆಪ್ಟೆಂಬರ್ 25): ಅಪ್ರಾಪ್ತ ಪ್ರೇಮಿಗಳ ಪ್ರೀತಿ-ಪ್ರೇಮ ಸಾವಿನಲ್ಲಿ ಅಂತ್ಯವಾಗಿದೆ. ಹೌದು…ಕುಟುಂಬದ ಭಯದಿಂದ ಪ್ರೇಮಿಗಳು ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಘಟನೆ ಕೋಲಾರ ಜಿಲ್ಲೆ ಮಾಲೂರು ತಾಲ್ಲೂಕು ಬ್ಯಾಟರಾಯನಹಳ್ಳಿಯಲ್ಲಿ ನಡೆದಿದೆ. ಮುಂಜಾನೆ ಎದ್ದು ತನ್ನ ತಾಯಿಗೆ ಕೆಲಸಕ್ಕೆ ಹೋಗಿ ಬರುವುದಾಗಿ ಹೇಳಿ ಹೋದವನು ತಾನು ಪ್ರೀತಿಸಿದ್ದ ಹುಡುಗಿಯೊಂದಿಗೆ ನಿರ್ಜನ ಪ್ರದೇಶದಲ್ಲಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾಗಿದ್ದಾನೆ. ಸತೀಶ್ ಮತ್ತು ಶ್ವೇತ ಇಬ್ಬರೂ ಒಬ್ಬರನ್ನೊಬ್ಬರು ಪ್ರೀತಿಸುತ್ತಿದ್ದರು.   ಮನೆಯವರು ತಮ್ಮ ಪ್ರೀತಿಯನ್ನು …

Read More »

ಬೆಳಗಾವಿ ಪೊಲೀಸರಿಂದ ಡ್ರೋನ್ ಕ್ಯಾಮರಾ ತರಬೇತಿ – ಕಾನೂನು ಸುವ್ಯವಸ್ಥೆಗೆ ಹೊಸ ಆಯಾಮ!”

ಬೆಳಗಾವಿ ಪೊಲೀಸರಿಂದ ಡ್ರೋನ್ ಕ್ಯಾಮರಾ ತರಬೇತಿ – ಕಾನೂನು ಸುವ್ಯವಸ್ಥೆಗೆ ಹೊಸ ಆಯಾಮ!” ದೊಡ್ಡ ಸಮಾವೇಶ, ರ್ಯಾಲಿಗಳಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಜಿಲ್ಲಾ ಪೊಲೀಸ್ ಇಲಾಖೆ ಡೋನ್ ಕ್ಯಾಮರಾ ಬಳಸುವ ಕುರಿತು ಪೊಲೀಸ್ ಸಿಬ್ಬಂದಿಗಳಿಗೆ ತರಬೇತಿ ನೀಡಿದೆ. ಬೆಳಗಾವಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಆವರಣದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಭೀಮಾಶಂಕರ ಗುಳೇದ್ ಅವರು ಡೋನ್ ಹಾರಿಸುವುದು ಹೇಗೆ ಮತ್ತು ಅದನ್ನು ಹೇಗೆ ಮಾನಿಟರ್ ಮಾಡಬೇಕು ಎಂಬುದರ …

Read More »